Location
ಶಕ್ತಿಧಾಮದಲ್ಲಿ ಗಾಂಧಿ ಜಯಂತಿ; ನಟ ಶಿವರಾಜಕುಮಾರ ಖುಷ

ಶಕ್ತಿಧಾಮದಲ್ಲಿ ಗಾಂಧಿ ಜಯಂತಿ; ನಟ ಶಿವರಾಜಕುಮಾರ ಖುಷ
ಮೈಸೂರು: ಮಹಿಳೆಯರ ಪುನವರ್ಸತಿ ಹಾಗೂ ಅಭಿವೃದ್ದಿ ಕೇಂದ್ರ ಶಕ್ತಿಧಾಮದಲ್ಲಿ ಈ ಬಾರಿ ವಿಶಿಷ್ಟ ಗಾಂಧಿಜಯಂತಿ ಆಚರಣೆ.
ಒಂದು ತಿಂಗಳಿನಿಂದ ಮಕ್ಕಳು ಚರಕ ಬಳಸಿ ನೇಯ್ದ ಬಟ್ಟೆಯನ್ನು ಶಕ್ತಿಧಾಮ ಪೋಷಕ ಶಿವರಾಜ್ಕುಮಾರ್ ಅವರಿಗೆ ನೀಡಿ ಅವರಿಂದಲೇ ಪಡೆದ ಖುಷಿ. 320 ಮೀಟರ್ ಬಟ್ಟೆ ನೇಯ್ದ ಮಕ್ಕಳ ಶ್ರಮದಾನ ಕಂಡು ಶಿವರಾಜ್ಕುಮಾರ್ ಖುಷಿಗೊಂಡರು.
ಮೈಸೂರಿನಲ್ಲಿ ಶಕ್ತಿಧಾಮದ ಮಕ್ಕಳು ಚರಕ ಬಳಸಿ ಹೊರತೆಗೆದ ಲಡಿಯನ್ನುಬಟ್ಟೆಯಾಗಿ ಪರಿವರ್ತಿಸಿದ ಮೇಲುಕೋಟೆಯ ಸಂತೋಷ್ ಕೌಲಗಿ ಅವರು ಡಾ.ಶಿವರಾಜಕುಮಾರ್ ದಂಪತಿಗೆ ಹಸ್ತಾಂತಿರಿಸಿದರು. ತರಬೇತಿ ನೀಡಿದ ಕಲಾವಿದ ಕೆ.ಜೆ.ಸಚ್ಚಿದಾನಂದ, ನಿರ್ದೇಶಕಿ ಮಂಜುಳಾ ಮಿರ್ಲೆ ಕೂಡ ಜತೆಗಿದ್ದರು.
ಸತತ ಒಂದು ತಿಂಗಳ ಕಾಲ ಶಕ್ತಿಧಾಮದ ಮಕ್ಕಳು ಚರಕವನ್ನು ಬಳಸಿ ನೂಲು ತೆಗೆಯುವುದನ್ನು ಕಲಿತರು. ಅದನ್ನು ಬಟ್ಟೆಯಾಗಿಸಿದ ನಂತರ ಡಾ.ಶಿವರಾಜ್ ಕುಮಾರ್ ಹಾಗೂ ಗೀತಾ ಶಿವರಾಜ್ ಕುಮಾರ್ ಅವರಿಂದ ಸ್ವೀಕರಿಸಿ ಖುಷಿಗೊಂಡರು.
Kodagu
ಹುದಿಕೇರಿಯಲ್ಲಿ 66/11 ಕೆವಿ ವಿದ್ಯುತ್ ಉಪ ಕೇಂದ್ರದ ಭೂಮಿ ಪೂಜೆ

ಗೋಣಿಕೊಪ್ಪಲು : ಹುದಿಕೇರಿಯಲ್ಲಿ ನೂತನ ವಿದ್ಯುತ್ ಪ್ರಸರಣ ಉಪ-ಕೇಂದ್ರ ಸ್ಥಾಪಿಸುವ ನಿಟ್ಟಿನಲ್ಲಿ ಶಾಸಕ ಎ.ಎಸ್ ಪೊನ್ನಣ್ಣ ಭೂಮಿ ಪೂಜೆ ನೆರವೇರಿಸಿದರು.
ಈ ಉಪ ಕೇಂದ್ರದಿಂದ 11 ಕೆವಿಯ 12 ಮಾರ್ಗ ಪೊನ್ನಂಪೇಟೆಯಿಂದ ಹುದಿಕೇರಿವರೆಗ ಹೊರಹೋಗಲಿದೆ. ಸುಮಾರು 19.34 ಕೋಟಿ ರೂಪಾಯಿ ವೆಚ್ಚದ ಈ ಯೋಜನೆಯ ಒಂದು ವರ್ಷದ ಕಾಲಾವಧಿಯಲ್ಲಿ ಪೂರ್ಣಗೊಳ್ಳಲಿದೆ ಎಂದು ಚೀಫ್ ಎಲೆಕ್ಟ್ರಿಕ್ ಆಫೀಸರ್ ರೋಷನ್ ಅಪ್ಪಚ್ಚು ತಿಳಿಸಿದರು. ಶಾಸಕರ ಪ್ರಯತ್ನದಿಂದಾಗಿ ಕ್ಷೇತ್ರಾದ್ಯಂತ ಹಲವು ವಿದ್ಯುತ್ ಉಪ-ಕೇಂದ್ರಗಳು ಸ್ಥಾಪನೆಗೊಳ್ಳುತ್ತಿದ್ದು, ಅತಿ ಶೀಘ್ರದಲ್ಲೇ ಇದನ್ನು ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಚೆಸ್ಕಾಂ ಅಧಿಕಾರಿಗಳು, ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಿದೇರಿರ ನವೀನ್, ವಲಯ ಕಾಂಗ್ರೆಸ್ ಅಧ್ಯಕ್ಷ ಸೂರಜ್, ಪೊನ್ನಂಪೇಟೆ ತಾಲೂಕು ಅಕ್ರಮ ಸಕ್ರಮ ಸಮಿತಿಯ ಅಧ್ಯಕ್ಷ ಅಣಲಮಾಡ ಲಾಲಾ ಅಪ್ಪಣ್ಣ, ಹುದಿಕೇರಿ ಪಂಚಾಯಿತಿ ಅಧ್ಯಕ್ಷ ಕುಪ್ಪಣಮಾಡ ನವ್ಯ ಕಾವೇರಮ್ಮ, ಹಿರಿಯ ಕಾಂಗ್ರೆಸ್ ಮುಖಂಡರಾದ ಚೇಕ್ಕೇರ ವಾಸು ಕುಟ್ಟಪ್ಪ, ಚೆಕ್ಕೇರ ಸುಧೀರ್, ಮೋಟಯ್ಯ, ಡಿಸಿಸಿ ಸದಸ್ಯರಾದ ಮುಕಟ್ಟೀರ ಸಂದೀಪ್, ಅಜ್ಜಿಕುಟ್ಟಿರ ಗಿರೀಶ್, ನೂರೇರ ಮನೋಹರ್, ಅಣಲಮಾಡ ಹರೀಶ್, ಅಲಿರಾ ರಶೀದ್, ಕುಪ್ಪಣ ಮಾಡ ಕಾವೇರಮ್ಮ,ಕೊಡoಗಡ ವಾಸು, ಕೊಡಂಗಡ ದಮಯಂತಿ ಹಾಗೂ ಪ್ರಮುಖರು ಉಪಸಿತರಿದ್ದರು.
Kodagu
ಬೆಂಗಳೂರು ಕೊಡವ ಸಮಾಜಕ್ಕೆ ಏಳು ಏಕರೆ ಜಾಗ: ಎಪ್ಪತ್ತು ವರ್ಷಗಳ ಬಳಿಕ ಮರುಕಳಿಸಿದ ಇತಿಹಾಸ

ಬರಹ : ತೆನ್ನೀರ ಮೈನಾ, ಕಾಂಗ್ರೆಸ್ ಮುಖಂಡರು
ಬೆಂಗಳೂರು: ಕೊಡವ ಸಮಾಜ, ಕರ್ನಾಟಕದ ರಾಜ್ಯಧಾನಿ ಬೆಂಗಳೂರಿನಲ್ಲಿ ಸ್ಥಾಪಿತವಾಗಿರುವ ಸಂಸ್ಥೆ. ವಿಶ್ವದಲ್ಲಿಯೇ ಅಪರೂಪದ ಸಂಸ್ಕೃತಿ, ಪರಂಪರೆಯನ್ನು ಹೊಂದಿರುವ ಕೊಡವ ಜನಾಂಗದ ಆಚರಣೆಗಳನ್ನು ನಗರೀಕರಣದ ನಡುವೆಯೂ ನಾಶವಾಗದ ಹಾಗೆ ಕಾಪಾಡಿಕೊಂಡು ಬರುತ್ತಿರುವ ಸಂಸ್ಥೆಯಾಗಿದೆ.
1911 ರಲ್ಲಿ ಕೂರ್ಗ್ ಅಸೋಸಿಯೇಷನ್ ಎಂಬ ಹೆಸರಿನಲ್ಲಿ ಕೇವಲ 30 ಸದಸ್ಯರಿಂದ ಸ್ಥಾಪಿತವಾಗಿ ನಂತರ ಬೆಂಗಳೂರು ಕೊಡವ ಸಮಾಜ ಎಂದು ನಾಮಕರಣಗೊಂಡು ಕೊಡವ ಸಾಹಿತ್ಯ, ಸಂಸ್ಕೃತಿ,ಭಾಷೆ,ಉಡುಗೆ ತೊಡುಗೆ ,ಪದ್ದತಿ ಪರಂಪರೆಯ ಬೆಳವಣಿಗೆಗೆ ತನ್ನದೇ ಆದ ಅಪರಿಮಿತ ಕೊಡುಗೆ ನೀಡುವ ಮೂಲಕ ಬೃಹತ್ತಾಗಿ ಬೆಳೆದಿದೆ. ಸ್ಥಾಪಕ ಅಧ್ಯಕ್ಷ ಕುಪ್ಪಂಡ ಮುದ್ದಪ್ಪರವರಿಂದ ಪ್ರಸ್ತುತ ಅಧ್ಯಕ್ಷ ಕರೋಟಿರ ಪೆಮ್ಮಯ್ಯನವರ ವರೆಗೆ ಸೇವೆ ಸಲ್ಲಿಸಿದ ಎಲ್ಲಾ ಅಧ್ಯಕ್ಷರು ಮತ್ತು ಅವರ ಪಧಾಧಿಕಾರಿಗಳ ಪರಿಶ್ರಮದಿಂದ ಉಚ್ಛ್ರಾಯ ಸ್ಥಿತಿಯಲ್ಲಿ ಸಂಸ್ಥೆ ಕಾರ್ಯ ನಿರ್ವಹಿಸುತ್ತಿದೆ.20 ಸಾವಿರಕ್ಕೂ ಅಧಿಕ ಸದಸ್ಯರನ್ನು ಹೊಂದಿದ್ದು ಬೆಂಗಳೂರಿನಲ್ಲಿರುವ ಸುಮಾರು 40 ಸಾವಿರದಷ್ಟಿರುವ ಕೊಡವರಿಗೆ ಬೆಂಗಳೂರು ಕೊಡವ ಸಮಾಜ ಗುರುಮನೆಯಂತಿದೆ.
ಆರಂಭದಲ್ಲಿ ಬೆಂಗಳೂರು ಕೊಡವ ಸಮಾಜಕ್ಕೆ ಸ್ವಂತ ಕಟ್ಟಡವಾಗಲಿ ನಿವೇಶನವಾಗಲಿ ಇರಲಿಲ್ಲ. ಬಸವನಗುಡಿ ಬಳಿಯ ಖಾಸಗಿ ಜಾಗದಲ್ಲಿ ತಮ್ಮ ಕಾರ್ಯಕ್ರಮಗಳನ್ನು( ಪುತ್ತರಿ ನಮ್ಮೆ,ಕೈಲ್ ಪೊಳ್ದ್ ನಮ್ಮೆ,ಊರೊರ್ಮೆ ಮುಂತಾದವು) ನಡೆಸುತ್ತಿದ್ದರು. ಭಾರತದ ಮಹಾನ್ ಸೇನಾ ದಂಡನಾಯಕರಾಗಿ ಸೇವೆ ಸಲ್ಲಿಸಿದ್ದ,ಶಿಸ್ತು ಮತ್ತು ಪ್ರಾಮಾಣಿಕತೆಯನ್ನೇ ಉಸಿರಾಗಿಸಿಕೊಂಡಿದ್ದ ಜನರಲ್ ಕೊಡಂದೇರ.ಎಂ.ಕಾರ್ಯಪ್ಪ ( ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ) ನವರು ಭಾರತೀಯ ಸೈನ್ಯಕ್ಕೆ ಹಾಗೂ ದೇಶಕ್ಕೆ ಸಲ್ಲಿಸಿದ ಸೇವೆಯನ್ನು ಪರಿಗಣಿಸಿ ಸ್ವತಂತ್ರ ಭಾರತದ ಅಂದಿನ ವಿಶಾಲ ಮೈಸೂರು ರಾಜ್ಯದ ಘನತೆವೆತ್ತ ರಾಜ್ಯಪಾಲರಾದ ಶ್ರೀ ಜಯಚಾಮರಾಜೇಂದ್ರ ಒಡೆಯರ್ ರವರು ಬೆಂಗಳೂರಿನ ಹೃದಯ ಭಾಗದಲ್ಲಿರುವ ವಸಂತ ನಗರದಲ್ಲಿ ಒಂದು ಏಕರೆ ಜಾಗವನ್ನು ಉಡುಗೊರೆಯಾಗಿ ನೀಡಿದ್ದರು.ಆ ಜಾಗವನ್ನು 1956 ರಲ್ಲಿ ಬೆಂಗಳೂರು ಕೊಡವ ಸಮಾಜಕ್ಕೆ ದಾನವಾಗಿ ನೀಡಿದರು.ನಂತರದಲ್ಲಿ ಬೆಂಗಳೂರು ಕೊಡವ ಸಮಾಜ ಆ ಜಾಗದಲ್ಲಿ ಬೃಹತ್ ಬಹುಮಹಡಿ ಕಟ್ಟಡಗಳನ್ನು ಹಂತ ಹಂತವಾಗಿ ಕಟ್ಟಿ ದೊಡ್ಡ ಸಂಸ್ಥೆಯಾಗಿ ಬೆಳೆಸಿತು.ಸಂಸ್ಕೃತಿಯ ಬೆಳವಣಿಗೆಗಳ ಜೊತೆಗೆ ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ಮತ್ತಷ್ಟು ಮೇಲ್ಪಂಕ್ತಿಯನ್ನು ಸಂಸ್ಥೆ ತಲುಪಿತು.
ಸುಮಾರು ಎಪ್ಪತ್ತು ವರ್ಷಗಳ ಹಿಂದೆ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪನವರು ಮಾಡಿದ ಕಾರ್ಯ ಇತಿಹಾಸ ನಿರ್ಮಿಸಿದರೆ ಆ ರೀತಿಯ ಇತಿಹಾಸ ಮತ್ತೊಮ್ಮೆ ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಅಜ್ಜಿಕುಟ್ಟಿರ.ಎಸ್.ಪೊನ್ನಣ್ಣ ನವರಿಂದ ಮತ್ತೊಮ್ಮೆ ಮರುಕಳಿಸಿದೆ.ಅದಕ್ಕೆ ಕಾರಣ ಬೆಂಗಳೂರು ಕೊಡವ ಸಮಾಜದ ಹೆಸರಿಗೆ ಬೆಂಗಳೂರು ನಗರ ಜಿಲ್ಲೆಯ ಯಲಹಂಕ ಹೊಸಹಳ್ಳಿ ಯ ಸರ್ವೆ ನಂ 21 ರಲ್ಲಿ ವರ್ಗಾವಣೆಗೊಂಡ ಏಳು ಏಕರೆ ಅತ್ಯಮೂಲ್ಯ ಜಾಗ.
2011 ರಲ್ಲಿ ಬೆಂಗಳೂರು ಕೊಡವ ಸಮಾಜದ ಶತಮಾನೋತ್ಸವ ಕಾರ್ಯಕ್ರಮದ ಸಂಧರ್ಭದಲ್ಲಿ ಅಂದಿನ ಕರ್ನಾಟಕದ ಮುಖ್ಯಮಂತ್ರಿಗಳಾದ ಡಿ.ವಿ.ಸದಾನಂದ ಗೌಡರು ಅಂದಿನ ಕರ್ನಾಟಕ ರಾಜ್ಯ ವಿಧಾನ ಸಭಾ ಅಧ್ಯಕ್ಷರಾದ ಕೆ.ಜಿ.ಬೋಪಯ್ಯ, ಮಡಿಕೇರಿ ಕ್ಷೇತ್ರದ ಶಾಸಕರಾದ ಅಪ್ಪಚ್ಚು ರಂಜನ್ ರವರಿಗೆ ಸಮಾಜದ ಪ್ರಮುಖರು ಏಳು ಏಕರೆ ಜಾಗದ ಪ್ರಸ್ತಾವನೆಯನ್ನು ಸಲ್ಲಿಸುತ್ತಾರೆ. ಸದಾನಂದ ಗೌಡರು ಒಪ್ಪಿಗೆ ಸೂಚಿಸುತ್ತಾರೆ. ನಂತರ ಆಡಳಿತಾತ್ಮಕ ಪ್ರಕ್ರಿಯೆ ಗಳು ನಡೆದು ದಿನಾಂಕ 8-3-2023 ರಂದು ಸರ್ಕಾರ ಸದರಿ ಜಾಗವನ್ನು ಕೃಷಿಯೇತರ ಜಮೀನಿನ ಪ್ರಸ್ತುತ ಮಾರುಕಟ್ಟೆ ದರ ಪಾವತಿಸಲು ಒಪ್ಪಿಗೆ ನೀಡುತ್ತದೆ. ಕೊಡವ ಸಮಾಜದ ಪಾಲಿಗೆ ಇದೊಂದು ನಿಲುಕದ ದ್ರಾಕ್ಷಿ. ಮಾರುಕಟ್ಟೆ ದರ ವೆಂದರೆ 40 ಕೋಟಿಯಿಂದ 50 ಕೋಟಿ ವೆಚ್ಚವಾಗುತ್ತದೆ.ಇದು ಆ ಸಂಸ್ಥೆಗೆ ಅಸಾಧ್ಯವಾದ ಕಾರ್ಯ. ಆದರೂ ಬೆಂಗಳೂರು ಕೊಡವ ಸಮಾಜ ಸುಮ್ಮನಾಗುವುದಿಲ್ಲ. ಭಗೀರಥ ಪ್ರಯತ್ನ ಮುಂದುವರಿಸುತ್ತದೆ.
ಬೆಂಗಳೂರು ಕೊಡವ ಸಮಾಜದ ಪ್ರಸ್ತುತ ಅಧ್ಯಕ್ಷರಾದ ಕರೋಟಿರ ಪೆಮ್ಮಯ್ಯ ನವರ ನೇತೃತ್ವದಲ್ಲಿ ಮತ್ತೊಂದು ಸಾಹಸಕ್ಕೆ ಮುನ್ನುಡಿ ಹಾಕುತ್ತಾರೆ.ಸರ್ಕಾರ ಬದಲಾಗಿ ವಿರಾಜಪೇಟೆ ಕ್ಷೇತ್ರದ ಶಾಸಕರಾಗಿ ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗದಲ್ಲಿ ಅಪಾರ ಅನುಭವ ಹೊಂದಿರುವ ಎ.ಎಸ್.ಪೊನ್ನಣ್ಣ ನವರು ಆಯ್ಕೆಯಾಗುತ್ತಾರೆ.
ಕೆಲವೇ ದಿನಗಳಲ್ಲಿ ಮುಖ್ಯಮಂತ್ರಿ ಗಳ ಕಾನೂನು ಸಲಹೆಗಾರರಾಗಿ ಸಂಪುಟ ದರ್ಜೆ ಸ್ಥಾನದೊಂದಿಗೆ ನೇಮಕಗೊಳ್ಳುತ್ತಾರೆ
ಸ್ವತಃ ವಕೀಲರಾದ ಕರೋಟಿರ ಪೆಮ್ಮಯ್ಯ ಮತ್ತು ಅವರ ತಂಡ ಪೊನ್ನಣ್ಣ ನವರಿಗೆ ಮನವಿ ಸಲ್ಲಿಸುತ್ತಾರೆ. ಹಲವು ಸುತ್ತಿನ ಮಾತುಕತೆಗಳು ಅಧಿಕಾರಿಗಳ ಮಟ್ಟದಲ್ಲಿ ನಡೆಯುತ್ತದೆ.ದಿನಾಂಕ 4-3-2024 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನವರಿಗೆ ಎ.ಎಸ್.ಪೊನ್ನಣ್ಣ ನವರಿಂದ ನಡಾವಳಿ ಪತ್ರ ಸಲ್ಲಿಕೆಯಾಗುತ್ತದೆ. ಮಾನ್ಯ ಮುಖ್ಯಮಂತ್ರಿ ಗಳು ಸಂಪುಟ ಸಭೆಯಲ್ಲಿ ಪ್ರಸ್ತಾವನೆಯನ್ನು ಚರ್ಚೆಗೆ ತರುತ್ತಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ಮತ್ತು ಬೆಂಗಳೂರು ಉಸ್ತುವಾರಿ ಸಚಿವರಾದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರವರು ಪೊನ್ನಣ್ಣ ನವರ ಕೋರಿಕೆಯನ್ನು ಒಪ್ಪುತ್ತಾರೆ. ಕಂದಾಯ ಸಚಿವ ಕೃಷ್ಣ ಬೈರೇಗೌಡರ ಸಹಮತದೊಂದಿಗೆ ಸಚಿವ ಸಂಪುಟವೇ ಪೊನ್ನಣ್ಣನವರ ನಡಾವಳಿಗೆ ಮನ್ನಣೆ ನೀಡುತ್ತದೆ.ವಿಶೇಷ ವಿನಾಯತಿಯಡಿ ಜಮೀನು ನೀಡಲು ( ಮಾರುಕಟ್ಟೆ ದರಕ್ಕಿಂತ ಶೇ 90 ರಷ್ಟು ರಿಯಾಯಿತಿ) ಒಪ್ಪಿಗೆ ನೀಡುತ್ತದೆ.ಭೂ ಮಂಜೂರಾತಿ ನಿಯಮಗಳು 1969 ರ ನಿಯಮ 22-ಎ(1)(i)(2) ರನ್ವಯ ಆದೇಶ ಸಂಖ್ಯೆ ನಂ.ಎಲ್.ಎನ್.ಡಿ (ಎನ್.ಎ)/203/2009-10 ದಿನಾಂಕ 2-6-2025 ರಂದು ಆದೇಶ ಹೊರಡಿಸುತ್ತದೆ. ಕೇವಲ ಒಂದು ಕೋಟಿ 7 ಲಕ್ಷ ರೂ.ಗಳನ್ನು ಪಾವತಿಸಿ ಕೊಡವ ಸಮಾಜ ಜಾಗವನ್ನು ಪಡೆಯುತ್ತದೆ.ದಶಕಗಳ ಕೊಡವ ಸಮಾಜದ ಕನಸು ನನಸಾಗುತ್ತದೆ.
ಈ ಭಾನುವಾರ ಅಂದರೆ ದಿನಾಂಕ 15-6-2025 ರಂದು ಬೆಂಗಳೂರು ಕೊಡವ ಸಮಾಜದವತಿಯಿಂದ ಸನ್ಮಾನ್ಯ ಮುಖ್ಯ ಮಂತ್ರಿಗಳಾದ ಸಿದ್ದರಾನಯ್ಯನವರು, ಸನ್ಮಾನ್ಯ ಡಿ.ಸಿ.ಎಂ.ಡಿ.ಕೆ ಶಿವಕುಮಾರ್, ಕಂದಾಯ ಸಚಿವರಾದ ಕೃಷ್ಣ ಭೈರೇಗೌಡ, ಪ್ರಮುಖ ರುವಾರಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ ಸೇರಿದಂತೆ ಸಚಿವ ಸಂಪುಟದ ಸದಸ್ಯರಿಗೆ ಅಭಿನಂದನೆಗಳು ಮತ್ತು ಕೃತಜ್ಞತೆ ಸಮಾರಂಭ ಏರ್ಪಡಿಸಿದ್ದು ಬೆಂಗಳೂರು ಕೊಡವ ಸಮಾಜದ ಪಾಲಿಗೆ ಐತಿಹಾಸಿಕ ಕಾರ್ಯಕ್ರಮವಾಗಿದೆ.
Chamarajanagar
ಬೇಗೂರು ಕರ್ನಾಟಕ ಗ್ರಾಮೀಣ ಬ್ಯಾಂಕ್ ಮುಂದೆ ರೈತ ಸಂಘಟನೆಯಿಂದ ಪ್ರತಿಭಟನೆ

ಗುಂಡ್ಲುಪೇಟೆ: ತಾಲ್ಲೂಕಿನ ಬೇಗೂರು ಕರ್ನಾಟಕ ಗ್ರಾಮೀಣ ಬ್ಯಾಂಕ್ ನಿಂದ ರೈತರಿಗೆ ಸಾಲ ವಸೂಲಿಗೆ ಬಗ್ಗೆ ನೋಟಿಸ್ ನೀಡಿ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಬ್ಯಾಂಕ್ ಮುಂಭಾಗ ರೈತ ಸಂಘ ಗಳಿಂದ ಪ್ರತಿಭಟನೆ
ಬೇಗೂರಿನ ಕರ್ನಾಟಕ ಗ್ರಾಮೀಣ ಬ್ಯಾಂಕ್ ಅಧಿಕಾರಿಗಳು ಸಾಲ ಪಡೆದ ರೈತರಿಗೆ ನೋಟಿಸ್ ನೀಡಿ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಪದಾಧಿಕಾರಿ ಗಳು ಬೇಗೂರಿನ ಕರ್ನಾಟಕ ಕಾವೇರಿ ಗ್ರಾಮೀಣ ಬ್ಯಾಂಕ್ ಮುಂಭಾಗ ಪ್ರತಿಭಟನೆ ನಡೆಸಿದರು. ಬೇಗೂರಿನ ಕರ್ನಾಟಕ ಕಾವೇರಿ ಗ್ರಾಮೀಣ ಬ್ಯಾಂಕ್ ಮುಂದೆ ಬ್ಯಾಂಕ್ ಅಧಿಕಾರಿಗಳ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿ ಆಕ್ರೋಶ ಹೊರ ಹಾಕಿದರು.
ರೈತರಿಗೆ ಹಣ ಕಟ್ಟುವಂತೆ ನೋಟಿಸ್ ನೀಡಿ ಕಿರುಕುಳ
ಈ ಪ್ರತಿಭಟನೆ ವೇಳೆ ಮಾತನಾಡಿದ ರೈತ ಸಂಘದ ತಾಲೂಕು ಅಧ್ಯಕ್ಷ ವೀರನಪುರ ನಾಗಪ್ಪ, ಬೇಗೂರು ಸಮೀಪದ ಬೆಳಚಲವಾಡಿ ಗ್ರಾಮದ ನಂಜುಂಡಸ್ವಾಮಿ ಎಂಬ ರೈತ ಬೇಗೂರು ಕಾವೇರಿ ಗ್ರಾಮೀಣ ಬ್ಯಾಂಕ್ ನಲ್ಲಿ ಬೆಳೆ ಸಾಲ ಪಡೆದಿದ್ದಾರೆ. ಇವರಿಗೆ ಹೆಚ್ಚು ಪ್ರಮಾಣದಲ್ಲಿ ಬಡ್ಡಿ ವಿಧಿಸಿ ಹಣ ಕಟ್ಟುವಂತೆ ನೋಟಿಸ್ ನೀಡಿದ್ದಾರೆ. ಸಕಾಲಕ್ಕೆ ಮಳೆ ಬೀಳದೆ ರೈತರು ಬೆಳೆದ ಬೆಳೆಗಳು ಹಾನಿಗೊಳಗಾಗಿದೆ. ಜೊತೆಗೆ ಇದೆ ಸಮಯಕ್ಕೆ ಈ ಬ್ಯಾಂಕಿನವರು ಸಾಲ ವಸೂಲಿಗೆ ನೋಟಿಸ್ ನೀಡಿ ರೈತರಿಗೆ ಕಿರುಕುಳ ನೀಡುತ್ತಿದ್ದಾರೆ. ಬೆಳೆದ ಬೆಳೆಗೆ ಬೆಲೆ ಸಿಗದೆ ರೈತ ಆತ್ಮಹತ್ಯೆ ದಾರಿ ಹಿಡಿಯುವಂತಾಗಿದೆ. ಇಂತಹ ಸಂದರ್ಭದಲ್ಲಿ ಬ್ಯಾಂಕ್ ನವರು ನೋಟಿಸ್ ನೀಡುವ ಮೂಲಕ ಅವರಿಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಆಸಮಾಧಾನ ವ್ಯಕ್ತಪಡಿಸಿದರು.
ನಂತರ ಬೇಗೂರಿನ ಕರ್ನಾಟಕ ಗ್ರಾಮೀಣ ಬ್ಯಾಂಕ್.ವ್ಯವಸ್ಥಾಪಕರು ಈ ವಿಚಾರವಾಗಿ ಮುಖ್ಯ ಕಚೇರಿಯ ಗಮನಕ್ಕೆ ತಂದು ಬಡ್ಡಿ ಕಡಿಮೆ ಮಾಡಿಸಲು ಪ್ರಯತ್ನ ಪಡಲಾಗುವುದು ಎಂದು ಭರವಸೆ ನೀಡಿದರು.
ರೈತರ ನೆರವಿಗೆ ನಿಲ್ಲದ ಸರ್ಕಾರಗಳು
ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕೈ ಕಟ್ಟಿ ಕುಳಿತು ಅಧಿಕಾರಿಗಳ ಮೂಲಕ ಸಾಲ ವಸೂಲಿಗೆ ಕುಮ್ಮಕ್ಕು ನೀಡುತ್ತಿವೆ. ಆದ್ದರಿಂದ ಜಿಲ್ಲಾಡಳಿತ ಮಧ್ಯ ಪ್ರವೇಶಿಸಿ ನೊಂದ ರೈತರ ನೆರವಿಗೆ ನಿಲ್ಲಬೇಕು ಹಾಗೂ ಸಾಲದ ಬಡ್ಡಿ ಮನ್ನಾ ಮಾಡಿ ಕೇವಲ ಸಾಲದ ಹಣವನ್ನು ಮಾತ್ರ ಕಟ್ಟಲು ಅವಕಾಶ ಮಾಡಿಕೊಡಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನಾಕಾರರ ಮನ ವಲಿಸಿದ ಲೀಡ್ ಬ್ಯಾಂಕ್ ವ್ಯವಸ್ಥಾಪಕಿ ಸುರೇಖಾ
ಈ ಸಮಸ್ಯೆ ಬಗ್ಗೆ ಮುಖ್ಯ ಕಚೇರಿಗೆ ಗಮನಕ್ಕೆ ತಂದು ಬಡ್ಡಿಕಡಿಮೆ ಮಾಡಲುಪ್ರಯತ್ನಿಸಲಾಗುವುದು ಎಂದು ಭರವಸೆ ನೀಡಿದರು. ನಂತರ ಪ್ರತಿಭಟನ ಮಾಡುತಿದ್ದ ರೈತರು ಪ್ರತಿಭಟನೆ ಯನ್ನು ಕೈಬಿಟ್ಟರು.
ಈ ಸಂದರ್ಭದಲ್ಲಿ ,ಸಂಘದ ಜಿಲ್ಲಾ ಉಪಾಧ್ಯಕ್ಷ ಮಲಯ್ಯನಪುರ ಪುಟ್ಟೇಗೌಡ, ಹಸಿರು ಸೇನೆ ಅಧ್ಯಕ್ಷ ಕಮರಹಳ್ಳಿ ಪ್ರಸಾದ್, ಕಾರ್ಯದರ್ಶಿ ಯತವನ ಹಳ್ಳಿ ಸಿದ್ದರಾಜು, ಸೋಮಹಳ್ಳಿ ನವೀನ್, ಶಿವಕುಮಾರ್, ಹಕ್ಕಲಪುರ ಸ್ವಾಮಿ, ಪಡಗೂರು ಮಹದೇವ ಸ್ವಾಮಿ ಸೇರಿದಂತೆ ಹಲವು ಮಂದಿ ರೈತರು ಹಾಜರಿದ್ದರು
-
Mandya22 hours ago
ನೇಣು ಬಿಗಿದ ಸ್ಥಿತಿಯಲ್ಲಿ ಪುರುಷ ಹಾಗೂ ಮಹಿಳೆಯ ಕೊಳೆತ ಶ*ವಗಳು ಪತ್ತೆ
-
State18 hours ago
ಹಾಸನ ಏರ್ಪೋರ್ಟ್ 2026ಕ್ಕೆ ಪೂರ್ಣ: ಚಿಕ್ಕಮಗಳೂರು-ಮಡಿಕೇರಿಯಲ್ಲಿ ಹೆಲಿಪೋರ್ಟ್ ನಿರ್ಮಾಣಕ್ಕೆ ವರದಿ ಸಿದ್ಧ
-
Kodagu23 hours ago
ಬಾಡಗ ಮಹಿಳಾ ಸಾಂಸ್ಕೃತಿಕ ಮಂಡಳಿಗೆ ಬೆಳ್ಳಿ ಹಬ್ಬದ ಸಂಭ್ರಮ
-
Mandya23 hours ago
ಜೂ. 26ಕ್ಕೆ ಮಾದಕ ವಸ್ತುಗಳ ದುಷ್ಪರಿಣಾಮ ಕುರಿತು ಜಾಗೃತಿ ಕಾರ್ಯಕ್ರಮ: ಡಾ. ಕುಮಾರ
-
Kodagu22 hours ago
ಗೃಹಲಕ್ಷ್ಮಿ ಯೋಜನೆ ಇ-ಕೆವೈಸಿ ಫೆಲ್ಯೂರ್: ಹತ್ತಿರದ ಸಿಡಿಪಿಓ ಕಚೇರಿ ತೆರಳಿ Status ಪರಿಶೀಲನೆ ಮಾಡಿಸಿ
-
Hassan22 hours ago
ಬೆಳೆ ವಿಮೆ ಪ್ರಚಾರದ ವಾಹನಗಳಿಗೆ ಡಿಸಿ ಸಿ. ಸತ್ಯಭಾಮ ಚಾಲನೆ
-
Hassan19 hours ago
ಕಾಣೆಯಾಗಿದ್ದ ಮಹಿಳೆ ಶವವಾಗಿ ಪತ್ತೆ
-
Kodagu24 hours ago
ದುಬಾರೆ, ಬರಪೊಳೆಯಲ್ಲಿ ರಿವರ್ ರ್ಯಾಪ್ಟಿಂಗ್ ಪರವಾನಗಿ ನವೀಕರಣ ಹಾಗೂ ಫಿಟ್ನೆಸ್ ಪ್ರಮಾಣಪತ್ರ ಪಡೆದು ಕಾರ್ಯನಿರ್ವಹಿಸಿ: ಮಂಥರ್ ಗೌಡ