Hassan
ಶಿವಲಿಂಗೇಗೌಡರಿಗೆ ಸಚಿವ ಸ್ಥಾನ ಸಿಗುವ ವಿಶ್ವಾಸ ವ್ಯಕ್ತಪಡಿಸಿದ ಜಿಲ್ಲಾ ಮಂತ್ರಿ ರಾಜಣ್ಣ

ಹಾಸನ: ಇನ್ನು ಎರಡು ಮೂರು ದಿನಗಳಲ್ಲಿ ಸಿಎಂ ಮತ್ತು ಡಿಸಿಎಂ ಅವರು ದೆಹಲಿಗೆ ಹೋಗಲಿದ್ದು, ಲೋಕಸಭೆ ಅಭ್ಯರ್ಥಿ ಗಮ ಮಂಡಳಿ ಬಗ್ಗೆಯೂ ಚರ್ಚೆ ಮಾಡುತ್ತಾರೆ. ಮುಂದಿನ ಸಚಿವರ ಬದಲಾವಣೆ ಸಂದರ್ಭ ಶಿವಲಿಂಗೇಗೌಡ ಸಚಿವಾರಾಗುತ್ತಾರೆ ಎಂದು ಭವಿಷ್ಯ ನುಡಿದರು.
ನಗರದ ಪ್ರವಾಸಿ ಮಂದಿರದಲ್ಲಿ ಮಾಧ್ಯಮದೊಂದಿಗೆ ಮಾತನಾಡಿ, ನಿಗಮ ಮಂಡಳಿ ಅಧಕ್ಷ ಸ್ಥಾನ ಹಂಚಿಕೆ ವಿಚಾರವಾಗಿ ಮಾತನಾಡುತ್ತಾ, ಇದೆ ತಿಂಗಳು
೪,೫ ನೇ ತಾರೀಖು ಸಿಎಂ, ಡಿ.ಸಿಎಂ ದೆಹಲಿಗೆ ಹೋಗುತ್ತಿದ್ದಾರೆ. ಲೋಕಸಭಾ ಅಭ್ಯರ್ಥಿ, ನಿಗಮ ಮಂಡಳಿ ಬಗ್ಗೆಯೂ ಚರ್ಚೆ ಮಾಡುತ್ತಾರೆ. ಕೆ.ಎಂ. ಶಿವಲಿಂಗೇಗೌಡರು ನಿಗಮ ಮಂಡಳಿ ಅಧ್ಯಕ್ಷರಾಗುತ್ತಾರೆ ಎಂದು ಹೇಳಿಕೆ ನೀಡುವ ಮೂಲಕ ಪಟ್ಟಿ ಬಿಡುಗಡೆ ಮುನ್ನವೇ ಗುಟ್ಟು ಬಿಟ್ಟುಕೊಟ್ಟಂತೆ ಅನಿಸುತಿತ್ತು.
ಮುಂದಿನ ಸಚಿವರ ಬದಲಾವಣೆ ಸಂದರ್ಭ ಶಿವಲಿಂಗೇಗೌಡ ಸಚಿವಾರಾಗುತ್ತಾರೆ ಎಂದು ಶಿವಲಿಂಗೇಗೌಡ ರಿಗೆ ಸಚಿವ ಸ್ಥಾನವೂ ಸಿಗುವ ವಿಶ್ವಾಸ ವ್ಯಕ್ತಪಡಿಸಿದರು.
ಕಾರ್ಯಕರ್ತರಿಗೂ ನಿಗಮ ಮಂಡಳಿ ಸ್ಥಾನ ಕೊಡಬೇಕು. ಅವರಿಂದಲೇ ತಾನೇ ನಾವೆಲ್ಲಾ ಗೆದ್ದಿರೋದು. ಕಾರ್ಯಕರ್ತರು ಇರೋದ್ರಿಂದಲೇ ನಾವೆಲ್ಲಾ ಶಾಸಕರಾಗಿರೋದು. ಕಾರ್ಯಕರ್ತರು, ಶಾಸಕರು ಇಬ್ಬರಿಗೂ ಸ್ಥಾನ ಕೊಟ್ಟು ಸಮತೋಲನ ಕಾಪಾಡುವ ಬಗ್ಗೆ ಪಕ್ಷ ಮತ್ತು ಅಧ್ಯಕ್ಷರ ನಿರ್ಣಯ ಇದೆ ಎಂದರು.
ನಂದಗೋಡನಹಳ್ಳಿ ಮರಗಳಮಾರಣ ಹೋಮ ಪ್ರಕರಣ ವಿಚಾರವಾಗಿ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ, ಘಟನೆ ಬಗ್ಗೆ ಈಗಾಗಲೇ ಕಾನೂನು ರೀತಿ ಕ್ರಮ ಆಗಿದೆ. ಕಾಡುಗಳ್ಳರಿಗೆ ಪ್ರೋತ್ಸಾಹ ಕೊಟ್ಟ ಅಧಿಕಾರಿಗಳ ವಿರುದ್ಧವೂ ಕ್ರಮ ಆಗಿದೆ. ಪ್ರತಾಪ್ ಸಿಂಹ ತಮ್ಮ ಕೂಡ ಸಿಕ್ಕಿಹಾಕೊಕೊಂಡಿದ್ದಾರೆ. ಅವರೇ ಮರಗಳನ್ನ ಕತ್ತರಿಸಿದ್ದಾರೆ ಇದರಲ್ಲಿ ರಾಜಕೀಯ ಪ್ರೇರಿತ ಅಂದ್ರೆ ನೀವು ಒಪ್ಪುತ್ತೀರಾ! ಕಾಂಗ್ರೆಸ್ ನವರೇ ಮಾಡಿರ್ಲಿ ಇನ್ನೊಂದು ಪಕ್ಷದವರು ಮಾಡಿರ್ಲಿ ಕಾನೂನು ಎಲ್ಲರಿಗೂ ಒಂದೇ. ಮೈಸೂರಿನಲ್ಲಿ ಸಿದ್ದರಾಮಯ್ಯ ಪುತ್ರರನ್ನ ಚುನಾವಣೆಗೆ ನಿಲ್ಲಿಸಲು ಪ್ರತಾಪ್ ಸಿಂಹ ಟಾರ್ಗೆಟ್ ಆರೋಪ ವಿಚಾರವಾಗಿ ಮಾತನಾಡಿ, ಅವರ ತಮ್ಮ ಕಳ್ಳ ಎಂಬುದು ಜನರ ಮನಸ್ಸಲ್ಲಿ ಸಾಭೀತಾದ ರೀತಿನಲ್ಲಿದೆ. ಅಂತಹವರಿಗೆ ಪ್ರತಾಪ್ ಸಿಂಹ ಬೆಂಬಲ ಕೊಡ್ತಾರೆ ಎಂದು ನಾವು ಭಾವಿಸಬಹುದಾ! ಮರಗಳ್ಳನಿಗೆ ಪ್ರತಾಪ್ ಸಿಂಹ ಬೆಂಬಲ ಎಂದು ನಾವು ಹೇಳಬಹುದಲ್ಲಾ. ಯಾವುದ್ಯಾವುದೋ ಕಾರಣಕ್ಕಾಗಿ ಯಾರ್ಯಾರನ್ನೋ ಟೀಕೆ ಮಾಡೋದು ಸರಿ ಅಲ್ಲ. ಕೋರ್ಟಲ್ಲಿ ಅವರು ನಿರ್ಧೋಷಿ ಎಂದು ಹೊರಬರಲಿ ಯಾರು ಬೇಡ ಅಂದೋರು. ಅವರು ಮಾಡೋ ಪ್ರಶ್ನೆಯನ್ನ ಕೋರ್ಟ್ನಲ್ಲಿ ಮಾಡಲಿ. ಕೋರ್ಟ್ ಕೊಡುವ ಅಂತಿಮ ನಿರ್ಣಯಕ್ಕೆ ನಾವು ತಲೆ ಬಾಗುತ್ತೇವೆ ಎಂದು ಹೇಳಿದರು.
ರಾಮ ಮಂದಿರ ಉದ್ಘಾಟನೆಗೆ ಸಿಎಂ ಸಿದ್ದರಾಮಯ್ಯ ರನ್ನ ಆಹ್ವಾನಿಸದ ವಿಚಾರವಾಗಿ ಮಾತನಾಡಿ, ಬಿಜೆಪಿಯವರು ಯಾರನ್ನ ಕರಿಬೇಕು ಬೇಡ ಎಂಬ ಅಜೆಂಡಾ ಇರುತ್ತೆ. ಬಿಜೆಪಿ ಅಜೆಂಡಾನಾ ನಾವ್ಯಾಕೆ ಪ್ರಶ್ನೆ ಮಾಡೋಕೆ ಹೋಗಬೇಕು? ಅಲ್ಲಿಗೆ ಹೋಗಿ ಮಾಡಿದ್ರೆ ಮಾತ್ರ ರಾಮನ ದರ್ಶನ, ಆಶೀರ್ವಾದಾನಾ!
ನಮ್ಮೂರಲ್ಲಿ ಇರೋ ರಾಮನ ದರ್ಶನ ಮಾಡಿದ್ರೆ ನಮಗೆ ಆಶೀರ್ವಾದ ಮಾಡೋದಿಲ್ವಾ. ದೇವರು ಸರ್ವಾಂತರ್ ಯಾಮಿ ನಮ್ಮಲ್ಲೂ ಇದ್ದಾನೆ ನಿಮ್ಮಲ್ಲೂ ಇದ್ದಾನೆ.
ತೃಪ್ತಿಗೆ ಮನಸ್ಸಿನ ನೆಮ್ಮದಿಗೆ ದೇವಸ್ಥಾನೆಕ್ಕೆ ಹೋಗುತ್ತೇವೆ. ಅಲ್ಲಿಗೆ ಹೋದ ತಕ್ಷಣ ಶ್ರೀರಾಮನ ಆಶೀರ್ವಾದ ಆಗಿಬಿಡುತ್ತಾ. ಇಲ್ಲಿರೋ ಶ್ರೀರಾಮನ ದರ್ಶನಕ್ಕೆ ಹೋದ್ರೆ ಆಶೀರ್ವಾದ ಆಗೋದಿಲ್ವಾ. ಅವರವರ ನಂಬಿಕೆಗೆ ಅನುಗುಣವಾಗಿ ನಡೆದುಕೊಳ್ಳುತ್ತಾರೆ ಅದರಲ್ಲಿ ತಪ್ಪು ಸರಿ ವ್ಯಾಖ್ಯಾನ ನಾವು ಮಾಡೊಲ್ಲ. ಸಿಎಂ ಆಹ್ವಾನಿಸದ್ದನ್ನ ಅವರ ಸಣ್ಣತನ ಅನ್ನಬೇಕೊ, ದೊಡ್ಡತನ ಅನ್ನಬೇಕೋ ನೀವೇ ಹೇಳಿ ಎಂದು ಸಿಡಿಮಿಡಿಗೊಂಡರು.
ಇದೆ ವೇಳೆ ಕಾಂಗ್ರೆಸ್ ಮುಖಂಡರಾದ ಬಿ. ಶಿವರಾಂ, ಶ್ರೇಯಾಸ್ ಪಟೇಲ್ ಇತರರು ಉಪಸ್ಥಿತರಿದ್ದರು.
Hassan
ಎಸ್ಡಿಎಂ ಜನಮಂಗಳ ಯೋಜನೆಯಡಿ ಉಚಿತ ಕಮೋಡಾ ವೀಲ್ ಚೇರ್ ವಿತರಣೆ

ವರದಿ: ಸತೀಶ್ ಚಿಕ್ಕಕಣಗಾಲು
ಆಲೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಜನಮಂಗಳ ಕಾರ್ಯಕ್ರಮದ ಅಡಿಯಲ್ಲಿ ಫಲಾನುಭವಿಗೆ ಉಚಿತವಾಗಿ ಕಮೋಡಾ ವೀಲ್ ಚೇರ್ ವಿತರಣೆ ಮಾಡಲಾಯಿತು.
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಆಲೂರು ತಾಲೂಕಿನ ಯೋಜನಾಧಿಕಾರಿ ರತ್ನಾಕರ್ ಕೊಠಾರಿ ಮಾತನಾಡಿ, ತಾಲೂಕಿನಲ್ಲಿ ಇದುವರೆಗೂ ಜನಮಂಗಲ ಕಾರ್ಯಕ್ರಮದ ಅಡಿಯಲ್ಲಿ ಅಂಗವಿಕಲರಿಗೆ ಅವಶ್ಯಕತೆ ಸಲಕರಣೆಗಳಾದ ವೀಲ್ ಚೇರ್, ಸೇಫ್ ವಾಕರ್, ವಾಟರ್ ಬೆಡ್, ವಾಕಿಂಗ್ ಸ್ಟಿಕ್ ಸೇರಿದಂತೆ ಒಟ್ಟು ಉಪಕರಣಗಳನ್ನು ನೀಡಲಾಗಿದೆ. ಅಲ್ಲದೆ 105 ಮಂದಿ ಸದಸ್ಯರಿಗೆ ಪ್ರತಿ ತಿಂಗಳು ತಲಾ ಒಂದೊಂದು ಸಾವಿರ ಮಾಸಾಸನವನ್ನು ನೀಡಲಾಗುತ್ತಿದೆ ಎಂದು ತಿಳಿಸಿದರು.
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಪಾಳ್ಯ ಹೋಬಳಿಯ ಮೇಲ್ವಿಚಾರಕಿ ಯಶೋಧ ಮಾತನಾಡಿ, ತಾಲೂಕಿನ ಪಾಳ್ಯ ಹೋಬಳಿ ನಲ್ಲೂರು ಗ್ರಾಮದ ನಿವಾಸಿಯಾದ ಬೈರಯ್ಯರ ಎಂಬುವವರು ಅನಾರೋಗ್ಯಕ್ಕೆ ತುತ್ತಾಗಿ ನಡೆಯಲು ಸಾಧ್ಯವಾಗುತ್ತಿರಲಿಲ್ಲ. ಕಾರಣ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ವೀಲ್ ಚೇರ್ ಉಚಿತವಾಗಿ ನೀಡಲಾಯಿತು ಎಂದರು.
ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜನಮಂಗಲ ಕಾರ್ಯಕ್ರಮದ ಸದಸ್ಯ ಮಲ್ಲಿಕಾರ್ಜುನ್, ಕಾರ್ಯಕ್ಷೇತ್ರ ಸೇವಾ ಪ್ರತಿನಿಧಿ ಗೀತಾ ಸೇರಿದಂತೆ ಫಲಾನುಭವಿಯ ಮನೆಯ ಸದಸ್ಯರು ಉಪಸ್ಥಿತರಿದ್ದರು.
Hassan
ಹಾಸನ : ಕಾರಿನೊಳಗೆ ಅಸಿಸ್ಟೆಂಟ್ ಅಕೌಂಟೆಂಟ್ ಅನುಮಾನಾಸ್ಪದ ಸಾ*ವು

ಹಾಸನ : ಕಾರಿನೊಳಗೆ ಅಸಿಸ್ಟೆಂಟ್ ಅಕೌಂಟೆಂಟ್ ಅನುಮಾನಾಸ್ಪದ ಸಾವು
ಶಿವಪ್ರಸಾದ್ (32) ಸಾವನ್ನಪ್ಪಿದ ವ್ಯಕ್ತಿ
ಹಾಸನ ಜಿಲ್ಲೆ, ಚನ್ನರಾಯಪಟ್ಟಣದ, ರಾಮೇಶ್ವರ ಬಡಾವಣೆ ಬಳಿ ಘಟನೆ
ದಿಡಗ ಗ್ರಾಮ ಪಂಚಾಯ್ತಿಯಲ್ಲಿ ಅಸಿಸ್ಟೆಂಟ್ ಅಕೌಂಟೆಂಟ್ ಆಗಿ ಕೆಲಸ ಮಾಡುತ್ತಿದ್ದ ಶಿವಪ್ರಸಾದ್
ಅತಿಯಾಗಿ ಮದ್ಯ ಸೇವಿಸುತ್ತಿದ್ದ ಶಿವಪ್ರಸಾದ್
ನಿನ್ನೆ ತಡರಾತ್ರಿ ಮದ್ಯಸೇವಿಸಿ ತಮ್ಮ KA-13-M-7321 ರೆನಾಲ್ಟೊ ಕಾರಿನೊಳಗೆ ಮಲಗಿದ್ದ ಶಿವಪ್ರಸಾದ್
ಕಾರಿನಲ್ಲೇ ಸಾವನ್ನಪ್ಪಿರುವ ಶಿವಪ್ರಸಾದ್
ಕಾರಿನೊಳಗೆ ಇದ್ದ ಕಾರಿನ ಕೀ
ಕಾರು ನಿಂತಿರುವುದನ್ನು ನಿಂತಲ್ಲೆ ನಿಂತಿರುವುದನ್ನು ನೋಡಿದ ಸ್ಥಳೀಯರು
ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ ಸ್ಥಳೀಯರು
ಮ್ಯಾಕಾನಿಕ್ ಕರೆಸಿ ಕಾರಿನ ಡೋರ್ಲಾಕ್ ತೆಗೆದು ಪರಿಶೀಲಿಸಿದ ಪೊಲೀಸರು
ಕಾರಿನೊಳಗೆ ಸಾವನ್ನಪ್ಪಿದ್ದ ಶಿವಪ್ರಸಾದ್
ಶಿವಪ್ರಸಾದ್ ಆಲೂರು ತಾಲ್ಲೂಕಿನ, ಸಿದ್ದಾಪುರ ಗ್ರಾಮದವನು
ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ
ಚನ್ನರಾಯಪಟ್ಟಣ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ
Hassan
ಬಗರ್ ಹುಕುಂ ಸಾಗುವಳಿ ಮಂಜೂರಾತಿಯ ಸಭೆ

ವರದಿ ಸತೀಶ್ ಚಿಕ್ಕಕಣಗಾಲು
ಆಲೂರು: ಬಗರ್ಹುಕುಂಗೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಸಿರುವ ಯಾವ ರೈತರಿಗೂ ಅನ್ಯಾಯ ಆಗದಂತೆ, ದಾಖಲೆ ಪರಿಶೀಲಿಸಿ ಕ್ರಮ ಕೈಗೊಳ್ಳಬೇಕು. ಮುಂದಿನ ಸಭೆಯಲ್ಲಿ ಸಾಗುವಳಿ ಪತ್ರ ವಿತರಿಸಲು ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಸಿಮೆಂಟ್ ಮಂಜು, ಅಧಿಕಾರಿಗಳಿಗೆ ಸೂಚಿಸಿದರು.
ಪಟ್ಟಣದ ಮಿನಿವಿಧಾನಸೌಧ ಆವರಣದಲ್ಲಿ ಇತ್ತೀಚೆಗೆ ನಡೆದ ಬಗರ್ ಹುಕುಂ ಸಾಗುವಳಿ ಮಂಜೂರಾತಿಯ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.ಅನೇಕ ವರ್ಷಗಳಿಂದ ಉಳುಮೆ ಮಾಡುತ್ತಿದ್ದು, ನಿಯಮಾನುಸಾರ ಅರ್ಜಿ ಸಲ್ಲಿಸಿ ಅನುಭವದಲ್ಲಿರುವ ರೈತರ ಜಮೀನುಗಳ ಬಳಿ ತೆರಳಿ ತಹಶೀಲ್ದಾರ್ ಹಾಗೂ ಕಂದಾಯ ಅಧಿಕಾರಿಗಳು ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.
ಜಮೀನಿಗೆ ಸಂಬಂಧಿಸಿದಂತೆ ರೈತರನ್ನು ಅನಗತ್ಯವಾಗಿ ಕಚೇರಿಗೆ ಅಲೆದಾಡಿಸಬಾರದು. ಮಧ್ಯವರ್ತಿಗಳಿಗೆ ಅವಕಾಶ ನೀಡದೇ ಫಲಾನುಭವಿ ರೈತರಿಗೆ ಅನುಕೂಲ ಮಾಡಿಕೊಡಲು ಅಧಿಕಾರಿಗಳು ಮುಂದಾಗಬೇಕು. ಯಾವುದೇ ಸಮಸ್ಯೆ ಇದ್ದಲ್ಲಿ ಗಮನಕ್ಕೆ ತರಬೇಕು. ಅನ್ಯಾಯ ಆಗದಂತೆ ಪಾರದರ್ಶಕವಾಗಿ ಪರಿಶೀಲಿಸಿ, ನಿಯಮಾನುಸಾರ ಅರ್ಹ ರೈತರಿಗೆ ಸಾಗುವಳಿ ಪತ್ರ ವಿತರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ತಹಶೀಲ್ ಮಲ್ಲಿಕಾರ್ಜುನ್ ಮಾತನಾಡಿ, ಎರಡು ವರ್ಷಗಳ ನಂತರ ಬಗರ್ ಹುಕುಂ ಸಮಿತಿ ಸಭೆ ನಡೆದಿದ್ದು, 26 ಫಲಾನುಭವಿಗಳ ಪೈಕಿ, ಗುರುವಾರ ನಡೆದ ಸಭೆಯಲ್ಲಿ ಎರಡು ಅರ್ಜಿಗಳನ್ನು ಅನುಮೋದಿಸಲಾಯಿತು. ಉಳಿದ 24 ಅರ್ಜಿಗಳಿಗೆ ಸಂಬಂಧಿಸಿದಂತೆ ಸ್ಥಳ ಪರಿಶೀಲಿಸಿ ಮುಂದಿನ ಸಭೆಯಲ್ಲಿ ಮಂಡಿಸಲಾಗುವುದು ಎಂದು ತಿಳಿಸಿದರು.
ಸಭೆಯಲ್ಲಿ ಉಪ ತಹಶೀಲ್ದಾರ್ ಎಂ.ಎ.ಅಂಕೆಗೌಡ, ಭೂಮಿ ಸಂಯೋಜಕ ಪ್ರದೀಪ್, ಹೋಬಳಿಗಳ ಕಂದಾಯ ನಿರೀಕ್ಷಕರು, ಗ್ರಾಮ ಆಡಳಿತಾಧಿಕಾರಿಗಳು ಹಾಗು ಸಿಬ್ಬಂದಿಗಳು ಹಾಜರಿದ್ದರು.
ಪೋಟೋ ಕ್ಯಾಪ್ಶನ್: ಪಟ್ಟಣದ ಮಿನಿವಿಧಾನಸೌಧ ಆವರಣದಲ್ಲಿ ಇತ್ತೀಚೆಗೆ ನಡೆದ ಬಗರ್ ಹುಕುಂ ಸಾಗುವಳಿ ಮಂಜೂರಾತಿಯ ಸಭೆಯಲ್ಲಿ ಶಾಸಕ ಸಿಮೆಂಟ್ ಮಂಜು ಭಾಗವಹಿಸಿ ಮಾತನಾಡಿದರು.
-
Chamarajanagar21 hours ago
ನಾಳೆ ವಿವಿಧೆಡೆ ವಿದ್ಯುತ್ ವ್ಯತ್ಯಯ
-
Mysore19 hours ago
12 ವರ್ಷದ ಬಾಲಕಿ ಮೇಲೆ ಅತ್ಯಾಚಾರ : ಆರೋಪಿ ಬಂಧನ
-
Hassan23 hours ago
ಬಗರ್ ಹುಕುಂ ಸಾಗುವಳಿ ಮಂಜೂರಾತಿಯ ಸಭೆ
-
Kodagu24 hours ago
ನಾಪೋಕ್ಲು ಬೇತು ಗ್ರಾಮದಲ್ಲಿ ನಿವೃತ ಸೈನಿಕನ ಮನೆಗೆ ಕನ್ನ ಹಾಕಿದ ಚೋರರು -ಕೋವಿ,ಬೆಳ್ಳಿಯಪೀಚೆಕತ್ತಿ ಕದ್ದು ಪರಾರಿ
-
Kodagu19 hours ago
ಹುಲಿ ದಾಳಿಗೆ ಕರು ಬಲಿ
-
Kodagu22 hours ago
ಬಿರುನಾಣಿ ವ್ಯಾಪ್ತಿಯಲ್ಲಿ ಹುಲಿ ಸೆರೆಗೆ ಕಾರ್ಯಚರಣೆ
-
Chikmagalur23 hours ago
ಅಪ್ರಾಪ್ತನಿಂದ ದ್ವಿಚಕ್ರ ವಾಹನ ಚಾಲನೆ: ಪೋಷಕರಿಗೆ 25 ಸಾವಿರ ರೂ ದಂಡ.
-
Chikmagalur24 hours ago
ಜನಿವಾರ ತೆಗೆಸಿರುವುದು ಖಂಡನೀಯ