Hassan
ಅಯೋಧ್ಯೆ ಹೋರಾಟದಂತೆ ಮುಂದೆ ಮಸೀದಿಯಲ್ಲಿ ಈಶ್ವರನಿಗಾಗಿ ಹೋರಾಟ : ಶಿವಪ್ರಸಾದ್ ಪಾಂಡೆಯ ಮಹಾರಾಜ್

ಹಾಸನ: ಈ ಹಿಂದೆ ಅಯೋಧ್ಯೆಗಾಗಿ ಸತತ ಹೋರಾಟ ಮಾಡಿದಂತೆ ಮುಂದಿನ ದಿನಗಳಲ್ಲಿ ಮಸೀದಿಯಲ್ಲಿ ಈಶ್ವರನಿಗಾಗಿ ಹೋರಟ ಮಾಡಲಾಗುವುದು ಎಂದು ಮೊದಲು ನ್ಯಾಯಾಲಯಕ್ಕೆ ದಾವೆ ಹೂಡಿ ಜಯಗಳಿಸಿದ ಗುರೂಜಿ ಶಿವಪ್ರಸಾದ್ ಪಾಂಡೆಯ ಮಹಾರಾಜ್ ಜಿ ಲಿಂಗಿಯಾ ಅವರು ಹಾಸನದಲ್ಲಿ ಹೇಳಿಕೆ ನೀಡಿದ್ದಾರೆ.
ನಗರದ ಪಾರ್ಕ್ ರಸ್ತೆ ಬಳಿ ಇರುವ ಶ್ರೀಸೀತಾರಾಮಾಂಜನೇಯ ದೇವಸ್ಥಾನದ ಅವರಣದಲ್ಲಿ ೧೦ ರಾಜ್ಯಗಳು ಮತ್ತು ಎರಡು ದೇಶಗಳನ್ನು ಭೇಟಿ ಮಾಡಿ ಶ್ರೀಲಂಕಾಕ್ಕೆ ತೆರಳಲಿರುವ ಶ್ರೀರಾಮ ಪಾಗ್ ಯಾತ್ರೆ ಬೆಂಗಳೂರಿನ ಮೂಲಕ ಹಾಸನಕ್ಕೆ ಬಂದಾಗ ಅದ್ಧೂರಿ ಸ್ವಾಗತ ದೊರಕಿತು. ನಂತರ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಜ್ಞನವ್ಯಾಪಿಯಲ್ಲಿ ಜಯಗಳಿಸಿರುವುದು ನಮ್ಮ ಜೀವಿತಾವಧಿಯಲ್ಲಿ ತುಂಬ ಖುಷಿ ತಂದಿದೆ. ನಮ್ಮ ಜೀವಿತಾವಧಿಯಲ್ಲಿ ಇದಕ್ಕಿಂತ ದೊಡ್ಡ ಸಂತಸ ಮತ್ತೊಂದಿಲ್ಲ. ಜ್ಞನವ್ಯಾಪಿ ಮಸೀದಿಯಲ್ಲಿ ಈಶ್ವರನಿಗಾಗಿ ನಮ್ಮ ಮುಂದಿನ ಹೋರಾಟ ಮುಂದುವರೆಯುವುದು ಎಂದು ಎಚ್ಚರಿಸಿದರು. ಆ ಸ್ಥಳದಲ್ಲಿ ಈಶ್ವರ ಲಿಂಗದ ಮೇಲೆ ನೀರಿನ ಫೌಂಟೆನ್ ಮಾಡಿ ಇರಿಸಿ ನೀರು ಹಾಕಿ ಮುಚ್ಚಿದ್ದಾರೆ. ಅದೇ ಸ್ಥಳಕ್ಕೆ ಉಗಿಯುತ್ತಾರೆ ಎಂದು ಬೇಸರವ್ಯಕ್ತಪಡಿಸಿದ ಅವರು, ಮುಂದೆ ಅಲ್ಲಿನ ಶಿವಲಿಂಗಕ್ಕಾಗಿ ಹೋರಾಟ ಮಾಡುತ್ತೇವೆ. ಜ್ಞನವ್ಯಾಪಿಯಲ್ಲೂ ಅಯೋಧ್ಯೆಯಂತೆ ಶಿವಲಿಂಗಕ್ಕಾಗಿ ಹೋರಾಟ ಮಾಡುತ್ತೇವೆ. ಅಯೋಧ್ಯೆ ಹೋರಾಟವೂ ಇದೆ ರೀತಿ ಪ್ರಾರಂಭವಾಗಿ ಜಯಗಳಿಸಿದೆ ಎಂದು ಹೇಳಿದರು.
ರಾಮಜನ್ಮಭೂಮಿ ಅಯೋಧ್ಯೆಯಿಂದ ಶ್ರೀಲಂಕಾವರೆಗೆ, ರಾಮ್ ಬನ್ ಗಮನ್ ಯಾತ್ರೆ ಪ್ರಾರಂಭವಾಗಿ ಅಯೋಧ್ಯೆ ಮಣ್ಣಿನೊಂದಿಗೆ ೧೫೦೦೦ಕಿ.ಮೀ ಯಾತ್ರೆ ಹೊರಟಿರುವ ಮಹಾರಾಜ್ ಲಿಂಗಿಯಾ ಗುರುಗಳು. ಈ ವೇಳೆ ಹಾಸನಕ್ಕೆ ಭೇಟಿ ನೀಡಿರೋ ಲಿಂಗಿಯಾಶ್ರೀ. ಅಯೋಧ್ಯೆಯಿಂದ ಲಂಕೆವರೆಗೆ ಶ್ರೀ ರಾಮ ಕ್ರಮಿಸಿದ ಒಟ್ಟು ೨೦೦ ಸ್ಥಳಗಳ ಭೇಟಿ ನೀಡಿದ್ದು, ಈ ವೇಳೆ ಜ್ಙಾನವ್ಯಾಪಿ ವಿಚಾರದಲ್ಲಿ ಲಿಂಗಿಯಾ ಗುರೂಜಿ ಮಾತನಾಡಿದರು.
ಇದೆ ವೇಳೆ ಯಾತ್ರೆಯ ಮುಖ್ಯ ಆಯೋಜಕರು ಡಾ. ಸಚಿನ್ ಸನಾತನಿ ಜಿ ಮಾಧ್ಯಮದೊಂದಿಗೆ ಮಾತನಾಡಿ, ಇಂದು ೧೦ ರಾಜ್ಯಗಳು ಮತ್ತು ಎರಡು ದೇಶಗಳನ್ನು ಭೇಟಿ ಮಾಡಿ ಶ್ರೀಲಂಕಾಕ್ಕೆ ತೆರಳಲಿರುವ ಶ್ರೀರಾಮ ಪಾಗ್ ಯಾತ್ರೆ ಬೆಂಗಳೂರಿನ ಮೂಲಕ ಹಾಸನ ತಲುಪಿದೆ. ಕಾಶಿಯ ಸನಾತನಿ ಸಂಸ್ಥೆ ಬ್ರಹ್ಮರಾಷ್ಟ್ರ ಏಕಂ ಅಯೋಧ್ಯೆಯಲ್ಲಿ ಶ್ರೀರಾಮ ಲಾಲನ ಪ್ರತಿಷ್ಠಾಪನೆಯ ಸ್ಮರಣಾರ್ಥ ೪೫ ದಿನಗಳ ಶ್ರೀರಾಮ ಪಾಗ್ ಯಾತ್ರೆಯನ್ನು ಆಯೋಜಿಸುತ್ತಿದೆ. ಈ ೪೫ ದಿನಗಳ ಯಾತ್ರೆಯು ಶ್ರೀರಾಮನು ತನ್ನ ವನವಾಸದ ದಿನಗಳಲ್ಲಿ ಹೋದ ಎಲ್ಲಾ ಸ್ಥಳಗಳ ಮೂಲಕ ಹಾದುಹೋಗುತ್ತದೆ. ಈ ಯಾತ್ರೆಯು ಭಗವಾನ್ ರಾಮನ ಆದರ್ಶಗಳು ಮತ್ತು ಮೌಲ್ಯಗಳನ್ನು ಅದು ಹಾದುಹೋಗುವ ಎಲ್ಲಾ ಸ್ಥಳಗಳಲ್ಲಿ ಪ್ರಚಾರ ಮಾಡುತ್ತದೆ, ಇದರಿಂದ ನಾವು ವಿಶ್ವ ಶಾಂತಿ ಮತ್ತು ಸಾಮರಸ್ಯವನ್ನು ಸ್ಥಾಪಿಸಬಹುದು ಎಂದರು. ದೇಶದಲ್ಲಿ ಏಕತೆ, ಸಮಗ್ರತೆ ಮತ್ತು ಸಮಾನತೆ ಕಾಪಾಡುವುದು ಇದರ ಉದ್ದೇಶವಾಗಿದೆ.
ಆಧುನಿಕ ಶಿಕ್ಷಣದೊಂದಿಗೆ ಸಾಂಪ್ರದಾಯಿಕ ಮೌಲ್ಯಗಳಲ್ಲಿ ಗುರುಕುಲವನ್ನು ನಿರ್ಮಿಸಲು ಮತ್ತು ಸ್ಥಾಪಿಸಲು ವಾರಣಾಸಿಯ ವಿಂಧ್ಯವಾಸಿನಿ ಧಾಮದಲ್ಲಿ ’ಶ್ರೀರಾಮ ವೈದಿಕ ಸಪ್ತಋಷಿ ಗುರುಕುಲ’ ಹೆಸರಿನಲ್ಲಿ ನಮ್ಮ ಮುಂಬರುವ ಶೈಕ್ಷಣಿಕ ಯೋಜನೆಗೆ ಈ ಯಾತ್ರೆ ಸಮರ್ಪಿಸುತ್ತದೆ. ಗುರುಕುಲ ಪದ್ಧತಿಯು ಭಾರತದ ಪ್ರಾಚೀನ ಶಿಕ್ಷಣ ವ್ಯವಸ್ಥೆಗೆ ಅಮೂಲ್ಯವಾದ ಕೊಡುಗೆಯನ್ನು ಹೊಂದಿದೆ. ಬ್ರಹ್ಮ ರಾಷ್ಟ್ರ ಏಕಂ ಜಾಗತಿಕವಾಗಿ ಏಕೀಕೃತ ಮತ್ತು ಬಲಿಷ್ಠ ಭಾರತಕ್ಕಾಗಿ ಪ್ರಾಚೀನ ಸಾಂಸ್ಕೃತಿಕ ಪರಂಪರೆಯಲ್ಲಿ ಬೇರೂರಿರುವ ಪ್ರಬಲ ನಾಯಕರನ್ನು ರೂಪಿಸುವ ಗುರಿ ಹೊಂದಿದೆ. ಶ್ರೀರಾಮ ಪಾಗ್ ಯಾತ್ರೆಯು ಇಂದು ಅಯೋಧ್ಯೆ, ಶೃಂಗವೇರಪುರ, ಪ್ರಯಾಗರಾಜ್, ಚಿತ್ರಕೂಟ, ಸತ್ನಾ (ಮ.ಪಂ.), ನಾಗ್ಪುರ, ನಾಸಿಕ್ ಮತ್ತು ಲೇಪಾಕ್ಷಿ ಮತ್ತು ಬೆಂಗಳೂರು ಮೂಲಕ ಹಾಸನ ತಲುಪಿದೆ. ಇಲ್ಲಿ ರಾಮ್ ಪಾಗ್ ಯಾತ್ರಿಗಳಿಗೆ ಭವ್ಯ ಸ್ವಾಗತ ನೀಡಿರುವುದಕ್ಕೆ ಸಂತೋಷವ್ಯಕ್ತಪಡಿಸಿದರು. ಯಾತ್ರೆಯಲ್ಲಿ ನೂರಾರು ರಾಮಭಕ್ತರು ಉಪಸ್ಥಿತರಿದ್ದರು.
ಸನಾತನ ಧರ್ಮ ಪ್ರಚಾರದ ಜತೆಗೆ ನಾಡಿನ ಸಂಸ್ಕೃತಿ, ಪರಂಪರೆ ಉಳಿಸುವ ಕೆಲಸ ಮಾಡುತ್ತಿರುವ ಈ ಸಂಸ್ಥೆಯಿಂದ ನಿರಂತರವಾಗಿ ಧಾರ್ಮಿಕ, ಸಾಂಸ್ಕೃತಿಕ, ಸಾಮಾಜಿಕ ಕಾರ್ಯಗಳು ನಡೆಯುತ್ತಿವೆ. ಈ ಯಾತ್ರೆಯು ಸಂಪೂರ್ಣವಾಗಿ ಧಾರ್ಮಿಕವಾಗಿದೆ ಮತ್ತು ಭಗವಾನ್ ಶ್ರೀರಾಮನ ಮೇಲಿನ ನಂಬಿಕೆ ಮತ್ತು ಭಕ್ತಿಯ ಸಂಕೇತವಾಗಿದೆ ಮತ್ತು ಲಕ್ಷಾಂತರ ಭಕ್ತರು ಈ ಐತಿಹಾಸಿಕ ಯಾತ್ರೆಗೆ ಭಾರತದಾದ್ಯಂತ ಸ್ಥಳದಿಂದ ಸ್ಥಳಕ್ಕೆ ಸೇರುತ್ತಿದ್ದಾರೆ.
ನಮ್ಮೊಂದಿಗೆ ಯಾತ್ರೆಯ ಪ್ರತಿಜ್ಞೆ ಸ್ವೀಕರಿಸುವ ಜನರು ಮುಖ್ಯವಾಗಿ ಗೌರವಾನ್ವಿತ ಗುರು ಜಿ ಶ್ರೀ ದಿವಾಕರ್ ದ್ವಿವೇದಿ ಜಿ, ಆದಿ ವಿಶ್ವೇಶ್ವರ ಜ್ಯೋತಿರ್ಲಿಂಗದ ಮಹಂತ್ ಶ್ರೀಲಿಂಗ ಮಹಾರಾಜ್ ಜಿ, ಶ್ರೀಮತಿ ಪ್ರಿಯಾ ಮಿಶ್ರಾ, ಎಂಆರ್. .ಮೋಹನ್, ಬಾಲಾಜಿ, ದಿನೇಶ್, ಮಹೇಶ್, ರಘುನಂದನ್, ವ್ಯಾಂಕೆಟ್, ಪವನ್, ಅರುಣ್, ಜಿ.ಓ. ಮಹಾಂತಪ, ಮುಕ್ತುರಾಜ್, ಪೂಜೆ, ಶ್ರೀ. ಕುಶಾಗ್ರ ಮಿಶ್ರಾ ಮತ್ತು ಇನ್ನೂ ಅನೇಕರನ್ನು ಪ್ರಸ್ತುತಪಡಿಸಲಾಯಿತು. ಈ ಪ್ರಯಾಣವು ರಾಜಕೀಯವಲ್ಲ ಆದರೆ ಸ್ವಾಯತ್ತ ಮತ್ತು ಧಾರ್ಮಿಕ ವ್ಯವಸ್ಥೆಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತದೆ. ಈ ಯಾತ್ರೆಯ ನಿರ್ಣಯವು ರಾಷ್ಟ್ರವನ್ನು ಏಕತೆ, ಸಮಗ್ರತೆ ಮತ್ತು ಸಮಾನತೆಯ ಎಳೆಯಲ್ಲಿ ಬಂಧಿಸುವ ಪ್ರಯತ್ನವಾಗಿದೆ. ಎಲ್ಲಾ ಜಾತಿ, ವರ್ಗದ ಜನರನ್ನು ಬಂಧಿಸಲು ನಿರಂತರ ಪ್ರಯತ್ನ ನಡೆಸುವುದು ಸಂಸ್ಥೆಯ ಉದ್ದೇಶವಾಗಿದೆ ಎಂದು ಹೇಳಿದರು. ಎಲ್ಲಾ ಸನಾತನಿಗಳು ಮತ್ತು ಶ್ರೀರಾಮನ ಭಕ್ತರು ಈ ಯಾತ್ರೆಗೆ ಸೇರಲು ಮತ್ತು ಅವರ ಸನಾತನ ಸಂಸ್ಕೃತಿ ಮತ್ತು ಪರಂಪರೆಯನ್ನು ಉಳಿಸುವಲ್ಲಿ ಸಹಕರಿಸಲು ವಿನಂತಿಸಲಾಗಿದೆ, ಇದರಿಂದಾಗಿ ಭಾರತವು ಅತ್ಯುತ್ತಮ ಮತ್ತು ಶಕ್ತಿಯುತ ವಿಶ್ವ ನಾಯಕನಾಗಿ ಸ್ಥಾಪನೆಯಾಗುತ್ತದೆ ಎಂದು ಕರೆ ನೀಡಿದರು
Hassan
ಸಂಭ್ರಮದಿಂದ ನಡೆದ ವೀರಭದ್ರೇಶ್ವರ ಸ್ವಾಮಿಯ 46ನೇ ಜಾತ್ರಾ ಮಹೋತ್ಸವ

ಆಲೂರು: ತಾಲ್ಲೂಕಿನ ಅಡವಿ ಬಂಟೆನಹಳ್ಳಿ ಗ್ರಾಮದಲ್ಲಿ ಶ್ರೀ ದೇವೀರಮ್ಮ ಶ್ರೀ ವೀರಭದ್ರೇಶ್ವರ ಸ್ವಾಮಿಯವರ 46ನೇ ವರ್ಷದ ಜಾತ್ರಾ ಮಹೋತ್ಸವ ಸಾವಿರಾರು ಭಕ್ತರ ನಡುವೆ ಸಂಭ್ರಮದಿಂದ ನಡೆಯಿತು.
ಮಾ.13ರ ಗುರುವಾರ ರಾಮೇಶ್ವರ ಹಳ್ಳದಲ್ಲಿ ಶ್ರೀ ದೇವೀರಮ್ಮ ಶ್ರೀ ವೀರಭದ್ರೇಶ್ವರ ಸ್ವಾಮಿಯವರಿಗೆ ಗಂಗಾಸ್ನಾನ ಏರ್ಪಡಿಸಲಾಗಿತ್ತು. ಶ್ರೀ ಕ್ರೋಧಿನಾಮ ಸಂವತ್ಸರೇ ಉತ್ತರಾಯಣೇ ಶಿಶಿರ ಋತು ಫಾಲ್ಗುಣ ಶುಕ್ಲ ಪಕ್ಷ 1927 ಗತಕಲಿ 5101 ದಿನಾನಿ14 ಪೂರ್ವ ಭಾದ್ರಪದ ಉತ್ತರ ಪಲ್ಗುಣಿ ನಕ್ಷತ್ರ ಪೂರ್ಣಿಮೆಯ ಮಾ. 14 ರ ಶುಕ್ರವಾರ ಬೆಳಿಗ್ಗೆ 8-00 ಗಂಟೆಗೆ ಗ್ರಾಮದ ದೇವಸ್ಥಾನದಲ್ಲಿ ಶ್ರೀ ದೇವೀರಮ್ಮನವರ ಮೂಲಸ್ಥಾನದಲ್ಲಿ ಅಂಕುರಾರ್ಪಣ ರುದ್ರಾಭಿಷೇಕ ಮತ್ತು ಮಹಾಮಂಗಳಾರತಿಯನ್ನು ಏರ್ಪಡಿಸಿ ಮತ್ತು ಸಂಜೆ 3-00 ಗಂಟೆಗೆ ಶ್ರೀ ಮಳೆಮಲ್ಲೇಶ್ವರ ಸ್ವಾಮಿಯವರ ಬೆಟ್ಟದಲ್ಲಿ ಶ್ರೀ ದೇವೀರಮ್ಮ- ಶ್ರೀ ವೀರಭದ್ರೇಶ್ವರ ಸ್ವಾಮಿಯವರಿಗೆ ರುದ್ರಾಭಿಷೇಕ ನಡೆಯಿತು, ಸಂಜೆ 7-30 ಗಂಟೆಗೆ ಸರಿಯಾಗಿ ಶ್ರೀ ಮಳೆಮಲ್ಲೇಶ್ವರ ಸ್ವಾಮಿಯವರ ಬೆಟ್ಟದಿಂದ ಶ್ರೀ ದೇವೀರಮ್ಮ ಶ್ರೀ ವೀರಭದ್ರೇಶ್ವರ ಸ್ವಾಮಿಯವರ ಮುತ್ತಿನ ಮಂಟಪ ಉತ್ಸವ ನಂದಿಧ್ವಜ, ವೀರಭದ್ರ ಕುಣಿತ, ಕೋಲಾಟ, ಡೊಳ್ಳು ಕುಣಿತ ಹಾಗೂ ವಿವಿಧ ವಾದ್ಯದೊಂದಿಗೆ ಮೆರವಣಿಗೆ ಮೂಲಕ ಗ್ರಾಮಕ್ಕೆ ಆಗಮನ ರಾತ್ರಿ 8-30 ರಿಂದ 10-30ರವರೆಗೆ ಅರ್ಚನೆ ಮಹಾಮಂಗಳಾರತಿ ಕಾರ್ಯಕ್ರಮ ನಡೆದವು.
ರಾತ್ರಿ 10-30 ಗಂಟೆಯಿಂದ ನಂದಿಧ್ವಜದೊಂದಿಗೆ ಶ್ರೀ ದೇವೀರಮ್ಮ ಸ್ವಾಮಿಯವರ ಉತ್ಸವ ಜರುಗಿದವು.
ಮಾ.15ರ ಶನಿವಾರ ಬೆಳಗ್ಗೆ 5-30 ಗಂಟೆಯಿಂದ ಕಳಸ ಶ್ರೀ ದೇವೀರಮ್ಮ ಶ್ರೀ ವೀರಭದ್ರೇಶ್ವರ ಸ್ವಾಮಿಯವರ ಮೆರವಣಿಗೆಯೊಂದಿಗೆ ಕೆಂಡೋತ್ಸವ ಕಾರ್ಯಕ್ರಮ ಸಾವಿರಾರು ಭಕ್ತರ ಸಮ್ಮುಖದಲ್ಲಿ ಜರುಗಿತು. ಹೊತ್ತ ಭಕ್ತರು ಕೆಂಡ ಹಾಯ್ದರು. ಹರಕೆ ಹೊತ್ತ ಭಕ್ತರು ಕೆಂಡ ತುಳಿದು ತಮ್ಮ ಭಕ್ತಿ ಸಮರ್ಪಿಸಿದರು.
ಜಾತ್ರಾ ಮಹೋತ್ಸವ ಅಂಗವಾಗಿ ರಾತ್ರಿ “ರಾಜಾ ಸತ್ಯವ್ರತ ಅಥವಾ ಶನಿಪ್ರಭಾವ ” ಎಂಬ ಸುಂದರ ಪೌರಾಣಿಕ ನಾಟಕವನ್ನು ಏರ್ಪಡಿಸಲಾಗಿತ್ತು. ಮಾ.16 ನೇ ಭಾನುವಾರ ಬೆಳಿಗ್ಗೆ 9-00 ಗಂಟೆಯಿಂದ ಭೂತಪ್ಪನವರ ಸೇವಾ ಕಾರ್ಯಗಳು ನಡೆದವು.
ಮಾ.14 ರ ಶುಕ್ರವಾರ ರಾತ್ರಿಯಿಂದ ಮಾ.15ರ ಶನಿವಾರ ರಾತ್ರಿವರೆಗೆ ಎಲ್ಲಾ ಭಕ್ತಾದಿಗಳಿಗೂ ಅನ್ನ ಸಂತರ್ಪಣೆಯನ್ನು ಏರ್ಪಡಿಸಲಾಗಿತ್ತು.
ಬೇಲೂರು: ಟಿ.ವಿ.ಮಾಧ್ಯಮಗಳ ಹೊಡೆತಕ್ಕೆ ಸಿಲುಕಿ ನಲುಗಿರುವ ನಾಟಕ ಕಲೆ ಇಂದಿಗೂ ಜೀವಂತವಾಗಿದೆ ಎಂದರೆ, ಇದಕ್ಕೆ ಗ್ರಾಮೀಣ ಪ್ರದೇಶದ ಜನರ ಪ್ರೋತ್ಸಾಹ ಹಾಗೂ ಆಸಕ್ತಿಯೇ ಕಾರಣವಾಗಿದೆ ಎಂದು ಶಾಸಕ ಹೆಚ್.ಕೆ ಸುರೇಶ್ ತಿಳಿಸಿದರು.
ತಾಲೂಕಿನ ಹಗರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸೇರಿದ ಅಡವಿ ಬಂಟೆನಹಳ್ಳಿ ಗ್ರಾಮದಲ್ಲಿ ಆಯೋಜಿಸಿದ್ದ 46ನೇ ವರ್ಷದ ಶ್ರೀ ದೇವೀರಮ್ಮ ಶ್ರೀ ವೀರಭದ್ರೇಶ್ವರ ಸ್ವಾಮಿಯವರ ಜಾತ್ರಾ ಮಹೋತ್ಸವದ ಪ್ರಯುಕ್ತ ಏರ್ಪಡಿಸಿದ್ದ ರಾಜಾ ಸತ್ಯವ್ರತ ಅಥವಾ ಶನಿಪ್ರಭಾವ ” ಎಂಬ ಸುಂದರ ಪೌರಾಣಿಕ ನಾಟಕ ವೇದಿಕೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು, ಇಂದಿನ ದಿನಮಾನಗಳಲ್ಲಿ ಟಿವಿ, ಮೊಬೈಲ್ ಹಾವಳಿಯಿಂದ ಪೌರಾಣಿಕ ನಾಟಕಗಳು ನಶಿಸುತ್ತಿವೆ. ಗ್ರಾಮೀಣ ಭಾಗದ ಕಲಾಭಿಮಾನಿಗಳು ಪೌರಾಣಿಕ ನಾಟಕಗಳನ್ನು ಉಳಿಸಿ ಬೆಳೆಸುವಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕೆಂದು ಕರೆ ನೀಡಿದರು. ಬಂಟೆನಹಳ್ಳಿಯ ಗ್ರಾಮಕ್ಕೆ ಅರಣ್ಯ ಇಲಾಖೆಯಿಂದ ಆಗುತ್ತಿರುವ ಸಮಸ್ಯೆಯನ್ನು ಸಮಸ್ಯೆಯನ್ನು ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ಈ ಬಗ್ಗೆ ಸದನದಲ್ಲೂ ಕೂಡ ಸರ್ಕಾರವನ್ನ ಗಮನ ಸೆಳೆಯುವಂತಹ ಕೆಲಸ ಮಾಡುತ್ತೇನೆ ಎಂದರು.
ವೇದಿಕೆ ಕಾರ್ಯಕ್ರಮದಲ್ಲಿ ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾಧ್ಯಕ್ಷ ನವೀನ್, ಬಿಜೆಪಿ ಮುಖಂಡ ಡಿಶಾಂತ್ ಕುಮಾರ್, ಗ್ರಾಮ ಪಂಚಾಯಿತಿ ಸದಸ್ಯರಾದ ಮುತ್ತಣ್ಣ, ಪೃಥ್ವಿರಾಜ್, ವಕೀಲರಾದ ವೀರಭದ್ರೇಗೌಡ, ಗ್ರಾಮದ ಮುಖಂಡರಾದ ಸಿದ್ದಮಲ್ಲೇಗೌಡ, ಬಸವರಾಜ್, ವಿರುಪಾಕ್ಷ, ಜಯಣ್ಣ ಗ್ರಾಮಸ್ಥರು ಹಾಗೂ ಭಕ್ತರು ಹಾಜರಿದ್ದರು.
Hassan
ಛತ್ರಪತಿ ಶಿವಾಜಿ ತತ್ವ ಆದರ್ಶ ಅನುಸರಿಸಿ: ಸಂಸದ ಶ್ರೇಯಸ್ ಪಟೇಲ್

ಹಾಸನ : ಇಡೀ ದೇಶಕ್ಕೆ ಮಾದರಿಯಾದ ಛತ್ರಪತಿ ಶಿವಾಜಿ ಮಹಾರಾಜರ ತತ್ವ ಆದರ್ಶಗಳನ್ನು ಎಲ್ಲರೂ ಅನುಸರಿಸಬೇಕು ಎಂದು ಸಂಸದ ಶ್ರೇಯಸ್ ಪಟೇಲ್ ಕರೆ ನೀಡಿದರು.
ನಗರದ ಹಾಸನಾಂಬ ಕಲಾ ಕ್ಷೇತ್ರದಲ್ಲಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಭಾನುವಾರದಂದು ಆಯೋಜಿಸಿದ್ದ ಛತ್ರಪತಿ ಶಿವಾಜಿ ಮಹಾರಾಜ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಶಿವಾಜಿ ಅವರ ಧೈರ್ಯ, ಶೌರ್ಯ, ನೇರ ನುಡಿಯನ್ನು ಎಲ್ಲರೂ ಮೆಚ್ಚಲೇಬೇಕು. ಶಿವಾಜಿ ಅವರು ಒಂದು ಸಮಾಜಕ್ಕೆ ಸೀಮಿತವಾದವರಲ್ಲ. ಇಡೀ ದೇಶಕ್ಕೆ ಮಾದರಿಯಾದ ಕ್ರಾಂತಿವೀರರು. ಮುಂದಿನ ಪೀಳಿಗೆಯವರು, ನಾವು ಅವರು ಹಾಕಿಕೊಟ್ಟ ದಾರಿಯಲ್ಲಿ ಸಾಗೋಣ ಎಂದು ಹೇಳಿದರು.
ಬೆಂಗಳೂರಿನ ಗೋಸಾಯಿ ಮಠದ ಮಂಜುನಾಥ ಸ್ವಾಮೀಜಿ ಮಾತನಾಡಿ, ಛತ್ರಪತಿ ಶಿವಾಜಿಯವರು ಕೇವಲ ಮರಾಠ ಸಮಾಜಕ್ಕೆ ಸೀಮಿತವಲ್ಲ, ಇಡೀ ವಿಶ್ವಕ್ಕೆ ಆದರ್ಶ ಪುರುಷರಾಗಿದ್ದಾರೆ. ಶಿವಾಜಿ ರಾಷ್ಟ್ರ ನಾಯಕ, ಸ್ವರಾಜ್ಯ ಸ್ಥಾಪಕರಾಗಿದ್ದಾರೆ. ಭಾರತೀಯರೆಲ್ಲರೂ ಒಂದೇ ಎಂಬ ಉದಾತ್ತ ಆದರ್ಶ ಕೊಟ್ಟಿರುವ ಮಹಾಪುರುಷರಲ್ಲಿ ಶಿವಾಜಿ ಅವರೂ ಒಬ್ಬರು. ಶಿವಾಜಿವನ್ನು ನಾಲ್ಕು ಗೋಡೆಗೆ ಸೀಮಿತಗೊಳಿಸದೆ ಅವರ ಆದರ್ಶಗಳನ್ನು ಮೈಗೂಡಿಸಿಕೊಂಡು ಅನುಷ್ಟಾನಕ್ಕೆ ತರಬೇಕು ಎಂದು ಹೇಳಿದರು.
ಶಾಸಕ ಹೆಚ್.ಪಿ. ಸ್ವರೂಪ್ ಮಾತನಾಡಿ, ಶಿವಾಜಿಯವರು ವೀರ ಯೋಧರಾಗಿದ್ದು, ವಿಶ್ವ ಪ್ರಸಿದ್ಧರಾಗಿದ್ದಾರೆ. ಶಿವಾಜಿ ಅವರ ಪುತ್ತಳಿಯನ್ನು ಹಾಸನದಲ್ಲಿ ಶೀಘ್ರದಲ್ಲೇ ಅನಾವರಣ ಮಾಡೋಣ ಹಾಗೂ ಮರಾಠ ಸಮುದಾಯದ ಮಕ್ಕಳಿಗೆ ವಸತಿ ನಿಲಯವನ್ನು ನಿರ್ಮಾಣ ಮಾಡಿಕೊಡುವುದರ ಕುರಿತು ನೀವು ಕೂಡ ಮನವಿ ಮಾಡಿದ್ದೀರಿ ಅದನ್ನು ಶೀಘ್ರದಲ್ಲೇ ಶಾಸಕರ ನಿಧಿಯಿಂದ ಮಾಡಿಕೊಡುವುದಾಗಿ ಭರವಸೆ ನೀಡಿದರು.
ಕಾರ್ಯಕ್ರಮಕ್ಕೂ ಮೊದಲು ೩೯೮ನೇ ಶ್ರೀ ಶಿವ ಛತ್ರಪತಿ ಶಿವಾಜಿ ಮಹಾರಾಜರ ಜಯಂತೋತ್ಸವದ ಅಂಗವಾಗಿ ಶ್ರೀ ಅಂಬಾಭವಾನಿ ಕಲ್ಯಾಣ ಮಂಟಪ, ಅಗ್ರಹಾರ, ಹಾಸನದಲ್ಲಿ ಬೆಳಗ್ಗೆ ಒಂಬತ್ತು ಗಂಟೆಗೆ ಪೂಜಾ ಕಾರ್ಯಕ್ರಮಗಳನ್ನು ಮುಗಿಸಿ ಇಲ್ಲಿಂದ ಮೆರವಣಿಗೆ ಹೊರಟು ಹಳೆ ಬಸ್ ಸ್ಟ್ಯಾಂಡ್ ರಸ್ತೆ ಮಾರ್ಗವಾಗಿ ಕಲಾಭವನವರೆಗೆ ಮೆರವಣಿಗೆ ನಡೆಸಿದರು.
ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಡಾ.ಎಚ್.ಪಿ. ತಾರಾನಾಥ್, ಹಾಸನ ಜಿಲ್ಲಾ ನೌಕರರ ಸಂಘದ ಗೌವಾಧ್ಯಕ್ಷರಾದ ಈ. ಕೃಷ್ಣೇಗೌಡ, ವಕೀಲರಾದ ವಿಜಯಕುಮಾರ್ ನಾರ್ವೆ, ಕರ್ನಾಟಕ ಕ್ಷತ್ರಿಯ ಮರಾಠ ಪರಿಷತ್ತಿನ ಹಾಸನ ಜಿಲ್ಲಾಧ್ಯಕ್ಷರಾದ ಎನ್ ಲೀಲಾಕುಮಾರ್, ಪರಿಷತ್ತಿನ ಪ್ರಧಾನ ಕಾರ್ಯದರ್ಶಿ ಎ.ವಿ. ರುದ್ರಪ್ಪಾಜಿರಾವ್ ಫೋರ್ಪಡೆ, ಗೌರವಾಧ್ಯಕ್ಷ ಹೆಚ್.ಜೆ. ತುಳಜಿರಾವ್ ಠಾಣ್ಗೆ, ಖಜಾಂಚಿ ಪ್ರಕಾಶ್, ನಿರ್ದೇಶಕ ಸುರೇಶ್ ಇತರರು ಉಪಸ್ಥಿತರಿದ್ದರು. ಯದೀಶ್ ಅವರು ಕಾರ್ಯಕ್ರಮ ನಿರೂಪಿಸಿದರು.
Hassan
ಏ.12, 13ರಂದು ಹಾಸನದಲ್ಲಿ ರಾಜ್ಯಮಟ್ಟದ ಕ್ರಿಕೆಟ್ ಪಂದ್ಯಾವಳಿ

ಹಾಸನ: ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಟಿ.ವಿ. ಶಿವಾನಂದ್ ತಗಡೂರು ಸೂಚನೆಯಂತೆ ಏಪ್ರಿಲ್ 12 ಮತ್ತು 13 ರಂದು ನಗರದ ಸರಕಾರಿ ಕಲಾ ಕಾಲೇಜು ಮತ್ತು ಸರಕಾರಿ ವಿಜ್ಞಾನ ಕಾಲೇಜು ಆವರಣದಲ್ಲಿ ರಾಜ್ಯ ಮಟ್ಟದ ಕ್ರಿಕೆಟ್ ಟೂರ್ನಿಮೆಂಟ್ ನಡೆಸಲು ಹಾಸನ ಜಿಲ್ಲಾ ಪತ್ರಕರ್ತರ ಸಂಘದಲ್ಲಿ ಸಭೆ ನಡೆಸಿ ಯಶಸ್ವಿಯಾಗಿ ನಡೆಸಲು ನಿರ್ಧರಿಸಲಾಯಿತು.
ಸಭೆಯ ಅಧ್ಯಕ್ಷತೆವಹಿಸಿದ್ದ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಟಿ.ವಿ. ಶಿವಾನಂದ್ ತಗಡೂರು ಮಾತನಾಡಿ, ರಾಜ್ಯ ಮಟ್ಟದ ಕ್ರಿಕೆಟ್ ಪಂದ್ಯಾವಳಿಯನ್ನು ಹಾಸನದಲ್ಲಿ ಆಯೋಜಿಸಲು ತೀರ್ಮಾನ ಮಾಡಲಾಗಿದ್ದು, ಕಳೆದ ವರ್ಷ ಮಂಗಳೂರಿನಲ್ಲಿ ಕ್ರಿಕೆಟ್ ಪಂದ್ಯಾವಳಿಯನ್ನು ಬಹಳ ಅಚ್ಚುಕಟ್ಟಾಗಿ ಆಯೋಜನೆ ಮಾಡಲಾಗಿತ್ತು. ಅದಕ್ಕಿಂತ ಬಿನ್ನವಾಗಿ ಇಲ್ಲಿ ಕ್ರಿಕೆಟ್ ಪಂದ್ಯಾವಳಿ ಏರ್ಪಡಿಸಲು ಆಲೂಚನೆ ಇಟ್ಟುಕೊಂಡು ನಿರ್ಧರಿಸಲಾಗಿದೆ. ಕೊಪ್ಪಳದಲ್ಲಿ ನಡೆದ ಸಮ್ಮೇಳನದಲ್ಲಿ ಮದನ್ ಗೌಡರು ತಿಳಿಸಿದ್ದರು. ಏಪ್ರಿಲ್ ೧೨ ಮತ್ತು ೧೩ನೇ ದಿನಾಂಕದಂದು ಹಾಸನದಲ್ಲಿ ಏರ್ಪಡು ಮಾಡಲು ಭಾನುವಾರದಂದು ನಡೆದ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ ಎಂದರು.
ಯಾರು ಪತ್ರಕರ್ತರ ಸಂಘದ ಸದಸ್ಯರಾಗಿದ್ದಾರೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಒಂದೊಂದು ತಂಡ ಭಾಗವಹಿಸಲು ಅವಕಾಶ ಇರುತ್ತದೆ. ಪ್ರತಿಯೊಬ್ಬರ ಐಡಿ ಕಾರ್ಡ್ ಪರೀಕ್ಷೆ ಮಾಡಲಾಗುದು. ಹೊರ ಜಿಲ್ಲೆಯಿಂದ ಬರುವ ಪತ್ರಕರ್ತ ಕ್ರೀಡಾಪಟುಗಳಿಗೆ ವಸತಿ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದರು.
ಕ್ರೀಡಾಕೂಟ ಯಶಸ್ವಿಗೆ ಜಿಲ್ಲಾ ಸಮಿತಿ, ಉಪ ಸಮಿತಿ ಮಾಡಿಕೊಂಡು ಆವರವರ ಜವಬ್ಧಾರಿಯನ್ನು ಜಿಲ್ಲಾಧ್ಯಕ್ಷರ ನೇತೃತ್ವದಲ್ಲಿ ವಹಿಸಿಕೊಡಲಿದೆ. ಪ್ರಾರಂಭದ ದಿನದಲ್ಲಿ ಮೊದಲ ಆಟ ಸೆಲೆಬ್ರೆಟಿ ಕ್ರಿಕೆಟ್ ನಡೆಯಲಿದೆ. ಮಂಗಳೂರಿನಲ್ಲಿಯೂ ಕೂಡ ಸೆಲಬ್ರಿಟಿ ಜನಪ್ರತಿನಿಧಿಗಳಿಂದ ಆಟೋಟ ನಡೆದಿತ್ತು. ಒಟ್ಟಾರೆ ರಾಜ್ಯ ಮಟ್ಟದ ಈ ಕ್ರಿಕೆಟ್ ಕ್ರೀಡಾಕೂಟವನ್ನು ಯಶಸ್ವಿಗೊಳಿಸುವಂತೆ ಕರೆ ನೀಡಿ ಮನವಿ ಮಾಡಿದರು.
ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂರ್ಘದ ಅಧ್ಯಕ್ಷ ಕೆ.ಹೆಚ್. ವೇಣುಕುಮಾರ್ ಮಾತನಾಡಿ, ರಾಜ್ಯದ ವಿವಿಧ ಮೂಲೆಗಳಿಂದ ಆಗಮಿಸುವ ಕ್ರಿಕೆಟ್ ಕ್ರೀಡಾಪಟುಗಳಿಗೆ ವಸತಿ ಸೌಲಭ್ಯ, ಊಟದ ವ್ಯವಸ್ಥೆ ಸೇರಿದಂತೆ ಎಲ್ಲಾ ಸಿದ್ಧತೆಗಳನ್ನು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಮಾಡುತ್ತಿದೆ. ಕ್ರಿಕೆಟ್ ಪಂದ್ಯಾವಳಿಗೆ ವಿಶೇಷವಾಗಿ ರಾಜ್ಯ ಸಭಾಪತಿ ಯೂ.ಟಿ. ಖಾದರ್, ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್. ರಾಜಣ್ಣ ಆಗಮಿಸಲಿದ್ದಾರೆ. .
ಸಭೆಯಲ್ಲಿ ರಾಜ್ಯ ಪತ್ರಕರ್ತರ ಸಂಘದ ಕಾರ್ಯಕಾರಣಿ ಸದಸ್ಯ ಹೆಚ್.ಬಿ. ಮದನ್ ಗೌಡ, ಮಾಜಿ ಅಧ್ಯಕ್ಷರಾದ ಮಂಜುನಾಥ್, ರವಿನಾಕಲಗೂಡು, ಬಿ.ಆರ್. ಉದಯಕುಮಾರ್, ಪ್ರಸನ್ನಕುಮಾರ್, ಕಾರ್ಯದರ್ಶಿ .ಪಿ.ಎ. ಶ್ರೀನಿವಾಸ್, ಕುಮಾರ್, ನಟರಾಜು, ಜಿ. ಪ್ರಕಾಶ್, ಹೆತ್ತೂರ್ ನಾಗರಾಜು, ಜ್ಞಾನೇಶ್, ಕುಶ್ವಂತ್, ಕೃಷ್ಣ, ನಾಗರಾಜು, ಮಂಜು, ಮೆಹಾಬೂಬ್, ದಯಾನಂದ್, ಶರತ್ ಇತರರು ಉಪಸ್ಥಿತರಿದ್ದರು.
-
Chamarajanagar21 hours ago
ಕಾಂಗ್ರೆಸ್ ಗೆ ಭರ್ಜರಿ ಗೆಲುವು
-
Uncategorized20 hours ago
ಕಾಡಾನೆ ಸೆರೆ ಕಾರ್ಯಾಚರಣೆ ಯಶಸ್ವಿ: ಪುಂಡಾನೆ ಸೆರೆ ಹಿಡಿದ ಕ್ಯಾಪ್ಟನ್ ಪ್ರಶಾಂತ್ ಅಂಡ್ ಟೀಮ್
-
Chamarajanagar22 hours ago
ಕಾರು ಅಪಘಾತ ಇಬ್ಬರು ಸ್ಥಳದಲ್ಲೇ ಮೃತ
-
Chikmagalur23 hours ago
ಹತ್ತು ಲಕ್ಷ ಮೌಲ್ಯದ 11 ಬೈಕ್ ಕದ್ದಿದ್ದ ಕಳ್ಳನ ಬಂಧನ
-
National - International13 hours ago
ಪಾಕ್ನ 90 ಮಂದಿ ಸೈನಿಕರನ್ನು ಹತ್ಯೆ ಮಾಡಿದ್ದೇವೆ ಎಂದ ಬಲೂಚ್ ಲಿಬರೇಶನ್ ಆರ್ಮಿ
-
Chamarajanagar16 hours ago
ತಲೆಯಲ್ಲಿ ಕೂದಲಿಲ್ಲ ಎಂದು ನಿಂದಿಸಿದ ಪತ್ನಿ: ಮನನೊಂದ ಪತಿ ಆತ್ಮ*ಹತ್ಯೆ
-
Kodagu15 hours ago
ಆಟವಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಕೆರೆಗೆ ಬಿದ್ದು ಬಾಲಕಿ ಮೃ*ತ
-
Mandya18 hours ago
ಮಳವಳ್ಳಿ ವಸತಿ ಶಾಲೆಯ ದುರ್ಘಟನೆ : ಎಚ್ಡಿಕೆ ಕಳವಳ