Connect with us

Hassan

ಹಾಸನ ಹಾಸನಾಂಬೆ ದರ್ಶನದ ವೇಳೆ ಭಕ್ತರಿಗೆ ಕರೆಂಟ್ ಶಾಕ್ ಆಗಿ ನೂಕು ನುಗ್ಗಲು ಪ್ರಕರಣ

Published

on

ಹಾಸನ ಹಾಸನಾಂಬೆ ದರ್ಶನದ ವೇಳೆ ಭಕ್ತರಿಗೆ ಕರೆಂಟ್ ಶಾಕ್ ಆಗಿ ನೂಕು ನುಗ್ಗಲು ಪ್ರಕರಣ

ಘಟನೆ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ಹಾಗು ದೇವಾಲಯ ಆಡಳಿತ ಮಂಡಳಿ

ತಕ್ಷಣದಿಂದ ಜಾರಿಗೆ ಬರುವಂತೆ ಎಲ್ಲಾ ಶಿಷ್ಟಾಚಾರ ದರ್ಶನ ಅಂತ್ಯ ಗೊಲಿಸಿದ ದೇವಾಲಯ ಆಡಳಿತ ಮಂಡಳಿ

ಅರ್ಚಕರ ಹೊರತಪಡಿಸಿ ಗರ್ಭಗುಡಿಗೆ ಅನ್ಯ ವ್ಯಕ್ತಿಗಳ ಪ್ರವೇಶ ಸಂಪೂರ್ಣ ನಿಷೇಧ

ಶಿಷ್ಟಾಚಾರ ದರ್ಶನ ಅಂತ್ಯಹಾಗು ಗರ್ಭಗುಡಿ ಪ್ರವೇಶ ನಿರ್ಬಂಧ ಮಾಡಿ ಆಡಳಿತಾದಿಕಾರಿ ಆದೇಶ

ಹಾಸನಾಂಬೆ ದೇವಾಲಯ ಆಡಳಿತಾದಿಕಾರಿ ಹಾಗು ಹಾಸನ ಉಪ ವಿಭಾಗ ಅದಿಕಾರಿ ಮಾರುತಿ ಆದೇಶ

ಹಾಸನಾಂಬೆ ದರ್ಶನ ಕ್ಕೆ ಅಪಾರ ಸಂಖ್ಯೆಯಲ್ಲಿ ಭಕ್ತರ ಆಗಮನ ಹಿನ್ನೆಲೆಯಲ್ಲಿ ಕಠಿಣ ಕ್ರಮ ಕೈಗೊಂಡ ಜಿಲ್ಲಾಡಳಿತ

ಶಿಷ್ಟಾಚಾರ ದರ್ಶನದಿಂದ ಸಾಮಾನ್ಯ ಭಕ್ತರ ದರ್ಶನ ವಿಳಂಬದ ಬಗ್ಗೆ ಆರೋಪ

ಗರ್ಭಗುಡಿ ದರ್ಶನದಿಂದ ಸರತಿ ಸಾಲಿನಲ್ಲಿ ನಿಲ್ಲೊ ಭಕ್ತರ ದರ್ಶನಕ್ಕೆ ಸಮಸ್ಯೆ ಹಿನ್ನೆಲೆಯಲ್ಲಿ ಖಡಕ್ ನಿರ್ದಾರ ಕೈಕೊಂಡ ಆಡಳಿತಾದಿಕಾರಿ

ಡಿಸಿ ಎಸ್ಪಿ, ಹಾಗು ಉಸ್ತುವಾರಿ ಸಚಿವರ ಸಭೆ ಬಳಿಕ ಆದೇಶ ಮಾಡಿದ ಆಡಳಿತಾದಿಕಾರಿ ಆದೇಶ

ಇಂದು ಸಾರ್ವಜನಿಕ ಭಕ್ತರ ದರ್ಶನದ ವೇಳೆ ವಿದ್ಯುತ್ ಶಾಕ್ ನಿಂದ ಅವಘಡ

ಅವಘಡದಿಂದ 17_ ಜನರು ಅಸ್ವಸ್ಥ ಹಿನ್ನೆಲೆಯಲ್ಲಿ ಹಲವು ಕ್ರಮ ಕೈಕೊಂಡ ಅದಿಕಾರಿಗಳು

ಇನ್ನೂ ನಾಲ್ಕು ದಿನ ಬಾಕಿ ಇರೋ ಹಾಸನಾಂಬೆ ದರ್ಶನೋತ್ಸವ

ದೀಪಾವಳಿ ರಜೆ ದಿನಗಳು ಆರಂಬ ಹಿನ್ನೆಲೆಯಲ್ಲಿ ಮತ್ತಷ್ಟು ಭಕ್ತರ ಸಂಖ್ಯೆ ಹೆಚ್ಚಾದರೆ ಸಮಸ್ಯೆ ಆಗೋ ಮುನ್ಸೂಚನೆ ಹಿನ್ನೆಲೆಯಲ್ಲಿ ಕ್ರಮ

Continue Reading
Click to comment

Leave a Reply

Your email address will not be published. Required fields are marked *

Crime

ಖಾಸಗಿ ಶಾಲಾ ಶಿಕ್ಷಕಿ ಅಪಹರಣ ಪ್ರಕರಣ – ಕಿಡ್ನಾಪರ್ಸ್‌ನ್ನು ಪತ್ತೆ ಹಚ್ಚಿದ ಪೊಲೀಸರು

Published

on

ಹಾಸನ : ಹಾಸನ ಹೊರವಲಯದ ಬಿಟ್ಟಗೌಡನಹಳ್ಳಿ ಬಳಿ ಖಾಸಗಿ ಶಾಲಾ ಶಿಕ್ಷಕಿ ಅಪಹರಣ ಪ್ರಕರಣ
ಕಿಡ್ನಾಪರ್ಸ್‌ನ್ನು ಪತ್ತೆ ಹಚ್ಚಿದ ಪೊಲೀಸರು
ನೆಲ್ಯಾಡಿ ಬಳಿ ತೆರಳುತ್ತಿದ್ದ ವೇಳೆ ಎಲ್ಲರೂ ಪೊಲೀಸರ ವಶಕ್ಕೆ


ಅರ್ಪಿತಳನ್ನು ರಕ್ಷಿಸಿ ಕಿಡ್ನಾಪ್ ಮಾಡಿದವರನ್ನು ವಶಕ್ಕೆ ಪಡೆದ ಪೊಲೀಸರು
ಹಾಸನ ನಗರ ಪೊಲೀಸ್ ಠಾಣೆಗೆ ಕರೆತರುತ್ತಿರುವ ಪೊಲೀಸರು
ಯುವತಿ ಅಪಹರಿಸಿ ಸೋಮವಾರಪೇಟೆ ಕಡೆ ಕರೆದೊಯ್ದಿದ್ದ ಖತರ್ನಾಕ್ ಕಿಡ್ನಾಪರ್ಸ್


ಪೊಲೀಸರಿಗೆ ಸಿಗದ ರೀತಿ ಪ್ಲಾನ್ ಮಾಡಿ ಅರ್ಪಿತಾಳನ್ನು ಕರೆದೊಯ್ಯಲು ಯತ್ನಿಸುತ್ತಿದ್ದ ರಾಮು ಮತ್ತು ತಂಡ
ಅಪರಹರಣಕ್ಕೊಳಗಾಗಿದ್ದ ಅರ್ಪಿತಾಳನ್ನು ರಕ್ಷಿಸಿ ರಾಮು ಮತ್ತು ತಂಡವನ್ನು ವಶಕ್ಕೆ ಪಡೆದು ಹಾಸನಕ್ಕೆ ಕರೆತರುತ್ತಿರುವ ಪೊಲೀಸರು

Continue Reading

Hassan

ಲೋಕಸಭೆ ಹಾಗೂ ಸ್ಥಳೀಯ ಸಂಸ್ಥೆ ಚುನಾವಣೆ ಹಿನ್ನೆಲೆ – ತವರು ಜಿಲ್ಲೆಯಿಂದಲೇ ಅಖಾಡಕ್ಕಿಳಿದ ಮಾಜಿ ಪ್ರಧಾನಿ ದೇವೇಗೌಡರು

Published

on

ಹಾಸನ: ಮುಂಬರುವ ಲೋಕಸಭೆ ಹಾಗೂ ಸ್ಥಳೀಯ ಸಂಸ್ಥೆ ಚುನಾವಣೆ ಹಿನ್ನೆಲೆ

ತವರು ಜಿಲ್ಲೆಯಿಂದಲೇ ಅಖಾಡಕ್ಕಿಳಿದ ಮಾಜಿ ಪ್ರಧಾನಿ ದೇವೇಗೌಡರು

ಡಿ.1 ರಂದು ಹೊಳೆನರಸೀಪುರ ತಾಲೂಕು ಶ್ರೀರಾಮದೇವರ ಕಟ್ಟೆಯಲ್ಲಿ ಮಹತ್ವದ ಸಭೆ

ಸಂಸದರು, ಶಾಸಕರು, ಜಿಪ-ತಾಪಂ ಮಾಜಿ ಸದಸ್ಯರು, ಮುಖಂಡರ ಸಭೆ ಕರೆದ ದೊಡ್ಡಗೌಡರು

ನಗರಸಭೆ,ಪುರಸಭೆ,ಪಟ್ಟಣ ಪಂಚಾಯ್ತಿ, ಗ್ರಾಪಂ ಚುನಾಯಿತ ಪ್ರತಿನಿಧಿಗಳಿಗೂ ಆಹ್ವಾನ

ತಮ್ಮ ಅಧ್ಯಕ್ಷತೆಯಲ್ಲೇ ನಡೆಯುವ ಸಭೆಗೆ ಪ್ರಮುಖರ ಆಹ್ವಾನ

ತಪ್ಪದೇ ಸಭೆಗೆ ಹಾಜರಾಗಿ ಪೂರಕ ಸಲಹೆ ಸೂಚನೆ ನೀಡುವಂತೆ ಸೂಚನೆ

ತವರು ಜಿಲ್ಲೆಯಿಂದಲೇ ಚುನಾವಣಾ ಪ್ರಕ್ರಿಯೆ ಆರಂಭಿಸುತ್ತಿರುವ ಹೆಚ್ಡಿಡಿ

Continue Reading

Hassan

ಜ್ಞಾನ ಮನುಷ್ಯನನ್ನು ಮುಕ್ತಿಯ ಕಡೆಗೆ ಕೊಂಡೊಯ್ಯುತ್ತದೆ – ಡಾ.ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ

Published

on

ಚನ್ನರಾಯಪಟ್ಟಣ: ಜ್ಞಾನ ಮನುಷ್ಯನನ್ನು ಮುಕ್ತಿಯ ಕಡೆಗೆ ಕೊಂಡೊಯ್ಯುತ್ತದೆ ಎಂದು ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ಡಾ.ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಹೇಳಿದರು.

ಪುರಾಣ ಪ್ರಸಿದ್ದ ಕ್ಷೇತ್ರ ಕಬ್ಬಳಿ ಶ್ರೀ ಬಸವೇಶ್ವರಸ್ವಾಮಿಯ 92 ನೇ ಜಾತ್ರಾ ಮಹೋತ್ಸವದ ಪ್ರಯುಕ್ತ ಸೋಮವಾರ ರಾತ್ರಿ ಏರ್ಪಡಿಸಿದ್ದ ಧಾರ್ಮಿಕ ಸಭೆಯಲ್ಲಿ ಮಾತನಾಡಿದ ಅವರು, ದೇಹ ಮಣ್ಣು ಸೇರಿದರು ಕೂಡ ಮನಸ್ಸು ಮನುಷ್ಯನನ್ನು ಹಿಂಬಾಲಿಸುತ್ತದೆ.
ಮನಸ್ಸಿಗೆ ಸರಿಯಾದ ಸಂಸ್ಕಾರವನ್ನು ನೀಡಬೇಕು ಭಕ್ತಿ ಮತ್ತು ಶ್ರದ್ದೆಯನ್ನು ಇಟ್ಟುಕೊಂಡು ಬದುಕಬೇಕು.

ಅಶಿಸ್ತಿನ ಬದುಕನ್ನು ತೊರೆದು ನಿಸ್ವಾರ್ಥದೊಂದಿಗೆ ಸನ್ಮಾರ್ಗದಲ್ಲಿ ನಡೆದರೆ ಭಗವಂತನ ಕೃಪೆಗೆ ಪಾತ್ರರಾಗುತ್ತೇವೆ. ಒಬ್ಬರಿಗೊಬ್ಬರು ಸಹಾಯ ಮಾಡುವುದೇ ಮಾನವೀಯ ಧರ್ಮ. ಆದರೆ ನಾವು ಮಾಡುವ ದಾನ ಪಡೆದವರಿಗೆ ಸಾರ್ಥಕವಾಗಬೇಕೆ ಹೊರತು ಹೊರೆಯಾಗಬಾರದು. ಬದುಕು ಕಟ್ಟಿಕೊಳ್ಳಲು ದಾರಿಯಾಗಿರಬೇಕು ಎಂದರು.

ನಮ್ಮ ಬದುಕಿನ ಶೈಲಿ, ಆಚರಣೆ ಹಾಗೂ ಅಳವಡಿಸಿಕೊಳ್ಳುವ ಮೌಲ್ಯಯುತ ಜೀವನ ಮುಂದಿನ ಪೀಳಿಗೆಗೆ ಮಾದರಿಯಾಗುವಂತೆ ಇರಬೇಕು ಎಂದು ತಿಳಿಸಿದರು.

ಶಾಸಕ ಸಿ.ಎನ್.ಬಾಲಕೃಷ್ಣ ಮಾತನಾಡಿ, ನಾವು ಎಷ್ಟೆಲ್ಲ ದುಡಿದಿದ್ದೇವೆ, ಏನೆಲ್ಲ ಸಂಪಾದಿಸಿದ್ದೇವೆ ಎಂದು ಎಣಿಸುವ ಬದಲು ದುಡಿದ ಹಣವನ್ನು ಯಾವ ಧರ್ಮ ಕಾರ್ಯಕ್ಕೆ ಎಷ್ಟು ವಿನಿಯೋಗಿಸಿದ್ದೇವೆ ಎಂಬುದನ್ನು ಅರಿಯಬೇಕು. ಕುಡಿಕೆ ತುಂಬುವಷ್ಟು ಕೂಡಿಟ್ಟು ಸ್ವಾರ್ಥ ಬದುಕು ನಡೆಸುವುದಕ್ಕಿಂತ ಧರ್ಮ ಕಾರ್ಯಗಳಿಗೆ ನಿಸ್ವಾರ್ಥದಿಂದ ಬಳಸುವುದು ಒಳಿತು ಎಂದರು.

ಮಾಜಿ ಎಂಎಲ್‌ಸಿ ಎಂ.ಎ.ಗೋಪಾಲಸ್ವಾಮಿ ಮಾತನಾಡಿ, ಬಸವೇಶ್ವರಸ್ವಾಮಿಯ ದೇಗುಲ ನಿರ್ಮಾಣಕ್ಕೆ ನೀಲಿನಕ್ಷೆ ತಯಾರಾಗಿದ್ದು ಈಗಾಗಲೇ ನಿರ್ಮಾಣ ಕಾರ್ಯ ಪ್ರಾರಂಭವಾಗಿದೆ. ಗರ್ಭಗುಡಿ ನಿರ್ಮಾಣಕ್ಕೆ 10 ಲಕ್ಷ ರೂ. ಸಮರ್ಪಿಸುತ್ತೇನೆ ಎಂದು ತಿಳಿಸಿದರು.

ಬಸವೇಶ್ವರಸ್ವಾಮಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು. 2023 ನೇ ಸಾಲಿನ ಎಸ್‌ಎಸ್‌ಎಲ್‌ಸಿಯಲ್ಲಿ ಹೆಚ್ಚು ಅಂಕ ಪಡೆದ 4 ಸರ್ಕಾರಿ ಫ್ರೌಢಶಾಲೆಯ ತಲಾ ಇಬ್ಬರು ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು.

ಇದೇ ವೇಳೆ ನಿರ್ಮಲಾನಂದನಾಥ ಸ್ವಾಮೀಜಿ ಅವರಿಗೆ ಪುಷ್ವವೃಷ್ಟಿ ನೆರವೇರಿಸಿ ಗುರುವಂದನೆ ಸಲ್ಲಿಸಲಾಯಿತು. ಆದಿಚುಂಚನಗಿರಿ ಹಾಸನ ಶಾಖಾಮಠದ ಶಂಭುನಾಥ ಸ್ವಾಮೀಜಿ, ಕಬ್ಬಳಿ ಮಠದ ಶ್ರೀ ಶಿವಪುತ್ರನಾಥ ಸ್ವಾಮೀಜಿ, ಮೈಸೂರು ಶಾಖಾ ಮಠದ ಸೋಮೇಶ್ವರನಾಥ ಸ್ವಾಮೀಜಿ, ಚೈತನ್ಯನಾಥಸ್ವಾಮೀಜಿ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಶಿವನಂಜೇಗೌಡ, ಸದಸ್ಯೆ ಸುಮಾ, ದಿಡಗ ಗ್ರಾಪಂ ಅಧ್ಯಕ್ಷ ಎನ್.ಆರ್.ರತ್ನರಾಜ್, ಪರಿಸರ ಪ್ರೇಮಿ ಸಿ.ಎನ್.ಅಶೋಕ್, ಗುಡಿಗೌಡ ಪ್ರಕಾಶ್, ಗಣೇಶ್‌ಗೌಡ ಇತರರು ಇದ್ದರು.

ದಯಾನಂದ್ ಶೆಟ್ಟಿಹಳ್ಳಿ.

Continue Reading

Trending