Kodagu
ಶ್ರದ್ಧೆ ಭಕ್ತಿಯಿಂದ ಜರುಗಿದ ಶ್ರೀ ಮುತ್ತಪ್ಪ ಸ್ವಾಮಿ ತೆರೆ ಮಹೋತ್ಸವ
ಕುಶಾಲನಗರ :ಇಲ್ಲಿನ ಬೈಚನಳ್ಳಿಯ ಯೋಗಾನಂದ ಬಡಾವಣೆಯ ಕಾವೇರಿ ನದಿ ತಟದಲ್ಲಿರುವ ಶ್ರೀ ಮುತ್ತಪ್ಪ ಸ್ವಾಮಿ ದೇವಾಲಯದಲ್ಲಿ ಶನಿವಾರದಿಂದ ಆರಂಭವಾಗಿರುವ ತೆರೆ ಮಹೋತ್ಸವಕ್ಕೆ ಬೆಳಗ್ಗೆ ಗಣಪತಿ ಹೋಮ ಹಾಗೂ ಧ್ವಜಾರೋಹಣ ಮಾಡುವ ಮೂಲಕ ಚಾಲನೆ ನೀಡಲಾಯಿತು.
ಈ ಸಂದರ್ಭದಲ್ಲಿ ವಿಭಿನ್ನತೆಯಲ್ಲಿ ಏಕತೆ ಎಂಬ ಸಾಮರಸ್ಯದ ಸಂದೇಶ ಸಾರುವ ಹಿನ್ನೆಲೆಯಲ್ಲಿ ಧ್ವಜಾರೋಹಣ ಕಾರ್ಯಕ್ರಮದಲ್ಲಿ ವಿವಿಧ ಸಮಾಜಗಳ ಅಧ್ಯಕ್ಷರುಗಳು, ಪದಾಧಿಕಾರಿಗಳು ಹಾಗೂ ನಗರದಲ್ಲಿ ಇರುವ ವಿವಿಧ ದೇವಾಲಯಗಳ ಅಧ್ಯಕ್ಷರುಗಳು ಮತ್ತು ಪದಾಧಿಕಾರಿಗಳು ಪಾಲ್ಗೊಂಡಿದ್ದು ವಿಶೇಷವಾಗಿತ್ತು.
ಮಧ್ಯಾಹ್ನ 2 ಗಂಟೆಗೆ ಮುತ್ತಪ್ಪನ್ ಮಲೈ ಇರಕ್ಕಲ್, ಸಂಜೆ 4 ಗಂಟೆಗೆ ಮುತ್ತಪ್ಪನ್ ವೆಳ್ಳಾಟಂ ನಡೆಯಿತು. ಸಂಜೆ 5 ಗಂಟೆಗೆ ಅಯ್ಯಪ್ಪ ದೇವಸ್ಥಾನದಿಂದ ಊರಿನ ಪ್ರಮುಖ ಬೀದಿಗಳಲ್ಲಿ ವಿದ್ಯುತ್ ದೀಪಗಳ ಅಲಂಕಾರ ದಿಂದ ಕೇರಳದ ಪ್ರಖ್ಯಾತ ಚಂಡೆ ವಾದಕರ ವಾದ್ಯ ಘೋಷದೊಂದಿಗೆ ನೂರಾರು ಮಹಿಳೆಯರು ,ಮಕ್ಕಳು ಜ್ಯೋತಿ ಬೆಳಗಿಸಿಕೊಂಡು ಮೆರವಣಿಗೆಯಲ್ಲಿ ಸಾಗಿ ದೇವಾಲಯಕ್ಕೆ ಆಗಮಿಸಿದರು.
ರಾತ್ರಿ ಅನ್ನದಾನ ಪ್ರಸಾದವನ್ನು ಸೇರಿದ್ದ ಭಕ್ತರು ಸ್ವೀಕರಿಸಿದರು. ರಾತ್ರಿ 8 ಗಂಟೆಯಿಂದ 11 ಗಂಟೆಯವರೆಗೆ ಸ್ಥಳೀಯ ಕಲಾವಿದರು ಮತ್ತು ಮಕ್ಕಳಿಂದ ದೇವಾಲಯದ ಸಾಂಸ್ಕೃತಿಕ ವೇದಿಕೆಯಲ್ಲಿ ವಿವಿಧ ರೀತಿಯ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದು, ರಾತ್ರಿ 11 ಗಂಟೆಗೆ ಕಳಿಗ ಪಾಟು, 12 ಗಂಟೆಗೆ ಕಳಸ ಆಗಮನವಾಯಿತು.
ಮಡಿಕೇರಿ ಶಾಸಕ ಡಾ. ಮಂತರ್ ಗೌಡ ಮತ್ತು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ವಿ.ಪಿ.ಶಶಿಧರ್, ಪುರಸಭೆ ಅಧ್ಯಕ್ಷೆ ಜಯಲಕ್ಷ್ಮಿ ಚಂದ್ರು, ಕುಡಾ ಅಧ್ಯಕ್ಷ ಪ್ರಮೋದ್ ಮುತ್ತಪ್ಪ ದೇವಾಲಯಕ್ಕೆ ಭೇಟಿ ನೀಡಿ ಮುತ್ತಪ್ಪ ಸ್ವಾಮಿ ಆಶೀರ್ವಾದ ಪಡೆದುಕೊಂಡರು. ತೆರೆ ಮಹೋತ್ಸವದಲ್ಲಿ ಕುಶಾಲನಗರ ಹಾಗೂ ಸುತ್ತ ಮುತ್ತ ಗ್ರಾಮಗಳಿಂದ ಸಾವಿರಾರು ಭಕ್ತರು ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ ಶ್ರೀ ಮುತ್ತಪ್ಪ ಸ್ವಾಮಿ ಸೇವಾ ಟ್ರಸ್ಟ್ ಅಧ್ಯಕ್ಷ ಕೆ.ವರದ, ಟ್ರಸ್ಟ್ ಪದಾಧಿಕಾರಿಗಳು ಮತ್ತು ದೇವಾಲಯ ಸಮಿತಿಯ ಸದಸ್ಯರುಗಳು ಇದ್ದರು.
ಭಾನುವಾರವೂ (ಫೆ.16) ದೇವಾಲಯದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದೆ.
ವರದಿ.ಟಿ.ಆರ್.ಪ್ರಭುದೇವ್
ಕುಶಾಲನಗರ
Kodagu
ಕೊಡವಾಮೆರ ಆರ ಬೇರ ಕಾರ್ಯಕ್ರಮ
ಮಡಿಕೇರಿ : ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಹಾಗೂ ಕೊಡವ ಸಮಾಜ ಮೈಸೂರು ಇವರ ಸಹಯೋಗದಲ್ಲಿ ಇಂದು ಮೈಸೂರು ಕೊಡವ ಸಮಾಜದಲ್ಲಿ “ಕೊಡವಾಮೆರ ಆರ ಬೇರ” ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ ಅವರು ಚಾಲನೆ ನೀಡಿದರು. ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಅಜ್ಜಿನಿಕಂಡ ಸಿ. ಮಹೇಶ್ ನಾಚಯ್ಯ, ಕೊಡಗು ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಾದ ತೀತಿರ ಧರ್ಮಜ ಉತ್ತಪ್ಪ, ಮೈಸೂರು ಕೊಡವ ಸಮಾಜದ ಅಧ್ಯಕ್ಷರಾದ ಪೊಂಜಂಡ ಎ.ಗಣಪತಿ, ಮೈಸೂರು ಮಹಾ ನಗರಪಾಲಿಕೆ ಮಾಜಿ ಸದಸ್ಯರಾದ ಮಾಳೇಟಿರ ಸುಬ್ಬಯ್ಯ, ಅಕಾಡೆಮಿ ಸದಸ್ಯರು ಇದ್ದರು.

ಮಂಗಳೂರು ಬಲ್ಮಠ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಉಪನ್ಯಾಸಕರಾದ ಡಾ.ಬೋಡುಕುಟ್ಟಡ ರಾಧಿಕ ಕುಟ್ಟಪ್ಪ ಅವರು “ನಾ ಪುಟ್ಟ್ನ ಮಣ್ಣ್” ಎಂಬ ವಿಷಯದ ಬಗ್ಗೆ ವಿಚಾರ ಮಂಡಿಸಿದರು.
ಕೊಡವ ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ನಾಟಕ ಪ್ರದರ್ಶನ ಗಮನ ಸೆಳೆಯಿತು.
Kodagu
ಕೊಡಗು ವಿಶ್ವವಿದ್ಯಾಲಯದ ಬಿ.ಎಡ್ ಪದವಿ ಫಲಿತಾಂಶ ಪ್ರಕಟ
ಕುಶಾಲನಗರ : ಕೊಡಗು ವಿಶ್ವವಿದ್ಯಾಲಯದ ಪ್ರಥಮ ಮತ್ತು ತೃತೀಯ ಸೆಮಿಸ್ಟರ್ ಬಿ.ಎಡ್ ಪದವಿ ಪರೀಕ್ಷಾ ಫಲಿತಾಂಶವನ್ನು ಇಂದು ಪ್ರಕಟಿಸಲಾಗಿದೆ. ಪರೀಕ್ಷೆ ಮುಗಿದು ಹತ್ತು ದಿನಗಳಲ್ಲಿ ಮೌಲ್ಯಮಾಪನದ ಎಲ್ಲಾ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿ ಅದೇ ದಿನ ಅತೀ ಶೀಘ್ರವಾಗಿ ಪ್ರಕಟಿಸಿದ ಹಿರಿಮೆಗೆ ಕೊಡಗು ವಿಶ್ವವಿದ್ಯಾಲಯ ಪಾತ್ರವಾಗಿದೆ. ಇದೇ
ಅಗಸ್ಟ್ ತಿಂಗಳಲ್ಲಿ ನಡೆದ ಪರೀಕ್ಷೆಯಲ್ಲಿ ವಿರಾಜಪೇಟೆಯ ಸರ್ವೋದಯ ಬಿ.ಎಡ್ ಕಾಲೇಜು ಮತ್ತು ಪೊನ್ನಂಪೇಟೆಯ ಸಾಯಿ ಶಂಕರ್ ಕಾಲೇಜುಗಳ ಒಟ್ಟು 200 ವಿದ್ಯಾರ್ಥಿಗಳು ಹಾಜರಾಗಿದ್ದರು.
ಮೌಲ್ಯಮಾಪನ ಪ್ರಕ್ರಿಯೆಯನ್ನು ಘಟಕ ಮಹಾವಿದ್ಯಾಲಯವಾಗಿರುವ ಮಡಿಕೇರಿಯ ಫೀಲ್ಡ್ ಮಾರ್ಷಲ್ ಕೆ ಎಂ ಕಾರ್ಯಪ್ಪ ಕಾಲೇಜಿನಲ್ಲಿ ವ್ಯವಸ್ಥಿತವಾಗಿ ಮೌಲ್ಯಮಾಪನ ಕೇಂದ್ರವನ್ನು ಸಿದ್ಧಪಡಿಸಿಕೊಂಡು, ಜಿಲ್ಲೆಯ ಮತ್ತು ಹೊರಗಿನ ಮೌಲ್ಯಮಾಪಕರು ಸಕ್ರಿಯವಾಗಿ ಭಾಗವಹಿಸಿ ಮೌಲ್ಯಮಾಪನ ಕಾರ್ಯವನ್ನು ಯಶಸ್ವಿಯಾಗಿ ನಿರ್ವಹಿಸಿದ್ದಾರೆ.

ಸೆಮಿಸ್ಟರ್ ಪರೀಕ್ಷೆಗಳಿಗೆ ಸಂಬಂಧಿಸಿದ ಎಲ್ಲಾ ಪ್ರಕ್ರಿಯೆಗಳನ್ನು ಸಮಗ್ರ ವಿಶ್ವವಿದ್ಯಾಲಯ ಮತ್ತು ಕಾಲೇಜು ನಿರ್ವಹಣಾ ವ್ಯವಸ್ಥೆ (UUMS) ಮೂಲಕ ಯಶಸ್ವಿಯಾಗಿ ನಡೆಸಲಾಗಿದ್ದು, ಬಿ.ಎಡ್ ಪದವಿ ವಿದ್ಯಾರ್ಥಿಗಳು ಪರೀಕ್ಷಾ ಫಲಿತಾಂಶವನ್ನು UUCMS ಅಥವಾ ಕೊಡಗು ವಿಶ್ವವಿದ್ಯಾಲಯದ ವೆಬ್ಸೈಟ್ KUK.Karnataka.gov.in ಮುಖಾಂತರ ವಿದ್ಯಾರ್ಥಿಗಳ ನೋಂದಣಿ ಸಂಖ್ಯೆ ಮೂಲಕ ನೋಡಲು ಲಭ್ಯವಿದೆ.
ಪರೀಕ್ಷಾ ಫಲಿತಾಂಶವನ್ನು ಕೊಡಗು ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ. ಅಶೋಕ ಸಂಗಪ್ಪ ಆಲೂರ ಅವರು ಆನ್ಲೈನ್ ತಂತ್ರಾಂಶದಲ್ಲಿ ವಿಶ್ವವಿದ್ಯಾಲಯದ ಕುಲಸಚಿವರು (ಮೌಲ್ಯಮಾಪನ) ಆದ ಡಾ. ಸುರೇಶ್ ಎಂ ಅವರ ಸಮ್ಮುಖದಲ್ಲಿ ಅಧಿಕೃತವಾಗಿ ಪ್ರಕಟಿಸಿದರು.

ಇದೇ ಸಂದರ್ಭದಲ್ಲಿ ಕೊಡಗು ವಿವಿ ಪರೀಕ್ಷಾಂಗದ ವಿಶೇಷಾಧಿಕಾರಿ ದ ಪ್ರೊ. ರವಿಶಂಕರ್ ಎಂ ಎನ್ ಮತ್ತು UUCMS ಸಿಬ್ಬಂದಿ ಉಪಸ್ಥಿತರಿದ್ದರು.
Kodagu
ಕೊಡವ ಕೂಟಾಳಿಯಡ ಕೂಟ ಸಂಘಟನೆಯ ನೂತನ ಅಧ್ಯಕ್ಷರಾಗಿ ಚೊಟ್ಟಂಡ ಪ್ರಭು ಸೋಮಯ್ಯ, ಕಾರ್ಯದರ್ಶಿಯಾಗಿ ಕಬ್ಬಚ್ಚಿರ ರಶ್ಮಿ ಕಾರ್ಯಪ್ಪ ನೇಮಕ
ಪೊನ್ನಂಪೇಟೆ : ಕೊಡವ ಕೂಟಾಳಿಯಡ ಕೂಟ ಸಂಘಟನೆಯ ೨೦೨೪-೨೫ನೇ ಸಾಲಿನ ವಾರ್ಷಿಕ ಮಹಾಸಭೆ ಹಾಗೂ ನೂತನ ಆಡಳಿತ ಮಂಡಳಿಯ ಆಯ್ಕೆ ಗುರುವಾರ ಪೊನ್ನಂಪೇಟೆಯ ಗೋಲ್ಡನ್ ಗೇಟ್ ಸಭಾಂಗಣದಲ್ಲಿ ಸಂಘಟನೆಯ ಅಧ್ಯಕ್ಷರಾಗಿದ್ದ ಚೆಟ್ಟೋಳಿರ ಶರತ್ ಸೋಮಣ್ಣ ಅಧ್ಯಕ್ಷತೆಯಲ್ಲಿ ನಡೆಯಿತು.
ಈ ಸಂದರ್ಭ ಸಂಘಟನೆಯ ನೂತನ ಅಧ್ಯಕ್ಷರಾಗಿ ಚೊಟ್ಟಂಡ ಪ್ರಭು ಸೋಮಯ್ಯ ಉಪಾಧ್ಯಕ್ಷರಾಗಿ ಚೆಕ್ಕೆರ ರಾಜೇಶ್, ಕಾರ್ಯದರ್ಶಿಯಾಗಿ ಕಬ್ಬಚ್ಚಿರ ರಶ್ಮಿ ಕಾರ್ಯಪ್ಪ, ಖಜಾಂಚಿ ಮಾಚಿಮಡ ಡಿಂಪಲ್ ರವರು ನೇಮಕಗೊಂಡರು.

ಸಂಘಟನೆಯ ನಿರ್ದೇಶಕರುಗಳಾಗಿ ಕಾಂಗಿರ ಸಂತೋಷ್ ದೇವಯ್ಯ, ಅಮ್ಮಾಟಂಡ ಚೇತನ್, ಚೇಂದಿರ ಪ್ರಿಯಾ ಲೋಹಿತ್, ನೂರೆರ ಸರಿತ ಉತ್ತಯ್ಯ, ಕೊಟ್ಟಂಗಡ ಕವಿತ ವಾಸುದೇವ, ಅಜ್ಜಮಾಡ ಸಾವಿತ್ರಿ, ಬೊಜ್ಜಂಗಡ ಭವ್ಯ ದೇವಯ್ಯ, ಇಟ್ಟಿರ ಭವ್ಯ ಈಶ್ವರ್, ಪಾಂಡಿರ ದಿವ್ಯ ಉತ್ತಪ್ಪ, ಚಕ್ಕೆರ ಹೇಮಾ, ಆಯ್ಕೆ ಗೊಂಡರು.
ನೂತನ ಅಧ್ಯಕ್ಷರು ಮಾತನಾಡುತ್ತಾ, ಕಳೆದ ಐದು ವರ್ಷಗಳಿಂದ ಈ ಸಂಘಟನೆಯು ಹಲವಾರು ಕೊಡವ ಜನಾಂಗದವರಿಗಾಗಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಕಾರ್ಯರೂಪಕ್ಕೆ ತರುವಲ್ಲಿ ಯಶಸ್ವಿಯಾಗಿದೆ. ಇನ್ನು ಮುಂದೆಯೂ ಸಂಘಟನೆಯಲ್ಲಿ ಎಲ್ಲರ ಸಲಹೆ ಸಾಕಾರದ ವಿನೂತನ ಕಾರ್ಯಕ್ರಮಗಳು ನಡೆಸುವುದಾಗಿ ತಿಳಿಸಿದರು.
ಕಾರ್ಯಕ್ರಮದ ಆರಂಭದಲ್ಲಿ ಸದಸ್ಯೆ ಚೋವಂಡ ಜಮುನಾ ಸುರೆಶ್’ರವರು ಪ್ರಾರ್ಥಿಸಿದರು. ಕಾರ್ಯದರ್ಶಿ ಕಬ್ಬಚ್ಚಿರ ಕಾರ್ಯಪ್ಪ ನವರು ವಾರ್ಷಿಕ ವರದಿ ವಾಚಿಸಿ, ಆನಂತರ ವಂದಿಸಿದರು. ಖಜಾಂಚಿ ಬೊಜ್ಜಂಗಡ ಭವ್ಯ ಲೆಕ್ಕಪತ್ರ ಮಂಡಿಸಿದರು.

ಕಾರ್ಯಕ್ರಮದಲ್ಲಿ ಸಂಘಟನೆಯ ಸ್ಥಾಪಕ ಅಧ್ಯಕ್ಷೆ ಚಿಮ್ಮಚ್ಚಿರ ಪವಿತ ರಜನ್, ಗೌರವಾದ್ಯಕ್ಷ ಚಂಗುಲಂಡ ಸೂರಜ್ ಹಾಗೂ ಸದಸ್ಯರು ಉಪಸ್ಥಿತರಿದ್ದರು.
-
Manglore16 hours agoಬೆಳ್ತಂಗಡಿ| ಈಗ ಒಂದೊಂದೇ ಸತ್ಯ ಹೊರಬರುತ್ತಿದೆ: ಡಾ.ಡಿ.ವೀರೇಂದ್ರ ಹೆಗ್ಗಡೆ
-
Mandya15 hours agoಆ. 26 ರಂದು ರಾಯಶೆಟ್ಟಿಪುರ ಗ್ರಾಮದಲ್ಲಿ ಶ್ರೀ ವೀರಭದ್ರೇಶ್ವರ ಸ್ವಾಮಿಯ ಜನ್ಮೋತ್ಸವ: ಪ್ರಸನ್ನಾರಾಧ್ಯ
-
Manglore19 hours agoಮಂಗಳೂರು: ಬೆಳ್ತಂಗಡಿ ನ್ಯಾಯಾಲಯಕ್ಕೆ ಅನಾಮಧೇಯ ದೂರುದಾರನ ಹಾಜರು
-
Manglore18 hours agoಮಾಸ್ಕ್ ಮ್ಯಾನ್ (ಸಿಎಸ್ ಚೆನ್ನಯ್ಯ) 10 ದಿನ ಎಸ್ಐಟಿ ಪೊಲೀಸ್ ವಶಕ್ಕೆ
-
Hassan20 hours agoಹಾಸನ ಜಿಲ್ಲೆಯಲ್ಲಿ ಬೆಚ್ಚಿ ಬೀಳಿಸುತ್ತಿರೊ ಮನೆ ಕಳ್ಳತನಗಳು
-
Hassan15 hours agoಹಾಸನಾಂಬ ಜಾತ್ರಾ ಮಹೋತ್ಸವ| ಡಾ. ರಮೇಶ್ ಮನವಿ ಹಿಂಪಡೆದು, ಕ್ಷಮೆಯಾಚಿಸಲಿ: ವೇಣು ಕುಮಾರ್ ಅಗ್ರಹ
-
Mandya13 hours agoಕಡೆ ಶ್ರಾವಣ ಶನಿವಾರ: ಶ್ರೀ ಹೊಳೆ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ
-
Kodagu16 hours agoಯುವ ಜನತೆ ಸ್ವಾಸ್ಥ ಸಮಾಜ ನಿರ್ಮಾಣ ಮಾಡಬೇಕು: ಕೊಂಗಂಡ ಎಸ್. ದೇವಯ್ಯ
