Mysore
ವರುಣಾ ನನ್ನ ಪಾಲಿಗೆ ಅದೃಷ್ಟದ ಕ್ಷೇತ್ರ. ನಿಮ್ಮಿಂದ ಎರಡು ಬಾರಿ ಮುಖ್ಯಮಂತ್ರಿಯಾದೆ ಸಿ.ಎಂ.ಸಿದ್ದರಾಮಯ್ಯ ಕೃತಜ್ಞತೆ

ವರುಣಾ ನನ್ನ ಪಾಲಿಗೆ ಅದೃಷ್ಟದ ಕ್ಷೇತ್ರ. ನಿಮ್ಮಿಂದ ಎರಡು ಬಾರಿ ಮುಖ್ಯಮಂತ್ರಿಯಾದೆ ಸಿ.ಎಂ.ಸಿದ್ದರಾಮಯ್ಯ ಕೃತಜ್ಞತೆ
ನಮ್ಮ ಗ್ಯಾರಂಟಿಗಳಿಂದಾಗಿ ಹೆಣ್ಣುಮಕ್ಕಳ ಆರ್ಥಿಕ ಸಾಮರ್ಥ್ಯ ಹೆಚ್ಚಿದೆ. ಪುರುಷರ ಜೇಬಿಗೆ ಹಣ ಉಳಿತಾಯವಾಗಿದೆ: ಸಿ.ಎಂ
ನನಗಿಂತ ಹೆಚ್ಚು ಲೀಡ್ ಕೊಟ್ಟು ಸುನಿಲ್ ಬೋಸ್ ಗೆಲ್ಲಿಸಿ ಬಿಜೆಪಿಯ ಸುಳ್ಳುಗಳನ್ನು ಸೋಲಿಸಿ: ಸಿಎಂ ಸಿದ್ದರಾಮಯ್ಯ ಕರೆ
ಮೈಸೂರು-ಚಾಮರಾಜನಗರ ಲೋಕಸಭೆಯಲ್ಲಿ ಕಾಂಗ್ರೆಸ್ ಗೆಲ್ಲುತ್ತದೆ. ನಾನು ಇನ್ನಷ್ಟು ಗಟ್ಟಿಯಾಗಿ ನನ್ನ ಶಕ್ತಿ ಹೆಚ್ಚುತ್ತದೆ: ಸಿಎಂ ಸಿದ್ದರಾಮಯ್ಯ ಕರೆ
ವರುಣಾ (ಚಾಮರಾಜನಗರ) ಏ 1:
ನನಗಿಂತ ಹೆಚ್ಚು ಲೀಡ್ ಕೊಟ್ಟು ಸುನಿಲ್ ಬೋಸ್ ಗೆಲ್ಲಿಸಿ ಬಿಜೆಪಿಯ ಸುಳ್ಳುಗಳನ್ನು ಸೋಲಿಸಿ. ಮೈಸೂರು-ಚಾಮರಾಜನಗರ ಲೋಕಸಭೆಯಲ್ಲಿ ಕಾಂಗ್ರೆಸ್ ಗೆಲ್ಲುತ್ತದೆ. ನಾನು ಇನ್ನಷ್ಟು ಗಟ್ಟಿಯಾಗಿ ನನ್ನ ಶಕ್ತಿ ಹೆಚ್ಚುತ್ತದೆ. ಇದಕ್ಕೆ ನೀವು ಮುಂದಾಗಿ ಎಂದು ಸಿಎಂ ಸಿದ್ದರಾಮಯ್ಯ ಕರೆ ನೀಡಿದರು.
ವರುಣಾ ವಿಧಾನಸಭಾ ಕ್ಷೇತ್ರದ ಬಿಳಿಗೆರೆಯಲ್ಲಿ ನಡೆದ ಸಾರ್ವಜನಿಕ ಸಭೆಯನ್ನು ಉದ್ಘಾಟಿಸಿದ ಬಳಿಕ ಮಾತನಾಡಿದರು.
ನಮ್ಮ ಕಾಂಗ್ರೆಸ್ ಪಕ್ಷದ ಗ್ಯಾರಂಟಿಗಳಿಂದಾಗಿ ರಾಜ್ಯದಲ್ಲಿ ಹೆಣ್ಣುಮಕ್ಕಳ ಆರ್ಥಿಕ ಸಾಮರ್ಥ್ಯ ಹೆಚ್ಚಿದೆ. ದುಡಿಯುವ ಅವಕಾಶವೂ ಹೆಚ್ಚಿದೆ. ಪುರುಷರ ಜೇಬಿಗೆ ಹಣ ಉಳಿತಾಯವಾಗಿದೆ. ಜನಸಾಮಾನ್ಯರ ಜೇಬಿಗೆ ಹಣ ಹಾಕಿ ನಮ್ಮ ಜನರ ಕೊಳ್ಳುವ ಶಕ್ತಿ ಹೆಚ್ಚಿಸಿದ್ದೇವೆ. ಇದನ್ನು ವಿರೋಧಿಸುವ ಬಿಜೆಪಿಯ ಕಾರ್ಯಕರ್ತರೂ, ಬೆಂಬಲಿಗರೂ ನಮ್ಮ ಗ್ಯಾರಂಟಿ ಯೋಜನೆಗಳ ಫಾಲಾನುಭವಿಗಳಾಗಿದ್ದಾರೆ ಎಂದರು.
ನರೇಂದ್ರ ಮೋದಿ ನುಡಿದಂತೆ ನಡೆದಿದ್ದಾರಾ? ದೇಶದ ಜನರಿಗಾಗಿ ಏನೂ ಕಾರ್ಯಕ್ರಮ ರೂಪಿಸದೆ ಕೇವಲ ಅಚ್ಛೆ ದಿನ್ ಆಯೆಗಾ ಎಂದು ಡೈಲಾಗ್ ಹೊಡೆದರೆ ಸಾಕಾ? ಡೈಲಾಗ್ ನಿಂದ ಪೆಟ್ರೋಲ್, ಡೀಸೆಲ್, ಗ್ಯಾಸ್ ಬೆಲೆ , ರಸಗೊಬ್ಬರ ಬೆಲೆ ಕಡಿಮೆ ಆಗತ್ತಾ? ಬರೀ ಬಾಯಲ್ಲಿ ಡೈಲಾಗ್ ಹೊಡೆದರೆ ಜನರ ಬದುಕಿನ ಸಂಕಷ್ಟ ಕಡಿಮೆ ಆಗ್ತದಾ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಬರೀ 56 ಇಂಚಿನ ಖಾಲಿ ಎದೆ ಇದ್ದರೆ ಸಾಲದು. ಅದರೊಳಗೆ ಮಾತೃ ಹೃದಯ ಇರಬೇಕು. ಇಲ್ಲದಿದ್ದರೆ ಹೀಗೇ ಆಗೋದು. ಉದ್ಯೋಗ ಸೃಷ್ಟಿ ಆಗೋದಿಲ್ಲ. ರೈತರ ಆದಾಯವೂ ದುಪ್ಪಟ್ಟಾಗುವುದಿಲ್ಲ ಎಂದು ಟೀಕಿಸಿದರು.
ಮುಂದಿನ ಜನ್ಮದಲ್ಲಿ ಮುಸ್ಲೀಮನಾಗಿ ಹುಟ್ಟುತ್ತೇನೆ ಎಂದವರು ದೇವೇಗೌಡರು. ನರೇಂದ್ರ ಮೋದಿಯವರು ಮತ್ತೆ ಪ್ರಧಾನಿಯಾದರೆ ದೇಶಬಿಟ್ಟು ಹೋಗುತ್ತೇನೆ ಎಂದವರೂ ಇದೇ ದೇವೇಗೌಡರು. ಈಗ ತಮಗೂ ನರೇಂದ್ರ ಮೋದಿಯವರಿಗೂ ಅವಿನಾಭಾವ ಸಂಬಂಧ ಇದೆ ಎನ್ನುತ್ತಿದ್ದಾರೆ. ಯಾಕಿಷ್ಟು ಈ ನಾಟಕ ದೇವೇಗೌಡರೇ, ನೀವು ಹೇಳಿದ್ದನ್ನು ನೆನಪಿಸಿದರೆ ಅದು ಗರ್ವ ಹೇಗಾಗುತ್ತದೆ ಎಂದು ಪ್ರಶ್ನಿಸಿದರು.
ನಾನು ಮೊದಲ ಬಾರಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದೇ ಬಸವ ಜಯಂತಿ ದಿನ. ಎರಡನೇ ಬಾರಿ ಸಿಎಂ ಆಗಿ ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಿಸಿದೆವು. ಬಸವಣ್ಣನವರು ಲಿಂಗಾಯತ ಧರ್ಮ ಸ್ಥಾಪಿಸಿ ಮನುಷ್ಯ ಧರ್ಮದ ಏಳಿಗೆಗೆ ಮುಂದಾದರು. ಬಸವಾದಿ ಶರಣರು ಒಂದು ಜಾತಿ-ಧರ್ಮಕ್ಕೆ ಸೇರಿದವರಲ್ಲ. ನಾವು ಬಸವಾದಿ ಶರಣರ ಆಶಯದಂತೆ ಕಾಯಕ ಮತ್ತು ದಾಸೋಹ ಮೌಲ್ಯದಲ್ಲಿ ಕಾರ್ಯಕ್ರಮಗಳನ್ನು ರೂಪಿಸುತ್ತಿದ್ದೇವೆ ಎಂದರು.
ವರುಣಾ ನನ್ನ ಪಾಲಿಗೆ ಅದೃಷ್ಟದ ಕ್ಷೇತ್ರ. ನಿಮ್ಮಿಂದ ಎರಡು ಬಾರಿ ಮುಖ್ಯಮಂತ್ರಿಯಾದೆ ಎಂದು ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿ.ಎಂ.ಸಿದ್ದರಾಮಯ್ಯ ಅವರು ಕೃತಜ್ಞತೆಯ ಮಾತುಗಳನ್ನಾಡಿದರು.
ಸಮಾಜ ಕಲ್ಯಾಣ ಸಚಿವ ಹೆಚ್.ಸಿ.ಮಹದೇವಪ್ಪ, ಪಶು ಸಂಗೋಪನಾ ಸಚಿವ ಕೆ.ವೆಂಕಟೇಶ್, ಶಾಸಕರಾದ ಅನಿಲ್ ಚಿಕ್ಕಮಾದು, ದರ್ಶನ್ ದ್ರುವನಾರಾಯಣ್ ಸೇರಿ ಚಾಮರಾಜನಗರ ಮತ್ತು ಮೈಸೂರು ಜಿಲ್ಲೆಯ ಶಾಸಕರುಗಳು ಉಪಸ್ಥಿತರಿದ್ದರು.
ಚಾಮರಾಜನಗರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಸುನಿಲ್ ಬೋಸ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಉಪಾಧ್ಯಕ್ಷರಾದ ಪುಷ್ಪ ಅಮರನಾಥ್ ಸೇರಿ ವರುಣಾ ವಿಧಾನಸಭಾ ಕ್ಷೇತ್ರದ ಮುಖಂಡರು , ಬ್ಲಾಕ್ ಕಾಂಗ್ರೆಸ್ ಮುಖಂಡರು ಕಾರ್ಯಕರ್ತರು ಮತ್ತು ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಸ್ಥಳೀಯ ನಾಯಕರುಗಳು ಸಭೆಯಲ್ಲಿ ಉಪಸ್ಥಿತರಿದ್ದು ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿನ ಶಪಥ ಮಾಡಿದರು.
Mysore
ಕೆ.ಬಿ.ಗಣಪತಿ ಅವರಿಗೆ ಶ್ರದ್ಧಾಂಜಲಿ ಅರ್ಪಣ ಕಾರ್ಯಕ್ರಮ

ಮೈಸೂರು: ಮೈಸೂರು ಮಿತ್ರ ಮತ್ತು ಸ್ಟಾರ್ ಆಪ್ ಮೈಸೂರು ದಿನ ಪತ್ರಿಕೆ ಸಂಸ್ಥಾಪಕ ಸಂಪಾದಕರು ಡಾ.ಕೆ.ಬಿ.ಗಣಪತಿ ಜು.13 ದೈವದಿನರಾದರೂ
ಲೇಖಕರು ಬರಹಗಾರಾದ ಇವರಿಗೆ ಸಾಕಷ್ಟು ಪ್ರಶಸ್ತಿ ಪುರಸ್ಕಾರಗಳನ್ನು ಸರ್ಕಾರಗಳು ನೀಡಿದೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದರು. ಅತಿ ಹೆಚ್ಚು ಪ್ರಶಸ್ತಿಗಳನ್ನು ಸ್ವೀಕರಿಸಿದ ಗಣ್ಯರು ಮಾಧ್ಯಮ ಲೋಕದಲ್ಲಿ ಕಿರಿಯರಿಗೆ ಬೆನ್ನೆಲುಬಾಗಿದ್ದವರು ರಾಜ್ಯದ ಹಿರಿಯ ಪತ್ರಕರ್ತರು ದಿವಂಗತ
ಡಾ.ಕೆ.ಬಿ.ಗಣಪತಿ ಶ್ರದ್ದಾಂಜಲಿಯಲ್ಲಿ ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷರು ಕೆ.ದೀಪಕ್ ರವರು ಚಾಮರಾಜ ಕ್ಷೇತ್ರದ ಹರೀಶ್ ಗೌಡರು ಶಾಸಕರು ಮಾಜಿ ಪತ್ರಕರ್ತರ ಸಂಘದ ಅಧ್ಯಕ್ಷರಾದ ಮಹೇಂದ್ರರವರು ಸ್ಟಾರ್ ಆಫ್ ಮೈಸೂರು ಮೈಸೂರು ಮಿತ್ರ ದಿನಪತ್ರಿಕೆಯ ಪ್ರಸಾರಾಣಧಿಕಾರಿ ಗೋಪಿನಾಥ್ ರವರು ಹಾಗೂ ಅಧಿಕೃತ ಪತ್ರಕರ್ತರ ಸಂಘದ ಪಿ.ಸುರೇಶ್ ರವರುಚಿಕ್ಕ ಗಡಿಯಾರ ವೃತ್ತದಲ್ಲಿ ಪತ್ರಿಕೆಯ ವಿತರಕರು ಸಂಘ ಸಂಸ್ಥೆಯ ಪದಾಧಿಕಾರಿಗಳು ದಿನಪತ್ರಿಕೆಯ ವ್ಯವಸ್ಥಾಪಕರು ಹಿರಿಯ ಪತ್ರಿಕ ವಿತರಕರು (ಏಜೆಂಟರ್ ಗಳು ) ದಿನಪತ್ರಿಕೆ ಮಾರಾಟ ಮಾಡುವ ಅಂಗಡಿಯ ಮಾಲೀಕರುಗಳು ಪತ್ರಿಕಾ ಸಮುದಾಯದ ಎಲ್ಲರೂ ಶ್ರದ್ಧ ಭಕ್ತಿಯಿಂದ ಮೌನವಾಗಿ ಅಂತರಾಳದಿಂದ ಶ್ರದ್ಧಾಂಜಲಿ ಅರ್ಪಿಸಲಾಯಿತು.
ನಮ್ಮ ಪತ್ರಿಕೆ ನಮ್ಮ ಹಿರಿಯರು ಪತ್ರಕರ್ತರನ್ನು ಎಂದೆಂದೂ ಗೌರವಿಸುವ ಅವರಿಲ್ಲದೆ ನಾವಿಲ್ಲ ಕೆಬಿಜಿಯವರು ಮೈಸೂರಿನ ನಗರ ಪತ್ರಿಕ ವಿತರಕರ ಸಂಘಕ್ಕೆ ಇವರ ಕೊಡುಗೆ ಅಪಾರ ವಿತರಕರ ಹಿತಕ್ಕಾಗಿ ಸಾಕಷ್ಟು ಶ್ರಮಿಸಿದವರು ಕಾರ್ಯ ಕ್ರಮಗಳನ್ನು ಮಾಡಲು ಅನುದಾನವನ್ನು ನೀಡಿ ಪತ್ರಿಕೆಯ ವಿತರಕರಿಗೆ ಅತಿ ಹೆಚ್ಚು ಲಾಭದಾಯಕದ ಕಮಿಷನ್ ನೀಡುವ ಮುಖಾಂತರ ಜೀವನ ನಡೆಸಲು ಪತ್ರಿಕ ವಿತರಕರ ಹಿತ ಕಾಪಾಡಿದವರು ಅವರ ನೆರಳಿನಲ್ಲಿ ನಾವು ಬದುಕನ್ನು ಆರಂಭಿಸಿದ್ದೇವೆ.
ಆದರ್ಶ ವ್ಯಕ್ತಿಯಾದ ಡಾಕ್ಟರ್ ಕೆ.ಬಿ. ಗಣಪತಿ ಇವರ ಆತ್ಮಕ್ಕೆ ಶಾಂತಿ ಸಿಗಲಿ ಅವರ ಕುಟುಂಬಕ್ಕೆ ಭಗವಂತನ ಕೃಪೆ ಇರಲಿ ಎಂದೆಂದೂ
ಎಂದು ಹೃದಯಪೂರ್ವಕ ಶ್ರದ್ಧಾಂಜಲಿ ಸಲ್ಲಿಸಲಾಯಿತು ಆತ್ಮೀಯ ಮೈಸೂರು ನಗರ ಪತ್ರಿಕ ವಿತರಕರ ಸಂಘ ಸಂಸ್ಥೆಯ ಪದಾಧಿಕಾರಿಗಳು ವಿತರಕರು ಭಾಗವಹಿಸಿದರು ಎಲ್ಲರಿಗೂ ಧನ್ಯವಾದಗಳು
Mysore
ಕೆಪಿಎ-ಪೋಸ್ಟಲ್ ತರಬೇತಿ ಸಂಸ್ಥೆ ನಡುವೆ ಒಡಂಬಡಿಕೆ ಸಹಿ

ಮೈಸೂರು: ಮೈಸೂರಿನ ಕರ್ನಾಟಕ ಪೊಲೀಸ್ ಅಕಾಡೆಮಿ ಹಾಗೂ ಮೈಸೂರಿನ ಪೋಸ್ಟಲ್ತರಬೇತಿ ಸಂಸ್ಥೆ ನಡುವೆ ತರಬೇತಿ, ಸಂಪನ್ಮೂಲ ವ್ಯಕ್ತಿಗಳ ವಿನಿಮಯ ಹಾಗೂ ನವೀನ ಮಾದರಿಯ ಕೋರ್ಸ್ ಗಳನ್ನು ಅಭಿವೃದ್ಧಿಪಡಿಸುವ ವಿಷಯಗಳಿಗೆ ಸಂಬಂಧಿಸಿದಂತೆ ಒಪ್ಪಂದದ ಜ್ಞಾಪಕ ಪಾತ್ರ ಮತ್ತು ಒಡಂಬಡಿಕೆಗೆ ಇಂದು ಸಹಿ ಹಾಕಿ ವಿನಿಮಯ ಮಾಡಿಕೊಳ್ಳಲಾಯಿತು.
ಈ ಒಡಂಬಡಿಕೆಯ ಭಾಗವಾಗಿ, ಎರಡೂ ಸಂಸ್ಥೆಗಳಲ್ಲಿ ತರಬೇತಿ ಪಡೆಯುವ ಅಧಿಕಾರಿಗಳು, ಎರಡೂ ಇಲಾಖೆಗಳಿಗೆ ಸಂಬಂಧಪಟ್ಟ ವಿಷಯಗಳಿಗೆ ಸಂಬಂಧಿಸಿದಂತೆ ಹೆಚ್ಚಿನಜ್ಞಾನ ಪಡೆಯುವುದು ಅಲ್ಲದೇ, ಸದರಿ ವಿಷಯಗಳಲ್ಲಾಗುವ ಸಂಶೋಧನೆ ಮತ್ತುಅಭಿವೃದ್ಧಿ ಕುರಿತಂತೆ ಹೆಚ್ಚಿನ ಮಾಹಿತಿ ಹಾಗೂ ಜ್ಞಾನ ಪಡೆದು ತಮ್ಮ ಕಾರ್ಯ ವ್ಯಾಪ್ತಿಯಲ್ಲಿ ಅಳವಡಿಸಿಕೊಳ್ಳಬಹುದಾಗಿದೆ. ಅಂಚೆ ಇಲಾಖೆಯ ಅಧಿಕಾರಿಗಳು, ಪೊಲೀಸ್ ಇಲಾಖೆಗೆ ಸಂಬಂದಿಸಿದ ಸೈಬರ್ ಭದ್ರತೆ, ಬೆರಳಚ್ಚು ಹಾಗೂ ಮಾದಕ ವಸ್ತುಗಳ ಸಾಗಾಣಿಕೆ ವಿಷಯಗಳ ಬಗ್ಗೆ ತಿಳಿದುಕೊಂಡರೆ, ಪೊಲೀಸ್ ಇಲಾಖೆಯ ಅಧಿಕಾರಿಗಳು , ಅಂಚೆ ಇಲಾಖೆಗೆ ಸಂಬಂಧಿಸಿದ ಸಣ್ಣ ಹೂಡಿಕೆ ಅವಕಾಶಗಳು, ಹಣಕಾಸು ನಿರ್ವಹಣೆ ಹಾಗೂ ಮಾಹಿತಿ ಮತ್ತುತಂತ್ರಜ್ಞಾನ ವಿಷಯಗಳ ಮೇಲೆ ಪರಿಣಿತಿ ಹೊಂದಬಹುದಾಗಿದೆ.
ಈ ಒಪ್ಪಂದ ಜ್ಞಾಪಕ ಪತ್ರ ಹಾಗೂ ಒಡಂಬಡಿಕೆ ಸಹಿ ಮತ್ತು ವಿನಿಮಯ ಕಾರ್ಯಕ್ರಮದಲ್ಲಿ ಮಾತನಾಡಿದ ಅಂಚೆ ತರಬೇತಿ ಸಂಸ್ಥೆ, ಮೈಸೂರಿನ ನಿರ್ದೇಶಕ ಡಾ.ಆಶಿಶ್ ಸಿಂಗ್ ಠಾಕೂರ್ ಅವರು ‘ಅಂಚೆ ತರಬೇತಿ ಸಂಸ್ಥೆ, ಮೈಸೂರಿಗೆ ಇದೊಂದು ಹೆಮ್ಮೆಯ ಕ್ಷಣವಾಗಿದ್ದು, ಎರಡೂ ಸಂಸ್ಥೆಗಳ ಅಧಿಕಾರಿಗಳಿಗೆ ಜ್ಞಾನ ಮತ್ತುಅನುಭವದ ವಿನಿಮಯವಾಗಿ, ಅವರ ಕಾರ್ಯಕ್ಷೇತ್ರದಲ್ಲಿ ಮೌಲ್ಯವರ್ಧನೆಯಾಗಲಿದೆ’ ಎಂದರು.
ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರಿನ ನಿರ್ದೇಶಕ ಚೆನ್ನಬಸವಣ್ಣ ಎಸ್ಎಲ್, ಅವರು ಮಾತನಾಡಿ, ‘ಈ ದಿನ ಕರ್ನಾಟಕ ಪೊಲೀಸ್ ಅಕಾಡೆಮಿ ಹಾಗೂ ಪೊಲೀಸ್ ಇಲಾಖೆಗೆ ಅವಿಸ್ಮರಣೀಯ ದಿನ. ಈ ಎರಡು ಐತಿಹಾಸಿಕ ಸಂಸ್ಥೆಗಳ ನಡುವಿನ ಒಡಂಬಡಿಕೆ ಬಹಳ ವಿಶೇಷವಾದದ್ದು. ಈ ಎರಡು ಸಂಸ್ಥೆಗಳಲ್ಲಿ ತರಬೇತಿ ಪಡೆಯುವ ಮುಂದಿನ ಪೀಳಿಗೆಯ ಅಧಿಕಾರಿಗಳಿಗೆ ಹಾಗೂ ಅವರ ಮೂಲಕ ಸಮಾಜಕ್ಕೆ ಉತ್ತಮ ಸೇವೆ ಕೊಡುವುದಕ್ಕೆ ಈ ಒಡಂಬಡಿಕೆ ನಾಂದಿಯಾಗಲಿದೆ. ಎರಡೂ ಸಂಸ್ಥೆಗಳು ತಮ್ಮಲ್ಲಿರುವ ಉತ್ತಮ ಅಭ್ಯಾಸಗಳ್ಳನು ಹಂಚಿಕೊಳ್ಳುವುದರ ಮೂಲಕ ಪರಸ್ಪರ ಅಭಿವೃದ್ಧಿಗೆ ಶ್ರಮಿಸಲಿವೆ’ ಎಂದರು.
ಒಡಂಬಡಿಕೆ ಸಹಿ ಮತ್ತು ವಿನಿಮಯ ಕಾರ್ಯಕ್ರಮದಲ್ಲಿ, ಕರ್ನಾಟಕ ಪೊಲೀಸ್ ಅಕಾಡೆಮಿಯ ವತಿಯಿಂದ ಅಕಾಡೆಮಿಯ ಸಹಾಯಕ ನಿರ್ದೇಶಕರುಗಳಾದ ರೇಣುಕಾರಾಧ್ಯ ಎಚ್ಎಸ್, ಸುದರ್ಶನ ಎನ್ ಮತ್ತು. ವೆಂಕಟೇಶ್. ಎಸ್, ಹಾಗೂ ಕ್ರಾಂತಿರಾಜ್ ಒಡೆಯರ್ ಎಂ, ಅಂಚೆ ತರಬೇತಿ ಸಂಸ್ಥೆ ವತಿಯಿಂದ, ಸಹಾಯಕ ನಿರ್ದೇಶಕರುಗಳಾದ, ಬಾಲರಾಜ್, ಶ್ರೀಧರ್, ಶ್ರದ್ಧಾ ವಿ ಗೋಕರ್ಣ, ಮಂಜುನಾಥರಾವ್. ಕೆ ಹಾಗೂ ಇತರೆ ಸಿಬ್ಬಂದಿವರ್ಗದವರು ಹಾಜರಿದ್ದರು.
Mysore
ಕೃಷಿ ಪತ್ತಿನ ಸಹಕಾರ ಸಂಘಗಳಿಗೆ ಭೇಟಿ ನೀಡಿ ರೈತರ ಸಮಸ್ಯೆ ಆಲಿಸುವೆ : ಎಂಸಿಡಿಸಿಸಿ ಬ್ಯಾಂಕ್ ನಿರ್ದೇಶಕ ದೊಡ್ಡಸ್ವಾಮೇಗೌಡ

ವರದಿ: ಎಸ್.ಬಿ. ಹರೀಶ್ ಸಾಲಿಗ್ರಾಮ
ಸಾಲಿಗ್ರಾಮ: ಕೆ.ಆರ್.ನಗರ ಮತ್ತು ಸಾಲಿಗ್ರಾಮ ತಾಲೂಕಿನ ಪ್ರತಿ ಕೃಷಿ ಪತ್ತಿನ ಸಹಕಾರ ಸಂಘಗಳಿಗೆ ಭೇಟಿ ನೀಡಿ ರೈತರ ಸಮಸ್ಯೆಗಳು ಮತ್ತು ಅಹವಾಲುಗಳನ್ನು ಆಲಿಸಿ ಅವುಗಳ ನಿವಾರಣೆಗೆ ಆದ್ಯತೆ ನೀಡಿ ಕೆಲಸ ಮಾಡುವುದಾಗಿ ಎಂಸಿಡಿಸಿಸಿ ಬ್ಯಾಂಕಿನ ನಿರ್ದೇಶಕ ದೊಡ್ಡಸ್ವಾಮೇಗೌಡ ಹೇಳಿದರು.
ಸಾಲಿಗ್ರಾಮ ತಾಲೂಕಿನ ಕುಪ್ಪೆ ಕೃಷಿಪತ್ತಿನ ಸಹಕಾರ ಸಂಘದ ವತಿಯಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು ಖಾಸಗಿ ರಸಗೊಬ್ಬರದ ಅಂಗಡಿಗಳಲ್ಲಿ ದುಬಾರಿ ದರ ತೆತ್ತು ರಸಗೊಬ್ಬರ ಪಡೆಯುವುದನ್ನ ತಪ್ಪಿಸಲು ಪ್ರತಿ ಸಂಘಗಳಲ್ಲಿ ರೈತರಿಗೆ ಎಲ್ಲಾ ಬಗೆಯ ರಸಗೊಬ್ಬರಗಳನ್ನ ನಿಗದಿತ ದರದಲ್ಲಿ ವಿತರಣೆಗೆ ಕ್ರಮ ಕೈಗೊಳ್ಳಲಾಗುದು ಎಂದರು.
ಕುಪ್ಪೆ ಮತ್ತು ತಂದ್ರೆ ಅಂಕನಹಳ್ಳಿ ಗ್ರಾಮದಲ್ಲಿ ಸಂಘಗಳಿಗೆ ಹೊಸ ಕಟ್ಟಡ ನಿರ್ಮಾಣ ಮಾಡಲು ಇವೆರಡು ಸಂಘದ ಆಡಳಿತ ಮಂಡಳಿಯವರು ನಿವೇಶನವನ್ನು ಒದಗಿಸಿ ಕೊಟ್ಟರೇ ತಕ್ಷಣವೇ ಅಪೆಕ್ಸ್ ಬ್ಯಾಂಕ್ ಮತ್ತು ಶಾಸಕರ ನಿಧಿಯಿಂದ ಅನುದಾನ ಕೊಡಿಸಲು ತಾವು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಸಿ.ಬಿ.ಸಂತೋಷ್, ಉಪಾಧ್ಯಕ್ಷೆ ಕಲ್ಯಾಣಮ್ಮ, ನಿರ್ದೇಶಕರಾದ ಪುನೀತಧರ್ಮಪಾಲ್, ರುಕ್ಮಿಣಮ್ಮ, ಕೆ.ಆರ್.ಮಂಜುನಾಥ್,ಕುಮಾರಸ್ವಾಮಿ, ಸೋಮಪ್ಪ, ದಾಸಯ್ಯ, ಸಿ.ಟಿ.ಸ್ವಾಮಿಗೌಡ, ಮಾಜಿ ಅಧ್ಯಕ್ಷ ಸಿ.ಟಿ.ಪಾರ್ಥ, ಜಿಲ್ಲಾ ಬ್ಯಾಂಕಿನ ಮೇಲ್ವಿಚಾರಕ ದಿನೇಶ್ ಮೂಡಲಕೊಪ್ಪಲು, ಸಂಘದ ಸಿ.ಇ.ಓ ಪುನೀತ್, ಗುಮಾಸ್ತ ಸಿ.ಜಿ.ಜಗನ್ನಾಥ್ ಇದ್ದರು.
-
State15 hours ago
GST ನೋಟಿಸ್: ನಗದು ವ್ಯವಹಾರದತ್ತ ಮುಖ ಮಾಡಿದ ವರ್ತಕರು; ಗೊಂದಲಗಳಿಗೆ ತೆರಿಗೆ ಇಲಾಖೆ ಕೊಟ್ಟ ಸ್ಪಷ್ಟನೆ, ಸೂಚನೆಗಳೇನು..?
-
Mandya11 hours ago
ಡಿಸಿಎಂ ಡಿ.ಕೆ.ಶಿವಕುಮಾರ್ ಎಸ್ಕಾರ್ಟ್ ವಾಹನ ಪಲ್ಟಿ : ಇಬ್ಬರಿಗೆ ಗಾಯ
-
Chamarajanagar17 hours ago
ಅಪಘಾತದಲ್ಲಿ ಯುವಕ ಸ್ಥಳದಲ್ಲೇ ಸಾವು
-
Chamarajanagar10 hours ago
ಸುರೇಶ್ ಎನ್. ಋಗ್ವೇದಿ ಅವರಿಗೆ ವಿಪ್ರ ವಿಕಾಸ ಪ್ರಶಸ್ತಿ
-
Mysore12 hours ago
ನಾವು ನಿಮ್ಮ ಬಳಿ ಜೈಕಾರ ಹಾಕಿಸಿಕೊಳ್ಳಲು ಬಂದಿಲ್ಲ ನಿಮ್ಮ ಋಣ ತೀರಿಸಲು ಬಂದಿದ್ದೇವೆ – ಡಿ.ಕೆ.ಶಿವಕುಮಾರ್
-
Special15 hours ago
ನಿಸ್ವಾರ್ಥ ಸೇವೆಯ ಆಯುರ್ವೇದ ತಜ್ಞ ವೈದ್ಯ ಡಾ.ಗುರುಬಸವರಾಜ
-
Kodagu11 hours ago
ಕೊಡಗು ಸೇರಿ ರಾಜ್ಯದ ಮಲೆನಾಡಿನಲ್ಲಿ ಮುಂದಿನ 3 ದಿನ ಭಾರಿ ಮಳೆ ಸಾಧ್ಯತೆ
-
Chamarajanagar11 hours ago
ಹಸುಗೂಸನ್ನು ರಸ್ತೆ ಬದಿಯಲ್ಲಿ ಬಿಟ್ಟು ಹೋದ ಪೋಷಕರು