Chamarajanagar
ಮುತ್ತಿಗೆ ಗ್ರಾಮದಲ್ಲಿ ಹಾವು ಪತ್ತೆ: ಸ್ನೇಕ್ ಚಾಂಪು ತಂಡದಿಂದ ಸುರಕ್ಷಿತವಾಗಿ ಹಿಡಿತ
ಚಾಮರಾಜನಗರ: ತಾಲೂಕಿನ ಮುತ್ತಿಗೆ ಗ್ರಾಮದ ಕೆಂಪೇಗೌಡ ಅವರ ಮನೆಯಲ್ಲಿ ಹಾವು ಕಾಣಿಸಿಕೊಂಡ ಘಟನೆ ಇಂದು ಸಂಭವಿಸಿದೆ.
ಮನೆಯೊಳಗೆ ಹಾವು ಇರುವುದನ್ನು ಗಮನಿಸಿದ ಕುಟುಂಬದವರು ಆತಂಕಗೊಂಡು ತಕ್ಷಣ ಚಾಮರಾಜನಗರದ ಸ್ನೇಕ್ ಚಾಂಪು ಅವರಿಗೆ ಮಾಹಿತಿ ನೀಡಿದ್ದಾರೆ.

ಮಾಹಿತಿ ಪಡೆದ ಸ್ನೇಕ್ ಚಾಂಪು ತಂಡದವರು ಸ್ಥಳಕ್ಕೆ ಧಾವಿಸಿ, ಹಾವನ್ನು ಸುರಕ್ಷಿತವಾಗಿ ಹಿಡಿದು ಅರಣ್ಯ ಪ್ರದೇಶಕ್ಕೆ ಬಿಡಲಾಯಿತು. ಈ ಕಾರ್ಯಾಚರಣೆಯಿಂದ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ.
ಈ ಸಂದರ್ಭದಲ್ಲಿ ಕಾರ್ಗೋ ಮಹದೇವಸ್ವಾಮಿ ಮಾತನಾಡಿ, ನಮ್ಮ ಗ್ರಾಮದೊಳಗೆ ಅಥವಾ ಸುತ್ತಮುತ್ತ ಎಲ್ಲಿಯಾದರೂ ಹಾವು ಕಂಡುಬಂದರೆ ಭಯಪಡದೇ ತಕ್ಷಣ ತಿಳಿಸಿ. ಹಾವುಗಳನ್ನು ಸುರಕ್ಷಿತವಾಗಿ ಹಿಡಿದು ಜನರ ಪ್ರಾಣ ರಕ್ಷಿಸುವುದು ನಮ್ಮ ಸಮಾಜ ಸೇವೆಯ ಭಾಗ ಎಂದು ತಿಳಿಸಿದರು.
Chamarajanagar
ಕೌಶಲ್ಯಾಧಾರಿತ ತರಬೇತಿಗೆ ಹೆಚ್ಚು ಆದ್ಯತೆ ನೀಡಿ: ಶಾಸಕ ಸಿ.ಪುಟ್ಟರಂಗಶೆಟ್ಟಿ ಸಲಹೆ
ಸಿಇಟಿ ಆನ್ಲೈನ್ ಉಚಿತ ತರಬೇತಿ, ಪುಸ್ತಕ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ
ಚಾಮರಾಜನಗರ: ಪ್ರಸ್ತುತ ದಿನಮಾನಗಳಲ್ಲಿ ಸಮಾಜದಲ್ಲಿ ಏನಾದರೂ, ಬದಲಾವಣೆ ಕಾಣುವಂತಾಗಿದ್ದರೆ ಅದು ಶಿಕ್ಷಣದಿಂದ ಮಾತ್ರ ಎಂದು ಎಂಎಸ್ಐಎಲ್ ಅಧ್ಯಕ್ಷ, ಶಾಸಕ ಸಿ.ಪುಟ್ಟರಂಗಶೆಟ್ಟಿ ಹೇಳಿದರು.
ನಗರದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ಸೋಮವಾರ ನಡೆದ ಸಿಇಟಿ ಉಚಿತ ಆನ್ಲೈನ್ ತರಬೇತಿ ಹಾಗೂ ಎಂಎಸ್ಐಎಲ್ ವತಿಯಿಂದ ಸಿಇಟಿ ಪುಸ್ತಕ ವಿತರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ತಮ್ಮ ಕುಟುಂಬದಲ್ಲಿ ಸಹೋದರರು ಶಿಕ್ಷಣಕ್ಕೆ ಆದ್ಯತೆ ಕೊಡಲಿಲ್ಲ, ನಾನು ಮಾತ್ರ ಓದಲೇಬೇಕು ಎಂಬ ಹಠತೊಟ್ಟು, ಉನ್ನತ ಶಿಕ್ಷಣ ಪಡೆಯುವ ಮೂಲಕ ಇಂದು ಉನ್ನತಮಟ್ಟದಲ್ಲಿ ನಿಂತಿದ್ದೇನೆ. ಇದಕ್ಕೆಲ್ಲ ಶಿಕ್ಷಣ ಕಾರಣ ಎಂದರು. ಇಂದು ವೈದ್ಯಕೀಯ ಶಿಕ್ಷಣ, ಎಂಜಿನಿಯರಿಂಗ್ ಪ್ರವೇಶ ಪಡೆಯಬೇಕಾದರೆ ಸಿಇಟಿ. ನೀಟ್, ಜೆಇಇ ತರಬೇತಿ ಪಡೆಯಲೇಬೇಕು ಎಂದು ತಿಳಿಸಿದರು.
ವಿದ್ಯಾರ್ಥಿಗಳು ಕೇವಲ ಶಿಕ್ಷಣ ಪಡೆದರೆ ಸಾಲದು, ವಿವಿಧ ಕೌಶಲ್ಯಾಧಾರಿತ ತರಬೇತಿ ಪಡೆಯಬೇಕು, ಬದನಗುಪ್ಪೆ-ಕೆಲ್ಲಂಬಳ್ಳಿ ಕೈಗಾರಿಕಾವಸಾಹತು ಪ್ರದೇ಼ಶ಼ದಲ್ಲಿ ವಿವಿಧ ಪ್ರತಿಷ್ಠಿತ ಕೈಗಾರಿಕೆಗಳು ಸ್ಥಾಪನೆಯಾಗಿದ್ದು, ತರಬೇತಿಗೆ ತಕ್ಕ ಉದ್ಯೋಗಪಡೆಯಬಹುದಾಗಿದೆ ಎಂದರು.

ಚೂಡಾ ಅಧ್ಯಕ್ಷ ಮಹಮದ್ ಅಸ್ಗರ್ ಮುನ್ನಾ ಮಾತನಾಡಿ, ಸರ್ಕಾರಿ ಶಾಲಾ ಕಾಲೇಜುಗಳಲ್ಲಿ ಬಹುತೇಕ ವ್ಯಾಸಂಗ ಮಾಡುವವರು ಬಡವರ್ಗದ ವಿದ್ಯಾರ್ಥಿಗಳೇ ಆಗಿದ್ದಾರೆ, ಸರ್ಕಾರದಿಂದ ಸಿಗಬಹುದಾದ ಸೌಲಭ್ಯಗಳನ್ನು ಪಡೆದುಕೊಂಡು, ತಾವು ಅಂದುಕೊಂಡ ಗುರಿಮುಟ್ಟಬೇಕು ಎಂದು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಪ್ರಾಂಶುಪಾಲರಾದ ಜಯಕುಮಾರ್, ನಾರಾಯಣ, ಕೇಶವನ್, ನಿವೃತ್ತ ಪ್ರಾಂಶುಪಾಲ ಸೋಮಣ್ಣ, ಸಂಪನ್ಮೂಲವ್ಯಕ್ತಿಗಳಾದ ಮಾದೇಶ್, ದೀಪಕ್, ಮಲ್ಲಿಕಾರ್ಜುನ್, ಚೂಡಾ ಸದಸ್ಯ ರಾಜೇಂದ್ರ, ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎ.ಎಸ್.ಗುರುಸ್ವಾಮಿ ಹಾಗೂ ಉಪನ್ಯಾಸಕರು, ವಿದ್ಯಾರ್ಥಿಗಳು ಹಾಜರಿದ್ದರು.
Chamarajanagar
ಚಿರತೆ ದಾಳಿ: ಹಸು ಬಲಿ ಗ್ರಾಮಸ್ಥರಲ್ಲಿ ಆತಂಕ
ಚಾಮರಾಜನಗರ: ತಾಲೂಕಿನ ಇರಸವಾಡಿ ಗ್ರಾಮದಲ್ಲಿ ಚಿರತೆ ದಾಳಿ ನಡೆಸಿರುವ ಘಟನೆ ಸಂಭವಿಸಿದೆ.
ಭಾನುವಾರ ತಡ ರಾತ್ರಿಯಲ್ಲಿ ಗ್ರಾಮದ ರಂಗಸ್ವಾಮಿ ಶೆಟ್ಟಿ ಅವರ ಕೊಟ್ಟಿಗೆಗೆ ನುಗ್ಗಿದ ಚಿರತೆ, ಹಸುವಿನ ಹಿಂದಿನ ಭಾಗವನ್ನು ಸಂಪೂರ್ಣವಾಗಿ ತಿಂದು ಬಲಿ ಪಡೆದಿದೆ.

ಬೆಳಗಿನ ಜಾವ ವಿಷಯ ತಿಳಿದು ಗ್ರಾಮಸ್ಥರಲ್ಲಿ ಭೀತಿ ಮತ್ತು ಆತಂಕ ಉಂಟಾಗಿದೆ. ಈ ಭಾಗದಲ್ಲಿ ಚಿರತೆ ಕಾಣಿಸಿಕೊಂಡಿರುವುದು ಗ್ರಾಮಸ್ಥರಲ್ಲಿ ಆತಂಕ ಹೆಚ್ಚಿಸಿದೆ.
ಚಿರತೆ ಮರುದಾಳಿ ನಡೆಸುವ ಸಾಧ್ಯತೆ ಇರುವುದರಿಂದ ಅರಣ್ಯ ಇಲಾಖೆ ತಕ್ಷಣ ಕ್ರಮ ಕೈಗೊಳ್ಳಬೇಕು. ಗ್ರಾಮದಲ್ಲಿ ಗಸ್ತು ಹೆಚ್ಚಿಸಬೇಕು ಹಾಗೂ ಚಿರತೆಯನ್ನು ಸೆರೆಹಿಡಿಯುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.
Chamarajanagar
ನಾನಂಥವನಲ್ಲಾ ಎಂದ ನಂದಕುಮಮಾರ್: ಚಾಮರಾಜನಗರ ಹಿರಿಕಾಟಿ ಕ್ರಷರ್ ವಿವಾದಕ್ಕೆ ಸ್ಪಷ್ಟನೆ
ಚಾಮರಾಜನಗರ ಜಿಲ್ಲೆ ಹಿರಿಕಾಟಿ ಬಳಿ ಕ್ರಷರ್ ವಿಚಾರವಾಗಿ ಉದ್ಯಮಿಗಳಿಗೆ ಬೆದರಿಕೆ ಹಾಕಿರುವ ಆರೋಪ ವಿಶ್ವಕರ್ಮ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ನಂದಕುಮಾರ್ ಅವರ ಮೇಲೆ ಕೇಳಿ ಬಂದಿದೆ. ಚಾಮರಾಜನಗರದ ಸಂಸದ ಸುನಿಲ್ ಬೋಸ್ ಅವರ ಹೆಸರು ಕೂಡ ಪ್ರಸ್ತಾಪಿಸಿರುವ ನಂದಕುಮಾರ್, ನನಗೆ ಸಂಸದರ ಬೆಂಬಲವಿದೆ. ನನ್ನ ಪೊಲಿಟಿಕಲ್ ಒವರ್ ಏನು ಅಂತ ತೋರಿಸುತ್ತೇನೆ ಅಂತ ಉದ್ಯಮಿಗಳಿಗೆ ಬೆದರಿಕೆ ಹಾಕಿದ್ದಾರೆಂಬ ಗಂಭೀರ ಆರೋಪ ಕೇಳಿ ಬಂದಿದೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಉದ್ಯಮಿಗಳು ನಂದಕುಮಾರ್ ಸೇರಿ ಇತರರ ವಿರುದ್ಧ ಆರೋಪಗಳನ್ನು ಮಾಡಿದ್ದರು. ಹಿರಿಕಾಟಿ ಬಳಿ ಕ್ರಷರ್ ಉದ್ಯಮವನ್ನು ಕಾನೂನು ನೀತಿ ನಿಯಾಮವಳಿ ಅನ್ವಯವೇ, ಯಾವುದೇ ಉಲ್ಲಂಘನೆ ಅಗದಂತೆ ನಡೆಸುತ್ತ ಬಂದಿದ್ದೇವೆ. ನಮ್ಮ ಕ್ರಷರ್ ಪಕ್ಕದಲ್ಲೇ ನಂದಕುಮಾರ್ ಅವರ ಕ್ರಷರ್ ಕೂಡ ಇದೆ. ನಮಗೆ ಕಿರುಕುಳ ನೀಡಿ ಇಲ್ಲಿಂದ ನಮ್ಮ ಕ್ರಷರ್ ಅನ್ನ ಬೇರೆಡೆ ಸ್ಥಳಾಂತರ ಮಾಡಲು ಈ ರೀತಿ ಕಿರುಕಳ ನೀಡಿದ್ದಾರೆ ಅಂತ ಬಹಿರಂಗವಾಗಿ ಮಾಧ್ಯಮಗಳೆದುರು ಗಂಭೀರ ಆರೋಪಗಳನ್ನ ಮಾಡಿದ್ದರು.
ಇನ್ನು ಉದ್ಯಮಿಗಳ ಆರೋಪಕ್ಕೆ ಪ್ರತಿಕ್ರಿಯೆ ನೀಡಿರುವ ನಂದಕುಮಾರ್ ನಾನಂಥವನಲ್ಲಾ, ನಾನು ಯಾವುದೇ ಪೊಲಿಟಿಕಲ್ ಪವರ್ ಯೂಸ್ ಮಾಡುವುದಾಗಿ ಹೇಲಿಲ್ಲ. ಅವರು ವಿನಾಕಾರಣ ಸುಳ್ಳು ಆರೋಪ ಮಾಡಿದ್ದಾರೆ. ಇದು ಸತ್ಯಕ್ಕೆ ದೂರ ಅಂತ ಸ್ಪಷ್ಟನೆ ನೀಡಿದ್ದಾರೆ.
-
Mandya3 hours agoಕೆರೆ ಒತ್ತುವರಿ ತೆರವುಗೊಳಿಸದಿದ್ದರೆ ಶಿಸ್ತು ಕ್ರಮ: ಸಮಯ ನಿಗದಿಗೊಳಿಸಿ ಸೂಚನೆ ನೀಡಿದ ಡಿಸಿ ಡಾ.ಕುಮಾರ
-
Mandya4 hours agoಬೂದನೂರು ಗ್ರಾಮ ಪಂಚಾಯತಿಗೆ ನೇಮಕವಾಗಿರುವ ಆಡಳಿತಾಧಿಕಾರಿಗೆ ಗ್ರಾಮಸ್ಥರಿಂದ ಭವ್ಯ ಸ್ವಾಗತ
-
Hassan5 hours agoಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರ ಎಚ್ಡಿಕೆ ಅಭಿಮಾನಿಗಳಿರುವ ಕ್ಷೇತ್ರ: ನಿಖಿಲ್ ಕುಮಾರಸ್ವಾಮಿ
-
Chamarajanagar11 hours agoಚಿರತೆ ದಾಳಿ: ಹಸು ಬಲಿ ಗ್ರಾಮಸ್ಥರಲ್ಲಿ ಆತಂಕ
-
Mysore9 hours agoಹಣ್ಣುಗಳ ಮಹತ್ವ, ಪೌಷ್ಟಿಕಾಂಶದ ಬಗ್ಗೆ ಅರಿವು ಮೂಡಿಸಿದ ರವಿ ಮಹದೇವ್
-
Mandya3 hours agoಜಿಲ್ಲೆಯ ಜನರಿಗೆ ಶುದ್ಧ ಕುಡಿಯುವ ನೀರು ಪೂರೈಸಿ : ಮನೋಜ್ ಕುಮಾರ್ ಮೀನಾ
-
Hassan5 hours agoಸಿಎಂ ಓಲೈಕೆಗಾಗಿ ಸವಲತ್ತುಗಳನ್ನು ಕೊಡುತ್ತಿದ್ದಾರೆ: ಶಾಸಕ ಎ.ಮಂಜು
-
Mandya1 hour agoಫೆ.13 ರಿಂದ 19 ರವರೆಗೆ ಪ್ರಜಾಪಿತ ಬ್ರಹ್ಮ ಕುಮಾರೀಸ್ ಈಶ್ವರೀಯ ವಿಶ್ವ ವಿದ್ಯಾಲಯದ ವತಿಯಿಂದ 90ನೇ ಮಹಾಶಿವರಾತ್ರಿ ಮಹೋತ್ಸವ
