Connect with us

National - International

ಅಕ್ಟೋಬರ್ 14 ರಂದು ಸೂರ್ಯಗ್ರಹಣ – ಸೂರ್ಯಗ್ರಹಣದಲ್ಲಿ ಎಷ್ಟು ವಿಧಗಳಿವೆ?

Published

on

ಈ ಬಾರಿ ಎರಡನೇ ಸೂರ್ಯಗ್ರಹಣ ಅಕ್ಟೋಬರ್ 14 ರಂದು ಅಂದರೆ ನಾಳೆಗೆ ನಿಗದಿಪಡಿಸಲಾಗಿದೆ. ಈ ಸೂರ್ಯಗ್ರಹಣದ( Solar Eclipse 2023)ಪರಿಣಾಮ ಭಾರತದಲ್ಲಿ ಗೋಚರಿಸುವುದಿಲ್ಲ. ಅಮೆರಿಕ, ಕೆನಡಾ, ಆಫ್ರಿಕಾದ ಕೆಲವು ಭಾಗಗಳು, ಅಂಟಾರ್ಟಿಕಾ, ಅಟ್ಲಾಂಟಿಕಾ ಮತ್ತು ಇತರ ಕೆಲವು ದೇಶಗಳಲ್ಲಿ ಈ ಗ್ರಹಣ ಗೋಚರಿಸುತ್ತದೆ. ಇದು ಭಾರತೀಯ ಕಾಲಮಾನ ರಾತ್ರಿ 8.34 ರಿಂದ 2.25 ರವರೆಗೆ ನಡೆಯಲಿದೆ. ಭಾರತದಲ್ಲಿ ಈ ಸಮಯದಲ್ಲಿ ರಾತ್ರಿಯಾಗುವುದರಿಂದ ಇಲ್ಲಿ ನೋಡಲಾಗುದಿಲ್ಲ. ಹಗಲಿರುವ ಪ್ರಪಂಚದ ಭಾಗಗಳಲ್ಲಿ ಮೇಲೆ ತಿಳಿಸಿದ ಸ್ಥಳಗಳಲ್ಲಿ ಕಾಣಿಸುತ್ತದೆ.

ಸೂರ್ಯಗ್ರಹಣ ಯಾವಾಗ ಸಂಭವಿಸುತ್ತದೆ?
ಸೂರ್ಯ ಮತ್ತು ಭೂಮಿಯ ನಡುವೆ ಚಂದ್ರ ಹಾದು ಹೋದಾಗ ಸೂರ್ಯಗ್ರಹಣ ಸಂಭವಿಸುತ್ತದೆ. ಇಂತಹ ಪರಿಸ್ಥಿತಿಯಲ್ಲಿ ಸೂರ್ಯನ ಬೆಳಕು ಭೂಮಿಯನ್ನು ತಲುಪುವುದು ಕಷ್ಟ. ಚಂದ್ರನ ನೆರಳು ಭೂಮಿಯ ಮೇಲೆ ಬೀಳುತ್ತದೆ. ಈ ಸಮಯದಲ್ಲಿ ಚಂದ್ರನು ಸಹ ಭೂಮಿಗೆ ಹತ್ತಿರದಲ್ಲಿದೆ.

ಚಂದ್ರಗ್ರಹಣ ಯಾವಾಗ ಸಂಭವಿಸುತ್ತದೆ? ಚಂದ್ರ, ಭೂಮಿ ಮತ್ತು ಸೂರ್ಯ ನೇರ ರೇಖೆಯಲ್ಲಿ ಬಂದಾಗ ಚಂದ್ರಗ್ರಹಣ ಸಂಭವಿಸುತ್ತದೆ.

2023 ರಲ್ಲಿ ಒಟ್ಟು ನಾಲ್ಕು ಗ್ರಹಣಗಳನ್ನು ನಡೆಯಲಿದೆ. ಈಗಾಗಲೇ ಎರಡು ಗ್ರಹಣ ನಡೆದಿದ್ದು, ಅಕ್ಟೋಬರ್ 14 ರಂದು ಸೂರ್ಯಗ್ರಹಣ ಮತ್ತು ಎರಡನೇ ಚಂದ್ರಗ್ರಹಣ ಅಕ್ಟೋಬರ್ 29 ರಂದು ಸಂಭವಿಸುತ್ತದೆ. ಇದಕ್ಕೂ ಮೊದಲು ಏಪ್ರಿಲ್ 20 ರಂದು ಸೂರ್ಯಗ್ರಹಣ ಸಂಭವಿಸಿತ್ತು ಮತ್ತು ಮೇ 5 ರಂದು ಚಂದ್ರಗ್ರಹಣ ಸಂಭವಿಸಿದೆ.

ಸೂರ್ಯಗ್ರಹಣ ಅಮಾವಾಸ್ಯೆಯಂದು ಸಂಭವಿಸುತ್ತದೆ. ಈ ಸಮಯದಲ್ಲಿ ಚಂದ್ರನು ಭೂಮಿಗೆ ಹತ್ತಿರದಲ್ಲಿರುತ್ತದೆ ಎಂದು ವಿಜ್ಞಾನ ಹೇಳುತ್ತದೆ.
ನಾಲ್ಕು ರೀತಿಯ ಸೂರ್ಯಗ್ರಹಣ ಸಂಭವಿಸುತ್ತದೆ. ಇದು ಮುಖ್ಯವಾಗಿ ಭಾಗಶಃ, ಸಂಪೂರ್ಣ, ವಾರ್ಷಿಕ ಮತ್ತು ಹೈಬ್ರಿಡ್ ಎಂದು ವಿಂಗಡಿಸಲಾಗಿದೆ.
ನಾಳೆ ನಡೆಯುವ ಸೂರ್ಯಗ್ರಹಣವು (ಅಕ್ಟೋಬರ್ 14) ವಾರ್ಷಿಕವಾಗಿದೆ.
ಸಂಪೂರ್ಣ ಸೂರ್ಯಗ್ರಹಣವು ಸಾಮಾನ್ಯವಾಗಿ 18 ತಿಂಗಳಿಗೊಮ್ಮೆ ಸಂಭವಿಸುತ್ತದೆ.
ಭಾಗಶಃ ಸೂರ್ಯಗ್ರಹಣ ವರ್ಷಕ್ಕೆ ಎರಡು ಬಾರಿ ಸಂಭವಿಸುತ್ತದೆ.
ವಾರ್ಷಿಕ ಗ್ರಹಣವು ಒಂದು ಅಥವಾ ಎರಡು ವರ್ಷಗಳಿಗೊಮ್ಮೆ ಸಂಭವಿಸುತ್ತದೆ.
ಹೈಬ್ರಿಡ್ ಗ್ರಹಣ ತುಲನಾತ್ಮಕವಾಗಿ ಅಪರೂಪ. ಭೂಮಿಯ ಕೆಲವು ಸ್ಥಳಗಳಲ್ಲಿ ಇದು ಸಂಪೂರ್ಣ ಗ್ರಹಣವಾಗಿ ಗೋಚರಿಸುತ್ತದೆ ಮತ್ತು ಇತರ ಸ್ಥಳಗಳಲ್ಲಿ ಇದು ಉಂಗುರ ರೂಪದಲ್ಲಿ ಕಂಡುಬರುತ್ತದೆ.

Continue Reading
Click to comment

Leave a Reply

Your email address will not be published. Required fields are marked *

National - International

ಆಕಸ್ಮಿಕವಾಗಿ ಗಡಿ ದಾಟಿದ ಭಾರತದ ಯೋಧನ ವಶಕ್ಕೆ ಪಡೆದ ಪಾಕ್‌

Published

on

ನವದೆಹಲಿ: ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನತೆ ಹೆಚ್ಚಾಗಿದೆ. ಇತ್ತ ಎರಡು ದೇಶಗಳ ನಡುವೆ ಎನ್‌ಕೌಂಟರ್‌ ಕೂಡಾ ನಡೆಯುತ್ತಿದ್ದು, ಈ ನಡುವೆ ಭಾರತ ಮತ್ತು ಪಾಕಿಸ್ತಾನದ ಗಡಿಯಲ್ಲಿ ಆಕಸ್ಮಿಕವಾಗಿ ಗಡಿ ದಾಟಿದ ಭಾರತದ ಬಿಎಸ್‌ಎಫ್ ಯೋಧನನ್ನು ಪಾಕಿಸ್ತಾನ ಬಂಧಿಸಿದೆ.

ಪಂಜಾಬ್ ಗಡಿಯನ್ನು ಆಕಸ್ಮಿಕವಾಗಿ ದಾಟಿದ ನಂತರ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಯೋಧನನ್ನು ಪಾಕಿಸ್ತಾನ ರೇಂಜರ್‌ಗಳು ಬಂಧಿಸಿದ್ದಾರೆ.

ಅವರ ಬಿಡುಗಡೆಗಾಗಿ ಎರಡೂ ದೇಶಗಳ ಸೇನಾ ಪಡೆಗಳ ನಡುವೆ ಮಾತುಕತೆ ನಡೆಯುತ್ತಿದೆ ಎಂದು ಭಾರತೀಯ ಸೇನೆಯ ಅಧಿಕಾರಿಗಳು ತಿಳಿಸಿದ್ದಾರೆ.

Continue Reading

National - International

ಪಹಲ್ಗಾಮ್‌ ದಾಳಿ; ಉಗ್ರರ ಜೊತೆ ಗುಂಡಿನ ಕಾಳಗದಲ್ಲಿ ವೀರ ಯೋಧ ಹುತಾತ್ಮ

Published

on

ಜಮ್ಮು ಕಾಶ್ಮೀರ: ಪಹಲ್ಗಾಮ್‌ನ ನರಮೇಧಕ್ಕೆ ಪ್ರತಿಯಾಗಿ ಜಮ್ಮು ಮತ್ತು ಕಾಶ್ಮೀರದ ಉದ್ಧಮ್‌ಪುರ ಜಿಲ್ಲೆಯ ದುಡು-ಬಸಂತ್‌ಗರ್ಗ್ ಪ್ರದೇಶದಲ್ಲಿ ಭದ್ರತಾ ಪಡೆಗಳು ಉಗ್ರರೊಂದಿಗೆ ನಡೆಸುತ್ತಿರುವ ಎನ್‌ಕೌಂಟರ್‌ನಲ್ಲಿ ಸೇನಾ ಯೋಧರೊಬ್ಬರು ಹುತಾತ್ಮರಾಗಿದ್ದಾರೆ.

ಹುತಾತ್ಮ ಯೋಧನನ್ನು ಗಣ್ಯ 6 PARA (ವಿಶೇಷ ಪಡೆ) ಘಟಕದ ಹವಾಲ್ದಾರ್ ಜಂತು ಅಲಿ ಶೇಖ್ ಎಂದು ಗುರುತಿಸಲಾಗಿದೆ.

https://x.com/Whiteknight_IA/status/1915290204535210424

ಪಹಲ್ಗಾಮ್‌ನ ಬೈಸರನ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಉಗ್ರ ದಾಳಿಯಲ್ಲಿ 25 ಪ್ರವಾಸಿಗರು ಮತ್ತು ಸ್ಥಳೀಯ ನಿವಾಸಿಗಳು ಸಾವನ್ನಪ್ಪಿದ ನಂತರ ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದರೆಡು ದಿನಗಳಲ್ಲಿ ನಡೆಯುತ್ತಿರುವ ಮೂರನೇ ಎನ್‌ಕೌಂಟರ್ ಇದಾಗಿದೆ.

ಶಂಕಿತರು ಅಡಗಿದ್ದ ಸ್ಥಳದಲ್ಲಿ ಭದ್ರತಾ ಪಡೆಗಳು ಜಮಾಯಿಸುತ್ತಿದ್ದಂತೆಯೇ, ಉಗ್ರರು ಅವರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಭದ್ರತಾ ಪಡೆಗಳು ಪ್ರತಿಯಾಗಿ ಗುಂಡಿನ ದಾಳಿ ನಡೆಸಿದ್ದು, ಎನ್ ಕೌಂಟರ್ ಆರಂಭವಾಗಿದೆ ಎಂದು ಅವರು ಮಾಹಿತಿ ಲಭ್ಯವಾಗಿದೆ.

Continue Reading

National - International

ದಾಳಿ ನಡೆಸಿದ ಉಗ್ರರಿಗೆ ಊಹೆಗೂ ಮೀರಿದ ಶಿಕ್ಷೆ ನೀಡಲಾಗುವುದು: ಪ್ರಧಾನಿ ನರೇಂದ್ರ ಮೋದಿ

Published

on

ಪಾಟ್ನಾ: ಜಮ್ಮು ಮತ್ತು ಕಾಶ್ಮೀರದ ಪೆಹಲ್ಗಾಮ್‌ನಲ್ಲಿ ಭಾರತೀಯರ ಮೇಲೆ ದಾಳಿ ನಡೆಸಿದ ಉಗ್ರರಿಗೆ ಹಾಗೂ ಸಂಚು ರೂಪಿಸಿದವರಿಗೆ ಊಹೆಗೂ ಮೀರಿದ ರೀತಿಯಲ್ಲಿ ಶಿಕ್ಷೆ ನೀಡಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಖಡಕ್‌ ಸಂದೇಶ ನೀಡಿದ್ದಾರೆ.

ಬಿಹಾರದ ಮಧುಬನಿಯಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆ ಮತ್ತು ದೀನ್ ದಯಾಳ್ ಉಪಾಧ್ಯಾಯ ಅಂತ್ಯೋದಯ ಯೋಜನೆ–ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್ (DAY–NRLM) ಕಾರ್ಯಕ್ರಮದಲ್ಲಿ ಇಂದು(ಏಪ್ರಿಲ್‌.24) ಉಗ್ರರಿಗೆ ಎಚ್ಚರಿಕೆ ನೀಡಿದರು.

ಪೆಹಲ್ಗಾಮ್‌ ದಾಳಿಯಲ್ಲಿ ಮೃತರಿಗೆ ಗೌರವ ಸಲ್ಲಿಸಲು 1 ನಿಮಿಷ ಮೌನ ಪ್ರಾರ್ಥನೆ ಮಾಡಿ ಮೋದಿ ಭಾಷಣ ಆರಂಭಿಸಿದ ಅವರು, ಇಂದು ಬಿಹಾರದ ನೆಲದಲ್ಲಿ ನಿಂತು ನಾನು ಇಡೀ ಜಗತ್ತಿಗೆ ಹೇಳುತ್ತೇನೆ. ನಮ್ಮ ಕೇಂದ್ರ ಸರ್ಕಾರವೂ ಈ ದೇಶದ ಪ್ರತಿಯೊಬ್ಬ ಭಯೋತ್ಪಾದಕ ಮತ್ತು ಅವರ ಬೆಂಬಲಿಗರನ್ನು ಗುರುತಿಸಿ, ಪತ್ತೆ ಮಾಡಿ ಶಿಕ್ಷಿಸುತ್ತದೆ ಎಂದು ಹೇಳಿದರು.

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಏಪ್ರಿಲ್.22 ರಂದು ಭಯೋತ್ಪಾದಕರು ಅಮಾಯಕ ನಾಗರಿಕರನ್ನು ಹತ್ಯೆ ಮಾಡಿರುವುದಕ್ಕೆ ಇಡೀ ರಾಷ್ಟ್ರವೇ ದುಃಖಿತವಾಗಿದೆ. ಈ ಭಯೋತ್ಪಾದಕರು ಹಾಗೂ ಈ ದಾಳಿಗೆ ಸಂಚು ರೂಪಿಸಿದವರಿಗೆ ಕಲ್ಪನೆಗೂ ಮೀರಿದ ದೊಡ್ಡ ಶಿಕ್ಷೆ ಸಿಗುತ್ತದೆ ಎಂದು ನಾನು ಸ್ಪಷ್ಟವಾಗಿ ಹೇಳಲು ಬಯಸುತ್ತೇನೆ. ಅಲ್ಲದೇ 140 ಕೋಟಿ ಭಾರತೀಯರ ಇಚ್ಛಾಶಕ್ತಿಯಂತೆ ನಮ್ಮ ಸರ್ಕಾರ, ಭಯೋತ್ಪಾದನೆ ಮಾಸ್ಟರ್‌ಗಳ ಬೆನ್ನು ಮುರಿಯಲಿದೆ ಎಂದು ಹೇಳಿದರು.

ಈ ಸಂಕಲ್ಪದಲ್ಲಿ ಇಡೀ ರಾಷ್ಟ್ರವು ಒಂದಾಗಿದೆ. ಮಾನವೀಯತೆಯನ್ನು ನಂಬುವ ಪ್ರತಿಯೊಬ್ಬರೂ ನಮ್ಮೊಂದಿಗಿದ್ದಾರೆ. ವಿವಿಧ ದೇಶಗಳ ಜನರಿಗೆ ಮತ್ತು ಅವರ ನಾಯಕರು ನಮ್ಮೊಂದಿಗೆ ನಿಂತಿದ್ದಕ್ಕಾಗಿ ನಾನು ಧನ್ಯವಾದ ಹೇಳುತ್ತೇನೆ ಎಂದು ತಿಳಿಸಿದರು.

Continue Reading

Trending

error: Content is protected !!