National - International
2024ರಲ್ಲಿ ಸಂಭವಿಸಲಿದೆ ಈ ಎರಡು ಭಯಾನಕ ಗ್ರಹಣ !! ಯಾವಾಗ ಗೊತ್ತಾ ?!

ಹೊಸ ವರ್ಷದ ಆಗಮನಕ್ಕೆ ನಾವೆಲ್ಲರೂ ಕಾಯುತ್ತಿದ್ದೇವೆ. ಈ ನಡುವೆ 2024ರಲ್ಲಿ ಏನೆಲ್ಲಾ ಸಂಭವಿಸಬಹುದು ಎಂಬ ಕುತೂಹಲಕ್ಕೆ ಇಲ್ಲಿ ಕೆಲವು ಮಾಹಿತಿ ನೀಡಲಾಗಿದೆ . ಅದರಲ್ಲೂ ಆಕಾಶದಲ್ಲಿ ನಡೆಯುವ ಕೌತುಕಗಳಲ್ಲಿ ಗ್ರಹಣ ಕೂಡ ಒಂದು. ಅದೇ ರೀತಿ 2024ರಲ್ಲಿ ಎರಡು ಬಾರಿ ಸೂರ್ಯಗ್ರಹಣ ಹಾಗೂ 2 ಬಾರಿ ಚಂದ್ರಗ್ರಹಣ ಸಂಭವಿಸಲಿದೆ. ಈ ಕುರಿತ ವಿವರ ಇಲ್ಲಿದೆ. ಅದರಲ್ಲೂ ಜ್ಯೋತಿಷ್ಯ ಹಾಗೂ ಖಗೋಳಶಾಸ್ತ್ರ ಎರಡಲ್ಲೂ ಗ್ರಹಣಕ್ಕೆ ಬಹಳ ಮಹತ್ವವಿದೆ.
ಸೂರ್ಯ ಮತ್ತು ಭೂಮಿಯ ನಡುವೆ ಚಂದ್ರ ಹಾದುಹೋದಾಗ ಸೂರ್ಯಗ್ರಹಣ ಸಂಭವಿಸಿದರೆ, ಸೂರ್ಯ ಹಾಗೂ ಚಂದ್ರ ನಡುವೆ ಭೂಮಿ ಬಂದಾಗ ಚಂದ್ರಗ್ರಹಣ ಸಂಭವಿಸುತ್ತದೆ. ಚಂದ್ರಗ್ರಹಣದ ಸಮಯದಲ್ಲಿ ಈ ಮೂರು ಗ್ರಹಗಳು ಒಂದೇ ನೇರದಲ್ಲಿ ಇರುತ್ತವೆ. ಪ್ರಪಂಚದಾದ್ಯಂತ ಸೂರ್ಯ ಹಾಗೂ ಚಂದ್ರಗ್ರಹಣಕ್ಕೆ ಬಹಳಷ್ಟು ಪ್ರಾಮುಖ್ಯವಿದೆ. ಮುಂದಿನ ವರ್ಷ ಗ್ರಹಣ ಯಾವಾಗ ನಡೆಯುತ್ತದೆ, ಎಲ್ಲಿ ಗೋಚರವಾಗಬಹುದು ಎಂಬ ವಿವರ ಇಲ್ಲಿದೆ.
ಸೂರ್ಯ ಗ್ರಹಣ 2024:
2024ರ ಮೊದಲ ಸೂರ್ಯಗ್ರಹಣ ಏಪ್ರಿಲ್ 8 ರಂದು ನಡೆಯಲಿದೆ. ಇದು ಸಂಪೂರ್ಣ ಸೂರ್ಯಗ್ರಹಣವಾಗಿರುತ್ತದೆ. ಇದು ಸೌತ್ ಪೆಸಿಫಕ್ ಮಹಾಸಾಗರದಿಂದ ಆರಂಭವಾಗಿ ಉತ್ತರ ಅಮೆರಿಕವನ್ನು ದಾಟುತ್ತದೆ. ನಂತರ ಮೆಕ್ಸಿಕೊ, ಅಮೆರಿಕ ಮತ್ತು ಕೆನಡಾವನ್ನು ಹಾದು ಹೋಗುತ್ತದೆ. ಈ ನಡುವೆ ಕೋಸ್ಟರಿಕಾ, ಕ್ಯೂಬಾ, ಅರುಬಾ, ಕೇಮನ್ ದ್ವೀಪಗಳು, ಡೊಮಿನಿಕಾ, ರೆಂಚ್ ಪಾಲಿನೇಷ್ಯಾ ಮತ್ತು ಜಮೈಕಾದಲ್ಲಿ ಭಾಗಶಃ ಸೂರ್ಯಗ್ರಹಣ ಸಂಭವಿಸುತ್ತದೆ.
ದೃಕ್ ಪಂಚಾಗದ ಪ್ರಕಾರ ಈ ಸೂರ್ಯಗ್ರಹಣದ ಅವಧಿ:
ಗ್ರಹಣ ಆರಂಭ ಸಮಯ: ಮಧ್ಯಾಹ್ನ 3.42 (UTC- Coordinated Universal Time)
ಗ್ರಹಣ ಮುಕ್ತಾಯ: ಸಂಜೆ 4.30 (UTC)
2024ರ ಎರಡನೇ ಸೂರ್ಯಗ್ರಹಣ ಅಕ್ಟೋಬರ್ 2 ರಂದು ಸಂಭವಿಸಲಿದೆ. ಇದು ಆನ್ಯುಲರ್ ಸೂರ್ಯಗ್ರಹಣವಾಗಿರುತ್ತದೆ. ಈ ಗ್ರಹಣವು ದಕ್ಷಿಣ ಅಮೆರಿಕದಲ್ಲಿ ಗೋಚರಿಸುತ್ತದೆ. ಚಂದ್ರನು ಸೂರ್ಯನ ಮುಂದೆ ಚಲಿಸುವಾಗ ಆನ್ಯುಲರ್ ಸೂರ್ಯಗ್ರಹಣ ಅಥವಾ ಸೂರ್ಯನ ಸುತ್ತಲೂ ಅಗ್ನಿಜ್ವಾಲೆಯಂತಹ ರಿಂಗ್ ಆಕಾರ ಗೋಚರವಾಗುತ್ತದೆ. ಇದು ಸೂರ್ಯನನ್ನು ಸಂಪೂರ್ಣವಾಗಿ ಆವರಿಸುವುದಿಲ್ಲ. ಭಾಗಶಃ ಸೂರ್ಯಗ್ರಹಣ ಅಂತಲೂ ಕರೆಯುವ ಅನ್ಯೂಲರ್ ಸೂರ್ಯಗ್ರಹಣವು ದಕ್ಷಿಣ ಅಮೆರಿಕ, ಅಂಟಾರ್ಟಿಕಾ, ಪೆಸಿಫಿಕ್ ಮಹಾಸಾಗರ, ಅಟ್ಲಾಂಟಿಕ್ ಸಾಗರ ಮತ್ತು ಉತ್ತರ ಅಮೆರಿಕದಲ್ಲಿ ಗೋಚರಿಸುತ್ತದೆ.
ಗ್ರಹಣದ ಸಮಯ:
ಗ್ರಹಣ ಆರಂಭ: ಮಧ್ಯಾಹ್ನ 3.42
ಗ್ರಹಣ ಅಂತ್ಯ ಸಮಯ: ಸಂಜೆ 4.50
ಈ ಎರಡೂ ಗ್ರಹಣಗಳು ಭಾರತದಲ್ಲಿ ಗೋಚರವಾಗುವುದಿಲ್ಲ. ಆ ಕಾರಣಕ್ಕೆ ಸೂತಕ ಛಾಯೆ ಭಾರತೀಯರಿಗೆ ಇರುವುದಿಲ್ಲ.
ಚಂದ್ರಗ್ರಹಣ:
2024ರ ಮೊದಲ ಚಂದ್ರಗ್ರಹಣವು ಮಾರ್ಚ್ 25 ರಂದು ಸಂಭವಿಸಲಿದೆ. ಇದು ಪೆನಂಬ್ರಲ್ ಚಂದ್ರಗ್ರಹಣವಾಗಿರುತ್ತದೆ. ಪೆನಂಬ್ರಲ್ ಸೂರ್ಯಗ್ರಹಣದ ಸಮಯದಲ್ಲಿ ಚಂದ್ರನು ಭೂಮಿಯ ಹೊರ ಭಾಗದ ನೆರಳಿನ ಮೇಲೆ ಹಾದು ಹೋಗುತ್ತಾನೆ. ಇದನ್ನು ಪೆನಂಬ್ರಾ ಎಂದು ಕರೆಯುತ್ತಾರೆ. ಇದು ಯುರೋಪ್, ಆಸ್ಟ್ರೇಲಿಯಾ ಮತ್ತು ಆಫ್ರಿಕಾ, ಉತ್ತರ/ಪೂರ್ವ ಏಷ್ಯಾ, ಉತ್ತರ ಅಮೇರಿಕಾ, ದಕ್ಷಿಣ ಅಮೆರಿಕಾ, ಪೆಸಿಫಿಕ್, ಅಟ್ಲಾಂಟಿಕ್ ಆರ್ಕ್ಟಿಕ್ ಮತ್ತು ಅಂಟಾರ್ಕ್ಟಿಕಾದಲ್ಲಿ ಗೋಚರಿಸುತ್ತದೆ.
ಗ್ರಹಣ ಆರಂಭ: ಬೆಳಗಿನ ಜಾವ 4.53
ಗ್ರಹಣ ಮುಕ್ತಾಯ: ಬೆಳಿಗ್ಗೆ 7.12
ಎರಡನೇ ಚಂದ್ರಗ್ರಹಣವು ಸೆಪ್ಟೆಂಬರ್ 18 ರಂದು ಸಂಭವಿಸಲಿದೆ. ಇದು ಭಾಗಶಃ ಚಂದ್ರಗ್ರಹಣವಾಗಿರುತ್ತದೆ. ಇದು ಯುರೋಪ್, ಏಷ್ಯಾ, ಆಸ್ಟ್ರೇಲಿಯಾ, ಆಫ್ರಿಕಾ, ಉತ್ತರ/ಪಶ್ಚಿಮ ಉತ್ತರ ಅಮೆರಿಕ, ಉತ್ತರ/ಪೂರ್ವ ದಕ್ಷಿಣ ಅಮೆರಿಕ, ಪೆಸಿಫಿಕ್, ಅಟ್ಲಾಂಟಿಕ್, ಹಿಂದೂ ಮಹಾಸಾಗರ, ಆರ್ಕ್ಟಿಕ್ ಮತ್ತು ಅಂಟಾರ್ಟಿಕಾ ಭಾಗದಲ್ಲಿ ಗೋಚರಿಸುತ್ತದೆ.
National - International
ಅಂಬೇಡ್ಕರ್ ಅವರ ಆಶಯಕ್ಕೆ ವಿರುದ್ಧವಾಗಿ ವಕ್ಫ್ ಕಾನೂನು ರೂಪಿಸಿದ್ದು ಕಾಂಗ್ರೆಸ್: ಪ್ರಧಾನಿ ಮೋದಿ

ಹರಿಯಾಣ: ಈ ಹಿಂದೆ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಆಶಯಕ್ಕೆ ವಿರುದ್ಧವಾಗಿ ವಕ್ಫ್ ಕಾನೂನು ರೂಪಿಸಿದ್ದು ಕಾಂಗ್ರೆಸ್ ಪಕ್ಷ ಎಂದು ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ.
ಹರಿಯಾಣದ ಹಿಸಾರ್ನಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಈ ಹಿಂದೆ ಸಂವಿಧಾನದ ಮೂಲ ಆಶಯವನ್ನು ಹಾಳು ಮಾಡುವಂತೆ ವಕ್ಫ್ ಕಾನೂನನ್ನು ಕಾಂಗ್ರೆಸ್ ರೂಪಿಸಿತ್ತು.
ಕಳೆದ 2013ರಲ್ಲಿ ಕಾಂಗ್ರೆಸ್ ವಕ್ಫ್ ಕಾಯ್ದೆಗೆ ತಿದ್ದುಪಡಿ ತಂದಿತ್ತು. ತನ್ನ ಮತ ಬ್ಯಾಂಕ್ ಅನ್ನು ತೃಪ್ತಿಪಡಿಸಿಕೊಳ್ಳಲು ತರಾತುರಿಯಲ್ಲಿ ತಿದ್ದುಪಡಿ ಮಾಡಿತ್ತು ಎಂದು ವಾಗ್ದಾಳಿ ನಡೆಸಿದರು.
ಇನ್ನು ಕಾಂಗ್ರೆಸ್ ಕೆಲ ಮೂಲಭೂತವಾದಿಗಳನ್ನು ಮಾತ್ರ ಖುಷಿಪಡಿಸಿದೆ. ಉಳಿದ ಸಮಾಜವು ಶೋಚನೀಯ, ಅವಿದ್ಯಾವಂತ ಮತ್ತು ಬಡವರಾಗಿಯೇ ಉಳಿದಿದೆ. ಕಾಂಗ್ರೆಸ್ಸಿನ ಈ ದುಷ್ಟ ನೀತಿಗೆ ದೊಡ್ಡ ಪುರಾವೆ ವಕ್ಫ್ ಕಾಯ್ದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇನ್ನು ಬಾಬಾ ಸಾಹೇಸ್ ಅಂಬೇಡ್ಕರ್ ಅವರನ್ನು ಪದೇ ಪದೇ ಅವಮಾನಿಸಿದ್ದು ಕಾಂಗ್ರೆಸ್. ಅಂಬೇಡ್ಕರ್ ಅವರಿಗೆ ಕಾಂಗ್ರೆಸ್ ಮಾಡಿದ್ದ ಮೋಸವನ್ನು ನಾವು ಮರೆಯಲು ಕೂಡ ಆಗಲ್ಲ. ಅಂಬೇಡ್ಕರ್ ಅವರನ್ನು ಎರಡು ಬಾರಿ ಚುನಾವಣೆಯಲ್ಲಿ ಸೋಲಿಸಿದರು ಎಂದು ಕಾಂಗ್ರೆಸ್ ಪಕ್ಷದ ವಿರುದ್ಧ ಹರಿಹಾಯ್ದರು.
National - International
ಅಮೆರಿಕಾದಿಂದ ಭಾರತಕ್ಕೆ ಬಂದಿಳಿದ 26/11 ರೂವಾರಿ ತಹವ್ವೂರ್ ರಾಣಾ

ಮುಂಬೈ: ಅಮೆರಿಕದಿಂದ ಗಡಿಪಾರಾಗಿದ್ದ ಮುಂಬೈ ದಾಳಿಯ ಆರೋಪಿ ತಹವ್ವೂರ್ ರಾಣಾನನ್ನು ಗುರುವಾರ ಭಾರತಕ್ಕೆ ವಾಪಾಸ್ ಕರೆತರಲಾಗಿದೆ.
ಎನ್ಐಎ, ಆರ್ಎಡಬ್ಲ್ಯೂ, ಎಸ್ಡಬ್ಲ್ಯೂಎಟಿ ತಂಡಗಳು ಅಮೆರಿಕಕ್ಕೆ ತೆರಳಿ ಗುರುವಾರ ಮಧ್ಯಾಹ್ನ 2.39ರ ಸುಮಾರಿಗೆ ರಾಣಾ ಇದ್ದ ವಿಮಾನ ದೆಹಲಿಯಲ್ಲಿ ಇಳಿಯಿತು. ಇನ್ನು ಅವರನ್ನು ದೆಹಲಿಯ ತಿಹಾರ್ ಜೈಲಿನಲ್ಲಿ ಇರಿಸುವ ಸಾಧ್ಯತೆಯಿದ್ದು, ಮುಂದಿನ ಬೆಳವಣಿಗೆ ಕಾದುನೋಡಬೇಕಿದೆ.
ರಾಣಾ ಅವರನ್ನು ಭಾರತಕ್ಕೆ ಹಸ್ತಾಂತರಿಸುವುದನ್ನು ತುರ್ತು ತಡೆಹಿಡಿಯುವಂತೆ ಕೋರಿ ಸಲ್ಲಿಸಿದ್ದ ಪರಿಶೀಲನಾ ಅರ್ಜಿಯನ್ನು ದೇಶದ ಸುಪ್ರೀಂ ಕೋರ್ಟ್ ವಜಾಗೊಳಿಸಿದ ನಂತರ ಭಾರತದ ತನಿಖಾಧಿಕಾರಿಗಳ ತಂಡ ಅಮೆರಿಕಕ್ಕೆ ಪ್ರಯಾಣ ಬೆಳೆಸಿತ್ತು.
ಅಧಿಕಾರಿಗಳ ಪ್ರಕಾರ, ರಾಷ್ಟ್ರ ರಾಜಧಾನಿಯ ತಿಹಾರ್ ಜೈಲಿನಲ್ಲಿರುವ ಹೈ ಸೆಕ್ಯುರಿಟಿ ಸೆಲ್ಗಳು ಹೆಚ್ಚಿನ ಅಪಾಯದ ಬಂಧಿತ ವ್ಯಕ್ತಿಗಾಗಿ ಸಿದ್ಧವಾಗಿವೆ. ಎನ್ಐಎ ಇತ್ತೀಚೆಗೆ ಅವರ ಪ್ರಕರಣವನ್ನು ಮುಂಬೈನಿಂದ ದೆಹಲಿಗೆ ವರ್ಗಾಯಿಸುವ ಬಗ್ಗೆ ನ್ಯಾಯಾಲಯದ ಆದೇಶವನ್ನು ಪಡೆದುಕೊಂಡಿದೆ. ಅವರನ್ನು ಭಾರತಕ್ಕೆ ಕರೆತಂದು ನ್ಯಾಯಾಲಯದ ಮುಂದೆ ಹಾಜರುಪಡಿಸಿದ ನಂತರ ಏಜೆನ್ಸಿ ಅವರನ್ನು ಕಸ್ಟಡಿಗೆ ವಿಚಾರಣೆಗೆ ಒಳಪಡಿಸಬಹುದು. ಮುಂಬೈ ಭಯೋತ್ಪಾದನಾ ದಾಳಿ ಪ್ರಕರಣದಲ್ಲಿ ರಾಣಾ ವಿಚಾರಣೆಯನ್ನು ಎದುರಿಸಬೇಕಾಗುತ್ತದೆ.
ಮೂಲಗಳ ಪ್ರಕಾರ, ಎನ್ಐಎ ಡಿಐಜಿ ಜಯಾ ರಾಯ್ ಮಂಗಳವಾರ ತಹಾವೂರ್ ರಾಣಾ ಶರಣಾಗತಿ ವಾರಂಟ್ಗೆ ಸಹಿ ಹಾಕಿದರು. ಅದಾದ ನಂತರ ಅವರ ಹಸ್ತಾಂತರ ಪ್ರಕ್ರಿಯೆಯು ವೇಗವಾಗಿ ಮುಂದುವರಿಯಿತು. ಬುಧವಾರ ಬೆಳಿಗ್ಗೆ 6.30ರ ಸುಮಾರಿಗೆ ಭಾರತೀಯ ತನಿಖಾ ಸಂಸ್ಥೆ ರಾಣಾ ಅವರನ್ನು ಹೊತ್ತ ವಿಶೇಷ ವಿಮಾನದಲ್ಲಿ ದೆಹಲಿಗೆ ಹೊರಟು, ಗುರುವಾರ ಭಾರತಕ್ಕೆ ಮರಳಿದ್ದಾರೆ.
National - International
ರೆಪೋ ದರ ಇಳಿಸಿದ ಆರ್ಬಿಐ: ಆರ್ಬಿಐ ಗವರ್ನರ್ ಸಂಜಯ್ ಮಲ್ಹೋತ್ರಾ ಹೇಳಿದ್ದಿಷ್ಟು

ನವದೆಹಲಿ: ಆರ್ಬಿಐ (ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ) ತನ್ನ ಹಣಕಾಸು ನೀತಿ ಸಭೆಯಲ್ಲಿ ರೆಪೋ ದರವನ್ನು 25 ಬೇಸಿಸ್ ಪಾಯಿಂಟ್ಗಳಷ್ಟು ಕಡಿಮೆ ಮಾಡಿದೆ. ಆ ಮೂಲಕ 6.25%ರಿಂದ 6.00ಗೆ ತಂದಿದೆ.
ಈ ನಿರ್ಧಾರವನ್ನು ಹಣಕಾಸು ನೀತಿ ಸಮಿತಿ (ಎಂಪಿಸಿ) ಏಕಮತದಿಂದ ತೆಗೆದುಕೊಂಡಿದೆ. ಈ ಬಗ್ಗೆ ಮಾತನಾಡಿರುವ ಆರ್ಬಿಐ ಗವರ್ನರ್ ಸಂಜಯ್ ಮಲ್ಹೋತ್ರಾ ಅವರು, ಹಣದುಬ್ಬರವು ತಗ್ಗುತ್ತಿದೆ ಎಂದು ಹೇಳಿಕೆ ನೀಡಿದ್ದಾರೆ.
2026ರ ಹಣಕಾಸು ವರ್ಷದ ಜಿಡಿಪಿ ಬೆಳವಣಿಗೆಯನ್ನು 6.7% ಎಂದು ಮೊದಲು ಅಂದಾಜಿಸಲಾಗಿತ್ತು, ಆದರೆ ಈಗ ಅದನ್ನು 6.5%ಗೆ ಕಡಿಮೆ ಮಾಡಲಾಗಿದೆ. ಹಣದುಬ್ಬರ ಯೋಜನೆಯನ್ನು 4.2% ರಿಂದ 4%ಗೆ ಇಳಿಸಲಾಗಿದೆ. ಜಾಗತಿಕ ಸುಂಕಗಳ ಪ್ರಭಾವದಿಂದ ಭಾರತದ ಆರ್ಥಿಕತೆಯ ಮೇಲೆ ಒತ್ತಡ ಉಂಟಾಗಬಹುದು ಎಂದು ಆರ್ಥಿಕ ತಜ್ಞರು ಎಚ್ಚರಿಸಿದ್ದಾರೆ.
ಆದರೆ, ಆರ್ಬಿಐ ದೇಶೀಯ ಬೆಳವಣಿಗೆಯನ್ನು ಸಮತೋಲನಗೊಳಿಸಲು ಈ ಕ್ರಮ ತೆಗೆದುಕೊಂಡಿದೆ. ಈ ದರ ಕಡಿತವು ಸಾಲಗಾರರಿಗೆ ಪ್ರಯೋಜನವನ್ನು ಒದಗಿಸುತ್ತದೆ ಮತ್ತು ಆರ್ಥಿಕ ಚೇತರಿಕೆಯನ್ನು ಬೆಂಬಲಿಸುತ್ತದೆ. ಎಂಪಿಸಿ “ತಟಸ್ಥ” ನೀತಿಯನ್ನು ಮುಂದುವರಿಸಿದೆ, ಇದು ಭವಿಷ್ಯದಲ್ಲಿ ಮತ್ತಷ್ಟು ದರ ಕಡಿತಕ್ಕೆ ಸೂಚನೆ ನೀಡುತ್ತದೆ. ಒಟ್ಟಾರೆಯಾಗಿ, ಈ ನಿರ್ಧಾರವು ಭಾರತದ ಆರ್ಥಿಕ ಸ್ಥಿರತೆಯನ್ನು ಗಟ್ಟಿಗೊಳಿಸುವ ಗುರಿಯನ್ನು ಹೊಂದಿದೆ. ಈ ನಿಟ್ಟಿನಲ್ಲಿ ಹಲವು ಸಾಲಗಳ ಮೇಲಿನ ಬಡ್ಡಿ ದರ ಇಳಿಕೆಯಾಗಲಿದ್ದು, ಇದು ಇಎಂಐ ಕಟ್ಟುವ ಮಧ್ಯಮ ವರ್ಗದವರಿಗೆ ಅನುಕೂಲವಾಗಲಿದೆ.
-
Mandya22 hours ago
ಪತ್ನಿಯ ಶೀಲ ಶಂಕಿಸಿ ಪತಿಯಿಂದಲೇ ಬರ್ಬರ ಹತ್ಯೆ…!
-
Chamarajanagar22 hours ago
ಅಂಬಳೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ನವೀನ್ ಅವಿರೋಧ ಆಯ್ಕೆ
-
Kodagu18 hours ago
ಹಾತೂರುವಿನಲ್ಲಿ ಮಾರುತಿ ಓಮ್ನಿ ಹಾಗೂ ಲಾರಿ ನಡುವೆ ಭೀಕರ ರಸ್ತೆ ಅಪಘಾತ.
-
Chamarajanagar22 hours ago
ಬೋನಿಗೆ ಬಿದ್ದ 3 ನೇ ಚಿರತೆ
-
Kodagu15 hours ago
ನಾಪೋಕ್ಲು ಬೇತು ಗ್ರಾಮದಲ್ಲಿ ನಿವೃತ ಸೈನಿಕನ ಮನೆಗೆ ಕನ್ನ ಹಾಕಿದ ಚೋರರು -ಕೋವಿ,ಬೆಳ್ಳಿಯಪೀಚೆಕತ್ತಿ ಕದ್ದು ಪರಾರಿ
-
Chamarajanagar13 hours ago
ನಾಳೆ ವಿವಿಧೆಡೆ ವಿದ್ಯುತ್ ವ್ಯತ್ಯಯ
-
Chikmagalur16 hours ago
ಅಕ್ರಮ ಸಂಬಂಧಕ್ಕಾಗಿ ಪತಿಯನ್ನ ಕೊಂದ ಸತಿ
-
Mysore11 hours ago
12 ವರ್ಷದ ಬಾಲಕಿ ಮೇಲೆ ಅತ್ಯಾಚಾರ : ಆರೋಪಿ ಬಂಧನ