Chamarajanagar
ರಾಜ್ಯ ಮಟ್ಟದ ಕ್ರೀಡಕೂಟ ದಲ್ಲಿ ಸರ್ಕಾರಿ ನೌಕರರು ಭಾಗವಹಿಸಿ…

ಯಳಂದೂರು : ತುಮಕೂರಿನಲ್ಲಿ ಇದೇ ತಿಂಗಳು 27 ರಿಂದ 29 ರವರೆಗೆ ನಡೆಯಲಿರುವ ರಾಜ್ಯ ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡ ಕೂಟದಲ್ಲಿ ಯಳಂದೂರು ತಾಲ್ಲೂಕಿನ ವಿವಿಧ ಇಲಾಖಾಯ 60 ಕ್ರೀಡ ಪಟುಗಳು ಭಾಗವಹಿಸುವರು…
ಜಿಲ್ಲಾ ಮಟ್ಟದ ದಿಂದ ರಾಜ್ಯ ಮಟ್ಟದ ಕ್ರೀಡಕೂಟಕ್ಕೆ ಆಯ್ಕೆಯಾಗಿ ಕೇಂದ್ರ ಸಂಘದಲ್ಲಿ ಆನ್ ಲೈನ್ ಮೂಲಕ ನೋಂದಾಯಿಸಿರುವ ಎಲ್ಲಾ ಕ್ರೀಡ ಪಟ್ಟಗಳು ಭಾಗವಹಿಸಬೇಕು ರಾಜ್ಯ ಮಟ್ಟದ ಕ್ರೀಡ ಕೂಟದಲ್ಲಿ ಉತ್ತಮ ಪ್ರದರ್ಶನ ನೀಡುವ ಮೂಲಕ ಯಳಂದೂರು ತಾಲ್ಲೂಕಿನ ಕೀರ್ತಿ ತರುವಂತೆ. ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ರಾಧ ಮಂಜುನಾಥ್ ವೈ.ಎಂ… ಕಾರ್ಯದರ್ಶಿ ಮಹೇಶ ಆಮ್ಮನ ಪುರ ಖಜಾಂಜಿ ರಮೇಶ. ರಾಜ್ಯ ಪರಿಷತ್ ಸದಸ್ಯ ಗೋವಿಂದ ಕ್ರೀಡ ಕಾಯದರ್ಶಿ ನದೀಮ್ ಷರೀಫ್ ಮತ್ತು ಸಂಘದ ಎಲ್ಲಾ ನಿರ್ದೇಶಕರ ಶುಭಾಶಯ ತಿಳಿಸಿದ್ದರು…
ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುವ ನೌಕರ ಕ್ರೀಡ ಪಟ್ಟುಗಳು ಚಾಮರಾಜನಗರ ಜಿಲ್ಲಾ ಕ್ರೀಡಾ ಮತ್ತು ಯುವಜನ ಸಬಲೀಕರಣ ಇಲಾಖೆಗೆ ಭೇಟಿ ಮಾಡಿ ತಕ್ಷಣವೇ ಗುರುತಿನ ಚೀಟಿಯನ್ನು ಕಡ್ಡಾಯವಾಗಿ ಪಡೆದುಕೊಂಡು ತುಮಕೂರಿನಲ್ಲಿ ನಡೆಯುವ ಕ್ರೀಡ ಕೂಟದಲ್ಲಿ ದಿನಾಂಕ 27- 10-23 ರ ಬೆಳ್ಳಿಗ್ಗೆ 9 ಗಂಟೆಯೊಳಗೆ ವರದಿ ಮಾಡಿಕೊಳ್ಳಬೇಕೆಂದು ತಿಳಿಸಿದ್ದಾರೆ..
Chamarajanagar
ಜೂ. 19ಕ್ಕೆ ಚಾಮರಾಜನಗರ ವಿಶ್ವವಿದ್ಯಾನಿಲಯದ ಆವರಣದಲ್ಲಿ ಉದ್ಯೋಗ ಮೇಳ

ಚಾಮರಾಜನಗರ: ಚಾಮರಾಜನಗರ ವಿಶ್ವವಿದ್ಯಾನಿಲಯ, ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಮತ್ತು ಜಿಲ್ಲಾ ಕೌಶಾಲ್ಯಾಭಿವೃದ್ದಿ ಕೇಂದ್ರ ಸಹಯೋಗದಲ್ಲಿ ಉದ್ಯೋಗ ಮೇಳವನ್ನು ಜೂನ್. 19ರಂದು ಬೆಳಿಗ್ಗೆ 10.30 ರಿಂದ ಸಂಜೆ 4 ಗಂಟೆಯವರೆಗೆ ಚಾಮರಾಜನಗರ ವಿಶ್ವವಿದ್ಯಾನಿಲಯದ ಆವರಣದಲ್ಲಿ ಆಯೋಜಿಸಲಾಗಿದೆ.
ಉದ್ಯೋಗ ಮೇಳದಲ್ಲಿ 15ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪನಿಗಳು ಪಾಲ್ಗೊಳ್ಳಲಿವೆ. ಯಾವುದೇ ಪದವಿ, ಸ್ನಾತಕೋತ್ತರ ಪದವಿ, ಎಂಜಿನಿಯರಿಂಗ್, ಡಿಪ್ಲೋಮೊ, ಯಾವುದೇ ಟ್ರೇಡಿನ ಐಟಿಐ ಅಭ್ಯರ್ಥಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದು.
ಅಭ್ಯರ್ಥಿಗಳು ಸ್ವ ವಿವರ ಅಂಕಪಟ್ಟಿಗಳ ಮೂಲ ಹಾಗೂ ಜೆರಾಕ್ಸ್ ಪ್ರತಿಗಳೊಂದಿಗೆ ಉದ್ಯೋಗ ಮೇಳದಲ್ಲಿ ನಡೆಯುವ ಸಂದರ್ಶನಕ್ಕೆ ಹಾಜರಾಗಬಹುದು.
ಉದ್ಯೋಗ ಮೇಳದ ಹೆಚ್ಚಿನ ವಿವರಗಳಿಗಾಗಿ ಮೊ.ಸಂ. 8970932547, 9743904790 ಮತ್ತು 08226-224430 ಸಂಪರ್ಕಿಸಬಹುದು.
ಉದ್ಯೋಗ ಮೇಳ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಚಾಮರಾಜನಗರ ವಿಶ್ವವಿದ್ಯಾನಿಲಯದ ಕುಲಪತಿಗಳಾದ ಪ್ರೊ. ಎಂ.ಆರ್. ಗಂಗಾಧರ್ ಅವರು ವಹಿಸುವರು. ಕುಲ ಸಚಿವರಾದ ಆರ್. ಲೋಕನಾಥ್, ಪ್ರೊ. ಜಿ.ವಿ. ವೆಂಕಟರಮಣ (ಮೌಲ್ಯಮಾಪನ) ಅವರು ಪಾಲ್ಗೊಳ್ಳುವರು ಎಂದು ಪ್ರಕಟಣೆ ತಿಳಿಸಿದೆ.
Chamarajanagar
ಶಿವಪುರ ಗ್ರಾಮ ಪಂಚಾಯಿತಿಯಲ್ಲಿ ಇ- ಸ್ವತು ಮಾಡಲು 20 ಸಾವಿರ ರೂ. ಲಂಚ ಸ್ವೀಕರಿಸಿದ ನೌಕರ

ಗುಂಡ್ಲುಪೇಟೆ: ತಾಲ್ಲೂಕಿನ ಶಿವಪುರ ಗ್ರಾಮ ಪಂಚಾಯತಿಯಲ್ಲಿ ಇ ಸ್ವತು ಮಾಡಲು 20, ಸಾವಿರ ಲಂಚ ಸ್ವೀಕರಿಸಿದ ನೌಕರನ ಲಂಚವತಾರ ಬಟ್ಟಾಬಯಲಾಗಿದೆ.
ಈ ಘಟನೆ ವಿರುದ್ಧ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸಾಮೂಹಿಕ ನಾಯಕತ್ವದ ವತಿಯಿಂದ ಶಿವಪುರ ಗ್ರಾಮ ಪಂಚಾಯತಿಯ ಮುಂದೆ ಪ್ರತಿಭಟನೆ ಮಾಡಲಾಯಿತು.
ಪಂಚಾಯಿತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿ ಹಾಗೂ ಪಂಚಾಯಿತಿಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರದ ಬಗ್ಗೆ ಪ್ರತಿಭಟನೆ ನಡೆಯಿತು.
ಪಂಚಾಯತಿಯಲ್ಲಿ ನಡೆದಿರುವ ಅಕ್ರಮದ ಬಗ್ಗೆ ಗ್ರಾಮ ಪಂಚಾಯಿತಿ ನೌಕರನಾದ ಮಾರಾಶೆಟ್ಟಿ ಎಂಬ ವ್ಯಕ್ತಿಯು ಶಿವಪುರ ಗ್ರಾಮದ ಮಹೇಶ್ ಎಂಬುವವರ ಬಳಿ ಇ-ಸ್ವತ್ತು ಮಾಡಿಕೊಡುವುದಕ್ಕೆ 20 ಸಾವಿರ ರೂಗಳನ್ನು ಲಂಚದ ರೂಪದಲ್ಲಿ ತೆಗೆದುಕೊಂಡಿದ್ದು ಅದರಲ್ಲಿ ಇ-ಸ್ವತ್ತು ಹಾಗೂ ವಿವಿಧ ಬಿಲ್ ಸೇರಿ 10300 ರೂ ಮಾತ್ರ ಖರ್ಚಗಿದ್ದು ಇನ್ನೂ 9700 ರೂಗಳನ್ನು ತೆಗೆದುಕೊಂಡ ಪಂಚಾಯಿತಿ ನೌಕರ ಮಾರಾಶೆಟ್ಟಿ ಅವರಿಂದ ಹಣ ನೀಡಿದ್ದ ಮಹೇಶ್ ಎಂಬುವವರಿಗೆ ರೈತ ಸಂಘಟನೆ ವತಿಯಿಂದ ದುಡ್ಡನ್ನು ವಾಪಸ್ ಕೊಡಿಸಲಾಯಿತು.
Chamarajanagar
ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಗುದ್ದಲಿ ಪೂಜೆ

ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹೊಂಗನೂರು ಗ್ರಾಮದಲ್ಲಿ ಇಂದು 2 ಕೋಟಿ 20 ಲಕ್ಷ ರೂಪಾಯಿ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಿದ ಶಾಸಕ ಎ ಆರ್. ಕೃಷ್ಣ ಮೂರ್ತಿ
ಉಪ್ಪಾರ, ಕುರುಬ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಅಲ್ಪಸಂಖ್ಯಾತರ ಬೀದಿಗಳಲ್ಲಿ ಸೀಮೆಂಟ್ ರಸ್ತೆ ಮತ್ತು ಚರಂಡಿ ನಿರ್ಮಾಣ ಹಾಗೂ ಕರ್ನಾಟಕ ಪಬ್ಲಿಕ್ ಶಾಲೆಗೆ 20 ಲಕ್ಷ ರೂಪಾಯಿ ವೆಚ್ಚದ ಕಟ್ಟಡ ಶಂಕುಸ್ಥಾಪನೆಗೆ ಗುದ್ದಲಿ ಪೂಜೆ ನೆರವೇರಿಸಿದೆನು.
ಗ್ರಾಮದ ಹೊಂಗನೂರು ಹಿರಿಕೆರೆ ಮತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೆಲ್ಲವತ್ತ ಸೇನೆಕೆರೆ ಅಭಿವೃದ್ಧಿಗಾಗಿ ಸುಮಾರು 19 ಕೋಟಿ ವೆಚ್ಚದ ಕಾಮಗಾರಿಗೆ ಮುಂದಿನ ವಾರ ಶಂಕುಸ್ಥಾಪನೆ ನೆರವೇರಿಸುವುದಾಗಿ ತಿಳಿಸಿದ್ದಾರೆ
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಶ್ರೀಮತಿ ರೂಪ ಮೋಹನ್, ಉಪಾಧ್ಯಕ್ಷರಾದ ನವೀನ್ ಕುಮಾರ್, ಜಿಲ್ಲಾ ಗ್ಯಾರೆಂಟಿ ಸಮಿತಿ ಅಧ್ಯಕ್ಷರಾದ ಹೆಚ್.ವಿ. ಚಂದ್ರು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು, ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷರುಗಳು‚ ಮಾಜಿ ಮತ್ತು ಹಾಲಿ ಸದಸ್ಯರುಗಳು, ಗ್ರಾಮದ ಎಲ್ಲಾ ಕೋಮಿನ ಯಜಮಾನರು, ವಿದ್ಯಾರ್ಥಿಗಳು, ರೈತರು, ಮಹಿಳೆಯರು ಹಾಗೂ ಗ್ರಾಮಸ್ಥರು ಹಾಜರಿದ್ದರು.
-
Uncategorized23 hours ago
ಸೆಕ್ಯುರಿಟಿ ಸಿಬ್ಬಂದಿಗಳಿಂದ ಯುವಕನ ಮೇಲೆ ಹಲ್ಲೆ ಪ್ರಕರಣ: ಪೊಲೀಸ್ ಕಾನ್ಸ್ಟೇಬಲ್ ಸೇರಿ ಮೂವರ ವಿರುದ್ದ ಎಫ್ಐಆರ್ ದಾಖಲು
-
Mandya23 hours ago
ಮಾಜಿ ಶಾಸಕ ಎಂ.ಡಿ.ಲಕ್ಷ್ಮೀ ನಾರಾಯಣ್ ದಂಪತಿಗಳ 48ನೇ ವರ್ಷದ ವಿವಾಹ ವಾರ್ಷಿಕೋತ್ಸವ ಆಚರಣೆ: ಗಣ್ಯರಿಂದ ಶುಭಹಾರೈಕೆ
-
Hassan10 hours ago
ಹಾಸನದ ಖಾಸಗಿ ಶಾಲಾ-ಕಾಲೇಜಿಗೆ ಬಾಂಬ್ ಹಾಕುವ ಬೆದರಿಕೆ
-
State23 hours ago
SSC ಯಿಂದ 14 ಸಾವಿರಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿ : ಅರ್ಜಿ ಸಲ್ಲಿಸಲು ಯಾರು ಅರ್ಹರು?
-
Kodagu9 hours ago
ಪಂಚಾಯತಿಯಲ್ಲಿ ಶೇ.25 ನಿಧಿಯಲ್ಲಿ ಹೊಲಿಗೆ ಯಂತ್ರ ವಿತರಣೆ.
-
Mandya23 hours ago
2024-25ನೇ ಸಾಲಿನಲ್ಲಿ ಪದವಿ ಮುಗಿಸಿರುವ ವಿದ್ಯಾರ್ಥಿಗಳಿಗೆ ಫೂಲ್ ಪ್ಲೇಸ್ಮೆಂಟ್ ಸಂದರ್ಶನ
-
Chikmagalur11 hours ago
ಕೊಪ್ಪ ತಾಲ್ಲೂಕಿನಲ್ಲಿ ಬೃಹತ್ ಗಾತ್ರದ ಮರ ಉರುಳಿ ರಸ್ತೆ ಬಂದ್
-
Kodagu11 hours ago
ಕೊಡವರ ಅಭಿವೃದ್ಧಿಗೆ ಕಾಂಗ್ರೆಸ್ ಕೊಡುಗೆ ಅಪಾರ