Mandya
ಫೆ.13ಕ್ಕೆ ಇತಿಹಾಸ ಪ್ರಸಿದ್ಧ ಶ್ರೀ ಮಲ್ಲಿಕಾರ್ಜುನ ಸ್ವಾಮಿ ದೇವಾಲಯದ ಮಹಾದ್ವಾರ ರಾಜಗೋಪುರ ಲೋಕಾರ್ಪಣೆ : ಶ್ರೀ ಸೋಮೇಶ್ವರನಾಥ ಸ್ವಾಮೀಜಿ
ನಾಗಮಂಗಲ : ತಾಲೂಕಿನ ಹಾಲತಿ ಗ್ರಾಮದ ಶ್ರೀ ಮಲ್ಲಿಕಾರ್ಜುನ ಸ್ವಾಮಿ ದೇವಾಲಯದ ಮಹಾದ್ವಾರದ ನೂತನ ರಾಜಗೋಪುರ ಉದ್ಘಾಟನೆ ಮತ್ತು ಕುಂಭಾಭಿಷೇಕ ಕಾರ್ಯಕ್ರಮ ವು ಫೆಬ್ರವರಿ 13ರಂದು ನಡೆಯಲಿದೆ ಎಂದು ಆದಿಚುಂಚನಗಿರಿ ಶಾಖಾ ಮಠದ ಪೂಜ್ಯ ಶ್ರೀ ಸೋಮೇಶ್ವರನಾಥ ಸ್ವಾಮೀಜಿಗಳು ತಿಳಿಸಿದರು
ಅವರು ತಾಲೂಕಿನ ಶಾಖಾಮಠದಲ್ಲಿ ಪತ್ರಿಕಾಗೋಷ್ಠಿ ಏರ್ಪಡಿಸಿ ಮಾತನಾಡಿ, ಶ್ರೀ ಮಠವು ಆಯೋಜನೆ ಮಾಡಿರುವ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮಿಜಿಯವರ ದಿವ್ಯ ಆಶೀರ್ವಾದಗಳೊಂದಿಗೆ ಭ್ರಮರಾಂಬ ಸಮೇತ ಶ್ರೀ ಮಲ್ಲಿಕಾರ್ಜುನ ಸ್ವಾಮಿಯ ದೇವಾಲಯದ ಮಹಾ ದ್ವಾರದ 64 ಅಡಿಯ ನೂತನ ರಾಜಗೋಪುರದ ಉದ್ಘಾಟನೆ ಮತ್ತು ಕುಂಭಾಭಿಷೇಕ ಕಾರ್ಯಕ್ರಮವನ್ನು ಇದೇ ತಿಂಗಳು ಫೆ. 13ರಂದು ಶುಕ್ರವಾರ ಶ್ರೀ ನಿರ್ಮಲಾನಂದನಾಥ ಮಹಾಸ್ವಾಮೀಜಿಯವರ ಅಮೃತ ಹಸ್ತದಿಂದ ಲೋಕಾರ್ಪಣೆ ಮಾಡಲಿದ್ದಾರೆ.

ಇದೇ ಸಮಾರಂಭದಲ್ಲಿ ಧಾರ್ಮಿಕ ಪೂಜಾ ಕಾರ್ಯಕ್ರಮಗಳು ದಿನಾಂಕ 11. 12. ರಂದು ವಿವಿಧ ಪೂಜಾ ಕಾರ್ಯಕ್ರಮಗಳು ನಡೆಯಲಿದ್ದು ಫೆ.12 ರಂದು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಪೂಜಾ ಕಾರ್ಯಕ್ರಮಗಳಲ್ಲಿ ಅಕ್ಕಪಕ್ಕದ ಗ್ರಾಮದಿಂದ ಸುಮಾರು 60 ಗ್ರಾಮ ದೇವತೆಗಳು ಸೇರಲಿವೆ.
ಸಮಾರಂಭಕ್ಕೆ ನಾಡಿನ ಗಣ್ಯರು ಮುಖ್ಯಸ್ಥರು ಧಾರ್ಮಿಕ ಭಕ್ತರು ಆಗಮಿಸಲಿದ್ದಾರೆ. ಫೆ.13 ರಂದು ವಿವಿಧ ಧಾರ್ಮಿಕ ಪೂಜಾ ಕಾರ್ಯಕ್ರಮಗಳೊಂದಿಗೆ ನೂತನ ಗೋಪುರ ಶ್ರೀ ಮಲ್ಲಿಕಾರ್ಜುನ ಸ್ವಾಮಿಯ ರಥೋತ್ಸವ ಜರಗಲಿದೆ.

ಭಕ್ತಾದಿಗಳು ಇದೇ ಸಂದರ್ಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸ್ವಾಮಿಯ ಕೃಪೆಗೆ ಪಾತ್ರರಾಗಬೇಕೆಂದು ತಿಳಿಸಿದರು.
Mandya
ಜನನ ಮತ್ತು ಮರಣ ಪ್ರಮಾಣ ಪತ್ರಗಳು ಜನರಿಗೆ ಸಕಾಲದಲ್ಲಿ ಸಿಗುವಂತಾಗಬೇಕು : ಡಾ. ಕುಮಾರ
ಮಂಡ್ಯ : ಬದುಕಿರುವ ಪ್ರತಿಯೊಬ್ಬ ವ್ಯಕ್ತಿಗೆ ಜನನ ಪ್ರಮಾಣ ಪತ್ರ ಅಗತ್ಯವಾದ ದಾಖಲೆಯಾಗಿದೆ ಮತ್ತು ವ್ಯಕ್ತಿಯ ಮರಣದ ನಂತರ ಕುಟುಂಬದವರಿಗೆ ಮರಣ ಪ್ರಮಾಣಪತ್ರ ಉಪಯುಕ್ತ ದಾಖಲೆಯಾಗಿದ್ದು, ಜನನ ಮತ್ತು ಮರಣ ಪ್ರಮಾಣ ಪತ್ರಗಳು ಜನರಿಗೆ ಸಕಾಲದಲ್ಲಿ ಸಿಗುವಂತಾಗಬೇಕು ಎಂದು ಜಿಲ್ಲಾಧಿಕಾರಿ ಡಾ ಕುಮಾರ ಅವರು ತಿಳಿಸಿದರು.
ಅವರು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾ ಮಟ್ಟದ ಜನನ ಮರಣ ನೋಂದಣಿ ಸಮನ್ವಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಜನನ ಮತ್ತು ಮರಣಗಳ ನೋಂದಣಿಯನ್ನು ನಿಗದಿತ 21 ದಿನಗಳ ಒಳಗೆ ಕಡ್ಡಾಯವಾಗಿ ಮಾಡಬೇಕು. ವಿಳಂಬ ನೋಂದಣಿಯನ್ನು ತಡೆಯಲು ಮತ್ತು ಸಕಾಲದಲ್ಲಿ ಪ್ರಮಾಣಪತ್ರಗಳನ್ನು ನೀಡಲು ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ತಿಳಿಸಿದರು.

ಜನನ ಮತ್ತು ಮರಣ ನೋಂದಣಿ ಕಾರ್ಯ ಜಿಲ್ಲೆಯ ಎಲ್ಲ ಗ್ರಾಮ ಲೆಕ್ಕಿಗರು, ವೈದ್ಯಾಧಿಕಾರಿಗಳು ಹಾಗೂ ನಗರಸಭೆ ಪೌರಾಯುಕ್ತರು ಸರಿಯಾಗಿ ನಿರ್ವಹಿಸಬೇಕು. ನೋಂದಣಿ ವೇಳೆ ಸೂಕ್ತ ಪರಿಶೀಲನೆ ಕೈಗೊಂಡು ಅದರ ವರದಿ ಸಲ್ಲಿಸಬೇಕು. ವಿಳಂಬ ನೋಂದಣಿ ಘಟನೆ ತಡೆಬೇಕು. ಯಾವುದೇ ದಾಖಲಾತಿ ಬಾಕಿ ಉಳಿಯದಂತೆ ಶೇ.100 ರಷ್ಟು ನೋಂದಣಿ ಮಾಡುವಂತೆ ಕ್ರಮವಹಿಸಬೇಕು.
ಜನನ-ಮರಣ ನೋಂದಣಿ ದಾಖಲಾತಿಯಲ್ಲಿ ಯಾವುದೇ ರೀತಿಯ ತಿದ್ದುಪಡಿಗೆ ಅವಕಾಶವಿಲ್ಲ. ಸಮರ್ಪವಾಗಿ ಕಾರ್ಯನಿರ್ವಹಣೆ ಮಾಡಲು ಹಾಗೂ ನಿಗದಿಯ ಅವಧಿಯಲ್ಲಿ ನೊಂದಣಿ ಮಾಡಲು ಅಗತ್ಯ ಕ್ರಮವಹಿಸಬೇಕು.
ಗ್ರಾಮ ಮಟ್ಟದಲ್ಲಿ ಜನನ ಮತ್ತು ಮರಣ ನೋಂದಣಿಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಅಧಿಕಾರಿಗಳು ಮುಂದಾಗಬೇಕು ಎಂದು ಅವರು ತಿಳಿಸಿದರು. ನೋಂದಣಿಯಲ್ಲಿ ನಿರ್ಲಕ್ಷ್ಯ ತೋರುವ ಸಂಬಂಧಿತ ಅಧಿಕಾರಿಗಳೇ ನೇರ ಹೊಣೆಗಾರರಾಗುತ್ತಾರೆ ಎಂದು ಅವರು ತಿಳಿಸಿದರು.
ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಕೇಶವಮೂರ್ತಿ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
Mandya
ಜಗತ್ತಿನಲ್ಲಿ ನೊಂದವರ ಕಣ್ಣೀರೊರಿಸುವ ಬಹು ದೊಡ್ಡ ಕೈ ಲಯನ್ಸ್ ದಾಗಿದೆ – ಡಾ. ಎನ್ ಕೃಷ್ಣೇಗೌಡ
ಮಂಡ್ಯ : ಜಗತ್ತಿನಲ್ಲಿ ನೊಂದವರ ಕಣ್ಣೀರೊರಿಸುವ ಬಹು ದೊಡ್ಡ ಕೈ ಲಯನ್ಸ್ ದಾಗಿದೆ ಎಂದು ಲಯನ್ ಡಾ. ಎನ್ ಕೃಷ್ಣೇಗೌಡ ಅಭಿಪ್ರಾಯ ವ್ತಕ್ತಪಡಿಸಿದರು. ನಗರದ ಹೊಳಲು ಸರ್ಕಲ್ ನಲ್ಲಿರುವ ಎಂಬಿಆರ್ಎಫ್ ಸಭಾಂಗಣದಲ್ಲಿ ಸೌಹಾರ್ದ ಲಯನ್ಸ್ ಸಂಸ್ಥೆಯ ನೂತನ ಅಧ್ಯಕ್ಷರಾಗಿ ಪಿ ಲಂಕೇಶ್ ಅಧಿಕಾರ ಪ್ರತಿಜ್ಞಾವಿಧಿ ಸ್ವೀಕಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಮನುಷ್ಯ ತಮ್ಮ ವೃತ್ತಿ ಬದುಕಿನಲ್ಲಿ ತಮ್ಮದೇ ಆದ ಗೆರೆಯನ್ನು ಎಳೆದುಕೊಂಡು ಸೀಮಿತ ಪರಿಮಿತಿಯಲ್ಲಿ ಬದುಕುತ್ತಿರುತ್ತಾನೆ. ನನ್ನ ಕುಟುಂಬ ನನ್ನ ಬಂಧು ನನ್ನ ಬಳಗ ಎಂಬ ಸ್ವಾರ್ಥಕ್ಕೆ ಸಿಕ್ಕಿಹಾಕಿಕೊಂಡಿರುತ್ತಾನೆ.
ತಾನು ಎಷ್ಟೇ ದುಡಿದರು ತನ್ನ ಸಂಸಾರಕ್ಕಾಗಿ ಎಲ್ಲವನ್ನು ಮೀಸಲಿಟ್ಟಿರುತ್ತಾ ಸಮಾಜದ ಕಡೆಗೆ ತಿರುಗಿಯೂ ನೋಡದವರು ಹಲವಾರು ಇರುತ್ತಾರೆ. ಇಂಥವರ ಮಧ್ಯೆ ಲಯನ್ಸ್ ಗಳು ಮಾತ್ರ ಸಮಾಜದ ಕಣ್ಣು ಒರೆಸುವ ಕೈಯಾಗುತ್ತಾರೆ. ನಮ್ಮಂತೆಯೇ ಇಲ್ಲದವರು ಬದುಕಬೇಕೆಂದು ಕನಸು ಕಾಣುತ್ತಾರೆ. ಅದಕ್ಕಾಗಿ ಪ್ರಪಂಚದಲ್ಲಿ ಕೋಟ್ಯಾಂತರ ಜನರಿಗೆ ಕಣ್ಣು ನೀಡುತ್ತಾ, ಹಸಿವು ನೀಗಿಸುತ್ತಾ, ಮಾರಣಾಂತಿಕ ಕಾಯಿಲೆಗಳಿಗೆ ತುತ್ತಾದವರಿಗೆ ಸಹಾಯ ಹಸ್ತ ಚಾಚುತ್ತ, ಪರಿಸರಕ್ಕೆ ಗಿಡ ಮರಗಳನ್ನು ನೆಟ್ಟು ಹಸಿರನ್ನು ಹೊದಿಸುತ್ತಾ, ಬಡ ವಿದ್ಯಾರ್ಥಿಗಳಿಗೆ, ಯುವಕರಿಗೆ, ನಿರುದ್ಯೋಗಿಗಳಿಗೆ, ಅಸಹಾಯಕರಿಗೆ ಸಹಾಯಮಾಡುತ್ತಾ ಬರುತ್ತಿದ್ದಾರೆ. ನಿಸ್ವಾರ್ಥವಾಗಿ ಸೇವೆ ಸಲ್ಲಿಸುತ್ತಿರುವ ಲಯನ್ ಬಂಧುಗಳು ಶ್ಲಾಘನೆಗೆ ಅರ್ಹರು ಎಂದು ಬಣ್ಣಿಸಿದರು.

ಅದೇ ರೀತಿ ಲಯನ್ ಚಂದ್ರಲಿಂಗು ರವರು ತಮ್ಮ ನೇತೃತ್ವದಲ್ಲಿ ಹಲವು ಸ್ನೇಹಿತರನ್ನು ಒಡಗೂಡಿ ಕಟ್ಟಿದ ಈ ಸಂಸ್ಥೆ ಹತ್ತು ಹಲವು ಸಮಾಜಮುಖಿ ಕೆಲಸಗಳನ್ನು ಮಾಡುತ್ತಿರುವುದು ಹೆಮ್ಮೆಯ ವಿಚಾರ ಎಂದರು.ನೂತನ ಅಧ್ಯಕ್ಷ ಲಯನ್ ಪಿ.ಲಂಕೇಶ್ ರವರು ಅಧಿಕಾರ ವಹಿಸಿಕೊಂಡು ಮಾತನಾಡಿ, ಈ ವರ್ಷ ನಮ್ಮ ಸಂಸ್ಥೆ ಸಮಾಜದ ನೊಂದವರ ಸೇವೆ ಮಾಡುವ ಬಹುದೊಡ್ಡ ಕನಸನ್ನು ಹೊತ್ತಿದೆ. ಅದಕ್ಕೆ ಎಲ್ಲರ ಸಹಕಾರ ಅಗತ್ಯವಿದೆ ಎಂದು ಕೋರಿದರು.
ಈ ಸಂದರ್ಭದಲ್ಲಿ ನೂತನ ಸದಸ್ಯರಿಗೆ ಲಯನ್ ಎಂ. ಸಿದ್ದೇಗೌಡ ಪ್ರತಿಜ್ಞಾವಿಧಿ ಭೂಧಿಸಿದರು, ಲಯನ್ ಜಯಕುಮಾರ್, ಆನಂದ್, ಹನುಮಂತಯ್ಯ, ಸುನಿಲ್ ಕುಮಾರ್, ಪ್ರಾಂತೀಯ ಅಧ್ಯಕ್ಷ ಚಂದ್ರಲಿಂಗು, ವಲಯ ಅಧ್ಯಕ್ಷ ಚಂದ್ರಹಾಸ ಮತ್ತಿತರರು ಭಾಗವಹಿಸಿದ್ದರು.
Mandya
ಔಷಧ ವ್ಯಾಪಾರಿಗಳ ಸೇವೆ ಅಪಾರ : ಶಾಸಕ ರಮೇಶ್ ಬಂಡಿಸಿದ್ದೇಗೌಡ
ಶ್ರೀರಂಗಪಟ್ಟಣ : ಔಷಧಿ ವ್ಯಾಪಾರಿಗಳ ಸೇವೆ ಅಪಾರವಾಗಿದ್ದು, ದಿನದಲ್ಲಿ ಹೆಚ್ಚು ಸಮಯ ಅಂಗಡಿ ತೆರೆದು ರೋಗಿಗಳ ಆರೋಗ್ಯ ಸುಧಾರಣೆಯಲ್ಲಿ ಮಹತ್ತರ ಪಾತ್ರ ವಹಿಸುತ್ತಿರುವುದಾಗಿ ಶಾಸಕ ರಮೇಶ್ ಬಂಡಿಸಿದ್ದೇಗೌಡ ತಿಳಿಸಿದರು.ಗಂಜಾಂನ ಖಾಸಗಿ ಸಮುದಾಯ ಭವನದಲ್ಲಿ ಏರ್ಪಡಿಸಲಾಗಿದ್ದ ಔಷಧಿ ವ್ಯಾಪಾರಿಗಳು ಹಾಗೂ ವಿತರಕರ ಸಂಘದ ಉದ್ಘಾಟನಾ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸಾರ್ವಜನಿಕರಿಗೆ ಸರ್ಕಾರಿ ರಜೆ ಇದ್ದರೂ, ಪ್ರತಿಭಟನೆ, ಬಂದ್ ನಡೆದರೂ ಔಷಧಿ ವ್ಯಾಪಾರಿಗಳು ಮಾತ್ರ ತಮ್ಮ ಅಂಗಡಿಗಳನ್ನು ತೆರೆದು ಎಂದಿನಂತೆ ಔಷಧಿಗಳನ್ನು ನೀಡುತ್ತಿರುತ್ತಾರೆ. ತಾವು ನೀಡುವ ಗುಷಮಟ್ಟದ ಹಾಗೂ ತ್ವರಿತ ಪ್ರಭಾವ ಬೀರು ಔಷಧಿಗಳು ಒಬ್ಬರ ಜೀವ ಉಳಿಸಲು ಸಹಕಾರಿಯಾಗಲಿದೆ. ಹಾಗೆಯೇ ನೂತನ ಸಂಘದ ಪದಾಧಿಕಾರಿಗಳು ಗುಣಮಟ್ಟದ ಔಷಧ ವಿತರಣೆಯ ಜೊತೆಗೆ ಸಂಘದ ಏಳ್ಗೆಗೆ ಶ್ರಮಿಸಿ ಸಾರ್ವಜನಿಕರಿಗೆ ಮತ್ತಷ್ಡು ಅನುಕೂಲವಾಗುವಂತೆ ನೋಡಿಕೊಳ್ಳಬೇಕು ಎಂದರು.

ಮಂಡ್ಯ ಜಿಲ್ಲಾ ಔಷಧಿ ವ್ಯಾರಿಗಳು ಹಾಗೂ ವಿತರಕರ ಸಂಘದ ಅಧ್ಯಕ್ಷ ಬಿ.ಲೋಕೇಶ್ ಮಾತನಾಡಿ, ನೂತನ ಕಾರ್ಯಕಾರಿ ಸಮಿತಿ ಪದಾಧಿಕಾರಿಗಳು ಹಾಗೂ ಸದಸ್ಯರಿಗೆ ಶುಭಕೋರಿದರು. ಸಾರ್ವಜನಿಕ ಜೀವನದಲ್ಲಿ ಔಷಧಿ ವಿತರಣೆಯ ನಮ್ಮ ಕೆಲಸವು ಅತ್ಯುತ್ತಮ ಹಾಗೂ ಅತ್ಯವಶ್ಯಕವಾಗಿದ್ದು, ಪ್ರತಿಯೊಬ್ಬರು ತಮ್ಮ ತಮ್ಮ ಜವಾಬ್ದಾರಿಗಳನ್ನು ಅರಿತು ಗುಣಮಟ್ಟದ ಔಷಧಿಗಳನ್ನು ವಿತರಿಸುವಂತೆ ಸಲಹೆ ನೀಡಿದರು. ಜೊತೆಗೆ ಕಡ್ಡಾಯವಾಗಿ ಅವಧಿ ಮೀರದ ಔಷಧಿಗಳನ್ನು ಪರಿಶೀಲಿಸಿ ಬಳಿಕವಷ್ಟೇ ಸಾರ್ವಜನಿಕರಿಗೆ ವಿತರಿಸುವ ಮಹತ್ತರ ಜವಾಬ್ದಾರಿ ನಿರ್ವಹಿಸುವಂತೆ ಅವರು ಸೂಚನೆ ನೀಡಿದರು.ಕಾರ್ಯಕ್ರಮದಲ್ಲಿ ಶ್ರೀರಂಗಪಟ್ಟಣ ಕಾವೇರಿ ಮೆಡಿಕಲ್ಸ್ ನ ಎಂ.ನಂದೀಶ್ ಹಾಗೂ ಅರಕೆರೆ ಶ್ರಕಂಠೇಶ್ವರ ಮೆಡಿಕಲ್ಸ್ ನ ಜೆ.ಎಂ.ಸತೀಶ್ ರವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಸಹಾಯಕ ಔಷಧ ನಿಯಂತ್ರಕರಾದ ಮೊಹಮ್ಮದ್ ಜೌಹಾರ್ ಖಾಲದ್ , ಎಂ.ಡಿ.ಸಿ.ಡಿ.ಓ ಗೌರವ ಸಲಹೆಗಾರ ಕೆ.ಪ್ರಭಾಕರನ್, ಸಂಘದ ಕಾರ್ಯಕಾರಿ ಸಮಿತಿಯ ಪ್ರದೀಪ್ ಕುಮಾರ್, ಝಿಜಿವುಲ್ಲಾ, ಡಾ.ಮುನೀರ್ ಅಹಮ್ಮದ್, ವಿನೋದ್ ಕುಮಾರ್, ಸುದರ್ಶನ್, ಕಬೀರ್, ರಮೇಶ್, ಭಾನುಪ್ರಕಾಶ್, ಅಕ್ಷತಾ, ತೇಜು, ಕಾರ್ತಿಕ್, ರಾಕೇಶ್, ಚಂದ್ರಕಲಾ, ವಸೀಂ ಖಾನ್, ಚಂದ್ರಶೇಖರ್, ನಯನ, ನಾರಾಯಣಚಾರಿ, ಶಿವಕುಮಾರ್, ವೆಂಕಟೇಶ್, ನವೀನ್ ಕುಮಾರ್ ಉಪಸ್ಥಿತರಿದ್ದರು.
-
State5 hours agoಚೆನ್ನಮ್ಮ ಅಂತ್ಯಕ್ರಿಯೆ: ವಿಡಿಯೋ ಕಾನ್ಫರೆನ್ಸ್ ಮೂಲಕ ಭಾಗವಹಿಸಲು ಪ್ರಜ್ವಲ್ ರೇವಣ್ಣಗೆ ಅನುಮತಿ
-
Hassan19 hours agoಚೆನ್ನಮ್ಮ ಅಂತ್ಯಕ್ರಿಯೆ: ಹಾಸನದಲ್ಲಿ 5 ತಾತ್ಕಾಲಿಕ ಹೆಲಿಪ್ಯಾಡ್ಗಳ ನಿರ್ಮಾಣ
-
Chikmagalur19 hours agoಆನ್ಲೈನ್ ಟ್ರೇಡಿಂಗ್ ಹೆಸರಿನಲ್ಲಿ ₹14.67 ಲಕ್ಷ ವಂಚನೆ: ಸೈಬರ್ ಠಾಣೆಯಲ್ಲಿ ಪ್ರಕರಣ ದಾಖಲು
-
National5 hours agoಇಂದಿನಿಂದ ಸಂಸತ್ ಮುಂಗಾರು ಅಧಿವೇಶನ ಆರಂಭ
-
Kodagu22 hours agoಭಾಗಮಂಡಲ ಮೇಲ್ಸೇತುವೆ ಮತ್ತು ಸುತ್ತಲಿನ ಅಭಿವೃದ್ಧಿಗೆ 3 ಕೋಟಿ ಅನುದಾನ
-
Kodagu17 hours ago“ಭಾಗಮಂಡಲ ಕಾಮಗಾರಿಗೆ ₹3 ಕೋಟಿ: ಪೊನ್ನಣ್ಣ ಕೋರಿಕೆಗೆ ಅನುದಾನ”
-
Hassan5 hours agoಚೆನ್ನಮ್ಮ ಅಂತಿಮ ದರ್ಶನಕ್ಕೆ ಪ್ರಜ್ವಲ್ ಬರಲ್ಲ:
-
Hassan2 hours agoನೀಟ್–ಜೆಇಇ ಫಲಿತಾಂಶದಲ್ಲಿ ಹೊಸ ಇತಿಹಾಸ ಬರೆದ ಪಾಠಶಾಲಾ ನೀಟ್ ಅಕಾಡೆಮಿ
