Connect with us

Mandya

 ಫೆ.13ಕ್ಕೆ ಇತಿಹಾಸ ಪ್ರಸಿದ್ಧ ಶ್ರೀ ಮಲ್ಲಿಕಾರ್ಜುನ ಸ್ವಾಮಿ ದೇವಾಲಯದ ಮಹಾದ್ವಾರ ರಾಜಗೋಪುರ ಲೋಕಾರ್ಪಣೆ : ಶ್ರೀ ಸೋಮೇಶ್ವರನಾಥ ಸ್ವಾಮೀಜಿ

Published

on

ನಾಗಮಂಗಲ : ತಾಲೂಕಿನ ಹಾಲತಿ ಗ್ರಾಮದ ಶ್ರೀ ಮಲ್ಲಿಕಾರ್ಜುನ ಸ್ವಾಮಿ ದೇವಾಲಯದ ಮಹಾದ್ವಾರದ ನೂತನ ರಾಜಗೋಪುರ ಉದ್ಘಾಟನೆ ಮತ್ತು ಕುಂಭಾಭಿಷೇಕ ಕಾರ್ಯಕ್ರಮ ವು ಫೆಬ್ರವರಿ 13ರಂದು ನಡೆಯಲಿದೆ ಎಂದು ಆದಿಚುಂಚನಗಿರಿ ಶಾಖಾ ಮಠದ ಪೂಜ್ಯ ಶ್ರೀ ಸೋಮೇಶ್ವರನಾಥ ಸ್ವಾಮೀಜಿಗಳು ತಿಳಿಸಿದರು

ಅವರು ತಾಲೂಕಿನ ಶಾಖಾಮಠದಲ್ಲಿ ಪತ್ರಿಕಾಗೋಷ್ಠಿ ಏರ್ಪಡಿಸಿ ಮಾತನಾಡಿ, ಶ್ರೀ ಮಠವು ಆಯೋಜನೆ ಮಾಡಿರುವ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮಿಜಿಯವರ ದಿವ್ಯ ಆಶೀರ್ವಾದಗಳೊಂದಿಗೆ ಭ್ರಮರಾಂಬ ಸಮೇತ ಶ್ರೀ ಮಲ್ಲಿಕಾರ್ಜುನ ಸ್ವಾಮಿಯ ದೇವಾಲಯದ ಮಹಾ ದ್ವಾರದ 64 ಅಡಿಯ ನೂತನ ರಾಜಗೋಪುರದ ಉದ್ಘಾಟನೆ ಮತ್ತು ಕುಂಭಾಭಿಷೇಕ ಕಾರ್ಯಕ್ರಮವನ್ನು ಇದೇ ತಿಂಗಳು ಫೆ. 13ರಂದು ಶುಕ್ರವಾರ ಶ್ರೀ ನಿರ್ಮಲಾನಂದನಾಥ ಮಹಾಸ್ವಾಮೀಜಿಯವರ ಅಮೃತ ಹಸ್ತದಿಂದ ಲೋಕಾರ್ಪಣೆ ಮಾಡಲಿದ್ದಾರೆ.

ಇದೇ ಸಮಾರಂಭದಲ್ಲಿ ಧಾರ್ಮಿಕ ಪೂಜಾ ಕಾರ್ಯಕ್ರಮಗಳು ದಿನಾಂಕ 11. 12. ರಂದು ವಿವಿಧ ಪೂಜಾ ಕಾರ್ಯಕ್ರಮಗಳು ನಡೆಯಲಿದ್ದು ಫೆ.12 ರಂದು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಪೂಜಾ ಕಾರ್ಯಕ್ರಮಗಳಲ್ಲಿ ಅಕ್ಕಪಕ್ಕದ ಗ್ರಾಮದಿಂದ ಸುಮಾರು 60 ಗ್ರಾಮ ದೇವತೆಗಳು ಸೇರಲಿವೆ.

ಸಮಾರಂಭಕ್ಕೆ ನಾಡಿನ ಗಣ್ಯರು ಮುಖ್ಯಸ್ಥರು ಧಾರ್ಮಿಕ ಭಕ್ತರು ಆಗಮಿಸಲಿದ್ದಾರೆ. ಫೆ.13 ರಂದು ವಿವಿಧ ಧಾರ್ಮಿಕ ಪೂಜಾ ಕಾರ್ಯಕ್ರಮಗಳೊಂದಿಗೆ ನೂತನ ಗೋಪುರ ಶ್ರೀ ಮಲ್ಲಿಕಾರ್ಜುನ ಸ್ವಾಮಿಯ ರಥೋತ್ಸವ ಜರಗಲಿದೆ.

ಭಕ್ತಾದಿಗಳು ಇದೇ ಸಂದರ್ಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸ್ವಾಮಿಯ ಕೃಪೆಗೆ ಪಾತ್ರರಾಗಬೇಕೆಂದು ತಿಳಿಸಿದರು.

Continue Reading

Mandya

ಫೆ.13 ರಿಂದ 19 ರವರೆಗೆ ಪ್ರಜಾಪಿತ ಬ್ರಹ್ಮ ಕುಮಾರೀಸ್ ಈಶ್ವರೀಯ ವಿಶ್ವ ವಿದ್ಯಾಲಯದ ವತಿಯಿಂದ 90ನೇ ಮಹಾಶಿವರಾತ್ರಿ ಮಹೋತ್ಸವ

Published

on

ಮಂಡ್ಯ: ಪ್ರಜಾಪಿತ ಬ್ರಹ್ಮ ಕುಮಾರೀಸ್ ಈಶ್ವರೀಯ ವಿಶ್ವ ವಿದ್ಯಾಲಯದ ವತಿಯಿಂದ 90ನೇ ಮಹಾಶಿವರಾತ್ರಿ ಮಹೋತ್ಸವ ಮತ್ತು ಯುವ ಜನೋತ್ಸವ ಕಾರ್ಯಕ್ರಮವನ್ನು ಫೆ.13 ರಿಂದ 19ರವರೆಗೆ ಬೆಳಿಗ್ಗೆ 8 ರಿಂದ ರಾತ್ರಿ 9 ರವರೆಗೆ ನಗರದ ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ವಿಶ್ವ ವಿದ್ಯಾಲಯದ ಮುಖ್ಯಸ್ಥರಾದ ಶಾರದ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜನರಲ್ಲಿ ದೇವರ ಆದ್ಯಾತ್ಮ ಭಾವದ ಆಚರಣೆ ಮಹಾಶಿವರಾತ್ರಿಯ ಅಂಗವಾಗಿ ಕಾರ್ಯಕ್ರಮ ಯೋಜನೆ ಮಾಡಲಾಗಿದೆ ಎಂದರು.

ಏಳು ದಿನ ನಡೆಯಲಿರುವ ಕಾರ್‍ಯಕ್ರಮದಲ್ಲಿ 21 ಅಡಿ ಎತ್ತರದ ಶಿವಲಿಂಗ, ಭೂಲ್ ಬುಲಯ್ಯ, ಸ್ವರ್ಗ, ಮೈಂಡ್ ಸ್ಪಾ, ಉದ್ಬವಲಿಂಗ, ಸಹಸ್ರಲಿಂಗಗಳು ಆಕರ್ಷಣೆಯಾಗಲಿವೆ ಎಂದು ಹೇಳಿದರು.

ಗೋಷ್ಠಿಯಲ್ಲಿ ವಿಶ್ವವಿದ್ಯಾಲಯದ ವಿಜಯಲಕ್ಷ್ಮಿ ಹಾಜರಿದ್ದರು.

Continue Reading

Mandya

ಅನಿರ್ದಿಷ್ಟಾವಧಿ ಧರಣಿ ಮಾಡುತ್ತಿದ್ದ ಪ್ರತಿಭಟನಾಕಾರರನ್ನು ಬಂಧಿಸಿದ ಪೊಲೀಸರು

Published

on

ಮದ್ದೂರು:  ಮದ್ದೂರು ನಗರಸಭೆಗೆ ಗೆಜ್ಜಲಗೆರೆ ಗ್ರಾಮವನ್ನು ಸೇರ್ಪಡೆ ಮಾಡಿರುವುದನ್ನು ಖಂಡಿಸಿ ಸೋಮವಾರ ಬೆಂಗಳೂರು ಮೈಸೂರು ಹೆದ್ದಾರಿಯ ಸರ್ವೆ ರಸ್ತೆ ತಡೆ ನಡೆಸುತ್ತಿದ್ದ 80 ಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಿದರು.

ಮದ್ದೂರು ನಗರಸಭೆಗೆ ಗೆಜ್ಜಲಗೆರೆ ಗ್ರಾ.ಪಂ. ಸೇರ್ಪಡೆ ವಿರೋಧಿಸಿ ಗೆಜ್ಜಲಗೆರೆ ಗ್ರಾಮದ ಗ್ರಾ.ಪಂ.ಕಚೇರಿಯ ಮುಂದೆ ಗ್ರಾಮಸ್ಥರು ಹಾಗೂ ರೈತ ಸಂಘದ ಕಾರ್ಯಕರ್ತರು ಅನಿರ್ದಿಷ್ಟಾವಧಿ ಧರಣಿ ಪ್ರತಿಭಟನೆಯನ್ನು ನಡೆಸುತ್ತಿದ್ದರು.


ಧರಣಿ ಪ್ರತಿಭಟನೆಯು 50 ದಿನ ಪೂರೈಸಿದ ಹಿನ್ನೆಲೆಯಲ್ಲಿ ಸೋಮವಾರ ರೈತ ಪರ ಹೋರಾಟಗಾತಿ ಸುನಂದಾ ಜಯರಾಮ್ ನೇತೃತ್ವದಲ್ಲಿ ಸುಮಾರು 300 ಕ್ಕೂ ಹೆಚ್ಚು ಗ್ರಾಮಸ್ಥರು ಮೈಸೂರು ಬೆಂಗಳೂರು ಸವರ್ಿಸ್ ಹೆದ್ದಾರಿಯಲ್ಲಿ ಸಂಚಾರ ತಡೆ ಮಾಡಿ ಪ್ರತಿಭಟನೆಯನ್ನು ನಡೆಸುತ್ತಿದರು.

ಎತ್ತಿನಗಾಡಿ ಹಾಗೂ ಜಾನುವಾರುಗಳೊಂದಿಗೆ ಗ್ರಾಮಸ್ಥರು ಆಗಮಿಸಿ ಮಹಾತ್ಮ ಗಾಂಧೀಜಿ ಭಾವಚಿತ್ರದೊಂದಿಗೆ ಹೆದ್ದಾರಿಯಲ್ಲೇ ಕುಳಿತು ರಾಜ್ಯ ಸರ್ಕಾರ, ಜಿಲ್ಲಾಡಳಿತ ಹಾಗೂ ತಾಲೂಕು ಆಡಳಿತ ಹಾಗೂ ಶಾಸಕರ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.


ಅದಕ್ಕೂ ಮೊದಲು ತಹಸೀಲ್ದಾರ್ ಪರಶುರಾಮ್ ಸತ್ತಿಗೇರಿರವರು ರಸ್ತೆ ತಡೆಯನ್ನು ಕೈಬಿಡಲು ಪ್ರತಿಭಟನಾ ಕಾರರನ್ನು ಮನವೊಲಿಸಲು ಪ್ರಯತ್ನಿಸಿದರಾದರೂ ಪ್ರಯೋಜವಾಗಲಿಲ್ಲ. ನಂತರ ಹೆಚ್ಚಿನ ಸಂಖ್ಯೆಯಲ್ಲಿದ್ದ ಪೊಲೀಸರು ರೈತ ಪರ ಹೋರಾಟಗಾತಿ ಸುನಂದಾ ಜಯರಾಮು, ಲಿಂಗಪ್ಪಾಜಿ, ಶಂಕರ್, ಜಿ.ಪಿ.ಯೋಗೇಶ್, ವೀರಪ್ಪ, ಚಂದ್ರಶೇಖರ, ಗೌರಮ್ಮ, ಜಯಮ್ಮ ಸೇರಿದಂತೆ ಸುಮಾರು 80 ಕ್ಕೂ ಹೆಚ್ಚು ಪ್ರತಿಟನಾಕಾರರನ್ನು ವಶಕ್ಕೆ ಪಡೆದು 3 ವಾಹನಗಳಲ್ಲಿ ಮಂಡ್ಯದ ಪೊಲೀಸ್ ಠಾಣೆಗೆ ಕರೆದೋಯ್ದರು.

ಪ್ರತಿಭಟನೆಯಲ್ಲಿ ಹಿನ್ನೆಲೆಯಲ್ಲಿ ಕೆಲಕಾಲ ರಸ್ತೆ ಸಂಚಾರ ಅಸ್ತವ್ಯಸ್ತಗೊಂಡಿತ್ತು. ರೈತ ಪರ ಹೋರಾಟಗಾತಿ ಸುನಂದಾ ಜಯರಾಮ್ ಮಾತನಾಡಿ, ನಗರಸಭೆಗೆ ಗೆಜ್ಜಲಗೆರೆ ಗ್ರಾಮವನ್ನು ಸೇರ್ಪಡೆ ಮಾಡಿರುವ ಕ್ರಮ ಖಂಡಿಸಿ ಗ್ರಾಮಸ್ಥರು ನಿರಂತರವಾಗಿ 50 ದಿನಗಳ ಹೋರಾಟವನ್ನು ನಡೆಸುತ್ತಿದ್ದರೂ, ಸಕರ್ಾರದ ಯಾವುದೇ ಪ್ರತಿನಿಧಿಗಳು ಅಧಿಕಾರಿಗಳು ರೈತರ, ಗ್ರಾಮಸ್ಥರು ಆಶೋತ್ತರಗಳಿಗೆ ಸ್ಪಂದಿಸದೆ ನಿರ್ಲಕ್ಷ ಮಾಡಿದ್ದಾರೆ ಎಂದು ಆರೋಪಿಸಿದರು.

ಇದರ ವಿರುದ್ಧವಾಗಿ ಗೆಜ್ಜಲಗೆರೆ ಹೆದ್ದಾರಿಯಲ್ಲಿ ಸರ್ವಿಸ್‌ ರಸ್ತೆ ತಡೆಯಲು ಗ್ರಾಮಸ್ಥರು ಒಗ್ಗಟ್ಟಿನಿಂದ ಹೋರಾಟ ಮಾಡಲು ಹೊರಟಾಗ ತಾಲೂಕು ಆಡಳಿತ ಮತ್ತು ಜಿಲ್ಲಾಡಳಿತ ಅವಕಾಶ ಮಾಡಿಕೊಡದೆ ರೈತರ ಹೋರಾಟವನ್ನು ದಿಕ್ಕು ತಪ್ಪಿಸುವ ಸಲುವಾಗಿ ರೈತರನ್ನು, ಮಹಿಳೆಯರು ಮತ್ತು ಗ್ರಾಮಸ್ಥರನ್ನು ಭಯಭೀತರನ್ನಾಗಿ ಮಾಡುವ ಉದ್ದೇಶದಿಂದ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಸುಮಾರು 80 ಕ್ಕೂ ಹೆಚ್ಚು ಗ್ರಾಮಸ್ಥರನ್ನು ಬಂಧಿಸಿರುವುದು ಖಂಡನೀಯವೆಂದು ಆಕ್ರೋಶ ವ್ಯಕ್ತಪಡಿಸಿದರು.

ಗೆಜ್ಜಲಗೆರೆ ಗ್ರಾಪಂಯನ್ನು ಮದ್ದೂರು ನಗರಸಭೆಯಿಂದ ಕೈ ಬಿಡುವತನಕ ಅನಿರ್ದಿಷ್ಟಾವಧಿ ಧರಣಿ ಪ್ರತಿಭಟನೆಯನ್ನು ನಿರಂತರವಾಗಿ ಮುಂದುವರೆಸಲಾಗುವುದು ಹಾಗೂ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ರೂಪಿಸಲಾಗುವುದು ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ಅಪರ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ತಿಮ್ಮಯ್ಯ, ಡಿವೈಎಸ್ಪಿ ಯಶವಂತ ಕುಮಾರ್, ಸಿಪಿಐ ನವೀನ್ ಕುಮಾರ್ ನೇತೃತ್ವದಲ್ಲಿ ನೂರಾರು ಮಂದಿ ಪೊಲೀಸ್ ಸಿಬ್ಬಂದಿ ಬಂದೋಬಸ್ತ್ನಲ್ಲಿ ಭಾಗವಹಿಸಿದರು.

ಪ್ರತಿಭಟನೆಯಲ್ಲಿ ರೈತ ಮುಖಂಡರಾದ ಚಂದ್ರಶೇಖರ್, ಲಿಂಗಪ್ಪಾಜಿ, ಮುದ್ದೇಗೌಡ್ರು, ಕೆ.ಬೊರೇಗೌಡ, ವಿರೇಶ್, ಗುರುಮೂತರ್ಿ, ಮಂಜಣ್ಣ, ಜಗದೀಶ್, ರಾಮಲಿಂಗಯ್ಯ, ಯೋಗೇಶ್ ಸೇರಿದಂತೆ ಇತರರು ಇದ್ದರು.

Continue Reading

Mandya

ಕೆಲವು ತತ್ವಗಳನ್ನು ಆಧರಿಸಿ ಕೇಂದ್ರದ ಬಜೆಟ್ ಮಂಡಿಸಲಾಗಿದೆ : ಡಾ.ಸಿ.ಎನ್.ಅಶ್ವತ್‌ನಾರಾಯಣ್

Published

on

ಮಂಡ್ಯ: ಕೆಲವು ತತ್ವಗಳನ್ನು ಆಧರಿಸಿ ಕೇಂದ್ರದ ಬಜೆಟ್ ಮಂಡಿಸಲಾಗಿದೆ. ಅಸ್ಪಷ್ಟತೆಗಿಂತ ಕ್ರಿಯೆ. ಆಡಂಭರಕ್ಕಿಂತ ಸುಧಾರಣೆಗೆ, ಜನಪ್ರಿಯತೆಗಿಂತ ಜನ ಹಿತಕ್ಕೆ ಒತ್ತು ನೀಡಲಾಗಿದೆ ಎಂದು ಮಾಜಿ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್‌ನಾರಾಯಣ್ ತಿಳಿಸಿದರು.

ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕರ್ತವ್ಯ ಭವನದಲ್ಲಿ ಮಂಡನೆಯಾದ ಮೊದಲ ಬಜೆಟ್ ಇದಾಗಿದೆ. ಆತ್ಮ ನಿರ್ಭರ ಭಾರತ್, ಸ್ವಾವಲಂಭಿ ವಿಕಸಿತ ಭಾರತವನ್ನು ಗುರಿಯಾಗಿಸಿಕೊಂಡು, ಉದ್ಯೋಗ ಸೃಷ್ಠಿ, ಕೃಷಿ ಉತ್ಪಾದನೆ, ನಾಗರೀಕರು ಕೊಳ್ಳುವ ಉದ್ದೇಶದಿಂದ ಬಜೆಟ್ ತಯಾರಿಸಲಾಗಿದೆ. ಆರ್ಥಿಕ ಕ್ಷೇತ್ರಕ್ಕೆ ವೇಗನೀಡುವುದು, ನಾಗರೀಕ ಆಶಯಗಳನ್ನು ಈಡೇರಿಸುವುದು, ಆಡಳಿತದಲ್ಲಿ ತಂತ್ರಜ್ಞಾನ ಅಳವಡಿಸುವ ೩ ಭಾಗವಾಗಿ ವಿಂಗಡಿಸಲಾಗಿದೆ ಎಂದರು.


ಪ್ರತಿನಿತ್ಯ ಹೆಚ್ಚಿನ ಸುಧಾರಣೆ ತರಲು 350 ಅಂಶಗಳ ಆಧಾರದಲ್ಲಿ ಬಜೆಟ್ ಮಂಡಿಸಲಾಗಿದೆ. ನಿಯಂತ್ರಕ ಸುಧಾರಣೆಗಳ ಸಮಿತಿ, ಜನ್‌ವಿಶ್ವಾಸ್ ಕಾಯ್ದೆ, ಬ್ಯಾಂಕಿಂಗ್ ಸುಧಾರಣೆ, ಆರ್ಥಿಕ ಬೆಳವಣಿಗೆ ಮತ್ತು ಹಣಕಾಸು ಶಿಸ್ತು, ಮಧ್ಯಮವರ್ಗದ ಸಬಲೀಕರಣ, ಕೌಶಲ್ಯಾಭಿವೃದ್ಧಿ, ಉದ್ಯೋಗ ಸೃಷ್ಠಿ, ಗುಣಮಟ್ಟದ ಶಿಕ್ಷಣದ ಮೂಲಕ ಯುವಶಕ್ತಿ ಸಬಲೀಕರಣ, ಸಣ್ಣ ಉದ್ಯಮಗಳ ಸಾಮರ್ಥ್ಯದ ಅನಾವರಣ, ಬೃಹತ್ ಪ್ರಮಾಣದ ಉತ್ಪಾದನಾ ವಿಸ್ತರಣೆ, ಮೂಲ ಸೌಕರ್ಯ ಆಧಾರಿತ ಬೆಳವಣಿಗೆ ಸೇರಿದಂತೆ ಹಲವು ಅಭಿವೃದ್ಧಿ ಸಹಿತ ಸುಧಾರಣೆಗಳ ಅಂಶ ಬಜೆಟ್‌ನಲ್ಲಿದೆ ಎಂದು ಹೇಳಿದರು.

ರಾಜ್ಯದಲ್ಲಿ ದೇಶದ ಶೇ.80 ರಿಂದ 90 ಷ್ಟು ವಿದ್ಯುತ್ ಉಪಕರಣಗಳ ವಿನ್ಯಾಸವಾಗುತ್ತಿದೆ. ಬೆಂಗಳೂರಿನಲ್ಲಿ ಅತಿ ಹೆಚ್ಚು ಉತ್ಪಾದನೆ, ಅತ್ಯುತ್ತಮ ಭದ್ರತೆ ಆಧಾರಿತ ಉಪಕರಣ ಉತ್ಪಾದನೆ ಕರ್ನಾಟಕದಲ್ಲೇ ಆಗುತ್ತಿದೆ. ಕರ್ನಾಟಕದಲ್ಲಿ ಕೈಗಾರಿಕೆಗಳಿಗೆ ಬೇಡಿಕೆಗಳನ್ನು ಪೂರೈಸಲು ಸಾಧ್ಯವಾಗುತ್ತಿಲ್ಲ. ಕೈಗಾರಿಗಳು ಬೆಂಗಳೂರು ಸುತ್ತಮುತ್ತಲಲ್ಲಿ ಜಮೀನಿಗೆ ಮುಂದಾಗುತ್ತಿದ್ದಾರೆ. ಮಂಡ್ಯದ ನಾಗಮಂಗಲ, ಕೆ.ಆರ್.ಪೇಟೆಯಲ್ಲಿ, ರಾಮನಗರ ಜಿಲ್ಲೆಗಳಲ್ಲಿ ಕೈಗಾರಿಕೆ ವಿಸ್ತರಣೆ ಪ್ರಯತ್ನಿಸಲಾಗುತ್ತಿದೆ. ಕರ್ನಾಟಕ ರಾಜ್ಯ ಕೈಗಾರಿಕೆಗೆ ಆದ್ಯತೆ ರಾಜ್ಯವಾಗಿದೆ ಎಂದು ನುಡಿದರು.

ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಕೇಂದ್ರದ ವಾಣಿಜ್ಯ ಸಚಿವರೊಂದಿಗೆ ಮಾತನಾಡಿದ್ದಾರೆ. ಆದರೆ ರಾಜ್ಯ ಸರಕಾರ ಸ್ಪಂಧಿಸಿದರೆ ಕೈಗಾರಿಕೆ ತರಲು ಸಾಧ್ಯವಾಗುತ್ತದೆ. ಕೈಗಾರಿಕೆ ಸ್ಥಾಪಿಸುವ ವ್ಯಕ್ತಿತ್ವ, ಶಕ್ತಿ ಕುಮಾರಸ್ವಾಮಿ ಅವರಲ್ಲಿದೆ ಎಂದು ಉತ್ತರ ನೀಡಿದರು.

ತೆರಿಗೆ ಹಂಚಿಕೆಯನ್ನು ಸಂವಿಧಾನಿಕ ಸಂಸ್ಥೆಯಾದ ಹಣಕಾಸು ಆಯೋಗ ಮಾಡಲಿದೆ. ಈ ಸಂಸ್ಥೆ ಪಾರದರ್ಶಕ ಸಂಸ್ಥೆಯಾಗಿದ್ದು, ಸರಕಾರದ ಹಸ್ತಕ್ಷೇಪವಿಲ್ಲ, ಎಲ್ಲ ರಾಜ್ಯ ಸರಕಾರವನ್ನು ವಿಶ್ವಾಸಕ್ಕೆ ಪಡೆದು ತೆರಿಗೆ ಹಂಚಲಾಗುತ್ತದೆ. 16ನೇ ಆಯೋಗದ ಹಂಚಿಕೆಯಂತೆ ಶೇ.0.50ರಷ್ಟು ಹಂಚಿಕೆಯಲ್ಲಿ ಹೆಚ್ಚಳವಾಗಿರುವುದು ಸಂತಸದ ವಿಷಯ ಎಂದು ಹೇಳಿದರು.

ಮೈಸೂರು ವಿವಿಯ ಮೇಲೆ ಆಧಾರವಾಗಿದ್ದಾಗ ಮೈಸೂರು ಜಿಲ್ಲೆಯಲ್ಲಿ ಶೇ.50ರಷ್ಟು, ಮಂಡ್ಯ, ಚಾಮರಾಜನಗರ, ಹಾಸನ ಜಿಲ್ಲೆಗಳಲ್ಲಿ ಶೇ.10ರಷ್ಟು ಪದವೀಧರರ ಸೃಷ್ಠಿಯಾಗತ್ತುತ್ತು. ಎಲ್ಲ ಜಿಲ್ಲೆಗಳು ಮುಕ್ತವಾಗಿ ಶೈಕ್ಷಣಿ ಸಮಸ್ಯೆಗಳನ್ನು ಚರ್ಚಿಸಲು ಸಾಧ್ಯವಾಗುತ್ತಿರಲಿಲ್ಲ. ಆಯಾ ಜಿಲ್ಲೆಯಲ್ಲಿ ವಿಶ್ವವಿದ್ಯಾಲಯಗಳ ಸೃಷ್ಠಿಯಿಂದ ಶೈಕ್ಷಣಿಕ ಗುಣಮಟ್ಟ, ಸಮಸ್ಯೆಗಳ ಇತ್ಯರ್ಥ ಶೇಕಡಾವಾರು ಹೆಚ್ಚಾಗಿದೆ ಎಂದರು.

ಬಿಜೆಪಿ, ಜೆಡಿಎಸ್ ಪಕ್ಷಗಳ ಮೈತ್ರಿಯು ದೇವೇಗೌಡರು ಹಾಗೂ ನರೇಂದ್ರ ಮೋದಿ ಅವರ ಮಟ್ಟದಲ್ಲಿ ಆಗಿದೆ. ರಾಷ್ಟ್ರದಲ್ಲಿ ಕಾಂಗ್ರೆಸ್‌ಗೆ ಪಯಾರ್ಯವಾದ ವ್ಯವಸ್ಥೆ ಸೃಷ್ಠಿಸುವಲ್ಲಿ ಮೈತ್ರಿ ಯಶಸ್ವಿಯಾಗಿ ಕೆಲಸ ನಿರ್ವಹಿಸಿದ್ದು, ಕಾಂಗ್ರೆಸ್ ಈಗ ರಾಷ್ಟ್ರೀಯ ಪಕ್ಷವಾಗಿ ಉಳಿದಿಲ್ಲ. ರಾಷ್ಟ್ರ ಮಟ್ಟದಲ್ಲಿ ಸಕ್ರಿಯಾಗಿರುವ ಮೈತ್ರಿಯು ರಾಜ್ಯ, ಜಿಲ್ಲಾ ಮಟ್ಟದಲ್ಲಿ ಮುಂದುವರೆಯಲಿದೆ ಎಂದು ತಿಳಿಸಿದರು.

ಮೆಟ್ರೋ ದರ ಏರಿಕೆ ಮಾಡಲು ಬೆಂಗಳೂರು ದೇಶದ ನಂಬರ್ 1 ನಗರವಲ್ಲ. ಆಯಾ ನಗರದ ರಾಜ್ಯದ ಸದಸ್ಯರುಳ್ಳ ಸದಸ್ಯರಿಂದಲೇ ಮೆಟ್ರೊ ದರ ನಿಗದಿಯಾಗಲಿದೆ. ನಗರದಲ್ಲಿ ವಾಹನ ಸಂಚಾರ ಕಷ್ಟವಾಗಿದೆ. ಆದ್ದರಿಂದ ಮೆಟ್ರೊ, ಸಾರಿಗೆ, ರೈಲ್ವೆಗೆ ಸರಕಾರ ಆದ್ಯತೆ ನೀಡುತ್ತಿಲ್ಲ. ಜನರಿಗೆ ಕೈಗೆಟುವ ದರ ನಿಗದಿ ಮಾಡುವ ನಿಟ್ಟಿನಲ್ಲಿ ಈಗಿರುವ ದರಕ್ಕೆ ಸಬ್ಸಿಡಿ ಘೋಷಿಸಿ ಶೇ.೫೦ರಷ್ಟು ಇಳಿಸಬೇಕು. ನಿರ್ವಹಣೆ ಕಷ್ಟವಾದಲ್ಲಿ ಬೆಂಗಳೂರು ನಗರವನ್ನು ಕೇಂದ್ರಕ್ಕೆ ಹಸ್ತಾಂತರಿಸಬೇಕು ಎಂದು ಒತ್ತಾಯಿಸಿದರು.

ಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಡಾ.ಇಂದ್ರೇಶ್, ಮುಖಂಡರಾದ ಸಚ್ಚಿದಾನಂದ, ಅಶೋಕ್ ಜಯರಾಂ, ಡಾ.ಸಿದ್ದರಾಮಯ್ಯ, ಎಸ್.ಪಿ.ಸ್ವಾಮಿ ಇತರರಿದ್ದರು.

Continue Reading

Trending

error: Content is protected !!