Mandya
ಸರ್ಕಾರಿ ಶಾಲೆಯಲ್ಲಿ ಮಕ್ಕಳಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ವ್ಯಕ್ತಿಯ ಬಂಧನ
ಮೇಲುಕೋಟೆ(ಪಾಂಡವಪುರ) : ಸರ್ಕಾರಿ ಪ್ರೌಢಶಾಲೆಯಲ್ಲಿ ಕ್ರೀಡೆ ಹೇಳಿ ಕೊಡುವ ನೆಪದಲ್ಲಿ ಶಾಲೆಯ ಹತ್ತಾರು ವಿದ್ಯಾರ್ಥಿನೀಯರಿಗೆ ಲೈಂಗಿಕ ಕಿರುಕುಳ ನೀಡುವ ಜತೆಗೆ ಅರೆನಗ್ನ ಚಿತ್ರಗಳನ್ನು ತಗೆದು ಬ್ಲಾಕ್ ಮೇಲ್ ಮಾಡುತ್ತಿದ್ದ ಆರೋಪದಡಿ ವ್ಯಕ್ತಿಯೋರ್ವನ ವಿರುದ್ಧ ಮೇಲುಕೋಟೆ ಪೊಲೀಸ್ ಠಾಣೆಯಲ್ಲಿ ಫೋಕ್ಸ್ ಪ್ರಕರಣ ದಾಖಲಾಗಿದೆ.
ಮೇಲುಕೋಟೆ ಹೋಬಳಿಯ ಅಮೃತಿ ಗ್ರಾಮದ ಯೋಗಿ ಎಂಬಾತ ಲೈಂಗಿಕ ಕಿರುಕುಳದ ಆರೋಪದಡಿ ಬಂಧಿತ ವ್ಯಕ್ತಿಯಾಗಿದ್ದು, ಆತ ಜಕ್ಕನಹಳ್ಳಿ ಸರ್ಕಾರಿ ಪ್ರೌಢಶಾಲೆ ಹಳೆಯ ವಿದ್ಯಾರ್ಥಿಯೂ ಆಗಿದ್ದ ಎನ್ನಲಾಗಿದೆ.
ಇದೀಗ ಸ್ವಯಂ-ಸೇವಕನಾಗಿ ಅದೇ ಶಾಲೆಯ ವಿದ್ಯಾರ್ಥಿಗಳಿಗೆ ಕ್ರೀಡೆ ಮತ್ತು ಚಿತ್ರಕಲೆಗಳನ್ನು ಹೇಳಿಕೊಡುತ್ತಿದ್ದ ಎನ್ನಲಾಗಿದ್ದು, ತನ್ನ ಹುದ್ದೆಯನ್ನೇ ಬಳಸಿಕೊಂಡು ಅಪ್ರಾಪ್ತ ವಿದ್ಯಾರ್ಥಿನಿಯರಿಗೆ ಬ್ಲಾಕ್ಮೇಲ್ ಮಾಡಿ ಲೈಗಿಂಕ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ.
ಆರೋಪಿಯ ವರ್ತನೆಯಿಂದ ಬೇಸತ್ತ ಶಾಲಾ ವಿದ್ಯಾರ್ಥಿಗಳು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳಿಗೆ ಆರೋಪಿ ನೀಡುತ್ತಿದ್ದ ಕಿರುಕುಳದ ಬಗ್ಗೆ ಎಳೆ ಎಳೆಯಾಗಿ ವಿವರಿಸಿ ಪತ್ರ ಬರೆದ ಹಿನ್ನೆಲೆಯಲ್ಲಿ ಪ್ರಕರಣ ಬೆಳಕಿಗೆ ಬಂದಿದೆ. ಈ ಬಗ್ಗೆ ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ಎಸ್.ಎಂ.ಶೈಲಜಾ ಅವರು ನೀಡಿರುವ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ನಮಗೆ ಕ್ರೀಡೆಯಲ್ಲಿ ಆಸಕ್ತಿ ಇರುವ ಕಾರಣ ಆರೋಪಿ ಯೋಗಿಯನ್ನು ಅಣ್ಣನೆಂದು ಭಾವಿಸಿ ಕಲಿಯುತ್ತಿದ್ದೆವು. ಆದರೆ ಆತ ನಮಗೆ ಮೋಸ ಮಾಡಿದ. ಕ್ರೀಡಾ ಕೊಠಡಿಯಲ್ಲಿ ರಾತ್ರಿವರೆಗೂ ಇರುತ್ತಿದ್ದ. ನಾವು ಬಟ್ಟೆ ಬದಲಾಯಿಸುವಾಗ ಮತ್ತಿತ್ತರ ಸಂದರ್ಭಗಳಲ್ಲಿ ನಮ್ಮ ಅರೆನಗ್ನತೆಯ ಫೋಟೋಗಳನ್ನು ಕ್ಲಿಕ್ಕಿಸಿ ಅದನ್ನೇ ಮುಂದಿಟ್ಟುಕೊಂಡು ಬೆದರಿಸಿ ಲೈಗಿಂಕ ಕಿರುಕುಳ ನೀಡುತ್ತಿದ್ದ. ಇದಕ್ಕೆ ಒಪ್ಪದಿದ್ದರೆ ನಮ್ಮ ಪಾಲಕರ ವ್ಯಾಟ್ಸಪ್ ಗ್ರೂಪ್ಗಳಿಗೆ ಫೋಟೋಗಳನ್ನು ಕಳುಹಿಸುವುದಾಗಿ ಬೆದರಿಕೆ ಒಡ್ಡುತ್ತಿದ್ದ. ಇದರಿಂದ ನಾವು ಮಾನಸಿಕವಾಗಿ ಅನುಭವಿಸಿದ ನೋವು ಹೇಳತೀರದು. ಕೆಲವೊಮ್ಮೆ ಆತ್ಮಹತ್ಯೆ ಮಾಡಿಕೊಳ್ಳಬೇಕು ಎಂಬ ನಿರ್ಧಾರಕ್ಕೂ ಯೋಚಿಸಿದ್ದೇವೆ ಎಂದು ಪೊಲೀಸರ ಮುಂದೆ ವಿದ್ಯಾರ್ಥಿಗಳು ಅಳಲು ತೋಡಿಕೊಂಡಿರುವುದಾಗಿ ತಿಳಿದು ಬಂದಿದೆ.
Mandya
*ಹೊಸ ಮತದಾರರನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ರಾಷ್ಟಿçÃಯ ಮತದಾರರ ದಿನಾಚರಣೆ : ನ್ಯಾ.ಎಂ.ಡಿ ರೂಪ*
*ಹೊಸ ಮತದಾರರನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ರಾಷ್ಟಿçÃಯ ಮತದಾರರ ದಿನಾಚರಣೆ : ನ್ಯಾ.ಎಂ.ಡಿ
ರೂಪ*
ಶ್ರೀರಂಗಪಟ್ಟಣ : ಹೊಸ ಮತದಾರರನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ರಾಷ್ಟಿçÃಯ ಮತದಾರರ ದಿನಾಚರಣೆಯನ್ನ ಆಚರಿಸಲಾಗುತ್ತಿದೆ ಎಂದು ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ತಾಲೂಕು ಕಾನೂನು ಸೇವಾ ಸಮಿತಿ ಅಧ್ಯಕ್ಷರಾದ ಎಂ.ಡಿ ರೂಪ ಹೇಳಿದರು.
ಪಟ್ಟಣದ ಶ್ರೀರಂಗನಾಥ ಕಲ್ಯಾಣ ಮಂಟಪದಲ್ಲಿ ಸಹಾಯಕ ಮತದಾರರ ನೊಂದಣಾಧಿಕಾರಿ, ತಾಲೂಕು ಆಡಳಿತ ಹಾಗೂ ಕಾನೂನು ಸೇವಾ ಸಮಿತಿ ಸಹಯೋಗದೊಂದಿಗೆ ನಡೆದ ರಾಷ್ಟೀಯ ಮತದಾರರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಭಾರತದ ಚುನಾವಣಾ ಆಯೋಗದ ಸಂಸ್ಥಾಪನಾ ದಿನವನ್ನು ಗುರುತಿಸಲು ೨೦೧೧ ರಿಂದ ಪ್ರತಿ ವರ್ಷ ಜ. ೨೫ ರಂದು ದೇಶಾದ್ಯಂತ ರಾಷ್ಟೀಯ ಮತದಾರರ ದಿನವನ್ನು ಆಚರಿಸಲಾಗುತ್ತದೆ. ಹೊಸ ಮತದಾರರನ್ನು ಸೆಳೆಯುವ, ಮತದಾರರ ಸಂಖ್ಯೆಯನ್ನು ಹೆಚ್ಚಳ ಮಾಡುವ ನಿಟ್ಟಿನಲ್ಲಿ ಈ ದಿನವನ್ನು ಆಚರಣೆ ಮಾಡಲಾಗುತ್ತದೆ ಎಂದರು.
ಅಪರ ಹಿರಿಯ ಸಿವಿಲ್ ನ್ಯಾಯಾಧೀಶರಾದ ಹೆಚ್. ಮಹದೇವಪ್ಪ ಮಾತನಾಡಿ, ಭಾರತದ ಚುನಾವಣಾ ಆಯೋಗದ ಒಂದು ಸಾಂವಿಧಾನಿಕ ಸಂಸ್ಥೆಯಾಗಿದ್ದು, ಭಾರತದಲ್ಲಿ ಶಾಸಕಾಂಗದ ಎಲ್ಲಾ ಹಂತಗಳಲ್ಲಿ ಮುಕ್ತ ಮತ್ತು ನ್ಯಾಯಯುತ ಚುನಾವಣೆಗಳನ್ನು ನಡೆಸುವ ಜವಾಬ್ದಾರಿಯನ್ನು ಹೊಂದಿದೆ. “ದೇಶದ ಮತದಾರರಿಗೆ ಮೀಸಲಾಗಿರುವ ಈ ದಿನವನ್ನು ಮತದಾರರಲ್ಲಿ ಜಾಗೃತಿ ಮೂಡಿಸಲು ಮತ್ತು ಚುನಾವಣಾ ಪ್ರಕ್ರಿಯೆಯ ತಿಳುವಳಿಕೆ ನೀಡಲು ಆಚರಣೆ ಮಾಡಲಾಗುತ್ತದೆ ಎಂದು ಹೇಳಿದರು.
ಇದೇ ವೇಳೆ ಕಾಲೇಜು ವಿದ್ಯಾರ್ಥಿಗಳು ಮತದಾರರ ಪ್ರತಿಜ್ಞಾ ವಿಧಿ ಸ್ವೀಕರಿಸಿದರು.
ನ್ಯಾಯಾಧೀಶರಾದ ಹರೀಶ್ಕುಮಾರ್, ಹನುಮಂತ ರಾಯಪ್ಪ, ತಹಸೀಲ್ದಾರ್ ಪರಶುರಾಮ್ ಸತ್ತಿಗೆರಿ, ಬಿಇಒ ಮಹೇಶ್, ಪುರಸಭೆ ಮುಖ್ಯಾಧಿಕಾರಿ ಎಂ.ರಾಜಣ್ಣ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು, ಕಂದಾಯ ಇಲಾಖೆ ನೌಕರರು, ಕಾಲೇಜು ವಿದ್ಯಾರ್ಥಿಗಳು ಇದ್ದರು.
Mandya
ಮಂಡ್ಯ ಜಿಲ್ಲಾಧಿಕಾರಿ ಡಾ: ಕುಮಾರ ಅವರಿಗೆ ಅತ್ಯುತ್ತಮ ಜಿಲ್ಲಾ ಚುನಾವಣಾಧಿಕಾರಿ ಪ್ರಶಸ್ತಿ
ಮಂಡ್ಯ : ಚುನಾವಣಾ ಆಯೋಗವು ಮಂಡ್ಯ ಜಿಲ್ಲೆಯ ಜಿಲ್ಲಾಧಿಕಾರಿ ಡಾ.ಕುಮಾರ ಅವರಿಗೆ 2024-25 ನೇ ಸಾಲಿನ ಅತ್ಯುತ್ತಮ ಜಿಲ್ಲಾ ಚುನಾವಣಾಧಿಕಾರಿಗಳು ಎಂದು ಪ್ರಶಸ್ತಿ ಪ್ರಕಟಿಸಿದ್ದು, ಇಂದು ಬೆಂಗಳೂರಿನಲ್ಲಿ ನಡೆದ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮದಲ್ಲಿ ಗೌರವಾನಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರಶಸ್ತಿ ನೀಡಿ ಗೌರವಿಸಿದರು
Mandya
ಜ.29 ರಂದು ನಬಾರ್ಡ್ ನೀತಿ ವಿರೋಧಿಸಿ ಪ್ರತಿಭಟನೆ
ಮಂಡ್ಯ: ರೈತರಿಗೆ ನೀಡುವ ಸಾಲ ಕಡಿತ ಮಾಡಿರುವ ನಬಾರ್ಡ್ ನೀತಿ ವಿರೋಧಿಸಿ, ಮೈಕ್ರೋ ಫೈನಾನ್ಸ್ ಹಾವಳಿ ಕಿರುಕುಳ ತಡೆಗಟ್ಟಲು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ಜನವರಿ ೨೯ರ ಬೆಳಿಗ್ಗೆ ೧೧ಗಂಟೆಗೆ ಬೆಂಗೂರಿನ ರಿಸರ್ವ್ ಬ್ಯಾಂಕ್ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ಸಂಘದ ಜಿಲ್ಲಾಧ್ಯಕ್ಷ ಎ.ಎಲ್.ಕೆಂಪೂಗೌಡ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸಕಾರ ಕಳೆದ ಮೂರು ವರ್ಷದಿಂದ ಕೃಷಿ ಕ್ಷೇತ್ರಕ್ಕೆ ನೀಡುವ ಸಾಲದ ಮೊತ್ತವನ್ನು ಕಡಿಮೆ ಮಾಡುತ್ತಿಲೇ ಬಂದಿದ್ದು, ಕಳೆದ ವರ್ಷ ರಾಜ್ಯಕ್ಕೆ ೫೬೦೦ ಕೋಟಿ ನೀಡಲಾಗಿದ್ದ ಸಾಲ ಪ್ರಸಕ್ತ ವರ್ಷಕ್ಕೆ ೨೩೪೦ಕ್ಕೆ ಇಳಿಸಿದೆ ಎಂದು ಆರೋಪಿಸಿದರು.
ರಾಜ್ಯಕ್ಕೆ ನೀಡುವ ಸಾಲದ ಮೊತ್ತವನ್ನು ಶೇ.೫೮ರಷ್ಟು ತಗ್ಗಿಸುವ ಮೂಲಕ ರಾಜ್ಯದ ಕೃಷಿ ವ್ಯವಸ್ಥೆಯನ್ನೇ ನಾಶ ಮಾಡಿದೆ. ರೈತರು ಹೆಚ್ಚು ಬಡ್ಡಿ ತೆತ್ತು ವಾಣಿಜ್ಯ ಬ್ಯಾಂಕುಗಳ ಮೊರೆ ಹೋಗಿ, ಖಾಸಗಿ ಸಾಲದ ಸುಳಿಗೆ ಸಿಲುಕೊಂಡು ಆತ್ಮಹತ್ಯೆಯ ಹಾದಿ ಹಿಡಿಯುವಂತಾಗಿದೆ. ಇದರಿಂದ ಸಂಪೂರ್ಣ ಕಾರ್ಪೋರೇಟ್ ಕಂಪನಿಗಳ ವಶಕ್ಕೆ ನೀಡಲು ಹುನ್ನಾರ ನಡೆಸುತ್ತಿದೆ ಎಂದು ದೂರಿದರು.
ರಾಜ್ಯದಲ್ಲಿ ಇತ್ತೀಚೆಗೆ ಮೈಕ್ರೋ ಫೈನಾನ್ಸ್ ಹಾವಳಿ ಹೆಚ್ಚಿದ್ದು, ಅವರ ಕಿರುಕುಳದಿಂದ ಗ್ರಾಮೀನ ಪ್ರದೇಶದ ಮಹಿಳೆಯರು ಹಾಗೂ ಇತರೆ ದುಡಿಯುವ ವರ್ಗ ಸಂಕಷ್ಟಕ್ಕೀಡಾಗಿದ್ದಾರೆ. ಇತ್ತೀಚೆಗೆ ರಾಮನಗರದಲ್ಲಿಯೂ ಮಹಿಳೆ ಆತ್ಮಹತ್ಯೆಗೆ ಶರಣಾದ ಪ್ರಕರಣ ನಡೆದಿದ್ದು, ಇದಕ್ಕೆ ಕೇಂದ್ರ ಸರ್ಕಾರದ ನಡೆಯೇ ಕಾರವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯಲ್ಲಿ ರಾಜ್ಯದ ಎಲ್ಲಾ ರೈತರು, ಸ್ವ ಸಹಾಯ ಸಂಘಗಳು ಹಾಗೂ ಕೃಷಿ ಪತ್ತಿನ ಸಹಕಾರ ಸಂಘಗಳು ಭಾಗವಹಿಸುವಂತೆ ಕರೆ ನೀಡಿದರು.
ಗೋಷ್ಠಿಯಲ್ಲಿ ಬೋರಾಪುರ ಶಂಕರೇಗೌಡ, ಲಿಂಗಪ್ಪಾಜಿ, ಅಣ್ಣಯ್ಯ, ವಿ.ಸಿ.ಉಮೇಶ್, ವಿಜಿಕುಮಾರ್, ಮಂಜು ಇತರರಿದ್ದರು.
-
Mysore19 hours ago
ಹೃದಯಾಘಾತದಿಂದ ಯುವರಾಜ ಕಾಲೇಜಿನ ಪ್ರಾಂಶುಪಾಲ ನಿಧನ
-
Mysore16 hours ago
ಲೋಕಾಯುಕ್ತ ಸರ್ಕಾರದ ಕೈಗೊಂಬೆ: ಸಿಎಂ ಕ್ಲೀನ್ ಚೀಟ್ಗೆ ಹಳ್ಳಿಹಕ್ಕಿ ಪ್ರತಿಕ್ರಿಯೆ
-
Kodagu20 hours ago
ಎ.ಸಿ.ಎಫ್ ಆಗಿ ವಾಟೇರಿರ ಕಾರ್ಯಪ್ಪ ಅಧಿಕಾರ ಸ್ವೀಕಾರ
-
Kodagu17 hours ago
ಕಡಂಗ ಪ್ರೀಮಿಯರ್ ಲೀಗ್ ಕ್ರಿಕೆಟ್ ಬಿಡ್ಡಿಂಗ್ ಪ್ರಕ್ರಿಯೆ
-
Kodagu15 hours ago
ಬೆಂಗಳೂರು ಒಕ್ಕಲಿಗ ಸಂಘದ ಸಹಯೋಗದೊಂದಿಗೆ ಪ್ರತಿಭಟನೆ ಸಿದ್ದತೆ
-
Kodagu20 hours ago
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ಅಲ್ಪಸಂಖ್ಯಾತರಿಗೆ ದಕ್ಕಬೇಕು
-
Hassan14 hours ago
ಈ ಸಲದ ಗಣರಾಜ್ಯೋತ್ಸವ ಸನ್ಮಾನಕ್ಕೆ ಅಪರೂಪದ ವೈದ್ಯ ಡಾ.ನಿತಿನ್ ಆಯ್ಕೆ
-
Mysore15 hours ago
ಸುತ್ತೂರು ಜಾತ್ರಾ ಮಹೋತ್ಸದಂದು ಹಸೆಮಣೆ ಏರಲಿದ್ದಾರೆ 155 ಜೋಡಿಗಳು