Connect with us

State

SSLC ಅಂತಿಮ ಪರೀಕ್ಷೆಯ ವೇಳಾಪಟ್ಟಿ ಪ್ರಕಟ – ವಿವರ

Published

on

SSLC ಪರೀಕ್ಷೆಯ ವೇಳಾಪಟ್ಟಿ ದಿನಾಂಕ
25-03-2024 ರ ಸೋಮವಾರ ಪ್ರಥಮ ಭಾಷೆ ಪರೀಕ್ಷೆ
-ಕನ್ನಡ,ತೆಲುಗು ,ಹಿಂದಿ,ಮರಾಠಿ, ತಮಿಳು,ಉರ್ದು,ಇಂಗ್ಲಿಷ್, +ಇಂಗ್ಲಿಷ್NCERT)
27-03-2024 ರಂದು ಸಮಾಜ ವಿಜ್ಞಾನ ಪರೀಕ್ಷೆ


30-03-2024 ರಂದು ,ವಿಜ್ಞಾನ ,ರಾಜ್ಯಶಾಸ್ತ್ರ, ಪರೀಕ್ಷೆ
02-04-2024 ರಂದು ಗಣಿತ,ಸಮಾಜ ಶಾಸ್ತ್ರ ಪರೀಕ್ಷೆ
03-04-2024 ಅರ್ಥಶಾಸ್ತ್ರ ಪರೀಕ್ಷೆ
ಬೆಳಗ್ಗೆ 10.15 ರಿಂದ ಮಧ್ಯಾಹ್ನ 1.30 ರ ವರೆಗೆ ನಡೆಯಲಿರೋ ಪರೀಕ್ಷೆ.

Continue Reading
Click to comment

Leave a Reply

Your email address will not be published. Required fields are marked *

State

ನಾಳೆಯಿಂದ ಚಳಿಗಾಲದ ಅಧಿವೇಶನ: ಸುವರ್ಣಸೌಧದಲ್ಲಿ ಸುತ್ತ ಹೈ ಆಲರ್ಟ್‌ 6,000 ಪೊಲೀಸ್‌ ಭದ್ರತೆ

Published

on

ಬೆಳಗಾವಿ: ನಾಳೆಯಿಂದ ನಡೆಯಲಿರುವ ಬೆಳಗಾವಿಯ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನಕ್ಕೆ ಕುಂದಾನಗರಿ ಸಕಲ ರೀತಿಯಲ್ಲಿ ಸಜ್ಜಾಗಿದೆ.

ಸಿಎಂ, ಡಿಸಿಎಂ, ಸಚಿವರು, ಶಾಸಕರು ಸೇರಿದಂತೆ ಸಚಿವಾಲಯದ ಅಧಿಕಾರಿಗಳು, ಸಿಬ್ಬಂದಿಗೆ ಊಟ, ವಸತಿ ವ್ಯವಸ್ಥೆ ಮಾಡಲಾಗಿದೆ. ಜಿಲ್ಲಾಡಳಿತದಿಂದ ಈಗಾಗಲೇ 3 ಸಾವಿರ ರೂಮ್ ಬುಕ್ ಆಗಿದ್ದು, ಸಿಎಂ ಮತ್ತು ಡಿಸಿಎಂಗೆ ಅತಿಥಿ ಗೃಹದಲ್ಲಿ  ವಾಸ್ತವ್ಯಕ್ಕೆ ವ್ಯವಸ್ಥೆ ಮಾಡಿದೆ.

6 ಸಾವಿರ ಪೊಲೀಸ್‌ ಭದ್ರತೆ

ಬೆಳಗಾವಿಯ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ಹಿನ್ನೆಲೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಈ ಬಾರಿ ಬೆಳಗಾವಿ ನಗರದಲ್ಲಿ ಹೆಚ್ಚುವರಿ ಭದ್ರತೆ ನಿಯೋಜನೆ ಮಾಡಲಾಗಿದೆ. ದೆಹಲಿ ಕೆಂಪು ಕೋಟೆ ಬಳಿ ಕಾರು ಸ್ಫೋಟ ಪ್ರಕರಣ ಬಳಿಕ ಎಚ್ಚೆತ್ತುಕೊಳ್ಳಲಾಗಿದ್ದು, ಅಧಿವೇಶನದ ವೇಳೆ ನಿಗಾ ವಹಿಸುವಂತೆ ಕೇಂದ್ರ ಗುಪ್ತಚರ ಇಲಾಖೆ ಮಾಹಿತಿ ನೀಡಿರುವ ಕಾರಣ  ಸುವರ್ಣಸೌಧದ ಸುತ್ತಮುತ್ತ ಹೈಅಲರ್ಟ್ ಘೋಷಣೆ ಮಾಡಲಾಗಿದೆ.

ಬೆಳಗಾವಿ ನಗರದಲ್ಲಿ ಹೆಚ್ಚುವರಿಯಾಗಿ 6 ಸಾವಿರ ಪೊಲೀಸರ ನಿಯೋಜನೆ ಮಾಡಲಾಗಿದ್ದು, ನಗರ ಪೊಲೀಸ್ ಆಯುಕ್ತ ಭೂಷಣ್ ಬೊರಸೆ ನೇತೃತ್ವದಲ್ಲಿ ಬಂದೋಬಸ್ತ್ ಕೈಗೊಳ್ಳಲಾಗಿದೆ. 6 ಎಸ್ಪಿ ದರ್ಜೆಯ ಪೊಲೀಸ್‌ ಅಧಿಕಾರಿಗಳು, 146 ಹಿರಿಯ ಪೊಲೀಸ್ ಅಧಿಕಾರಿಗಳು, 3,820 ಪೊಲೀಸ್ ಸಿಬ್ಬಂದಿ, 500 ಹೋಂ ಗಾರ್ಡ್ಸ್, 8 ಕ್ಷಿಪ್ರ ಕಾರ್ಯಪಡೆ, 10 ಡಿಎಆರ್ ತುಕಡಿ, 35 ಕೆಎಸ್‌ಆರ್‌ಪಿ ತುಕಡಿ, 1 ಬಿಡಿಡಿಎಸ್ ತಂಡ, 1 ಗರುಡಾ ಫೋರ್ಸ್, 16 ವಿಧ್ವಂಸಕ ಕೃತ್ಯ ತಪಾಸಣೆ ತಂಡಗಳು ಭದ್ರತೆಗಾಗಿ ನಿಯೋಜನೆಗೊಂಡಿವೆ. ಸುವರ್ಣ ವಿಧಾನಸೌಧ ಸುತ್ತಮುತ್ತ ಪೊಲೀಸ್ ಸರ್ಪಗಾವಲು ಇರಲಿದ್ದು, ಸುವರ್ಣ ಗಾರ್ಡನ್ ಮತ್ತು ಅಲಾರವಾಡ ಬಳಿ ಪ್ರತಿಭಟನೆಗಳಿಗೆ ಸ್ಥಳ ನಿಗದಿ ಮಾಡಲಾಗಿದೆ.
Continue Reading

Special

ಕರ್ನಾಟಕದಲ್ಲಿ 2.93 ಲಕ್ಷ ಹೊಸ BPL ಕಾರ್ಡ್ ಬಿಡುಗಡೆ : ನಿಮ್ಮ ಹೆಸರು ಹೊಸ ಪಟ್ಟಿಯಲ್ಲಿ ಇದೆಯೇ?

Published

on

ಕರ್ನಾಟಕ ಸರ್ಕಾರದಿಂದ ಬಡ ಕುಟುಂಬಗಳ ಸಹಾಯಕ್ಕಾಗಿ ಹೊಸ BPL (Below Poverty Line) ಕಾರ್ಡ್ ವಿತರಣೆ ಕಾರ್ಯ ನಡೆದಿದೆ. ರಾಜ್ಯದಾದ್ಯಂತ ಸುಮಾರು 2.93 ಲಕ್ಷ ಹೊಸ BPL ಕಾರ್ಡ್‌ಗಳು ಮಂಜೂರಾಗಿದ್ದು, ಅರ್ಜಿ ಸಲ್ಲಿಸಿದ ಕುಟುಂಬಗಳು ತಮ್ಮ ಹೆಸರು ಪಟ್ಟಿಯಲ್ಲಿ ಇದೆಯೇ ಎಂಬುದನ್ನು ಈಗಲೇ ಪರಿಶೀಲಿಸಬಹುದು.

ಹೊಸ BPL ಕಾರ್ಡ್ ಪಡೆಯಲು ಅರ್ಹರು:
•ಆರ್ಥಿಕವಾಗಿ ದುರ್ಬಲ ಮತ್ತು ಬಡ ಕುಟುಂಬಗಳು
•ಆದಾಯ ಮಿತಿ ಸರ್ಕಾರ ನಿಗದಿಪಡಿಸಿರುವ ಮಾನದಂಡಕ್ಕೆ ಒಳಪಡುವವರು
•ಹಿಂದಿನಿಂದಲೂ BPL ಕಾರ್ಡ್ ಸಲ್ಲಿಸಿದರೂ ಮಂಜೂರಾಗದ ಕುಟುಂಬಗಳು
•ಪರಿಶೀಲನಾ ಹಂತದಲ್ಲಿ ತಪ್ಪಾಗಿ APL ಪಟ್ಟಿಗೆ ಸೇರಿಸಲ್ಪಟ್ಟ ಕುಟುಂಬಗಳು

ಪಟ್ಟಿ ಪರಿಶೀಲನೆ ಮಾಡುವುದು ಹೇಗೆ?
•ಅಧಿಕೃತ ಸಾರ್ವಜನಿಕ ಪೋರ್ಟಲ್‌ಗೆ ಭೇಟಿ ನೀಡಿ ನಿಮ್ಮ ಜಿಲ್ಲೆ, ತಾಲ್ಲೂಕು ಮತ್ತು ಗ್ರಾಮ ಆಯ್ಕೆ ಮಾಡಿ
•ಕುಟುಂಬದ ಮುಖ್ಯಸ್ಥರ ಹೆಸರು ಅಥವಾ ರೇಷನ್ ಕಾರ್ಡ್ ಸಂಖ್ಯೆ ನಮೂದಿಸಿ
•‘Search’ ಒತ್ತಿದರೆ ಪಟ್ಟಿಯಲ್ಲಿ ನಿಮ್ಮ ವಿವರಗಳು ಕಾಣಿಸುತ್ತವೆ

ಈ ಹೊಸ ಹಂತದ ಮಹತ್ವ:
ಮುನ್ನಡೆಯ ವರ್ಷಗಳಲ್ಲಿ BPL ಕಾರ್ಡ್‌ಗಳ ಸಂಖ್ಯೆಯಲ್ಲಿ ಗೊಂದಲ, ಅನರ್ಹರ ಸೇರ್ಪಡೆ, ಅರ್ಹರು ಹೊರಬೀಳುವ ಸಮಸ್ಯೆ ಕಂಡುಬಂದ ಹಿನ್ನೆಲೆಯಲ್ಲಿ ಸರ್ಕಾರ ಸಂಪೂರ್ಣ ವಿಮರ್ಶೆ ನಡೆಸಿ ಹೊಸ ವ್ಯವಸ್ಥೆ ತರಲಾಗಿದೆ.

BPL ಕಾರ್ಡ್ ಪಡೆಯುವ ಪ್ರಯೋಜನಗಳು:
•ಅನ್ನಭಾಗ್ಯ ಯೋಜನೆಯಡಿ ಉಚಿತ/ಕಡಿಮೆ ದರದ ಧಾನ್ಯ
•ಸಿಲಿಂಡರ್, ಆರೋಗ್ಯ, ವಿದ್ಯಾಭ್ಯಾಸಕ್ಕೆ ಸಂಬಂಧಿಸಿದ ಅನೇಕ ಸರ್ಕಾರಿ ಯೋಜನೆಗಳ ಸೌಲಭ್ಯ
•ಮಹಿಳಾ ಮತ್ತು ಮಕ್ಕಳ ಕಲ್ಯಾಣ ಯೋಜನೆಗಳಿಗೆ ಅರ್ಹತೆ

ಅರ್ಹ ಕುಟುಂಬಗಳು ಯಾವುದೇ ವಿಳಂಬವಿಲ್ಲದೆ ಪಡಿತರ ಮತ್ತು ಸರ್ಕಾರದ ಕಲ್ಯಾಣ ಯೋಜನೆಗಳ ಪ್ರಯೋಜನ ಪಡೆಯಬಹುದು.ಕರ್ನಾಟಕದ 2.93 ಲಕ್ಷ ಹೊಸ BPL ಕಾರ್ಡ್ ವಿತರಣೆಯು ಹಲವು ಬಡ ಕುಟುಂಬಗಳಿಗೆ ನಿಜವಾದ ಆಶಾಕಿರಣ.

Continue Reading

State

ನಾಳೆ KSCA ಚುನಾವಣಾ ಮತದಾನ: ವೆಂಕಟೇಶ್‌ ಪ್ರಸಾದ್ v/s ಬ್ರಿಜೇಶ್ ಪಟೇಲ್ ಬಣಗಳ ಮಧ್ಯೆ ಜಿದ್ದಾಜಿದ್ದಿ

Published

on

ಬೆಂಗಳೂರು: ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್  ಚುನಾವಣಾ ಮತದಾನ ನಾಳೆ ನಡೆಯಲಿದ್ದು, ಮಾಜಿ ಕ್ರಿಕೆಟಿಗ ವೆಂಕಟೇಶ್ ಪ್ರಸಾದ್ ಬಣ ಮ ಬ್ರಿಜೇಶ್ ಪಟೇಲ್  ಬಣಗಳ ಮಧ್ಯೆ  ಭಾರೀ ಹಣಾಹಣಿ ನಡೆದಿದೆ.
ಚುನಾವಣೆಯನ್ನು ಸುತ್ತುವರಿದ ವಿವಾದಗಳ ನಡುವೆ ಇಂದು ಪ್ರಸಾದ್ ಬಣವೂ ಕೆಎಸ್‌ಸಿಎ ಸದಸ್ಯರೊಂದಿಗೆ ಸಂವಾದ ನಡೆಸಿತು.

ಪ್ಯಾಲೇಸ್ ಮೈದಾನದಲ್ಲಿ ಇಂದು ನಡೆದ ಸಂವಾದ ಕಾರ್ಯಕ್ರಮದಲ್ಲಿ ನೂರಾರು ಕೆಎಸ್‌ಸಿಎ ಸದಸ್ಯರು ಪಾಲ್ಗೊಂಡಿದ್ದರು. ಟೀಂ ಗೇಮ್ ಚೇಂಜರ್ಸ್ ಪರವಾಗಿ ಮಾಜಿ ಕ್ರಿಕೆಟಿಗರಾದ ಅನಿಲ್ ಕುಂಬ್ಳೆ, ವೆಂಕಟೇಶ್ ಪ್ರಸಾದ್ ಸೇರಿದಂತೆ ಹಲವರು ಭಾಗಿಯಾಗಿದ್ದರು. ಬ್ರಿಜೇಶ್ ಬಣದ ಆಡಳಿತದ ವೈಫಲ್ಯಗಳನ್ನು ಪ್ರಸಾದ್ ಬಣವು ಪಿಪಿಟಿ ಮೂಲಕ ಸದಸ್ಯರಿಗೆ ವಿವರಣೆ ನೀಡಿತ್ತು.

ಸಂವಾದದ ನಂತರ ಮಾತನಾಡಿದ ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ ಪ್ರಸ್ತುತ ಆಡಳಿತದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ವೆಂಕಟೇಶ್ ಪ್ರಸಾದ್ ತಂಡ ಗೆಲ್ಲಲೇಬೇಕು. ರಾಜ್ಯದಲ್ಲಿ ಕ್ರಿಕೆಟ್ ಉದ್ಧಾರ ಆಗಬೇಕಾದರೆ ಬದಲಾವಣೆ ಅನಿವಾರ್ಯ. ನಾವು ಅಧಿಕಾರದಲ್ಲಿದ್ದಾಗ ಎರಡು ಹೆಜ್ಜೆ ಮುಂದೆ ಇಟ್ಟಿದ್ದೇವೆ. ಈಗ 10 ಹೆಜ್ಜೆ ಹಿಂದೆ ಹೋಗಿದ್ದೇವೆ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಇನ್ಫ್ರಾಸ್ಟ್ರಕ್ಚರ್ ಬದಲಾಗಬೇಕು. ಪ್ರಸಾದ್ ತಂಡ ಇದನ್ನು ಸಾಧಿಸುವ ಸಾಮರ್ಥ್ಯ ಹೊಂದಿದೆ. ಕೆಎಸ್‌ಸಿಎನಲ್ಲಿ ದುಡ್ಡಿಗೆ ಕೊರತೆಯಿಲ್ಲ. ಆದರೆ ಕ್ರಿಕೆಟ್ ಬೆಳವಣಿಗೆ ಆಗಬೇಕು. ಮತ ಕೇವಲ ಕ್ಲಬ್‌ಗೆ ಅಲ್ಲ. ಕ್ರಿಕೆಟ್ ಕನಸು ಕಟ್ಟಿಕೊಂಡಿರುವ ಮಕ್ಕಳಿಗಾಗಿ ಎಂದು ಹೇಳಿದರು.

ಇನ್ನೂ ನಾಳೆ ನಿರ್ಣಾಯಕ ದಿನವಾಗಿದ್ದು, ನಾಳೆ ಬೆಳಗ್ಗೆ 11 ಗಂಟೆಗೆ ಮತದಾನ ಆರಂಭವಾಗಲಿದೆ. ಅಲ್ಲದೇ ನಾಳೆಯೇ ಕೆಎಸ್‌ಸಿಎ ಹೊಸ ಆಡಳಿತ ನಿರ್ಧಾರವಾಗಲಿದ್ದು, ಪ್ರಸಾದ್-ಬ್ರಿಜೇಶ್ ಬಣಗಳ ನಡುವೆ ಕಠಿಣ ಪೈಪೋಟಿ ಎದುರಾಗಲಿದೆ.

Continue Reading

Trending

error: Content is protected !!