Connect with us

Special

SSLC ಅರ್ಧ ವಾರ್ಷಿಕ ಪರೀಕ್ಷೆಯು 12ನೇ ತಾರೀಖಿನಿಂದ ಆರಂಭ : ಪರೀಕ್ಷೆ ಬರೆಯುವ ಮುನ್ನ ಈ ಮಾಹಿತಿ ತಿಳಿಯಿರಿ

Published

on

Karnataka SSLC Semester exam 2025 : ಕರ್ನಾಟಕ ರಾಜ್ಯದ 10ನೇ ತರಗತಿ ವಿದ್ಯಾರ್ಥಿಗಳ ಅರ್ಧ ವಾರ್ಷಿಕ ಪರೀಕ್ಷೆ ಇದೇ ತಿಂಗಳು ಸಪ್ಟೆಂಬರ್ 12ನೇ ತಾರೀಖಿನಿಂದ ಆರಂಭವಾಗುತ್ತಿದ್ದು, ಇದಕ್ಕೆ ಸಂಬಂಧಿಸಿದಂತೆ ಮಹತ್ವದ ಮಾಹಿತಿ ಇಲ್ಲಿದೆ.

ಈ ಪರೀಕ್ಷೆಯು ಸೆಪ್ಟೆಂಬರ್ 12ನೇ ತಾರೀಖಿನಿಂದ 19ನೇ ತಾರೀಖಿನವರೆಗೆ ನಡೆಯಲಿದ್ದು, ವಿಷಯವಾರು ದಿನಾಂಕಗಳ ವೇಳಾಪಟ್ಟಿಯನ್ನು ಕೂಡ ಬಿಡುಗಡೆ ಮಾಡಲಾಗಿದೆ.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಿಸಿದ ಪರೀಕ್ಷಾ ವೇಳಾಪಟ್ಟಿ :

• ಪ್ರಥಮ ಭಾಷೆ – ಸೆಪ್ಟೆಂಬರ್ 12
• ವಿಜ್ಞಾನ, ರಾಜ್ಯಶಾಸ್ತ್ರ, ಹಿಂದುಸ್ತಾನಿ, ಸಂಗೀತ, ಕರ್ನಾಟಕ ಸಂಗೀತ – ಸಪ್ಟೆಂಬರ್ 13
• ದ್ವಿತೀಯ ಭಾಷೆ – ಸಪ್ಟೆಂಬರ್ 15
• ಗಣಿತ ಸಮಾಜಶಾಸ್ತ್ರ – ಸಪ್ಟೆಂಬರ್ 16

• ತೃತೀಯ ಭಾಷೆ, ಎನ್ ಎಸ್ ಕ್ಯೂ ಎಫ್ ವಿಷಯಗಳು – ಸಪ್ಟೆಂಬರ್ 17
• ಸಮಾಜ ವಿಜ್ಞಾನ – ಸಪ್ಟೆಂಬರ್ 18
• ಜಿಟಿಎಸ್ ಪರೀಕ್ಷೆ – ಸಪ್ಟೆಂಬರ್ 19

ಪರೀಕ್ಷೆ ನಡೆಯುವ ಸಮಯ : ಹಿಂದುಸ್ತಾನಿ ಮತ್ತು ಕರ್ನಾಟಕ ಸಂಗೀತ ಪರೀಕ್ಷೆಯು ಮಧ್ಯಾಹ್ನ 2 ಗಂಟೆಗೆ ನಡೆಯಲಿದ್ದು, ಉಳಿದ ಎಲ್ಲಾ ವಿಷಯಗಳು ಬೆಳಗ್ಗೆ 10.30 ಕ್ಕೆ ಆರಂಭವಾಗಲಿದೆ.

Continue Reading

Special

ರಸ್ತೆ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಗೆ ಹೋದರೆ ಮುಂಗಡ ಹಣ ಕೇಳದೆ ಚಿಕಿತ್ಸೆ ನೀಡಬೇಕು ಎಂದು ಸರ್ಕಾರದ ಸುಗ್ರೀವಾಜ್ಞೆ

Published

on

ಯಾವುದೇ ವ್ಯಕ್ತಿ ರಸ್ತೆ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದರೆ, ಆಸ್ಪತ್ರೆಯ ಸಿಬ್ಬಂದಿಗಳು ಯಾವುದೇ ರೀತಿಯ ಮುಂಗಡ ಹಣ ಕೆಳದೆ ಅಗತ್ಯ ಚಿಕಿತ್ಸೆ ನೀಡಬೇಕು ಎಂದು ಕರ್ನಾಟಕ ಸರ್ಕಾರವು ಸುಗ್ರೀವಾಜ್ಞೆ ನೀಡಿದೆ. ಅದೇ ರೀತಿ ಇದನ್ನು ತಪ್ಪಿದಲ್ಲಿ ರೂ. 1 ಲಕ್ಷ ರೂಪಾಯಿಯವರೆಗೆ ದಂಡ ವಿಧಿಸಲಾಗುವುದೆಂದು ಆರೋಗ್ಯ ಇಲಾಖೆ ಪ್ರಕಟಣೆ ಹೊರಡಿಸಿದೆ.

ಕೇವಲ ರಸ್ತೆ ಅಪಘಾತ ಅಲ್ಲದೆ ಸುಟ್ಟ ಗಾಯ, ಹಲ್ಲೆಯಿಂದಾಗಿ ಗಾಯ, ವಿಷಪ್ರಾಶನ ಸೇರಿದಂತೆ ಇತ್ಯಾದಿ ತುರ್ತು ಸಂದರ್ಭದಲ್ಲಿ ಚಿಕಿತ್ಸೆಗಾಗಿ ಆಸ್ಪತ್ರೆಗೆ ಬಂದವರಿಗೆ ತುರ್ತು ಚಿಕಿತ್ಸೆ ನೀಡಬೇಕು.

ಅಪಘಾತಕ್ಕೊಳಗಾದ ಅಥವಾ ಗಾಯಗೊಂಡ ವ್ಯಕ್ತಿಯ ಆರೋಗ್ಯ ಸ್ಥಿತಿ ಸುಧಾರಿಸಲು ಸಂಬಂಧಿಸಿದ ತುರ್ತು ಚಿಕಿತ್ಸೆಯನ್ನು ಆಸ್ಪತ್ರೆಯು ತಕ್ಷಣದ ವೈದ್ಯಕೀಯ ತಪಾಸಣೆ ಸೇವೆ ಮತ್ತು ಪ್ರಾಥಮಿಕ ಚಿಕಿತ್ಸೆಯನ್ನು ಉಚಿತವಾಗಿ ಹಾಗೂ ಅಗತ್ಯವೆಂದು ಪರಿಗಣಿಸಿ ಒದಗಿಸಿಕೊಡುವುದು ಕಡ್ಡಾಯ.

ಒಂದು ವೇಳೆ ಅಗತ್ಯವಿರುವ ಸೌಲಭ್ಯಗಳು ಕೊರತೆಯಿದ್ದಲ್ಲಿ, ಬೇರೆ ಆಸ್ಪತ್ರೆಗೆ ವರ್ಗಾವಣೆ ಮಾಡುವುದಕ್ಕಿಂತ ಮೊದಲು ಕನಿಷ್ಠ ಪಕ್ಷ ಪ್ರಥಮ ಚಿಕಿತ್ಸೆ ನೀಡಬೇಕು ಹಾಗೂ ವೈದ್ಯಕೀಯ ವಿವರಗಳೊಂದಿಗೆ ಸ್ಥಳಾಂತರಿಸಬೇಕಾಗಿ ಎಂದು ಆರೋಗ್ಯ ಇಲಾಖೆಯು ಕಟ್ಟುನಿಟ್ಟಾದ ಆದೇಶ ಹೊರಡಿಸಿದೆ.

ಅಪಘಾತದಲ್ಲಿ ದಿನಾಂಕದಿಂದ 7 ದಿನಗಳವರೆಗೆ ₹1.50 ಲಕ್ಷ ಮೌಲ್ಯದ ಯಾವುದೇ ಗೊತ್ತು ಪಡಿಸಿದ ಆಸ್ಪತ್ರೆಯಲ್ಲಿ ನಗದು ಚಿಕಿತ್ಸೆಗೆ ಅರ್ಹರು:

ಹೌದು, ಯಾವುದೇ ವ್ಯಕ್ತಿ ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದರೆ, ಅಂತವರಿಗೆ ಯಾವುದೇ ಗೊತ್ತು ಪಡಿಸಿದ ಆಸ್ಪತ್ರೆಯಲ್ಲಿ ಅಪಘಾತ ದಿನಾಂಕದಿಂದ 7 ದಿನಗಳವರೆಗೆ ₹1.50 ಲಕ್ಷದವರೆಗೆ ನಗದುರಹಿತ ಚಿಕಿತ್ಸೆಗೆ ಅರ್ಹರಾಗಿರುತ್ತಾರೆ. ಇದಕ್ಕಾಗಿ ಕರ್ನಾಟಕ ರಾಜ್ಯ ರಸ್ತೆ ಸುರಕ್ಷತಾ ಮಂಡಳಿಯು ನೋಡಲ್ ಏಜೆನ್ಸಿಯಾಗಿ ಕಾರ್ಯನಿರ್ವಹಿಸಲಿದ್ದು, ಅಗತ್ಯವಿರುವ ಹಣವನ್ನು ಮೋಟಾರು ವಾಹನ ಅಪಘಾತ ನಿಧಿಯಿಂದ ಮರುಪಾವತಿ ಮಾಡಲಾಗುತ್ತದೆ ಎಂದು ಸರ್ಕಾರವು ತಿಳಿಸಿದೆ.

Continue Reading

Special

ಮಕ್ಕಳ ಸಾಹಿತ್ಯ ರಚನೆ ಉತ್ತೇಜಿಸಲು 10 ಸಾವಿರ ರೂ. ಸಹಾಯಧನ : ಬೇಗ ಅರ್ಜಿ ಸಲ್ಲಿಸಿ

Published

on

ಅಜೀಂ ಪ್ರೇಮ್ ಜಿ ವಿಶ್ವವಿದ್ಯಾಲಯದಿಂದ ಕನ್ನಡ ಭಾಷೆಯಲ್ಲಿ ಮಕ್ಕಳ ಸಾಹಿತ್ಯ ರಚನೆಯನ್ನು ಉತ್ತೇಜಿಸುವ ಸಲುವಾಗಿ ಫೆಲೋಶಿಪ್ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಮಕ್ಕಳ ಸಾಹಿತ್ಯ ಅಷ್ಟೇ ಅಲ್ಲದೆ ಉದಯೋನ್ಮುಖ ಬರಹಗಾರರಿಂದ, ಕಥೆ, ನಾಟಕ, ಜೀವನ ಚರಿತ್ರೆ, ಪ್ರವಾಸ ಕಥನ, ಕವಿತೆ ಹಾಗೂ ಕಾದಂಬರಿ ಬರೆಯುವಂತ ಸಾಹಿತಿಗಳಿಂದಲೂ ಕೂಡ ಮೂಲ ಬರಹಗಳನ್ನು ಆಹ್ವಾನಿಸಿದೆ.

ಇಂತಹ ಸಾಹಿತ್ಯ ಕ್ಷೇತ್ರದಲ್ಲಿ ಆಸಕ್ತಿ ಹೊಂದಿರುವಂತಹ ಸಾಹಿತಿಗಳು ಒಂದು ಮಾದರಿ ಮತ್ತು ಇತರೆ ವಿವರಗಳೊಂದಿಗೆ ವಿಶ್ವವಿದ್ಯಾಲಯಕ್ಕೆ ಅರ್ಜಿ ಸಲ್ಲಿಸಬಹುದು.

ಆಯ್ಕೆಯಾಗುವಂತಹ ಸಾಹಿತಿಗಳಿಗೆ ಗರಿಷ್ಟ ಹತ್ತು ಸಾವಿರ ರೂಪಾಯಿಯವರೆಗ ಫೆಲೋಷಿಪ್ ನೀಡಲಾಗುತ್ತದೆ.

ಅರ್ಜಿ ಸಲ್ಲಿಸುವ ಮಾಹಿತಿ :

ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಈ ಕೆಳಗಿನ ಗೂಗಲ್ ಫಾರ್ಮ ಲಿಂಕ್ ಬಳಸಿ ಅರ್ಜಿ ಸಲ್ಲಿಸಬಹುದು.
ಗೂಗಲ್ ಫಾರಂ ಲಿಂಕ್ – https://forms.gle/zdy9nKeboxB2kuAm7

ಅರ್ಜಿ ಸಲ್ಲಿಸುವವರು ನವೆಂಬರ್ 30ನೇ ತಾರೀಖಿನ ಒಳಗಾಗಿ ಸಲ್ಲಿಸಬೇಕು.

Continue Reading

Special

ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಕಾನ್ಸ್‌ಟೇಬಲ್‌ ಹುದ್ದೆಗಳ ನೇಮಕಾತಿಗೆ ಕ್ಷಣಗಣನೆ ಆರಂಭ

Published

on

KSP PC Recruitment 2025 : ಕರ್ನಾಟಕ ರಾಜ್ಯದ ಪೊಲೀಸ್ ಇಲಾಖೆಯಲ್ಲಿ, ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್‌ ಹಾಗೂ ಸಿವಿಲ್ ಕಾನ್ಸ್‌ಟೇಬಲ್‌ ಹುದ್ದೆಗಳನ್ನು ನೇರ ನೇಮಕಾತಿ ಮುಖಾಂತರ ಭರ್ತಿ ಮಾಡಿಕೊಳ್ಳಲು ಅನುಮತಿ ದೊರೆತಿದ್ದು ಇದರ ಮಾಹಿತಿ ಇಲ್ಲಿದೆ.

ಪ್ರಸ್ತುತ ಕರ್ನಾಟಕ ರಾಜ್ಯದಲ್ಲಿ ಪರಿಶಿಷ್ಟ ಜಾತಿಯ ಒಳ ಮೀಸಲಾತಿ ಸಂಬಂಧ ನಡೆಯುತ್ತಿರುವಂತಹ ನಿರ್ಬಂಧನೆಯಿಂದಾಗಿ ನೇಮಕಾತಿ ತಡವಾಗಿದ್ದು, ಶೀಘ್ರದಲ್ಲಿಯೇ ಸಾವಿರಾರು ಕಾನ್ಸ್‌ಟೇಬಲ್‌ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳುವುದಾಗಿ ಕರ್ನಾಟಕ ಪೊಲೀಸ್ ಇಲಾಖೆಯು ತಿಳಿಸಿದೆ.

ಕೆಲವೇ ದಿನಗಳಲ್ಲಿ 2,000ಕ್ಕೂ ಅಧಿಕ ಪೊಲೀಸ್ ಕಾನ್ಸ್‌ಟೇಬಲ್‌ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಕರ್ನಾಟಕ ಪೊಲೀಸ್ ಇಲಾಖೆಯು ಅಧಿಸೂಚನೆ ಹೊರಡಿಸಲಿದೆ.

ಪೊಲೀಸ್ ಕಾನ್ಸ್‌ಟೇಬಲ್‌ ಹುದ್ದೆಗಳ ನೇಮಕಾತಿಯ ಅರ್ಹತೆ ಮತ್ತು ವಿವಿಧ ಮಾಹಿತಿ :

ಪೊಲೀಸ್ ಕಾನ್ಸ್‌ಟೇಬಲ್‌ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕೇವಲ ದ್ವಿತೀಯ ಪಿಯುಸಿ ಪಾಸ್ ಆಗಿದ್ದರೆ ಸಾಕು. ವಯೋಮಿತಿ ಅರ್ಹತೆ 18 ರಿಂದ 25 ವರ್ಷ ಇರಬೇಕು.

ಈ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಹೇಗೆ ನಡೆಯಲಿದೆ?

ನೇಮಕಾತಿಯ ಅಧಿಸೂಚನೆ ಹೊರಡಿಸಿದ ನಂತರ ಅರ್ಜಿ ಸಲ್ಲಿಸಿದ ಅರ್ಹ ಅಭ್ಯರ್ಥಿಗಳಿಗೆ ಮೊದಲು ಲಿಖಿತ ಪರೀಕ್ಷೆ ನಡೆಸಿ ಅದರಲ್ಲಿ ಉತ್ತಮ ಅಂಕ ಗಳಿಸಿದ ಅಭ್ಯರ್ಥಿಗಳಿಗೆ, ದೈಹಿಕ ಸಾಮರ್ಥ್ಯ ಹಾಗೂ ಮೆಡಿಕಲ್ ಪರೀಕ್ಷೆ ನಡೆಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುವುದು.

ಈ ನೇಮಕಾತಿಗೆ ಸಂಬಂಧಿಸಿದಂತೆ ಮುಂದಿನ ಅಪ್ಡೇಟ್‌ಗಳಿಗಾಗಿ ಕರ್ನಾಟಕ ಪೊಲೀಸ್ ಇಲಾಖೆಯ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ.

Continue Reading

Trending

error: Content is protected !!