Connect with us

Mandya

SSLC ಪೂರ್ವಸಿದ್ದತಾ ಪರೀಕ್ಷೆ ಪರಿಶೀಲಿಸಿದ ಜಿ.ಪಂ. ಸಿಇಓ ಕೆ.ಆರ್.ನಂದಿನಿ

Published

on

ಮಂಡ್ಯ: ಜ. 27ರಿಂದ ಪ್ರಾರಂಭವಾಗಿರುವ ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ದತಾ ಪರೀಕ್ಷೆ ಹಿನ್ನೆಲೆಯಲ್ಲಿ ಮಂಡ್ಯ ತಾಲ್ಲೂಕಿನ ಸೂನಗನಹಳ್ಳಿ ಮತ್ತು ತಗ್ಗಹಳ್ಳಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿನ ಪರೀಕ್ಷಾ ಕೇಂದ್ರಗಳಿಗೆ ಜಿ.ಪಂ. ಸಿಇಓ ನಂದಿನಿ ಕೆ.ಆರ್. ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಸೋಮವಾರ ಶಾಲೆಗೆ ಭೇಟಿ ನೀಡಿದ  ಅವರು, ಕಳೆದ ಮಾಹೆ ನಡೆದ ಮೊದಲನೇ ಪೂರ್ವ ಸಿದ್ದತಾ ಪರೀಕ್ಷೆಯಲ್ಲಿ ಫಲಿತಾಂಶ ಕಡಿಮೆಯಾಗಲು ಕಾರಣಗಳೇನು ಎಂಬ ಬಗ್ಗೆ ಶಾಲೆಯ ಮುಖ್ಯೋಪಧ್ಯಾಯರಿಂದ ಮಾಹಿತಿ ಪಡೆದರು.
ಮುಖ್ಯ ಪರೀಕ್ಷೆಗೆ ಇನ್ನು ಕೆಲವೇ ದಿನಗಳು ಮಾತ್ರ ಬಾಕಿ ಇದ್ದು, ವಿದ್ಯಾರ್ಥಿಗಳಲ್ಲಿ ಆತ್ಮ ಸ್ಥೈರ್ಯ ತುಂಬುವ ಕೆಲಸವನ್ನು ಶಿಕ್ಷಕರು ಮಾಡಬೇಕು. ಪೋಷಕರಿಗೂ ಸಹ ಸೂಕ್ತ ಮಾಹಿತಿ ನೀಡಿ ಮಕ್ಕಳಿಗೆ ಮನೆಯಲ್ಲಿಯೂ ಕಲಿಕಾ ವಾತಾವರಣ ನಿರ್ಮಾಣ ಮಾಡುವಂತೆ ತಿಳಿಸಲು ಶಿಕ್ಷಕರಿಗೆ ಸೂಚಿಸಿದರು.
ಕಲಿಕಾ ಮಿತ್ರ ಪರೀಕ್ಷಾ ಮಾರ್ಗದರ್ಶಿ ನೀಡಿದ ನಂತರ ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಲು ಸ್ವಲ್ಪ ಅನುಕೂಲವಾಗಿದೆ ಹಾಗೂ ಸಿ.ಎಸ್.ಆರ್. ಅನುದಾನದಡಿ ನೀಡಲಾಗಿರುವ ನೋಟ್ ಬುಕ್ ಗಳನ್ನು ಬಳಕೆ ಮಾಡಿಕೊಂಡು ವಿದ್ಯಾರ್ಥಿಗಳಿಗೆ ವಿಶೇಷ ತರಗತಿಗಳನ್ನು ನಡೆಸಿ ಹೆಚ್ಚಿನ ಅಬ್ಯಾಸ ಮಾಡಿಸಲು ಸಹಾಯಕವಾಗಿದೆ ಎಂದು ಶಿಕ್ಷಕರು ಮಾಹಿತಿ ನೀಡಿದರು.
ಕಳೆದ ಮಾಹೆಯಿಂದ ಬಾನುವಾರವೂ ಸಹ ತರಗತಿಗಳನ್ನು ನಡೆಸಲಾಗುತ್ತಿದೆ. ವಿದ್ಯಾರ್ಥಿಗಳು ಕೂಡ ಆಸಕ್ತಿಯಿಂದ ಹಾಜರಾಗುತ್ತಿದ್ದಾರೆ. ಆದರೆ ಕೆಲವು ವಿದ್ಯಾರ್ಥಿಗಳು ಗೈರುಹಾಜರಾಗುತ್ತಿದ್ದು, ಸದರಿ ವಿದ್ಯಾರ್ಥಿಗಳ ಪೋಷಕರಿಗೂ ಈ ಬಗ್ಗೆ ಮಾಹಿತಿ ನೀಡಲಾಗುತ್ತಿದೆ ಎಂದು ಶಿಕ್ಷಕರೊಬ್ಬರು ತಿಳಿಸಿದರು. ಕೆಲವು ಬಾಲಕರು ಶಾಲೆಗೆ ಗೈರು ಹಾಜರಾಗುತ್ತಿದ್ದು, ಬಾಲಕರಿಂದಲೇ ಫಲಿತಾಂಶ ಕುಂಠಿತವಾಗುತ್ತಿದೆ ಎಂದು ತಿಳಿಸಿದರು.
ಈ ಬಗ್ಗೆ ಜಿಲ್ಲೆಯ ಎಲ್ಲಾ ಶಾಲೆಗಳಲ್ಲಿ ಬಾಲಕರ ಪೋಷಕರ ಸಭೆ ನಡೆಸಿ ಶಿಕ್ಷಣದ ಮಹತ್ವ, ಅದರಲ್ಲಿಯೂ ಎಸ್.ಎಸ್.ಎಲ್.ಸಿ. ಉತ್ತೀರ್ಣರಾಗುವುದರಿಂದ ಆಗುವ ಪ್ರಯೋಜನಗಳ ಕುರಿತು ಮನವರಿಕೆ ಮಾಡಿಕೊಡುವಂತೆ ಕ್ರಮವಹಿಸಲು ಉಪನಿರ್ದೇಶಕರು, ಸಾರ್ವಜನಿಕ ಶಿಕ್ಷಣ ಇಲಾಖೆರವರಿಗೆ ಸೂಚಿಸಿದರು.
ಶಾಲಾ ಆವರಣದಲ್ಲಿ ಸಂಜೆಯಾಗುತ್ತಿದ್ದಂತೆ ಗ್ರಾಮದ ಕೆಲವು ಯುವಕರು ಆಟ ಆಡಲು ಬರುವ ಕಾರಣ ಸಂಜೆಯ ನಂತರ ವಿಶೇಷ ತರಗತಿ ನಡೆಸಲು ಕಷ್ಟವಾಗುತ್ತಿದೆ, ಈ ಬಗ್ಗೆ ಗ್ರಾ.ಪಂ.ಗೂ ಮಾಹಿತಿ ನೀಡಲಾಗಿದೆ ಎಂದು ತಿಳಿಸಿದರು. ಈ ಬಗ್ಗೆ ಪಿಡಿಓ ರವರು ಅಗತ್ಯ ಕ್ರಮವಹಿಸುವಂತೆ ಸಿಇಓ ಅವರು ಸೂಚಿಸಿದರು.
ಜಿಲ್ಲೆಯ ಎಲ್ಲಾ ಪ್ರೌಢಶಾಲೆಗಳಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಭಾನುವಾರವೂ ಸೇರಿದಂತೆ ರಜಾ ದಿನಗಳಲ್ಲಿಯೂ ವಿಶೇಷ ತರಗತಿಗಳನ್ನು ನಡೆಸುವಂತೆ ಹಾಗೂ ಸದರಿ ದಿನಗಳಂದು ಸಾರ್ವಜನಿಕರು ಶಾಲಾ ಆವರಣಕ್ಕೆ ಪ್ರವೇಶಿಸಿ ವಿದ್ಯಾರ್ಥಿಗಳ ಅಭ್ಯಾಸಕ್ಕೆ ತೊಂದರೆಯಾಗದಂತೆ ವರ್ತಿಸಲು ಕೋರುವ ಬಗ್ಗೆ ಸುತ್ತೋಲೆಯನ್ನು ಹೊರಡಿಸುವಂತೆ ಉಪನಿರ್ದೇಶಕರು, ಸಾರ್ವಜನಿಕ ಶಿಕ್ಷಣ ಇಲಾಖೆರವರಿಗೆ ಸೂಚಿಸಿದರು.
ಮಂಡ್ಯ ತಾಲೂಕಿನ ತಗ್ಗಹಳ್ಳಿ ಸರ್ಕಾರಿ ಪ್ರೌಢಶಾಲೆಗೂ ಭೇಟಿ ನೀಡಿ ಪೂರ್ವಸಿದ್ದತಾ ಪರೀಕ್ಷೆ ಬಗ್ಗೆ ಪರಿಶೀಲಿಸಿ ಶಿಕ್ಷಕರಿಂದ ಮಾಹಿತಿ ಪಡೆದರು.
ತಗ್ಗಹಳ್ಳಿ ಗ್ರಾ.ಪಂ.ಗೆ ಭೇಟಿ:  ಎಸ್‌ಎಸ್‌ಎಲ್‌ಸಿ ಪೂರ್ವಸಿದ್ದತಾ ಪರೀಕ್ಷೆ ಸಂಬಂಧ ಶಾಲೆಗಳಿಗೆ ಭೇಟಿ ನೀಡುವ ಮಾರ್ಗ ಮಧ್ಯೆ ತಗ್ಗಹಳ್ಳಿ ಗ್ರಾಮ ಪಂಚಾಯತ್ ಗೆ ಕಚೇರಿಯ ಹತ್ತಿರ ಸಾರ್ವಜನಿಕರು ಜಮಾವಣೆಗೊಂಡಿದ್ದನ್ನು ಗಮನಿಸಿದ ಸಿಇಓ ಅವರು ಗ್ರಾ.ಪಂ.ಗೆ ಭೇಟಿ ಭೇಟಿ ನೀಡಿ ಸಾರ್ವಜನಿಕರ ಅಹವಾಲು ಸ್ವೀಕರಿಸಿದರು. ಈ ಸಂದರ್ಭದಲ್ಲಿ ಸಾರ್ವಜನಿಕರು 15ನೇ ಹಣಕಾಸು ಯೋಜನೆಯಡಿ ರೂ. 40.00 ಲಕ್ಷಕ್ಕೂ ಹೆಚ್ಚು ಮೊತ್ತವನ್ನು ಅಕ್ರಮವಾಗಿ ಪಾವತಿ ಮಾಡಿದ್ದಾರೆ ಎಂದು ಆರೋಪಿಸಿ ದೂರು ಸಲ್ಲಿಸಿದರು. ಸ್ಥಳದಲ್ಲಿಯೇ ಮಂಡ್ಯ ತಾ.ಪಂ. ಇಓ ಅವರಿಗೆ ಕರೆ ಮಾಡಿ ಈ ಬಗ್ಗೆ ಪರಿಶೀಲಿಸಿ ವರದಿ ಸಲ್ಲಿಸುವಂತೆ ಸೂಚಿಸಿದರು. ಹಾಗೂ ಈ ಬಗ್ಗೆ ನಿಯಮಾನುಸಾರ ಪರಿಶೀಲಿಸಿ ಅಗತ್ಯ ಕ್ರಮ ತೆಗೆದುಕೊಳ್ಳಲಾಗುವುದೆಂದು ಸಿಇಓ ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಮಂಡ್ಯ ದಕ್ಷಿಣ ಕ್ಷೇತ್ರ ಶಿಕ್ಷಣಾಧಿಕಾರಿ ಮಹದೇವ್, ಸೂನಗಹಳ್ಳಿ ಸರ್ಕಾರಿ ಪ್ರೌಢಶಾಲೆಯ ಮುಖ್ಯೋಪದ್ಯಾಯರಾದ ವೀಣಾ, ತಗ್ಗಹಳ್ಳಿ ಸರ್ಕಾರಿ ಪ್ರೌಢಶಾಲೆಯ ಮುಖ್ಯೋಪದ್ಯಾಯರಾದ ಪ್ರತಿಭಾ ಸೇರಿದಂತೆ ಇತರರು ಉಪಸ್ಥಿತರಿದ್ದರು.
Continue Reading

Mandya

ವೈದ್ಯರ ದಿನಾಚರಣೆ

Published

on

ಮಂಡ್ಯ: ನಗರದ ಹೊರವಲಯದಲ್ಲಿರುವ ಇಂಡಿಯನ್ ಮೆಡಿಕಲ್ ಅಸೋಸಿಯೇಷನ್ (ಐಎಂಎ ಹಾಲ್), ಮಂಡ್ಯ, ವತಿಯಿಂದ ನಡೆದ ವೈದ್ಯರ ದಿನಾಚರಣೆ- 2026ರ ಕಾರ್ಯಕ್ರಮವು ಅಧ್ಯಕ್ಷ ಡಾ. ಟಿ.ಎಸ್. ಮರಿಗೌಡರವರ ಅಧ್ಯಕ್ಷತೆಯಲ್ಲಿ ಜರಗಿತು.

ಸದರಿ ಕಾರ್ಯಕ್ರಮವನ್ನು ಹಿರಿಯ ಡಯಾಬಿಟಿಕ್ ವೈದ್ಯ ಹಾಗೂ ಆದಿಚುಂಚನಗಿರಿ ಯುನಿವರ್ಸಿಟಿ, ಬೆಳ್ಳೂರು, ಮೈಸೂರು ಮಾಜಿ ಉಪಕುಲಪತಿಗಳಾದ ಡಾ. ಎಂ.ಎ. ಶೇಖರ್ ರವರು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಂಡ್ಯ ಶಾಖೆಯ ವೈದ್ಯರುಗಳಾದ ಡಾ. ಬಿ.ಎಂ. ಪ್ರಭಾವತಿ, ಡಾ. ಉತ್ತಮ್ ಚಂದ್, ಡಾ. ಎಚ್.ಸಿ. ನಾರಾಯಣ್, ಡಾ. ಶ್ರೀನಿವಾಸ್ ರವರಿಗೆ 2026ನೇ ಸಾಲಿನ ವೈದ್ಯ ಚೇತನ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಡಾ. ಟಿ.ಎನ್. ಮರಿಗೌಡರವರು ಮಾತನಾಡಿ, ಮಹಾನ್ ವೈದ್ಯ, ಶಿಕ್ಷಣ ತಜ್ಞ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿಗಳಾಗಿದ್ದ ಡಾ. ಬಿ.ಸಿ. ರಾಯ್ (ಡಾ ಬಿದಾನ್ ಚಂದ್ರ ರಾಯ್) ರವರು 1882ರ ಜುಲೈ 1 ರಂದು ಜನಿಸಿ, 1962ರ ಜುಲೈ 1 ನೇ ತಾರೀಕಿನಲ್ಲಿಯೇ ತಮ್ಮ 80ನೇ ಜನ್ಮದಿನದಂದು ಇಹಲೋಕ ಇರಿಸಿದರು. ಅವರ ಆದರ್ಶಮಯ ಜೀವನ ಹಾಗೂ ವೈದ್ಯಕೀಯ ಸೇವೆಗೆ ಗೌರವ ಸೂಚಿಸುವ ಸಲುವಾಗಿ ಜುಲೈ 1 ರಂದು ಭಾರತದ ರಾಷ್ಟ್ರೀಯ ವೈದ್ಯರ ದಿನವನ್ನಾಗಿ ಆಚರಿಸುತ್ತಿದೆ.

ಇಂದಿನ ಆಧುನಿಕ ಆರೋಗ್ಯದ ವ್ಯವಸ್ಥೆಯಲ್ಲಿ ವೈದ್ಯರ ಮಹಾ ಪಾತ್ರವು ಅತ್ಯಂತ ಮಹತ್ವದ್ದಾಗಿದ್ದು, ರೋಗವನ್ನು ಗುಣಪಡಿಸುವುದು ಮಾತ್ರವಲ್ಲದೆ ಆರೋಗ್ಯ ಜಾಗೃತಿ ಮೂಡಿಸುವುದು, ತುರ್ತು ಸಂದರ್ಭದಲ್ಲಿ ಜೀವನವನ್ನು ಉಳಿಸುವುದು ಸಾಂಕ್ರಾಮಿಕ ರೋಗಗಳನ್ನು ನಿಯಂತ್ರಿಸುವುದರ ಜೊತೆಗೆ ಸಾರ್ವಜನಿಕ ರ ಆರೋಗ್ಯವನ್ನು ಕಾಪಾಡುವುದು ವೈದ್ಯರ ಪ್ರಮುಖ ಹೊಣೆಗಾರಿಕೆಯಾಗಿದೆ.

2019 ರ ಮಾರ್ಚ್ ತಿಂಗಳಲ್ಲಿ ವಿಶ್ವದಾದ್ಯಂತ ಹರಡಿದ್ದ ಮಹಾಮಾರಿ ಕೋವಿಡ್ ಸಂದರ್ಭದಲ್ಲಿ ವೈದ್ಯರು ತಮ್ಮ ಕುಟುಂಬಕ್ಕಿಂತ ರೋಗಿಗಳ ಸೇವೆಗೆ ಹೆಚ್ಚಿನ ಆದ್ಯತೆಯನ್ನು ನೀಡಿ, ಜೀವದ ಹಂಗು ತೊರೆದು ಸೇವೆಯನ್ನು ಸಲ್ಲಿಸಿದ ತ್ಯಾಗವನ್ನು ಎಂದೆಂದಿಗೂ ಮರೆಯಲು ಸಾಧ್ಯವಿಲ್ಲ ಎಂದು ತಿಳಿಸಿದರು.

ಕರ್ನಾಟಕ ರಾಜ್ಯದ ಗ್ರಾಮೀಣ ಹಾಗೂ ತಾಲೂಕು ಪ್ರದೇಶಗಳ ಆರೋಗ್ಯ ಸೇವೆಯ ಬೆನ್ನೆಲುಬಾಗಿ ಕಾರ್ಯನಿರ್ವಹಿಸುತ್ತಿರುವ ಸಾವಿರಾರು ಸಣ್ಣ ಮತ್ತು ಮಧ್ಯಮ ಗಾತ್ರದ ಆಸ್ಪತ್ರೆಗಳು ಜನಸಾಮಾನ್ಯರಿಗೆ ಕೈಗೆಟುಕುವ ದರದಲ್ಲಿ ತ್ವರಿತ ಚಿಕಿತ್ಸೆಯನ್ನು ಸಮರ್ಪಕವಾಗಿ ಒದಗಿಸುತ್ತಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ಈ ಆಸ್ಪತ್ರೆಗಳು ಹಲವಾರು ಆಡಳಿತಾತ್ಮಕ ಹಾಗೂ ನಿಯಂತ್ರಣ ಸಂಬಂಧಿತ ಸವಾಲುಗಳನ್ನು ಎದುರಿಸುತ್ತಿದೆ. ಹಾಗೆಯೇ ಹಲವಾರು ಕಡೆಗಳಲ್ಲಿ ನಕಲಿ ವೈದ್ಯರುಗಳ ಹಾವಳಿ ಹೆಚ್ಚಾಗುತ್ತಿರುವುದು ಕಳವಳದ ಸಂಗತಿಯಾಗಿದೆ ಎಂದು ನುಡಿದರು.

ವೈದ್ಯರ ದಿನಾಚರಣೆಯ ಸಂದರ್ಭದಲ್ಲಿ ವೈದ್ಯರನ್ನು ಗೌರವಿಸುವುದಷ್ಟೇ ಸಾಕಾಗುವುದಿಲ್ಲ, ಅವರು ಎದುರಿಸುತ್ತಿರುವ ನೈಜ ಸಮಸ್ಯೆಗಳಿಗೆ ಪರಿಹಾರವನ್ನು ಕಂಡುಕೊಡುವ ಸಂಕಲ್ಪವನ್ನು ತೊಡುವುದು ಅಗತ್ಯವಾಗಿದೆ. ವೈದ್ಯರು ಹಾಗೂ ಸಮಾಜ ಪರಸ್ಪರ ವಿಶ್ವಾಸ ಹಾಗೂ ಸಹಕಾರದೊಂದಿಗೆ ಕಾರ್ಯವನ್ನು ನಿರ್ವಹಿಸಿದಾಗ ಮಾತ್ರ ಆರೋಗ್ಯವಂತ ಕರ್ನಾಟಕದ ಕನಸು ನನಸಾಗುತ್ತದೆ. ವೈದ್ಯರನ್ನು ಗೌರವಿಸುವುದರ ಜೊತೆಗೆ ಅವರಿಗೆ ನೀಡುವ ಸಹಕಾರ ತಮ್ಮ ಆರೋಗ್ಯವನ್ನು ಗೌರವಿಸಿದಂತೆ ಆಗುತ್ತದೆ ಎಂದು ಅಭಿಪ್ರಾಯಪಟ್ಟರು.

ವೈದ್ಯರ ದಿನಾಚರಣೆಯ ಪ್ರಯುಕ್ತ ಏರ್ಪಡಿಸಲಾಗಿದ್ದ ವಿವಿಧ ಬಗೆಯ ಸ್ಪರ್ಧೆಯಲ್ಲಿ ಪಾಲ್ಗೊಂಡು, ವಿಜಯತರಾದವರಿಗೆ ಮಂಡ್ಯ ವೈದ್ಯಕೀಯ ಶಿಕ್ಷಣ ಸಂಸ್ಥೆಯ ನಿರ್ದೇಶಕರಾದ ಡಾ. ಬಿ. ನರಸಿಂಹಸ್ವಾಮಿರವರು ಬಹುಮಾನವನ್ನು ವಿತರಿಸಿದರು. ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಡಾ. ಬಿ.ಎಂ. ಜಗದೀಶ್ ಕುಮಾರ್, ಡಿಎಚ್ಓ ಡಾ. ಬೆಟ್ಟ, ಮೈಸೂರಿನ ಡಿಎಚ್ಒ ಡಾ. ಕೆ. ಮೋಹನ್ ರವರು ವೈದ್ಯರ ದಿನಾಚರಣೆಯ ಕುರಿತು ಮಾತನಾಡಿದರು.

ಮುಖ್ಯ ಅತಿಥಿಗಳಾಗಿ ಡಾ. ವಿ. ಎಲ್. ನಂದೀಶ್, ಐಎಂಎ ಸಂಸ್ಥೆಯ ಕಾರ್ಯದರ್ಶಿಗಳಾದ ಡಾ. ಎಂ. ವಿನಯ್, ಡಾ. ಸಿದ್ದೇಗೌಡ, ಡಾ. ಕೃಷ್ಣಪ್ಪ, ಮಾಲಿನಿ ಐಎಂಎ ಸಂಸ್ಥೆಯ ವಿಭಾಗದ ಅಧ್ಯಕ್ಷರಾದ ಡಾ. ಜಾಹ್ನವಿ, ಕಾರ್ಯದರ್ಶಿಗಳಾದ ಡಾ. ಬಿಂದಿಯಾರವರು ಸೇರಿದಂತೆ ನೂರಕ್ಕೂ ಹೆಚ್ಚು ಮಂದಿ ವೈದ್ಯರುಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Continue Reading

Mandya

ಆನ್‌ಲೈನ್ ಮೂಲಕ ಅರ್ಜಿ ಆಹ್ವಾನ

Published

on

ಮಂಡ್ಯ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಅರ್ಹ ಸಾಧಕ ಕ್ರೀಡಾಪಟುಗಳಿಗೆ ವಿವಿಧ ಪ್ರಶಸ್ತಿ ಮತ್ತು ಪ್ರೋತ್ಸಾಹಧನ ನೀಡುವ ಯೋಜನೆಗಳು ಜಾರಿಯಲ್ಲಿದ್ದು, ಪ್ರಶಸ್ತಿಯ ವಿವರ: ಏಕಲವ್ಯ ಪ್ರಶಸ್ತಿ, ಜೀವಮಾನ ಸಾಧನೆ ಪ್ರಶಸ್ತಿ, ಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿ, ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿ, ನಗದು ಪುರಸ್ಕಾರ, ಶೈಕ್ಷಣಿಕ ಶುಲ್ಕ ಮರುಪಾವತಿ, ಕ್ರೀಡಾ ವಿದ್ಯಾರ್ಥಿ ವೇತನ, ಗುರಿ-ಒಲಂಪಿಕ್ ಪದಕ ಕಾರ್ಯಕ್ರಮಗಳಡಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಹ ಕ್ರೀಡಾಪಟುಗಳು ಹಾಗೂ ಆಸಕ್ತರು ಅರ್ಜಿಗಳನ್ನು ಅಧಿಕೃತ ಜಾಲತಾಣ: https://sevasindhu.karnataka.gov.in ಮೂಲಕ ಕಡ್ಡಾಯವಾಗಿ ಆನ್‌ಲೈನ್ ಮೂಲಕ ನಿಗದಿತ ದಿನಾಂಕದೊಳಗೆ ಸಲ್ಲಿಸಲು ಕೋರಿದೆ.

ಅರ್ಜಿ ಸಲ್ಲಿಸಲು ಜುಲೈ 31 ರಂದು ಕೊನೆಯ ದಿನಾಂಕವಾಗಿರುತ್ತದೆ. ಅರ್ಜಿ ಸಲ್ಲಿಸುವ ಸಂಬಂಧ ಹೆಚ್ಚಿನ ಮಾಹಿತಿಗಾಗಿ ಯುವ ಸಹಾಯವಾಣಿ 155265 ಕ್ಕೆ ಕಛೇರಿ ಅವಧಿಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Continue Reading

Mandya

ರಾಷ್ಟ್ರ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಮಂಡ್ಯ ವಿದ್ಯಾರ್ಥಿಗಳ ಸಾಧನೆ

Published

on

ಮಂಡ್ಯ : ಇತ್ತೀಚೆಗೆ ಕೊಳ್ಳೇಗಾಲದಲ್ಲಿ ನಡೆದ ಚಾಮರಾಜ ಕರಾಟೆ ಕಪ್ ರಾಷ್ಟ್ರಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಮಂಡ್ಯ ಜಿಲ್ಲೆಯಿಂದ ಸುಮಾರು 10 ವಿದ್ಯಾರ್ಥಿಗಳು ಭಾಗವಹಿಸಿ ಹಲವು ವಿಭಾಗಗಳಲ್ಲಿ ಪ್ರಶಸ್ತಿಗಳನ್ನು ಪಡೆದಿರುತ್ತಾರೆ ಎಂದು ಗೋಜುರಿಯೋ ಕರಾಟೆ ದು ಅಕಾಡೆಮಿ ಇಂಡಿಯಾ ಹಾಗೂ ಟೀಮ್ ವಿ ಎಲ್ ಎಮ್ ಎ ಎ ಕರಾಟೆ ಸಂಸ್ಥೆಯ ಅಧ್ಯಕ್ಷರಾದ ಕರಾಟೆ ಲೋಕೇಶ್ ಮೊದಲಿಯಾರ್ ತಿಳಿಸಿದ್ದಾರೆ.

ಈ ಕರಾಟೆ ಸ್ಪರ್ಧೆಯಲ್ಲಿ 9 ವರ್ಷದೊಳಗಿನ ಬಾಲಕರ ಕಟ ವಿಭಾಗದಲ್ಲಿ ಲಿಕೇಶ್ ದ್ವಿತೀಯ ಸ್ಥಾನ. ಶರ್ವ ದ್ವಿತೀಯ ಸ್ಥಾನ. ಆರುಶ್ ದ್ವಿತೀಯ ಸ್ಥಾನ. ಪರಿನಿತ್ ತೃತೀಯ ಸ್ಥಾನ. ಅದೇ ರೀತಿ ಬಾಲಕಿಯರ ವಿಭಾಗದಲ್ಲಿ ಶರ್ವರಿ ಪ್ರಥಮ ಸ್ಥಾನ ಪಡೆದಿರುತ್ತಾರೆ. ಅದೇ ರೀತಿ 14 ರಿಂದ 16 ವರ್ಷದೊಳಗಿನ ಬಾಲಕ/ ಬಾಲಕಿಯರ ವಯೋಮಿತಿಯ ವಿಭಾಗದಲ್ಲಿ ಮದನ್ ಕಟ ತೃತೀಯ ಸ್ಥಾನ ಕುಮುತೇ ದ್ವಿತೀಯ ಸ್ಥಾನ. ಶಶಾಂಕ್ ಗೌಡ ಕಟ ಹಾಗೂ ಕು ಮಕ ವಿಭಾಗದಲ್ಲಿ ದ್ವಿತೀಯ ಸ್ಥಾನ. ರಂಜನ್ ಕಟ ವಿಭಾಗದಲ್ಲಿ ದ್ವಿತೀಯ ಸ್ಥಾನ. ವಿಷ್ಣು ಕಟ ಪ್ರಥಮ ಹಾಗೂ ಕುಮತೆ ವಿಭಾಗ ದ್ವಿತೀಯ ಸ್ಥಾನ. ಹನಿ ಕಟಾ ಹಾಗೂ ಕುಮುತೆ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ.

ಸ್ಪರ್ಧೆಯ ಮುಖ್ಯ ತರಬೇತುದರವಾಗಿ ಎಸ್.ಸಿ ಸಚಿನ್ ಕುಮಾರ್ ಅವರು ಕಾರ್ಯನಿರ್ವಹಿಸಿದ್ದು, ಬಹುಮಾನ ವಿಜೇತ ಎಲ್ಲಾ ಮಕ್ಕಳಿಗೂ ಸಂಸ್ಥೆ ವತಿಯಿಂದ ಹಾಗೂ ಪೋಷಕರ ವತಿಯಿಂದ ಅಭಿನಂದನೆ ಸಲ್ಲಿಸಲಾಗಿದೆ.

Continue Reading

Trending

error: Content is protected !!