Chamarajanagar
ಪೆಟ್ರೋಲ್ ಡೀಸೆಲ್ ಮೇಲಿನ ತೆರಿಗೆ ಏರಿಕೆ ಹಿಂಪಡೆಯುವಂತೆ ಆಗ್ರಹಿಸಿ ತಾಲೂಕು ಬಿಜೆಪಿ ವತಿಯಿಂದ ಪ್ರತಿಭಟನೆ
ಯಳಂದೂರು ಜೂನ್ 20
ಪೆಟ್ರೋಲ್ ಡೀಸೆಲ್ ಮೇಲಿನ ತೆರಿಗೆ ಏರಿಕೆ ಮಾಡಿರುವುದನ್ನು ಹಿಂಪಡೆಯುವಂತೆ ಆಗ್ರಹಿಸಿ ಪಟ್ಟಣದ ಗಾಂಧಿ ವೃತ್ತದಲ್ಲಿ ತಾಲೂಕು ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಮಹೇಶ್ ಮಾತನಾಡಿ ಅಧಿಕಾರ ಹಿಡಿಯಲು ಕಾಂಗ್ರೆಸ್ ಸರ್ಕಾರ ಘೋಷಿಸಿದ ಗ್ಯಾರಂಟಿ ಯೋಜನೆ ಮುಂದುವರಿಸಲು ಸಂಕಷ್ಟದ ಪರಿಸ್ಥಿತಿಯಲ್ಲಿರುವ ಕಾಂಗ್ರೆಸ್ ಸರ್ಕಾರ ಪೆಟ್ರೋಲ್ ದರವನ್ನು ಲೀಟರ್ ಗೆ 3 ಡೀಸೆಲ್ ಬೆಲೆ ಮೂರುವರೆ ರೂಪಾಯಿ ಏರಿಸಿದೆ. ಈ ಮೂಲಕ ರಾಜ್ಯದ ಜನರ ಮೇಲೆ ಬರೆ ಹಾಕಲು ಹೊರಟಿದ್ದಾರೆ. ಮುಖ್ಯಮಂತ್ರಿಗಳು ಈ ಕೂಡಲೇ ಇಂಧನ ಬೆಲೆ ಏರಿಕೆ ಮಾಡಿರುವುದನ್ನು ಇಳಿಸಬೇಕು ಎಂದು ಒತ್ತಾಯಿಸಿದರು.
ತಾಲೂಕು ಮಂಡಲ ಅಧ್ಯಕ್ಷ ಅನಿಲ್, ಬಿಜೆಪಿ ಮುಖಂಡರಾದ ಅಂಬಳೆ ರಂಗರಾಜು, ಗಣಿಗನೂರು ಚಂದ್ರು, ದುಗ್ಗಟ್ಟಿ ಮಾದೇಶ್, ಮಹೇಶ್ ಶಿವು ಸೇರಿದಂತೆ ಇತರರು ಹಾಜರಿದ್ದರು.
Chamarajanagar
ವಸತಿ ಶಾಲೆಗಳ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ
ಚಾಮರಾಜನಗರ: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಯ ಚಾಮರಾಜನಗರ ಜಿಲ್ಲೆಯಲ್ಲಿರುವ ವಿವಿಧ ವಸತಿ ಶಾಲೆಗಳಿಗೆ 2025-26ನೇ ಶೈಕ್ಷಣಿಕ ಸಾಲಿಗೆ 6ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಪ್ರಸ್ತುತ 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಚಾಮರಾಜನಗರ ಜಿಲ್ಲೆಯ ವಿದ್ಯಾರ್ಥಿಗಳು ಹತ್ತಿರದ ವಸತಿ ಶಾಲೆಯಲ್ಲಿ ಅಗತ್ಯ ದಾಖಲಾತಿಗಳೊಂದಿಗೆ ಜನವರಿ 25ರೊಳಗೆ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಹತ್ತಿರದ ವಸತಿ ಶಾಲೆಯನ್ನು ಸಂಪರ್ಕಿಸುವಂತೆ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ಕೋರಿದ್ದಾರೆ.
Chamarajanagar
ಮೂರು ಚಕ್ರದ ಸ್ಕೂಟರ್ಗೆ ವಿಕಲಚೇತನರಿಂದ ಅರ್ಜಿ ಆಹ್ವಾನ
ಚಾಮರಾಜನಗರ:- ಕೊಳ್ಳೇಗಾಲ ನಗರಸಭೆಯ ೨೦೨೦-೨೧ ಮತ್ತು೨೦೨೧-೨೨ನೇ ಸಾಲಿನ ಎಸ್.ಎಫ್.ಸಿ ಸಾಲಿನ ಶೇ.೫ರ ಅನುಮೋದಿತ ಕ್ರಿಯಾ ಯೋಜನೆಯಂತೆ ಯಂತ್ರಚಾಲಿತ ಕಂಪನಿಯ ಮೂರು ಚಕ್ರದ ಸ್ಕೂಟರ್ಗಳನ್ನು ನೀಡಲು ನಗರಸಭಾ ವ್ಯಾಪ್ತಿಯಲ್ಲಿ ವಾಸಿಸುವ ಶೇ.೭೫ರಷ್ಟು ಮೇಲ್ಪಟ್ಟ ವಿಕಲಚೇತನರಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಯನ್ನು ನಗರಸಭಾ ಕಚೇರಿಯಲ್ಲಿ ಪಡೆದು ಭರ್ತಿ ಮಾಡಿ ಅಗತ್ಯ ದಾಖಲಾತಿಗಳೊಂದಿಗೆ ದೃಢೀಕರಿಸಿ ಜನವರಿ ೩೦ ರೊಳಗೆ ಕಚೇರಿಗೆ ಸಲ್ಲಿಸಬೇಕು.
Chamarajanagar
ಯಳಂದೂರು ಪಟ್ಟಣದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ.ನಾಳೆ ನವೋದಯ ಪರೀಕ್ಷೆ
ಯಳಂದೂರು ಪಟ್ಟಣದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ.ನಾಳೆ ನವೋದಯ ಪರೀಕ್ಷೆ
ಪಟ್ಟಣದ ಪಬ್ಲಿಕ್ ಶಾಲೆಯಲ್ಲಿ ನಡೆದ ನವೋದಯ ಪರೀಕ್ಷೆಯ ಪೂರ್ವ ಸಿದ್ಧತೆಯನ್ನು ಶಿಕ್ಷಕರಿಗೆ ತಿಳಿಸಿದ್ದಾರೆ
ಮಾತನಾಡಿದ ಕ್ಷೇತ್ರ ಶಿಕ್ಷಣಾಧಿಕಾರಿ ಮಾರಯ್ಯ ರವರು ನವೋದಯ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗಾಗಿ ಶಿಕ್ಷಕರು ಯಾವುದೇ ರೀತಿಯ ತೊಂದರೆಯಾಗದಂತೆ ನೋಡಿಕೊಳ್ಳಲು ಸಲಹೆ ನೀಡಿದರು
ಮಾತನಾಡಿದ ಶಾಖೆಯ ಉಪ ಪ್ರಾಂಶುಪಾಲರಾದ ನಂಜುಂಡಯ್ಯ ರವರು ನಮ್ಮ ಶಾಲೆಯಲ್ಲಿ ನಡೆಯುವ ನವೋದಯ ಪರೀಕ್ಷೆಯು ಯಶಸ್ವೀಯಾಗಿ ನಡೆಸಿ ಕೋಡಿ ಎಂದು ಶಿಕ್ಷಕರಿಗೆ ತಿಳಿಸಿದ್ದಾರೆ
ಈ ಸಂದರ್ಭದಲ್ಲಿ ಶಶಿಧರ, ಮಹೇಶ್ ಕುಮಾರ್, ಪುಟ್ಟರಾಜು, ಹಾಜರಿದ್ದರು,
-
Kodagu21 hours ago
ಅಖಿಲ ಕೊಡವ ಸಮಾಜದ ಹೇಳಿಕೆಗೆ ನಮ್ಮ ವಿರೋಧವಿದೆ, ಹೋರಾಟ ಮುಂದುವರಿಯಲಿದೆ – ಕನೆಕ್ಟಿಂಗ್ ಕೊಡವಾಸ್ ಸಂಘಟನೆ ಸ್ಪಷ್ಟನೆ
-
Kodagu20 hours ago
ಕಿಡಿಗೇಡಿಗಳನ್ನು ಬಂಧಿಸದೇ ನಡೆಸುವ ಶಾಂತಿ ಮಾತುಕತೆಗೆ ನಮ್ಮ ಬೆಂಬಲವಿಲ್ಲ: ಯುಕೊ ಸ್ಪಷ್ಟನೆ
-
Tech18 hours ago
ಮೊಬೈಲ್ ಬಳಕೆದಾರರಿಗೆ ದೂರ ಸಂಪರ್ಕ ಇಲಾಖೆಯಿಂದ ಗೂಡ್ ನ್ಯೂಸ್ : ಪ್ರತಿಯೊಬ್ಬರು ತಿಳಿದುಕೊಳ್ಳಲೇಬೇಕಾದ ಮಾಹಿತಿ
-
Sports23 hours ago
Champions Trophy 2025ಕ್ಕೆ ಟೀಂ ಇಂಡಿಯಾ ಪ್ರಕಟ: ಗಿಲ್ಗೆ ಉಪನಾಯಕ ಪಟ್ಟ
-
National - International24 hours ago
ಕೊಲ್ಕತ್ತಾ ವೈದ್ಯ ಮೇಲಿನ ಅತ್ಯಾಚಾರ ಪ್ರಕರಣ: 57 ದಿನಗಳಲ್ಲಿ ತೀರ್ಪು ಪ್ರಕಟ; ರಾಯ್ ದೋಷಿ
-
Mysore22 hours ago
ಮೈಸೂರು ವಿವಿ ಗೌರವ ಡಾಕ್ಟರೇಟ್ ತಂದ ಖುಷಿ
-
Mysore20 hours ago
ಮೈಸೂರಿನ ಮಾರುಕಟ್ಟೆಗೆ ಹುಂಡೈ ಕ್ರೆಟಾ ಎಲೆಕ್ಟ್ರಿಕ್ ಕಾರು
-
Hassan23 hours ago
ನ್ಯಾಯಾಲಯದ ತಡೆ ಆಜ್ಞೆ ಇದ್ರೂ ವಿಮಾನ ನಿಲ್ದಾಣದ ಸುತ್ತ ಕಾಂಪೌಂಡ್ ನಿರ್ಮಾಣ