Connect with us

Hassan

ಹಾಸನ ಸಂಸದ ಪ್ರಜ್ವಲ್ ರೇವಣ್ಣ ರನ್ನ ಬಂಧಿಸುವಂತೆ ಆಗ್ರಹ

Published

on

ಹಾಸನ.
ಮಹಿಳೆಯರ ಜೊತೆ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ ಆರೋಪ

ಘಟನೆ ಖಂಡಿಸಿ ಪ್ರಗತಿಪರ ಸಂಘಟನೆಗಳ ಪ್ರತಿಭಟನೆ

ಹಾಸನದ ಹೇಮಾವತಿ ವೃತ್ತದ ಬಳಿ ಜಮಾಯಿಸಿದ ನೂರಾರು ಕಾರ್ಯಕರ್ತರು

ಪ್ರಜ್ವಲ್ ರೇವಣ್ಣರನ್ನ ಬಂಧಿಸಬೇಲು ಎಂದು ಪ್ರತಿಭಟನಾಕಾರರ ಆಗ್ರಹ

ಸಮಗ್ರ ತನಿಖೆಯನ್ನ ನಡೆಸಬೇಕು ಎಂದು ಒತ್ತಾಯ

ಜಿಲ್ಲಾಧಿಕಾರಿ ‌ಕಚೇರಿವರೆಗೂ ಮೆರವಣಿಗೆ ಮೂಲಕ ನಡೆಯಲಿರೋ ಪ್ರತಿಭಟನೆ

ಲೈಂಗಿಕ ವಿಚಾರಕ್ಕಾಗಿ ಮಹಿಳೆಯೆರನ್ನು ಪ್ರಜ್ವಲ್ ರೇವಣ್ಣ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂಬ ಆರೋಪ ವಿಚಾರ

ಹಾಸನದಲ್ಲಿ ಪ್ರಗತಿಪರ, ರೈತ ಸಂಘಟನೆಗಳು, ಚಿಂತಕರು, ಸಾಹಿತಿಗಳಿಂದ ಪ್ರತಿಭಟನೆ

ಹೇಮಾವತಿ ಪ್ರತಿಭಟನೆಯಿಂದ ಜಿಲ್ಲಾಧಿಕಾರಿಗಳ ಕಚೇರಿ ವರೆಗೂ ನಡೆಯುತ್ತಿರೋ ಪ್ರತಿಭಟನಾ ಮೆರವಣಿಗೆ

ಎನ್.ಆರ್ ವೃತ್ತದ ಮೂಲಕ ಸಾಗುತ್ತಿರೋ ಪ್ರತಿಭಟನೆ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ರನ್ನ ಬಂಧಿಸುವಂತೆ ಆಗ್ರಹ

ವೀಡಿಯೋ ಬಿಡುಗಡೆ ಮಾಡಿರುವವರ ವಿರುದ್ಧವೂ ಕ್ರಮಕ್ಕೆ ಆಗ್ರಹ

ಪ್ರತಿಭಟನೆಯಲ್ಲಿ ನೂರಾರು ಜನ ಭಾಗಿ

Continue Reading
Click to comment

Leave a Reply

Your email address will not be published. Required fields are marked *

Hassan

ಸಾಮಾಜಿಕ ಕಳಕಳಿ ಮತ್ತು ಜವಬ್ದಾರಿಯನ್ನು ಅರಿತು ಕಾರ್ಯಪ್ರವೃತ್ತರಾಗಿ : ತಹಶೀಲ್ದಾರ್ ಶ್ವೇತಾ ಎನ್.ರವೀಂದ್ರ

Published

on

ಹಾಸನ : ವಿದ್ಯಾರ್ಥಿನಿಯರು ವೃತ್ತಿ ಜೀವನದಲ್ಲಿ ಯಾವುದೇ ಒತ್ತಡಕ್ಕೆ ಒಳಗಾಗದೆ ಸಾಮಾಜಿಕ ಕಳಕಳಿ ಮತ್ತು ಜವಬ್ದಾರಿಯನ್ನು ಅರಿತು ಕಾರ್ಯಪ್ರವೃತ್ತರಾಗಬೇಕು ಎಂದು ತಹಶೀಲ್ದಾರ್ ಶ್ವೇತಾ ಎನ್.ರವೀಂದ್ರ ಕರೆ ನೀಡಿದರು.
ನಗರದ ಎಂ.ಜಿ.ರಸ್ತೆಯಲ್ಲಿನ ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದವತಿಯಿಂದ ಗುರುವಾರ ನಡೆದ ವುಮನ್ಸ್ ಕಾಲೇಜ್ ನ್ಯೂಸ್ ಪತ್ರಿಕೆ ಬಿಡುಗಡೆ ಮತ್ತು ಪ್ರಾಯೋಗಿಕ ಚಟುವಟಿಕೆಯಲ್ಲಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.


ಪತ್ರಿಕೋದ್ಯಮಕ್ಕೆ ಸಮಾಜದಲ್ಲಿ ಹೆಚ್ಚಿನ ಜವಬ್ದಾರಿ ಇದ್ದು, ಆತ್ಮಸಾಕ್ಷಿ ಹಾಗೂ ನೈಜತೆಯನ್ನು ಇಟ್ಟುಕೊಂಡು ಸಮಾಜಕ್ಕೆ ಸುದ್ದಿಯನ್ನು ನೀಡುವಂತ ಪತ್ರಕರ್ತರಾಗಬೇಕು. ವೃತ್ತಿ ಜೀವನದಲ್ಲಿ ಏನೇ ಒತ್ತಡಗಳು ಬಂದರು ಸಹ ಅದಕ್ಕೆ ಅಂಜದೆ ಜವಬ್ದಾರಿಯನ್ನು ಅರಿತು ಕೆಲಸವನ್ನು ನಿರ್ವಹಿಸಬೇಕು ಎಂದು ಹೇಳಿದರು.
ವಿದ್ಯಾರ್ಥಿನಿಯರು ಪುಸ್ತಕ ಓದುವ ಹವ್ಯಾಸ ಮತ್ತು ಛಲವನ್ನು ಬೆಳೆಸಿಕೊಂಡು ಉತ್ತಮವಾದ ಭವಿಷ್ಯವನ್ನು ರೂಪಿಕೊಳ್ಳಬೇಕು ಎಂದು ಕರೆನೀಡಿದರು.


ಹಾಸನ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಕೆ.ಎಚ್.ವೇಣುಕುಮಾರ್ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, ಪತ್ರಿಕೋದ್ಯಮವು ವಿಶಾಲವಾಗಿ ಬೆಳೆದಿದ್ದು, ವಿದ್ಯುನ್ಮಾನ ಮಾಧ್ಯಮಕ್ಕೆ ಹೋಲಿಸಿದರೆ ಮುದ್ರಣ ಮಾಧ್ಯಮದ ಮೇಲೆ ಹೆಚ್ಚಿನ ವಿಶ್ವಾಸವನ್ನು ಹೊಂದಿದೆ ಎಂದರು.
ಮುಂದೆ ವೃತ್ತಿ ಜೀವನದಲ್ಲಿ ವಿದ್ಯಾರ್ಥಿನಿಯರು ಕನಿಷ್ಠ ಮಾನವೀಯ ಮೌಲ್ಯಗಳನ್ನು ಇಟ್ಟುಕೊಂಡು ಕೆಲಸವನ್ನು ಮಾಡಬೇಕು ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಡಾ.ಕೆ.ಜಿ.ಕವಿತ ಮಾತನಾಡಿ, ವಿದ್ಯಾರ್ಥಿನಿಯರು ಪದವಿ ಮುಗಿದ ನಂತರ ವಿವಾಹವಾದರೂ ನಂತರ ಸಾಧನೆಯನ್ನು ಮಾಡಿ ತೋರಿಸಬೇಕು. ಗುರು, ಹಿರಿಯರಿಗೆ ಗೌರವನ್ನು ನೀಡುವಂತಹ ಸಂಸ್ಕಾರವನ್ನು ಕಲಿಯಬೇಕು ಎಂದು ಕಿವಿಮಾತು ಹೇಳಿದರು.
ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥರಾದ ಸಿ.ಎಸ್.ಮಂಜುಳ ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಉಪನ್ಯಾಸಕ ಪಿ.ರವಿಕುಮಾರ್ ವಂದಿಸಿದರು.


ಕಾರ್ಯಕ್ರಮದಲ್ಲಿ ಸ್ನಾತಕೋತ್ತರ ಆರ್ಥಶಾಸ್ತ್ರ ವಿಭಾಗದ ಮುಖ್ಯಸ್ಥೆ ಡಾ.ಎಚ್.ಪಿ. ಪೂರ್ಣಿಮ, ಕಾಲೇಜಿನ ಎಲ್ಲಾ ವಿಭಾಗದ ಮುಖ್ಯಸ್ಥರು, ಪ್ರಾಧ್ಯಾಪಕರು, ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿನಿಯರು ಭಾಗವಹಿಸಿದ್ದರು.
ಕಾರ್ಯಕ್ರಮದಲ್ಲಿ ಪ್ರಾಯೋಗಿಕ ಚಟುವಟಿಕೆಯಲ್ಲಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರವನ್ನು ನೀಡಿ ಗೌರವಿಸಿದರು.

Continue Reading

Hassan

ಪ್ರಾಂಶುಪಾಲ ಡಿ.ಕೆ. ಮಂಜಯ್ಯಗೆ ಕರವೇಯಿಂದ ಸನ್ಮಾನ

Published

on

ಹಾಸನ: ನಗರದ ಆರ್.ಸಿ. ರಸ್ತೆ ಬಳಿ ಇರುವ ಗಂದಧ ಕೋಠಿ ಆವರಣದಲ್ಲಿರುವ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಾಂಶುಪಾಲರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಪ್ರೋ. ಡಿ.ಕೆ. ಮಂಜಯ್ಯ ಅವರನ್ನು ಕರ್ನಾಟಕ ರಕ್ಷಣಾ ವೇದಿಕೆಯಿಂದ ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಿದರು.

ಕರ್ನಾಟಕ ರಕ್ಷಣಾ ವೇದಿಕೆ ಉಪಾಧ್ಯಕ್ಷರಾದ ವೆಂಕಟೇಗೌಡ ಇದೆ ವೇಳೆ ಮಾತನಾಡಿ, ಪ್ರಾಂಶುಪಾಲರಾದ ಡಿ.ಕೆ. ಮಂಜಯ್ಯ ಅವರು ಮಾತನಾಡಿ, ಗ್ರಾಮೀಣ ಭಾಗದಿಂದ ಬರುವ ವಿದ್ಯಾರ್ಥಿಗಳಿಗೆ ಯಾವ ಕೊರತೆ ಆಗದಂತೆ ಪಾಠ ಪ್ರವಚನ, ಗ್ರಂಥಾಲಯ ಸೌಲಭ್ಯ, ಕುಡಿಯುವ ನೀರು, ಕಂಪ್ಯೂಟರ್ ಸೌಲಭ್ಯ ಮತ್ತು ಸ್ಪರ್ದಾತ್ಮಾಕ ಪರೀಕ್ಷೆಗಳಿಗೆ ಸಂಬಂಧಿಸಿದಂತೆ ನುರಿತ ಅಧ್ಯಾಪಕರಿಂದ ತರಬೇತಿ ನೀಡಿದಲ್ಲದೇ ಸ್ಥಳ ಭೇಟಿ, ಜಾಗೃತಿ ಕಾರ್ಯಕ್ರಮ ಸೇರಿದಂತೆ ಹಲವಾರು ಕಾರ್ಯಕ್ರಮವನ್ನು ಮಾಡಲಾಗುತ್ತಿದೆ. ಶೈಕ್ಷಣಿಕ ಹಿತಾದೃಷ್ಠಿಯಿಂದ ಇವರ ಕಾರ್ಯ

ಶ್ಲಾಘನೀಯವಾಗಿದೆ ಎಂದು ತಿಳಿಸಿದರು. ಡಿ.ಕೆ. ಮಂಜಯ್ಯ ಅವರು ಅನೇಕ ಸಭೆ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಹಾಗೂ ಹತ್ತಾರು ಪ್ರಶಸ್ತಿಗಳು ಬಂದಿದ್ದರೂ ಎಲೆಮರೆಯ ಕಾಯಿಯಂತೆ ಶಿಸ್ತು ಬದ್ಧ ಕರ್ತವ್ಯ ನಿರ್ವಹಿಸುವ ಮೂಲಕ ಸಮಾಜಕ್ಕೆ ಮಾಧರಿಯಾಗಿದ್ದಾರೆ. ಇವರು ಮುಂದೆಯೂ ಉತ್ತಮ ಕಾರ್ಯ ಮಾಡಲಿಲ ಎಂದು ಕರ್ನಾಟಕ ರಕ್ಷಣಾ ವೇದಿಕೆವತಿಯಿಂದ ಸನ್ಮಾನಿಸಿ ಗೌರವಿಸಲಾಗಿದೆ.

ಇದೆ ಸಂದರ್ಭದಲ್ಲಿ ಕರವೇ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷರಾದ ಅರುಣಾ ಭಾಸ್ಕರ್ ಹಾಗೂ ಅಧ್ಯಾಪಕ ವೃಂದದವರು ಉಪಸ್ಥಿತರಿದ್ದರು.

Continue Reading

Hassan

ಕೆರೆಯಲ್ಲಿ ಈಜಲು ಹೋಗಿದ್ದ ನಾಲ್ಕು ಮಕ್ಕಳು ಧಾರುಣ ಸಾವು

Published

on

ಹಾಸನ ಜಿಲ್ಲೆ, ಆಲೂರು ತಾಲ್ಲೂಕಿನ, ತಿಮ್ಮನಹಳ್ಳಿ ಗ್ರಾಮದಲ್ಲಿ ಘಟನೆ

ಜೀವನ್ (13), ಸಾತ್ವಿಕ್ (11) ವಿಶ್ವ(12), ಪೃಥ್ವಿ (12 )ಸಾವನ್ನಪ್ಪಿದ್ದ ಮಕ್ಕಳು

ಮೃತ ಮಕ್ಕಳು ಮುತ್ತಿಗೆ ಗ್ರಾಮದವರು

ಶಾಲೆಗೆ ರಜೆ ಇರುವುದರಿಂದ ಕೆರೆಗೆ ಈಜಲು ಹೋಗಿದ್ದ ಮಕ್ಕಳು

ಆಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ

ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ದೌಡು

ಘಟನೆ ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ ಶಾಸಕ ಸಿಮೆಂಟ್ ಮಂಜು

ಈಜಲು ತೆರಳಿದ್ದ ಐವರು ಬಾಲಕರು

ಐವರಲ್ಲಿ ನಾಲ್ವರು ಸಾವು, ಬದುಕುಳಿದ ಓರ್ವ ಬಾಲಕ

ಸಮೀಪದಲ್ಲಿದ್ದವರಿಗೆ ಸುದ್ದಿ ತಿಳಿಸಿದ ಬಾಲಕ

ಕೆರೆ ಬಳಿ ಬಂದು ನೋಡುವಷ್ಟರಲ್ಲಿ ಮುಳುಗಿದ್ದ ನಾಲ್ವರು ಬಾಲಕರು

ಮಕ್ಕಳ ಮೃತದೇಹಕ್ಕಾಗಿ ಅಗ್ನಿಶಾಮಕದಳದ ಸಿಬ್ಬಂದಿಯಿಂದ ಶೋಧಕಾರ್ಯ

Continue Reading

Trending

error: Content is protected !!