Health
Sugar Control ಆಗಬೇಕು ಅಂದ್ರೆ ಈ ಹಿಟ್ಟನ್ನು ತಿನ್ನಬೇಕಂತೆ! ಕನ್ಫ್ಯೂಸ್ ಆಗ್ಬೇಡಿ ಸುದ್ದಿ ಓದಿ
ಮಧುಮೇಹ ಹೊಂದಿರುವ ಜನರು ಅನೇಕ ಆಹಾರ ನಿರ್ಬಂಧಗಳನ್ನು ಹೊಂದಿರುತ್ತಾರೆ. ಇವುಗಳನ್ನು ತಿನ್ನಬಾರದು ಎನ್ನುತ್ತಾರೆ ವೈದ್ಯರು. ಆದರೆ ಕೆಲವು ರೀತಿಯ ಹಿಟ್ಟು ತಿನ್ನುವುದು ಮಧುಮೇಹ ರೋಗಿಗಳಿಗೆ ಒಳ್ಳೆಯದು.
ಮಧುಮೇಹವು ಬಹಳ ಸಂಕೀರ್ಣವಾದ ಕಾಯಿಲೆಯಾಗಿದೆ. ಅದರಿಂದ ಬಳಲುತ್ತಿರುವಾಗ, ದೇಹದ ಹಾರ್ಮೋನುಗಳ ಸಮತೋಲನವು ತೊಂದರೆಗೊಳಗಾಗುತ್ತದೆ. ಇದು ದೇಹದಲ್ಲಿ ರಕ್ತದಲ್ಲಿನ ಸಕ್ಕರೆಯನ್ನು ಹೆಚ್ಚಿಸುತ್ತದೆ. ಇದರಿಂದ ದೇಹದಲ್ಲಿ ಹಲವಾರು ಸಮಸ್ಯೆಗಳು ಉಂಟಾಗುತ್ತವೆ.

ಮಧುಮೇಹಿಗಳು ತಾವು ಏನು ತಿನ್ನುತ್ತೇವೆ ಮತ್ತು ಕುಡಿಯುತ್ತೇವೆ ಎಂಬುದರ ಬಗ್ಗೆ ವಿಶೇಷ ಗಮನ ಹರಿಸಬೇಕು. ಅಕ್ಕಿ ರೊಟ್ಟಿ ತಿನ್ನುವುದನ್ನು ನಿಲ್ಲಿಸುವಂತೆ ಆರೋಗ್ಯ ತಜ್ಞರು ಸಲಹೆ ನೀಡಿದ್ದಾರೆ. ಮಧುಮೇಹ ಹೊಂದಿರುವ ವ್ಯಕ್ತಿಯು ರುಚಿಕರವಾದ ತಿಂಡಿಯನ್ನು ಆನಂದಿಸಲು ಸಾಧ್ಯವಿಲ್ಲ ಎಂದು ಇದರ ಅರ್ಥವಲ್ಲ. ಮಧುಮೇಹಿಗಳು ಸಾಮಾನ್ಯ ಹಿಟ್ಟಿನ ಬದಲಿಗೆ ಇತರ ರೀತಿಯ ಬ್ರೆಡ್ ಅನ್ನು ತಿನ್ನಬಹುದು.
ಮಧುಮೇಹಿಗಳು ಯಾವುದೇ ಗೊಂದಲವಿಲ್ಲದೆ ತಮ್ಮ ಆಹಾರದಲ್ಲಿ 5 ಬಗೆಯ ಹಿಟ್ಟನ್ನು ಸೇರಿಸಿಕೊಳ್ಳಬಹುದು. ಅದರಲ್ಲಿ ರಾಗಿ ಹಿಟ್ಟು ಕೂಡ ಒಂದು. ಇದು ಪ್ರತ್ಯೇಕವಾದ ಪ್ರೋಟೀನ್ಗಳನ್ನು ಒಳಗೊಂಡಿದೆ. ಇದು ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ನೀವು ಅದರಿಂದ ಬ್ರೆಡ್ ಅಥವಾ ಬ್ರೆಡ್ ತಯಾರಿಸಬಹುದು.

ಮಧುಮೇಹಿಗಳು ಬೆಲ್ಲದ ರೊಟ್ಟಿಯನ್ನು ತಿನ್ನಬಹುದು. ಇದು ಕಡಿಮೆ ಗ್ಲೈಸೆಮಿಕ್ ಇಂಡೆಕ್ಸ್ ಹಿಟ್ಟು. ಇದು ಸಕ್ಕರೆಯನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಇದು ಫೈಬರ್, ಮೆಗ್ನೀಸಿಯಮ್ ಮತ್ತು ರಂಜಕದಂತಹ ಪೋಷಕಾಂಶಗಳನ್ನು ಒಳಗೊಂಡಿದೆ. ಇದರಿಂದ ದೋಸೆ, ಪರ್ಟಾ ಮತ್ತಿತರ ಆಹಾರ ತಯಾರಿಸಬಹುದು.
ರಾಗಿ ಹಿಟ್ಟು ಮಧುಮೇಹ ನಿವಾರಕ ಗುಣಗಳಿಂದ ಸಮೃದ್ಧವಾಗಿದೆ. ಇದು ದೇಹದಲ್ಲಿ ಇನ್ಸುಲಿನ್ ಉತ್ಪಾದನೆಯನ್ನು ಹೆಚ್ಚಿಸುತ್ತದೆ. ಅಷ್ಟೇ ಅಲ್ಲ ರಕ್ತದಲ್ಲಿನ ಸಕ್ಕರೆ ಅಂಶವನ್ನು ನಿಯಂತ್ರಣದಲ್ಲಿಡುತ್ತದೆ.
ಪ್ರೋಟೀನ್ನ ಉತ್ತಮ ಮೂಲವೆಂದರೆ ಸೋಯಾದಿಂದ ಮಾಡಿದ ಹಿಟ್ಟು. ಇದು ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಇದು ಜೀರ್ಣಕ್ರಿಯೆಗೆ ಸಹಾಯ ಮಾಡುವ ಫೈಬರ್ನಲ್ಲಿ ಸಮೃದ್ಧವಾಗಿದೆ. ನಂತರ ಇದನ್ನು ಗೋಧಿಯಿಂದ ಮಾಡಿದ ಹಿಟ್ಟಿಗೆ ಸೇರಿಸಲಾಗುತ್ತದೆ ಮತ್ತು ಆಹಾರವಾಗಿ ಬಳಸಲಾಗುತ್ತದೆ.

ತೆಂಗಿನಕಾಯಿಯಿಂದಲೂ ಹಿಟ್ಟು ತಯಾರಿಸಬಹುದೆಂದು ಅನೇಕರಿಗೆ ತಿಳಿದಿಲ್ಲ. ಆದರೆ ತೆಂಗಿನಕಾಯಿಯಿಂದಲೂ ಹಿಟ್ಟನ್ನು ತಯಾರಿಸಲಾಗುತ್ತದೆ. ಮಧುಮೇಹಿಗಳಿಗೆ ಇದು ಪರಿಪೂರ್ಣ ಆಯ್ಕೆಯಾಗಿದೆ. ನೀವು ಅದರಿಂದ ಪ್ಯಾನ್ಕೇಕ್ಗಳು ಅಥವಾ ಬ್ರೆಡ್ ಮಾಡಬಹುದು.
Health
ಈ ಲಕ್ಷಣಗಳು ಕಂಡು ಬಂದರೆ ಅದು ಶ್ವಾಸಕೋಶ ಕ್ಯಾನ್ಸರ್ : ಆರಂಭದಲ್ಲೇ ಪತ್ತೆ ಹಚ್ಚಿ ಜೀವ ಉಳಿಸಿಕೊಳ್ಳಿ
Lung Cancer Symptoms – ಯಾವುದೇ ಒಂದು ರೋಗ ಬಂದರೆ ಅದನ್ನು ನಾವು ಆರಂಭದ ಹಂತದಲ್ಲೇ ಕಂಡುಕೊಂಡಲ್ಲಿ ಸುಲಭವಾಗಿ ಮತ್ತು ವೇಗವಾಗಿ ಅದಕ್ಕೆ ಉಪಾಯ ಕಂದುಕೊಳ್ಳಬಹುದು. ಇದರಿಂದ ಅಮೂಲ್ಯ ಜೀವಗಳನ್ನು ಉಳಿಸಬಹುದು.
ಈ ಲೇಖನದಲ್ಲಿ ನಾವು ಶ್ವಾಸಕೋಶ ಕ್ಯಾನ್ಸರ್ ನ ಪ್ರಮುಖ ಲಕ್ಷಣಗಳು ಯಾವವು? ಶ್ವಾಶಕೋಶ ಕಾಯಿಲೆಗಳನ್ನು ಹೇಗೆ ತಡೆಗಟ್ಟಬೇಕು ಎಂಬ ಮಾಹಿತಿಯನ್ನು ಇಲ್ಲಿ ತಿಳಿಸಿದ್ದೇವೆ.
ಶ್ವಾಸಕೋಶ ಕಾಯಿಲೆಗಳ ಪ್ರಮುಖ ಲಕ್ಷಣಗಳು :
* ಎದೆ ನೋವು
* ವಿಪರೀತ ಕೆಮ್ಮು
* ಕಫದಲ್ಲಿ ರಕ್ತ
* ಉಸಿರಾಟದ ತೊಂದರೆ

* ಧ್ವನಿಯಲ್ಲಿ ಒಂಟಿತನ
* ಉಬ್ಬಸ
* ಹಸಿವು ಆಗದೇ ಇರುವುದು
* ದೇಹದ ತೂಕ ಕಡಿಮೆ ಆಗುವುದು
ಈ ಮೇಲಿನ ಯಾವುದಾದರೂ ಲಕ್ಷಣಗಳು ನಿಮಗೆ ಕಂಡು ಬಂದಲ್ಲಿ ತಕ್ಷಣವೇ ನಿಮ್ಮ ಹತ್ತಿರದ ಸರ್ಕಾರಿ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ವೈದ್ಯರ ಸಲಹೆ ಪಡೆದು ಸರಿಯಾದ ಮಾಹಿತಿ ತಿಳಿದುಕೊಳ್ಳಿ.

ಶ್ವಾಸಕೋಶ ಕಾಯಿಲೆಯ ಅಪಾಯಗಳನ್ನು ಕಡಿಮೆ ಮಾಡುವುದು ಹೇಗೆ?
* ಪ್ರಮುಖವಾಗಿ ಧೂಮಪಾನ ಮಾಡುವವರು ಧೂಮಪಾನವನ್ನು ತಿಳಿಸಬೇಕು ಏಕೆಂದರೆ ಇದರಿಂದ ಲಂ ಕ್ಯಾನ್ಸರ್ ಆಗುವ ಸಾಧ್ಯತೆಗಳು ಹೆಚ್ಚಿರುತ್ತದೆ.
* ಮಾಲಿನ್ಯಕಾರಕಗಳಿಂದ ದೂರವಿರಬೇಕು
* ಆರೋಗ್ಯಕರ ಹಾಗೂ ಮನೆಯಲ್ಲಿಯೇ ತಯಾರಿಸಿದ ಆಹಾರವನ್ನು ಸೇವಿಸಬೇಕು.
* ನಿಯಮಿತವಾಗಿ ವ್ಯಾಯಾಮ ಮಾಡಿ ಹಾಗೂ ನೈರ್ಮಲ್ಯವನ್ನು ಕಾಪಾಡಿಕೊಳ್ಳಿ.
ನೆನಪಿಡಿ: ನಾವು ಯಾವುದೇ ಒಂದು ಅಮೂಲ್ಯ ಜೀವವನ್ನು ಉಳಿಸಲು ರೋಗ ಬಾರ್ದಂತೆ ತಡೆಗಟ್ಟುವುದು ಮತ್ತು ಅದನ್ನು ಆರಂಭದಲ್ಲಿಯೇ ಪತ್ತೆ ಹಚ್ಚುವುದು ಪ್ರಮುಖವಾಗಿರುತ್ತದೆ.
Health
ಜಂಕ್ ಫುಡ್ ತ್ಯೆಜಿಸಿ, ಪೌಷ್ಟಿಕ ಆಹಾರ ಸೇವಿಸಿ : ಎಸ್.ಡಿ.ಬೆನ್ನೂರ್
ಶ್ರೀರಂಗಪಟ್ಟಣ : ಪ್ರತಿಯೊಬ್ಬರಿಗೂ ಪೌಷ್ಟಿಕ ಆಹಾರ ಅಗತ್ಯವಾಗಿದ್ದು ಹಾಗಾಗಿ ಜಂಕ್ ಫುಡ್ ತ್ಯಜಿಸಿ ಕಬ್ಬಿಣಾಂಶ ಹೆಚ್ಚಾಗಿರುವ ಆಹಾರ ಪದಾರ್ಥಗಳನ್ನು ಸೇವಿಸಿ ಎಂದು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎಸ್ ಡಿ ಬೆನ್ನೂರ್ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ತಾಲ್ಲೂಕಿನ ಹುಲಿಕೆರೆ ಗ್ರಾಮದಲ್ಲಿ ಗ್ರಾಮ ಪಂಚಾಯಿತಿ ವತಿಯಿಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ “ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ”ದಲ್ಲಿ ಅಭ್ಯಾಸ ಮಾಡುತ್ತಿರುವ ಮಕ್ಕಳಿಗೆ “ಪೌಷ್ಠಿಕ ಆಹಾರದ ಮಹತ್ವ ಹಾಗೂ ವೈಯಕ್ತಿಕ ಅರೋಗ್ಯದ ಬಗ್ಗೆ” ಅರಿವು ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.
ದೇಹದ ಬೆಳವಣಿಗೆಗೆ,ಮಾಸ ಖಂಡಗಳ ನಿರ್ಮಾಣಕ್ಕೆ,ರಕ್ತ ಉತ್ಪಾದನೆಗೆ, ಮೂಳೆಗಳ ತಯಾರಿಗೆ ಹಾಗೂ ಉತ್ತಮ ಅರೋಗ್ಯಕ್ಕೆ ಪೌಷ್ಠಿಕ ಆಹಾರ ಅಗತ್ಯವಾಗಿ ಬೇಕು. ರಕ್ತ ಹೀನತೆಯಿಂದ ನಾನಾ ಖಾಯಿಲೆಗಳು ಬರುತ್ತವೆ ಮತ್ತು ಕಲಿಕೆಯಲ್ಲಿ ಗ್ರಹಿಕಾ ಶಕ್ತಿ ಕಡಿಮೆಯಾಗಿ ವಿದ್ಯಾಭ್ಯಾಸದ ಮೇಲೆ ಪರಿಣಾಮ ಬೀರುತ್ತದೆ ಹಾಗಾಗಿ ರಕ್ತ ಹೀನತೆ ಅಲಕ್ಷ ಬೇಡ ಕಬ್ಬಿಣಾಂಶ ಕೊರತೆಯಿಂದ ಹಿಮೊಗ್ಲೋಬಿನ್ ಕಡಿಮೆಯಾಗುತ್ತದೆ ಇದರಿಂದ ಸುಸ್ತು,ಆಯಾಸ ಆಗುತ್ತದೆ ಆದ್ದರಿಂದ ಸಕ್ಕರೆ,ಜ್ಯೂಸ್,ತಂಪು ಪಾನೀಯಗಳು, ಸಿಹಿ ತಿಂಡಿ, ಖರಿದ ಮತ್ತು ಎಣ್ಣೆ ಪದಾರ್ಥಗಳು ತಿನ್ನದಿರುವುದು ಒಳ್ಳೆಯದು. ಹಾಲು ಮತ್ತು ಹಾಲಿನ ಉತ್ಪನ್ನಗಳು,ಮಾಂಸ, ಮೀನು ಮತ್ತು ಮೊಟ್ಟೆ ಮಿತವಾಗಿ ಬಳಸಬೇಕು. ತರಕಾರಿ ಮತ್ತು ಹಣ್ಣುಗಳು ನಿಯಮಿತವಾಗಿ ಸೇವಿಸಿ ಚಪಾತಿ, ಅನ್ನ, ರಾಗಿ ಮುದ್ದೆ ದವಸ ಮತ್ತು ಧಾನ್ಯಗಳನ್ನು ಹೆಚ್ಛಾಗಿ ತೆಗೆದು ಕೊಳ್ಳಬಹುದಾದ ಆಹಾರಗಳಾಗಿವೆ. ಆದ್ದರಿಂದ ದಿನನಿತ್ಯ ಪೌಷ್ಟಿಕ ಆಹಾರ ತಪ್ಪದೇ ಸೇವನೆ ಮಾಡಬೇಕೆಂದು ಮಕ್ಕಳಿಗೆ ಸಲಹೆ ನೀಡಿದರು.

ನಂತರ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಟಿ ಟಿ ಜ್ಯೋತಿ ಮಕ್ಕಳಿಗೆ ವೈಯಕ್ತಿಕ ಶುಚಿತ್ವದ ಕುರಿತು ಹಾಗೂ ಕೈ ತೊಳೆಯುವ ವೈಜ್ಞಾನಿಕ ವಿಧಾನಗಳ ಕುರಿತು ಆರೋಗ್ಯ ಶಿಕ್ಷಣ ನೀಡಿದರು. ಈ ವೇಳೆ ಗ್ರಂಥಾಲಯ ಮೇಲ್ವಿಚಾರಕಿ ಪುಷ್ಪಲತಾ,
ಸಮುದಾಯ ಆರೋಗ್ಯ ಅಧಿಕಾರಿ ಉಷಾ, ಆಶಾ ಕಾರ್ಯಕರ್ತೆ ಜ್ಯೋತಿ ಉಪಸ್ಥಿತರಿದ್ದರು.
Health
ತೋಟಗಾರಿಕೆ ಇಲಾಖೆಯಲ್ಲಿ ಯುವಕರಿಗೆ ಶಿಷ್ಯವೇತನದ ಜೊತೆಗೆ ಉಚಿತ 10 ತಿಂಗಳ ತರಬೇತಿ : ಅರ್ಜಿ ಅಹ್ವಾನ
Free Training by Horticulture Department : ರಾಜ್ಯ ತೋಟಗಾರಿಕೆ ಇಲಾಖೆಯು 2025 – 26 ನೇ ಸಾಲಿಗೆ ತೋಟಗಾರಿಕೆ ತರಬೇತಿ ಕೇಂದ್ರಗಳಲ್ಲಿ ವೈಜ್ಞಾನಿಕವಾಗಿ ಉತ್ತಮ ತೋಟಗಾರಿಕೆ ಬೆಳೆಗಳನ್ನು ಬೆಳೆಯಲು ಹಾಗೂ ಆರ್ಥಿಕವಾಗಿ ಸಬಲರಾಗಲು ಅವಶ್ಯವಿರುವ ತರಬೇತಿಯನ್ನು ಯುವಕರಿಗೆ ಉಚಿತವಾಗಿ ನೀಡಲು ಅರ್ಜಿ ಆಹ್ವಾನಿಸಿದೆ.
ಉಚಿತ ತರಬೇತಿ ಯೋಜನೆಯ ವಿವರ :
ಈ ಉಚಿತ ತರಬೇತಿಯನ್ನು ಒಟ್ಟು 10 ತಿಂಗಳ ಅವಧಿಯವರೆಗೆ ನೀಡಲಾಗುವುದು. ತರಬೇತಿಯು ಮೇ 02, 2025 ರಿಂದ ಆರಂಭವಾಗಲಿದೆ. ವಿಶೇಷವೇನೆಂದರೆ ಈ ಉಚಿತ ತರಬೇತಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತರಬೇತಿಯ ಅವಧಿಯಲ್ಲಿ ಮಾಸಿಕ 1,750ರೂ. ಶಿಷ್ಯವೇತನವನ್ನು ನೀಡಲಾಗುತ್ತದೆ.
ಯಾರು ಅರ್ಜಿ ಸಲ್ಲಿಸಬಹುದು?
ತೋಟಗಾರಿಕೆ ಇಲಾಖೆಯ ಈ ಉಚಿತ ತರಬೇತಿಗೆ ಅರ್ಜಿ ಸಲ್ಲಿಸಲು ಕೇವಲ ರೈತರ ಮಕ್ಕಳಿಗೆ ಮಾತ್ರ ಅವಕಾಶವಿದೆ. ಅದೇ ರೀತಿ ಕನಿಷ್ಠ 10ನೇ ತರಗತಿ ಪಾಸಾಗಿರಬೇಕು ಹಾಗೂ 18 ರಿಂದ 30 ವರ್ಷದ ವಯೋಮಿತಿಯಲ್ಲಿರಬೇಕು. ಮೀಸಲಾತಿ ಕೋರುವ ಅಭ್ಯರ್ಥಿಗಳಿಗೆ ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗುವುದು.
ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಯಾವಾಗ?
ಅರ್ಜಿ ಸಲ್ಲಿಸಲು ನೀವು ಅರ್ಹತೆ ಹೊಂದಿದ್ದಲ್ಲಿ, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಕಚೇರಿಯಲ್ಲಿ ಅಥವಾ ಆನ್ಲೈನ್ ಮೂಲಕ ಅರ್ಜಿ ಫಾರಂ ಪಡೆದು ಸರಿಯಾದ ಮಾಹಿತಿಯನ್ನು ಭರ್ತಿ ಮಾಡಿ, ” ತೋಟಗಾರಿಕೆ ಉಪ ನಿರ್ದೇಶಕರು ಜಿಲ್ಲಾ ಪಂಚಾಯತ್ ಧಾರವಾಡ ಕಚೇರಿಗೆ” ಸಲ್ಲಿಸಬೇಕು.
ತೋಟಗಾರಿಕೆ ಇಲಾಖೆಯ ಅಧಿಕೃತ ಜಾಲತಾಣ : https://horticulturedir.karnataka.gov.in/
-
Mandya4 hours agoಡಿ.17ಕ್ಕೆ ಮಳವಳ್ಳಿಗೆ ರಾಷ್ಟ್ರಪತಿ ಆಗಮನ : ಜಿಲ್ಲಾಧಿಕಾರಿಗಳಿಂದ ಸ್ಧಳ ಪರಿಶೀಲನೆ
-
Mysore2 hours agoಮೈಸೂರು ದಸರಾ: ಮಹಿಳಾ ಉದ್ಯಮಿ ಉಪಸಮಿತಿಗೆ ಎಸ್. ರಂಗನಾಥ ಸಂಚಾಲಕರಾಗಿ ನೇಮಕ
-
Mandya11 hours agoಡಿ 10 ಶ್ರೀರಂಗಪಟ್ಟಣ ಸೇರಿದಂತೆ ವಿವಿದೆಡೆ ವಿದ್ಯುತ್ ಕಡಿತ
-
Hassan7 hours agoಜಿಲ್ಲಾ ಮಟ್ಟದ ಅಂತರಶಾಲಾ ಚೆಸ್ ಸ್ಪರ್ಧೆ ಯಶಸ್ವಿ
-
Hassan6 hours agoಎಂಸಿಇ ಕಾಲೇಜಿನ ಸಿವಿಲ್ ವಿಭಾಗದಲ್ಲಿ ಸ್ಪೋರ್ಟ್ಸ್ ವಿಜೇತರಿಗೆ ಸನ್ಮಾನ
-
Mysore13 hours agoಡಾ.ಬಿ.ಆರ್. ಅಂಬೇಡ್ಕರ್ 69ನೇ ಮಹಾ ಪರಿನಿಬ್ಬಾಣ ದಿನ: ಸೇವಾ ಕಾರ್ಯದೊಂದಿಗೆ ಗೌರವ ನಮನ
-
Kodagu8 hours agoಸಂವಿಧಾನದ ರಕ್ಷಣೆ ನಮ್ಮೆಲ್ಲರ ಹೊಣೆ : ಗಾಯತ್ರಿ ನರಸಿಂಹ
-
Mysore6 hours agoದೌರ್ಜನ್ಯ ತಡೆಗೆ ಕೆಪಿಎ- ಸಾವಿತ್ರಿಬಾ ಫುಲೆ ಸಂಸ್ಥೆ ನಡುವೆ ಒಡಂಬಡಿಕೆ
