Connect with us

Hassan

ನಮ್ಮ ನಾಯಕ ರೇವಣ್ಣ ಅವರ ಬಂಧನ ಸರಿಯಲ್ಲ : ಸ್ವರೂಪ್

Published

on

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರಧ್ದು ಎನ್ನಲಾದ ಅಶ್ಲೀಲ ವೀಡಿಯೋ ವೈರಲ್ ಪ್ರಕರಣ..

ಹಾಸನದಲ್ಲಿ ಶಾಸಕ ಸ್ವರೂಪ್ ಪ್ರಕಾಶ್ ಹೇಳಿಕೆ

ಪೆನ್ ಡ್ರೈವ್ ಹಂಚಿದವರಿಗೆ ತಕ್ಕ ಶಿಕ್ಷೆ ಆಗಬೇಕು

ಸರ್ಕಾರ ಹಾಗು ಎಸ್ ಐ ಟಿ ಈ ಪೆನ್ ಡ್ರೈವ್ ಹಂಚಿದವರ ಬಂಧನ ಮಾಡಬೇಕು

ನೆನ್ನೆ ಇಬ್ಬರ ಬಂಧನ ಆಗಿದೆ, ಆದರೆ ಇದರಲ್ಲಿ ಇನ್ನೂ ಹಲವರು ಭಾಗಿಯಾಗಿದ್ದಾರೆ

ಪೆನ್‌ಹಂಚಿಕೆ ಬೇಸರದ ಸಂಗತಿ

ನಮ್ಮ‌‌ಜಿಲ್ಲೆ ಹೆಣ್ಣು ಮಕ್ಕಳ ಗೌರವ ಹಾಳು ಮಾಡಲಾಗಿದೆ

ಹಾಗಾಗಿ ಈ ಪ್ರಕರಣದ ಆರೋಪಿಗಳಿಗೆ ತಕ್ಕ ಶಿಕ್ಷೆ ಆಗಬೇಕು

ಪ್ರಜ್ವಲ್ ರೇವಣ್ಣ ಅವರ ಪ್ರಕರಣ ಎಸ್ ಐ ಟಿ ತನಿಖೆ ನಡೆಯುತ್ತಿದೆ

ಸತ್ಯಾ ಸತ್ಯತೆ ಏನೆಂದು ಹೊರ ಬರಬೇಕು

ನಮ್ಮ ಯಾರೇ ಇರಲಿ ತಪ್ಪಾಗಿದ್ದರೆ ತಪ್ಪೇ

ಈ ಪ್ರಕರಣ ತನಿಖೆ ಸಿಬಿಐಗೆ ವಹಿಸಿ ಎಂದು ಕುಮಾರಣ್ಣ ಹೇಳಿದಾರೆ

ಹಾಗಾಗಿ ತನಿಖೆಯಾಗಿ ಸತ್ಯ ಹೊರ ಬರಲಿ ಎಂದ ಸ್ವರೂಪ್

ಒಂದೇ‌ದಿನದಲ್ಲಿ‌ಕೇಸ್ ಹಾಕಿ, ಬಂಧನ ಮಾಡಿ‌ ಜೈಲಿಗೆ ಕಳಿಸಲಾಗಿದೆ

ನಮ್ಮ ನಾಯಕರಾದ ರೇವಣ್ಣ ಅವರ ಬಂಧನ ಸರಿಯಲ್ಲ

ಶೀಘ್ರವಾಗಿ ಸರ್ಕಾರ ಅವರ ಮೇಲಿನ ಕೇಸ್ ಹಿಂಪಡೆಯಬೇಕು ಎಂದು ಆಗ್ರಹ

ರೇವಣ್ಣ ಅವರಿಗೆ ಇಂದು ಬೇಲ್ ಸಿಗೊ ಸಾದ್ಯತೆ ಇದೆ

ಅಪಹರಣ ಆಗಿತ್ತು ಎನ್ನೋ ಮಹಿಳೆಯೇ ಹೇಳಿಕೆ ಕೊಟ್ಟಿದಾರೆ

ನೆನ್ನೆಯೇ ಈ ವೀಡಿಯೋ ವೈರಲ್ ಆಗಿದೆ

ಹಾಗಾಗಿ ಸತ್ಯಕ್ಕೆ ಜಯ ಸಿಗಲಿದೆ ಎಂಬ ವಿಶ್ವಾಸ ಇದೆ

ನಾವು ಸಂತ್ರಸ್ಥ ರ ಪರವಾಗಿ ಇರುತ್ತೇವೆ

ಪೆ‌ನ್ ಡ್ರೈವ್ ಹಂಚಿಕೆ ಹಿಂದೆ ದೊಡ್ಡ ದೊಡ್ಡ ಕೈಗಳಿರೊ ಅನುಮಾನ ಇದೆ

ಈಗ ಕೆಲವರ ಬಂಧನ ಆಗಿದೆ ಆದರೆ ಇದರ ಹಿಂದೆ ಇರೋರನ್ನು ಕೂಡ ಬಂದಿಸಬೇಕು

ಸಂತ್ರಸ್ಥ ಮಹಿಳೆಯರಿಗೆ ಒತ್ತಡ ಹಾಕಲಾಗುತ್ತಿದೆ ಎಂಬ ವಿಚಾರ

ಈ ಬಗ್ಗೆ ನಾನೂ ಕೂಡ ಮಾಧ್ಯಮದಲ್ಲಿ ಗಮನಿಸಿದ್ಸೇನೆ

ಇದರಲ್ಲಿ ಸತ್ಯ ಏನು ಎನ್ನೋದು ತಿಳಿಯಬೇಕು

ಪ್ರಜ್ವಲ್ ರೇವಣ್ಣ ಅವರು ಯಾರ ಜೊತೆಯು ಸಂಪರ್ಕದಲ್ಲಿ‌ ಇಲ್ಲ

ನೆನ್ನೆ ಎಸ್ ಐ ಟಿ ತಂಡ ಹೋಗಿದೆ ಎನ್ನೊ ಮಾಹಿತಿ ಇದೆ ಅವರ ಬಗ್ಗೆ ಮಾಹಿತಿ ಇಲ್ಲಾ ಎಂದ ಸ್ವರೂಪ್

ನೆನ್ನೆ ಮಾಜಿ ಶಾಸಕರ ಆಪ್ತರ ಬಂದನ ಎಂದು ಗಮನಿಸಿದ್ದೇನೆ

ಹಾಗಾಗಿ ಈ ಪ್ರಕರಣ ದಲ್ಲಿ ಎಷ್ಟೇ ದೊಡ್ಡವರಿದ್ದರೂ ಬಂದಿಸಿ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹ

ವೀಡಿಯೊ ವೈರಲ್ ಹಿಂದೆ ಡಿಕೆ ಶಿವಕುಮಾರ್ ‌ಕೈವಾಡ ಎಂಬ ವಕೀಲ ದೇವರಾಜೇಗೌಡ ಆರೋಪ ವಿಚಾರ

ದೇವರಾಜೇಗೌಡ ನನಗೆ ಪರಿಚಯ ಇಲ್ಲ..

ಅವರು ಹಿಂದೆ ನನ್ನ ಬಗ್ಗೆ ಕೂಡ ಕೀಳುಮಟ್ಟದ ಮಾತಾಡಿದಾಗಲು ನಾನು ಪ್ರತಿಕ್ರಿಯೆ ನೀಡಿಲ್ಲ

ಈಗ ಅವರು ಡಿಕೆ ಶಿವಕುಮಾರ್ ಬಗ್ಗೆ ಇರಲಿ, ಬೇರೆಯವರ ಬಗ್ಗೆ ಇರಲಿ ಆರೋಪ ಮಾಡಿದಾರೆ

ಈ ಬಗ್ಗೆ ನನಗೆ ಗೊತ್ತಿಲ್ಲ, ತನಿಖೆಯಿಂದ ಎಲ್ಲ ತಿಳಿಯಲಿದೆ ಎಂದ ಶಾಸಕ ಸ್ವರೂಪ್

ಪೆನ್ ಡ್ರೈವ್ ಹಂಚಿಕೆ ಸಣ್ಣ ಪುಟ್ಟವರ ಕೆಲಸ. ಅಲ್ಲ..

ಇದರ ಹಿಂದೆ ದೊಡ್ಡ ವರು ಇರಬಹುದು ತನಿಖೆ ಆಗಬೇಕು

ಐವರ ವಿರುದ್ದ ಕೇಸ್ ದಾಖಲಾದರು ಬಂದನ ಆಗಿಲ್ಲ

ಅವರನ್ನ ಶೀಘ್ರವಾಗಿ ಬಂದಿಸಬೇಕು

ನೆನ್ನೆ ರೇವಣ್ಣ ಅವರನ್ನು ಬೇಟಿಯಾಗಲು ಹೋಗಿದ್ದೆ

ಅದರೆ ಅವರ ಬೇಟಿಗೆ ಅವಕಾಶ ಸಿಗಲಿಲ್ಲ

 

ಕುಮಾರಸ್ವಾಮಿ ದೇವೇಗೌಡ ಅವರನ್ನು ಬೇಟಿಯಾಗಿ ಬಂದಿದ್ದೇನೆ

ಪೆನ್ ಡ್ರೈವ ಹಂಚಿಕೆಯಲ್ಲಿ ಎ ಮಂಜು ಪಾತ್ರ ಎಂಬ ನವೀನ್ ಗೌಡ ಫೇಸ್ ಬುಕ್ ಪೊಸ್ಟ್ ವಿಚಾರ.

ನನಗೆ ನವೀನ್ ಗೌಡ ,ಚೇತನ್ ಯಾರೂ ಗೊತ್ತಿಲ್ಲ

ಈ ಬಗ್ಗೆ ನಾನು ಗಮನಿಸಿದೆ,ಇದರಲ್ಲಿ ಸತ್ಯ ಇದೆಯಾ ಎನ್ನೋದು ನನಗೆ ಗೊತ್ತಿಲ್ಲ

ದೇವೇಗೌಡ ರ ಕುಟುಂಬ ವನ್ನು ಸಿಲುಕಿಸಲು ನಮ್ಮ ನಾಯಕ ರೇವಣ್ಣ ಬಂಧನ ಆಗಿದೆ ಇದು ತಪ್ಪು

ರೇವಣ್ಣ ಅವರದ್ದು ಮಗುವಿನ ಮನಸ್ಸು ಅವರ ವಿರುಧ್ದ ಕೇಸ್ ಸರಿಯಲ್ಲ

ರಾಜಕಾರಣ ದಲ್ಲಿ ಇಂತಹ ಕೀಳುಮಟ್ಟದ ಕೆಲಸ ಮಾಡಬಾರದು

ಈ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಆಗ್ರಹ

Continue Reading
Click to comment

Leave a Reply

Your email address will not be published. Required fields are marked *

Hassan

ಸಮಾಜ ಸೇವಕ ಪುನೀತ್ ಬನ್ನಹಳ್ಳಿಗೆ ಧರ್ಮ ಸಂವರ್ಧಕ ಪ್ರಶಸ್ತಿ

Published

on

ವರದಿ ಸತೀಶ್ ಚಿಕ್ಕಕಣಗಾಲು

ಆಲೂರು: ಭಕ್ತರಿಗೆ ಸೇವಾ ಸಮರ್ಪಣಾ ಮನೋಭಾವ ಇದ್ದಾಗ ಮಾತ್ರ ಮಠಗಳು ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಕಾರ್ಜುವಳ್ಳಿ ಹಿರೇಮಠದ ಪೀಠಾಧ್ಯಕ್ಷರಾದ ಶ್ರೀ ಸದಾಶಿವ ಶಿವಾಚಾರ್ಯ ಮಹಾಸ್ವಾಮಿಗಳು ಹೇಳಿದರು.

ತಾಲೂಕಿನ ಪಾಳ್ಯ ಹೋಬಳಿಯ ಕಾರ್ಜುವಳ್ಳಿ ಗ್ರಾಮದ ಶ್ರೀಮದ್ ರಂಭಾಪುರಿ ವೀರಸಿಂಹಾಸನ ಶಾಖಾ ಶ್ರೀ ಸಂಸ್ಥಾನ ಹಿರೇಮಠದಲ್ಲಿ ಸಕಲೇಶಪುರದ ಸಮಾಜ ಸೇವಕ ಪುನೀತ್ ಬನ್ನಹಳ್ಳಿ ಅವರಿಗೆ ಧರ್ಮ ಸಂವರ್ಧಕ ಎಂಬ ಪ್ರಶಸ್ತಿಯನ್ನು ನೀಡಿ ಆರ್ಶೀವದಿಸಿ ನಂತರ ಮಾತನಾಡಿದರು.

ಭಕ್ತರು ಮಠದ ಆಧಾರ ಸ್ತಂಭವಾದಾಗ ಮಠಗಳು ಕಲ್ಯಾಣ ಕಾರ್ಯ ನಡೆಸಲು ಸಾಧ್ಯವಾಗುತ್ತದೆ. ಸಂಸ್ಥಾನ ಶ್ರೀಮಠಕ್ಕೆ ತನ್ನದೇ ಇತಿಹಾಸವಿದೆ, ಪ್ರತಿಯೊಬ್ಬರೂ ಜೀವನದಲ್ಲಿ ದಾನ, ಧರ್ಮ, ಸನ್ಮಾರ್ಗ, ಸದ್ವಿಚಾರ ಆಳವಡಿಸಿಕೊಳ್ಳಬೇಕು ಎಂದರು.

ಕಾರ್ಜುವಳ್ಳಿ ಹಿರೇಮಠದಲ್ಲಿ ಪ್ರತಿ ವರ್ಷ ಲಿಂ.ರುದ್ರಮುನಿ ಶಿವಾಚಾರ್ಯ ಸ್ವಾಮೀಜಿಗಳ ಪುಣ್ಯಸ್ಮರಣೋತ್ಸವ ಹಾಗೂ ಶ್ರೀ ಸದಾಶಿವ ಶಿವಾಚಾರ್ಯ ಸ್ವಾಮೀಜಿ ಪಟ್ಟಾಧಿಕಾರದ ವಾರ್ಷಿಕೋತ್ಸವ-ವರ್ಧಂತಿ ಮಹೋತ್ಸವದ ಅಂಗವಾಗಿ ಶ್ರೀ ಮಠದಲ್ಲಿ ಐದನೇ ದಿನಗಳ ಕಾಲ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನ ಆಯೋಜನೆ ಮಾಡುವ ಮೂಲಕ ಸಮಾಜದ ಅಭಿವೃದ್ಧಿಗಾಗಿ ಶ್ರಮಿಸುವ ಗಣ್ಯರನ್ನು ಗುರುತಿಸಿ ವಿಶೇಷ ಪ್ರಶಸ್ತಿಗಳನ್ನು ನೀಡುವ ಮೂಲಕ ಅವರನ್ನು ಗೌರವಿಸಿ ಸನ್ಮಾನಿಸಲಾತಿದೆ ಆ ನಿಟ್ಟಿನಲ್ಲಿ ಸಕಲೇಶಪುರದ ಸಮಾಜ ಸೇವಕ ಪುನೀತ್ ಬನ್ನಹಳ್ಳಿ ಅವರಿಗೆ ಧರ್ಮ ಸಂವರ್ಧಕ ಎಂಬ ಪ್ರಶಸ್ತಿಯನ್ನು ನೀಡಲಾಗಿತ್ತು ಆ ದಿನ ಅವರು ಕಾರಣಾಂತರಗಳಿಂದ ಕಾರ್ಯಕ್ರಮಕ್ಕೆ ಹಾಜರಾಗಲು ಸಾಧ್ಯವಾಗದ ಕಾರಣ ಇಂದು ಅವರನ್ನು ಶ್ರೀಮಠಕ್ಕೆ ಕರೆಸಿ ಈ ಪ್ರಶಸ್ತಿಯನ್ನು ನೀಡಲಾಗುತ್ತಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ನಿರಂಜನ, ಕುಮಾರ್, ಪುರೋಹಿತ ಶಶಿ ವಿರುಪಾಪುರ ಸೇರಿದಂತೆ ಮುಂತಾದವರು ಹಾಜರಿದ್ದರು‌.

Continue Reading

Hassan

ಕಾಫಿ ಕಳ್ಳತನ ಮಾಡಿದ ಬಗ್ಗೆ ಪ್ರಶ್ನೆ ಮಾಡಿದಕ್ಕೆ ಹಲ್ಲೆ ಕೇಸು ಹಾಕುವ ಬೆದರಿಕೆ : ನ್ಯಾಯ ಕೊಡಿಸುವಂತೆ ಅಕ್ಷಿತಾ ಮನವಿ

Published

on

ಹಾಸನ: ಜಮೀನಿನಲ್ಲಿ ಕಾಫಿ ಕದ್ದು ಕೂಯ್ದ ಬಗ್ಗೆ ಪ್ರಶ್ನೆ ಮಾಡಿದಾಗ ನಮ್ಮ ಮೇಲೆ ಹಲ್ಲೆ ಮತ್ತು ಅಟ್ರಾಸಿಟಿ ಹಾಕುವುದಾಗಿ ಬೆದರಿಕೆ ಹಾಕಲಾಗುತ್ತಿದ್ದು, ನಮಗೆ ನ್ಯಾಯಕೊಡಿಸಬೇಕೆಂದು ಕೊಡಗಲವಾಡಿ ಗ್ರಾಮದ ಅಕ್ಷತಾ ಮನವಿ ಮಾಡಿದರು.

ಪತ್ರಿಕಾಗೋಷ್ಠಿಯಲ್ಲಿ ಸೋಮವಾರ ಮಾತನಾಡಿ, ಅಕ್ಷತಾ ಕೊಡಗಲವಾಡಿ ಯಾದ ನಾನು ಸುಮಾರು ೭-೮ ವರ್ಷಗಳಿಂದ ಆಲೂರು ತಾಲೂಕಿನ ಕೊಡಗಲವಾಡಿ ಗ್ರಾಮದ ಸರ್ವೆ ನಂ ೧೭/೨ ರಲ್ಲಿ ನಮ್ಮ ಮನೆಯಲ್ಲಿ ವಾಸವಾಗಿರುತ್ತೇನೆ. ಮನೆಯ ಪಕ್ಕದಲ್ಲೇ ಕಾಫಿ ಗಿಡಗಳಿದ್ದು, ಅದರ ಕಾಫಿ ಹಣ್ಣನ್ನು ನನ್ನ ಚಿಕ್ಕಮ್ಮ ಕುಯ್ಯುತಿದ್ದಾಗ ಪಕ್ಕದ ತೋಟದ ಮಂಜುನಾಥ್ ಎಂಬುವವರ ಅಣ್ಣ ಕಾಂತಾ ಮತ್ತು ಅವರ ಮಗ ಬಾಲರಾಜ್ ಎಂಬುವವರು ಅಲ್ಲಿಗೆ ಬಂದು ನನ್ನ ಚಿಕ್ಕಮ್ಮನಿಗೆ ಅವ್ಯಾಚ ಶಬ್ದಗಳಿಂದ ಬೈದು ಅವರು ಅದಕ್ಕೆ ಯಾಕೆ ಎಂದು ಕೇಳುವಾಗ ಅವರ ತಲೆ ಕೂದಲಿಗೆ ಕೈ ಹಾಕಿ ಮುಡಿ ಎಳೆದಾಡುತ್ತಿದ್ದಾಗ ಅವರು ಕಿರುಚಡುತಿದ್ದನ್ನು ಕಂಡು ನಾನು ಮನೆಯಿಂದ ಹೋಗಿ ಬಿಡಿಸಲು ಯತ್ನಿಸಿದಾಗ ನನ್ನ ಮೇಲೂ ಹಲ್ಲೆ ಮಾಡಿ ನನ್ನನ್ನು ಕೆಳಗೆ ತಳ್ಳಿ ಬೀಳಿಸಿರುತ್ತಾರೆ ಎಂದು ದೂರಿದರು. ಅಲ್ಲೇ ಬಿದ್ದಾಗ ರಕ್ತಸ್ರಾವ ಉಂಟಾಗಿದ್ದು, ಅಲ್ಲಿಂದ ತಪ್ಪಿಸಿಕೊಂಡು ಹೊರಬರುವಾಗ ನನ್ನನ್ನು ಅವ್ಯಚ್ಯಾ ಶಬ್ದಗಳಿಂದ ನಿಂದಿಸಿ ನಿನ್ನ ಮನೆಯನ್ನು ಪುಡಿ ಮಾಡುವುದಾಗಿ ಮತ್ತು ಮುಂದೆ ನಾವು ಅವರು ಹೇಳಿದಂತೆ ಕೆಳದಿದ್ದರೆ ಅಟ್ರಾಸುಟಿ ಕೇಸ್ ಮಾಡಿಸುವುದಾಗಿ ಬೆದರಿಕೆ ಒಡ್ಡಿದ್ದಾನೆ ಮತ್ತು ಅಲ್ಲೇ ಇದ್ದ ೬-೭ ಕಾಫಿ ಮೂಟೆಯ ಚೀಲಾಗಳನ್ನು ತೆಗೆದುಕೊಂಡು ಮುಂದೆ ನಾವು ಹೇಳಿದಂತೆ ಕೆಳದಿದ್ದರೆ ಇಲ್ಲಿರುವ ಗಿಡಗಳನ್ನು ಕಡಿದು ಬೆಂಕಿಗೆ ಹಾಕುತ್ತೆನೆಂದು ಮತ್ತು ಕೊಲೆ ಮಾಡುವುದಾಗಿ ಬೆದರಿಕೆ ಹಾಕಲಾಗಿದೆ ಎಂದು ಗಂಭೀರವಾಗಿ ಆರೋಪಿಸಿದರು.

ಇದರಿಂದ ಮಾನಸಿಕವಾಗಿ ಮತ್ತು ದೈಹಿಕವಾಗಿ ಕುಗ್ಗಿ ಹೋಗಿದ್ದು, ಆಲೂರು ಪೊಲೀಸ್ ಸ್ಟೇಷನ್ ಅಲ್ಲಿ ಸುಮಾರು ೨ ಗಂಟೆಗೆ ದೂರು ದಾಖಲಾಯಿಸಲು ಹೋದಾಗ ನಮ್ಮ ದೂರನ್ನು ತೆಗೆದುಕೊಳ್ಳದೆ ೨ ಗಂಟೆಯವರೆಗೂ ಕಾಯಿಸಿರುತಾರೆ. ನನಗೆ ಹಲ್ಲೆ ಮಾಡಿದ ವ್ಯಕ್ತಿ ಬರುತ್ತಿದ್ದಾರೆ ಇರಿ ಎಂದು ಹೇಳಿದ್ದಾರೆ. ನಂತರ ನನಗೆ ಹೊಟ್ಟೆ ನೋವಾಗಿದೆ ಮತ್ತು ಸುಸ್ತು ಅಗುತಿದೆ ಹಾಗಾಗಿ ದೂರು ದಾಖಲಾಯಿಸಲು ತಡವಾದರೆ ಹಿಂಬಾರ ಕೊಡಿ ಎಂದು ಹೇಳಿದಾಗ ನನ್ನ ಚಿಕ್ಕಮ್ಮನಾ ದೂರನ್ನು ತೆಗೆದುಕೊಂಡು ಎಫ್.ಐ.ಆರ್. ಮಾಡುತ್ತಾರೆ. ನಂತರ ಹಾಸನದ ಹಿಮ್ಸ್ ಆಸ್ಪತ್ರೆಯಲ್ಲಿ ದಾಖಲಾಗಿದ್ದು, ವೈದ್ಯರು ನಿಮಗೆ ಪೆಟ್ಟು ಬಿದ್ದಿದ್ದರಿಂದ ಮತ್ತು ಮಾನಸಿಕ ಒತ್ತಡದಿಂದ ಹೀಗಾಗಿದೆ ಎಂದು ಎಂ.ಎಲ್.ಸಿ. ಮಾಡಿರುತಾರೆ. ನನ್ನ ೧೭/೨ ರಲ್ಲಿ ನ್ಯಾ ಲೋನ್ ಗಳಿದ್ದು ಪ್ರತಿ ವರ್ಷ ನನ್ನ ಜಾಗದ ಕಾಫಿ ಹಣ್ಣು ಕುಯುತಿದ್ದಾರೆ ಮುಂದೆ ನನ್ನ ತರ ರೈತರು ಹೇಗೆ ಜೀವನ ಮಾಡುವುದೆಂದು ಪ್ರಶ್ನೆ ಮಾಡಿದರು. ನಾನು ಒಬ್ಬ ಜನಪ್ರತಿನಿಧಿಯಾಗಿ ಒಬ್ಬ ೨೦ ರಿಂದ ೨೫ ವರ್ಷದ ಹುಡುಗ ಹೀಗೆ ಮಾಡಿದ್ದಾರೆ ಮುಂದಿನ ಆಗುಹೋಗುಗಳನ್ನು ಗಮನಿಸಿ ದೂರು ಕೊಟ್ಟಿರುತೇವೆ. ನಾನು ಅಟ್ರಾಸಿಟಿ ವಿರೋಧಿ ಅಲ್ಲ. ಇದರ ದುರುಪಯೋಗದ ವಿರೋಧಿ ಎಂದು ಹೇಳಿದರು. ಇವುಗಳನೆಲ್ಲ ಜಿಲ್ಲಾಡಳಿತ ಹಾಗು ಪೊಲೀಸ್ ಇಲಾಖೆ ಗಮನಿಸಿ ನ್ಯಾಯ ಕೊಡಿಸಬೇಕಾಗಿ ಮನವಿ ಮಾಡಿದರು.

Continue Reading

Hassan

ಸುತ್ತೂರು ಮಠದಿಂದ 2 ಲಕ್ಷಕ್ಕೂ ಅಧಿಕ ಉಪಕರಣ ಸರಕಾರಿ ವಾಣಿವಿಲಾಸ ಶಾಲೆಗೆ ಕೊಡುಗೆ

Published

on

ಹಾಸನ: ಶ್ರೀಕ್ಷೇತ್ರ ಸುತ್ತೂರು ಮಠದ ಪರಮಪೂಜ್ಯ ಜಗದ್ಗುರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿಯವರ ಕೃಪಾ ಆಶೀರ್ವಾದದಿಂದ ಸುಮಾರು ೨ ಲಕ್ಷಕ್ಕೂ ಅಧಿಕ ಮೊತ್ತದ ದೂರದರ್ಶಕ ಯಂತ್ರ, ಸೂಕ್ಷ್ಮ ದರ್ಶಕ ಯಂತ್ರ ಮತ್ತು ಶುದ್ಧ ಕುಡಿಯುವ ನೀರಿನ ಘಟಕದ ಉಪಕರಣಗಳನ್ನು ಸರ್ಕಾರಿ ಹಿರಿಯ ಪ್ರಾಥಮಿಕ ವಾಣಿ ವಿಲಾಸ ಶಾಲೆಗೆ ನೀಡಿದ್ದಾರೆ ಎಂದು ಹಾಸನ ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ಪ್ರಧಾನ ಕಾರ್ಯದರ್ಶಿ ಕಟ್ಟಾಯ ಶಿವಕುಮಾರ್ ತಿಳಿಸಿದರು.

ನಗರದ ಮಹಾವೀರ ವೃತ್ತದ ಬಳಿ ಇರುವ ಸರ್ಕಾರಿ ಹಿರಿಯ ಪ್ರಾಥಮಿಕ ವಾಣಿವಿಲಾಸ ಶಾಲೆಯ ಮುಖ್ಯ ಶಿಕ್ಷಕರಾದ ಮೀನಾಕ್ಷಿ ಅವರಿಗೆ ಉಪಕರಣಗಳನ್ನು ಹಸ್ತಂತರಿಸಿದ ನಂತರ ಮಾತನಾಡಿದ ಅವರು, ಸುತ್ತೂರು ಮಠದಿಂದ ಸುಮಾರು ೮೦ ಸಾವಿರ ಮೌಲ್ಯದ ದೂರದರ್ಶಕ ಯಂತ್ರ, ಸುಮಾರು ೮ ಸಾವಿರ ಮೌಲ್ಯದ ಸೂಕ್ಷ್ಮದರ್ಶಕ ಯಂತ್ರಗಳು ಮತ್ತು ಸುಮಾರು ೧ ಲಕ್ಷಕ್ಕೂ ಮೀರಿದ ಮೌಲ್ಯದ ಸಾವಿರಕ್ಕೂ ಅಧಿಕ ಮೊತ್ತದ ಶುದ್ಧ ಕುಡಿಯುವ ನೀರಿನ ಘಟಕವಾದ ಅಕ್ವಾಗಾರ್ಡ್‌ಗಳು ಸುತ್ತೂರು ಮಠದಿಂದ ಮಹಾಪ್ರಸಾದವಾಗಿ ಶಾಲೆಗೆ ದೊರೆತ ಸುದಿನವಾಗಿದೆ ಎಂದರು.

ಸಹಕಾರವನ್ನು ಹಾಸನ ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು ಎಂ.ಎನ್. ಕುಮಾರಸ್ವಾಮಿಯವರೊಂದಿಗೆ ಇತ್ತೀಚಗೆ ಸುತ್ತೂರು ಜಗದ್ಗುರುಗಳು ಹಾಸನದ ಧಾರ್ಮಿಕ ಕಾರ್ಯಕ್ರಮಕ್ಕೆ ಅಗಮಿಸಿದ ಸಂದರ್ಭದಲ್ಲಿ ನಮ್ಮ ಸರ್ಕಾರಿ ಪ್ರಾಥಮಿಕ ವಾಣಿವಿಲಾಸ ಶಾಲೆಯಲ್ಲಿ ವಚನ ಕಂಠಪಾಠ ಕಾರ್ಯಕ್ರಮಕ್ಕೆ ಕರೆಸಿ ಉತ್ತಮ ರೀತಿಯಲ್ಲಿ ಕಾರ್ಯಕ್ರಮ ಮಾಡಿದ ಅವರು ಹೆಚ್ಚಿನ ಸಹಕಾರ ನೀಡಿ ಸುತ್ತೂರು ಮಠದಿಂದ ಉಪಕರಣಗಳನ್ನು ವ್ಯವಸ್ಥೆ ಮಾಡಿಸಿಕೊಟ್ಟಿದ್ದಾರೆ ಎಂದು ಅಭಿನಂದನೆ ಸಲ್ಲಿಸಿದರು. ಜೆಎಸ್‌ಎಸ್ ಕಾಲೇಜಿನಲ್ಲಿ ಪ್ರಾಂಶುಪಾಲರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಬಿ. ಮಧು ಕುಮಾರ್ ಹಾಗೂ ಬಾಲು ಸ್ವತಃ ಶಾಲೆಗೆ ಭೇಟಿ ನೀಡಿ ದೂರದರ್ಶಕ ಯಂತ್ರ ಸೂಕ್ಷ್ಮದರ್ಶಕ ಯಂತ್ರ ಹಾಗೂ ಅಕ್ವಾಗಾರ್ಡನ್ನು ನಮ್ಮ ಶಾಲೆಗೆ ನೀಡಿದ್ದಾರೆ.

ಈ ಒಂದು ಶುಭ ಕಾರ್ಯಕ್ರಮದಲ್ಲಿ ಚಾಪು ಮೂಡಿಸಿ ಸಹಕಾರ ನೀಡಿದ ನಮ್ಮ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಜಿ.ಎನ್. ಮಂಜುಳಾ ಇವರು ಕೂಡ ಕಾರ್ಯಕ್ರಮದಲ್ಲಿ ಭಾಗವಹಿಸಿ ಎಲ್ಲ ವಿದ್ಯಾರ್ಥಿಗಳಿಗೂ ಸದುಪಯೋಗ ಪಡೆದುಕೊಳ್ಳುವಂತೆ ಹಾಗೂ ಶಿಕ್ಷಕರೆಲ್ಲರನ್ನು ಕುರಿತು ಪ್ರಯೋಗಗಳನ್ನು ಚಾಲನೆ ಮಾಡುವಂತೆ ಸಮರ್ಪಕವಾಗಿ ಬಳಸಿಕೊಂಡು ಕಾರ್ಯನಿರ್ವಹಿಸುವಂತೆ ಪ್ರಶಂಸೆ ವ್ಯಕ್ತಪಡಿಸಿದರು. ವಸ್ತುಗಳನ್ನು ನೀಡುವಲ್ಲಿ ಪ್ರತ್ಯಕ್ಷವಾಗಿ ಹಾಗೂ ಪರೋಕ್ಷವಾಗಿ ಸಹಕಾರ ನೀಡಿದ ಎಲ್ಲರಿಗೂ ಹಾಗೂ ವಿಶೇಷವಾಗಿ ಪರಮಪೂಜ್ಯ ಸ್ವಾಮೀಜಿ ಅವರಿಗೆ ಶಾಲೆಯ ಪರವಾಗಿ ವೈಯಕ್ತಿಕವಾಗಿ ಹಾಗೂ ಶಿಕ್ಷಕ ವೃಂದ ವಿದ್ಯಾರ್ಥಿಗಳ ಪರವಾಗಿ ಹೃತ್ಪೂರ್ವಕವಾದ ಅಭಿನಂದನೆಯನ್ನು ಸಲ್ಲಿಸುತ್ತಾ ಕೋಟಿ ನಮನಗಳನ್ನು ಪಾದಕಮಲಗಳಿಗೆ ಅರ್ಪಿಸುತ್ತೇನೆ.

ಈ ಸಂದರ್ಭದಲ್ಲಿ ಜೆಎಸ್‌ಎಸ್ ಕಾಲೇಜು ಪ್ರಾಂಶುಪಾರು ಮಧುಕುಮಾರ್, ಬಾಲು, ಶಿಕ್ಷಣಾಧಿಕಾರಿಗಳು ಜಿ.ಎನ್. ಮಂಜುಳಾ ಇವರು ಕೂಡ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಸರ್ಕಾರಿ ಹಿರಿಯ ಪ್ರಾಥಮಿಕ ವಾಣಿವಿಲಾಸ ಶಾಲೆಯ ಮುಖ್ಯ ಶಿಕ್ಷಕರು ಮಾತನಾಡಿ ಈ ಶಾಲೆಯ

ವಿದ್ಯಾರ್ಥಿಗಳಿಗೂ ಸದುಪಯೋಗ ಪಡೆದುಕೊಳ್ಳುವಂತೆ ಹಾಗೂ ಶಿಕ್ಷಕರೆಲ್ಲರನ್ನು ಕುರಿತು ಪ್ರಯೋಗಗಳನ್ನು ಚಾಲನೆ ಮಾಡುವಂತೆ ಸಮರ್ಪಕವಾಗಿ ಬಳಸಿಕೊಂಡು ಕಾರ್ಯನಿರ್ವಹಿಸುವಂತೆ ಪ್ರಶಂಸೆ ವ್ಯಕ್ತಪಡಿಸಿದರು. ವಸ್ತುಗಳನ್ನು ನೀಡುವಲ್ಲಿ ಪ್ರತ್ಯಕ್ಷವಾಗಿ ಹಾಗೂ ಪರೋಕ್ಷವಾಗಿ ಸಹಕಾರ ನೀಡಿದ ಎಲ್ಲರಿಗೂ ಹಾಗೂ ವಿಶೇಷವಾಗಿ ಪರಮಪೂಜ್ಯ ಸ್ವಾಮೀಜಿ ಅವರಿಗೆ ಶಾಲೆಯ ಪರವಾಗಿ ವೈಯಕ್ತಿಕವಾಗಿ ಹಾಗೂ ಶಿಕ್ಷಕ ವೃಂದ ವಿದ್ಯಾರ್ಥಿಗಳ ಪರವಾಗಿ ಹೃತ್ಪೂರ್ವಕವಾದ ಅಭಿನಂದನೆ ಸಲ್ಲಿಸಿ ಕೋಟಿ ನಮನಗಳನ್ನು ಪಾದಕಮಲಗಳಿಗೆ ಅರ್ಪಿಸುತ್ತೇನೆ ಎಂದು ಶಾಲೆಯ ಮುಖ್ಯ ಶಿಕ್ಷಕರು ಎಂ.ಎಚ್. ಮೀನಾಕ್ಷಿ ಕೃತಜ್ಞತೆ ಸಲ್ಲಿಸಿದರು.

 

Continue Reading

Trending

error: Content is protected !!