Kodagu
ಮತದಾನ ಜಾಗೃತಿಗೆ ಸೆಲ್ಫಿ ಸ್ಪರ್ಧೆ

ಮಡಿಕೇರಿ : ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಮತದಾನ ಪ್ರಮಾಣವನ್ನು ಹೆಚ್ಚಿಸುವ ಸಲುವಾಗಿ ಸೆಲ್ಫಿ contest ನಡೆಸಲು ತೀರ್ಮಾನಿಸಲಾಗಿರುತ್ತದೆ. ಈ ಸೆಲ್ಫಿ contest ನಲ್ಲಿ #Lets Vote Kodagu! ಶೀರ್ಷಿಕೆಯಲ್ಲಿ ಸ್ಪರ್ಧೆ ನಡೆಯಲಿದೆ.
ಮಡಿಕೇರಿ ಜಿಲ್ಲಾಧಿಕಾರಿಗಳ ಕಚೇರಿ, ನಗರದ ರಾಜಾಸೀಟು, ಸೋಮವಾರಪೇಟೆ ತಾಲೂಕು ಪಂಚಾಯತ್ ಕಚೇರಿ, ಪೊನ್ನಂಪೇಟೆ ತಾಲ್ಲೂಕು ಪಂಚಾಯತ್ ಕಚೇರಿ, ವಿರಾಜಪೇಟೆ ತಹಸೀಲ್ದಾರ್ ಕಚೇರಿ, ಕುಶಾಲನಗರ ಕಾವೇರಿ ನಿಸರ್ಗಧಾಮ ಈ 06 ಸ್ಥಳಗಳಲ್ಲಿ ಮತದಾನ ಜಾಗೃತಿಗಾಗಿ ಸೆಲ್ಫಿ ಪಾಯಿಂಟ್ಗಳನ್ನು ನಿರ್ಮಿಸಲಾಗಿರುತ್ತದೆ. ಸಾರ್ವಜನಿಕರು ಮತ್ತು ಯುವ ಮತದಾರರು ಪೋಟೊವನ್ನು ಕಳುಹಿಸಬಹುದಾಗಿದೆ.
ಅಲ್ಲದೆ ಏಪ್ರಿಲ್, 26 ರಂದು ಮತದಾನ ನಡೆಯಲಿರುವ ಆಯ್ದ ವಿಶೇಷ ಮತಗಟ್ಟೆಗಳಲ್ಲಿಯೂ ಸೆಲ್ಪಿ ಪಾಯಿಂಟ್ ಗಳನ್ನು ಸ್ಥಾಪಿಸಲಿದ್ದು, ಈ ಮತಗಟ್ಟೆಗಳಲ್ಲಿ ಮತದಾನ ಮಾಡಿದ ನಂತರ ಸೆಲ್ಪಿ ಪಾಯಿಂಟ್ನಲ್ಲಿ ಪೋಟೋಗಳನ್ನು ಕ್ರಿಯಾತ್ಮಕವಾಗಿ ಸೆಲ್ಪಿ ಕ್ಲಿಕ್ಕಿಸಿ ಕಳುಹಿಸಲು ಅವಕಾಶ ಕಲ್ಪಿಸಲಾಗಿದೆ.
ಜಿಲ್ಲೆಯಾದ್ಯಂತ ಎಲ್ಲಾ ಸಾರ್ವಜನಿಕರು, ಮತದಾರರು ಮತದಾನದ ಪೂರ್ವದಲ್ಲಿ ನಾನು ಮತ ಚಲಾಯಿಸುತ್ತೇನೆ ಎಂಬ ಪರಿಕಲ್ಪನೆಯೊಂದಿಗೆ ತಾವಿರುವ ಸ್ಥಳದಲ್ಲಿಯೇ ವೈಯಕ್ತಿಕವಾಗಿ ಮತ್ತು ಗುಂಪಾಗಿ ಮತದಾನದಲ್ಲಿ ಪೂರ್ವದಲ್ಲಿ ಕ್ರಿಯಾತ್ಮಕವಾಗಿ ಸೆಲ್ಪಿ ಕ್ಲಿಕ್ಕಿಸಿ ವ್ಯಾಟ್ಸಪ್ ಮೊಬೈಲ್ ಸಂಖ್ಯೆ : 9741224300 ಗೆ ಕಳುಹಿಸಿ ಸ್ಪರ್ದೆಯಲ್ಲಿ ಭಾಗವಹಿಸಬಹುದಾಗಿದೆ. ಅಲ್ಲದೆ ಮತದಾನದ ದಿನದಂದು ಮತ ಚಲಾಯಿಸಿದ ನಂತರ “I VOTED’’ ಎಂಬ ಶೀರ್ಷಿಕೆಯೊಂದಿಗೆ ಸೆಲ್ಪಿ ಕ್ಲಿಕ್ಕಿಸಿ 9741224300 ವಾಟ್ಸಪ್ ಸಂಖ್ಯೆಗೆ ಕಳಹಿಸಲು ಅವಕಾಶ ಕಲ್ಪಿಸಲಾಗಿರುತ್ತದೆ. ಇಂದಿನಿಂದ ಮತದಾನ ಪೂರ್ಣಗೊಳ್ಳುವವರೆವಿಗೂ ಈ ಸೆಲ್ಫಿ contest ಸ್ಪರ್ಧೆಯಲ್ಲಿ ಜಿಲ್ಲೆಯ ಎಲ್ಲಾ ಮತದಾರರು/ ಸಾರ್ವಜನಿಕರು ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ. ಕ್ರಿಯಾತ್ಮಕವಾಗಿ ಸೆಲ್ಪಿ ಕ್ಲಿಕ್ಕಿಸಿ ಕಳುಹಿಸುವ ಆಯ್ದ ಪೋಟೊಗಳಿಗೆ ಆಕರ್ಷಕ ಬಹುಮಾನವನ್ನು ನೀಡಲಾಗುವುದು.
ಕೊಡಗು ಜಿಲ್ಲಾ ಸ್ವೀಪ್ ಸಮಿತಿಯ ವ್ಯಾಟ್ಸಪ್ ಸಂಖ್ಯೆಗೆ ಉತ್ತಮವಾಗಿ ಕ್ಲಿಕ್ಕಿಸಿದ ಒಂದು ಪೋಟೊವನ್ನು ಕಳುಹಿಸಲು ಅವಕಾಶ ನೀಡಲಾಗಿದೆ. #Lets Vote Kodagu! ಸೆಲ್ಫಿ ಸ್ಪರ್ಧೆಯಲ್ಲಿ ಭಾಗವಹಿಸಿ ಆಕರ್ಷಕ ಬಹುಮಾನ ಗೆಲ್ಲಿರಿ.
ನಿಬಂಧನೆಗಳು: ಒಬ್ಬ ವ್ಯಕ್ತಿ ಒಂದು ಪೋಟೊವನ್ನು ಮಾತ್ರವೇ ಕಳುಹಿಸತಕ್ಕದ್ದು. ಪೋಟೊ ಜೊತೆಯಲ್ಲಿ ತಮ್ಮ ಹೆಸರು, ಊರಿನ ಹೆಸರನ್ನು ಕಡ್ಡಾಯವಾಗಿ ಕಳುಹಿಸತಕ್ಕದ್ದು. ವಿಜೇತರನ್ನು ಆಯ್ಕೆ ಮಾಡುವಲ್ಲಿ ಕೊಡಗು ಜಿಲ್ಲಾ ಸ್ವೀಪ್ ಸಮಿತಿ ನಿರ್ಣಯವೇ ಅಂತಿಮವಾಗಿರುತ್ತದೆ. ಯಾವುದೇ ಧರ್ಮ, ಜಾತಿ, ವ್ಯಕ್ತಿ, ರಾಜಕೀಯ ಪಕ್ಷ, ಚುನಾವಣಾ ಅಭ್ಯರ್ಥಿ ಪರವಾಗಿ ಅಥವಾ ಪಕ್ಷದ ಗುರುತಿನೊಂದಿಗೆ ಕಳುಹಿಸುವ ಪೋಟೊವನ್ನು ಸ್ಫರ್ಧೆಗೆ ಪರಿಗಣಿಸಲಾಗುವುದಿಲ್ಲ. ವ್ಯಾಟ್ಸಪ್ ಮುಖಾಂತರವಾಗಿ ಮಾತ್ರವೇ ಪೋಟೊ ಸಲ್ಲಿಸಲು ಅವಕಾಶವಿದೆ ಎಂದು ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅವರು ತಿಳಿಸಿದ್ದಾರೆ.
Kodagu
ಬಲ್ಲಮಾವಟಿ ಪೇರೂರು ಗ್ರಾಮದ ಲೈನ್ ಮನೆಯಲ್ಲಿ ಮಗುವಿಗೆ ಜನ್ಮ ನೀಡಿ ಮಹಿಳೆ ನಾಪತ್ತೆ – 112ಪೊಲೀಸರಿಂದ ಮಗುವಿನ ರಕ್ಷಣೆ

ವರದಿ:ಝಕರಿಯ ನಾಪೋಕ್ಲು
ನಾಪೋಕ್ಲು :ನಾಪೋಕ್ಲು ಸಮೀಪದ ಬಲ್ಲಮಾವಟಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಪೇರೂರು ಗ್ರಾಮದ ಲೈನ್ ಮನೆಯೊಂದರಲ್ಲಿ ಮಗುವಿಗೆ ಜನ್ಮ ನೀಡಿ ಮಹಿಳೆ ನಾಪತ್ತೆಯಾಗಿರುವ ಘಟನೆ ಶನಿವಾರ ರಾತ್ರಿ ವರದಿಯಾಗಿದೆ.
ಬಲ್ಲಮಾವಟಿ ಪೇರೂರು ಗ್ರಾಮದ ತೋಳಂಡ ಪೂಣಚ್ಚ ಎಂಬುವವರ ಲೈನ್ ಮನೆಯಲ್ಲಿ ಶನಿವಾರ ರಾತ್ರಿ (ದಿನಾಂಕ:15/03/2025/ 8.ಗಂಟೆಗೆ )ಮಹಿಳೆಯೊಬ್ಬರು ಹೆಣ್ಣು ಮಗುವಿಗೆ ಜನ್ಮ ನೀಡಿ ಬಳಿಕ ಬಿಟ್ಟುಪರಾರಿ ಯಾಗಿದ್ದಾಳೆ.
ಜನರು ವಾಸವಿಲ್ಲದ ಲೈನ್ ಮನೆಯಲ್ಲಿ ಮಗುವಿನ ಕೂಗು ಕೇಳಿದ ಸ್ಥಳೀಯರು ಮನೆ ಮಾಲೀಕ ಪೂಣಚ್ಚ ಎಂಬುವರಿಗೆ ಮಾಹಿತಿ ನೀಡಿದ್ದಾರೆ. ಪರಿಶೀಲಿಸಿದ ಮಾಲಿಕ ಪೂಣಚ್ಚ ಎಂಬುವವರು ಮಗುವಿನ ಬಳಿ ಯಾರು ಇಲ್ಲದಿರುವುದನ್ನು ಕಂಡು 112 ಪೊಲೀಸ್ ಕಂಟ್ರೋಲ್ ರೂಮಿಗೆ ಕರೆ ಮಾಡಿ ತಿಳಿಸಿದ್ದಾರೆ. ತಕ್ಷಣ
ಸ್ಥಳಕ್ಕೆ ಧಾವಿಸಿದ 112 ಸಿಬ್ಬಂದಿಗಳಾದ ಮುಖ್ಯಪೇದೆ ರಾಜೇಶ್, ಮತ್ತು ಮೊಣ್ಣಪ್ಪ ರವರು ಮಗುವನ್ನು ರಕ್ಷಿಸಿ ನಾಪೋಕ್ಲು ಸಮುದಾಯ ಅರೋಗ್ಯ ಕೇಂದ್ರಕ್ಕೆ ಕರೆತಂದು ಪ್ರಥಮ ಚಿಕಿತ್ಸೆ ಕೊಡಿಸಿ ಆಂಬುಲೆನ್ಸಲ್ಲಿ ಮಡಿಕೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಿ ರಕ್ತದ ಮಡುವಿನಲ್ಲಿ ಇರುವೆಗಳೊಂದಿಗೆ ಜೀವ ಕಳೆದುಕೊಳ್ಳುವ ಸ್ಥಿತಿಯಲ್ಲಿದ್ದ ಮಗುವನ್ನು ರಕ್ಷಣೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.ಘಟನೆ ಸಂಬಂಧ ಮಡಿಕೇರಿ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದ ನಾಪೋಕ್ಲು ಠಾಣಾಧಿಕಾರಿ ಮಂಜುನಾಥ್ ಮಗುವಿನ ಅರೋಗ್ಯದ ಬಗ್ಗೆ ವೈದ್ಯರಿಂದ ಮಾಹಿತಿ ಪಡೆದು ಮುಂದಿನ ಕ್ರಮ ಕೈಗೊಂಡಿದ್ದಾರೆ.
Kodagu
ಮಾನವ-ವನ್ಯಜೀವಿ ಸಂಘರ್ಷ ತಡೆಯಿರಿ: ಡಾ.ಮಂತರ್ ಗೌಡ

ಮಡಿಕೇರಿ: ಮಾನವ-ವನ್ಯಜೀವಿ ಸಂಘರ್ಷ ತಡೆಗಟ್ಟುವ ನಿಟ್ಟಿನಲ್ಲಿ ಒಂದೆಡೆ ರೈತರು, ಮತ್ತೊಂದೆಡೆ ಅರಣ್ಯ ಸಿಬ್ಬಂದಿಗಳು ಸಾವನ್ನಪ್ಪುತ್ತಿದ್ದು ಈ ಸಂಬಂಧ ವೈಜ್ಞಾನಿಕವಾಗಿ ಕ್ರಮ ವಹಿಸುವ ಕೈಗೊಂಡ ಕ್ರಮಗಳನ್ನು ಕುರಿತು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸ ಸಚಿವ ಅವರಿಂದ ಮಾಹಿತಿ ಪಡೆದಿದ್ದಾರೆ.
ಇದಕ್ಕೆ ಉತ್ತರಿಸಿದ ಅರಣ್ಯ ಸಚಿವರು ಭೌತಿಕ ಅಡೆತಡೆಗಳ ನಿರ್ಮಾಣ: ಕಾಡಾನೆಗಳು ಅರಣ್ಯ ಪ್ರದೇಶದಿಂದ ಹೊರಗೆ ಬಾರದಂತೆ ತಡೆಗಟ್ಟಲು ಅರಣ್ಯದಂಚಿನಲ್ಲಿ ಸೌರಶಕ್ತಿ ಬೇಲಿ ನಿರ್ಮಾಣ/ನಿರ್ವಹಣೆ, ಆನೆತಡೆ ಕಂದಕ ನಿರ್ಮಾಣ/ನಿರ್ವಹಣೆ ಮಾಡಲಾಗಿದ್ದು ಮತ್ತು ರೈಲ್ವೆ ಹಳಿಗಳನ್ನು ಉಪಯೋಗಿಸಿ ಬ್ಯಾರಿಕೇಡ್ ನಿರ್ಮಿಸುವ ಕಾಮಗಾರಿ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ರಾಜ್ಯದಲ್ಲಿ ಮಾನವ ಆನೆ ಸಂಘರ್ಷ ಹೆಚ್ಚಾಗಿರುವ ಪ್ರದೇಶಗಳಲ್ಲಿ ಕಾಡಾನೆಗಳು ಅರಣ್ಯ ಪ್ರದೇಶದಿಂದ ಹೊರಗೆ ಬಾರದಂತೆ ನಿಯಂತ್ರಿಸಲು ರೈಲ್ವೆ ಹಳಿಗಳನ್ನು ಉಪಯೋಗಿಸಿಕೊಂಡು ರೈಲ್ವೆ ಬ್ಯಾರಿಕೇಡ್ ಕಾಮಗಾರಿ ಕೈಗೊಳ್ಳಲಾಗುತ್ತಿದ್ದು, ಒಟ್ಟು 391.832 ಕಿ.ಮೀ ರೈಲ್ವೆ ಬ್ಯಾರಿಕೇಡ್ ನಿರ್ಮಿಸಲಾಗಿದೆ ಎಂದರು.
ಆನೆ ಕಾರ್ಯಪಡೆಗಳ ಸ್ಥಾಪನೆ: ಸರ್ಕಾರವು ಹಾಸನ, ಚಿಕ್ಕಮಗಳೂರು, ಮೈಸೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಹಾಗೂ ಚಾಮರಾಜನಗರ ಜಿಲ್ಲೆ, ರಾಮನಗರ ಹಾಗೂ ಬೆಂಗಳೂರು ಜಿಲ್ಲೆಗಳಲ್ಲಿ ಮತ್ತು ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಕಾಡಾನೆ ಹಾವಳಿಯನ್ನು ತಡೆಗಟ್ಟಲು ಪ್ರತಿ ಜಿಲ್ಲೆಗೊಂದರಂತೆ ಅಧಿಕಾರಿ ಸಿಬ್ಬಂದಿಗಳನ್ನೊಳಗೊಂಡ 08 ಆನೆ ಕಾರ್ಯಪಡೆ ರಚಿಸಲಾಗಿದೆ ಎಂದು ಅರಣ್ಯ ಸಚಿವರಾದ ಈಶ್ವರ ಖಂಡ್ರೆ ಅವರು ವಿವರಿಸಿದ್ದಾರೆ.
ಚಿರತೆ ಕಾರ್ಯಪಡೆಗಳ ಸ್ಥಾಪನೆ: ಸರ್ಕಾರವು ಮೈಸೂರು ವೃತ್ತದ ಮೈಸೂರು, ನಂಜನಗೂಡು, ಎಚ್.ಡಿ.ಕೋಟೆ, ಸರಗೂರು, ಟಿ.ನರಸೀಪುರ, ಮಂಡ್ಯ, ಪಾಂಡವಪುರ ಹಾಗೂ ನಾಗಮಂಗಲ ವ್ಯಾಪ್ತಿಯಲ್ಲಿ ಚಿರತೆ ಹಾವಳಿ ಹೆಚ್ಚಾಗಿರುವ ಪ್ರದೇಶಗಳಲ್ಲಿ ಚಿರತೆ ಹಾವಳಿ ನಿಭಾಯಿಸುವ ನಿಟ್ಟಿನಲ್ಲಿ ಉಪ ಅರಣ್ಯ ಸಂರಕ್ಷಣಾಧಿಕಾರಿ, ವನ್ಯಜೀವಿ ವಿಭಾಗ, ಮೈಸೂರು ಇವರ ನೇತೃತ್ವದಲ್ಲಿ ಚಿರತೆ ಕಾರ್ಯಪಡೆ ರಚಿಸಲಾಗಿದೆ. ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಪುಂಡಾನೆಗಳನ್ನು ಗುರುತಿಸಿ, ಸೆರೆಹಿಡಿದು ಆಗ್ಲಿಂದಾಗ್ಗೆ ಆನೆ ಶಿಬಿರಗಳಿಗೆ ಸ್ಥಳಾಂತರಿಸಲಾಗಿದೆ ಎಂದು ಮಾಹಿತಿ ನಿಡಿದ್ದಾರೆ.
Kodagu
ಮಾ.16 ಹಾಗೂ 17ರಂದು ಕೊಳಕೇರಿ ಬೊಮ್ಮಂಜಿ ಭದ್ರಕಾಳಿ ಉತ್ಸವ

ವರದಿ:ಝಕರಿಯ ನಾಪೋಕ್ಲು
ನಾಪೋಕ್ಲು: ನಾಪೋಕ್ಲು ಬಳಿಯ ಕೊಳಕೇರಿ ಗ್ರಾಮದ ಬೊಮ್ಮಂಜಿಕೇರಿಯಲ್ಲಿ ವಾರ್ಷಿಕವಾಗಿ ಆಚರಿಸಲ್ಪಡುವ ಶ್ರೀ ಭದ್ರಕಾಳಿ ದೇವರ ಉತ್ಸವವು ಮಾ.16ಮತ್ತು17ರಂದು ನಡೆಯಲಿದೆ.
ಭಕ್ತಾದಿಗಳು ಅಧಿಕ ಸಂಖ್ಯೆಯಲ್ಲಿ ಉತ್ಸವದಲ್ಲಿ ಪಾಲ್ಗೊಂಡು ದೇವರ ಕೃಪೆಗೆ ಪಾತ್ರರಾಗಬೇಕಾಗಿ ಆಡಳಿತ ಮಂಡಳಿ ಪದಾಧಿಕಾರಿಗಳು ಪ್ರಕಟಣೆಯಲ್ಲಿ ಕೋರಿದ್ದಾರೆ.
-
State20 hours ago
ಬೆಂಗಳೂರು ನಮ್ಮ ಮೆಟ್ರೋ ನೇಮಕಾತಿ : ಟ್ರೈನ್ ಆಪರೇಟರ್ ಹುದ್ದೆಗಳ ಭರ್ತಿ
-
Kodagu19 hours ago
ಬಲ್ಲಮಾವಟಿ ಪೇರೂರು ಗ್ರಾಮದ ಲೈನ್ ಮನೆಯಲ್ಲಿ ಮಗುವಿಗೆ ಜನ್ಮ ನೀಡಿ ಮಹಿಳೆ ನಾಪತ್ತೆ – 112ಪೊಲೀಸರಿಂದ ಮಗುವಿನ ರಕ್ಷಣೆ
-
National - International20 hours ago
ಕೆನಡಾ ನೂತನ ಪ್ರಧಾನಿಯಾಗಿ ಮಾರ್ಕ್ ಕಾರ್ನಿ ಅಧಿಕಾರ ಸ್ವೀಕಾರ
-
Kodagu22 hours ago
ಮಾನವ-ವನ್ಯಜೀವಿ ಸಂಘರ್ಷ ತಡೆಯಿರಿ: ಡಾ.ಮಂತರ್ ಗೌಡ
-
State22 hours ago
ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ರಕ್ಷಣೆ ಇಲ್ಲದಂತಾಗಿದೆ: ಬಸವರಾಜ ಬೊಮ್ಮಾಯಿ
-
Hassan24 hours ago
ಗಮನಸೆಳೆದ ತಿಂಗಳ ಮಾಮನ ತೇರು: ಚಂದ್ರನಿಗೆ ಮದುವೆ ಮಾಡಿದ ನಿವಾಸಿಗಳು
-
Mysore24 hours ago
ನನಗೆ ಸಿಎಂ ಹುದ್ದೆ ಕೊಟ್ಟರೆ ನಿರ್ವಹಿಸುವೆ: ಶಾಸಕ ತನ್ವೀರ್ ಸೇಠ್
-
Hassan23 hours ago
ಸ್ನೇಹಿತರೊಂದಿಗೆ ಈಜಲು ತೆರಳಿದ್ದ ವಿದ್ಯಾರ್ಥಿ ನೀರುಪಾಲು