Connect with us

Kodagu

ಮತದಾನ ಜಾಗೃತಿಗೆ ಸೆಲ್ಫಿ ಸ್ಪರ್ಧೆ

Published

on

ಮಡಿಕೇರಿ : ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಮತದಾನ ಪ್ರಮಾಣವನ್ನು ಹೆಚ್ಚಿಸುವ ಸಲುವಾಗಿ ಸೆಲ್ಫಿ contest ನಡೆಸಲು ತೀರ್ಮಾನಿಸಲಾಗಿರುತ್ತದೆ. ಈ ಸೆಲ್ಫಿ contest ನಲ್ಲಿ #Lets Vote Kodagu! ಶೀರ್ಷಿಕೆಯಲ್ಲಿ ಸ್ಪರ್ಧೆ ನಡೆಯಲಿದೆ.

ಮಡಿಕೇರಿ ಜಿಲ್ಲಾಧಿಕಾರಿಗಳ ಕಚೇರಿ, ನಗರದ ರಾಜಾಸೀಟು, ಸೋಮವಾರಪೇಟೆ ತಾಲೂಕು ಪಂಚಾಯತ್ ಕಚೇರಿ, ಪೊನ್ನಂಪೇಟೆ ತಾಲ್ಲೂಕು ಪಂಚಾಯತ್ ಕಚೇರಿ, ವಿರಾಜಪೇಟೆ ತಹಸೀಲ್ದಾರ್ ಕಚೇರಿ, ಕುಶಾಲನಗರ ಕಾವೇರಿ ನಿಸರ್ಗಧಾಮ ಈ 06 ಸ್ಥಳಗಳಲ್ಲಿ ಮತದಾನ ಜಾಗೃತಿಗಾಗಿ ಸೆಲ್ಫಿ ಪಾಯಿಂಟ್‍ಗಳನ್ನು ನಿರ್ಮಿಸಲಾಗಿರುತ್ತದೆ. ಸಾರ್ವಜನಿಕರು ಮತ್ತು ಯುವ ಮತದಾರರು ಪೋಟೊವನ್ನು ಕಳುಹಿಸಬಹುದಾಗಿದೆ.

ಅಲ್ಲದೆ ಏಪ್ರಿಲ್, 26 ರಂದು ಮತದಾನ ನಡೆಯಲಿರುವ ಆಯ್ದ ವಿಶೇಷ ಮತಗಟ್ಟೆಗಳಲ್ಲಿಯೂ ಸೆಲ್ಪಿ ಪಾಯಿಂಟ್ ಗಳನ್ನು ಸ್ಥಾಪಿಸಲಿದ್ದು, ಈ ಮತಗಟ್ಟೆಗಳಲ್ಲಿ ಮತದಾನ ಮಾಡಿದ ನಂತರ ಸೆಲ್ಪಿ ಪಾಯಿಂಟ್‍ನಲ್ಲಿ ಪೋಟೋಗಳನ್ನು ಕ್ರಿಯಾತ್ಮಕವಾಗಿ ಸೆಲ್ಪಿ ಕ್ಲಿಕ್ಕಿಸಿ ಕಳುಹಿಸಲು ಅವಕಾಶ ಕಲ್ಪಿಸಲಾಗಿದೆ.


ಜಿಲ್ಲೆಯಾದ್ಯಂತ ಎಲ್ಲಾ ಸಾರ್ವಜನಿಕರು, ಮತದಾರರು ಮತದಾನದ ಪೂರ್ವದಲ್ಲಿ ನಾನು ಮತ ಚಲಾಯಿಸುತ್ತೇನೆ ಎಂಬ ಪರಿಕಲ್ಪನೆಯೊಂದಿಗೆ ತಾವಿರುವ ಸ್ಥಳದಲ್ಲಿಯೇ ವೈಯಕ್ತಿಕವಾಗಿ ಮತ್ತು ಗುಂಪಾಗಿ ಮತದಾನದಲ್ಲಿ ಪೂರ್ವದಲ್ಲಿ ಕ್ರಿಯಾತ್ಮಕವಾಗಿ ಸೆಲ್ಪಿ ಕ್ಲಿಕ್ಕಿಸಿ ವ್ಯಾಟ್ಸಪ್ ಮೊಬೈಲ್ ಸಂಖ್ಯೆ : 9741224300 ಗೆ ಕಳುಹಿಸಿ ಸ್ಪರ್ದೆಯಲ್ಲಿ ಭಾಗವಹಿಸಬಹುದಾಗಿದೆ. ಅಲ್ಲದೆ ಮತದಾನದ ದಿನದಂದು ಮತ ಚಲಾಯಿಸಿದ ನಂತರ “I VOTED’’ ಎಂಬ ಶೀರ್ಷಿಕೆಯೊಂದಿಗೆ ಸೆಲ್ಪಿ ಕ್ಲಿಕ್ಕಿಸಿ 9741224300 ವಾಟ್ಸಪ್ ಸಂಖ್ಯೆಗೆ ಕಳಹಿಸಲು ಅವಕಾಶ ಕಲ್ಪಿಸಲಾಗಿರುತ್ತದೆ. ಇಂದಿನಿಂದ ಮತದಾನ ಪೂರ್ಣಗೊಳ್ಳುವವರೆವಿಗೂ ಈ ಸೆಲ್ಫಿ contest ಸ್ಪರ್ಧೆಯಲ್ಲಿ ಜಿಲ್ಲೆಯ ಎಲ್ಲಾ ಮತದಾರರು/ ಸಾರ್ವಜನಿಕರು ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ. ಕ್ರಿಯಾತ್ಮಕವಾಗಿ ಸೆಲ್ಪಿ ಕ್ಲಿಕ್ಕಿಸಿ ಕಳುಹಿಸುವ ಆಯ್ದ ಪೋಟೊಗಳಿಗೆ ಆಕರ್ಷಕ ಬಹುಮಾನವನ್ನು ನೀಡಲಾಗುವುದು.

ಕೊಡಗು ಜಿಲ್ಲಾ ಸ್ವೀಪ್ ಸಮಿತಿಯ ವ್ಯಾಟ್ಸಪ್ ಸಂಖ್ಯೆಗೆ ಉತ್ತಮವಾಗಿ ಕ್ಲಿಕ್ಕಿಸಿದ ಒಂದು ಪೋಟೊವನ್ನು ಕಳುಹಿಸಲು ಅವಕಾಶ ನೀಡಲಾಗಿದೆ. #Lets Vote Kodagu! ಸೆಲ್ಫಿ ಸ್ಪರ್ಧೆಯಲ್ಲಿ ಭಾಗವಹಿಸಿ ಆಕರ್ಷಕ ಬಹುಮಾನ ಗೆಲ್ಲಿರಿ.

ನಿಬಂಧನೆಗಳು: ಒಬ್ಬ ವ್ಯಕ್ತಿ ಒಂದು ಪೋಟೊವನ್ನು ಮಾತ್ರವೇ ಕಳುಹಿಸತಕ್ಕದ್ದು. ಪೋಟೊ ಜೊತೆಯಲ್ಲಿ ತಮ್ಮ ಹೆಸರು, ಊರಿನ ಹೆಸರನ್ನು ಕಡ್ಡಾಯವಾಗಿ ಕಳುಹಿಸತಕ್ಕದ್ದು. ವಿಜೇತರನ್ನು ಆಯ್ಕೆ ಮಾಡುವಲ್ಲಿ ಕೊಡಗು ಜಿಲ್ಲಾ ಸ್ವೀಪ್ ಸಮಿತಿ ನಿರ್ಣಯವೇ ಅಂತಿಮವಾಗಿರುತ್ತದೆ. ಯಾವುದೇ ಧರ್ಮ, ಜಾತಿ, ವ್ಯಕ್ತಿ, ರಾಜಕೀಯ ಪಕ್ಷ, ಚುನಾವಣಾ ಅಭ್ಯರ್ಥಿ ಪರವಾಗಿ ಅಥವಾ ಪಕ್ಷದ ಗುರುತಿನೊಂದಿಗೆ ಕಳುಹಿಸುವ ಪೋಟೊವನ್ನು ಸ್ಫರ್ಧೆಗೆ ಪರಿಗಣಿಸಲಾಗುವುದಿಲ್ಲ. ವ್ಯಾಟ್ಸಪ್ ಮುಖಾಂತರವಾಗಿ ಮಾತ್ರವೇ ಪೋಟೊ ಸಲ್ಲಿಸಲು ಅವಕಾಶವಿದೆ ಎಂದು ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅವರು ತಿಳಿಸಿದ್ದಾರೆ.

Continue Reading
Click to comment

Leave a Reply

Your email address will not be published. Required fields are marked *

Kodagu

ಬ್ರಹ್ಮಕಲಶೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಶಾಸಕ

Published

on

ವಿರಾಜಪೇಟೆ : ತಾಲ್ಲೂಕು ಕೊಟ್ಟೋಳಿಯಲ್ಲಿರುವ ಶ್ರೀ ಧಾರಾಮಹೇಶ್ವರ ದೇವಾಲಯದ ಅಷ್ಟಬಂಧ ಬ್ರಹ್ಮಕಲಶೋತ್ಸವ ಕಾರ್ಯಕ್ರಮದಲ್ಲಿ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ಭಾಗವಹಿಸಿದರು.
ದೇವಸ್ಥಾನ ಸಮಿತಿಯ ಕೋದಂಡ ಅಜಯ್ ಹಾಗೂ ಆಡಳಿತ ಮಂಡಳಿಯವರು ಉಪಸ್ಥಿತರಿದ್ದರು.
ಶ್ರೀ ದೇವರ ಪ್ರತಿಷ್ಠ ಮಹೋತ್ಸವದಲ್ಲಿ ಭಾಗವಹಿಸುವಂತೆ ಶಾಸಕರಿಗೆ ಆಮಂತ್ರಣ ನೀಡಿದ ಪ್ರಯುಕ್ತ ದೇವರ ಸನ್ನಿಧಿಗೆ ತೆರಳಿದ ಶಾಸಕರು ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿ ದೇವರ ಆಶೀರ್ವಾದ ಪಡೆದರು. ಇದೇ ಸಂದರ್ಭದಲ್ಲಿ ದೇವಸ್ಥಾನದ ಅಭಿವೃದ್ಧಿ ಕಾರ್ಯಗಳಿಗೆ ಶಾಸಕರು ತಮ್ಮ ವೈಯಕ್ತಿಕ ರೂ 1 ಲಕ್ಷ ಧನಸಹಾಯ ನೀಡುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ವಿರಾಜಪೇಟೆ ತಾಲೂಕು ಕೆಡಿಪಿ ಸದಸ್ಯರಾದ ಮಾಳೇಟೀರ ಪ್ರಶಾಂತ್, ಕುಂಡಚ್ಚಿರ ಮಂಜು ದೇವಯ್ಯ, ಹಾಗೂ ಭಕ್ತದಿಗಳು ಹಾಗೂ ಪ್ರಮುಖರು ಉಪಸ್ಥಿತರಿದ್ದರು.

Continue Reading

Kodagu

ಮಂಗಳವಾರ ಬ್ಯಾಡಗೊಟ್ಟ ಪಂಚಾಯತ್ ನ ನೂತನ ಕಟ್ಟಡ ಉದ್ಬಾಟನೆ

Published

on

ಕೊಡ್ಲಿಪೇಟೆ : ಸಮೀಪದ ಬ್ಯಾಡಗೊಟ್ಟ ಪಂಚಾಯತ್ ನಲ್ಲಿ ನೂತನವಾಗಿ ನಿರ್ಮಾಣ ವಾಗಿರುವ ಸಂಜೀವಿನಿ ಸಭಾಂಗಣ ಫೆ.10 ರಂದು ಮಂಗಳವಾರ ಉದ್ಬಾಟನೆ ಯಾಗಲಿದೆ ಎಂದು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹರೀಶ್ ಹೆಚ್.ಎಸ್.ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ಪಂಚಾಯತ್ ಕಚೇರಿಯ ಮೊದಲಂತಸ್ಥಿನಲ್ಲಿ ನಿರ್ಮಿಸಿರುವ ಕಟ್ಟಡವನ್ನು ಉದ್ಬಾಟನೆ ಸಮಾರಂಭದ ಅದ್ಯಕ್ಷತೆಯನ್ನು ಮಡಿಕೇರಿ ವಿಧಾನ ಸಭಾ ಕ್ಷೇತ್ರದ ಶಾಸಕ ಡಾ.ಮಂಥರ್ ಗೌಡ ವಹಿಸಲಿದ್ದಾರೆ. ಮುಖ್ಯಮಂತ್ರಿಗಳ ಕಾನೂನು ಸಲಹೇಗಾರ ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ, ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ವಿಧಾನ ಪರಿಷತ್ ಸದಸ್ಯ ಎಂ.ಪಿ.ಸುಜಾ ಕುಶಾಲಪ್ಪ ಮುಂತಾದ ಜನಪ್ರತಿನಿಧಿಗಳು, ಪಂಚಾಯತ್ ಅಧ್ಯಕ್ಷರು ಮತ್ತು ಜನಪ್ರತಿನಿಧಿಗಳು, ಇಲಾಖಾಧಿಕಾರಿಗಳು ಭಾಗವಹಿಸಲಿದ್ದಾರೆ.

Continue Reading

Kodagu

ದೇಶೀಯ ಕ್ರೀಡೋತ್ಸವ ಮತ್ತು ಜಾನಪದ ನಮ್ಮೆಗೆ ಅನುದಾನ ಕೋರಿ ಮನವಿ

Published

on

ಮಡಿಕೇರಿ : ಕೊಡಗಿನ ಮೂಲನಿವಾಸಿ ೨೧ ಕೊಡವ ಭಾಷಿಕ ಸಮುದಾಯಗಳ ವತಿಯಿಂದ ಏಪ್ರಿಲ್ ತಿಂಗಳಿನಲ್ಲಿ ಇದೇ ಪ್ರಥಮ ಬಾರಿಗೆ ನಡೆಸುತ್ತಿರುವ ’ದೇಶೀಯ ಕ್ರೀಡೋತ್ಸವ’ಕ್ಕೆ ಅನುದಾನ ಕೋರಿ ಕೊಡವ ಭಾಷಿಕ ಕೂಟವು ರಾಜ್ಯ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷ ಚೆಪ್ಪುಡಿರ ಅರುಣ್ ಮಾಚಯ್ಯ ಅವರಿಗೆ ಮನವಿ ಸಲ್ಲಿಸಿತು.
ಕೊಡವ ಭಾಷಿಕ ಕೂಟದ ಅಧ್ಯಕ್ಷ ಡಾ.ಮೇಚಿರ ಸುಭಾ? ನಾಣಯ್ಯ ಅವರ ನೇತೃತ್ವದಲ್ಲಿ ವಿರಾಜಪೇಟೆಯಲ್ಲಿ ಅರುಣ್ ಮಾಚಯ್ಯ ಅವರನ್ನು ಭೇಟಿಯಾದ ನಿರ್ದೇಶಕರುಗಳು ಹಾಗೂ ಸಮುದಾಯಗಳ ಮುಖಂಡರುಗಳು ಕ್ರೀಡೋತ್ಸವದ ಯಶಸ್ಸಿಗೆ ಅಗತ್ಯ ಸಹಕಾರ ನೀಡುವಂತೆ ಕೋರಿದರು.

ಕೆಂಬಟ್ಟಿ ಜಾನಪದ ನಮ್ಮೆ
ಕೊಡವ ಭಾಷಿಕ ಮೂಲನಿವಾಸಿ ಕೆಂಬಟ್ಟಿ ಸಮುದಾಯದ ವತಿಯಿಂದ ಪ್ರಥಮ ಬಾರಿಗೆ ’ಕೆಂಬಟ್ಟಿ ಜಾನಪದ ನಮ್ಮೆ’ಯನ್ನು ನಡೆಸಲಾಗುತ್ತಿದ್ದು, ಅಗತ್ಯ ಸಹಕಾರ ಕೋರಿ ಕೆಂಬಟ್ಟಿ ಸಮುದಾಯದ ನಿಯೋಗ ವಿರಾಜಪೇಟೆಯಲ್ಲಿ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಅಜ್ಜಿನಿಕಂಡ ಮಹೇಶ್ ನಾಚಯ್ಯ ಅವರಿಗೆ ಮನವಿ ಪತ್ರ ಸಲ್ಲಿಸಿತು.
ನಿಯೋಗದಲ್ಲಿ ಅಧ್ಯಕ್ಷ ಬಿಲ್ಲರೀಕುಟ್ಟಡ ಪ್ರಭು ಐಯ್ಯಪ್ಪ, ನಿರ್ದೇಶಕರುಗಳಾದ ಬಾಳೆಕುಟ್ಟಡ ಉದಯ್ ಮಾದಪ್ಪ, ಪೆಗ್ಗೋಲಿ ದಿನೇಶ್, ಚವರೆಕುಟ್ಟಡ ಜೀವನ್, ಕೋಪರೆ ಕುಟ್ಟಡ ಸಾಗರ್ ಪೊವಣ್ಣ, ಚಿಮ್ಮಿಕುಟ್ಟಡ ನಿತೇಶ್, ಪ್ರಮುಖರಾದ ಚೋಕುಟ್ಟಡ ಚಿಮ್ಮ ಅಯ್ಯಪ್ಪ, ಬಿದ್ದಣ ಕುಟ್ಟಡ ಕಿರಣ್ ಕಾವೇರಪ್ಪ, ಮೊಟ್ಟ ಕುಟ್ಟಡ ಭೋಜಮ್ಮ, ಜೋ ಕುಟ್ಟಡ ವ್ಯೆಶಾಲಿ ಪ್ರಕಾಶ್, ಬಿದ್ದಣಡ ಕುಟ್ಟ ರೋಹಿಣಿ ಪುಪ್ಪ, ಚಿಮ್ಮಿಡ ಕುಟ್ಟ ಗಿರೀಶ್ ಬೆಳ್ಳಿಪ್ಪ, ಚೋಕುಟ್ಟಡ ಸಂತೋಸ್, ಉತ್ತು ಕುಟ್ಟಡ ಮನು ಬಿದ್ದಪ್ಪ, ಬಿಲ್ಲಿರಿ ಕುಟ್ಟಡ ಮಂಜೇಶ್, ಚವರೆ ಕುಟ್ಟಡ ಸುಬ್ರಮಣಿ, ಚಿಮ್ಮಿಕುಟ್ಟಡ ವಿಲ್ಮ ಅಶೋಕ್,, ಚವರೆಡ ಕುಟ್ಟ ಸುಬ್ಬಕ್ಕಿ ಮುತಪ್ಪ ಮತ್ತಿತರರು ಹಾಜರಿದ್ದರು.

Continue Reading

Trending

error: Content is protected !!