Chamarajanagar
ತಾಲೂಕಿನಲ್ಲಿ ಕಳೆದ ನಾಲ್ಕೈದು ದಿನಗಳಿಂದ ಸುರಿಯತ್ತಿರುವ ಭರ್ಜರಿ ಮಳೆಗೆ ಭೂಮಿ ತಂಪಾಗಿದೆ
ಯಳಂದೂರು ಮೇ 24
ತಾಲೂಕಿನಲ್ಲಿ ಕಳೆದ ನಾಲ್ಕೈದು ದಿನಗಳಿಂದ ಸುರಿಯತ್ತಿರುವ ಭರ್ಜರಿ ಮಳೆಗೆ ಭೂಮಿ ತಂಪಾಗಿದೆ. ರಾತ್ರಿ ಬಿದ್ದ ಭಾರಿ ಮಳಿಗೆ ಭೂಮಿ ಸಂಪೂರ್ಣವಾಗಿ ನೀರು ಕುಡಿದು ಜಮೀನುಗಳು ಕೆರೆ,ಕಟ್ಟೆ ಹಾಗೂ ಶಾಲೆ ಕಾಲೇಜು ಮೈದಾನದಲ್ಲಿ ನೀರು ತುಂಬಿಕೆರೆಯಂತಾಗಿ ಅವಾಂತರ ಸೃಷ್ಟಿಯಾಗಿದೆ.
ಕೆಲವು ಜಮೀನುಗಳಲ್ಲಿ ಹಾಗೂ ರಸ್ತೆಗಳಲ್ಲಿ ಮರಗಳ ಬಿದ್ದು ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಕಳೆದ ನಾಲ್ಕೈದು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಗ್ರಾಮೀಣ ಭಾಗದ ರ ರಸ್ತೆಗಳು ಡಾಂಬರ್ ಕಿತ್ತು ದೊಡ್ಡ ದೊಡ್ಡ ಹೊಂಡ ಬಿದ್ದು, ವಾಹನ ಸವರರು ಸಾರ್ವಜನಿಕರ ಸಂಚಾರಕ್ಕೆ ತೊಂದರೆಯಾಗಿದೆ.
ಇನ್ನು ಕುರಿಗಾಹಿಗಳು ತಮ್ಮ ಕುರಿಗಳ ಜೊತೆಗೆ ಜಮೀನುಗಳಲ್ಲಿ ತುಂಬಿರುವ ನೀರಿನಲ್ಲಿ ರಾತ್ರಿ ಇಡೀ ಕಾಲ ಕಳೆಯುವಂತೆ ಆಯಿತು. ಪಟ್ಟಣದಿಂದ
ಬಿಳಗಿರಿರಂಗನ ಬೆಟ್ಟಕ್ಕೆ ಹೋಗುವ ಮುಖ್ಯ ರಸ್ತೆಯಲ್ಲಿ ಹಳ್ಳ ಬಿದ್ದು ವಾಹನ ಸವಾರರು ಬಿದ್ದು ಗಾಯಗೊಂಡಿದ್ದಾರೆ.
ರಾಷ್ಟ್ರೀಯ ಹೆದ್ದಾರಿ 209 ರಿಂದ ಕೆಸ್ತೂರಿನಿಂದ ಕುಂತೂರ ಗ್ರಾಮದವರೆಗೆ, ಇನ್ನೂ ಹಲವು ಗ್ರಾಮಗಳ ಪ್ರಮುಖ ರಸ್ತೆಗಳ ಡಾಂಬರ್ ಕಿತ್ತು ದೊಡ್ಡ ದೊಡ್ಡ ಹಳ್ಳಗಳಾಗಿ ಮಳೆ ನೀರು ತುಂಬಿ ಕೆರೆಯಂತೆ ಆಗಿ ಸವಾರರು ಆ ಹಳ್ಳದಲ್ಲೇ ಬಿದ್ದು ತಮ್ಮ ಕೈಕಾಲುಗಳನ್ನು ಮುರಿದುಕೊಂಡಿರುವ ಘಟನೆಗಳು ನಡೆದಿದೆ. ಸಂಬಂಧಪಟ್ಟ ಇಲಾಖೆ ಇದನ್ನು ಗಮನ ಹರಿಸಿ ಶಾಲಾ ಕಾಲೇಜು ಮೈದಾನ ಹಾಗೂ ರಸ್ತೆಗಳನ್ನು ಆದಷ್ಟು ಬೇಗ ಸರಿಪಡಿಸಿ ಸಾರ್ವಜನಿಕರ ಸಂಚಾರಕ್ಕೆ ಅಡೆತಡೆಗಳಾಗದೆ ಅನುಕೂಲ ಮಾಡಿಕೊಡಬೇಕು ಎಂದು ಪಟ್ಟಣದ ನಾಗರಿಕರು ಹಾಗೂ ಗ್ರಾಮಸ್ಥರುಗಳು ಆಗ್ರಹಿಸಿದ್ದಾರೆ.
Chamarajanagar
ಯಳಂದೂರು ತಾಪಂ ವತಿಯಿಂದ 15ನೇ ರಾಷ್ಟ್ರೀಯ ಮತದಾನ ದಿನಾಚರಣೆ
ಯಳಂದೂರು ಜನವರಿ 25
ಯಳಂದೂರು ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ 15ನೇ ರಾಷ್ಟ್ರೀಯ
ಮತದಾರರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸಿವಿಲ್ ನ್ಯಾಯಾಧೀಶರಾದ ಆರ್ಕಶ್ ಎಂ ರವರು 15ನೇ ರಾಷ್ಟ್ರೀಯ ಮತದಾರರ ದಿನಾಚರಣೆಯ ಶುಭಾಶಯ ತಿಳಿಸಿ ಈಗಿನ ಯುವಕರಿಗೆ ಮತದಾನದ ಅರಿವು ಅಗತ್ಯ 18 ವಯಸ್ಸು ಮೀರಿದವರು ಮಾತ ದಾರರಗೆ ನೋಂದಣಿ ಮಾಡುವುದು ಅಗತ್ಯ, ಎಂದು
ತಿಳಿಸಿದರು,
ಮುಖ್ಯ ಭಾಷಣಕಾರರಾಗಿ ಮಾತನಾಡಿದ ಕರ್ನಾಟಕ ಪಬ್ಲಿಕ್ ಶಾಲೆಯ ಉಪ ಪ್ರಾಂಶುಪಾಲರಾದ ನಂಜುಂಡಯ್ಯ ರವರು ಚುನಾವಣೆ ಸಂದರ್ಭದಲ್ಲಿ ನಿಮ್ಮ ಮತ ವನು ಮಾರಿಕೊಳ್ಳಬೇಡಿ , ಯುವಕರು ಹೆಚ್ಚಿನ ಪ್ರಮಾಣದಲ್ಲಿ ಒಂದಾಯಿಸಬೇಕು, ರಾಷ್ಟ್ರೀಯ ಮತದಾನ ದ ಬಗ್ಗೆ ತಿಳಿಸಿದರು,
ಕಾರ್ಯಕ್ರಮದಲ್ಲಿ ತಾಲ್ಲೂಕು ದಂಡಾಧಿಕಾರಿ ಗಳದ ಜಯಪ್ರಕಾಶ್, ತಾಲ್ಲೂಕು ಪಂಚಾಯಿತಿ ಸಾಹಯಕ ನಿರ್ದೇಶಕ ರಾದ ಗುರು ಮಲ್ಲು, ಭೂ ದಾಖಲೆಗಳ ನಿರ್ದೇಶಕ ರಾದ ಉಮೇಶ್, ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ವಿಜಯ ಹನೂರು, ಸಾಹಯಕ ಪ್ರಾದ್ಯಾಪಕರದ ಶ್ವೇತ ಕೆ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕರಾದ ಅಮೃತೇಷ್, ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ನಾಗೇಂದ್ರ, ಶಾಲೆಯ ಶಿಕ್ಷಕರು, ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು
Chamarajanagar
ಗಿರಿಜನರು ಸಮಾಜದ ಮುಖ್ಯವಾಹಿನಿಗೆ ಬಂದು ಮೌಲ್ಯಯುತ ಬದುಕನ್ನು ಕಟ್ಟಿಕೊಳ್ಳಬೇಕು: ಟಿ ಹಿರಲಾಲ್
ಚಾಮರಾಜನಗರ: ಗಿರಿಜನರು ಉತ್ತಮ ಶಿಕ್ಷಣ ಪಡೆದು ಸಮಾಜದ ಮುಖ್ಯವಾಹಿನಿಗೆ ಬಂದು ಮೌಲ್ಯಯುತ ಬದುಕನ್ನು ಕಟ್ಟಿಕೊಳ್ಳಬೇಕು ಎಂದು ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಟಿ.ಹಿರಲಾಲ್ ಕರೆ ನೀಡಿದರು.
ಕೆರೆದಿಂಬ ಪೋಡಿನಲ್ಲಿ ಬಿಆರ್ ಟಿ ಹುಲಿ ಸಂರಕ್ಷಿತ ಪ್ರದೇಶ ಚಾಮರಾಜನಗರ ವಿಭಾಗದ ವತಿಯಿಂದ ಅರಣ್ಯ ಮತ್ತು ವನ್ಯಜೀವಿ ಸಂರಕ್ಷಣೆ, ಬೆಂಕಿ ಅರಿವು ಮತ್ತು ಹಸಿರು ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಬಿ.ಆರ್.ಟಿ ಹುಲಿ ಸಂರಕ್ಷಿತ ಪ್ರದೇಶದ ವಿವಿಧ ವಲಯಗಳ ವ್ಯಾಪ್ತಿಯಲ್ಲಿ ಬರುವ ಪೋಡುಗಳ ಎಸ್ ಎಸ್ ಎಲ್ ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳಲ್ಲಿ ಉತ್ತಮ ಅಂಕ ಪಡೆದ 13 ಗಿರಿಜನ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ಪಡೆದ ಅಂಕಗಳ ಆಧಾರದ ಮೇಲೆ 10 ಸಾವಿರ ರೂ, 7,000 ಮತ್ತು 5000 ಚೆಕ್ಕನ್ನು ವಿತರಿಸಲಾಯಿತು.
ಉಪ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ನಿರ್ದೇಶಕ ಶ್ರೀಪತಿ ಬಿ,ಎಸ್.ಮಾತನಾಡಿ, ಅರಣ್ಯ ಮತ್ತು ಗಿರಿಜನರ ನಡುವೆ ಅವಿನಾಭಾವ ಸಂಬಂಧವಿದ್ದು, ಅರಣ್ಯ ಮತ್ತು ವನ್ಯಜೀವಿ ಸಂರಕ್ಷಣೆಯಲ್ಲಿ ಸಹಕರಿಸುವಂತೆ ತಿಳಿಸಿದರು.
ಗಿರಿಜನರು ಪೂಜ್ಯನಿಯ ಭಾವನೆಯಿಂದ ಅರಣ್ಯ ಮತ್ತು ವನ್ಯಜೀವಿಯನ್ನು ಗೌರವಿಸುತ್ತಿದ್ದು, ಅರಣ್ಯ ಇಲಾಖೆಯ ಉತ್ತಮ ಸಹಕಾರದಿಂದ ಅರಣ್ಯ ಮತ್ತು ವನ್ಯಜೀವಿಯನ್ನು ಸಂರಕ್ಷಿಸಬೇಕೆಂದು ಹೇಳಿದರು.
ಮಾದೇಗೌಡ ಮಾತನಾಡಿ, ಗಿರಿಜರು ಶಿಕ್ಷಣವನ್ನು ಶ್ರದ್ಧೆಯಿಂದ ಕಲಿತು ವಿವಿಧ ಇಲಾಖೆಗಳಲ್ಲಿ ಉನ್ನತ ಹುದ್ದೆಯನ್ನು ಅಲಂಕರಿಸಬೇಕು. ಗಿರಿಜನರ ಮುಗ್ಧತೆಯನ್ನು ಬಳಸಿಕೊಂಡು ಹಣ ಹಾಗೂ ಇತರ ಆಮಿಷಗಳನ್ನು ಒಡ್ಡಿ ಯಾವುದೇ ಅರಣ್ಯ ಅಪರಾಧಗಳಲ್ಲಿ ಪಾಲ್ಗೊಳ್ಳುವಂತೆ ಯಾರಾದರೂ ಪ್ರೇರೇಪಿಸಿದಲ್ಲಿ ಇಲಾಖೆಯವರಿಗೆ ಮಾಹಿತಿಯನ್ನು ನೀಡುವಂತೆ ತಿಳಿಸಿದರು
ಕಾರ್ಯಕ್ರಮದಲ್ಲಿ ವಲಯ ಅರಣ್ಯ ಅಧಿಕಾರಿಗಳಾದ ವಾಸು.ಬಿ.ಎಸ್ ನಾಗೇಂದ್ರ ನಾಯಕ್, ಪ್ರಮೋದ್, ಗಿರಿಜನ ಮುಖಂಡರಾದ ಬೊಮ್ಮಯ್ಯ, ಕೇತೇಗೌಡ, ಉಪವಲಯ ಅರಣ್ಯ ಅಧಿಕಾರಿ ಭಾನುಪ್ರಕಾಶ್, ಮೂರ್ತಿ, ಅನಂತರಾಮು, ಗಣೇಶ್ ಪ್ರಸಾದ್, ಮುಖ್ಯಪೇದೆ ನಂಜುಂಡ, ರಾಚಪ್ಪ ಕೆರೆದಿಂಬ ಮತ್ತು ಗೊಂಬಗಲ್ಲು ಮುಖಂಡರು ಅರಣ್ಯ ಇಲಾಖೆಯ ವಿವಿಧ ವೃಂದದ ಅಧಿಕಾರಿ ಮತ್ತು ಸಿಬ್ಬಂದಿ ವರ್ಗದವರು ಹಾಜರಿದ್ದರು.
Chamarajanagar
ಅಂಬಳೆ ಗ್ರಾಮ ಪಂಚಾಯಿತಿಯ ನೂತನ ಕಟ್ಟಡದ ಶಂಕುಸ್ಥಾಪನೆ
ಯಳಂದೂರು: ರಾಜೀವ್ ಗಾಂಧಿ ಪಂಚಾಯತ್ ಸಶಕ್ತೀಕರಣ ಅಭಿಯಾನದಡಿ ಅಂದಾಜು 15 ಲಕ್ಷ ರೂಪಾಯಿ ವೆಚ್ಚದಲ್ಲಿ ಯಳಂದೂರು ತಾಲ್ಲೂಕಿನ ಅಂಬಳೆ ಗ್ರಾಮ ಪಂಚಾಯಿತಿಯ ನೂತನ ಕಟ್ಟಡದ ಶಂಕುಸ್ಥಾಪನೆಗೆ ಶುಕ್ರವಾರ (ಜ.24) ಶಾಸಕ ಎ.ಆರ್ ಕೃಷ್ಣಮೂರ್ತಿ ಭೂಮಿ ಪೂಜೆ ನೆರವೇರಿಸಿದರು
ಜಿಲ್ಲಾ ಗ್ಯಾರೆಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಎಚ್ವಿ. ಚಂದ್ರು‚ ನಿರ್ಮಿತಿ ಕೇಂದ್ರ ಇಂಜಿನಿಯರ್ ನಂದಿಶ್, ಗ್ರಾ.ಪಂ ಅಧ್ಯಕ್ಷ ನಂಜುಂಡಸ್ವಾಮಿ ಉಪಾಧ್ಯಕ್ಷೆ ಮಹದೇವಮ್ಮ ತಾ.ಪಂ ಇಒ ಉಮೇಶ್ ಅಗರ ಲಿಂಗರಾಜ್ ಹಾಗೂ ಪಿಡಿಒ ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.
-
Mysore23 hours ago
ನಮ್ಮನ್ನ ಟಾರ್ಗೆಟ್ ಮಾಡುತ್ತಿದ್ದಾರೆ: ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಹೇಳಿದ್ದೇನು?
-
Education24 hours ago
Free Coaching : ಮಾಸಿಕ 5,000ರೂ. ಜೊತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಕರ್ನಾಟಕ ಸರ್ಕಾರದಿಂದ ಉಚಿತ ತರಬೇತಿ
-
Cinema24 hours ago
ಬಿಗ್ಬಾಸ್ ಸೀಸನ್ 11: ಮೀಸಲಾತಿ ಮೂಲಕ ಹನುಮಂತು ಫೈನಲ್ಸ್ ತಲುಪಿದ್ದಾರೆ ಎಂದ ನಟಿ ಹಂಸ
-
Mysore8 hours ago
ಹೃದಯಾಘಾತದಿಂದ ಯುವರಾಜ ಕಾಲೇಜಿನ ಪ್ರಾಂಶುಪಾಲ ನಿಧನ
-
Kodagu9 hours ago
ಎ.ಸಿ.ಎಫ್ ಆಗಿ ವಾಟೇರಿರ ಕಾರ್ಯಪ್ಪ ಅಧಿಕಾರ ಸ್ವೀಕಾರ
-
Kodagu9 hours ago
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ಅಲ್ಪಸಂಖ್ಯಾತರಿಗೆ ದಕ್ಕಬೇಕು
-
Kodagu6 hours ago
ಕಡಂಗ ಪ್ರೀಮಿಯರ್ ಲೀಗ್ ಕ್ರಿಕೆಟ್ ಬಿಡ್ಡಿಂಗ್ ಪ್ರಕ್ರಿಯೆ
-
Mysore5 hours ago
ಲೋಕಾಯುಕ್ತ ಸರ್ಕಾರದ ಕೈಗೊಂಬೆ: ಸಿಎಂ ಕ್ಲೀನ್ ಚೀಟ್ಗೆ ಹಳ್ಳಿಹಕ್ಕಿ ಪ್ರತಿಕ್ರಿಯೆ