Connect with us

Hassan

ಮನೆಯ ಮೇಲ್ಛಾವಣಿಗೆ ಗುಂಡು ಹಾರಿಸಿ ಚಿನ್ನಾಭರಣ ದೋಚಿ ಪರಾರಿ ತನಿಖೆ ಚುರುಕು ಎಸ್ಪಿ ಮಹಮ್ಮದ್ ಸುಜಿತಾ

Published

on

ಹಾಸನ: ಎರಡು ಜನ ಅಪರಿಸಿತರು ಮನೆಗೆ ನುಗ್ಗಿ ಕೈಲಿದ್ದ ಪಿಸ್ತೂಲ್ ನಿಂದ ಮನೆಯ ಮೇಲ್ಛಾವಣಿಗೆ ಗುಂಡು ಹಾರಿಸಿ ನಂತರ ಒಳಗಿದ್ದ ಚಿನ್ನಾಭರಣವನ್ನು ದೋಚಿಕೊಂಡು ಪರಾರಿಯಾದ ಪ್ರಕರಣ ಬೇಲೂರು ತಾಲೂಕಿನಲ್ಲಿ ನಡೆದು ತನಿಖೆ ಚುರುಕುಗೊಳಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಹಮ್ಮದ್ ಸುಜೀತಾ ತಿಳಿಸಿದರು.

ಕಳೆದ ಮೂರು ದಿನಗಳ ಹಿಂದೆ ಬೇಲೂರು ತಾಲ್ಲೂಕಿನ ಕಸಬಾ ಹೋಬಳಿ ಮುದಿಗೆರೆ ಗ್ರಾಮದ ನಿವಾಸಿಗಳಾದ ರವಿ ಮತ್ತು ಪತ್ನಿ ಶೃತಿ ಮನೆಗೆ ಇಬ್ಬರು ಮುಸುಕು ದಾರಿಗಳು ಏಕಏಕಿ ನುಗ್ಗಿದ್ದು, ಪಿಸ್ತೂಲ್ ತೋರಿಸಿ ಬೆದರಿಸಿದ್ದಾರೆ. ಈ ವೇಳೆ ಅತ್ತೆ ಚಂದ್ರಮ್ಮ ಅವರ ಎರಡು ಓಲೆ , ಮಾಂಗಲ್ಯ ಸರ ಕಿತ್ತುಕೊಂಡಿರುವ ಆರೋಪಿಗಳು ಗುಂಡು ಹಾರಿಸಿದ್ದು, ಅಲ್ಲೆ ಇದ್ದ ಮಕ್ಕಳು ಹಾಗೂ ಇತರರನ್ನು ರೂಮಿನಲ್ಲಿ ಕೂಡು ಹಾಕಿ ಹೊರಹೋಗಿದ್ದಾರೆ. ನಂತರ ಮನೆಯ ಪಕ್ಕದಲ್ಲಿ ಕೆಲಸ ಮಾಡುತ್ತಿದ್ದ ಶೃತಿ ಅವರ ಪತಿ ರವಿ ಮನೆಯ ಬಳಿ ಬಂದಾಗಲು ಅಪರಿಚಿತರ ಬಳಿ ಪಿಸ್ತೂಲ್ ಇರುವುದನ್ನು ಮನೆ ಮಾಲೀಕ ರವಿ ಗಮನಿಸಿರುವುದಾಗಿ ಮಾಹಿತಿ ನೀಡಿದ್ದಾರೆ. ಆರೋಪಿಗಳು ೨೦ ರಿಂದ ೨೫ ವರ್ಷದವರಾಗಿದ್ದು, ಟೀ ಶರ್ಟ್ ಮತ್ತು ಜೀನ್ಸ್ ಪ್ಯಾಂಟ್, ತೂಳು ಇಲ್ಲದ ಜರ್ಕೀನ್ ಧರಿಸಿದ್ದರು ಎಂದು ದೂರಿನಲ್ಲಿ ತಿಳಿಸಿದ್ದಾರೆ. ಕೊಟ್ಟ ದೂರಿನ ಮೇರೆಗೆ ಬೇಲೂರು ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿ ಮುಂದಿನ ತನಿಖೆ ಕೈಗೊಂಡಿರುವುದಾಗಿ ಮಾಹಿತಿ ನೀಡಿದರು. ಈ ಭಾಗಗಳಲ್ಲಿ ಹೆಚ್ಚಾಗಿ ಒಚಿಟಿ ಮನೆಗಳಿದ್ದು, ಈ ಪ್ರಕರಣದಿಂದ ಜನತೆ ಬಿಚ್ಚಿ ಬಿದ್ದುದ್ದು, ಜನರಲ್ಲಿ ಧೈರ್ಯ ತುಂಬಲು ಈ ಗ್ರಾಮದ ಸುತ್ತ ಮುತ್ತ ೧೧೨ ಹಾಗೂ ಗಸ್ತು ವಾಹನ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಹೇಳಿದರು.

Continue Reading
Click to comment

Leave a Reply

Your email address will not be published. Required fields are marked *

Hassan

ಮರಿ ಸತ್ತು ಮೂರು ದಿನವಾದರೂ ಸ್ಥಳ ಬಿಟ್ಟು ಕದಲದ ತಾಯಿಯಾನೆ

Published

on

ಅರೇಹಳ್ಳಿ: ತನ್ನ ಮರಿ ಸತ್ತು ಮೂರು ದಿನ ಕಳೆದರೂ ತಾಯಿಯಾನೆ ತಾನು ಹೋದಲೆಲ್ಲಾ ಮೃತ ಮರಿಯಾನೆಯನ್ನು ತನ್ನೊಂದಿಗೆ ಎಳೆದುಕೊಂಡು ಹೋಗುತ್ತಿರುವ ಮನಕಲಕುವ ಘಟನೆ ಬೇಲೂರು ತಾಲೂಕು ಅರೇಹಳ್ಳಿ ಹೋಬಳಿಯ ಶಿರಗುರ ಗ್ರಾಮದ ಜಾಕ್‌ನಳ್ಳಿ ಎಸ್ಟೇಟ್ ಬಳಿ ನಡೆದಿದೆ.

ಘಟನೆ ಹಿನ್ನೆಲೆ:

ಕಳೆದ ಶನಿವಾರ ಗರ್ಭಿಣಿ ಹೆಣ್ಣಾನೆ ಮರಿಯಾನೆಗೆ ಜನ್ಮ ನೀಡಿದೆ. ಆದರೆ ಹುಟ್ಟುವ ವೇಳೆ ಮರಿಯು ಸ್ಥಳದಲ್ಲೆ ಮೃತಪಟ್ಟಿದೆ. ತಾಯಿ ಆನೆ ತನ್ನ ಮರಿ ಜೀವಂತವಾಗಿದೆ ಎಂದು ತಿಳಿದು ಕಾಲಿನಿಂದ ಒದ್ದು ಬದುಕಿಸುವ ಪ್ರಯತ್ನ ಮಾಡಿದರೂ ಸಹ ಮೃತ ಮರಿ ಮೇಲೇಳದಿರುವುದನ್ನು ಸ್ಥಳೀಯರು ತಮ್ಮ ಮೊಬೈಲ್‌ನಲ್ಲಿ ದೃಶ್ಯ ಸೆರೆಹಿಡಿದಿದ್ದಾರೆ.

ಜೋರು ಮಳೆ ಸುರಿಯುತ್ತಿರುವುದರ ಜೊತೆಗೆ ಸತ್ತ ಮರಿಯನ್ನು ಎಳೆದುಕೊಂಡು ಹೋಗುತ್ತಿರುವುದು ಎಂಥ ಕಲ್ಲು ಮನಸ್ಸಿನವರಿಗೂ ಕರುಳು ಚುರುಕ್ ಎನ್ನುವಂತಿದೆ ಈ ದೃಶ್ಯಾವಳಿ. ತನ್ನ ಕರುಳ ಕುಡಿ ಇನ್ನೂ ಬದುಕಿದೆ ಎಂಬ ಭ್ರಮೆಯಲ್ಲಿರುವ ಮಾತೃ ಹೃದಯ ಯಾರನ್ನೂ ಕೂಡ ಹತ್ತಿರ ಹೋಗಲು ಬಿಡುತ್ತಿಲ್ಲ. ಭಾನುವಾರವಷ್ಟೆ ಅರೇಹಳ್ಳಿ ಸಮೀಪದ ಕೆಸಗುಲಿ ಗ್ರಾಮದಲ್ಲಿ ವಿದ್ಯುತ್ ತಂತಿ ತಗುಲಿ ಮರಿಯೊಂದಿಗೆ ತಾಯಿಯಾನೆಯೂ ಸಹ ಮೃತಪಟ್ಟಿತ್ತು. ಈ ಘಟನೆ ಜನಮಾನಸದಲ್ಲಿ ಮಾಸುವ ಮುನ್ನವೇ ಮತ್ತೊಂದು ಮರಿ ಮೃತಪಟ್ಟಿರುವುದು ಪ್ರಾಣಿ ಪ್ರಿಯರಿಗೆ ಅತೀವ ನೋವನ್ನುಂಟುಮಾಡಿದೆ.

“ಕಳೆದೆರಡು ದಿನಗಳ ಹಿಂದೆ ಮೃತಪಟ್ಟ ಮರಿಯೊಂದಿಗೆ ತಾಯಿಯಾನೆ ತೆರಳುತ್ತಿರುವುದು ಬೇಸರ ತಂದಿದೆ. ಹೀಗಾಗಿ ಸಿಬ್ಬಂದಿಗಳನ್ನು ಹತ್ತಿರ ಹೋಗಲು ಬಿಡುತ್ತಿಲ್ಲ. ಮರಿ ವಾಸನೆ ಬಂದರೆ ತಾಯಿಯಾನೆ ತನ್ನಿಂತಾನೆ ಬೇರೆಯಾಗುತ್ತದೆ” ಎಂದು
ಬೇಲೂರಿನ ಆರ್‌ಎಫ್‌ಒ ಅಧಿಕಾರಿ ಯತೀಶ್ ತಿಳಿಸಿದ್ದಾರೆ.

Continue Reading

Hassan

ಹಾಸನ: ಬಿಜೆಪಿ ಜಿಲ್ಲಾಧ್ಯಕ್ಷ ಸಿದ್ದೇಶ್‌ ನಾಗೇಂದ್ರರನ್ನು ಸನ್ಮಾನಿಸಿದ ತಾಲ್ಲೂಕು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ

Published

on

ಹಾಸನ: ಈ ಜಿಲ್ಲೆಯಲ್ಲಿ ನೂತನ ಬಿಜೆಪಿ ಜಿಲ್ಲಾಧ್ಯಕ್ಷರಾಗಿ ನೇಮಕವಾಗಿರುವ ಹಾಗೂ ಸಮಾಜ ಸೇವಕ ಮತ್ತು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಕೇಂದ್ರ ಸಮಿತಿಯ ಮಾಜಿ ಕಾರ್ಯ ನಿರ್ವಾಹಕ ಸದಸ್ಯರಾಗಿದ್ದ ಸಿದ್ದೇಶ್‌ ನಾಗೇಂದ್ರ ಅವರಿಗೆ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ವತಿಯಿಂದ ಸನ್ಮಾಸಿದ್ದಾರೆ.

ಹಾಸನದ ಬಿಜೆಪಿ ಕಚೇರಿಯಲ್ಲಿ ಇಂದು ಸಿದ್ಧೇಶ್‌ ನಾಗೇಂದ್ರ ಅವರಿಗೆ ಸನ್ಮಾನಿಸಿ ಗೌರವ ಪುರಸ್ಕಾರ ನೀಡಿದ್ದಾರೆ.

ಈ ಸಂದರ್ಭದಲ್ಲಿ ಹಾಸನ ತಾಲ್ಲೂಕು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾ ಸಭಾದ ಅಧ್ಯಕ್ಷರಾದ ಕಟ್ಟಾಯ ಶಿವಕುಮಾರ್, ಮಹಿಳಾ ಘಟಕದ ಅಧ್ಯಕ್ಷರಾದ ಮಮತಾ ಪಾಟೀಲ್, ನಿರ್ದೇಶಕರಾದ ಮಯೂರಿ ಲೋಕೇಶ್, ಡಿ. ವಿ.ಮದನ್, ಹೆಚ್. ಕೆ.ಮಿಥುನ್, ಮಹಿಳಾ ಘಟಕದ ಪ್ರಧಾನ ಕಾರ್ಯದರ್ಶಿ ಧನಲಕ್ಷ್ಮೀ ಲೋಕೇಶ್, ಖಜಾಂಚಿ ಶೈಲಾ ಮದನ್‌, ನಿರ್ಧೇಶಕರಾದ ಭಾಮಿನಿಹೇಮಂತ್, ವೀಣಾ ದೇವರಾಜ್, ಡಿ. ಸಿ.ಅನೂಸೂಯ, ಸುಶೀಲ ಪಾಲನೇತ್ರ, ಸವಿತಾ ಭೂಷಣ್ ಮುಖಂಡರಾದ ನೇತ್ರವತಿ ಮಂಜುನಾಥ್‌ ಇತರರು ಉಪಸ್ಥಿತರಿದ್ದರು.

Continue Reading

Hassan

5 ವರ್ಷಗಳ ಅವಧಿಗೆ ಆಡಳಿತ ಮಂಡಳಿ ನಿರ್ದೇಶಕರುಗಳ ಅವಿರೋಧ ಆಯ್ಕೆ

Published

on

ವರದಿ ಸತೀಶ್ ಚಿಕ್ಕಕಣಗಾಲು

ಆಲೂರು : ಚಿಕ್ಕಕಣಗಾಲು ಹಾಲು ಉತ್ಪಾದಕರ ಸಹಕಾರ ಸಂಘ ಇದರ ಮುಂದಿನ 5 ವರ್ಷಗಳ ಅವಧಿಗೆ ಆಡಳಿತ ಮಂಡಳಿ ನಿರ್ದೇಶಕರುಗಳ ಅವಿರೋಧ ಆಯ್ಕೆ ನಡೆದಿದೆ.

ತಾಲೂಕಿನ ಪಾಳ್ಯ ಹೋಬಳಿ ತಾಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಚಿಕ್ಕಕಣಗಾಲು ಹಾಲು ಉತ್ಪಾದಕರ ಸಹಕಾರ ಸಂಘದ ಸಾಮಾನ್ಯ ಸ್ಥಾನಗಳು 6, ಪ.ಜಾತಿ ಮೀಸಲು ಸ್ಥಾನ 01, ಹಿಂದುಳಿದ ವರ್ಗ-ಪ್ರವರ್ಗ(ಬಿ) ಸ್ಥಾನ 01, ಮಹಿಳಾ ಮೀಸಲು 2 ಸ್ಥಾನ, ಸೂಪರ್ವೈಸರ್ ಸೇರಿ ಒಟ್ಟು 11 ಸ್ಥಾನಗಳಿಗೆ ಜೂನ್. 21 ರಂದು ಚುನಾವಣೆ ನಡೆಯಬೇಕಿತ್ತು ಆದರೆ ನಾಮಪತ್ರ ಸಲ್ಲಿಸಿದ ಒಟ್ಟು 10 ಸ್ಥಾನಗಳಿಗೆ ಅವಿರೋಧ ಆಯ್ಕೆ ನಡೆದಿದೆ.

ಪರಿಶಿಷ್ಟ ಪಂಗಡ, ಹಿಂದುಳಿದ ಪ್ರವರ್ಗ(ಎ) ಸ್ಥಾನಗಳಿಗೆ ಅ ಸಮುದಾಯಗಳ ಜನರು ಇಲ್ಲದ ಕಾರಣ ಆ ಸ್ಥಾನಗಳು ಖಾಲಿ ಉಳಿದಿವೆ.

ಸಾಮಾನ್ಯ ಕ್ಷೇತ್ರದಿಂದ ಚಿಕ್ಕಕಣಗಾಲು ಗ್ರಾಮದ ಮಹೇಶ್ವರಯ್ಯ, ತೀರ್ಥ ಕುಮಾರ್ (ಕಟ್ಟೆಗಿಡ) ವೀರಭದ್ರ, ಬಸವಣ್ಣ, ಜೆ ತಿಮ್ಮನಹಳ್ಳಿ ಗ್ರಾಮದಿಂದ ಚಂದ್ರ, ಗುರು, ಮಹಿಳಾ ಮೀಸಲು ಸ್ಥಾನದಿಂದ ಜೆ.ತಿಮ್ಮನಹಳ್ಳಿಯ ಸುಶೀಲಮ್ಮ, ಸಿದ್ದಮ್ಮ, ಪರಿಶಿಷ್ಟ ಜಾತಿ ಮೀಸಲು ಸ್ಥಾನದಿಂದ ಮಾಳಿಗಯ್ಯ, ಹಿಂದುಳಿದ ವರ್ಗ-ಪ್ರವರ್ಗ(ಬಿ) ಸ್ಥಾನದಿಂದ ಜೆ. ತಿಮ್ಮನಹಳ್ಳಿಯ ರವಿಪ್ರಕಾಶ್ ಅವಿರೋಧವಾಗಿ ಆಯ್ಕೆಯಾದ ನಿರ್ದೇಶಕರುಗಳಾಗಿದ್ದಾರೆ‌.

ಚುನಾವಣಾ ಅಧಿಕಾರಿಯಾಗಿ ಹಾಲು ಉತ್ಪಾದಕರ ಸಹಕಾರ ಸಂಘದ ರಿಟರ್ನಿಂಗ್ ಆಫೀಸರ್ ಶಕುಂತಲಾ ಕರ್ತವ್ಯ ನಿರ್ವಹಿಸಿದರು.

 

Continue Reading

Trending

error: Content is protected !!