National - International
Tesla Robotaxi – ಎಲಾನ್ ಮಸ್ಕ್ ಒಡೆತನದ ಟೆಸ್ಲಾ ಕಂಪನಿಯಿಂದ ಸ್ಟೇರಿಂಗ್ ಇಲ್ಲದ AI ಚಾಲಿತ ರೋಬೊ ಟ್ಯಾಕ್ಸಿ ಬಿಡುಗಡೆ
ಜಗತ್ತಿನ ಅತ್ಯಂತ ಶ್ರೀಮಂತ ವ್ಯಕ್ತಿಗಳಲ್ಲಿ ಒಂದಾಗಿರುವ ಎಲಾನ್ ಮಸ್ಕ್ ಒಡೆತನದ ಟೆಸ್ಲಾ ಕಂಪನಿಯು ಇದೀಗ ಹೊಸ ಮಾದರಿಯ ರೋಬೋ ಟ್ಯಾಕ್ಸಿಯನ್ನು ಬಿಡುಗಡೆ ಮಾಡಿದ್ದು, ಆಟೋಮೊಬೈಲ್ ಮಾರುಕಟ್ಟೆಯಲ್ಲಿ ಹೊಸ ಸಂಚಲನ ಮೂಡಿಸಿದ್ದಾರೆ.
ಇತ್ತೀಚಿಗೆ ಹಾಲಿವುಡ್ ಸ್ಟುಡಿಯೋದಲ್ಲಿ ನೂತನ ರೋಬೋ ಟ್ಯಾಕ್ಸಿಯನ್ನು ಅನಾವರಣಗೊಳಿಸಿಲಾಯಿತು. ಇದರ ವಿಶೇಷತೆ ಏನೆಂದರೆ ಇದು ಎಐ ಚಾಲಿತವಾಗಿದ್ದು, ಯಾವುದೇ ಸ್ಟೇರಿಂಗ್ ಪೆಡಲ್ ಹೊಂದಿರದೆ ಇರುವ ಈ ರೋಬೊ ಟ್ಯಾಕ್ಸಿ ಮನುಷ್ಯನ ಹಸ್ತಕ್ಷೇಪವಿಲ್ಲದೆ ಇದು ಚಲಿಸಬಲ್ಲದು. ಇದನ್ನು ಹೊರತುಪಡಿಸಿ ಪ್ರಯಾಣಿಕರಿಗೆ ವಿಶೇಷ ರೀತಿಯ ಅನುಭವವನ್ನು ನೀಡಬಲ್ಲದು. ಅವುಗಳೆಂದರೆ ಪ್ರಯಾಣಿಕರು ಆರಾಮವಾಗಿ ನಿದ್ರಿಸಬಹುದಾಗಿದೆ ಹಾಗೂ ಅವರ ತಲುಪುವ ಜಾಗದಲ್ಲಿ ತಂತ್ರಜ್ಞಾನದ ಸಹಾಯದಿಂದ ಎಚ್ಚರಗೊಳ್ಳಬಹುದು.
ಟೆಸ್ಲಾ ಕಂಪನಿಯು ಕಳೆದ ಹಲವು ವರ್ಷಗಳಿಂದ ಕೃತಕ ಬುದ್ಧಿಮತ್ತೆ ಉಪಯೋಗಿಸಿ ಹಲವು ಆವಿಷ್ಕಾರಗಳನ್ನು ಮಾಡುತ್ತಿದೆ. ಸದ್ಯಕ್ಕೆ ಅನಾವರಣಗೊಳಿಸಿರುವ ಈ ರೋಬೋ ಟ್ಯಾಕ್ಸಿಯು 2 ಸೀಟರ್ ಸಾಮರ್ಥ್ಯ ಹೊಂದಿರುವುದಾಗಿದ್ದು, ಇದೆ ತಂತ್ರಜ್ಞಾನವನ್ನು ಉಪಯೋಗಿಸಿ ನೋಡಲು ಮಿನಿ ಬಸ್ ನಂತೆ ಇರುವ 20 ಜನರು ಪ್ರಯಾಣಿಸಬಹುದಾದ ಟ್ಯಾಕ್ಸಿಯನ್ನು ಮಾರುಕಟ್ಟೆಗೆ ತರಲಿದ್ದಾರೆ. ಇದರ ವೆಚ್ಚವನ್ನು ನೋಡುವುದಾದರೆ, 30 ಸಾವಿರ ಅಮೇರಿಕನ್ ಡಾಲರ್ ( ಸದ್ಯದ ಭಾರತೀಯ ರೂಪಾಯಿಯ ಮೊತ್ತ – 25 ಲಕ್ಷದ ಆಸು ಪಾಸು ). ಇದು 2026ರ ವೇಳೆಗೆ ಮಾರುಕಟ್ಟೆಯಲ್ಲಿ ಲಭ್ಯವಿರಲಿದೆ.
National - International
ರೇಣುಕಾಸ್ವಾಮಿ ಕೊಲೆ ಪ್ರಕರಣ: ದರ್ಶನ್ ಜಾಮೀನು ರದ್ದುಗೊಳಿಸಲು ನಿರಾಕರಿಸಿದ ಸುಪ್ರೀಂ
ನವದೆಹಲಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಹಾಗೂ ಉಳಿದ ಏಳು ಜನರಿಗೆ ನೀಡಿದ್ದ ಜಾಮೀನು ಅರ್ಜಿ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದ ಕರ್ನಾಟಕ ಸರ್ಕಾರಕ್ಕೆ ಅಲ್ಪ ಹಿನ್ನಡೆಯಾಗಿದ್ದರೂ ಮತ್ತೊಂದೆಡೆ ಅಲ್ಪ ಮುನ್ನಡೆಯಾಗಿದೆ.
ದರ್ಶನ್ ಜಾಮೀನು ಅರ್ಜಿ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಶುಕ್ರವಾರ (ಜ.24) ನಡೆಸಿದ ಕೋರ್ಟ್, ಜಾಮೀನು ರದ್ದುಗೊಳಿಸಲು ಸುಪ್ರೀಂ ನಿರಾಕರಿಸಿದೆ. ಅದ್ಯಾಗೋ ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿ ಪರಿಶೀಲಿಸಲು ಕೋರ್ಟ್ ಅನುಮತಿಸಿದೆ.
ಈ ಪ್ರಕರಣ ಸಂಬಂಧ ನ್ಯಾಯಾಮೂರ್ತಿಗಳಾದ ಜೆ.ಬಿ ಪರ್ದಿವಾಲಾ ಹಾಗೂ ಆರ್. ಮಹದೇವನ್ ಇದ್ದ ಪೀಠವು ದರ್ಶನ್ ಹಾಗೂ ಉಳಿದ ಆರು ಮಂದಿಗೆ ನೋಟಿಸ್ ಹೊರಡಿಸಿದೆ.
National - International
IAS, IPS ಸೇರಿದಂತೆ ವಿವಿಧ 979 ಅಧಿಕಾರಿ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಬಿಡುಗಡೆ
UPSC Recruitment 2025 – IAS Notification : ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ದೇಶದ ಉನ್ನತ ಗ್ರೂಪ್ ಎ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಕೇಂದ್ರ ಲೋಕಸೇವಾ ಆಯೋಗವು (UPSC) ಅಧಿಸೂಚನೆ ಹೊರಡಿಸಿ ಅರ್ಜಿ ಆಹ್ವಾನಿಸಿದೆ.
ಎಷ್ಟು ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ ಮತ್ತು ಯಾವ ಯಾವ ಹುದ್ದೆಗಳು?
ಕೇಂದ್ರ ಲೋಕಸೇವಾ ಆಯೋಗವು ಪ್ರತಿವರ್ಷ ಈ ನೇಮಕಾತಿಯನ್ನು ನಡೆಸುತ್ತದೆ. ಪ್ರಸ್ತುತ ಈ ವರ್ಷ ಒಟ್ಟು 979 ವಿವಿಧ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳುತ್ತಿದೆ. ಅವುಗಳಲ್ಲಿ IAS, IPS, IFS, IRS ಸೇರಿದಂತೆ ಹಲವು ಇಲಾಖೆಗಳ ಹುದ್ದೆಗಳು.
ಶೈಕ್ಷಣಿಕ ಅರ್ಹತೆ : ಈ ಒಂದು ನೇಮಕಾತಿಗೆ ಅರ್ಜಿ ಸಲ್ಲಿಸಲು ನೀವು ಯಾವುದಾದರು ಪದವಿ ಮುಗಿಸಿದ್ದರೆ ಸಾಕು ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿರುತ್ತಿರಿ.
Prelims Exam ನಡೆಯುವ ದಿನಾಂಕ – ಪೂರ್ವಭಾವಿ ಪರೀಕ್ಷೆಯು 25 ಮೇ 2025 ರಂದು ರಾಜ್ಯದ ಬೆಂಗಳೂರು, ಮೈಸೂರು ಮತ್ತು ಧಾರವಾಡ ಜಿಲ್ಲೆಯಲ್ಲಿ ನಡೆಯಲಿದೆ.
ಅರ್ಜಿ ಸಲ್ಲಿಸಲು ಪ್ರಮುಖ ಮಾಹಿತಿ :
ಅರ್ಹತೆ ಇರುವ ಅಭ್ಯರ್ಥಿಗಳು ಫೆಬ್ರವರಿ 11 ನೇ ತಾರೀಕಿನ ಒಳಗಾಗಿ ಆನ್ಲೈನ್ ಮೂಲಕ ಕೆಳಗಿನ ನೀಡಿರುವ ಜಾಲತಾಣಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಿ.
ಅರ್ಜಿ ಸಲ್ಲಿಸಲು UPSC ಅಧಿಕೃತ ಜಾಲತಾಣದ ಲಿಂಕ್ – https://upsconline.gov.in/upsc/OTRP/
National - International
ದೆಹಲಿ ಗಣರಾಜ್ಯೋತ್ಸವ ಸ್ತಬ್ಧಚಿತ್ರ 2025: ರಾಜ್ಯದ ಸ್ತಬ್ಧಚಿತ್ರಕ್ಕೆ ಪ್ರಶಸ್ತಿ ಲಭಿಸುವ ವಿಶ್ವಾಸವಿದೆ ಎಂದ ಆಯುಕ್ತ ಹೇಮಂತ ನಿಂಬಾಳ್ಕರ್
ನವದೆಹಲಿ: ಕರ್ನಾಟಕ ರಾಜ್ಯದ ಪರವಾಗಿ ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ಪಾಲ್ಗೊಳ್ಳುವ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪ್ರತಿ ವರ್ಷ ತನ್ನ ವೈಶಿಷ್ಟಪೂರ್ಣ ಸ್ತಬ್ಧಚಿತ್ರಗಳ ಮೂಲಕವೇ ದೇಶದ ಗಮನ ಸೆಳೆಯುತ್ತಿದ್ದು, ಈ ಬಾರಿ “ಲಕ್ಕುಂಡಿಯ ಶಿಲ್ಪಕಲೆಯ ತೊಟ್ಟಿಲು”ವಿಷಯಾಧಾರಿತ ಸ್ತಬ್ಧಚಿತ್ರವು ಅತ್ಯಂತ ಅತ್ಯಾಕರ್ಷಣೀಯವಾಗಿದ್ದು, ಗಣರಾಜ್ಯೋತ್ಸವದಲ್ಲಿ ಭಾಗವಹಿಸಲಿರುವ ರಾಜ್ಯದ ಸ್ತಬ್ಧಚಿತ್ರವು ಪ್ರಶಸ್ತಿ ಪಡೆಯುವ ವಿಶ್ವಾಸವಿದೆ ಎಂದು ವಾರ್ತಾ ಇಲಾಖೆಯ ಆಯುಕ್ತರಾದ ಹೇಮಂತ ನಿಂಬಾಳ್ಕರ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಈ ಬಾರಿಯ ಗಣರಾಜ್ಯೋತ್ಸವದಲ್ಲಿ ರಾಜ್ಯದಿಂದ ಭಾಗವಹಿಸಲಿರುವ ಸ್ತಬ್ಧಚಿತ್ರವು ಗದಗಿನ ಲಕ್ಕುಂಡಿಯಲ್ಲಿರುವ ಮಂದಿರಕ್ಕೆ ಹೋಲುವಂತಿರುವ ಸ್ತಬ್ಧಚಿತ್ರವನ್ನು ಅಂತರರಾಷ್ಟ್ರೀಯ ಕಲಾವಿದ ಶಶಿಧರ ಅಡಪ ವಿನ್ಯಾಸಗೊಳಿಸಿದ್ದು, ದೆಹಲಿಯ ರಾಷ್ಟ್ರೀಯ ರಂಗಶಾಲಾ ಕ್ಯಾಂಪಿನಲ್ಲಿ ಕಳೆದ ಒಂದು ತಿಂಗಳಿನಿಂದ ರಾಜ್ಯದ 50ಕ್ಕೂ ಹೆಚ್ಚು ಜನ ಕಲಾವಿದರು,ಕುಶಲ ಕರ್ಮಿಗಳು ಮೈಕೊರೆಯುವ ಚಳಿಯಲ್ಲಿ ಸ್ತಬ್ಧಚಿತ್ರವನ್ನು ನಿರ್ಮಾಣಗೊಳಿಸಿದ್ದಾರೆ.
ಜ.23ರ ಗುರುವಾರ ನವದೆಹಲಿಯ ಕರ್ತವ್ಯ ಪಥದಲ್ಲಿ ಗಣರಾಜ್ಯೋತ್ಸವ ಅಂಗವಾಗಿ ನಡೆದ ಸ್ತಬ್ಧಚಿತ್ರದ ಪೂರ್ವಾಭ್ಯಾಸದಲ್ಲಿ ರಾಜ್ಯದ ಲಕ್ಕುಂಡಿ ಶಿಲ್ಪಕಲೆಯ ತೊಟ್ಟಿಲು ಸ್ತಬ್ಧಚಿತ್ರಕ್ಕೆ ಎರಡೂ ಬದಿಯಲ್ಲಿ ನೆರೆದ ಜನಸ್ತೋಮವು ತಮ್ಮ ಹತ್ತಿರ ಸ್ತಬ್ಧಚಿತ್ರ ಬಂದಾಗ ಅದರ ವಿನ್ಯಾಸ, ಶಿಲ್ಪಕಲೆ, ಸಂಸ್ಕೃತಿ, ಸಾಂಪ್ರದಾಯಿಕ ಉಡುಗೆಯೊಂದಿಗೆ ಭಾಗವಹಿಸಿದ ಕಲಾವಿದರ ದೃಶ್ಯವನ್ನು ಕಂಡ ಜನರು ಕರತಾಡನ ಮೂಲಕ ಅಭೂತಪೂರ್ವವಾಗಿ ಸ್ವಾಗತಿಸಿ ಪ್ರಶಂಸೆ ವ್ಯಕ್ತಪಡಿಸಿದರು.
ಕರ್ತವ್ಯಪಥದಲ್ಲಿ ಸೇರಿದ ಜನರಿಂದ ನಿರೀಕ್ಷೆಗೂ ಮೀರಿ ಬಂದ ಪ್ರತಿಕ್ರಿಯೆಗೆ ಈ ಬಾರಿಯ ಗಣರಾಜ್ಯೋತ್ಸವದಲ್ಲಿ ಪಾಲ್ಗೊಳ್ಳುವ ರಾಜ್ಯದ ಸ್ತಬ್ಧಚಿತ್ರಕ್ಕೆ ಪ್ರಶಸ್ತಿ ದೊರೆಯಲಿದೆ ಎಂಬ ವಿಶ್ವಾಸವನ್ನು ಆಯುಕ್ತರಾದ ಹೇಂಮಂತ್ ನಿಂಬಾಳ್ಕರ್ ಅವರು ವ್ಯಕ್ತಪಡಿಸಿದರು.
ಕರ್ತವ್ಯ ಪಥದಲ್ಲಿ ಸಾಗಿದ ಸ್ತಬ್ದಚಿತ್ರಕ್ಕೆ ಕನ್ನಡ ಸಾಹಿತ್ಯ ಇರುವ “ಶಿಲ್ಪಕಲೆಯ ತೊಟ್ಟಿಲು ನಮ್ಮ ಗದುಗಿನ ಲಕ್ಕುಂಡಿ” ಎಂಬ ಹಾಡಿಗೆ ಹೆಸರಾಂತ ಕಲಾವಿದ ಪ್ರವೀಣ ಡಿ.ರಾವ್ ಅವರ ಸಂಗೀತ ಸಂಯೋಜನೆಯ ನೀನಾದಕ್ಕೆ ಗದಗ, ಬೆಂಗಳೂರು, ಮೈಸೂರು ಹಾಗೂ ಧಾರವಾಡದಿಂದ ಆಗಮಿಸಿದ ಸ್ತಬ್ಧಚಿತ್ರದ ಕಲಾವಿದರು ಸಾಂಪ್ರದಾಯಿಕ ಉಡುಗೆಯಲ್ಲಿ ಕಂಗೊಳಿಸಿ ಹೆಚ್ಚಿನ ಮೆರಗು ತಂದಿದ್ದಲ್ಲದಲೇ ಅಲ್ಲಿ ಸೇರಿದವರನ್ನು ರೋಮಾಂಚನಗೊಳಿಸಿತು.
ಸ್ತಬ್ದಚಿತ್ರದ ಮೇಲ್ಭಾಗದಲ್ಲಿ 10 ಜನ ಕಲಾವಿದರು ಸೇರಿದಂತೆ 18 ಜನ ಕಲಾವಿದರಿದ್ದು, ಸ್ತಬ್ಧಚಿತ್ರದ ಇಕ್ಕೆಲಗಳಲ್ಲಿ ನಾಲ್ಕು ಪುರುಷ-ಮಹಿಳೆಯರು ಸಾಂಪ್ರಾದಾಯಿಕ ಉಡುಗೆಯಲ್ಲಿ ಭಾಗವಹಿಸಿದ್ದು, ಸ್ತಬ್ಧಚಿತ್ರಕ್ಕೆ ಇನ್ನಷ್ಟು ಮೆರಗು ತಂದಿತು.
ಕರ್ನಾಟಕದ ಗದಗ ಜಿಲ್ಲೆಯಲ್ಲಿರುವ ಲಕ್ಕುಂಡಿಯನ್ನು ಅದರ ಅದ್ಭುತ ಕಲ್ಲಿನ ವಾಸ್ತುಶಿಲ್ಪಕ್ಕಾಗಿ ‘ಶಿಲ್ಪಕಲೆಯ ತೊಟ್ಟಿಲು’ ಎಂದು ಕರೆಯಲಾಗುತ್ತದೆ. ಇಲ್ಲಿನ ಸುಂದರವಾದ ದೇವಾಲಯಗಳು, ಮೆಟ್ಟಿಲು ಬಾವಿಗಳು ಮತ್ತು ಚಾಲುಕ್ಯ ರಾಜವಂಶದ ಶಾಸನಗಳಿಗೆ ನೆಲೆಯಾಗಿದೆ. ಸಾಂಸ್ಕೃತಿಕ ಶಕ್ತಿ ಕೇಂದ್ರವಾಗಿರುವುದರ ಜೊತೆಗೆ, ಕ್ರಿ. ಶ. 10 ರಿಂದ 12 ನೇ ಶತಮಾನದ ನಡುವೆ ಲಕ್ಕುಂಡಿ ಒಂದು ದೊಡ್ಡ ವಾಣಿಜ್ಯ ಕೇಂದ್ರವಾಗಿತ್ತು. ಈ ನಗರವು ಹಲವಾರು ರಾಜವಂಶಗಳಿಂದ ಆಳಲ್ಪಟ್ಟಿತ್ತಾದರೂ ಅವುಗಳಲ್ಲಿ ಅತ್ಯಂತ ಪ್ರಮುಖವಾದದ್ದು ಚಾಲುಕ್ಯರ ರಾಜವಂಶ.
ಲಕ್ಕುಂಡಿಯು ಪ್ರಾಚೀನಾನ್ವೇಷಕರು ಮತ್ತು ವಾಸ್ತುಶಿಲ್ಪ ಪ್ರಿಯರ ಸ್ವರ್ಗವಾಗಿದೆ. ಇದು 50 ದೇವಾಲಯಗಳನ್ನು ಹೊಂದಿದ್ದು, ಅವುಗಳಲ್ಲಿ ಹೆಚ್ಚಿನವು ಶಿವನಿಗೆ ಸಮರ್ಪಿತವಾಗಿವೆ; 101 ಮೆಟ್ಟಿಲು ಬಾವಿಗಳು (ಕಲ್ಯಾಣಿ / ಪುಷ್ಕರಣಿ); ಮತ್ತು 29 ಶಾಸನಗಳು ಇಲ್ಲಿವೆ. ಇವುಗಳು ಕಲ್ಯಾಣಿ ಚಾಲುಕ್ಯರ ಕಲೆ, ಸಂಸ್ಕೃತಿ ಮತ್ತು ವಾಸ್ತುಶಿಲ್ಪದ ಶ್ರೇಷ್ಠತೆಯ ಸಂಕೇತವಾಗಿದೆ. ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ ನಿರ್ವಹಿಸುತ್ತಿರುವ ವಸ್ತುಸಂಗ್ರಹಾಲಯವು ಲಕ್ಕುಂಡಿಯ ಶ್ರೀಮಂತ ಶಿಲ್ಪಕಲೆಯನ್ನು ಪ್ರದರ್ಶಿಸುತ್ತಿದೆ.
ಸ್ತಬ್ಧಚಿತ್ರದ ಮುಂಭಾಗವು ಬ್ರಹ್ಮ ಜಿನಾಲಯ ದೇವಸ್ಥಾನದ ಬ್ರಹ್ಮನ ಪ್ರತಿಮೆಯನ್ನು ಹೊಂದಿದೆ. ಇದು ಲಕ್ಕುಂಡಿಯಲ್ಲಿರುವ ಅತ್ಯಂತ ಹಳೆಯ ಜೈನ ದೇವಾಲಯವಾಗಿದ್ದು ಭಗವಾನ್ ಮಹಾವೀರನಿಗೆ ಸಮರ್ಪಿತವಾಗಿದೆ. ಅದರ ನಂತರ ಬ್ರಹ್ಮ ಜಿನಾಲಯ ದೇವಸ್ಥಾನದ ತೆರೆದ ಕಂಬದ ಮಂಟಪವಿದೆ. ಸ್ತಬ್ಧಚಿತ್ರದ ಮುಖ್ಯ ವಿಭಾಗವು ಭವ್ಯವಾದ ಮತ್ತು ಅಲಂಕೃತವಾದ ಕಾಶಿ ವಿಶ್ವೇಶ್ವರ ದೇವಸ್ಥಾನ ಮತ್ತು ಶಿವನಿಗೆ ಸಮರ್ಪಿತವಾದ ನನ್ನೇಶ್ವರ ದೇವಸ್ಥಾನವನ್ನು ಪ್ರದರ್ಶಿಸುತ್ತದೆ.
-
Mysore22 hours ago
ನಮ್ಮನ್ನ ಟಾರ್ಗೆಟ್ ಮಾಡುತ್ತಿದ್ದಾರೆ: ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಹೇಳಿದ್ದೇನು?
-
Education22 hours ago
Free Coaching : ಮಾಸಿಕ 5,000ರೂ. ಜೊತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಕರ್ನಾಟಕ ಸರ್ಕಾರದಿಂದ ಉಚಿತ ತರಬೇತಿ
-
Cinema23 hours ago
ಬಿಗ್ಬಾಸ್ ಸೀಸನ್ 11: ಮೀಸಲಾತಿ ಮೂಲಕ ಹನುಮಂತು ಫೈನಲ್ಸ್ ತಲುಪಿದ್ದಾರೆ ಎಂದ ನಟಿ ಹಂಸ
-
Mysore7 hours ago
ಹೃದಯಾಘಾತದಿಂದ ಯುವರಾಜ ಕಾಲೇಜಿನ ಪ್ರಾಂಶುಪಾಲ ನಿಧನ
-
Kodagu8 hours ago
ಎ.ಸಿ.ಎಫ್ ಆಗಿ ವಾಟೇರಿರ ಕಾರ್ಯಪ್ಪ ಅಧಿಕಾರ ಸ್ವೀಕಾರ
-
Chamarajanagar23 hours ago
ಗಿರಿಜನರು ಸಮಾಜದ ಮುಖ್ಯವಾಹಿನಿಗೆ ಬಂದು ಮೌಲ್ಯಯುತ ಬದುಕನ್ನು ಕಟ್ಟಿಕೊಳ್ಳಬೇಕು: ಟಿ ಹಿರಲಾಲ್
-
Kodagu8 hours ago
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ಅಲ್ಪಸಂಖ್ಯಾತರಿಗೆ ದಕ್ಕಬೇಕು
-
Kodagu5 hours ago
ಕಡಂಗ ಪ್ರೀಮಿಯರ್ ಲೀಗ್ ಕ್ರಿಕೆಟ್ ಬಿಡ್ಡಿಂಗ್ ಪ್ರಕ್ರಿಯೆ