Connect with us

Mysore

ಗುರುವಿನ ಕೃಪೆ ಇಲ್ಲದೆ ಗುರಿ ಮುಟ್ಟಲು ಸಾಧ್ಯವಿಲ್ಲ: ದತ್ತ ವಿಜಯಾನಂದ ತೀರ್ಥ ಶ್ರೀ

Published

on

ಮೈಸೂರು, ಜು.21: ಗುರುವಿನ ಕೃಪೆ ಇಲ್ಲದೆ ನಾವು ಯಾವುದೇ ಗುರಿಯನ್ನು ಮುಟ್ಟಲು ಸಾಧ್ಯವಿಲ್ಲ, ಹಾಗಾಗಿ ಪ್ರತಿನಿತ್ಯ ಗುರು ಸ್ಮರಣೆ ಮಾಡಬೇಕು ಎಂದು ಅವದೂತ ಪೀಠದ ಕಿರಿಯ ಶ್ರೀಗಳಾದ ಶ್ರೀ ದತ್ತ ವಿಜಯಾನಂದ ತೀರ್ಥ ಸ್ವಾಮೀಜಿ ತಿಳಿಸಿದರು.

ಅವಧೂತ ದತ್ತ ಪೀಠದ ಪ್ರಾರ್ಥನಾ ಮಂದಿರದಲ್ಲಿ ಗುರು ಪೂರ್ಣಿಮೆ ಪ್ರಯುಕ್ತ ಪೂಜಾ ಕಾರ್ಯಗಳನ್ನು ನೆರವೇರಿಸಿ ಭಕ್ತರಿಗೆ ಆಶೀರ್ವಚನ ನೀಡಿ ಶ್ರೀಗಳು ಮಾತನಾಡಿದರು.

ನಮ್ಮ ಗುರಿ ಮುಟ್ಟಲು ಭಕ್ತಿ,ಶ್ರದ್ಧೆ ಇರಬೇಕು ಅಂತವರಿಗೆ ಮಾತ್ರ ಗುರು ಕೃಪೆ ಸಿಗುತ್ತದೆ ಎಂದು ತಿಳಿಸಿದರು.

ಇಂದು ವ್ಯಾಸ ಪೂರ್ಣಿಮೆ, ಆ ಭಗವಂತನೇ ವೇದವ್ಯಾಸರ ರೂಪದಲ್ಲಿ ಇಳಿದುಬಂದು ನಮಗೆ ಜ್ಞಾನವನ್ನು ನೀಡಿದ್ದಾನೆ, ಇದು ನಿಜಕ್ಕೂ ಒಂದು ಚಮತ್ಕಾರ. ಎಲ್ಲವೂ ಇರುತ್ತದೆ ಆದರೆ ಜ್ಞಾನವೇ ಇಲ್ಲದಿದ್ದರೆ ಏನೂ ಪ್ರಯೋಜನ ಆಗಲಾರದು, ಒಂದು ವಜ್ರವನ್ನು‌ ಮಗುವಿನ ಕೈಗೆ ಕೊಟ್ಟರೆ ಅದು ಚೆಂಡೆಂದು ಆಟವಾಡುತ್ತದೆ, ಅದೇ ವಜ್ರವನ್ನು ಬಲ್ಲವರಿಗೆ ಕೊಟ್ಟರೆ ಅದರ ಸದುಪಯೋಗ ಹೇಗೆ ಮಾಡಿಕೊಳ್ಳಬೇಕು ಎಂದು ತಿಳಿಸಿಕೊಡುತ್ತಾರೆ ಎಂದು ಉದಾಹರಣೆ ಸಹಿತ ವಿವರಿಸಿದರು.

ಗುರುವಿನ ಮೂಲಕ ಜ್ಞಾನ ಸಂಪಾದನೆ ಮಾಡಬೇಕು ಗುರು ಇಲ್ಲದೆ ಗುರಿ ಮುಟ್ಟಲು ಖಂಡಿತ ಸಾಧ್ಯವಿಲ್ಲ ಹಾಗಾಗಿ ಗುರುಸ್ಮರಣೆ ನಿರಂತರವಾಗಿರಬೇಕು. ನಾವು ಈ ದಿನ ವೇದವ್ಯಾಸರನ್ನು ಸ್ಮರಿಸಬೇಕು ಜ್ಞಾನ ಪ್ರತಿಯೊಬ್ಬರಿಗೂ ಬೇಕೇ ಬೇಕು ನಮಗೆಲ್ಲರಿಗೂ ಶ್ರೀ ಕೃಷ್ಣನೇ ಮೊದಲ ಗುರು. ಯುದ್ಧ ಮಾಡಿಸಿದ ಕೃಷ್ಣ ಬೇರೆ, ಗೀತ ಬೋಧನೆ ಮಾಡಿದ ಕೃಷ್ಣ ಬೇರೆ ಎಂದು ನಾವು ತಿಳಿದಿದ್ದೇವೆ ಆದರೆ ಅದೆಲ್ಲ ಮಾಯೆ ಇಬ್ಬರೂ ಕೃಷ್ಣನ್ನು ಒಂದೇ. ಧರ್ಮ ಸಂರಕ್ಷಣೆಗೆ ಕೃಷ್ಣ ಯುದ್ಧ ಮಾಡಿದ ಜ್ಞಾನ ಸಂಪಾದನೆಗೆ ಗೀತ ಬೋಧನೆ ಮಾಡಿದ ಎಂದು ವಿವರಿಸಿದರು.

ಇಂದು ಚಿಕಾಗೋದಲ್ಲಿ ಗಣಪತಿ ಸಚ್ಚಿದಾನಂದ ಸ್ವಾಮೀಜಿಗಳವರು 8,000 ಮಂದಿಯಿಂದ ಗೀತ ಪಠನ ಮಾಡಿಸಿದ್ದಾರೆ, ಇದೊಂದು ಅದ್ಭುತ ಕ್ಷಣ ಈ ಈ ಕಲಿಯುಗದಲ್ಲೂ ಗುರುವಿನ ಕೃಪೆಯಿಂದ ಇಂತಹದ್ದನ್ನು ಮಾತ್ರ ಮಾಡಲು ಸಾಧ್ಯವಾಗಿದೆ ಎಂದು ಸ್ವಾಮೀಜಿ ತಿಳಿಸಿದರು.

ನಮ್ಮ ಸನಾತನ ಧರ್ಮ ಕಾಪಾಡಲು ಗುರು ಕೃಪೆ ಬೇಕೇ ಬೇಕು, ಭಗವಂತನಿಗೆ ದೊಡ್ಡವರು ಚಿಕ್ಕವರು ಎಂಬ ಬೇಧ ಇಲ್ಲ ಜ್ಞಾನವನ್ನು ಯಾವುದೇ ಕಾರಣಕ್ಕೂ ನಾವು ಮರೆಯಬಾರದು ಅದೇ ಗುರಿ ಆ ಗುರಿ ಮುಟ್ಟಲು ನಮಗೆಲ್ಲ ಜ್ಞಾನ ಮಾರ್ಗವೇ ಮುಖ್ಯ.

ವೇದಾಂತ, ವೈರಾಗ್ಯದಿಂದ ಮಾತ್ರ ಮಾನವನ ಉದ್ಧಾರ ಸಾಧ್ಯ ಹಾಗಾಗಿ ವೇದವ್ಯಾಸರನ್ನು ಮರೆಯಬಾರದು ಅದೇ ರೀತಿ ಶಂಕರಾಚಾರ್ಯರನ್ನು ನಾವು ಮರೆಯಬಾರದು ಅವರು ಇಲ್ಲದಿದ್ದರೆ ಭಗವದ್ಗೀತೆಯೇ ಇರುತ್ತಿರಲಿಲ್ಲ.

ಗುರುಕೃಪೆಯಿಂದ ಅನುಭವ ಬರುತ್ತದೆ ನಮಗೆ ಗುರು ಕೃಪೆ ಸಿಗುತ್ತದೆ ಸ್ಮರಣೆ ಇದ್ದಲ್ಲಿ ಮರಣದ ಭಯ ಇರುವುದಿಲ್ಲ ನಿರಂತರ ಭಗವಂತನ ಸ್ಮರಣೆ ಮಾಡಲು ಚಾತುರ್ಮಾಸ್ಯ ಅತ್ಯುತ್ತಮ.

ಯಾರು ಬೇಕಾದರೂ ಚಾತುರ್ಮಸ್ಯ ವ್ರತ ಮಾಡಬಹುದು‌ ನೀವು ಮಾಡಿ ನಾವೀಗ ಮೈಸೂರಿನಲ್ಲಿ ಮೈಸೂರಿನಲ್ಲೇ ಇಂದಿನಿಂದ ಚಾತುರ್ಮಾಸ್ಯ ವ್ರತ ಕೊಂಡಿದ್ದೇವೆ ನೀವು ಒಂದಲ್ಲ ಒಂದು ಅಂದರೆ ಕ್ಷೀರ ವ್ರತ, ಕ್ಷಾರ ವ್ರತವನ್ನು ಈ ಮಾಸಗಳಲ್ಲಿ ಮಾಡಬಹುದು ಎಂದು ಶ್ರೀ ವಿಜಯಾನಂದ ತೀರ್ಥ ಸ್ವಾಮೀಜಿ ಸಲಹೆ ನೀಡಿದರು.

ಇದೇ ವೇಳೆ ಶತಶ್ಲೋಕಿ ರಾಮಾಯಣ ಬ್ರೈಲ್ ಲಿಪಿಯಲ್ಲಿ ತೆಲುಗು ಮತ್ತು ಕನ್ನಡ ಭಾಷೆಯ ಪುಸ್ತಕಗಳನ್ನು ಶ್ರೀಗಳು ಮತ್ತು ಶಾಸಕ ಟಿ. ಎಸ್ ಶ್ರೀವತ್ಸ ಬಿಡುಗಡೆ ಮಾಡಿದರು.

ಮುಂಜಾನೆಯಿಂದಲೇ ಗುರುಪೂರ್ಣಿಮೆ ಪ್ರಯುಕ್ತ ಶ್ರೀ ದತ್ತ ವಿಜಯಾನಂದ ತೀರ್ಥ‌ ಸಾಮೀಜಿಯವರು ಧಾರ್ಮಿಕ ‌ವಿಧಿವಿಧಾನಗಳನ್ನು ನೆರವೇರಿಸಿದರು.

ಶ್ರೀ ‌ವೆಂಕಟೇಶ್ವರ‌ ಸನ್ನಿಧಿ ಮತ್ತು ‌ಕಾರ್ಯಸಿದ್ದಿ ಹನುಮಾನ್ ಮಂದಿರಗಳಲ್ಲಿ ಪೂಜೆ ನೆರವೇರಿಸಿ ನಂತರ ಶ್ರೀ ಗುರು ದತ್ತಾತ್ರೇಯ ಸ್ವಾಮಿಯ‌ ಉತ್ಸವ ಮೂರ್ತಿಯನ್ನು ಮಂಗಳವಾದ್ಯಗಳೊಂದಿಗೆ ಮೆರವಣಿಗೆಯಲ್ಲಿ ‌ದತ್ತ ಮಂದಿರಕ್ಕೆ ಕಿರಿಯ ಶ್ರೀಗಳ ನೇತೃತ್ವದಲ್ಲಿ ‌ತರಲಾಯಿತು.

ಗೋಪೂಜೆ ನೆರವೇರಿಸಿದ ನಂತರ ಶ್ರೀ ದತ್ತ ವಿಜಯಾನಂದ ತೀರ್ಥ‌ ಸಾಮೀಜಿಯವರು ಪ್ರಾರ್ಥನಾ ಮಂದಿರದಲ್ಲಿರುವ ಎಲ್ಲಾ ದೇವರುಗಳಿಗೂ ಪೂಜೆ ಸಲ್ಲಿಸಿದರು.

ತದನಂತರ ಸಂಕಲ್ಪ ಮಾಡಿ‌ ಭಕ್ತ ರಿಂದಲೂ‌ ಸಂಕಲ್ಪ ಮಾಡಿಸಿ‌ದರು.ಗುರು ಬ್ರಹ್ಮ ಗುರುವಿಷ್ಣು ಗುರುದೇವೊ ಮಹೇಶ್ವರಃ ಮಂತ್ರವನ್ನು ಎಲ್ಲರೂ ಶ್ರದ್ಧೆ, ಭಕ್ತಿಯಿಂದ ಪಠಿಸಬೇಕೆಂದು ಶ್ರೀಗಳು ತಿಳಿಸಿದರು.

ಶ್ರೀ ದತ್ತವಿಜಯಾನಂದ ತೀರ್ಥ ಸ್ವಾಮೀಜಿಯವರ 21 ನೇ ಚಾತುರ್ಮಾಸ್ಯ‌ ವ್ರತದೀಕ್ಷಾ ಮಹೋತ್ವವವೂ ಕೂಡಾ ನೆರವೇರಿತು.

ರಾಜ್ಯ,ಹೊರ ರಾಜ್ಯಗಳಿಂದಲೂ ನೂರಾರು ಭಕ್ತರು ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮಕ್ಕೆ‌ಆಗಮಿಸಿ ಗುರು ಪೂರ್ಣಿಮಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ‌ಭಕ್ತಿ ಸಮರ್ಪಿಸಿದರು.

Continue Reading

Mysore

ಜಾತಿ ಮತಗಳನ್ನ ಮೀರಿದಂತ ಸತ್ವಪೂರ್ಣ ಕವಿ ಅಕ್ಬರ್‌ ಅಲಿ: ಡಾ. ಸಿ.ಪಿ ಕೃಷ್ಣಕುಮಾರ್

Published

on

ಮೈಸೂರು: ಅಕಬರ್ ಅಲಿಯವರ ಸಾಹಿತ್ಯಗಳು‌ ಅಂದಿನ ಸಮಾಜದಲ್ಲಿನ ಜಾತಿ ಧರ್ಮ ವ್ಯವಸ್ತೆಗೆ ವಿರುದ್ದವಾಗಿ. ಎಲ್ಲರಿಗು ಸಮಾನತೆಯನ್ನು ನೀಡುವ ಕಲ್ಪನೆ ಹೊಂದಿದ್ದ, ಜಾತಿ ಮತಗಳನ್ನ ಮೀರಿದಂತ ಸತ್ವಪೂರ್ಣ ಕವಿ ಎಂದು ಎಂದು ಹಿರಿಯ ಸಾಹಿತಿ ಡಾ. ಸಿ.ಪಿ ಕೃಷ್ಣಕುಮಾರ್ ಹೇಳಿದರು.

ವಿಜಯನಗರದಲ್ಲಿರುವ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಸಭಾಂಗಣದಲ್ಲಿ ಆಯೋಜಿಸಿದ್ದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮಹಿಳಾ ಘಟಕ ಹಾಗೂ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತು ಸಹಯೋಗದಲ್ಲಿ ಚುಟುಕು ರತ್ನ ಡಾ.ಎಂ ಅಕಬರ್ ಅಲಿ ಅವರ ಶತಮಾನೋತ್ಸವ ದಿನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಅಕಬರ್ ಅಲಿಯವರು ಸಾಹಿತ್ಯ ಎಲ್ಲರಿಗೂ ಸಲ್ಲುತ್ತದೆ ಎಂದರೂ ತಪ್ಪಾಗಲಾರದು. ಆಧುನಿಕ ಕನ್ನಡ ಸಾಹಿತ್ಯದ ಆದ್ಯರು. ಮನನೀಯ ಕವಿ ಅಕಬರ್ ಅಲಿ ಎಂದು ಶ್ಲಾಘಿಸಿದರು.

ಸ್ತ್ರೀಯರಿಗೆ ಕಾನೂನಿನ ಅನುಕೂಲಗಳಿದ್ದರು ಅವರನ್ನು, ಅಗೌರವವಾಗಿ ಕಾಣಲಾಗುತ್ತದೆ. ಅಂತಹದರಲ್ಲಿ ಅಕಬರ್ ಅವರಿಗೆ ಸ್ತ್ರೀಯರ ಮೇಲೆ ಆದರ, ಗೌರವ ಇಟ್ಟುಕೊಂಡಿದ್ದ ಸ್ತ್ರೀ ಸಂವೇದಿಗಳು ಎಂದು ತಿಳಿಸಿದರು.

ನನ್ನ ಸಹದ್ಯೋಗಿಗಳು ಹಾಗೂ ಅವರ ಸರಳತೆ, ಸಜ್ಜನಿಕೆಯನ್ನು ನಾನು ಕಂಡುಂಡವನು. ಒಂದು ಮಾತಿನಲ್ಲಿ ಹೇಳುವುದಾದರೆ ಅವರು ಸಮತೋಲನ, ಸಂಪನ್ನನಾದಂತಹ ಸಮನ್ವಯ ಸಾಹಿತಿ ಎಂಬುದನ್ನ ಒಪ್ಪಬೇಕು. ಚುಟುಕು ಸಾಹಿತ್ಯದ ಎರಡು ಕಣ್ಣುಗಳು ದಿನಕರ ದೇಸಾಯಿ ಹಾಗೂ ಅಕಬರ್ ಅಲಿಯವರು. ಇವರ ಸಾಹಿತ್ಯದಲ್ಲಿ ಮತ ಧರ್ಮಗಳು ಗೌಣ. ಅವರಲ್ಲಿ ಮುಖ್ಯವಾದದ್ದು ಕವಿಧಾಮ, ಕವಿ ಮನೋಧರ್ಮ ಎಂದು ಹೆಮ್ಮೆಪಟ್ಟರು.

Continue Reading

Mysore

ಯೋಗ ವೈದ್ಯರತ್ನ ಪ್ರಶಸ್ತಿ ಪ್ರದಾನ

Published

on

ಮೈಸೂರು: ಯೋಗ ಒಕ್ಕೂಟವು ರಾಮಕೃಷ್ಣನಗರದ ಪರಮಹಂಸ ಯೋಗ ಮಹಾವಿದ್ಯಾಲಯದಲ್ಲಿ ಭಾನುವಾರ ಡಾ.ಎ.ಎಸ್. ಚಂದ್ರಶೇಖರ್‌ ಹಾಗೂ ಡಾ.ಜಯಶ್ರೀ ದಂಪತಿಗೆ ಯೋಗ ವೈದ್ಯರತ್ನ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಚಂದ್ರಶೇಖರ್‌ ಅವರಿಗೆ 70ನೇ ಹಾಗೂ ಜಯಶ್ರೀ ಅವರಿಗೆ 60ನೇ ಜನ್ಮದಿನವಾಗಿದ್ದು, ಈ ದಂಪತಿಯೂ ಆಯುರ್ವೇದ ವೈದ್ಯರಾಗಿದ್ದುಕೊಂಡು ಕಳೆದ ಮೂರ್ನಾಲ್ಕು ದಶಕಗಳಿಂದ ಸಮಾಜಮುಖಿ ಮಾಡುತ್ತಿರುವ ಸೇವೆ ಹಾಗೂ ಯೋಗ ಕ್ಷೇತ್ರಕ್ಕೆ ನೀಡಿರುವ ಸೇವೆಯನ್ನು ಗುರುತಿಸಿ ಈ ಪ್ರಶಸ್ತಿ ನೀಡಲಾಯಿತು.

ಅರಮನೆ ಮಂಡಳಿ ಉಪ ನಿರ್ದೇಶಕ ಟಿ.ಎಸ್‌. ಸುಬ್ರಹ್ಮಣ್ಯ ಅಧ್ಯಕ್ಷತೆ ವಹಿಸಿದ್ದರು. ಸರ್ಕಾರಿ ಆಯುರ್ವೇದ ಸಂಶೋಧನಾ ಕೇಂದ್ರದ ಸಹಾಯಕ ನಿರ್ದೇಶಕ ಡಾ.ವಿ. ಲಕ್ಷ್ಮೀನಾರಾಯಣ ಶೆಣೈ, ಜೆಎಸ್ಎಸ್‌ ಆಯುರ್ವೇದ ಆಸ್ಪತ್ರೆಯ ನಿವೃತ್ತ ಪ್ರಾಧ್ಯಾಪಕ ಡಾ. ಸದಾನಂದ್‌, ಹಿರಿಯ ಪತ್ರಕರ್ತ ಅಂಶಿ ಪ್ರಸನ್ನಕುಮಾರ್‌, ಸುಯೋಗ ಆಸ್ಪತ್ರೆಯ ಅಧ್ಯಕ್ಷ ಡಾ.ಎಸ್.ಪಿ. ಯೋಗಣ್ಣ, ಎಂಐಟಿ ಅಧ್ಯಕ್ಷ ಡಾ.ಎಸ್. ಮುರಳಿ, ಹಿಮಾಲಯ ಪ್ರತಿಷ್ಠಾನ ಅಧ್ಯಕ್ಷ ಎನ್. ಅನಂತ ಮುಖ್ಯ ಅತಿಥಿಯಾಗಿದ್ದರು.

ಸುಮನಾ ಹಾಗೂ ಆಶಾದೇವಿ ಪ್ರಾರ್ಥಿಸಿದರು. ಮೈಸೂರು ಯೋಗ ಒಕ್ಕೂಟದ ಕಾರ್ಯಾಧ್ಯಕ್ಷ ಶಿವಪ್ರಕಾಶ್‌ ಕಾರ್ಯಕ್ರಮ ನಿರೂಪಿಸಿದರು. ಗೌರವಾಧ್ಯಕ್ಷ ಟಿ. ಜಲೇಂದ್ರಕುಮಾರ್‌ ಸ್ವಾಗತಿಸಿ, ಪ್ರಾಸ್ತಾವಿಕ ಭಾಷಣ ಮಾಡಿದರು. ಪ್ರಶಸ್ತಿ ಪುರಸ್ಕೃತರನ್ನು ಪ್ರಧಾನ ಕಾರ್ಯದರ್ಶಿ ಯೋಗಕುಮಾರ್‌ ಹಾಗೂ ಆಶಾದೇವಿ ಪರಿಚಯಿಸಿದರು. ಅಧ್ಯಕ್ಷ ಕೆ.ಜಿ. ದೇವರಾಜು, ಕಾರ್ಯಾಧ್ಯಕ್ಷ ಬಿ.ಪಿ. ಮೂರ್ತಿ, ಖಜಾಂಚಿ ನರಸಿಂಹ, ಜಿಎಸ್ಎಸ್‌ ಸಂಸ್ಥಾಪಕ ಶ್ರೀಹರಿ ದ್ವಾರಕನಾಥ್‌, ಬಿ. ಶಾಂತಾರಾಂ, ಶಶಿಕುಮಾರ್‌ ಸೇರಿದಂತೆ ಮೈಸೂರು ಯೋಗ ಒಕ್ಕೂಟದ ಎಲ್ಲಾ ಪದಾಧಿಕಾರಿಗಳು, ನಗರದ ವಿವಿಧ ಯೋಗ ಒಕ್ಕೂಟದ ಪದಾಧಿರಾಗಿಗಳು, ವಿಧಾನ ಪರಿಷತ್‌ ಮಾಜಿ ಸದಸ್ಯ ತೋಂಟದಾರ್ಯ ಮತ್ತಿತರರು ಪಾಲ್ಗೊಂಡಿದ್ದರು

Continue Reading

Mysore

ಕ್ಷೇತ್ರಗಳ ಪುನರ್‌ ವಿಂಗಡಣೆ ವಿಚಾರ: ಕೇಂದ್ರದ ವಿರುದ್ಧ ಮನು ಸಿಂಗ್ವಿ ಕಿಡಿ

Published

on

ಮೈಸೂರು :
ಎಐಸಿಸಿ ರಾಷ್ಟ್ರೀಯ ವಕ್ತಾರ, ರಾಜ್ಯಸಭಾ ಸದಸ್ಯ ಹಾಗು ಹಿರಿಯ ನ್ಯಾಯವಾದಿ ಅಭಿಷೇಕ್ ಮನು ಸಿಂಗ್ವಿ ಮೈಸೂರಿನಲ್ಲಿ ಸುದ್ದಿಗೋಷ್ಠಿ.
ಮೈಸೂರಿನ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿ.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಬಿ ಜೆ ವಿಜಯ್ ಕುಮಾರ್, ನಗರಾಧ್ಯಕ್ಷ ಆರ್ ಮೂರ್ತಿ ಸೇರಿದಂತೆ ಹಲವರು ಉಪಸ್ಥಿತಿ.

ಕೇಂದ್ರ ಸರ್ಕಾರ ಲೋಕಸಭಾ ಕ್ಷೇತ್ರಗಳ ಪುನರ್ ವಿಂಗಡಣೆಗೆ ಮುಂದಾಗುವ ಮೂಲಕ ಒಕ್ಕೂಟ ವ್ಯವಸ್ಥೆಗೆ ಧಕ್ಕೆ ಉಂಟು ಮಾಡುತ್ತಿದೆ.*
ಎಐಸಿಸಿ ವಕ್ತಾರ ಅಭಿಷೇಕ್ ಮನು ಸಿಂಗ್ವಿ ಮೈಸೂರಿನಲ್ಲಿ ಹೇಳಿಕೆ.
ಕೇಂದ್ರ ಗೃಹಸಚಿವ ಅಮಿತ್ ಶಾ ಕ್ಷೇತ್ರ ಪುನರ್ ವಿಂಗಡಣೆ ಬಗ್ಗೆ ಅರ್ಧ ಸತ್ಯವನ್ನಷ್ಟೇ ಹೇಳುತ್ತಿದ್ದಾರೆ.
ಲೋಕಸಭಾ ಕ್ಷೇತ್ರಗಳ ಪುನರ್ ವಿಂಗಡಣೆಯಿಂದ ದಕ್ಷಿಣದ ರಾಜ್ಯಗಳಲ್ಲಿನ ಕ್ಷೇತ್ರಗಳು ಕಡಿಮೆಯಾಗುವುದಿಲ್ಲ ಎನ್ನುತ್ತಾರೆ.
ಆದರೆ ಉತ್ತರದ ರಾಜ್ಯಗಳಲ್ಲಿ ಕ್ಷೇತ್ರಗಳು ಹೆಚ್ಚಾಗುವ ಬಗ್ಗೆ ಮೌನವಾಗಿದ್ದಾರೆ.
ಎಸ್ ಆರ್ ಬೊಮ್ಮಾಯಿ ಕೇಸ್ ನಲ್ಲಿ ಸುಪ್ರೀಂ ಕೋರ್ಟ್ ನೀಡಿದ ಒಕ್ಕೂಟ ವ್ಯವಸ್ಥೆಯ ತೀರ್ಪಿಗೆ ವ್ಯತಿರಿಕ್ತವಾಗಿ ಕ್ಷೇತ್ರ ಪುನರ್ ವಿಂಗಡಣೆಯಾಗುತ್ತಿದೆ ಎಂದು ಪ್ರತಿಪಾದಿಸಿದ ಅಭಿಷೇಕ್ ಮನು ಸಿಂಗ್ವಿ.

ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಲೋಕಾಯುಕ್ತ ತನಿಖಾ ವರದಿಯಲ್ಲಿ ಕ್ಲೀನ್ ಚಿಟ್ ನೀಡಿದ ವಿಚಾರ.
ಬಿಜೆಪಿಯಿಂದ ಸಿಎಂ ಸಿದ್ದರಾಮಯ್ಯ ರಾಜಕೀಯ ಜೀವನದ ಮೇಲೆ ಕಪ್ಪುಚುಕ್ಕೆ ತರುವ ಪ್ರಯತ್ನ ನಡೆಯಿತು.
ಸಿದ್ದರಾಮಯ್ಯ ತಪ್ಪು ಇಲ್ಲದಿದ್ದರೂ ವಿವಾದಕ್ಕೆ ಎಳೆದರು.
ಬಿಜೆಪಿಯ ಈ ಪ್ರಯತ್ನಗಳು ವಿಫಲವಾದವು.
ಇದೀಗ ಲೋಕಾಯುಕ್ತವೂ ಕ್ಲೀನ್ ಚಿಟ್ ಕೊಟ್ಟಿದೆ ಎಂದ ಅಭಿಷೇಕ್ ಮನು ಸಿಂಗ್ವಿ.

ಇವಿಎಂ ಬಗ್ಗೆ ನಮಗೆ ತಕರಾರು ಇಲ್ಲ.
ಬದಲಿಗೆ ಕೆಲವು ಅನುಮಾನಗಳು ಇವೆ.
ಚುನಾವಣೆ ಪ್ರಕ್ರಿಯೆಗಳ ಬಗ್ಗೆಯೇ ನಮಗೆ ಅನುಮಾನವಿದೆ.
ಈ ಬಗ್ಗೆ ನಾವು ಉತ್ತರ ಬಯಸಿದ್ದೇವೆ.
ಮಹಾರಾಷ್ಟ್ರ ಸೇರಿದಂತೆ ಕೆಲವು ರಾಜ್ಯಗಳ ಚುನಾವಣೆಯಲ್ಲಿ ಮತದಾರರ ಸಂಖ್ಯೆ ಹೆಚ್ಚಾಗಿದೆ.
ಇದ್ದಕ್ಕಿದ್ದಂತೆ ಹೆಚ್ಚಾಗಿರುವುದರ ಬಗ್ಗೆ ನಮಗೆ ಅನುಮಾನವಿದೆ.
ಚುನಾವಣೆಗೆ ಬಿಜೆಪಿ ಬಳಿ ಹಣವಿದೆ.
ಸಿಬಿಐ, ಇಡಿ ಯನ್ನು ಬಿಜೆಪಿ ದುರ್ಬಳಕೆ ಮಾಡಿಕೊಳ್ಳುತ್ತಿದೆ.
ಕಾಂಗ್ರೆಸ್ ರಾಷ್ಟೀಯ ವಕ್ತಾರ ಅಭಿಷೇಕ್ ಮನು ಸಿಂಗ್ವಿ ಮೈಸೂರಿನಲ್ಲಿ ಹೇಳಿಕೆ.

Continue Reading

Trending

error: Content is protected !!