Uncategorized
ಸಂಭ್ರಮದಿಂದ ಜರುಗಿದ ಕಣತೂರು ಗ್ರಾಮದ ಆದಿ ಶಕ್ತಿ ಶ್ರೀ ದೇವಿರಮ್ಮ ಮತ್ತು ಶ್ರೀ ವೀರಭದ್ರೇಶ್ವರ ಸ್ವಾಮಿ ಜಾತ್ರಾ ಮಹೋತ್ಸವ
ವರದಿ ಸತೀಶ್ ಚಿಕ್ಕಕಣಗಾಲು
ಆಲೂರು: ಕಣತೂರು ಗ್ರಾಮದೇವತೆ ಶ್ರೀ ದೇವಿರಮ್ಮ ಮತ್ತು ಶ್ರೀ ವೀರಭದ್ರೇಶ್ವರ ಸ್ವಾಮಿಯವರ ಜಾತ್ರೆ, ಕೊಂಡೋತ್ಸವ, ಸಿಡಿ ಮಹೋತ್ಸವ ಶನಿವಾರ ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನಡೆಯಿತು.
ತಾಲೂಕಿನ ಪಾಳ್ಯ ಹೋಬಳಿ ಕಣತೂರು ಗ್ರಾಮದಲ್ಲಿರುವ ಶ್ರೀ ದೇವಿರಮ್ಮ ಮತ್ತು ಶ್ರೀ ವೀರಭದ್ರೇಶ್ವರ ಸ್ವಾಮಿಯವರ ಜಾತ್ರಾ ಮಹೋತ್ಸವದ ಅಂಗವಾಗಿ ಪ್ರತಿ ವರ್ಷದಂತೆ ಈ ಬಾರಿಯು ಶುಕ್ರವಾರ ರಾತ್ರಿ ದೇವಿರಮ್ಮನ ಸಹೋದರಿಯರಾದ ವಲಹಳ್ಳಿ ಮತ್ತು ಕಾಮತಿ ಗ್ರಾಮದ ನೆಲೆಸಿರುವ ಶ್ರೀ ಮುದಿಯಮ್ಮ, ಶ್ರೀ ಕೆಂಪಮ್ಮ ಶ್ರೀ ಬೆಳ್ಳಿ ಮುಖದಮ್ಮ ದೇವರುಗಳು ಕಣತೂರು ಗ್ರಾಮದಲ್ಲಿ ನೆಲೆಸಿರುವ ಶ್ರೀ ದೇವಿರಮ್ಮನ ದೇವಿಯ ದೇವಸ್ಥಾನಕ್ಕೆ ಆಗಮಿಸಿದ ದೇವಿಯನ್ನು ಆಂಜನೇಯ ದೇವಸ್ಥಾನದ ಪಕ್ಕದಲ್ಲಿರುವ ಗಂಗೆ ಕಟ್ಟೆಯ ಬಳಿ ಕರೆದುಕೊಂಡು ಹೋಗುತ್ತವೆ. ನಂತರ ದೇವಿರಮ್ಮ ಹಾಗೂ ಚೋಮ ದೇವರಿಗೆ ಗಂಗಾಭಿಷೇಕ ಮಾಡಿ ಪೂಜೆ ಸಲ್ಲಿಸಿದ ನಂತರ ಜಾತ್ರಾಮಹೋತ್ಸವಕ್ಕೆ ಚಾಲನೆ ನೀಡಲಾಯಿತು.
ಈ ಸಂದರ್ಭದಲ್ಲಿ ಗಾಮದ ಮುತ್ತೈದೆಯರು ದೇವಿಯರಿಗೆ ಮಡಿಲಕ್ಕಿ ಕೊಡುತ್ತಾರೆ ನಂತರ ದೇವೀರಮ್ಮನವರ ಮತ್ತು ವೀರಭದ್ರಸ್ವಾಮಿಯ ಉತ್ಸವ ಮಾಡಲಾಯಿತು. ರಾತ್ರಿಯಿಡೀ ಚೋಮ ದೇವರು ಕುಣಿತವನ್ನು ಭಕ್ತರು ಕಣ್ಣುಂಬಿಕೊಂಡು ಕರ್ಪೂರ ಹಚ್ಚಿ ಪಟಾಕಿ ಸಿಡಿಸಿ ಸಂಭ್ರಮಿಸಿದರು.
ಶನಿವಾರ ಬೆಳಗಿನ ಸೂರ್ಯೋದಯದ ಸಮಯದಲ್ಲಿ ದೇವಾಸ್ಥಾನದ ಆವರಣದಲ್ಲಿ ಎಲ್ಲಾ ದೇವರ ಮೂರ್ತಿಗಳಿಗೆ ವಿಶೇಷ ಪೂಜೆ ಮಾಡಿ ಪೂಜೆ ನಂತರ ದೇವಾಲಯದ ಮುಂಭಾಗ 7.15 ಕ್ಕೆ ಕೊಂಡೋತ್ಸವಕ್ಕೆ ಚಾಲನೆ ನೀಡಲಾಯಿತು. ಗ್ರಾಮದ ಯುವಕರು ದೇವರ ಅಡ್ಡೆಗಳನ್ನು ಹೊತ್ತು ಕೆಂಡ ತುಳಿದು ಭಕ್ತಿಪರವಶರಾದರು, ಸಿಡಿ ಕಾರ್ಯವನ್ನು ಪ್ರತಿ ವರ್ಷ ನಡೆಸಿಕೊಂಡು ಬಂದಿರುವ ಕಣತೂರು ಗ್ರಾಮದ ಪಾಲಾಕ್ಷ ರವರು ಕಳೆದ ಮೂರು ದಿನಗಳಿಂದ ಉಪವಾಸ ವ್ರತವನ್ನು ಕೈಗೊಂಡು
ಸಂಜೆ 4.30ಕ್ಕೆ ಸಿಡಿ ಮಹೋತ್ಸವವನ್ನು ಯಶಸ್ವಿಯಾಗಿ ನೆರವೇರಿಸಿದರು.
ನಾಕಲಗೂಡು, ಕುಂಬಾರಹಳ್ಳಿ, ಗೇಕರವಳ್ಳಿ, ತೊರಳ್ಳಿ, ಭಾವಸುವಳ್ಳಿ, ಸಿದ್ದಾಪುರ, ಕೋಡಿಗೆಹಳ್ಳಿ, ಹಳೆ ಆಲೂರು, ಮರಸು, ಗುಡ್ಡೇನಹಳ್ಳಿ, ತಾಳೂರು, ಚಿಕ್ಕಕಣಗಾಲು ಕಾರ್ಜುವಳ್ಳಿ, ಕಾಮತಿ, ವಲ್ಲಳ್ಳಿ ಸೇರಿದಂತೆ ಮುಂತಾದ ಗ್ರಾಮಗಳಿಂದ ಆಗಮಿಸಿದ್ದ ಭಕ್ತಾದಿಗಳು ಅಲಂಕೃತಗೊಂಡಿದ್ದ ದೇವೀರಮ್ಮ ಹಾಗೂ ಶ್ರೀ ವೀರಭದ್ರೇಶ್ವರ ಸ್ವಾಮಿಯವರಿಗೆ ಪೂಜೆ ಸಲ್ಲಿಸಿದ ಮಹಾಮಂಗಳಾರತಿಯಲ್ಲಿ ಪಾಲ್ಗೊಂಡಿದ್ದರು.
ಯಾವುದೇ ಅಹಿತಕರ ಘಟನೆ ನಡೆಯದಂತೆ ಆಲೂರು ಪೊಲೀಸ್ ಠಾಣೆಯ ವತಿಯಿಂದ ಬಿಗಿ ಬಂದೋಬಸ್ತ್ ಕಲ್ಪಿಸಲಾಗಿತ್ತು. ದೇವಾಸ್ಥಾನದ ಆಡಳಿತ ಮಂಡಳಿ ವತಿಯಿಂದ ನೆರೆದಿದ್ದ ಸಾವಿರಾರು ಭಕ್ತರಿಗೆ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು.
Uncategorized
ದಿ. ರಾಕೇಶ್ ಸಿದ್ದರಾಮಯ್ಯ ಸ್ಮರಣಾರ್ಥ ಕಾರ್ ರೇಸ್ : ಕುಚುಕು ಗೆಳೆಯ ನನ್ನ ನೆನೆದ ಸಂಸದ ಸುನಿಲ್ ಬೋಸ್
ವರದಿ : ಮಹದೇವಸ್ವಾಮಿ ಪಟೇಲ್
ಆಬ್ಲೆಸ್ ಮೋಟರ್ಸ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ದಿವಂಗ ರಾಕೇಶ್ ಸಿದ್ದರಾಮಯ್ಯನವರ ಸ್ಮರಣಾರ್ಥ ಡರ್ಟಿ ಪ್ರಿಕ್ಸ್ ರೇಸ್ 2026 ನೇ ಸಾಲಿನ ಉದ್ಘಾಟನಾ ಸಮಾರಂಭವನ್ನು ಭಾನುವಾರ ಆಯೋಜಿಸಲಾಗಿತ್ತು.
ನಂಜನಗೂಡು ತಾಲೂಕು ಚಿಕ್ಕಯನ ಚಿತ್ರ ಹೋಬಳಿ ಕೈಗಾರಿಕಾ ಪ್ರದೇಶದಲ್ಲಿ ಆಯೋಜಿಸಿದ್ದ ಕಾರ್ ರೇಸ್ ಗೆ ಚಾಮರಾಜನಗರ ಸಂಸದ ಸುನಿಲ್ ಬೋಸ್ ಹಸಿರು ನಿಶಾನೆ ತೋರಿ ಚಾಲನೆ ನೀಡಿದರು.
ಈ ವೇಳೆ ರೇಸ್ಗೆ ಚಾಲನೆ ನೀಡಿ ಸಂಸದ ಸುನಿಲ್ ಬೋಸ್ ಮಾತನಾಡಿ, ದಿವಂಗತ ರಾಕೇಶ್ ಸಿದ್ಧರಾಮಯ್ಯನವರ ಸ್ಮರಣಾರ್ಥ ಡರ್ಟಿ ಟ್ರಿಕ್ಸ್ ರೇಸ್ ಅನ್ನು ಆಯೋಜನೆ ಮಾಡಲಾಗಿದೆ. ನಾನು ಮತ್ತು ರಾಕೇಶ್ ಸಿದ್ದರಾಮಯ್ಯನವರು ಸಹೋದರರಂತೆ ಇದ್ದವು. ಒಂದೇ ಕುಟುಂಬದ ಅಣ್ಣ ತಮ್ಮನಂತೆ ಜನರಿಗಾಗಿ ಕೆಲಸ ಮಾಡುತ್ತಿದ್ದೋ. ಅವರ ನೆನಪಿಗಾಗಿ ಇಂತಹ ಕಾರ್ಯಕ್ರಮಗಳು ನಡೆಯಬೇಕು, ಅವರಿಗೆ ಕಾರುಗಳ ಮೇಲೆ ಅಪಾರ ಆಸಕ್ತಿ ಇತ್ತು. ಒಬ್ಬ ಒಳ್ಳೆಯ ಸ್ನೇಹಿತನಾಗಿ, ಸಹೋದರನಾಗಿ ಅವರೊಂದಿಗೆ ಕಳೆದ ದಿನಗಳು ಈ ಕಾರ್ಯಕ್ರಮದ ಮೂಲಕ ನೆನಪಾಗುತ್ತಿದೆ. ದಿವಂಗತ ರಾಕೇಶ್ ಅವರ ಸ್ಮರಣಾರ್ಥ ಆಯೋಜಿಸಿರುವ ಕಾರ್ ರೇಸ್ ಮುಂದಿನ ದಿನಗಳಲ್ಲು ಮುಂದುವರೆಯಲಿ ಎಂದು ಕುಚುಕು ಗೆಳೆಯನೊಂದಿಗೆ ಕಳೆದ ಅಂದಿನ ದಿನಗಳನ್ನು ಮೆಲುಕು ಹಾಕುದರು.
ಕಾರು ಪ್ರಿಯರಿಗೆ ಈ ರೇಸ್ ಭರಪೂರ ಮನರಂಜನೆ ನೀಡಲಿದೆ. ಕಾರ್ ರೇಸ್ ಅಪಾಯಕಾರಿ ಕ್ರೀಡೆಯಾಗಿದ್ದು, ಎಚ್ಚರದಿಂದ ವಾಹನ ಚಲಾಯಿಸಿ, ಸ್ಪರ್ಧೆಯಲ್ಲಿ ಗೆಲ್ಲುವಂತೆ ಭಾಗವಹಿಸಿದ್ದ ಕ್ರೀಡಾಪಟುಗಳಿಗೆ ಸಲಹೆ ನೀಡಿದರು.
ವಿವಿಧ ಜಿಲ್ಲೆಗಳಿಂದ ನಾನಾ ಬಗೆಯ ಕಾರುಗಳು ರೇಸ್ ನಲ್ಲಿ ಭಾಗವಹಿಸಿದ್ದವು. ಕಿವಿ ಗುಂಯ್ ಗುಟ್ಟುವ ಭಾರಿ ಶಬ್ದದೊಂದಿಗೆ ಗೆಲುವಿಗಾಗಿ ಶರವೇಗದಲ್ಲಿ ಸವಾರರು ತಮ್ಮ ಕಾರುಗಳನ್ನ ಚಲಾಯಿಸುತ್ತಿದ್ದ ದೃಶ್ಯ ನೋಡುಗರನ್ನು ಮೈ ಜುಮ್ ಅನ್ನುವಂತೆ ಮಾಡುತ್ತದೆ ಎಂದರು.
ಈ ಕಾರ್ಯಕ್ರಮವನ್ನು ಅರ್ಕೇಶ್ವರ ಮತ್ತು ಆ ಸ್ನೇಹಿತರ ತಂಡ ಆಯೋಜನೆ ಮಾಡಲಾಯಿತು.
ಸಮಾರಂಭದಲ್ಲಿ ಶ್ರೀಕಂಠೇಶ್ವರ ಸ್ವಾಮಿಯ ಧರ್ಮದರ್ಶಿ ಮಾಜಿ ಅಧ್ಯಕ್ಷ ಇಂಧನ ಬಾಬು, ರೈತ ಸಂಘದ ರಾಜ್ಯ ಕಾರ್ಯಧ್ಯಕ್ಷ ವಿದ್ಯಾಸಾಗರ್, ರಾಜು, ಅರ್ಕೇಶ್, ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಘು, ಸೇರಿದಂತೆ ಹಲವಾರು ಮುಖಂಡರು ಉಪಸ್ಥಿತರಿದ್ದರು.
Uncategorized
ಫೆ.11ರಂದು ನಾಪೋಕ್ಲುವಿನಲ್ಲಿ ಮಸ್ಜಿದು ತೌಹೀದ್ ನೂತನ ಮಸೀದಿ ಉದ್ಘಾಟನೆ ಹಾಗೂ ದಅವಾ ಸಮ್ಮೇಳನ
ವರದಿ :ಝಕರಿಯ ನಾಪೋಕ್ಲು
ನಾಪೋಕ್ಲು : ಫೆ.11ರಂದು ನಾಪೋಕ್ಲುವಿನ ಬೇತು ರಸ್ತೆಯಲ್ಲಿ ಅಲ್ ನೂರ್ ವೆಲ್ಫೇರ್ ಟ್ರಸ್ಟ್ ವತಿಯಿಂದ ನಿರ್ಮಿಸಲಾದ ಮಸ್ಜಿದು ತೌಹೀದ್ ನೂತನ ಮಸೀದಿ ಉದ್ಘಾಟನಾ ಸಮಾರಂಭ ಹಾಗೂ ದಅವಾ ಸಮ್ಮೇಳನ ನಡೆಯಲಿದೆ.
ಫೆ.11ರಂದು ಸಂಜೆ 4ಗಂಟೆಗೆ ನೂತನ ಮಸೀದಿಯ ಉದ್ಘಾಟನೆ ನಡೆಯಲಿದ್ದು ವಿಸ್ಡಮ್ ಇಸ್ಲಾಮಿಕ್ ಆರ್ಗನೈಸೇಷನ್ ಅಧ್ಯಕ್ಷರಾದ ಪಿ.ಎನ್.ಅಬ್ದುಲ್ ಅತೀಫ್ ಮದನಿ ಅವರು ನೂತನ ಮಸೀದಿಯನ್ನು ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕರಾದ ಎ.ಎಸ್. ಪೊನ್ನಣ, ಕರ್ನಾಟಕ ಸಲಫಿ

ಅಸೋಸಿಯೇಷನ್ ಅಧ್ಯಕ್ಷ ಹಫೀಸ್ ಸ್ವಲಾಹಿ,ಖಲೀಲ್ ತಲಪ್ಪಾಡಿ,ಶಿಹಾಬ್ ತಲಪ್ಪಾಡಿ,ಡಾ.ಸಣ್ಣುವಂಡ ಕಾವೇರಪ್ಪ ನಾಪೋಕ್ಲು, ನಾಪೋಕ್ಲು ಪೊಲೀಸ್ ಉಪನಿರೀಕ್ಷಕರಾದ ಪಿ.ಜಿ. ರಾಘವೇಂದ್ರ, ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷರಾದ ಪಿ.ಎಂ. ಖಾಸಿಂ,ನಾಪೋಕ್ಲು ಗ್ರಾಮ ಪಂಚಾಯತಿ ಸದಸ್ಯರಾದ ಕುಶು ಕುಶಾಲಪ್ಪ, ಮಹಮ್ಮದ್ ಖುರಶಿ, ಅರುಣ್ ಬೇಬ,ಇಸ್ಮಾಯಿಲ್ ಭಾಗವಹಿಸಲಿದ್ದಾರೆ.
ಮಸೀದಿ ಉದ್ಘಾಟನಾ ಸಮಾರಂಭದ ಪ್ರಯುಕ್ತ ಸಂಜೆ 7 ಗಂಟೆಯಿಂದ ಮೌಲವಿ ಶಿಹಾಬ್ ಎಡಕ್ಕರ ಹಾಗೂ ಮುನೀರ್ ಶರಫಿ ಅವರ ನೇತೃತ್ವದಲ್ಲಿ ದಅವಾ ಸಮ್ಮೇಳನ ನಡೆಯಲಿದೆ ಎಂದು ಮಸ್ಜಿದು ತೌಹೀದ್ ನಾಪೋಕ್ಲು ಇದರ ಆಡಳಿತ ಮಂಡಳಿ ಪದಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Chikmagalur
ವಿವಾಹಿತ ಹಿಂದೂ ಮಹಿಳೆಯ ಜೊತೆ : ಸಿಕ್ಕಿ ಬಿದ್ದ ಕಾಂಗ್ರೆಸ್ ಮುಖಂಡ
ಚಿಕ್ಕಮಗಳೂರು : ವಿವಾಹಿತ ಹಿಂದೂ ಮಹಿಳೆಯ ಜೊತೆ ಕಾಂಗ್ರೆಸ್ ಮುಖಂಡ ಸಿಕ್ಕಿ ಬಿದ್ದಿರುವ ಘಟನೆ ಚಿಕ್ಕಮಗಳೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ರಾತ್ರಿ ವೇಳೆ ಮಹಿಳೆಯಲ್ಲಿ ಕಾಂಗ್ರೆಸ್ ಮುಖಂಡ ರಾಹಿಲ್ ಶರೀಫ್ ಹಿಂದೂ ಮಹಿಳೆ ಇರುವುದನ್ನು ಕಂಡು ಯುವಕರು ಕೋಪಗೊಂಡಿದ್ದಾರೆ.
ಘಟನೆ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಹಿಂದೂ ಮಹಿಳೆಯ ಜೊತೆ ಕಾಂಗ್ರೆಸ್ ಮುಖಂಡ ಮನೆಯಲ್ಲಿ ಇದ್ದ ವೇಳೆಯಲ್ಲಿ ಮನೆ ಮೇಲೆ ದಾಳಿ ನಡೆಸಿದ ಅಕ್ಕಪಕ್ಕದ ಹುಡುಗರು ಹಿಂದೂ ಮಹಿಳೆಯ ಮನೆಯಲ್ಲಿ ನಿನಗೇನು ಕೆಲಸ ಅಂತ ಹೇಳಿ ವ್ಯಕ್ತಿ ಮೇಲೆ ಹಲ್ಲೆ ಮಾಡಿದ್ದಾರೆ. ಈ ಘಟನೆಯು ಚಿಕ್ಕಮಗಳೂರಿನ ಚಿಕ್ಕಮಗಳೂರು ನಗರದ ಗಾಂಧಿನಗರದಲ್ಲಿ ನಡೆದಿದೆ.

ಇನ್ನೂ ಘಟನೆ ಬಗ್ಗೆ ವಿಡಿಯೋ ಮಾಡಿ ಮಾಹಿತಿ ಹಂಚಿಕೊಂಡಿರುವ ನೊಂದ ಮಹಿಳೆ ರಾಹಿಲ್ ನನ್ನ ಸ್ನೇಹಿತ, ನನಗೆ ಆರೋಗ್ಯ ಸರಿಯಿಲ್ಲದ ಕಾರಣ ಔಷಧಿ ಕೊಡಲು ಮನೆಗೆ ಬಂದಿದ್ದರು. ಈ ವೇಳೆ ಅಕ್ಕ ಪಕ್ಕದ ಮನೆಯವರು ನನ್ನ ಮನೆಗೆ ಬಂದು ಬೆದರಿಕೆ ಹಾಕಿ ಹಲ್ಲೆ ನಡೆಸಿದ್ದಾರೆ. ಅಂತ ಆರೋಪಿಸಿದ್ದಾರೆ. ಸದ್ಯ ಘಟನೆ ಬಗ್ಗೆ ದೂರು ದಾಖಲಿಸಿಕೊಂಡಿರುವ ಚಿಕ್ಕಮಗಳೂರು ನಗರ ಪೊಲೀಸ್ನವರು ಮುಂದಿನ ತನಿಖೆ ಕೈಗೊಂಡಿದ್ದಾರೆ.
-
Mandya13 hours agoಕೆರೆ ಒತ್ತುವರಿ ತೆರವುಗೊಳಿಸದಿದ್ದರೆ ಶಿಸ್ತು ಕ್ರಮ: ಸಮಯ ನಿಗದಿಗೊಳಿಸಿ ಸೂಚನೆ ನೀಡಿದ ಡಿಸಿ ಡಾ.ಕುಮಾರ
-
Mandya14 hours agoಬೂದನೂರು ಗ್ರಾಮ ಪಂಚಾಯತಿಗೆ ನೇಮಕವಾಗಿರುವ ಆಡಳಿತಾಧಿಕಾರಿಗೆ ಗ್ರಾಮಸ್ಥರಿಂದ ಭವ್ಯ ಸ್ವಾಗತ
-
Hassan15 hours agoಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರ ಎಚ್ಡಿಕೆ ಅಭಿಮಾನಿಗಳಿರುವ ಕ್ಷೇತ್ರ: ನಿಖಿಲ್ ಕುಮಾರಸ್ವಾಮಿ
-
Mandya11 hours agoಫೆ.13 ರಿಂದ 19 ರವರೆಗೆ ಪ್ರಜಾಪಿತ ಬ್ರಹ್ಮ ಕುಮಾರೀಸ್ ಈಶ್ವರೀಯ ವಿಶ್ವ ವಿದ್ಯಾಲಯದ ವತಿಯಿಂದ 90ನೇ ಮಹಾಶಿವರಾತ್ರಿ ಮಹೋತ್ಸವ
-
Chamarajanagar22 hours agoಚಿರತೆ ದಾಳಿ: ಹಸು ಬಲಿ ಗ್ರಾಮಸ್ಥರಲ್ಲಿ ಆತಂಕ
-
Mysore20 hours agoಹಣ್ಣುಗಳ ಮಹತ್ವ, ಪೌಷ್ಟಿಕಾಂಶದ ಬಗ್ಗೆ ಅರಿವು ಮೂಡಿಸಿದ ರವಿ ಮಹದೇವ್
-
Mandya13 hours agoಜಿಲ್ಲೆಯ ಜನರಿಗೆ ಶುದ್ಧ ಕುಡಿಯುವ ನೀರು ಪೂರೈಸಿ : ಮನೋಜ್ ಕುಮಾರ್ ಮೀನಾ
-
Special9 hours agoಸ್ತ್ರೀ ಶಕ್ತಿ ಪ್ಯಾಕೇಜ್: ಮಹಿಳೆಯರಿಗೆ ಭದ್ರತೆಯಿಲ್ಲದೇ 10 ಲಕ್ಷದವರೆಗೆ ಸಾಲ!
