Mysore
ಶುಕ್ರವಾರ ಮಾ.22 ನಂಜನಗೂಡು ನಂಜುಂಡೇಶ್ವರ ಸ್ವಾಮಿಯ ಪಂಚ ರಥೋತ್ಸವ ಸಕಲ ಸಿದ್ಧತೆ

ದಕ್ಷಿಣ ಕಾಶಿ ಎಂದು ಹೆಸರುವಾಸಿಯಾಗಿರುವ ನಂಜನಗೂಡು ನಂಜುಂಡೇಶ್ವರ ಸ್ವಾಮಿಯ ವೈಭವಯುತ ಪಂಚ ಮಹಾರಥೋತ್ಸವ ಶುಕ್ರವಾರ ಮಾ.22 ರಂದು ಅದ್ದೂರಿಯಾಗಿ ನಡೆಯಲಿರುವ ಪಂಚ ರಥಗಳು ಸಕಲ ಸಿದ್ಧತೆ ಕೈಗೊಳ್ಳಲಾಗಿದೆ.
ನಂಜನಗೂಡು ನಂಜುಂಡೇಶ್ವರಸ್ವಾಮಿಯ ದೊಡ್ಡ ಜಾತ್ರೆ ಪ್ರಸಿದ್ಧಯಾಗಿದೆ. ಐದು ರಥಗಳು ನಡೆಯಲಿದೆ,
ಶ್ರೀ ಗೌತಮ ಮಹಾರಥ 97 ಅಡಿ ಎತ್ತರ,
250 ತೂಕ ವಿದ್ದು, ರಥಗಳು ಜಾತ್ರೆಯಲ್ಲಿ ಪ್ರಮುಖ ಆಕರ್ಷಣೆಯಾಗಿದೆ.
ಮಾರ್ಚ್ 22 ರಂದು ಉದಯಾತ್ಪೂವ೯ 6.30 ರಿಂದ 6.50 ರೊಳಗೆ ಸಲ್ಲುವ ಶುಭ ಮೀನ ಲಗ್ನದಲ್ಲಿ ಶ್ರೀ ಮನ್ಮಹಾಗೌತಮ ರಥಾರೋಹಣ
ಜರುಗಲಿದ್ದು, ಇದನ್ನು ಕಣ್ತುಂಬಿಕೊಳ್ಳಲು ಲಕ್ಷಾಂತರ ಭಕ್ತರು ಕಾಯುತ್ತಾರೆ.
ರಥದಲ್ಲಿ ನಂಜನಗೂಡು ನಂಜುಂಡೇಶ್ವರ ಸ್ವಾಮಿಯನ್ನು ವಜ್ರ ಹೂವಿನ ಅಲಂಕಾರದಿಂದ ಅಲಂಕರಿಸಲಾಗಿರುತ್ತದೆ ಬಳಿಕ ಅರ್ಚಕರು ಧಾರ್ಮಿಕ ವಿಧಿ ವಿಧಾನದಿಂದ ಪೂಜೆ ಸಲ್ಲಿಸುತ್ತಾರೆ.
ರಥೋತ್ಸವ ಚಾಲನೆಯನ್ನು ನಂಜನಗೂಡು ಕ್ಷೇತ್ರದ ಶಾಸಕ ದರ್ಶನ್ ದ್ರುವ ನಾರಾಯಣ್, ಚಾಲನೆ ನೀಡುತ್ತಾರೆ.
ರಥದ ಚಾಲನೆ ಸಂದರ್ಭದಲ್ಲಿ ಮೈಸೂರು ಜಿಲ್ಲೆ ಅಧಿಕಾರಿಗಳು, ಅಪಾರ ಜಿಲ್ಲಾಧಿಕಾರಿಗಳು, ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ, ನಂಜನಗೂಡು ತಾಹಶೀಲ್ದಾರ್, ಉಪಸ್ಥಿರಲ್ಲಿ ಇರುತ್ತಾರೆ.
Mysore
ವಾಜಮಂಗಲದಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ: ಕಿಡಿಗೇಡಿಗಳ ಬಂಧನಕ್ಕೆ ಆಗ್ರಹ

ವರದಿ: ಮಹದೇವಸ್ವಾಮಿ ಪಟೇಲ್
ಮೈಸೂರು: ತಾಲೂಕಿನ ವಾಜಮಂಗಲ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಅಪಮಾನ ಮಾಡಿದ ಕಿಡಿಗೇಡಿಗಳನ್ನು ಬಂಧಿಸಿ ಗಲ್ಲಿಗೇರಿಸಬೇಕು ಎಂದು ಆಗ್ರಹಿಸಿ ನಂಜನಗೂಡಿನಲ್ಲಿ ಏಕೀಕರಣದ ಹಾದಿಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯಿಂದ ಪ್ರತಿಭಟನೆ ನಡೆಸಲಾಯಿತು.
ನಂಜನಗೂಡು ನಗರದ ತಾಲ್ಲೂಕು ಆಡಳಿತ ಭವನದ ಮುಂಭಾಗದಲ್ಲಿ ರೈತ ಸಂಘ ಮತ್ತು ಹಸಿರು ಸೇನೆಯ ತಾಲ್ಲೂಕು ಅಧ್ಯಕ್ಷ ಸತೀಶ್ ನೇತೃತ್ವದಲ್ಲಿ ಜಮಾಯಿಸಿದ ರೈತರು, ಕಿಡಿಗೇಡಿಗಳನ್ನು ಬಂಧಿಸುವಂತೆ ಒತ್ತಾಯಿಸಿ ರಾಜ್ಯ ಸರ್ಕಾರದ ದಿಕ್ಕಾರದ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ನಂತರ ರೈತ ಸಂಘ ಮತ್ತು ಹಸಿರು ಸೇನೆಯ ತಾಲ್ಲೂಕು ಅಧ್ಯಕ್ಷ ಸತೀಶ್ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ಪ್ರತಿನಿಧಿಸುವ ವರುಣ ವಿಧಾನಸಭಾ ಕ್ಷೇತ್ರದ ಮೈಸೂರು ತಾಲ್ಲೂಕಿನ ವಾಜಮಂಗಲ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ, ಡಾ.ಬಿ.ಆರ್ ಅಂಬೇಡ್ಕರ್ ರವರ ಭಾವಚಿತ್ರವನ್ನು ಹರಿದು ಹಾಕಿ ಅಪಮಾನ ಮಾಡಲಾಗಿದೆ. ಇದರಿಂದ ನಮಗೆ ತುಂಬಾ ನೋವು ಉಂಟಾಗಿದೆ. ದೇಶಕ್ಕೆ ಸಂವಿಧಾನ ನೀಡಿದ ಡಾ.ಬಿ.ಆರ್. ಅಂಬೇಡ್ಕರ್ ಅವರಿಗೆ ಅಪಮಾನವಾದರೇ ನಾವು ಸಹಿಸುವುದಿಲ್ಲ ಇದನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ ಎಂದರು.
ಅಪಮಾನ ಮಾಡಿದ ಕಿಡಿಗೇಡಿಗಳನ್ನು ಪತ್ತೆ ಹಚ್ಚಿ ಬಂಧಿಸುವಲ್ಲಿ ಪೊಲೀಸ್ ಇಲಾಖೆ ವಿಫಲವಾಗಿದೆ. ಮುಖ್ಯಮಂತ್ರಿಗಳ ಕ್ಷೇತ್ರವಾಗಿದೆ. ಆದರೂ ಇನ್ನು ಯಾವುದೇ ಕ್ರಮವನ್ನು ತೆಗೆದುಕೊಂಡಿಲ್ಲ. ಪ್ಲೆಕ್ಸ್ ಹರಿದು ಹಾಕಿ, ಅಂಬೇಡ್ಕರ್ ಅವರ ಫ್ಲೆಕ್ಸ್ ಗಳನ್ನು ಕಿತ್ತುಹಾಕಿ, ಕತ್ತರಿಯಿಂದ ಕತ್ತರಿಸಿ ಹೇಯ ಕೃತ್ಯ ಎಸಗಿದ್ದಾರೆ. ಮುಖ್ಯಮಂತ್ರಿಗಳ ಸ್ವ ಕ್ಷೇತ್ರದಲ್ಲಿ ಇಂತಹ ಘಟನೆ ನಡೆಯಬಾರದಾಗಿತ್ತು. ಇದಕ್ಕೆ ರಾಜಕೀಯ ಮಾಡದೆ ಕಿಡಿಗೇಡಿಗಳನ್ನು ಬಂಧಿಸಿ ಗಲ್ಲಿಗೇರಿಸಬೇಕು. ಸಾಂಸ್ಕೃತಿಕ ನಗರಿಯಂತಹ ಮೈಸೂರು ಜಿಲ್ಲೆಯಲ್ಲಿ ಇಂತಹ ಘಟನೆಗಳು ಮರುಕಳಿಸಿದಂತೆ ಎಚ್ಚರಿಕೆ ವಹಿಸಬೇಕು. ಈ ಕೂಡಲೇ ಕಿಡಿಗೇಡಿಗಳನ್ನು ಬಂಧಿಸಿ ಕಠಿಣ ಶಿಕ್ಷೆಗೆ ಒಳಪಡಿಸಬೇಕು ಇಲ್ಲದಿದ್ದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ತಹಶೀಲ್ದಾರ್ ಮೂಲಕ ರಾಷ್ಟ್ರಪತಿಯವರಿಗೆ ಮನವಿ ಪತ್ರವನ್ನು ಸಲ್ಲಿಸಲಾಯಿತು. ಪ್ರತಿಭಟನೆಯಲ್ಲಿ ರೈತ ಸಂಘ ಮತ್ತು ಹಸಿರು ಸೇನೆಯ ತಾಲ್ಲೂಕು ಅಧ್ಯಕ್ಷ ಸತೀಶ್, ತಾಲ್ಲೂಕು ಉಪಾಧ್ಯಕ್ಷ ನಂಜುಂಡೇಗೌಡ, ಮಹಿಳಾ ಘಟಕದ ಅಧ್ಯಕ್ಷೆ ಶ್ವೇತಾ, ಕೃಷ್ಣಪುರ ಮೋಹನ್, ಮಹದೇವ ನಾಯಕ, ಕೃಷ್ಣ, ಮಧುಕೃಷ್ಣ, ಅಂಕಣ್ಣ, ತಿಮ್ಮನಾಯಕ, ಸುರೇಶ್ ಸೇರಿದಂತೆ ರೈತರು ಹಾಜರಿದ್ದರು.
Mysore
ವಲಯ ಕಚೇರಿ-3ರ ಕಟ್ಟಡ ಉದ್ಘಾಟನೆ ಸಿದ್ದತೆ ಪರಿಶೀಲಿಸಿದ ಜಿಟಿಡಿ

ಮೈಸೂರು: ಸಾರ್ವಜನಿಕರ ಕೆಲಸಗಳು ಸುಗಮವಾಗಿ ನಡೆಯುವಕಾರಣಕ್ಕಾಗಿ ಶಾರದಾದೇವಿನಗರದಲ್ಲಿ ನಿರ್ಮಿಸಿರುವ ನಗರಪಾಲಿಕೆ ವಲಯ ಕಚೇರಿ-ಮೂರರ ಕಟ್ಟಡ ಉದ್ಘಾಟನೆ ಶನಿವಾರ ನಡೆಯಲಿದೆ. ಚಾಮುಂಡೇಶ್ವರಿಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಭೇಟಿ ನೀಡಿ ಪರಿಶೀಲಿಸಿದರು.
ಚಾಮುಂಡೇಶ್ವರಿ ಕ್ಷೇತ್ರದ ವ್ಯಾಪ್ತಿಗೆ ಸೇರಿರುವ ಐದು ವಾರ್ಡುಗಳು ವಲಯ ಕಚೇರಿ-ಮೂರಕ್ಕೆ ಬರಲಿದೆ. ಸಿಎಂ ಅವರು ಕಾರ್ಯಕ್ರಮ ಉದ್ಘಾಟಿಸುವ ಕಾರಣ ಗುರುವಾರ ಭೇಟಿ ನೀಡಿ ಅಂತಿಮ ಹಂತದ ಸಿದ್ದತೆ ಪರಿಶೀಲಿಸಿ ಮಾಹಿತಿ ಪಡೆದರು.
Mysore
ಕಾಶ್ಮೀರಿ ದಾಳಿ ಖಂಡಿಸಿ ಮೈಸೂರಿನಲ್ಲಿ ವಕೀಲರ ಪ್ರತಿಭಟನೆ

ಮೈಸೂರು: ಕಾಶ್ಮೀರದಲ್ಲಿ ಪ್ರವಾಸದಲ್ಲಿದ್ದವರ ಮೇಲೆ ಏಕಾಎಕಿ ದಾಳಿ ನಡೆಸಿದ ಉಗ್ರ ನಡೆಯನ್ನು ಖಂಡಿಸಿ ಮೈಸೂರಿನ ವಕೀಲರ ಸಂಘ ಪ್ರತಿಭಟಿಸಿತು.
ಹಳೆ ನ್ಯಾಯಾಲಯದ ಮುಂಭಾಗ ಗಾಂಧಿ ಪುತ್ಥಳಿ ಎದುರು ಗುರುವಾರ ಜಮಾವಣೆಗೊಂಡ ವಕೀಲರು ನಾನಾ ಘೋಷಣೆಗಳನ್ನು ಕೂಗಿ ಉಗ್ರವಾದವನ್ನು ಮಟ್ಟ ಹಾಕುವಂತೆ ಆಗ್ರಹಿಸಿದರು.
ಈ ವೇಳೆ ವಕೀಲರ ಸಂಘದ ಅಧ್ಯಕ್ಷ ಎಸ್.ಲೋಕೇಶ್ ಮಾತನಾಡಿ, ಉಗ್ರಗಾಮಿಗಳು ಹಿಂದೂಗಳನ್ನು ಗುರುತು ಮಾಡಿಕೊಂಡು ಕಗ್ಗೊಲೆ ಮಾಡಿದ್ದಾರೆ. ಬಟ್ಟೆ ಬಿಚ್ಚಿಸಿದ್ದಾರೆ. ಇದು ನಮ್ಮ ದೇಶದಲ್ಲಿ ನಿಜವಾಗಿಯೂ ಅಭದ್ರತೆ ಎಂಬುದು ಇದ್ದರೆ ಅದು ಹಿಂದೂಗಳಿಗೆ ಎಂಬುದನ್ನು ತೋರುತ್ತದೆ ಎಂದರು.
-
Mysore12 hours ago
ಅರಣ್ಯ ಇಲಾಖೆಯ ವಾಚರ್ ಆತ್ಮಹ*ತ್ಯೆ
-
Mysore13 hours ago
ನಂಜನಗೂಡಿನ ಸಬ್ ರಿಜಿಸ್ಟರ್ ಕಛೇರಿಗೆ ಬೀಗ: ಲೋಕಾಯುಕ್ತ ದಾಳಿ
-
National - International7 hours ago
ಪಹಲ್ಗಾಮ್ ದಾಳಿ; ಉಗ್ರರ ಜೊತೆ ಗುಂಡಿನ ಕಾಳಗದಲ್ಲಿ ವೀರ ಯೋಧ ಹುತಾತ್ಮ
-
State10 hours ago
ಕಾಶ್ಮೀರದ ಪೆಹಲ್ಗಾಮನಲ್ಲಿ ನಡೆದ ಉಗ್ರರ ದಾಳಿ ಖಂಡನೀಯ – ಮುಖ್ಯಮಂತ್ರಿ ಸಿದ್ದರಾಮಯ್ಯ
-
National - International7 hours ago
ದಾಳಿ ನಡೆಸಿದ ಉಗ್ರರಿಗೆ ಊಹೆಗೂ ಮೀರಿದ ಶಿಕ್ಷೆ ನೀಡಲಾಗುವುದು: ಪ್ರಧಾನಿ ನರೇಂದ್ರ ಮೋದಿ
-
Kodagu22 hours ago
ಕೊಂಗಾಣದಲ್ಲಿ ಕಣ್ಣನೂರಿನ ಕೋಲಿಯಾ ಆಸ್ಪತ್ರೆಯ ಮಾಲೀಕನ ಕೊ*ಲೆ
-
Kodagu12 hours ago
ಜಿಲ್ಲಾ ಮಟ್ಟದ ಜ್ಞಾನಜ್ಯೋತಿ ಕಾರುಣ್ಯ ಕಾರ್ಯಕ್ರಮ
-
Chamarajanagar10 hours ago
ಚಾಮರಾಜನಗರ: ಮಲೆ ಮಹದೇಶ್ವರ ಸ್ವಾಮಿ ದರ್ಶನ ಪಡೆದ ಡಿಸಿಎಂ ಡಿ.ಕೆ.ಶಿವಕುಮಾರ್