Mandya
ಡಾ.ಬಿ.ಆರ್ ಅಂಬೇಡ್ಕರ್ ಅವರು ಕೊಟ್ಟ ಸಂವಿಧಾನವನ್ನು ಅನುಸರಿಸಿ ಉಳಿಸಿಕೊಳ್ಳಬೇಕಾಗಿದೆ: ನಿ.ನ್ಯಾನಾಗಮೋಹನ ದಾಸ್
ಮಂಡ್ಯ : ಡಾ.ಬಿ.ಆರ್.ಅಂಬೇಡ್ಕರ್ ರವರು ಹಾಗೂ ಹಿರಿಯರು ದೇಶದ ಬೆಳವಣಿಗೆಗೆ ನೀಡಿದ ಸಂವಿಧಾನವನ್ನು ಅನುಸರಿಸಿ ಉಳಿಸಿಕೊಳ್ಳುವ ಜವಾಬ್ದಾರಿ ಯುವಕರ ಮೇಲಿದೆ ಎಂದು ಕರ್ನಾಟಕ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ಹೆಚ್.ಎನ್. ನಾಗಮೋಹನದಾಸ್ ಅವರು ತಿಳಿಸಿದರು.
ಅವರು ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಸಂವಿಧಾನ ಓದು ಅಧ್ಯಯನ ಶಿಬಿರ’ವನ್ನು ಉದ್ಘಾಟಿಸಿ ಮಾತನಾಡಿದರು.
ಭಾರತದ ಸಂವಿಧಾನವು ಜಗತ್ತಿನ ಅತಿ ದೊಡ್ಡ ಸಂವಿಧಾನವಾಗಿದ್ದು, ಸಂವಿಧಾನ ರಚನೆಯಾಗಿ ಹಲವಾರು ವರ್ಷಗಳಾದರೂ ಅನೇಕರಿಗೆ ಸಂವಿಧಾನದ ರಚನೆ ಮತ್ತು ಅದರ ಮೂಲ ತತ್ವಗಳ ಬಗ್ಗೆ ತಿಳಿದೇ ಇಲ್ಲ ಎಂಬುದು ಯೋಚಿಸುವ ವಿಷಯವಾಗಿದೆ ಎಂದರು.

ಸಾರ್ವಜನಿಕರಿಗೆ ಉಪಯುಕ್ತವಾಗಲೆಂದು 2018 ರಲ್ಲಿ ನಾನು ‘ಸಂವಿಧಾನ ಓದು’ ಎಂಬ ಪುಸ್ತಕ ರಚಿಸಿದ್ದೇನೆ, ಕಳೆದ 6 ವರ್ಷದಲ್ಲಿ 2000 ಕ್ಕೂ ಹೆಚ್ಚು ಉಪನ್ಯಾಸವನ್ನು ಸಂವಿಧಾನದ ಬಗ್ಗೆ ನೀಡಿದ್ದೇನೆ. ಇಷ್ಟಾದರೂ ರಾಜ್ಯದ ಒಂದಿಷ್ಟು ಜನರನ್ನು ತಲುಪಲು ವಿಫಲರಾಗಿದ್ದೇವೆ. ಜಿಲ್ಲೆಯ ಯುವ ಜನರಿಗೆ ಸಂವಿಧಾನದ ಮಹತ್ವ ಮೂಲ ತತ್ವಗಳನ್ನು ತಿಳಿಸುವುದೇ ಈ ಶಿಬಿರದಲ್ಲಿ ಮೂಲ ಉದ್ದೇಶ. ಜೊತೆಗೆ ನಾವು ಅಭಿವೃದ್ಧಿಯತ್ತ ಸಾಗಲು ಇರುವ ಒಂದೇ ದಾರಿ ಎಂದರೆ ಅದು ಹಿರಿಯರು ಕೊಟ್ಟ ನಮ್ಮ ಸಂವಿಧಾನ ಎಂದು ಹೇಳಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸಿಫ್ ಅವರು ಮಾತನಾಡಿ, ನಾನು ಯು.ಪಿ.ಎಸ್.ಸಿ. ಪರೀಕ್ಷೆ ಬರೆಯುವ ಸಮಯದಲ್ಲಿ ಮೊಟ್ಟ ಮೊದಲು ನಾನು ಓದಿದ್ದು ಸಂವಿಧಾನದ ಪುಸ್ತಕ. ಮೊದಲು ಓದುವಾಗ ಕಾನೂನಿನ ಭಾಷೆ ಅರ್ಥ ಮಾಡಿಕೊಳ್ಳಲು ಕಷ್ಟವಾಯಿತು. ಆದರೆ ಅದನ್ನು ಅರ್ಥ ಮಾಡಿಕೊಂಡಾಗ ಸಮಾಜದಲ್ಲಿ ಏನು ಮಾಡಬೇಕು ಏನು ಮಾಡಬಾರದು ಎಂಬ ಸಂಗತಿಯನ್ನು ಅರಿತುಕೊಂಡೆ ಎಂದರು.
ನಮಗೆ ಕಷ್ಟ ಬಂದಾಗ ಯಾರೂ ನಮ್ಮ ಜೋತೆ ನಿಲ್ಲುವುದಿಲ್ಲ. ನಮ್ಮ ಬದುಕಿನ ಹೋರಾಟವನ್ನು ನಾವೇ ಮಾಡಬೇಕು. ಅದು ಜೀವನದ ತತ್ವ. ನಮ್ಮನ್ನು ಹೊರತು ಪಡಿಸಿ ನಮ್ಮನ್ನು ಕಾಪಾಡುವ ಶಕ್ತಿ ಯಾರಿಗಾದರೂ ಇದೆ ಎಂದರೆ ಅದು ಕೇವಲ ಭಾರತೀಯ ಸಂವಿಧಾನಕ್ಕೆ ಮಾತ್ರ ಎಂದು ಹೇಳಿದರು.
ಸಭೆಯಲ್ಲಿ ಕೃಷಿ ಕೂಲಿಕಾರರ ಸಂಘದ ರಾಜ್ಯಾಧ್ಯಕ್ಷ ಪುಟ್ಟಮಾಧು, ನಗರಸಭೆ ಮಾಜಿ ಅಧ್ಯಕ್ಷ ಸಿದ್ಧರಾಜು,ಮಹಿಳಾ ರೈತ ಮುಖಂಡರಾದ ಸುನಂದ ಜೈರಾಮ್, ದಲಿತ ಹಕ್ಕುಗಳ ಸಮಿತಿ ಮುಖಂಡರಾದ ಕೃಷ್ಣ.ಆರ್, ಕಾರ್ಮಿಕ ಮುಖಂಡರಾದ ಸಿ.ಕುಮಾರಿ ಮತ್ತು ಇನ್ನಿತರ ಗಣ್ಯರು ಉಪಸ್ಥಿತರಿದ್ದರು.
Mandya
ವಿಚ್ಚೇದನ ಪಡೆದಿದ್ದ ಪತ್ನಿಯನ್ನು ಕೊಂದ ಆರೋಪಿಗೆ ಜೀವಾವಧಿ ಶಿಕ್ಷೆ
ಮಂಡ್ಯ : ಗಂಡನಿಂದ ವಿಚ್ಚೇದನ ಪಡೆದು ಪತ್ಯೇಕವಾಗಿ ಜೀವಿಸುತ್ತಿದ್ದ ಪತ್ನಿಯನ್ನು ಕೊಲೆ ಮಾಡಿದ ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ ಮಂಡ್ಯದ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
ಮಂಡ್ಯ ತಾಲ್ಲೂಕಿನ ರಾಗಿಮುದ್ದನಹಳ್ಳಿ ಗ್ರಾಮದ ಸುರೇಶ್ ಬಿನ್ ಕುಳ್ಳ ವೆಂಕಟಯ್ಯ ಶಿಕ್ಷೆಗೆ ಗುರಿಯಾದ ಅಪರಾಧಿಯಾಗಿದ್ದು, ಸಾಂಸಾರಿಕ ಗದ್ದಲದಿಂದ ಬೇಸತ್ತು ವಿಚ್ಚೇಧನ ಪಡೆದಿದ್ದ ತನ್ನ ಪತ್ನಿಯನ್ನು ಕೊಲೆಗೈದ ಆರೋಪ ಎದುರಿಸುತ್ತಿದ್ದರು.
ಏನಿದು ಘಟನೆ ?
ಮಂಡ್ಯ ತಾಲ್ಲೂಕಿನ ರಾಗಿಮುದ್ದನಹಳ್ಳಿ ಗ್ರಾಮದ ಸುರೇಶ್ ಎಂಬುವವರು ಕಳಡದ 18 ವರ್ಷಗಳ ಹಿಂದೆ ಶಾಲಿನಿ ಎಂಬ ಮಹಿಳೆಯನ್ನು ವಿವಾಹವಾಗಿದ್ದನು. ಇವರಿಗೆ ಇಬ್ಬರು ಹೆಣ್ಣು ಮಕ್ಕಳಿದ್ದು, ಆನಂತರ ಸುರೇಶನ ದುವರ್ತನೆಯಿಂದಾಗಿ ಶಾಲಿನಿಯು ಸಾಂಸಾರಿಕವಾಗಿ ಆತನಿಂದ ದೂರವಾಗಿದ್ಸಳು. ಜೊತೆಗೆ ವಿಚ್ಛೇದನವನ್ನು ಸಹ ಪಡೆದುಕೊಂಡು ಪ್ರತ್ಯೇಕವಾಗಿ ತನ್ನ ತವರು ಮನೆಯಲ್ಲಿ ವಾಸಿಸುತ್ತಿದ್ದಳು.

ಈ ಮಧ್ಯೆ ಆರೋಪಿಯ ವಿರುದ್ಧ ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅಪ್ರಾಪ್ತ ಮೇಲೆ ಅತ್ಯಾಚಾರ ನಡೆಸಿದ್ದ ಬಗ್ಗೆ ಪೋಕ್ಸೋ ಪ್ರಕರಣವು ಸಹ ದಾಖಲಾಗಿದ್ದು, ನಂತರದ ದಿನಗಳಲ್ಲಿ ಆರೋಪಿ ಸುರೇಶ್ ಶಾಲಿನಿಯ ಬಳಿ ಒಂದಾಗಿ ಬಾಳೋಣವೆಂದು ಕೇಳಿಕೊಂಡಿದ್ದ ಎನ್ನಲಾಗಿದೆ.
ಅದಕ್ಕೆ ಶಾಲಿನಿ ಒಪ್ಪದೆ ಇದ್ದಾಗ ಆರೋಪಿಯು ಕೋಪಗೊಂಡು ನಿನ್ನನ್ನು ಮತ್ತು ನಿನ್ನ ಮನೆಯವರನ್ನು ಕೊಲೆ ಮಾಡುತ್ತೇನೆಂದು ಬೆದರಿಕೆ ಹಾಕಿದ್ದನು ಎಂದು ತಿಳಿದು ಬಂದಿದೆ. ಅಲ್ಲದೇ ತನ್ನ ಹೆಣ್ಣು ಮಕ್ಕಳನ್ನು ಆತನ ಜೊತೆ ಮಾತನಾಡಲೂ ಬಿಡದ ಕಾರಣ ಆಕೆಯನ್ನು ಕೊಲೆ ಮಾಡಲೇ ಬೇಕೆಂದು ನಿರ್ಧರಿಸಿ ಶಾಲಿನಿ ಮೇಲೆ ದ್ವೇಷ ಇಟ್ಟುಕೊಂಡಿದ್ಸನು ಎನ್ನಲಾಗಿದೆ.
ಹಾಗಾಗಿ 2022 ರ ಜ.20 ರಂದು ಸಂಜೆ 6.45ರ ಸಮಯದಲ್ಲಿ ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯ ಸರಹದ್ದಿನ ರಾಗಿಮುದ್ದನಹಳ್ಳಿ ಗ್ರಾಮದ ಸರ್ವೆ ನಂ 97/4ರ ಜಮೀನಿನಲ್ಲಿ ಶಾಲಿನಿಯು ಪ್ಯಾಕ್ಟರಿಯು ಕೆಲಸ ಮುಗಿಸಿಕೊಂಡು ಊರಿಗೆ ಹೋಗಲು ವಾಪಸ್ ನಡೆದುಕೊಂಡು ಬರುತ್ತಿದ್ದಾಗ ಆರೋಪಿಯು ಹೊಂಚು ಹಾಕಿ, ಆಕೆಯನ್ನು ಮುಂದೆ ಹೋಗದಂತೆ ತಡೆದು ಹಳೆ ದ್ವೇಷದಿಂದ ಆಕೆಯ ಮೇಲೆ ಗಲಾಟೆ ಮಾಡಿದ್ದಲ್ಲದೆ ತನ್ನ ಬಳಿ ಇಟ್ಟುಕೊಂಡಿದ್ದ ಕೊಡಲಿಯನ್ನು ತೆಗೆದು ಬಲವಾಗಿ ಶಾಲಿನಿಯ ತಲೆಯ ಮೇಲೆ ಹೊಡೆದಿದ್ದಾನೆ. ಆಕೆ ರಕ್ತಶ್ರವಾವದಿಂದ ಕಳಗೆ ಬಿದ್ದಾಗ ಆಕೆಯು ಇನ್ನು ಸ್ವಲ್ಪ ಉಸಿರಾಡುತ್ತಿದ್ದಾಳೆ ಎಂಬುದನ್ನು ಗಮನಿಸಿ ಆಕೆಯ ಮೇಲೆ ಕುಳಿತುಕೊಂಡು ಪುನ: ಕೊಡಲಿಯಿಂದ ಕುತ್ತಿಗೆ ಮೇಲೆ ಬಲವಾಗಿ 2 ಬಾರಿ ಕೊಡಲಿಯಿಂದ ಹಲ್ಲೆ ಮಾಡಿ ಅಮಾನುಷವಾಗಿ ಕತ್ತನ್ನು ಕತ್ತರಿಸಿ ಶಿರಚ್ಛೇಧನ ಮಾಡಿದ್ದನು. ನಂತರ ಕೃತ್ಯಕ್ಕೆ ಬಳಸಿದ್ದ ಕೊಡಲಿಯ ಸಾಕ್ಷ್ಯ ನಾಶಪಡಿಸಲು ಬಸಪ್ಪನ ಕಟ್ಟೆ ಬಳಿ ಇರುವ ಮೆಳೆಯ ಒಳಗಡೆ ಎಸೆದು ಸಾಕ್ಷ ವಾಶಪಡಿಸಿರುವುದು ತನಿಖೆಯಿಂದ ಹಾಗೂ ಸಾಕ್ಷ್ಯಾಧಾರಗಳಿಂದ ದೃಢಪಟ್ಟಿತ್ತು.
ಈ ಬಗ್ಗೆ ಮಂಡ್ಯ ಗ್ರಾಮಾಂತರ ಶಾಣಾ ಪೋಲಿಸರು ಆರೋಪಿ ವಿರುದ್ಧ ದೋಷಾರೋಪಣಾ ಪತ್ರ ಸಲ್ಲಿಸಿದ್ದರು. ಈ ಪ್ರಕರಣವು ಮಂಡ್ಯದ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ವಿಚಾರಣೆ ನಡೆದು, ಆರೋಪಿಯು ಕೊಲೆ ಎಸಗಿರುವುದು ದೃಡಪಟ್ಟಿದ್ದರಿಂದ ನ್ಯಾಯಾಧೀಶರಾದ ಸೈಯಿದ್ ಉನ್ನಿಸಾ ಅವರು, ಆರೋಪಿ ಸುರೇಶನಿಗೆ ಭಾದಂಸಂ ಕಲಂ 302 ರ ಅಡಿಯಲ್ಲಿನ ಅಪರಾಧಕ್ಕೆ ಜೀವಾವಧಿ ಶಿಕ್ಷೆ ಮತ್ತು ತಲಾ 50,000/-ರೂಪಾಯಿ ದಂಡ, ಕಲಂ, 201 ಭಾ.ದಂ.ಸಂ. ಅಪರಾಧಕ್ಕೆ 5 ವರ್ಷಗಳ ಸೆರೆಮನೆ ವಾಸ ಮತ್ತು ತಲಾ 25,000/- ರೂಪಾಯಿ ದಂಡ ಮತ್ತು ಕಲಂ, 341 ಭಾ.ದಂ.ಸಂ ಅಪರಾಧಕ್ಕೆ 1 ತಿಂಗಳ ಸರೆಮನೆ ವಾಸ ಮತ್ತು ತಲಾ 500/- ರೂಪಾಯಿ ದಂಡ ವಿಧಿಸಿ ಕಳೆದ ಡಿ.8 ರಂದು ತೀರ್ಪು ನೀಡಿದ್ದಾರೆ. ಮೃತಳ ಇಬ್ಬರು ಮಕ್ಕಳಿಗೆ ಕಾನೂನು ಸೇವಾ ಪ್ರಾಧಿಕಾರದಿಂದ ಪರಿಹಾರ ನೀಡಲು ಪ್ರಾಧಿಕಾರಕ್ಕೆ ನಿರ್ದೇಶಿಸಿದ್ದಾರೆ.
ಈ ಪ್ರಕರಣದಲ್ಲಿ ಸರ್ಕಾರಿ ಅಭಿಯೋಜಕರಾದ ಎನ್.ಬಿ. ವಿಜಯಲಕ್ಷ್ಮಿ ಮತ್ತು ನಾಗರಾಜ ಕೆ ಅವರು ಅಭಿಯೋಜನೆ ಪರವಾಗಿ ವಾದ ಮಂಡಿಸಿದ್ದರು.
Mandya
ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳವರ 1066 ನೇ ಜಯಂತಿ ಮಹೋತ್ಸವದ ಪೂರ್ವ ಸಿದ್ದತೆಗಳನ್ನು ಪರಿಶೀಲಿಸಿದ ಜಿಲ್ಲಾಧಿಕಾರಿಗಳು
ಮಳವಳ್ಳಿ : ಡಿ.16ರಂದು ಮಳವಳ್ಳಿ ತಾಲ್ಲೂಕಿನಲ್ಲಿ ನಡೆಯಲಿರುವ ಆದಿ ಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳವರ 1066ನೇ ಜಯಂತಿ ಮಹೋತ್ಸವ ಕಾರ್ಯಕ್ರಮಕ್ಕೆ ಭಾರತದ ಸನ್ಮಾನ್ಯ ರಾಷ್ಟ್ರಪತಿಗಳು ಆಗಮಿಸಲಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಡಾ.ಕುಮಾರ ಅವರು ಕಾರ್ಯಕ್ರಮದ ಪೂರ್ವಸಿದ್ಧತೆಗಳ ಕುರಿತು ಮಳವಳ್ಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮಾರೆಹಳ್ಳಿ ಗ್ರಾಮದಲ್ಲಿ ನಿರ್ಮಾಣವಾಗುತ್ತಿರುವ ಹೆಲಿಪ್ಯಾಡ್ ಪ್ರದೇಶವನ್ನು ಪರಿಶೀಲಿಸಿ ಮೂರು ಹೆಲಿಕಾಪ್ಟರ್ ಲ್ಯಾಂಡಿಂಗ್ ಗೆ ಸ್ಥಳಗಳನ್ನು ಸಿದ್ಧಪಡಿಸಲಾಗಿದ್ದು, ಕೂಡಲೇ ಲ್ಯಾಂಡಿಂಗ್ ಸ್ಥಳವನ್ನು ಗುರುತಿಸಲು ಸೂಚನೆ ನೀಡಿದರು.

ಡಿಸೆಂಬರ್ 14, 2025 ರ ಭಾನುವಾರದಂದು ಕೇಂದ್ರಿಂದ ಪರಿಶೀಲನಾ ತಂಡವು ಆಗಮಿಸಲಿರುವುದರಿಂದ ಗುರುತಿಸಿರುವ ಹೆಲಿಪ್ಯಾಡ್ ಅನ್ನು ಸಮತಟ್ಟಾಗಿಸಿ, ನಿಯಮಾನುಸಾರ ಅಂತರ ಕಾಯ್ದುಕೊಳ್ಳುವುದು ಮತ್ತು ಧೂಳು ರಹಿತ ವ್ಯವಸ್ಥೆ ಕಲ್ಪಿಸಿ, ಗ್ರೀನ್ ರೂಂ ನಿರ್ಮಾಣದ ಕುರಿತು ಪರಿಶೀಲನಾ ತಂಡದ ಅಭಿಪ್ರಾಯದ ಮೇರೆಗೆ ಅಂತಿಮವಾಗಿ ನಿರ್ಧಾರ ಕೈಗೊಳ್ಳಿ ಎಂದು ಹೇಳಿದರು.
ಮಾರ್ಗಸೂಚಿಯ ನಿಯಮಾವಳಿಗಳಂತೆ ಹೈಸ್ಪೀಡ್ ಇಂಟರ್ನೆಟ್ ಮತ್ತು ದೂರವಾಣಿ ಸಂಪರ್ಕ ಕಲ್ಪಿಸಿ, ರಾಷ್ಟ್ರಪತಿ ಪ್ರೋಟೋಕಾಲ್ ಅನುಸಾರ ವೇದಿಕೆ, ಕುಳಿತುಕೊಳ್ಳುವ ಆಸನ ಹಾಗೂ ಜಾಗದ ವ್ಯವಸ್ಥೆಯನ್ನು ಮಾಡಿ, ವೇದಿಕೆಯ ಬಳಿಯೇ ತುರ್ತು ವೈದ್ಯಕೀಯ ತಂಡ ಇರುವಂತೆ ಸಮರ್ಪಕವಾಗಿ ಸಿದ್ಧಗೊಳಿಸಿ, ರಾಷ್ಟ್ರಪತಿಗಳು ಹಾಗೂ ಭದ್ರತಾ ಸಿಬ್ಬಂದಿಗಳ ವಾಹನ ನಿಲುಗಡೆ ಪ್ರದೇಶವನ್ನು ಪರಿಶೀಲಿಸಿ, ಯಾವುದೇ ಸರ್ಕಾರಿ,ಖಾಸಗಿ ವಾಹನಗಳು ಸದರಿ ಪ್ರದೇಶದಲ್ಲಿ ನಿಲ್ಲದಂತೆ ಕ್ರಮ ಕೈಗೊಳ್ಳಿ ಎಂದು ಹೇಳಿದರು.
ರಾಷ್ಟ್ರಪತಿಗಳು ಆಗಮಿಸುವ ಮಾರ್ಗ ಮತ್ತು ವಾಹನ ನಿಲುಗಡೆ ಜಾಗಗಳನ್ನು ಪರಿಶೀಲಿಸಿ, ಯಾವುದೇ ನಿಯಮಗಳು ಉಲ್ಲಂಘನೆಯಾಗದಂತೆ ಕ್ರಮ ವಹಿಸಿ, ಗಣ್ಯರಿಗೆ, ದೃಶ್ಯ ಹಾಗೂ ಪತ್ರಿಕಾ ಮಾಧ್ಯಮ ಪ್ರತಿನಿಧಿಗಳಿಗೆ ಮತ್ತು ಸಾರ್ವಜನಿಕರಿಗೆ ಸಿದ್ಧಪಡಿಸಿರುವ ಯೋಜನೆಯ ಪ್ರಕಾರ ಪ್ರತ್ಯೇಕವಾಗಿ ಆಸನ ವ್ಯವಸ್ಥೆ ಕಲ್ಪಿಸಿ. ವಸ್ತು ಪ್ರದರ್ಶನ ಮತ್ತು ಊಟ ವಿತರಣಾ ಸ್ಥಳಗಳನ್ನು ಪರಿಶೀಲಿಸಿ ಅಗತ್ಯ ಕ್ರಮಗಳನ್ನು ಕೈಗೊಳ್ಳಿ ಎಂದು ಹೇಳಿದರು.
ಸಾರ್ವಜನಿಕರಿಗೆ ತೊಂದರೆಯಾಗದಂತೆ ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಕುಡಿಯುವ ನೀರು, ಶೌಚಾಲಯ ವ್ಯವಸ್ಥೆ, ಸುಸಜ್ಜಿತವಾಗಿ ಸಾರ್ವಜನಿಕರು ಕುಳಿತುಕೊಳ್ಳುವ ಸ್ಥಳ ಹಾಗೂ ಇನ್ನಿತರೆ ಸೌಲಭ್ಯಗಳನ್ನು ಸಿದ್ಧಪಡಿಸಿ, ರಾಷ್ಟ್ರಪತಿಗಳ ಭೇಟಿ ನೀಡಿದ ಸಂದರ್ಭದಲ್ಲಿ ಗೌರವ, ಭದ್ರತೆಯಿಂದ ಕೂಡಿರಬೇಕು ಮತ್ತು ಪ್ರೋಟೋಕಾಲ್ ಕಾಪಾಡುವ ದೃಷ್ಟಿಯಿಂದ ಎಲ್ಲಾ ಇಲಾಖೆ ಅಧಿಕಾರಿಗಳು ಸಮಯ ಪಾಲನೆ ಮಾಡಿ ದೋಷರಹಿತವಾಗಿ ಕಾರ್ಯನಿರ್ವಹಿಸಿ ಕಾರ್ಯಕ್ರಮವನ್ನು ಯಶಸ್ವಿಯಾಗಿ ನೆರವೇರಿಸಬೇಕು ಎಂದು ಹೇಳಿದರು.
ಸದರಿ ಸ್ಥಳಕ್ಕೆ ಆಗಮಿಸಿದ ಧಾರ್ಮಿಕ ನಾಯಕರಿಗೆ ಜಿಲ್ಲಾಧಿಕಾರಿಗಳು ಕಾರ್ಯಕ್ರಮದ ರೂಪರೇಷೆ ಮತ್ತು ಕೈಗೊಂಡಿರುವ ವ್ಯವಸ್ಥೆ ಸಿದ್ದತೆಗಳ ಕುರಿತು ವಿವರವಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ಮಾಜಿ ಶಾಸಕ ಡಾ ಕೆ.ಅನ್ನದಾನಿ, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ,ಉಪ ವಿಭಾಗಾಧಿಕಾರಿ ಶಿವಮೂರ್ತಿ, ಡಿವೈಎಸ್ಪಿ ಯಶವಂತ್ ಕುಮಾರ್,ಪುರಸಭೆ ಮುಖ್ಯಾಧಿಕಾರಿ ನಾಗರತ್ನ,ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ ಸೋಮಶೇಖರ್, ವೃತ್ತ ನಿರೀಕ್ಷಕರಾದ ಶ್ರೀದರ್, ಬಸವರಾಜು, ಜಯಂತಿ ಮಹೋತ್ಸವದ ವಿವಿದ ಸಮಿತಿಗಳ ಪದಾಧಿಕಾರಿಗಳು, ಜೆ.ಎಸ್.ಎಸ್.ವಿದ್ಯಾಪೀಠದ ಅಧಿಕಾರಿಗಳು ಉಪಸ್ಥಿತರಿದ್ದರು.
Mandya
ಗಾಂಧಿ ಹಾಗೂ ಅಂಬೇಡ್ಕರ್ ಅವರ ಆದರ್ಶಗಳನ್ನು ಪಾಲಿಸಿ: ಪ್ರೊ.ಜಯಪ್ರಕಾಶಗೌಡ
ಮಂಡ್ಯ: ಮಂಡ್ಯ ವಿಶ್ವವಿದ್ಯಾಲಯ, ಮಂಡ್ಯ ಗಾಂಧಿ ಅಧ್ಯಯನ ಮತ್ತು ಸಂಶೋಧನಾ ಕೇಂದ್ರ, ಗಣಕ ವಿಜ್ಞಾನ ವಿಭಾಗದ ವತಿಯಿಂದ ಮಂಡ್ಯ ವಿಶ್ವವಿದ್ಯಾಲಯದ ಆಡಳಿತ ಭವನದಲ್ಲಿ ಆಯೋಜಿಸಲಾಗಿದ್ದ ಗಾಂಧಿ ವಿಚಾರಧಾರೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು
ಗಾಂಧೀಜಿಯವರ ಆಶಯದಂತೆ ಇಂದು ಹೆಣ್ಣು ಮಕ್ಕಳು ಸ್ವತಂತ್ರ ಮತ್ತು ಸಮಾನತೆಯಿಂದ ಬದುಕುತ್ತಿದ್ದಾರೆ.
ಮಹಾತ್ಮ ಗಾಂಧೀಜಿಯವರು ದೇಶದ ಸ್ವತಂತ್ರಕ್ಕಾಗಿ ಹೋರಾಡಿದರೆ ಡಾ. ಬಿ.ಆರ್.ಅಂಬೇಡ್ಕರ್ ಅವರು ದೇಶದ ಸಮಾನತೆಗಾಗಿ ಹೋರಾಡಿದ್ದಾರೆ.
ಗಂಡು ಮಕ್ಕಳನ್ನು ಮೀರಿ ಎಲ್ಲಾ ಕ್ಷೇತ್ರದಲ್ಲೂ ಮುಂದುವರೆಯುತ್ತಿದ್ದಾರೆ. ಪ್ರಸ್ತುತ ಮಹಿಳೆಯರು ಪ್ರವೇಶ ಮಾಡದೇಯಿರುವ ಕ್ಷೇತ್ರವಿಲ್ಲ, ಭಾರತದ ಯಶಸ್ಸಿಗೆ ಹಾಗೂ ಬದಲಾವಣೆಗಳಿಗೆ ಹೆಣ್ಣುಮಕ್ಕಳ ಸಮಾನತೆ ಕಾರಣವಾಗಿದೆ ಎಂದರೆ ತಪ್ಪಾಗುವುದಿಲ್ಲ ಎಂದರು.
ಅವರ ಚಿಂತನೆ ನಿಲುವು, ಆದರ್ಶವನ್ನು ಇಂದಿನ ಯುವ ಪೀಳಿಗೆಗಳು ಪಾಲಿಸಬೇಕು ಎಂದು ಕರ್ನಾಟಕ ಸಂಘದ ಅಧ್ಯಕ್ಷರಾದ ಪ್ರೊ.ಜಯಪ್ರಕಾಶಗೌಡ ಅವರು ಹೇಳಿದರು.
ಗಾಂಧಿಯವರು ತಿಳಿಸದ ವಿಷಯವಿಲ್ಲ ಸ್ವಚ್ಛತೆ, ಶ್ರಮ, ಕೃಷಿ, ಆಹಾರ, ಆರೋಗ್ಯ ಹಾಗೂ ಜೀವನ ಮೌಲ್ಯಗಳ ಬಗ್ಗೆ ಅವರು ಮಾತನಾಡಿದ್ದಾರೆ.

ಗಾಂಧೀಜಿಯವರು ಸರಳತೆಯ ಜೀವನಕ್ಕೆ ಪ್ರಮುಖವಾದ ಉದಾಹರಣೆಯಾಗಿದ್ದಾರೆ. ಸರಳತೆಯೇ ಜಗತ್ತಿನ ಸಾರ ಎಂದ ಅವರು ಶಸಸ್ತ್ರ ಹಿಡಿಯದೆ, ರಕ್ತ ಪಾತವಿಲ್ಲದೆ, ದೇಶಕ್ಕೆ ಸ್ವತಂತ್ರ ತಂದು ಕೊಟ್ಟಿದ್ದಾರೆ. ವಿಶ್ವದಲ್ಲಿಯೇ ಶಾಂತಿ, ಸೌಹಾರ್ದತೆಯಿಂದ ದೇಶಕ್ಕೆ ಸ್ವತಂತ್ರ ತಂದ ನಿದರ್ಶನ ಗಾಂಧಿಯವರದ್ದು ಮಾತ್ರ ಎಂದು ಬಣ್ಣಿಸಿದರು.
ಶಿಕ್ಷಣವೆಂಬುದು ಕೇವಲ ಉದ್ಯೋಗಕ್ಕಾಗಿ ಸೀಮಿತವಾಗಿರುವುದಲ್ಲ ಶಿಕ್ಷಣದಿಂದ ಅರಿವು, ಜ್ಞಾನ, ಜೀವನದ ಮೌಲ್ಯ ಎಲ್ಲವೂ ತಿಳಿಯಲು ಸಾಧ್ಯ. ವಿದ್ಯಾರ್ಥಿಗಳಾದ ನೀವು ಪ್ರಶ್ನಿಸುವ ಮನೋಭಾವನೆ ಬೆಳೆಸಿಕೊಳ್ಳಬೇಕು, ಪ್ರಶ್ನಿಸುವುದರ ಜತೆಗೆ ಕೇಳಿಸಿಕೊಳ್ಳುವ ಆಸಕ್ತಿಯನ್ನು ಸಹ ಮೈಗೂಡಿಸಿಕೊಳ್ಳಬೇಕು.
ವಿಷಯಗಳನ್ನು ಸಂಪೂರ್ಣವಾಗಿ ಕೇಳಿಸಿಕೊಂಡಾಗ ಮಾತ್ರ ವಿಷಯದ ಆಳವಾಗಿ ಮಾಹಿತಿ ಅರ್ಥೈಸಿಕೊಳ್ಳಲು ಸಾಧ್ಯ ಎಂದು ವಿದ್ಯಾರ್ಥಿಗಳನ್ನು ಕುರಿತು ಮಾತನಾಡಿದರು.
ಮಂಡ್ಯ ವಿಶ್ವವಿದ್ಯಾಲಯ ಕುಲಪತಿಗಳಾದ ಪ್ರೊ.ಕೆ.ಶಿವಚಿತ್ತಪ್ಪ ಅವರು ಮಾತನಾಡಿ ಗಾಂಧೀಜಿಯವರು ಅಂದಿಗೂ ಇಂದಿಗೂ ಎಂದೆದಿಗೂ ಎಲ್ಲರಿಗೂ ಅನ್ವಯವಾಗುವಂತವರು ಆಗಾಗಿ ಗಾಂಧಿಯವರ ಆದರ್ಶಗಳನ್ನು ಎಲ್ಲರೂ ಪಾಲಿಸಬೇಕು.
ಆರ್ಥಿಕತೆಯ ಚಿಂತಕನಾಗಿ ದೇಶದಲ್ಲಿ ಬಡತನ ನಿವಾರಣೆಯಾಗಬೇಕು ಹಾಗೂ ದೇಶ ಸುಸ್ತಿರತೆ ಕಾಣಬೇಕು ಎಂಬುದು ಅವರ ಆಶಯವಾಗಿತ್ತು ಎಂದರು.
ಮಹಿಳೆಯರು ಭೌತಿಕ, ಆರ್ಥಿಕ, ರಾಜಕೀಯ ಹಾಗೂ ಸಮಾಜಿಕವಾಗಿ ಸಬಲೀಕರ ಹೊಂದಬೇಕು ಎಂದು ಗಾಂಧಿಯವರು ಮೊದಲಿಗೆ ಹೇಳಿದ್ದರು.
ಈ ನಿಟ್ಟಿನಲ್ಲಿ ಮಹಿಳೆಯರು ಪುರುಷರಿಗಿಂತಲೂ ಹೆಚ್ಚಾಗಿ ಆರ್ಥಿಕ, ರಾಜಕೀಯ ಹಾಗೂ ಸಮಾಜಿಕವಾಗಿ ಅಲ್ಲದೆ ತಂತ್ರಜ್ಞಾನದಲ್ಲೂ ಸಾಧನೆ ಮಾಡುತ್ತಿರುವುದು ದೇಶದ ಹೆಮ್ಮೆಯ ಸಂಗತಿ ಎಂದರು.
ಕಾರ್ಯಕ್ರಮದಲ್ಲಿ ಗಾಂಧೀಜಿ ಚಿಂತನೆಗಳ ಪ್ರಸ್ತುತತೆ ಕುರಿತು ಬೆಂಗಳೂರು ಕರ್ನಾಟಕ ಗಾಂಧಿ ಸ್ಮಾರಕ ನಿಧಿ ನಿರ್ದೇಶಕರಾದ ಜಿ.ಬಿ.ಶಿವರಾಜು ಹಾಗೂ ರಾಜ್ಯ ಸಂಪನ್ಮೂಲ ಕೇಂದ್ರ ನಿವೃತ್ತ ನಿರ್ದೇಶಕರಾದ ಎಸ್.ತುಕಾರಾಂ ಅವರು ಉಪನ್ಯಾಸ ಮಾಡಿದರು.
ಈ ಸಂದರ್ಭದಲ್ಲಿ ಗಾಂಧಿ ಅಧ್ಯಯನ ಮತ್ತು ಸಂಶೋಧನ ಕೇಂದ್ರದ ಸಂಯೋಜಕರಾದ ಡಾ. ಸುಮಾರಾಣಿ ಶಂಭು, ಉಪ ಕುಲ ಸಚಿವರಾದ ಡಾ. ಎಂ. ವೈ ಶಿವರಾಮು, ಮೌಲ್ಯಮಾಪನ ಕುಲಸಚಿವರಾದ ಜಿ. ವಿ ವೆಂಕಟರಮಣ, ಗಣಕ ವಿಜ್ಞಾನ ವಿಭಾಗ ಮುಖ್ಯಸ್ಥರಾದ ಜಿ. ವಿ ಪ್ರೇಮ್ ಸಿಂಗ್ ಹಾಜರಿದ್ದರು.
-
Kodagu20 hours agoಆಮೆಗತಿಯಲ್ಲಿ ಸಾಗುತ್ತಿರುವ ರಸ್ತೆ ಕಾಮಗಾರಿ: ಎಸ್ಟಿ ಮೋರ್ಚಾ ಅಸಮಾಧಾನ
-
Kodagu12 hours agoಜಿಲ್ಲೆಯಾದ್ಯಂತ ಡಿ.21 ರಂದು ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ
-
Mysore10 hours agoಬಿಸಿಯೂಟ ಅನುದಾನ ದುರುಪಯೋಗ
-
Chamarajanagar12 hours agoಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ
-
Kodagu12 hours agoಪ್ರಧಾನಿ ಕುರಿತು ಅವಹೇಳನ – ನಾಲ್ವರ ಬಂಧನ
-
Mandya14 hours agoಶ್ರೀ ಶಿವರಾತ್ರೀಶ್ವರ ಶಿವಯೋಗಿಗಳವರ 1066 ನೇ ಜಯಂತಿ ಮಹೋತ್ಸವದ ಪೂರ್ವ ಸಿದ್ದತೆಗಳನ್ನು ಪರಿಶೀಲಿಸಿದ ಜಿಲ್ಲಾಧಿಕಾರಿಗಳು
-
Mysore13 hours agoನಂಜನಗೂಡು ಪತ್ರ ಬರಹಗಾರ ಸಂಘದಿಂದ ಡಿ. 15 ಮತ್ತು 16 ರಂದು ಪ್ರತಿಭಟನೆ
-
Mysore13 hours agoವರುಣ ಹೋಬಳಿಯ ಮೇಗಳಾಪುರ ಗ್ರಾಮದಲ್ಲಿ ಇ-ಪೌತಿ ಆಂದೋಲನ: ಹೆಚ್ಚುವರಿ ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ
