Cinema
ನಾಳೆ ಬಿಡುಗಡೆಯಾಗಬೇಕಿದ್ದ ಡೇವಿಲ್ ಸಿನಿಮಾದ ಇದ್ರೆ ನೆಮ್ಮದಿಯಾಗ್ ಇರಬೇಕು ಸಾಂಗ್ನ್ನು ಮುಂದೂಡಿದ ಚಿತ್ರತಂಡ
ಬೆಂಗಳೂರು: ನಾಳೆ ಬೆಳಿಗ್ಗೆ ಬಿಡುಗಡೆ ಆಗಬೇಕಿದ್ದ ದಿ ಡೆವಿಲ್ ಸಿನಿಮಾದ ಹಾಡನ್ನು ಅನಿವಾರ್ಯ ಕಾರಣದಿಂದ ಮುಂದೂಡಲಾಗಿದೆ ಎಂದು ‘ಶ್ರೀ ಜೈಮಾತಾ ಕಂಬೈನ್ಸ್’ ಸಂಸ್ಥೆಯ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಮಾಹಿತಿ ನೀಡಲಾಗಿದೆ. ‘ಇದು ತುಂಬಾ ಒಳ್ಳೆಯ ನಿರ್ಧಾರ. ಬಾಸ್ ಇಲ್ಲದೇ ಇರುವ ಹಾಡಿನ ಸಂಭ್ರಮ ನಮಗೆ ಬೇಡ’ ಎಂದು ಅನೇಕ ಅಭಿಮಾನಿಗಳು ಕಮೆಂಟ್ ಮಾಡಿದ್ದಾರೆ.
ದಿ ಡೆವಿಲ್ ಸಿನಿಮಾದಿಂದ ಹೊಸ ಹಾಡು ಬಿಡುಗಡೆ ಆಗಲಿದೆ ಎಂದು ಡಿ ಫ್ಯಾನ್ಸ್ ಕಾದಿದ್ದರು. ‘ಇದ್ರೆ ನೆಮ್ಮದಿಯಾಗ್ ಇರ್ಬೇಕ್’ ಎಂಬುದು ಹಾಡಿನ ಟೈಟಲ್ ಆದ್ದರಿಂದ ಸಖತ್ ಕ್ರೇಜ್ ಸೃಷ್ಟಿ ಆಗಿತ್ತು. ಆದರೆ ಹಾಡಿನ ಬಿಡುಗಡೆಗೆ ಒಂದು ದಿನ ಬಾಕಿ ಇರುವಾಗಲೇ ನಟ ದರ್ಶನ್ ಅವರ ಪಾಲಿನ ನೆಮ್ಮದಿ ಮಾಯವಾಗಿದೆ. ಅವರಿಗೆ ಹೈಕೋರ್ಟ್ ನೀಡಿದ್ದ ಜಾಮೀನನ್ನು ಇಂದು (ಆ. 14) ಸುಪ್ರೀಂ ಕೋರ್ಟ್ ರದ್ದು ಮಾಡಿದೆ. ಆ ಕಾರಣದಿಂದ ಇದ್ರೆ ನೆಮ್ಮದಿಯಾಗ್ ಇರಬೇಕು ಹಾಡಿನ ಬಿಡುಗಡೆಯನ್ನು ಮುಂದೂಡಲಾಗಿದೆ. ಇದರಿಂದ ಅಭಿಮಾನಿಗಳಿಗೆ ಡಬಲ್ ನಿರಾಸೆ ಆಗಿದೆ.

ಮಿಲನ ಖ್ಯಾತಿಯ ಪ್ರಕಾಶ್ ವೀರ್ ಅವರು ದಿ ಡೆವಿಲ್ ಸಿನಿಮಾಗೆ ನಿರ್ದೇಶನ ಮಾಡುತ್ತಿದ್ದಾರೆ. ಶ್ರೀ ಜೈಮಾತಾ ಕಂಬೈನ್ಸ್ ಸಂಸ್ಥೆಯ ಮೂಲಕ ಈ ಸಿನಿಮಾ ನಿರ್ಮಾಣ ಆಗುತ್ತಿದೆ. ಆಗಸ್ಟ್ 15ರಂದು ‘ಇದ್ರೆ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ ಆಗಲಿದೆ ಎಂದು ಕೆಲವೇ ದಿನಗಳ ಹಿಂದಷ್ಟೇ ತಿಳಿಸಲಾಗಿತ್ತು. ಆದರೆ ಈಗ ಹಾಡು ಬಿಡುಗಡೆ ಮುಂದಕ್ಕೆ ಹೋಗಿದೆ ಎಂಬುದನ್ನು ಚಿತ್ರತಂಡವೇ ತಿಳಿಸಿದೆ.
Cinema
‘ಟಾಕ್ಸಿಕ್’ ತಬಾಹಿ ಹಾಡು ವೈರಲ್: ಯಶ್ ಅವರ ಹಳೆಯ ರೊಮ್ಯಾಂಟಿಕ್ ದೃಶ್ಯದ ಹೇಳಿಕೆ ಮತ್ತೆ ಚರ್ಚೆಯಲ್ಲಿ
ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಟಾಕ್ಸಿಕ್ ಚಿತ್ರದ ‘ತಬಾಹಿ’ ಹಾಡು ಬಿಡುಗಡೆಯಾದ ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸಂಚಲನ ಮೂಡಿಸಿದೆ. ಹಾಡಿನಲ್ಲಿರುವ ರೊಮ್ಯಾಂಟಿಕ್ ಹಾಗೂ ಬೋಲ್ಡ್ ದೃಶ್ಯಗಳು ಸಿನಿಪ್ರಿಯರ ಗಮನ ಸೆಳೆದಿದ್ದು, ಯಶ್ ಮತ್ತು ಕಿಯಾರಾ ಅಡ್ವಾಣಿ ಅವರ ಜೋಡಿ ಬಗ್ಗೆ ವ್ಯಾಪಕ ಚರ್ಚೆ ನಡೆಯುತ್ತಿದೆ.
ಈ ಬೆಳವಣಿಗೆಯ ನಡುವೆ, ಯಶ್ ಅವರು ಈ ಹಿಂದೆ ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮದಲ್ಲಿ ನೀಡಿದ್ದ ಹೇಳಿಕೆ ಮತ್ತೆ ವೈರಲ್ ಆಗಿದೆ. ಆ ಸಂದರ್ಭದಲ್ಲಿ ಮಾತನಾಡಿದ್ದ ಅವರು, ರೊಮ್ಯಾಂಟಿಕ್ ದೃಶ್ಯಗಳಲ್ಲಿ ನಟಿಸುವುದು ತಮ್ಮ ಪಾಲಿಗೆ ಅತ್ಯಂತ ಸವಾಲಿನ ಕೆಲಸ ಎಂದು ಹೇಳಿದ್ದರು.

“ಜನರು ನೀವು ರೊಮ್ಯಾಂಟಿಕ್ ದೃಶ್ಯಗಳನ್ನು ಚೆನ್ನಾಗಿ ಮಾಡುತ್ತೀರಿ ಎಂದು ಹೇಳಿದಾಗ ನನಗೆ ಅಚ್ಚರಿಯಾಗುತ್ತದೆ. ಅಂತಹ ದೃಶ್ಯಗಳನ್ನು ಮಾಡುವಾಗ ನಾನು ತುಂಬಾ ನರ್ವಸ್ ಆಗುತ್ತಿದ್ದೆ. ನಾನು ರೊಮ್ಯಾಂಟಿಕ್ ಸೀನ್ ಮಾಡುತ್ತಿದ್ದಾಗ ರಾಧಿಕಾ ಸೇರಿದಂತೆ ಸೆಟ್ನಲ್ಲಿದ್ದವರು ನನ್ನನ್ನು ನೋಡಿ ನಗುತ್ತಿದ್ದರು,” ಎಂದು ಯಶ್ ಹೇಳಿದ್ದರು.
ಇದೇ ವೇಳೆ, ತಮ್ಮ ವೈಯಕ್ತಿಕ ನಿಲುವಿನ ಬಗ್ಗೆ ಮಾತನಾಡಿದ್ದ ಅವರು, “ನನ್ನ ಪೋಷಕರೊಂದಿಗೆ ಕುಳಿತು ನೋಡಲು ಮುಜುಗರವಾಗುವ ದೃಶ್ಯಗಳಲ್ಲಿ ನಾನು ನಟಿಸುವುದಿಲ್ಲ. ಏಕೆಂದರೆ ಅಂತಹ ದೃಶ್ಯಗಳು ಸಾಮಾನ್ಯ ಪ್ರೇಕ್ಷಕರಿಗೂ ಅಸಹಜ ಭಾವನೆ ಉಂಟುಮಾಡಬಹುದು,” ಎಂದು ತಿಳಿಸಿದ್ದರು.

ಆದರೆ, ಟಾಕ್ಸಿಕ್ ಚಿತ್ರದ ‘ತಬಾಹಿ’ ಹಾಡಿನಲ್ಲಿನ ಆಪ್ತ ದೃಶ್ಯಗಳ ಹಿನ್ನೆಲೆಯಲ್ಲಿ, ಯಶ್ ಅವರ ಈ ಹಿಂದಿನ ಹೇಳಿಕೆ ಮತ್ತೆ ಚರ್ಚೆಗೆ ಬಂದಿದೆ. ಸಾಮಾಜಿಕ ಜಾಲತಾಣಗಳಲ್ಲಿ ಕೆಲವರು ಅವರ ಹಳೆಯ ಮತ್ತು ಇಂದಿನ ಪಾತ್ರದ ಆಯ್ಕೆಯನ್ನು ಹೋಲಿಕೆ ಮಾಡುತ್ತಿದ್ದು, ಇನ್ನೂ ಕೆಲವರು ಚಿತ್ರದ ಕಥೆ ಮತ್ತು ಪಾತ್ರದ ಅಗತ್ಯಕ್ಕೆ ಅನುಗುಣವಾಗಿ ನಟರು ವಿಭಿನ್ನ ರೀತಿಯ ದೃಶ್ಯಗಳಲ್ಲಿ ಅಭಿನಯಿಸುವುದು ಸಹಜ ಎಂದು ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ.
ಆದಾಗ್ಯೂ, ಈ ವಿಚಾರದ ಕುರಿತು ಯಶ್ ಅವರು ಯಾವುದೇ ಹೊಸ ಅಧಿಕೃತ ಪ್ರತಿಕ್ರಿಯೆ ನೀಡಿಲ್ಲ.
Cinema
ಟಿವಿ TRP ಪ್ರಕಟಣೆ ತಾತ್ಕಾಲಿಕ ಸ್ಥಗಿತ: ವಾಹಿನಿಗಳು, ಜಾಹೀರಾತು ಕ್ಷೇತ್ರಕ್ಕೆ ಹೊಸ ಸವಾಲು
ಬೆಂಗಳೂರು: ಭಾರತೀಯ ಟೆಲಿವಿಷನ್ ಉದ್ಯಮಕ್ಕೆ ಮಹತ್ವದ ಬೆಳವಣಿಗೆಯೊಂದರಲ್ಲಿ, ಬ್ರಾಡ್ಕಾಸ್ಟ್ ಆಡಿಯನ್ಸ್ ರಿಸರ್ಚ್ ಕೌನ್ಸಿಲ್ (BARC) ತನ್ನ ಪರವಾನಗಿ (ಲೈಸೆನ್ಸ್) ನವೀಕರಣ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ ಎಲ್ಲಾ ಟಿವಿ ಚಾನೆಲ್ಗಳ ಟೆಲಿವಿಷನ್ ರೇಟಿಂಗ್ ಪಾಯಿಂಟ್ (TRP) ಪ್ರಕಟಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ.
ಮಾಹಿತಿ ಮತ್ತು ಪ್ರಸಾರ ಸಚಿವಾಲಯ (MIB) ಜಾರಿಗೆ ತಂದಿರುವ ಹೊಸ Television Ratings Policy-2026 ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಇದರಿಂದ ಮನರಂಜನೆ, ಸುದ್ದಿ, ಕ್ರೀಡೆ, ಸಿನಿಮಾ, ಪ್ರಾದೇಶಿಕ ಹಾಗೂ ಇನ್ಫೊಟೇನ್ಮೆಂಟ್ ಸೇರಿದಂತೆ ಎಲ್ಲ ವಿಭಾಗಗಳ ವಾಹಿನಿಗಳ ವಾರದ ವೀಕ್ಷಕರ ಅಂಕಿ-ಅಂಶಗಳು ಸದ್ಯ ಲಭ್ಯವಾಗುವುದಿಲ್ಲ.

TRP ಎನ್ನುವುದು ಟಿವಿ ಕಾರ್ಯಕ್ರಮಗಳು ಮತ್ತು ವಾಹಿನಿಗಳ ವೀಕ್ಷಕರ ಸಂಖ್ಯೆಯನ್ನು ಅಳೆಯುವ ಅಧಿಕೃತ ಮಾನದಂಡವಾಗಿದೆ. ಇದೇ ಅಂಕಿ-ಅಂಶಗಳ ಆಧಾರದ ಮೇಲೆ ಜಾಹೀರಾತು ದರ ನಿಗದಿ, ಸ್ಪಾನ್ಸರ್ಶಿಪ್ ಒಪ್ಪಂದಗಳು, ಹೊಸ ಕಾರ್ಯಕ್ರಮಗಳ ಯೋಜನೆ ಹಾಗೂ ವಾಹಿನಿಗಳ ಸ್ಪರ್ಧಾತ್ಮಕ ಸ್ಥಾನಮಾನ ನಿರ್ಧಾರವಾಗುತ್ತದೆ.
TRP ಪ್ರಕಟಣೆ ಸ್ಥಗಿತಗೊಂಡಿರುವುದರಿಂದ ಜಾಹೀರಾತುದಾರರು, ಪ್ರಸಾರ ಸಂಸ್ಥೆಗಳು, ಮೀಡಿಯಾ ಏಜೆನ್ಸಿಗಳು ಹಾಗೂ ಹೂಡಿಕೆದಾರರು ನಿರ್ಧಾರ ಕೈಗೊಳ್ಳುವಲ್ಲಿ ಅನಿಶ್ಚಿತತೆಯನ್ನು ಎದುರಿಸುವ ಸಾಧ್ಯತೆ ಇದೆ. ವಾರದ TRP ಆಧರಿಸಿ ಜಾಹೀರಾತು ಬಜೆಟ್ ಹಂಚಿಕೆ ಮಾಡುವ ಬ್ರ್ಯಾಂಡ್ಗಳು ಈಗ ಪರ್ಯಾಯ ಡೇಟಾ ಹಾಗೂ ಡಿಜಿಟಲ್ ವೀಕ್ಷಕರ ಅಂಕಿ-ಅಂಶಗಳನ್ನು ಹೆಚ್ಚಾಗಿ ಅವಲಂಬಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

ವಾಹಿನಿಗಳಿಗೂ ಈ ಬೆಳವಣಿಗೆ ಸವಾಲಾಗಿ ಪರಿಣಮಿಸಿದೆ. ಹೊಸ ಧಾರಾವಾಹಿಗಳು, ರಿಯಾಲಿಟಿ ಶೋಗಳು ಹಾಗೂ ಕಾರ್ಯಕ್ರಮಗಳ ಸಮಯ ಬದಲಾವಣೆಯಂತಹ ನಿರ್ಧಾರಗಳನ್ನು ಸಾಮಾನ್ಯವಾಗಿ TRP ಆಧರಿಸಿ ಕೈಗೊಳ್ಳಲಾಗುತ್ತಿತ್ತು. ಇದೀಗ ಸಾಮಾಜಿಕ ಜಾಲತಾಣಗಳ ಪ್ರತಿಕ್ರಿಯೆ, ಡಿಜಿಟಲ್ ವೀಕ್ಷಣೆ ಹಾಗೂ ಆಂತರಿಕ ವಿಶ್ಲೇಷಣೆಗಳನ್ನೇ ಹೆಚ್ಚು ಅವಲಂಬಿಸಬೇಕಾಗಿದೆ.
ಭಾರತೀಯ ಟಿವಿ ಉದ್ಯಮದಲ್ಲಿ TRP ಪ್ರಕಟಣೆ ಈ ಹಿಂದೆ 2015ರಲ್ಲಿ BARC ವ್ಯವಸ್ಥೆ ಜಾರಿಗೆ ಬಂದ ವೇಳೆ, 2019ರಲ್ಲಿ TRAI ಹೊಸ ಟ್ಯಾರಿಫ್ ಆದೇಶದ ನಂತರ ಹಾಗೂ 2020ರಲ್ಲಿ TRP ಹಗರಣದ ಹಿನ್ನೆಲೆಯಲ್ಲಿ ಕೆಲವು ವಿಭಾಗಗಳಿಗೆ ತಾತ್ಕಾಲಿಕವಾಗಿ ಸ್ಥಗಿತಗೊಂಡಿತ್ತು. ಆದರೆ ಈ ಬಾರಿ ಸರ್ಕಾರದ ಹೊಸ ನಿಯಮಾವಳಿಯಡಿ ಪರವಾನಗಿ ನವೀಕರಣ ಕಡ್ಡಾಯವಾಗಿರುವುದರಿಂದ ಪ್ರಕಟಣೆ ನಿಲ್ಲಿಸಲಾಗಿದೆ.

BARCಗೆ ಹೊಸ ಪರವಾನಗಿ ಯಾವಾಗ ಸಿಗಲಿದೆ ಎಂಬ ಬಗ್ಗೆ ಇನ್ನೂ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ. ಹೀಗಾಗಿ TRP ವರದಿಗಳು ಯಾವಾಗ ಮರುಪ್ರಾರಂಭವಾಗಲಿವೆ ಎಂಬ ಪ್ರಶ್ನೆಗೆ ಸದ್ಯ ಸ್ಪಷ್ಟ ಉತ್ತರ ಇಲ್ಲ.
Cinema
ಆಪ್ತನ ಅಗಲಿಕೆಗೆ ಕಂಗಾಲಾದ ನಟಿ ಕೃಷಿ ತಾಪಂಡ: ಗೆಳೆಯ ವೈಶಾಕ್ ನೆನೆದು ಭಾವುಕ ಪೋಸ್ಟ್!
ಬೆಂಗಳೂರು : ಇತ್ತೀಚೆಗೆ ನಟಿ ಕೃಷಿ ತಾಪಂಡ ಅವರು ವಾಸವಿದ್ದ ಫ್ಲ್ಯಾಟ್ನಲ್ಲೇ ಅವರ ಆಪ್ತ ಗೆಳೆಯ ವೈಶಾಕ್ ಆತ್ಮಹತ್ಯೆ ಮಾಡಿಕೊಂಡಿದ್ದರು. ಇದೀಗ ಈ ಬಗ್ಗೆ ನಟಿ ಸುದೀರ್ಘ ಪೋಸ್ಟ್ ಹಂಚಿಕೊಂಡಿದ್ದಾರೆ.
“ಇಂತಹದ್ದೊಂದು ಬರಹವನ್ನು ಬರೆಯಬೇಕಾಗಿ ಬರುತ್ತದೆ ಎಂದು ನಾನು ಎಂದಿಗೂ ಊಹಿಸಿರಲಿಲ್ಲ. ನನಗೆ ಈ ಸಮಯದಲ್ಲಿ ಯಾವುದೇ ಸಾರ್ವಜನಿಕ ಹೇಳಿಕೆ ನೀಡುವ ಮಾನಸಿಕ ಶಕ್ತಿ ಇಲ್ಲದಿದ್ದರೂ, ಸುತ್ತಲೂ ಕೇಳಿಬರುತ್ತಿರುವ ನಿರಂತರ ಊಹಾಪೋಹಗಳು ಮತ್ತು ಪ್ರಶ್ನೆಗಳಿಂದಾಗಿ ಈ ಸ್ಪಷ್ಟನೆ ನೀಡುತ್ತಿದ್ದೇನೆ. ನನಗೆ ಅತ್ಯಂತ ಆಪ್ತರಾಗಿದ್ದ, ನನ್ನನ್ನು ರಕ್ಷಿಸುತ್ತಿದ್ದ ವ್ಯಕ್ತಿಯನ್ನು ಕಳೆದುಕೊಂಡ ನೋವಿನಲ್ಲಿ ನಾನಿದ್ದೇನೆ. ಈ ನಷ್ಟದಿಂದ ಹೊರಬರಲು ನನಗೆ ಸಾಧ್ಯವಾಗುತ್ತಿಲ್ಲ” ಎಂದು ಪೋಸ್ಟ್ ಮಾಡಿದ್ದಾರೆ.
“ಅವರ ಕುಟುಂಬ ಮತ್ತು ಆಪ್ತರು ಈ ದೊಡ್ಡ ನಷ್ಟವನ್ನು ಅರಗಿಸಿಕೊಳ್ಳಲು ಹೆಣಗಾಡುತ್ತಿರುವಾಗ, ನಿರಂತರವಾಗಿ ಕಥೆಗಳನ್ನು ಸೃಷ್ಟಿಸಲಾಗುತ್ತಿದೆ. ಕೆಲವು ಮಾಧ್ಯಮಗಳು ಗೌರವಯುತವಾಗಿ ನಡೆದುಕೊಂಡರೆ, ಇನ್ನು ಕೆಲವು ಕೇವಲ ರಿಯಾಕ್ಷನ್ಗಾಗಿ ಒತ್ತಾಯಿಸುತ್ತಿವೆ. ನೀವು ಹೇಗಿದ್ದೀರಾ ಎಂದು ಕೇಳುವ ಬದಲು ನಿಮ್ಮ ರಿಯಾಕ್ಷನ್ ಏನು ಎಂದು ಕೇಳುತ್ತಿದ್ದಾರೆ” ಎಂದಿದ್ದಾರೆ.
“ಇಲ್ಲಿ ಒಂದು ಕುಟುಂಬ ತನ್ನ ಮಗನನ್ನು ಕಳೆದುಕೊಂಡಿದೆ. ಸ್ನೇಹಿತರು ತಮ್ಮ ಆಪ್ತನನ್ನು ಕಳೆದುಕೊಂಡಿದ್ದಾರೆ. ಪ್ರತಿಯೊಂದು ಅನಗತ್ಯ ಪ್ರಶ್ನೆ, ಊಹೆ ಮತ್ತು ವದಂತಿಗಳು ಇಲ್ಲಿ ಉಳಿದು ನೋವು ಅನುಭವಿಸುತ್ತಿರುವವರ ಮೇಲೆ ತೀವ್ರ ಪರಿಣಾಮ ಬೀರುತ್ತವೆ. ನಮಗೆ ಶಾಂತಿಯಿಂದ ದುಃಖಿಸಲು ಬಿಡಿ” ಎಂದು ಮನವಿ ಮಾಡಿಕೊಂಡಿದ್ದಾರೆ.
“ಸದ್ಯಕ್ಕೆ ಪ್ರತಿಯೊಬ್ಬರಿಗೂ ವೈಯಕ್ತಿಕವಾಗಿ ಉತ್ತರಿಸುವ ಶಕ್ತಿ ನನಗಿಲ್ಲ. ಆದರೆ ನಿಮ್ಮ ಪ್ರೀತಿ ಮತ್ತು ಕಾಳಜಿಗೆ ನಾನು ಚಿರಋಣಿ. ಯಾರಿಗಾದರೂ ಬದುಕಲು ಕಾರಣ ನೀಡಲು ಸಾಧ್ಯವಾಗದಿದ್ದರೆ, ಕನಿಷ್ಠ ಅವರು ಭರವಸೆ ಕಳೆದುಕೊಳ್ಳುವಂತೆ ಮಾಡಬೇಡಿ. ದಯವಿಟ್ಟು ಎಲ್ಲರೂ ದಯೆ ಮತ್ತು ಕರುಣೆಯನ್ನು ಆಯ್ಕೆ ಮಾಡಿಕೊಳ್ಳಿ. ದಯವಿಟ್ಟು ಇದನ್ನು ಇಷ್ಟಕ್ಕೇ ನಿಲ್ಲಿಸಿ” ಎಂದು ಕೇಳಿಕೊಂಡಿದ್ದಾರೆ.
-
State11 hours agoಚೆನ್ನಮ್ಮ ಅಂತ್ಯಕ್ರಿಯೆ: ವಿಡಿಯೋ ಕಾನ್ಫರೆನ್ಸ್ ಮೂಲಕ ಭಾಗವಹಿಸಲು ಪ್ರಜ್ವಲ್ ರೇವಣ್ಣಗೆ ಅನುಮತಿ
-
Kodagu6 hours agoಮುಖ್ಯಮಂತ್ರಿಗಳ ಕಾರ್ಯದರ್ಶಿಯಾಗಿ ಕುಶಾಲನಗರದ ಐಎಎಸ್ ಅಧಿಕಾರಿ ಎಸ್.ಎಸ್. ನಕುಲ್ ನೇಮಕ
-
Hassan5 hours agoಪಂಚಭೂತಗಳಲ್ಲಿ ಲೀನರಾದ ಚೆನ್ನಮ್ಮ ದೇವೇಗೌಡ
-
National11 hours agoಇಂದಿನಿಂದ ಸಂಸತ್ ಮುಂಗಾರು ಅಧಿವೇಶನ ಆರಂಭ
-
Kodagu23 hours ago“ಭಾಗಮಂಡಲ ಕಾಮಗಾರಿಗೆ ₹3 ಕೋಟಿ: ಪೊನ್ನಣ್ಣ ಕೋರಿಕೆಗೆ ಅನುದಾನ”
-
Politics3 hours agoಬಿಡದಿ ಟೌನ್ಶಿಪ್ ಭೂಸ್ವಾಧೀನಕ್ಕೆ ಹೈಕೋರ್ಟ್ ಗ್ರೀನ್ ಸಿಗ್ನಲ್; PIL ವಜಾ
-
Chikmagalur3 hours agoಕಂಬಳದ ಕೆಸರುಗದ್ದೆಯಂತಾದ ಕೋಳೂರು ರಸ್ತೆ: ಶಾಲಾ ಮಕ್ಕಳ ಹರಸಾಹಸ, ಪಂಚಾಯತ್ ನಿರ್ಲಕ್ಷ್ಯಕ್ಕೆ ಆಕ್ರೋಶ
-
Hassan11 hours agoಚೆನ್ನಮ್ಮ ಅಂತಿಮ ದರ್ಶನಕ್ಕೆ ಪ್ರಜ್ವಲ್ ಬರಲ್ಲ:
