Mysore
ಎಲ್ಲಾ ಪಕ್ಷದವರ ಮೇಲೂ ಹನಿಟ್ರ್ಯಾಪ್ ಪ್ರಯತ್ನ ನಡೆದಿದೆ: ಯತೀಂದ್ರ ಸಿದ್ದರಾಮಯ್ಯ
ಹನಿ ಟ್ರ್ಯಾಪ್ ವಿಚಾರ.
ಮೈಸೂರಿನಲ್ಲಿ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ.
ಸದನದಲ್ಲಿ ನಮ್ಮ ಪಕ್ಷದ ಸಚಿವ ರಾಜಣ್ಣ ಪ್ರಸ್ತಾಪ ಮಾಡಿದ್ದಾರೆ.
ಎಲ್ಲಾ ಪಕ್ಷದ ಶಾಸಕರು ಹಾಗೂ ಸಚಿವರ ಮೇಲೆ ಹನಿಟ್ರ್ಯಾಪ್ ಪ್ರಯತ್ನ ನಡೆದಿದೆ.
ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸೇರಿದಂತೆ 17 ಜನ ಶಾಸಕರು ಹಾಗೂ ಸಚಿವರ ಹನಿಟ್ರ್ಯಾಪ್ ವಿಡಿಯೋ ಇದೆ.
ಮಾಧ್ಯಮಗಳಲ್ಲಿ ವಿಡಿಯೋ ಪ್ರಸಾರ ಆಗದಂತೆ ಕೋರ್ಟ್ ನಿಂದ ಇನ್ಜೆಕ್ಷನ್ ಆರ್ಡರ್ ತಂದಿದ್ದಾರೆ.
ಆಗ ಬಿಜೆಪಿ ಅವರೇ ಈ ರೀತಿ ಹನಿ ಟ್ರ್ಯಾಪ್ ಮಾಡಿದ್ದಾರೆ ಎಂಬ ಆರೋಪ ಬಂದಿತ್ತು.
ರಾಜಣ್ಣ ಅವರು ಇಂತಹ ಪಕ್ಷದವರೇ ಹನಿಟ್ರ್ಯಾಪ್ ಮಾಡಿದ್ದಾರೆ ಎಂದು ಎಲ್ಲಿಯೂ ಹೇಳಿಲ್ಲ.
ರಾಜಣ್ಣ ದೂರು ಕೊಟ್ಟರೇ ತನಿಖೆ ಮಾಡಿಸಿ ಶಿಕ್ಷೆ ಕೊಡಿಸುತ್ತೇವೆ.
ಸರ್ಕಾರ ಬೀಳಿಸಲು ಹನಿಟ್ರ್ಯಾಪ್ ನಡೆದಿದೆ ಎಂದು ಹೇಳಲು ಸಾಧ್ಯವಿಲ್ಲ.
ಹಿಂದೆ ಬಿಜೆಪಿ ಸರ್ಕಾರದಲ್ಲೂ ಹನಿಟ್ರ್ಯಾಪ್ ನಡೆದಿದೆ.
ಈಗಲೂ ಇಂತಹ ಪ್ರಯತ್ನ ನಡೆದಿದೆ.
ಇದರ ಹಿಂದೆ ದೊಡ್ಡ ಜಾಲವೇ ಇದೆ.
ತನಿಖೆಯ ಮೂಲಕವೇ ಜಾಲವನ್ನ ಪುತ್ರ ಹಚ್ಚಬೇಕಿದೆ.
ತಪ್ಪಿತಸ್ಥರಿಗೆ ಶಿಕ್ಷೆಯಾಗಲೇಬೇಕು.
ರಾಜಕಾರಣಿಗಳಿಗೆ ಎಷ್ಟೋ ಜನರು ಫೋನ್ ಮಾಡ್ತಾರೆ.
ನನಗೂ ಇಡೀ ರಾಜ್ಯದಿಂದ ಎಷ್ಟೋ ಜನರು ಫೋನ್ ಮಾಡ್ತಾರೆ.
ಕಲೆವೊಂದು ಭಾರಿ ಯಾರು ಅಂಥ ಗೊತ್ತಿಲ್ಲದಿದ್ದರೂ ಫೋನ್ ತೆಗೆಯುತ್ತೇನೆ.
ತಂತ್ರಜ್ಞಾನವನ್ನ ದುರುಪಯೋಗವಾಗುತ್ತಿದೆ.
ವಿಡಿಯೋ ಕಾಲ್ ಆನ್ ಮಾಡಿದ ತಕ್ಷಣ
ಎಐ ಮೂಲಕ ತಪ್ಪು ವಿಡಿಯೋ ಕಳುಹಿಸಲಾಗುತ್ತಿದೆ.
ಹನಿ ಟ್ರ್ಯಾಪ್ ಮೂಲಕ ಬ್ಲ್ಯಾಕ್ ಮೇಲೆ ಮಾಡುವವರಿಗೆ ತಕ್ಕ ಶಿಕ್ಷೆಯಾಗಬೇಕು.
ಹಣ ಹಾಗೂ ಕೆಲಸ ಮಾಡಿಸಿಕೊಳ್ಳುವ ಉದ್ದೇಶದಿಂದ ಹನಿ ಟ್ರ್ಯಾಪ್ ಮಾಡುತ್ತಿದ್ದಾರೆ.
ರಾಜಣ್ಣ ಯಾರ ಮೇಲೂ ಆರೋಪ ಮಾಡಿಲ್ಲ.
ತನಿಖೆಯಿಂದಷ್ಟೇ ಸತ್ಯಾಸತ್ಯತೆ ಹೊರಬರಬೇಕು.
ಇವರೇ ಮಾಡಿದ್ದಾರೆಂದು ಬಿಜೆಪಿ ಪಕ್ಷ ಯಾಕೆ ಊಹೇ ಮಾಡಬೇಕು.
ಬಿಜೆಪಿ ಪಕ್ಷದವರದ್ದೇ ಸಿಡಿ ಮಾಡಿ ಇಟ್ಟುಕೊಂಡಿದ್ದಾರೆ ಎಂಬುದು ಎಲ್ಲರಿಗೂ ಗೊತ್ತಿದೆ.

ಸಿದ್ದರಾಮಯ್ಯ ಪರವಾದ ಶಾಸಕರನ್ನ ಹನಿ ಟ್ರ್ಯಾಪ್ ಮಾಡುತ್ತಿರುವ ವಿಚಾರ.
ಮೈಸೂರಿನಲ್ಲಿ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ.
ಬಿಜೆಪಿ ಶಾಸಕರ ಮೇಲೂ ಹನಿ ಟ್ರ್ಯಾಪ್ ಪ್ರಯತ್ನ ನಡೆದಿದೆ.
ಹಿಂಗತ ಮಾತ್ರಕ್ಕೆ ಬಿಜೆಪಿ ಶಾಸಕರು ನಮ್ಮ ತಂದೆ ಪರವಾಗಿ ಇದ್ದಾರೆ ಅಂತಲ್ಲ.
ಈ ಜಾಲಾದ ಬಗ್ಗೆ ತನಿಖೆಯಾಗಲಿ ಎಂದಷ್ಟೇ ರಾಜಣ್ಣ ಹೇಳಿದ್ದಾರೆ.
ರಾಜಣ್ಣ ಮಾತ್ರ ಅಲ್ಲಾ ಬಿಜೆಪಿ ಶಾಸಕರು ಕೂಡ ಹನಿ ಟ್ರ್ಯಾಪ್ ಗೆ ಟಾರ್ಗೆಟ್ ಆಗುತ್ತಿದ್ದಾರೆ.
ರಾಜಣ್ಣ ಎಲ್ಲಿಯೂ ಹನಿ ಟ್ರ್ಯಾಪ್ ನಾನು ಬಲಿಯಾಗಿದ್ದೇನೆಂದು ಹೇಳಿಲ್ಲ.
ಹನಿ ಟ್ರ್ಯಾಪ್ ಪ್ರಯತ್ನ ನನ್ನ ಮೇಲೆ ನಡೆದಿದೆ ಎಂದಷ್ಟೇ ಹೇಳಿದ್ದಾರೆ.
ಅವರ ಮಗ ಕೂಡ ನನ್ನ ಮೇಲೆ ಹನಿ ಟ್ರ್ಯಾಪ್ ಪ್ರಯತ್ನ ನಡೆದಿದೆ ಅಂಥ.
ಸಾರ್ವಜನಿಕ ರೀತಿಯಲ್ಲಿ ಬಂದು ಹನಿ ಟ್ರ್ಯಾಪ್ ಪ್ರಯತ್ನ ನಡೆದಿದೆ ಎಂದು ರಾಜಣ್ಣ ಹೇಳಿದ್ದಾರೆ.
ಮನೆಗೆ ಬಂದ ಸಾರ್ವಜನಿಕರನ್ನ ಮಾತನಾಡಿದಿರಲು ಆಗುತ್ತಾ.
ಆ ರೀತಿಯಾಗಿ ಹನಿ ಟ್ರ್ಯಾಪ್ ಪ್ರಯತ್ನ ನಡೆದಿದೆ ಎಂದು ಹೇಳಿದ್ದಾರೆ.
ಹೈ ಕಮಾಂಡ್ ಗೆ ಹನಿ ಟ್ರ್ಯಾಪ್ ವಿಚಾರ ಖಂಡಿತವಾಗಿ ತಿಳಿದಿದೆ.
ಮೈಸೂರಿನಲ್ಲಿ ಸ್ಪೋಟಕ ಮಾಹಿತಿ ಬಿಚ್ಚಿಟ್ಟ ಯತೀಂದ್ರ ಸಿದ್ದರಾಮಯ್ಯ.
ಸಿಎಂ ಹಾಗೂ ನಮ್ಮ ಪಕ್ಷದ ಮುಖಂಡರು ಹೈ ಕಮಾಂಡ್ ಗೆ ಈ ವಿಚಾರವನ್ನ ತಿಳಿಸುತ್ತಾರೆ.
ಕೇಂದ್ರದ ನಾಯಕರಿಗೆ ನಮ್ಮ ನಾಯಕರು ದೂರು ಕೊಟ್ಟಿರುವ ಬಗ್ಗೆ ಗೊತ್ತಿಲ್ಲ.
ರಾಜಣ್ಣ ಸಹ ದೆಹಲಿಗೆ ಹೋಗಿ ದೂರು ಕೊಡಬಹುದು.
ಯಾರದರೂ ಅವರ ಮೇಲೆ ಟಾರ್ಗೆಟ್ ಮಾಡಿದ್ರೆ ಅವರ ಮೇಲೆ ದೂರು ಕೊಡಲಿ.

ಹನಿಟ್ರ್ಯಾಪ್ ಡಿ.ಕೆ ಶಿವಕುಮಾರ್ ಮಾಡಿಸಿದ್ದಾರೆ ಎಂಬ ಆರೋಪ ವಿಚಾರ.
ಡಿ.ಕೆ ಶಿವಕುಮಾರ್ ಪರವಾಗಿ ಬ್ಯಾಟ್ ಬೀಸಿದ ಯತೀಂದ್ರ ಸಿದ್ದರಾಮಯ್ಯ.
ಡಿ.ಕೆ ಶಿವಕುಮಾರ್ ಪಾತ್ರ ಇದರಲ್ಲಿ ಇಲ್ಲ.
ನಮ್ಮ ಪಕ್ಷದವರು ಇಂತಹವರೇ ಮಾಡಿಸಿದ್ದಾರೆ ಎಂದು ಎಲ್ಲಿಯೂ ಹೇಳಿಲ್ಲ.
ಡಿ.ಕೆ ಶಿವಕುಮಾರ್ ಹೆಸರನ್ನ ಯಾರು ತೆಗೆದುಕೊಂಡಿಲ್ಲ.
ಬಿಜೆಪಿ ಪಕ್ಷದ 17 ಶಾಸಕರು ಇಂಜೆಕ್ಷನ್ ಆರ್ಡರ್ ತಂದಿದ್ದಾರೆ.
ಆಗ ಯಾರು ಹನಿ ಟ್ರ್ಯಾಪ್ ಮಾಡಿದ್ದು.
ಬಿಜೆಪಿಯವರಿಗೆ ನಮ್ಮ ಪಕ್ಷದ ಬಗ್ಗೆ ಮಾತನಾಡಲು ಯಾವುದೇ ನೈತಿಕ ಹಕ್ಕಿಲ್ಲ.
ಸಚಿವರ ಮನೆಗೆ ಸಿಸಿಟಿವಿ ಇಲ್ಲದ ವಿಚಾರ.
ಸಚಿವರ ಮನೆಗಳಿಗೆ ಸಿಸಿಟಿವಿ ಇಲ್ಲದ ವಿಚಾರ ನನಗೆ ಗೊತ್ತಿಲ್ಲ.
ಸಿಎಂ ಮನೆಗೆ ಸಿಸಿಟಿವಿ ಇದೆ.
ನಾನು ಅಲ್ಲೇ ಇರುವುದರಿಂದ ಸಿಸಿಟಿವಿ ಇರುವ ಬಗ್ಗೆ ನನಗೆ ಗೊತ್ತಿದೆ, ಬೇರೆಯ ಮನೆಯ ವಿಚಾರ ನನಗೆ ಗೊತ್ತಿಲ್ಲ.
ಸಿಎಂ ಮನೆಗೆ ಪೊಲೀಸ್ ಬಂದೂಬಸ್ತ್ ಕ
ಸಹ ಇದೆ, ಯಾರೇ ಬಂದರೂ ರೆಕಾರ್ಡ್ ಆಗುತ್ತೆ.
ಸಚಿವರ ಮನೆಗೆ ಖಂಡಿತವಾಗಿ ಸಿಸಿಟಿವಿ ಹಾಕಬೇಕು.
ಸಿಸಿಟಿವಿ ಇದ್ದರೇ ಹನಿ ಟ್ರ್ಯಾಪ್ ಮಾಡುವವರ ಮೇಲೆ ಕಣ್ಣಿಡಬಹುದು.

ಸದನದಲ್ಲಿ ಕಾಂಗ್ರೆಸ್ ನಾಯಕರು ಯತ್ನಾಳಗೆ ಚೀಟಿ ಕೊಟ್ಟ ವಿಚಾರ.
ಚೀಟಿ ಕೊಟ್ಟಿದ್ದು ಯಾರು ಎಂಬುದು ಗೊತ್ತಿಲ್ಲ.
ನಮ್ಮ ನಾಯಕರು ಸದನದಲ್ಲಿ ಮಾತನಾರಿವುದು ಮಾತ್ರ ಗೊತ್ತಿದೆ.
ಅದರ ಬಗ್ಗೆ ಮಾತ್ರ ನಾನು ಮಾತನಾಡುತ್ತೇನೆ.
ಹನಿಟ್ರ್ಯಾಪ್ ಹಾಗೂ ಫೋನ್ ಟ್ಯಾಪ್ ವಿಚಾರ ಸರ್ಕಾರಕ್ಕೆ ಕಪ್ಪು ಚುಕ್ಕೆ ಎಂಬ ವಿಚಾರ.
ಬಿಜೆಪಿಯ ಸಂತ್ರಸ್ಥ ಶಾಸಕರು ಕೋರ್ಟ್ ಗೆ ಹೋಗಿ ಇಂಜೆಕ್ಷನ್ ತಂದಿದ್ದಾರೆ.
ಬಿಜೆಪಿ ಪಕ್ಷದ ಶಾಸಕರ ವಿಡಿಯೋ ಮಾಡಿರುವುದು ಅವರದ್ದೇ ಪಕ್ಷದವರು ಎಂಬುದು ಎಲ್ಲರಿಗೂ ಗೊತ್ತಿದೆ.
ಇಷ್ಟೇಲ್ಲಾ ಇದ್ದರೂ ನಮ್ಮ ಪಕ್ಷದ ಮೇಲೆ ಯಾಕೆ ಈ ರೀತಿ ಮಾತನಾಡುತ್ತಾರೆ ಗೊತ್ತಿಲ್ಲ.
ಫೋನ್ ಟ್ಯಾಪಿಂಗ್ ವಿಚಾರ.
ಕೇಂದ್ರ ಸರ್ಕಾರವೇ ಫೋನ್ ಟ್ಯಾಪ್ ಮಾಡುತ್ತೆ ಎಂಬ ಆರೋಪ ಇದೆ.
ಕೇಂದ್ರ ಸರ್ಕಾರದ ಮೇಲೆ ಗಂಭೀರ ಆರೋಪ ಮಾಡಿದ ಯತೀಂದ್ರ ಸಿದ್ದರಾಮಯ್ಯ.
ಕೇಂದ್ರ ಸರ್ಕಾರ ಫೆಗಾಸಿಸ್ ಅನ್ನೋ ಸಾಫ್ಟ್ವೇರ್ ನ್ನ ಇಸ್ರೇಲ್ ನಿಂದ ದುಡ್ಡು ಕೊಟ್ಟು ಖರೀದಿ ಮಾಡಿರುವ ಆರೋಪ ಇದೆ.
ಇದರ ಬಗ್ಗೆ ತನಿಖೆನೇ ಆಗಿಲ್ಲ.
ಇಡೀ ದೇಶದಲ್ಲಿ ನಾಯಕರ ಮೇಲೆ ಫೋನ್ ಟ್ಯಾಪ್ ಮಾಡುತ್ತಿದೆ ಎಂಬ ಆರೋಪ ಇದೆ.
ಇದರ ಬಗ್ಗೆ ಬಿಜೆಪಿ ಮಾತನಾಡುತ್ತಿಲ್ಲ.
ಫೋನ್ ಟ್ಯಾಪ್ ವಿಚಾರದಲ್ಲಿ ಯಾರಿಗಾದ್ರು ಅನುಮಾನ ಇದ್ರೆ ದೂರು ಕೊಡಲಿ ತನಿಖೆ ನಡೆಸುತ್ತೇವೆ.ಕುಮಾರಸ್ವಾಮಿ ಸಿಎಂ ಆಗಿದ್ದಾಗಲೂ ಇದೇ ಆರೋಪ ಬಂದಿತ್ತು.
ಪೊಲೀಸ್ ಇಲಾಖೆಯ ಡಿಜಿಪಿ ಮೇಲೆ ಈ ರೀತಿಯ ಆರೋಪ ಬಂದಿತ್ತು.
ಪ್ರತಿ ಸರ್ಕಾರದಲ್ಲೀ ಈ ರೀತಿ ಆರೋಪ ಮಾಡುತ್ತಿರುತ್ತಾರೆ.
ತನಿಖೆಯಿಂದ ಮಾತ್ರ ಇದು ಗೊತ್ತಾಗುತ್ತದೆ.
ಪೋನ್ ಟ್ಯಾಪ್ ಮಾಡಲು ಸಾಧ್ಯಾನ ಎಂಬ ಪ್ರಶ್ನೆಗೆ ಇರಬಹುದು ಎಂದು ಯತೀಂದ್ರ ಸಿದ್ದರಾಮಯ್ಯ.

ನಮ್ಮ ತಂದೆಯವರು ಎಲ್ಲಿ ತನಕ ಸಿಎಂ ಆಗಿರುತ್ತಾರೆ ಅಲ್ಲಿವರೆಗೆ ಸಚಿವ ಸ್ಥಾನ ಕೇಳಲ್ಲ.
ಮೈಸೂರಿನಲ್ಲಿ ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟನೆ.
ನಾನು ಸಚಿವ ಸ್ಥಾನದ ಆಕಾಂಕ್ಷೆಯಲ್ಲ.
ಸಂವಿಧಾನ ಬದಲಾವಣೆ ವಿಚಾರವಾಗಿ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆ ವಿಚಾರ.
ಬಿಜೆಪಿಯವರಿ ಏನು ವಿಷಯ ಇಲ್ಲ.
ಡಿ.ಕೆ.ಶಿವಕುಮಾರ್ ಈಗಾಗಲೇ ಸ್ಪಷ್ಟನೆ ಕೊಟ್ಟಿದ್ದಾರೆ.
ಇಂಗ್ಲೀಷ್ ಅವರ ಮಾತ್ರ ಭಾಷೆ ಅಲ್ಲ.
ಅದ್ದರಿಂದ ಅವರು ಹೇಳಬೇಕಾದ ವಿಚಾರ ಸರಿಯಾಗಿ ಹೇಳಲು ಆಗಿಲ್ಲ ಅಷ್ಟೆ.
ಸಂವಿಧಾನ ರಕ್ಷಣೆ ಮಾಡಲು ಕಾಂಗ್ರೆಸ್ ಹೋರಾಟ ಮಾಡಿಕೊಂಡು ಬಂದಿದೆ.
ನಾವು ಸಂವಿಧಾನ ಬದಲಾಯಿಸುವ ಪ್ರಯತ್ನ ಮಾಡಲ್ಲ.
ಸಂವಿಧಾನ ಬದಲಾವಣೆ ವಿಚಾರವಾಗಿ ಬಿಜೆಪಿ ಅವರು ಹೇಳಿಕೆ ಕೊಟ್ಟ ಮೇಲೆ ಸ್ಪಷ್ಟನೆ ಕೊಟ್ಟಿಲ್ಲ.
ಅನಂತ್ ಕುಮಾರ್ ಹೆಗಡೆ ಹೇಳಿಕೆ ಕೊಟ್ಟ ನಂತರ ಸ್ಪಷ್ಟನೆ ಕೊಡುವ ಕೆಲಸ ಮಾಡಿಲ್ಲ.
ಆದರೆ ಡಿಕೆಶಿ ಸ್ಪಷ್ಟನೆಕೊಟ್ಟಿದ್ದಾರೆ.
ಆದ್ರ ಬಿಜೆಪಿಯವರಿಗೆ ಕೆಲಸ ಇಲ್ಲದೆ ಈ ರೀತಿ ಮಾಡುತ್ತಿದ್ದಾರೆ.
ಮೈಸೂರಿನಲ್ಲಿ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ.

ಮುಸ್ಲಿಂ ಸಮುದಾಯಕ್ಕೆ 4 % ಮೀಸಲಾತಿ ನೀಡಿದ ವಿಚಾರ.
ನಾವು ಧರ್ಮದ ಆದರ ಮೇಲೆ ಮೀಸಲಾತಿ ಕೊಟ್ಟಿಲ್ಲ.
ಹಿಂದುಳಿದ ವರ್ಗ ಅನ್ನೋ ಕಾರಣಕ್ಕೆ ಕೊಟ್ಟಿದ್ದೇವೆ.
ಹಿಂದುಳಿದ ವರ್ಗಕ್ಕೆ ಮೀಸಲಾತಿ ಕೊಟ್ಟಾಗ ಮುಸ್ಲಿಂರಿಗು ಕೊಡಬೇಕಾಗುತ್ತೆ.
ಮುಸ್ಲಿಂ ಮೀಸಲಾತಿ ಕರ್ನಾಟಕ ಮಾತ್ರವಲ್ಲದೆ ಬೇರೆ ರಾಜ್ಯದಲ್ಲು ಇದೆ.
ನಾವು ಕೇವಲ ಮುಸ್ಲಿಂರಿಗೆ ಮಾತ್ರ ಮೀಸಲಾತಿ ಕೊಟ್ಟಿಲ್ಲ.
1977 ರಲ್ಲೆ ಹಾವನೂರು ಆಯೋಗ ಮುಸ್ಲಿಂರನ್ನ ಹಿಂದುಳಿದ ವರ್ಗಕ್ಕೆ ಸೇರಿಸಿದೆ.
ಹಿಂದುಳಿದ ವರ್ಗಕ್ಕೆ ಕೊಟ್ಟಾಗ ಮುಸ್ಲಿಂರಿಗು ಕೊಡಬೇಕಾಗುತ್ತೆ.
ಮುಸ್ಲಿಂ ಸಮುದಾಯ 70 ಜಾತಿಗೆ ಮೀಸಲಾತಿ ಕೊಟ್ಟಿದ್ದೇವೆ ಎಂದು ಪ್ರಧಾನಿ ಮೋದಿಯವರು ಹೆಮ್ಮೆಯಿಂದ ಹೇಳಿದ್ದಾರೆ.
ಮೋದಿಯವರು ಮಾಡಿದರೆ ಸರಿ ನಾವು ಮಾಡಿದ್ರೆ ತಪ್ಪಾಗುತ್ತಾ.
ಬಿಜೆಪಿ ನಾಯಕರ ಹೇಳಿಕೆ ಯತೀಂದ್ರ ಸಿದ್ದರಾಮಯ್ಯ ತಿರುಗೇಟು.
ಹನಿ ಟ್ರ್ಯಾಪ್ ವಿಚಾರ
ಮೈಸೂರಿನಲ್ಲಿ ಹೊಸ ಬಾಂಬ್ ಹಾಕಿದ ಯತೀಂದ್ರ ಸಿದ್ದರಾಮಯ್ಯ.
ಬಿಜೆಪಿಯಲ್ಲೇ ಹನಿ ಟ್ರ್ಯಾಪ್ ಗಳು ನಡೆದಿವೆ.
ಬಿಜೆಪಿಯವರ ವಿಡಿಯೋವನ್ನ ಬಿಜೆಪಿಯವರೇ ಮಾಡಿಕೊಂಡು ಇಟ್ಟಿದ್ದಾರೆ.
ಹೀಗಾಗಿಯೇ ಬಿಜೆಪಿ ಶಾಸಕರು ಮಾಜಿ ಸಿಎಂ ಕೋರ್ಟ್ ನಲ್ಲಿ ಸ್ಟೇ ತಂದಿದ್ದಾರೆ.
ಈ ಬಗ್ಗೆ ಬಿಜೆಪಿಯವರಿಗೆ ನಮ್ಮ ನಾಯಕರಗಳು ಬಗ್ಗೆ ಮಾತನಾಡಲು ಏನು ಹಕ್ಕಿದೆ.
ಮೈಸೂರಿನಲ್ಲಿ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿಕೆ.

ಸಚಿವರ ಮನೆಗೆ ಸಿಸಿಟಿವಿ ಹಾಕದ ವಿಚಾರ.
ಕೆಲವರು ಹನಿ ಟ್ರ್ಯಾಪ್ ಮಾಡಲೆಂದೇ ಸಚಿವರ ಮನೆಗೆ ಬರುತ್ತಾರೆ.
ಈಗಾಗಿ ಸಿಸಿಟಿವಿ ಹಾಕಿಸಬೇಕು.
ಸಚಿವರ ಮನೆಗಳಿಗೆ ಸಿಸಿಟಿವಿ ಇಲ್ಲದ ವಿಚಾರ ನನಗೆ ಗೊತ್ತಿಲ್ಲ.
ಸಿಎಂ ಮನೆಗೆ ಸಿಸಿಟಿವಿ ಇದೆ.
ನಾನು ಅಲ್ಲೇ ಇರುವುದರಿಂದ ಸಿಸಿಟಿವಿ ಇರುವ ಬಗ್ಗೆ ನನಗೆ ಗೊತ್ತಿದೆ, ಬೇರೆಯವರ ಮನೆಯ ವಿಚಾರ ನನಗೆ ಗೊತ್ತಿಲ್ಲ.
ಸಿಎಂ ಮನೆಗೆ ಪೊಲೀಸ್ ಬಂದೂಬಸ್ತ್
ಸಹ ಇದೆ, ಯಾರೇ ಬಂದರೂ ರೆಕಾರ್ಡ್ ಆಗುತ್ತೆ.
ಸಚಿವರ ಮನೆಗೆ ಖಂಡಿತವಾಗಿ ಸಿಸಿಟಿವಿ ಹಾಕಬೇಕು.
ಸಿಸಿಟಿವಿ ಇದ್ದರೇ ಹನಿ ಟ್ರ್ಯಾಪ್ ಮಾಡುವವರ ಮೇಲೆ ಕಣ್ಣಿಡಬಹುದು.
ಸದನದಲ್ಲಿ ಕಾಂಗ್ರೆಸ್ ನಾಯಕರು ಯತ್ನಾಳಗೆ ಚೀಟಿ ಕೊಟ್ಟ ವಿಚಾರ.
ಚೀಟಿ ಕೊಟ್ಟಿದ್ದು ಯಾರು ಎಂಬುದು ಗೊತ್ತಿಲ್ಲ.
ನಮ್ಮ ನಾಯಕರು ಸದನದಲ್ಲಿ ಮಾತನಾರಿವುದು ಮಾತ್ರ ಗೊತ್ತಿದೆ.
ಅದರ ಬಗ್ಗೆ ಮಾತ್ರ ನಾನು ಮಾತನಾಡುತ್ತೇನೆ.
Mysore
ಸಿಎಂ ಸಿದ್ದರಾಮಯ್ಯ ಕೂಡ ಪ್ರೊ. ನಂಜುಂಡಸ್ವಾಮಿ ಗರಡಿಯಲ್ಲಿ ಬೆಳೆದವರು : MLC ಡಾ. ಯತೀಂದ್ರ ಸಿದ್ದರಾಮಯ್ಯ
ವರದಿ: ಮಹದೇವಸ್ವಾಮಿ ಪಟೇಲ್
ನಂಜನಗೂಡು: ಪ್ರೊ. ನಂಜುಂಡಸ್ವಾಮಿಯವರು ಹಲವಾರು ನಾಯಕರನ್ನು ಗುರುತಿಸಿ ಬೆಳೆಸಿದವರು.ಮುಖ್ಯ ಮಂತ್ರಿ ಸಿದ್ದರಾಮಯ್ಯ ನವರು ಅವರ ಗರಡಿ ಯಲ್ಲಿ ಬೆಳೆದು ಬಂದವರು.ದೇಶದ ಬಹುಸಂಖ್ಯಾತ ರು ಇಂದು ಕೃಷಿಯನ್ನೆ ಅವಲಂಬಿಸಿದ್ದಾರೆ. ಆದ್ದರಿಂದ ಅವರನ್ನು ನಿರ್ಲಕ್ಷಿಸಲು ಸಾಧ್ಯವಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ ಹೇಳಿದರು.
ಇಂದು ತಾಲೂಕಿನ ತಾಂಡವಪುರ ಗ್ರಾಮದ ಶ್ರೀ ಮಾರಮ್ಮನವರ ದೇವಸ್ಥಾನದ ಆವರಣದಲ್ಲಿ ಶುಕ್ರವಾರ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ವತಿಯಿಂದ ಪ್ರೊ. ನಂಜುಂಡಸ್ವಾಮಿ ಅವರ 90ನೇ ಹುಟ್ಟು ಹಬ್ಬದ ಅಂಗವಾಗಿ ಸ್ಥಳೀಯ ಶಾಸಕಾಂಗ ಹಾಗೂ ರೈತ, ದಲಿತ ಮುಖಂಡರ ರೈತ ಸ್ನೇಹಿ ಮುಖಾಮುಖಿ ಭೇಟಿ ಸಮಾವೇಶದಲ್ಲಿ ಮಾತನಾಡುತ್ತಾ ಇಂದು ರೈತ ಸಂಘಟನೆಗಳು ಪ್ರಬಲವಾಗಿ ಬೆಳೆದಿವೆ ಎಂದರೆ ಅದಕ್ಕೆ ಕಾರಣ ಪ್ರೋಪೆಸರ್ ನಂಜುಂಡಸ್ವಾಮಿಯವರು.

ರೈತರ ಪರ ದೂರ ದೃಷ್ಟಿ ಯುಳ್ಳ, ಹಾಗು ಸಾಮಾಜಿಕ ಕಳಕಳಿ ಇದ್ದ ನಂಜುಂಡಸ್ವಾಮಿಯವರು ಹಲವಾರು ನಾಯಕರನ್ನ ಗುರುತಿಸಿ ಬೆಳೆಸಿದವರು.ಅವರ ಗರಡಿಯಲ್ಲಿ ಬೆಳೆದ ಅನೇಕ ರು ಇಂದು ವಿವಿದ ಪಕ್ಷಗಳಲ್ಲಿ ಉನ್ನತ ಸ್ಥಾನ ವನ್ನ ಹೊಂದಿದ್ದಾರೆ, ಮುಖ್ಯ ಮಂತ್ರಿ ಸಿದ್ದರಾಮಯ್ಯ ನವರು ಅವರ ಗರಡಿ ಯಲ್ಲಿ ಬೆಳೆದು ಬಂದವರು.ದೇಶದ ಬಹುಸಂಖ್ಯಾತ ರು ಇಂದು ಕೃಷಿಯನ್ನೆ ಅವಲಂಬಿಸಿದ್ದಾರೆ. ಆದ್ದರಿಂದ ಅವರನ್ನು ನಿರ್ಲಕ್ಷಿಸಲು ಸಾಧ್ಯವಿಲ್ಲ.
ರೈತರ ಬೆಳೆಗೆ ವೈಜ್ಞಾನಿಕ ಬೆಲೆ ನೀಡುವುದು ಆಳುವ ಸರಕಾರಗಳ ಕರ್ತವ್ಯ, ನಮ್ಮ ಮುಖ್ಯ ಮಂತ್ರಿ ಸಿದ್ದರಾಮಯ್ಯ ನವರ ಸರಕಾರ ಬಸವಣ್ಣನವರ ಕಾಯಕದ ಮೇಲೆನಿಂತಿರುವ ಸರಕಾರ ,ಸದಾ ರೈತರ ಪರ ದುಡಿಯುತ್ತಿದೆ. ಮಾಜಿ ಪ್ರದಾನಿ ದಿವಂಗತ ಮನಮೋಹನ ಸಿಂಗ್ ಅವರು ಬರಗಾಲದಲ್ಲಿ ಗುಳೆ ಹೋಗುವುದನ್ನು ತಪ್ಪಿಸಲು ಮನ್ರೆಗಾ ಯೋಜನೆಯನ್ನು ಜಾರಿಗೆ ತಂದು ಗ್ರಾಮೀಣ ಜನರು ಯಾವುದೆ ಪ್ರದೇಶದಲ್ಲಿ ಕೂಡ ದುಡಿಮೆ ಮಾಡುವ ಅವಕಾಶ ನೀಡಿತ್ತು. ಆದರೆ ಇಂದಿನ ಕೇಂದ್ರ ಸರಕಾರ ಅದನ್ನು ಬದಲಿಸಿ ನಿರ್ದಿಷ್ಟ ಪ್ರದೇಶಗಳಲ್ಲಿ ಮಾತ್ರ ಕೆಲಸ ಮಾಡುವಂತೆ ನಿರ್ಬಂಧ ಮಾಡಿರುವುದಲ್ಲದೆ, ಪಂಚಾಯಿತಿ ಮಟ್ಟದಲ್ಲಿ ಮಾಡುವ ನಿರ್ಧಾರವನ್ನು ತಾನೇ ಮಾಡುವ ಮೂಲಕ ಗ್ರಾಮಪಂಚಾಯತ ಹಕ್ಕುಗಳನ್ನು ಮೊಟಕು ಗೊಳಿಸಿದೆ. ಕೃಷಿ ಆದಾರಿತ ಉದ್ದಿಮೆಗಳನ್ನು ಬೆಳೆಸಬೇಕು. ಇಂದು ರೈತರ ಉತ್ಪನ್ನ ಗಳಿಗೆ ಬೆಲೆ ನಿಗದಿ ಮಾಡುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ಹೇಳಿದರು.

ಶಾಸಕ ದರ್ಶನ್ ಧ್ರುವನಾರಾಯಣ್ ಮಾತನಾಡಿ, ಅನ್ನದಾತನೆನಿಸಿದ ರೈತರು ತಮಗೆ ಏನೇ ಕಷ್ಟಗಳು ಎದುರಾದರು ಸಹನಾ ಮೂರ್ತಿಗಳಂತೆ ಬೇಸಾಯವನ್ನೇ ನಂಬಿ ಜೀವನ ಮುನ್ನಡೆಸುವ ಗಟ್ಟಿಗರು,
ಬೆಳೆ ನಷ್ಟ, ಕಾಡುಪ್ರಾಣಿಗಳ ಹಾವಳಿ, ಬೆಳೆ ರೋಗಭಾದೆ ಇನ್ನಿತರ ಕಾರಣಗಳಿಂದ ರೈತರು ಸಂಕಷ್ಟಗಳಿಗೆ ಗುರಿಯಾಗುತ್ತಿರುವುದು ನೋವಿನ ಸಂಗತಿಯಾಗಿದೆ. ರೈತರ ಸಮಸ್ಯೆಗಳಿಗೆ ಪರಿಹಾರ ಸೂಚಿಸುವುದರೊಂದಿಗೆ ಅದರ ಹಿತ ಕಾಪಾಡುವುದು ಸರ್ಕಾರಗಳ ಧ್ಯೇಯ. ಅದರಂತೆ ರಾಜ್ಯ ಕಾಂಗ್ರೆಸ್ ಸರ್ಕಾರ ರೈತರ ಏಳಿಗೆಯನ್ನು ಮುಖ್ಯ ಗುರಿಯನ್ನಾಗಿ ನಾನಾ ಯೋಜನೆಗಳನ್ನು ಗೊಳಿಸುತ್ತಿದೆ ಎಂದರು.
ಮುಖ್ಯಮಂತ್ರಿ ಸಿದ್ದರಾಮಯ್ಯನವರು ರೈತರ ಪರ ಕಾಳಜಿ ಉಳ್ಳವರಾಗಿ ಅವರ ಕಷ್ಟಗಳಿಗೆ ಸ್ಪಂದಿಸುತ್ತಿದ್ದಾರೆ. ರೈತರು ಎದುರಿಸುತ್ತಿರುವ ಸಮಸ್ಯೆಗಳನ್ನು ಈ ವೇದಿಕೆಯಲ್ಲಿ ಬಿಚ್ಚಿಡಲಾಗಿದೆ. ಅವರ ಸಮಸ್ಯೆಗಳಿಗೆ ಸ್ಪಂದಿಸಿ ಪರಿಹಾರ ಸೂಜಿಸಬೇಕಾದದ್ದು ಜನಪ್ರತಿನಿಧಿಗಳ ಕರ್ತವ್ಯವಾಗಿದೆ. ಕೆರೆಗಳ ಒತ್ತುವರಿ ತೆರವುಗೊಳಿಸಲು ಕ್ರಮ ಕೈಗೊಳ್ಳಲಾಗುವುದು. ರಸ್ತೆಗಳ ಅಭಿವೃದ್ಧಿಗಾಗಿ ಯೋಜನೆಗಳನ್ನು ಕೈಗೊಳ್ಳಲಾಗಿದೆ.ಮುಖ್ಯನಾಲ ಹಾಗೂ ಉಪನದಿಗಳ ಲೈನಿಂಗ್ ಕಾಮಗಾರಿಗಳನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ರೈತ ಸಂಘದ ರಾಜ್ಯ ಕಾರ್ಯಾಧ್ಯಕ್ಷ ಟಿ. ವಿದ್ಯಾಸಾಗರ್ ಮಾತನಾಡುತ್ತಾ, ಇಂದು ರೈತರು ಏನೇ ಫಸಲು ಬೆಳೆದರು ಖರ್ಚು, ಬೆಳೆದ ಮಾರಾಟ ಮಾಡಿ ಸಂಕಷ್ಟಗಳಿಗೆ ಸಿಲುಕುತ್ತಿದ್ದಾರೆ. ಖರೀದಿ ಕೇಂದ್ರಗಳನ್ನು ತೆರೆದು ರೈತರ ಫಸಲು ಗಳಿಗೆ ಸೂಕ್ತ ಬೆಲೆ ದೊರಕಿಸಿ ಅವರ ಹಿತರಕ್ಷಣೆ ಮಾಡುವುದು ಸರ್ಕಾರದ ಕರ್ತವ್ಯವಾಗಿದೆ ಎಂದರು.
ಶಾಸಕ ಅನಿಲ್ ಚಿಕ್ಕ ಮಾದು ಮಾತನಾಡಿದರು.

ಕಾರ್ಯಕ್ರಮದಲ್ಲಿ ತಾಲೂಕು ಅಧ್ಯಕ್ಷ ಸತೀಶ್ ರಾವ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಘು, ರಾಜ್ಯಾಧ್ಯಕ್ಷ ಚಿನ್ನಪ್ಪ ಪೂಜಾರಿ, ಶಿವಾನಂದ ಮುರಳಿಧರ್ ಶರಣಪ್ಪ, ವಿಜಯ್, ರಾಮಯ್ಯ, ಮಂಡ್ಯ ಮಹೇಂದ್ರ, ಮಂಡ್ಯ ಶಾಮಿಯಾನ ಚಂದ್ರಣ್ಣ, ಮಹಿಳೆ ಘಟಕದ ಅಧ್ಯಕ್ಷ ಶ್ವೇತಾ, ಬಂಗಾರ ಸ್ವಾಮಿ, ಶಿವಣ್ಣ, ಮಹೇಶ್, ಯೋಗೇಶ್, ಸೋಮಣ್ಣ, ಸೇರಿದಂತೆ ಸಾವಿರಾರು ರೈತರು ಹಾಜರಿದ್ದರು.
Mysore
ನಾಳೆ ಸ್ವಚ್ಛತೆಗಾಗಿ ಬೃಹತ್ ಸೈಕಲ್ ಜಾಥಾ
ಮೈಸೂರು: ಮೈಸೂರನ್ನು ಸ್ವಚ್ಛತೆಯಲ್ಲಿ ದೇಶಕ್ಕೆ ‘ನಂಬರ್ 1’ ಸ್ಥಾನಕ್ಕೆ ತರುವ ನಿಟ್ಟಿನಲ್ಲಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಬೃಹತ್ ಸೈಕಲ್ ಜಾಥಾವನ್ನು ಹಮ್ಮಿಕೊಳ್ಳಲಾಗಿದೆ.
ಕೇಂದ್ರ ಸರ್ಕಾರದ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯದ ಮಾರ್ಗಸೂಚಿಯಂತೆ ಆಯೋಜಿಸಲಾಗಿರುವ ಕಾರ್ಯಕ್ರಮ ರೂಪಿಸಲಾಗಿದೆ.

ನಾಳಿನ ಉತ್ತಮ ಪರಿಸರಕ್ಕಾಗಿ ಇಂದೇ ಏರೋಣ ಸೈಕಲ್ ಸವಾರಿ ಶೀರ್ಷಿಕೆಯಡಿ ಫೆ.14ರಂದು ಮುಂಜಾನೆ 6:30ಕ್ಕೆ ಶ್ರೀ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಆವರಣ ಸೈಕಲ್ ಜಾಥಾಕ್ಕೆ ಚಾಲನೆ ಸಿಗಲಿದೆ.
ಶ್ರೀ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದಿಂದ ಪ್ರಾರಂಭವಾಗಿ ದೊಡ್ಡ ಗಡಿಯಾರ, ಕೆ.ಆರ್ ವೃತ್ತ, ಆಯುರ್ವೇದಿಕ್ ವೃತ್ತ, ಹೈವೇ ಸರ್ಕಲ್, ಎಲ್.ಐ.ಸಿ ವೃತ್ತ, ಜೆ.ಎಸ್.ಎಸ್. ಮೆಡಿಕಲ್ ಕಾಲೇಜು ಮೂಲಕ ಸಾಗಿ ಪುನಃ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಸಮಾರೋಪಗೊಳ್ಳಲಿದೆ.

ಪರಿಸರ ಸಂರಕ್ಷಣೆ ಮತ್ತು ನಗರದ ನೈರ್ಮಲ್ಯದ ಹಿತದೃಷ್ಟಿಯಿಂದ ನಡೆಯುತ್ತಿರುವ ಈ ಮಹತ್ವದ ಅಭಿಯಾನಕ್ಕೆ ವ್ಯಾಪಕ ಪ್ರಚಾರ ನೀಡಲು ತಾವುಗಳು ಆಗಮಿಸಬೇಕೆಂದು ಪ್ರಕಟಣೆ ಕೋರಿದೆ.
Manglore
ಧರ್ಮಸ್ಥಳದಲ್ಲಿ ನಾಳೆ ಶಿವರಾತ್ರಿ ವೈಭವ! : ಪಾದಯಾತ್ರಿಗಳ ಗಡಣ, ಅಹೋರಾತ್ರಿ ಶಿವಪಂಚಾಕ್ಷರಿ ಪಠಣ, ಜಾಗರಣೆ, ಕಲಾಸೇವೆ
ಉಜಿರೆ: ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ ನಾಳೆ, ಭಾನುವಾರ ಶಿವರಾತ್ರಿ ಪ್ರಯುಕ್ತ ನಾಡಿನೆಲ್ಲೆಡೆಯಿಂದ ಲಕ್ಷಕ್ಕೂ ಮಿಕ್ಕಿ ಭಕ್ತಾದಿಗಳು ಆಗಮಿಸಲಿದ್ದು ಅವರಿಗೆ ಸಕಲ ವ್ಯವಸ್ಥೆಗಳನ್ನು ಮಾಡಲಾಗಿದೆ. ಸುಮಾರು ಐವತ್ತು ಸಾವಿರಕ್ಕೂ ಮಿಕ್ಕಿ ಪಾದಯಾತ್ರಿಗಳು ಬರುವುದಾಗಿ ಈಗಾಗಲೆ ಖಚಿತಪಡಿಸಿದ್ದು, ಅವರಿಗೆ ಸಕಲ ವ್ಯವಸ್ಥೆಗಳನ್ನು ಮಾಡಲಾಗಿದೆ.
ಧರ್ಮಸ್ಥಳದಲ್ಲಿ ಸಾಕೇತ ಗಂಗೋತ್ರಿ, ಎಸ್.ಡಿ.ಎಂ. ಹೈಸ್ಕೂಲ್, ಅಮೃತವರ್ಷಿಣಿ ಸಭಾಭವನ ಹಾಗೂ ಉಜಿರೆಯಲ್ಲಿರುವ ಶಿಕ್ಷಣ ಸಂಸ್ಥೆಗಳಲ್ಲಿ ವಿಶ್ರಾಂತಿ ಹಾಗೂ ಉಜಿರೆಯಲ್ಲಿರುವ ಶಿಕ್ಷಣಸಂಸ್ಥೆಗಳಲ್ಲಿ ವಿಶ್ರಾಂತಿ ಹಾಗೂ ವಸತಿಗೆ ಸೌಲಭ್ಯ ಕಲ್ಪಿಸಲಾಗಿದೆ.

ಧರ್ಮಸ್ಥಳದಲ್ಲಿ ಮುಖ್ಯ ಪ್ರವೇಶದ್ವಾರದ ಬಳಿ ಸ್ವಾಗತಕಾರ್ಯಾಲಯ ತೆರೆದಿದ್ದು ಮಾಹಿತಿಕೇಂದ್ರ, ಉಚಿತ ವೈದ್ಯಕೀಯ ಚಿಕಿತ್ಸೆ, ಪಾನೀಯ ವಿತರಣೆ, ಪೊಲೀಸ್ ಚೌಕಿ, ಅಂಬುಲೆನ್ಸ್ ಸೇವೆ ಲಭ್ಯವಿದೆ.
ಉಜಿರೆಯ ಎಸ್.ಡಿ.ಎಂ. ಆಸ್ಪತ್ರೆ ವತಿಯಿಂದ ಚಾರ್ಮಾಡಿ, ಮುಂಡಾಜೆ, ಉಜಿರೆ, ಬೂಡುಜಾಲು ಮೊದಲಾದ ಕಡೆ ಪಾದಯಾತ್ರಿಗಳಿಗೆ ಉಚಿತ ಚಿಕಿತ್ಸೆ ನೀಡಲಾಗುತ್ತದೆ.
ಪಾದಯಾತ್ರಿಗಳು ತಂಗುವ ಸ್ಥಳದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ನೇತೃತ್ವದಲ್ಲಿ ಧಾರ್ಮಿಕ ಉಪನ್ಯಾಸ, ಭಜನೆ ಹಾಗೂ ಸತ್ಸಂಗ ಮೊದಲಾದ ಧರ್ಮಪ್ರಭಾವನಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

ವೈವಿಧ್ಯಮಯ ಸೇವೆ: ಶಿವರಾತ್ರಿ ಪ್ರಯುಕ್ತ ಭಾನುವಾರ ಭಕ್ತಾದಿಗಳು ದೇವರ ದರ್ಶನ ಮಾಡಿ ಶ್ರದ್ಧಾ-ಭಕ್ತಿಯಿಂದ ಎಳನೀರಿನ ಅಭಿಷೇಕ ಹಾಗೂ ಶತರುದ್ರಾಭಿಷೇಕ ಸೇವೆ ಅರ್ಪಿಸುವರು.
ಭಕ್ತರು ಅಹೋರಾತ್ರಿ ಶಿವಪಂಚಾಕ್ಷರಿ ಪಠಣದೊಂದಿಗೆ ಜಾಗರಣೆ ಹಾಗೂ ಉಪವಾಸ ವೃತಾಚರಣೆ ಮಾಡುವರು. ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಭಾನುವಾರ ಸಂಜೆ ಆರು ಗಂಟೆಗೆ ದೇವಸ್ಥಾನದ ಎದುರು ಇರುವ ಪ್ರವಚನ ಮಂಟಪದಲ್ಲಿ ದೀಪ ಬೆಳಗಿಸಿ ಶಿವಪಂಚಾಕ್ಷರಿ ಪಠಣಕ್ಕೆ ಚಾಲನೆ ನೀಡುವರು.
ಬಳಿಕ ಅಹೋರಾತ್ರಿ ಭಕ್ತರಿಂದ ಶಿವಪಂಚಾಕ್ಷರಿ ಪಠಣ ನಡೆಯುತ್ತದೆ.ಭಾನುವಾರ ರಾತ್ರಿ ಅನ್ನಪೂರ್ಣ ಭೋಜನಾಲಯದ ಹಿಂಬದಿ ಇರುವ ಮೈದಾನದಲ್ಲಿ ಹಾಗೂ ಪ್ರೌಢಶಾಲಾ ಕ್ರೀಡಾಂಗಣದಲ್ಲಿ ಬೆಂಗಳೂರಿನ ಭಕ್ತರು ಉಚಿತ ಅನ್ನದಾಸೋಹ ಸೇವೆ ನಡೆಯಲಿದೆ.
ಕಲಾಸೇವೆ: ನಾಡಿನೆಲ್ಲೆಡೆಯಿಂದ ಬಂದು ಸುಮಾರು ಎರಡು ಸಾವಿರ ಕಲಾವಿದರು ವಾಲಗ, ಕೊಳಲು, ಶಂಖ, ಜಾಗಟೆ, ಚೆಂಡೆ ವಾದನ ಮೊದಲಾದ ಕಲಾಸೇವೆ ಅರ್ಪಿಸುವರು.ಶಿವರಾತ್ರಿ ಪ್ರಯುಕ್ತ ರಾಜ್ಯದ ವಿವಿಧ ಊರುಗಳಿಂದ ಕೆ.ಎಸ್. ಆರ್.ಟಿ.ಸಿ. ಧರ್ಮಸ್ಥಳಕ್ಕೆ ವಿಶೇಷ ಬಸ್ ಸೌಲಭ್ಯ ಕಲ್ಪಿಸಲಾಗಿದೆ.
-
Mandya18 hours agoಬೂದನೂರು ಗ್ರಾ.ಪಂ. ಸಾಮಾಜಿಕ ಲೆಕ್ಕ ಪರಿಶೋಧನಾ ಗ್ರಾಮಸಭೆ ಮುಂದೂಡಿದ ಗ್ರಾಮಸ್ಥರು
-
State20 hours agoಫಿಲ್ಮ್ ಚೇಂಬರ್ನಲ್ಲೇ ಹೃದಯಾಘಾತದಿಂದ ಜೊ ಸೈಮನ್ ಸಾ*ವು
-
Hassan24 hours agoರಾಜ್ಯ ಸರ್ಕಾರದಿಂದ ಸಾವಿರ ದಿನಗಳಲ್ಲಿ ಸಾವಿರ ಸಮಸ್ಯೆ ಸೃಷ್ಟಿ: ಛಲವಾದಿ ನಾರಾಯಣಸ್ವಾಮಿ ತೀವ್ರ ವಾಗ್ದಾಳಿ
-
Mandya21 hours agoಪಾಂಡವಪುರ ತಾಲೂಕು ಕಚೇರಿಗೆ ಜಿಲ್ಲಾಧಿಕಾರಿಗಳ ಅನಿರೀಕ್ಷಿತ ಭೇಟಿ
-
Chamarajanagar21 minutes agoಬೈಕ್–ಕೆಎಸ್ಆರ್ಟಿಸಿ ಬಸ್ ಅಪಘಾತ; ವ್ಯಕ್ತಿ ಸಾವು
-
Manglore21 hours agoಮಂಗಳೂರು: ಬೆಂಗಳೂರಿನಿಂದ ಮಾದಕದ್ರವ್ಯ ಖರೀದಿಸಿ ಮಾರಾಟಕ್ಕೆ ಯತ್ನಿಸುತ್ತಿದ್ದ ಮೂವರು ಅರೆಸ್ಟ್
-
Mysore21 hours agoನಾಳೆ 1 ಲಕ್ಷ ಜನರಿಂದ ಸಾಮೂಹಿಕ ಹನುಮಾನ್ ಚಾಲೀಸಾ ಪಠಣೆ
-
Chamarajanagar22 hours agoಕುಡಿಯುವ ನೀರಿಗೆ ಸಮಸ್ಯೆಗೆಯಾಗದಂತೆ ಕ್ರಮ ವಹಿಸಲು ಶಾಸಕ ಮಂಜುನಾಥ್ ಸಲಹೆ
