Connect with us

Chikmagalur

ಹುಲಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ವಶಕ್ಕೆ

Published

on

ಮೂಡಿಗೆರೆ :ಅರಣ್ಯ ಇಲಾಖೆ ಅಧಿಕಾರಿಗಳು. ಹುಲಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿಯೆಂದು ಗುರುತಿಸಿರುವ ಈ ಹಿಂದೆ ಅರಣ್ಯ ಇಲಾಖೆಯಲ್ಲಿ ದಿನಗೂಲಿ ವಾಚರ್‌ ಆಗಿದ್ದ ಕುಂಡ್ರ ಗ್ರಾಮದ ಸುರೇಶ್‌ ಮಂಗಳವಾರ ಮೂಡಿಗೆರೆ ನ್ಯಾಯಾಲಯದ ಸಮೀಪ ವಶಕ್ಕೆ ಪಡೆದಿದ್ದಾರೆ.

ಮೂಡಿಗೆರೆ ಸಮೀಪದ ಕುಂಡ್ರ ಎಂಬಲ್ಲಿ ಹುಲಿಯೊಂದನ್ನು ಹತ್ಯೆ ಮಾಡಿರುವ ಕುರಿತು ಮೂಡಿಗೆರೆ ಅರಣ್ಯ ಇಲಾಖೆಯಲ್ಲಿ ಪ್ರಕರಣವೊಂದು ದಾಖಲಾಗಿತ್ತು. ಈ ಪ್ರಕರಣ ಸಂಬಂಧ ಐವರನ್ನು ಬಂಧನ ಮಾಡಲಾಗಿತ್ತು. ಈ ಪ್ರಕರಣದ ಪ್ರಮುಖ ಆರೋಪಿ ಸುರೇಶ್‌ ಕಳೆದ ಕೆಲ ದಿನದಿಂದ ನಾಪತ್ತೆಯಾಗಿದ್ದ. ಈತನ ಬಂಧನಕ್ಕೆ ಅರಣ್ಯ ಇಲಾಖೆ ಬಲೆ ಬೀಸಿತ್ತು.

ಮಂಗಳವಾರ ಸುರೇಶ್‌ ಮೂಡಿಗೆರೆ ನ್ಯಾಯಾಲಯಕ್ಕೆ ಶರಣಾಗಲು ಬರುತ್ತಿದ್ದಾನೆ ಎಂಬ ಖಚಿತ ಮಾಹಿತಿಯ ಮೇರೆಗೆ ಮೂಡಿಗೆರೆ ನ್ಯಾಯಾಲಯದ ಸಮೀಪ ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಪಹರೆ ಹಾಕಿದ್ದರು. ಸುಮಾರು ಸಂಜೆ 5 ಗಂಟೆಗೆ ಸುರೇಶ್‌ ನ್ಯಾಯಾಲಯದ ಸಮೀಪ ಬಂದಿದ್ದು, ಈತನನ್ನು ಅಲ್ಲಿ ವಶಕ್ಕೆ ಪಡೆಯಲಾಗಿತ್ತು. ವಶಕ್ಕೆ ಪಡೆದು ಮೂಡಿಗೆರೆ ನ್ಯಾಯಾಲಯದಲ್ಲಿ ನ್ಯಾಯಾಧೀಶರ ಎದುರು ಹಾಜರುಪಡಿಸಿದ್ದು, ನಂತರ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ನ್ಯಾಯಾಧೀಶರು ಒಪ್ಪಿಸಿದ್ದಾರೆ.

ಆರು ಮಂದಿಯ ಬಂಧನ ಈ ಪ್ರಕರಣದಲ್ಲಿ ಆಗಿದೆ. ಈಗಾಗಲೇ ಬಂಧನದಲ್ಲಿದ್ದ ಐವರು ಆರೋಪಿಗಳು ಜಾಮೀನು ಪಡೆದು ಹೊರಬಂದಿದ್ದಾರೆ.

Continue Reading
Click to comment

Leave a Reply

Your email address will not be published. Required fields are marked *

Chikmagalur

ಶಿಕ್ಷಣ ವಂಚಿತ ಮಕ್ಕಳ ಬಗ್ಗೆ ಎಚ್ಚರಿಕೆ ವಹಿಸಲು ಅಧಿಕಾರಿಗಳಿಗೆ ಸೂಚನೆ

Published

on

ಚಿಕ್ಕಮಗಳೂರು, ಮೇ ೨೨: ಅಲ್ಪಸಂಖ್ಯಾತರ ಮಕ್ಕಳು ಶಿಕ್ಷಣದಿಂದ ವಂಚಿತರಾಗದಂತೆ ಎಚ್ಚರ ವಹಿಸಲು ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಯು.ನಿಸಾರ್ ಅಹಮದ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಇಂದು ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪ್ರಧಾನ ಮಂತ್ರಿಗಳ ಹೊಸ ೧೫ ಅಂಶಗಳ ಕಾರ್ಯಕ್ರಮ ಅನುಷ್ಠಾನದ ಕುರಿತು ಪ್ರಗತಿ ಪರಿಶೀಲನಾ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು.
ಅಂಗನವಾಡಿ ಶಿಕ್ಷಕರಿಗೆ ಹಾಗೂ ಸಹಾಯಕಿಯರಿಗೆ ಮಕ್ಕಳನ್ನು ಅವರ ಮಾತೃ ಭಾಷೆಯಲ್ಲಿ ಮಾತನಾಡಿಸುವ ಸಾಮರ್ಥ್ಯ ಇರಬೇಕು ಹಾಗೂ ಅಂಗನವಾಡಿ, ಶಾಲಾ ಶಿಕ್ಷಣದಿಂದ ವಂಚಿತರಾಗಿರುವ ಮಕ್ಕಳನ್ನು ಗುರುತಿಸಿ ಅಂತವರನ್ನು ಪುನಃ ಶಾಲೆಗೆ ದಾಖಲಿಸಿ ಅವರಿಗೆ ವಿದ್ಯಾಭ್ಯಾಸ ನೀಡಲು ಸೂಚಿಸಿದರು.
ಸಂವಾದದಲ್ಲಿ ಅಲ್ಪಸಂಖ್ಯಾತರ ಆರ್ಥಿಕ, ಸಾಮಾಜಿಕ ಮತ್ತು ಶೈಕ್ಷಣಿಕ ಅಭಿವೃದ್ಧಿ ಬಗ್ಗೆ ಚರ್ಚಿಸಲಾಯಿತು. ಅಲ್ಪಸಂಖ್ಯಾತರ ಆರ್ಥಿಕ, ಸಾಮಾಜಿಕ ಮತ್ತು ಶೈಕ್ಷಣಿಕ ಅಭಿವೃದ್ಧಿಗಾಗಿ ಪ್ರಧಾನ ಮಂತ್ರಿಗಳ ೧೫ ಅಂಶಗಳ ಕಾರ್ಯಕ್ರಮಕ್ಕೆ ಸಂಬಂಧಿಸಿದ ಇಲಾಖೆಯ ಎಲ್ಲಾ ಕಾರ್ಯಕ್ರಮಗಳಲ್ಲಿ ಸಾಧ್ಯವಾದ? ಆರ್ಥಿಕ ಮತ್ತು ಭೌತಿಕ ಗುರಿಗಳಿಗೆ ಅನುಗುಣವಾಗಿ ಪ್ರಗತಿ ಸಾಧಿಸಲು ಸೂಚಿಸಿದರು.


ಐ.ಟಿ.ಐ. ಕಾಲೇಜುಗಳಲ್ಲಿ ದಾಖಲಾತಿ ಹೆಚ್ಚಿಸುವ ಸಲುವಾಗಿ ಮನೆ ಮನೆ ಸಮೀಕ್ಷೆ ಮಾಡಿ ಎಸ್.ಎಸ್.ಎಲ್.ಸಿ.ಯಲ್ಲಿ ಉತ್ತೀರ್ಣ ಹಾಗೂ ಅನುತ್ತೀರ್ಣರಾಗಿರುವ ವಿದ್ಯಾರ್ಥಿಗಳ ಮನವೊಲಿಸಿ ಅವರನ್ನು ತಮ್ಮ ಕಾಲೇಜಿಗೆ ದಾಖಲಾತಿ ಮಾಡಿಕೊಳ್ಳುವ ನಿಟ್ಟಿನಲ್ಲಿ ಕ್ರಮ ವಹಿಸುವಂತೆ ಸೂಚಿಸಿದರು.
ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸಿ.ಎನ್. ಮಾತನಾಡಿ, ಉದ್ಯೋಗಸ್ಥ ಮಹಿಳಾ ವಸತಿ ನಿಲಯಗಳನ್ನು ಜಿಲ್ಲೆಯಲ್ಲಿ ಸ್ಥಾಪಿಸಲು ಸರ್ಕಾರದ ಹಂತದಲ್ಲಿ ಸಂಬಂಧಪಟ್ಟ ಅಧಿಕಾರಿಗಳಿಗೆ ಶಿಫಾರಸ್ಸು ಮಾಡಲು ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರಿಗೆ ಮನವಿ ಮಾಡಿದರು.
ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರ ಆಪ್ತ ಸಹಾಯಕ ಮುಜೀಬುಲ್ಲಾ ಜಫಾರಿ, ಅಲ್ಪಸಂಖ್ಯಾತರ ಆಯೋಗದ ಸದಸ್ಯ, ನಿವೃತ್ತ ಐಎಎಸ್ ಅಧಿಕಾರಿ ಅಬ್ದುಲ್ ಖಾದರ್, ಜಿ.ಪಂ. ಕಾರ್ಯ ನಿರ್ವಹಣಾಧಿಕಾರಿ ಹೆಚ್.ಎಸ್.ಕೀರ್ತನಾ, ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
೨೨ಸಿಕೆಎಂ೧: ಇಂದು ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪ್ರಧಾನ ಮಂತ್ರಿಗಳ ಹೊಸ ೧೫ ಅಂಶಗಳ ಕಾರ್ಯಕ್ರಮ ಅನುಷ್ಠಾನದ ಕುರಿತು ಪ್ರಗತಿ ಪರಿಶೀಲನಾ ಸಭೆಯಲ್ಲಿ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಯು. ನಿಸಾರ್ ಅಹಮದ್ ಮಾತನಾಡಿದರು.

Continue Reading

Chikmagalur

ಜಿಲ್ಲಾಡಳಿತಕ್ಕೆ ಮನವಿ, ಯಾವುದೇ ಕ್ರಮ ಕೈಗೊಂಡಿಲ್ಲ: ಬೆಸತ್ತ ರೈತರು

Published

on

ಬಾಳೆಹೊನ್ನೂರು ಬಿ ಕಣಬೂರು ಗ್ರಾ ಪಂ ವ್ಯಾಪ್ತಿಯ ಸರ್ವೆ ನಂ 139 ಹೊಟ್ಟುಕೆರೆ ( ಚೌಡಿಕೆರೆ) 11 ಎಕರೆ 13 ಗುಂಟೆ ವಿಸ್ತೀರ್ಣ ಹೊಂದಿದ್ದು ಒತ್ತುವರಿದಾರರಿಂದ ಒತ್ತುವರಿಯಾಗಿದ್ದು ಈಗ ಕೇವಲ 3 ಎಕರೆ ಪ್ರದೇಶದಷ್ಟು ಮಾತ್ರ ಉಳಿದಿದ್ದು ಕಳೆದ 25 ವರ್ಷಗಳಿಂದ ಒತ್ತುವರಿ ತೆರವು ಗೊಳಿಸುವಂತೆ ಜಿಲ್ಲಾಡಳಿತಕ್ಕೆ ಮನವಿ ಮಾಡಿದ್ದರು ಯಾವುದೇ ಕ್ರಮ ಕೈಗೊಂಡಿರುವುದಿಲ್ಲ ಇದರಿಂದ ಬೇಸತ್ತ ರೈತರು 10 ವರ್ಷಗಳ ಹಿಂದೆ ಜಿಲ್ಲಾಧಿಕಾರಿಗಳ ಬಳಿ ನಿಯೋಗ ತೆರಳಿ ಒತ್ತುವರಿ ತೆರವು ಗೊಳಿಸುವಂತೆ ಮ£ವಿ ಮಾಡಿದ್ದರು ಮನವಿಗೆ ಸ್ಪಂದಿಸಿದ ಅಂದಿನ ಜಿಲ್ಲಾಧಿಕಾರಿ ಸತ್ಯವತಿಯವರು ಸರ್ವೆ ನಡೆಸಿ ತೆರವು ಗೊಳಿಸುವಂತೆ ನ ರಾ ಪುರ ತಹಸಿಲ್ದಾರ್ ಗೆ ಸೂಚನೆ ನೀಡಿದ್ದರು.

ಸರ್ವೆ ನಡೆಸಿ ಒತ್ತುವರಿ ತೆರವು ಗೊಳಿಸಲು ಮುಂದಾದಾಗ ರಾಜಕಾರಣಿಯವರು ತಹಸಿಲ್ದಾರ್ ಗೆ ಒತ್ತುವರಿ ತೆರವು ಗೊಳಿಸದಂತೆ ಮೌಖಿಕ ಆದೇಶ ಮಾಡಿದ್ದರು ಕೇವಲ ಒಬ್ಬರ ಒತ್ತುವರಿ ತೆರವು ಗೊಳಿಸಿ ಕೈ ಬಿಟ್ಟಿದ್ದರು, ಕೆರೆ ಅಭಿವೃದ್ದಿಗೆ 2 ಕೋಟಿ ಅನುದಾನ ಬಿಡುಗಡೆಯಾಗಿದೆ ಇದೀಗ ಸರ್ವೆ ನಡಿಸಿದ್ದು ಮುಂದಿನ ದಿನಗಳಲ್ಲಿ ಒತ್ತುವರಿ ತೆರವು ಗೊಳಿಸುವರೇ ಎಂದು ಕಾದು ನೋಡಬೇಕಿೆದೆ. ಇದೀಗ ಸುಪ್ರಿಂ ಕೋರ್ಟ್ ಸಾರ್ವಜನಿಕ ಆಸ್ತಿ ,ಕೆರೆ ಕುಂಟೆ ಒತ್ತುವರಿ, ಅಕ್ರಮ ಕಟ್ಟಡ ನೆಲಸಮ ಗೊಳಿಸುವಂತೆ ಆದೇಶ ನೀಡಿದ್ದು ಅದರಂತೆ ಪಂಚಾಯತ್ ರಾಜ್ ಇಲಾಖೆ ಎಲ್ಲಾ ಜಿಲ್ಲಾಧಿಕಾರಿಗಳಿಗೂ ಹಾಗೂ ಸಂಬAಧ ಪಟ್ಟ ಅಧಿಕಾರಿಗಳಿಗೆ ಕಟ್ಟು ನಿಟ್ಟಿನ ಕ್ರಮ ಕೈ ಗೊಳ್ಳುವಂತೆ ಸುತ್ತೋಲೆ ಹೊರಡಿಸಿದ್ದು ಒತ್ತುವರಿದಾರರಲ್ಲಿ ಆತಂಕ ಮೂಡಿದೆ ಹಾಗೂ ನಿಯೋಗ ತೆರಳಿದ ರೈತರು ಸುಪ್ರಿಂ ಕೋರ್ಟ್ ಆದೇಶವನ್ನು ಸ್ವಾಗತಿಸಿದ್ದಾರೆ.

ನ ರಾ ಪುರ ರಸ್ತೆಯ ಪಕ್ಕದಲ್ಲಿರುವ ಹೊಟ್ಟುಕೆರೆ ( ಚೌಡಿಕೆರೆ) ಒತ್ತುವರಿಯಾಗಿರುವುದು.

Continue Reading

Chikmagalur

NR ಪುರ- ಬಾಳೆಹೊನ್ನೂರು – ಸರ್ಕಾರಿ ಆಸ್ತಿಗಳಲ್ಲಿ ಕಟ್ಟಡ ನಿರ್ಮಾಣ : ಪಿಡಿಒಗಳು ‘ಸುಪ್ರೀಂ’ ಆದೇಶ ಪಾಲಿಸುವರೇ?

Published

on

ಬಾಳೆಹೊನ್ನೂರು – ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅನಧಿಕೃತ ಹಾಗೂ ನಿಯಮಗಳನ್ನು ಉಲ್ಲಂಘಿಸಿ ನಿರ್ಮಾಣವಾಗುತ್ತಿರುವ ವಸತಿ ವಾಣಿಜ್ಯ ಹಾಗೂ ಇತರೆ ಕಟ್ಟಡಗಳ ಕಾಮಗಾರಿಯನ್ನು ನಿರ್ಬಂಧಿಸುವುದು ಹಾಗೂ ಸಾರ್ವಜನಿಕ ಆಸ್ತಿಯ ಮೇಲೆ ನಿರ್ಮಿಸಿರುವ ಕಟ್ಟಡಗಳನ್ನು ನೆಲಸಮಗೊಳಿಸುವ ಬಗ್ಗೆ ಸರ್ವೋಚ್ಛ ನ್ಯಾಯಾಲಯವು ಆದೇಶ ನೀಡಿರುವ ಹಿನ್ನಲೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ನಿರ್ದೇಶಕರು ಹಾಗೂ ಪದನಿಮಿತ್ತ ಸರ್ಕಾರದ ಉಪಕಾರ್ಯದರ್ಶಿಗಳು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು ಎಲ್ಲಾ ಮುಖ್ಯ ಜಿ.ಪಂ ಮುಖ್ಯ ಕಾರ್ಯನಿರ್ವಾಹಕಾಧಿಕಾರಿಗಳು, ಜಿ.ಪಂ ಉಪಕಾರ್ಯದರ್ಶಿಗಳು (ಅಭಿವೃದ್ಧಿ), ಎಲ್ಲಾ ತಾ.ಪಂ ಕಾರ್ಯನಿರ್ವಾಹಕಾಧಿಕಾರಿಗಳು ಹಾಗೂ ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗಳ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ಸುತ್ತೋಲೆ ಹೊರಡಿಸಲಾಗಿದೆ.


ಪ್ರಮುಖವಾಗಿ 14 ಅಂಶಗಳನ್ನು ಸುತ್ತೋಲೆಯಲ್ಲಿ ಉಲ್ಲೇಖಿಸಲಾಗಿದ್ದು ಗ್ರಾ.ಪಂ ಪರವಾನಗಿ ಪಡೆದು ಕಟ್ಟಡ ಯೋಜನೆ ಹಾಗೂ ಅನುಮೋದಿತ ನಕ್ಷೆ ಉಲ್ಲಂಘನೆಯಾಗದAತೆ ನಿರ್ಮಿಸಿರುವ ಕಟ್ಟಡಗಳನ್ನು ಸ್ಥಳ ಪರಿಶೀಲಿಸಿ ತಡಮಾಡದೆ ಪೂರ್ಣಗೊಂಡ ಪತ್ರ/ ವಾಸಯೋಗ್ಯ ಪ್ರಮಾಣ ಪತ್ರವನ್ನು ನೀಡತಕ್ಕದ್ದು. ಗ್ರಾ.ಪಂ ವ್ಯಾಪ್ತಿಯಲ್ಲಿ ಪರವಾನಗಿ ಪಡೆಯದೆ ಹಾಗೂ ಪರವಾನಗಿ ಪಡೆದಿದ್ದರೂ ಕಟ್ಟಡ ನಿರ್ಮಾಣದ ನಿಯಮಗಳನ್ನು ಉಲ್ಲಂಘಿಸಿ ನಿರ್ಮಾಣವಾಗುತ್ತಿರುವ ವಸತಿ ವಾಣಿಜ್ಯ ಹಾಗೂ ಇತರೆ ಕಟ್ಟಡಗಳ ಕಾಮಗಾರಿಗಳು ಕಂಡಬAದರೆ ಅಂತಹ ಕಟ್ಟಡ ಕಾಮಗಾರಿಗಳನ್ನು ನಿಲ್ಲಿಸಲು ಗ್ರಾ.ಪಂ ಕ್ರಮಕೈಗೊಳ್ಳಬೇಕು. ಪರವಾನಗಿ ಪಡೆದು ನಿರ್ಮಿಸುತ್ತಿರುವ ಕಟ್ಟಡವು ಅನುಮೋದಿತ ನಕ್ಷೆಗಿಂತ ಭಿನ್ನವಾಗಿದ್ದರೆ ಅದನ್ನು ಸರಿಪಡಿಸಲು ನೋಟಿಸ್ ನೀಡಬೇಕು.
ಅನಧಿಕೃತ ಕಟ್ಟಡಗಳನ್ನು ನೆಲಸಮಗೊಳಿಸಲು ಗ್ರಾ.ಪಂಗಳು ನಿಯಮಾನುಸಾರ ಪ್ರಕ್ರಿಯೆಯನ್ನು ಪ್ರಾರಂಭಿಸಬೇಕು. ಇಂತಹ ಪ್ರಕ್ರಿಯೆಯಲ್ಲಿ ಸ್ಥಳೀಯ ಕಂದಾಯ ಇಲಾಖೆ ಹಾಗೂ ಪೋಲಿಸ್ ನೆರವನ್ನು ಪಡೆಯತಕ್ಕದ್ದು ಪ್ರಕ್ರಿಯೆಯಲ್ಲಿ ಸಹಕರಿಸದಿದ್ದರೆ ಸಂಬAಧಪಟ್ಟ ಇಲಾಖೆಯ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಸುತ್ತೋಲೆಯಲ್ಲಿ ಉಲ್ಲೇಖಿಸಲಾಗಿದೆ.

ನಗರ ಹಾಗೂ ಗ್ರಾಮೀಣ ಯೋಜನೆ ಇಲಾಖೆಯ ಅನುಮೋದಿಸಿ ನೀಡಿದ ನಕ್ಷೆಯಂತೆ ಕಟ್ಟಡವನ್ನು ನಿರ್ಮಿಸಬೇಕು. ಉಲ್ಲಂಘನೆ ಮಾಡಿದರೆ ಗುತ್ತಿಗೆದಾರ, ಮಾಲೀಕ, ವಾಸ್ತುಶಿಲ್ಪಿ, ಇಂಜಿನಿಯರ್, ಮೇಲ್ವಿಚಾರಕರ ವಿರುದ್ಧ ಕ್ರಮವಹಿಸತಕ್ಕದ್ದು. ಅನಧಿಕೃತ ಕಟ್ಟಡ ಸಂಬAಧ ಸವೋಚ್ಛ ನ್ಯಾಯಾಲಯದ ಆದೇಶ ಹಾಗೂ ನಿಯಮಗಳನ್ನು ಪಾಲಿಸತಕ್ಕದ್ದು. ಅಕ್ರಮವಾಗಿ ನಿರ್ಮಿಸಿರುವ ಕಟ್ಟಡಗಳಲ್ಲಿ ವ್ಯಾಪಾರ ವಾಣಿಜ್ಯ ವಹಿವಾಟು ನಡೆಸಲು ಅನುಮತಿ ಹಾಗೂ ಲೈಸೆನ್ಸ್ ನೀಡಬಾರದು. ಬ್ಯಾಂಕ್‌ಗಳು, ಹಣಕಾಸು ಸಂಸ್ಥೆಗಳು ಯಾವುದೇ ಕಟ್ಟಡಗಳ ವಿರುದ್ಧ ಸಾಲಗಳನ್ನು ಅಥವಾ ಯಾವುದೇ ರೀತಿಯ ಹಣಕಾಸಿನ ನೆರವನ್ನು ಮಂಜೂರು ಮಾಡುವ ಮುನ್ನ ಅಂತಹ ಕಟ್ಟಡಕ್ಕೆ ನೀಡಲಾದ ಕಟ್ಟಡ ಪೂರ್ಣಗೊಂಡ ಪ್ರಮಾಣ ಪತ್ರಗಳನ್ನು ಪರಿಶೀಲನೆಗೆ ಒಳಪಡಿಸಬೇಕೆಂದು ಸೂಚಿಸಲಾಗಿದೆ.
ತಾಲ್ಲೂಕು ಹಾಗೂ ಜಿ.ಪಂ ಅಧಿಕಾರಿಗಳು ಈ ಸಂಬAಧ ಮಾಸಿಕ ತಪಾಸಣೆ ನಡೆಸುವುದು ಹಾಗೂ ಅಕ್ರಮ ಕಟ್ಟಡಗಳ ಬಗ್ಗೆ ಮಾಹಿತಿ ಹಾಗೂ ಅಂಕಿ ಅಂಶಗಳನ್ನು ಪರಿಶೀಲಿಸಿ ಗ್ರಾ.ಪಂ ಗೆ ಸೂಕ್ತ ಆದೇಶ ನೀಡುವುದು. ಸಾರ್ವಜನಿಕ ಸ್ವತ್ತುಗಳಾದ ಕೆರೆ, ಕುಂಟೆ, ಕಾಲುವೆ ಮತ್ತಿತರ ಸಾರ್ವಜನಿಕ ಸರ್ಕಾರಿ ಆಸ್ತಿಗಳ ಸ್ವತ್ತಿನಲ್ಲಿ ಕಟ್ಟಡಗಳು ನಿರ್ಮಾಣವಾಗಿದ್ದರೆ ಅವುಗಳನ್ನು ನೆಲಸಮಗೊಳಿಸಬೇಕೆಂದು ಜಿ.ಪಂ , ತಾ.ಪಂ, ಗ್ರಾ.ಪಂ ಗೆ ಸೂಚಿಸಲಾಗಿದೆ. ಪಂಚಾಯಿತಿ ಆಡಳಿತ ಮಂಡಳಿ ಹಾಗೂ ಗ್ರಾ.ಪಂ ಪಿಡಿಒ ಗಳು ಸುಪ್ರೀಂಕೋರ್ಟ್ ಹಾಗೂ ಸರ್ಕಾರದ ಆದೇಶವನ್ನು ಹೇಗೆ ಪಾಲಿಸುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

Continue Reading

Trending

error: Content is protected !!