Kodagu
ಚಾಲಕನ ನಿಯಂತ್ರಣ ತಪ್ಪಿ ಟಿಂಬರ್ ಲಾರಿ ಪಲ್ಟಿ – ವಿದ್ಯುತ್ ಕಂಬಕ್ಕೆ ಹಾನಿ-ಚಾಲಕ ಕ್ಲೀನರ್ ಗೆ ಗಾಯ
ವರದಿ: ಝಕರಿಯ ನಾಪೋಕ್ಲು
ನಾಪೋಕ್ಲು : ಸಿಲ್ವರ್ ಮರದ ನಾಟಾಗಳನ್ನು ಸಾಗಾಟ ಮಾಡುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲಿ ಪಲ್ಟಿಯಾದ ಘಟನೆ ನಾಪೋಕ್ಲು ಮೂರ್ನಾಡು ಮುಖ್ಯರಸ್ತೆಯ ಹೊದ್ದೂರು ಗ್ರಾಮದಲ್ಲಿ ಶುಕ್ರವಾರ ಸಂಜೆ ನಡೆದಿದೆ.
ನಾಪೋಕ್ಲು ಕಡೆಯಿಂದ ಮೂರ್ನಾಡು ಮಾರ್ಗವಾಗಿ ಕೇರಳಕ್ಕೆ ಸಿಲ್ವರ್ ಮರದ ನಾಟಗಳನ್ನು ತುಂಬಿ ಸಾಗುತ್ತಿರುವ ಸಂದರ್ಭ ಹೊದ್ದೂರು ಗ್ರಾಮದ ಬಳಿಯ ರಸ್ತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾಗಿದೆ. ಅಪಘಾತದಿಂದ ಮೂರು ವಿದ್ಯುತ್ ಕಂಬಗಳಿಗೆ, ರಸ್ತೆ ಬದಿ ಮನೆಯ ಕಾಂಪೌಂಡ್ ಹಾಗೂ ಗೇಟಿಗೆ ಹಾನಿಯಾಗಿದೆ.

ವಿದ್ಯುತ್ ತಂತಿಗಳು ರಸ್ತೆಗೆ ಬಿದ್ದು ಕೆಲಕಾಲ ಸಂಚಾರಕ್ಕೆ ಅಡಚಣೆ ಉಂಟಾಯಿತು. ಮಾಹಿತಿ ತಿಳಿದು ಸ್ಥಳಕ್ಕೆ ಧಾವಿಸಿದ ಸೆಸ್ಕ್ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು, 112 ಪೊಲೀಸರು ಸಾರ್ವಜನಿಕರ ಸಹಕಾರದಿಂದ ರಸ್ತೆಯಲ್ಲಿದ್ದ ವಿದ್ಯುತ್ ತಂತಿಗಳನ್ನು ತೆರವುಗೊಳಿಸಿ ವಾಹನಗಳ ಸುಗಮ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಿದರು. ಅಪಘಾತದಿಂದ ಲಾರಿಯ ಚಾಲಕ ಹಾಗೂ ಕ್ಲೀನರ್ ಗೆ ಗಾಯಗಳಾದ್ದು ಮಡಿಕೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಮಡಿಕೇರಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
Kodagu
ಪುತ್ತರಿ ಹಿನ್ನೆಲೆ “ಲಕ್ಡಿಕೋಟೆ ಕೊಡವ ಯುದ್ಧ ಸ್ಮಾರಕ”ದಲ್ಲಿ ಕೊಡವ ಯೋಧರಿಗೆ ಗೌರವ ನಮನ ಸಲ್ಲಿಸಿದ ಸಿಎನ್ಸಿ
ಮಡಿಕೇರಿ: ಪತ್ತ್ಕಟ್ಟ್ನಾಡಿನಲ್ಲಿ ಕೊಡವ ನ್ಯಾಷನಲ್ ಕೌನ್ಸಿಲ್ ವತಿಯಿಂದ ನಡೆದ 32ನೇ ವರ್ಷದ ’ಪುತ್ತರಿ ನಮ್ಮೆ’ಯ ಹಿನ್ನೆಲೆ ಸಿಎನ್ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರ ನೇತೃತ್ವದಲ್ಲಿ “ಲಕ್ಡಿಕೋಟೆ ಕೊಡವ ಯುದ್ಧ ಸ್ಮಾರಕ”ದಲ್ಲಿ ಕೊಡವ ಯೋಧರಿಗೆ ಗೌರವ ನಮನ ಸಲ್ಲಿಸಲಾಯಿತು.
ವೀರ ಮರಣವನ್ನಪ್ಪಿದ ಕೊಡವರಿಗೆ ಗೌರವ ಸಲ್ಲಿಸಿ ಮಾತನಾಡಿದ ಎನ್.ಯು.ನಾಚಪ್ಪ ಅವರು 1790-92 ಮತ್ತು 1799ರ ನಡುವೆ ಕ್ರಮವಾಗಿ ಜನರಲ್ ಲಾರ್ಡ್ ಕಾರ್ನ್ವಾಲೀಸ್ ಹಾಗೂ ಜನರಲ್ ಲಾರ್ಡ್ ವೆಲ್ಲೆಸ್ಲಿ ನೇತೃತ್ವದಲ್ಲಿ ನಡೆದ 3ನೇ ಮತ್ತು 4ನೇ ಆಂಗ್ಲೋ-ಮೈಸೂರು ಯುದ್ಧಗಳಲ್ಲಿ ಆದಿಮ ಸಂಜಾತ ಏಕಜನಾಂಗೀಯ ಆನಿಮಿಸ್ಟಿಕ್ ನಂಬುಗೆಯ ಕೊಡವರು ತೋರಿದ ಶೌರ್ಯವನ್ನು ಸ್ಮರಿಸಿದರು.

ಡಿ.ವೀರರಾಜರ ಮಾರ್ಗದರ್ಶನದಲ್ಲಿ ಕೊಡವ ಸೈನ್ಯವು ಮೈಸೂರು ಸುಲ್ತಾನರ ವಿರುದ್ಧ ಬ್ರಿಟಿಷರೊಂದಿಗೆ ಸಮುದಾಯದ ಮಿಲಿಟರಿ ಮೈತ್ರಿಯನ್ನು ಮಾಡಿಕೊಂಡು ನಡೆಸಿದ ಯುದ್ಧದಲ್ಲಿ ಟಿಪ್ಪು ಸುಲ್ತಾನನಿಗೆ ಸೋಲಾಯಿತು. ಕೊಡವ ಯೋಧರ ವೀರಾವೇಶದಿಂದಲೇ ಮೈಸೂರು ಸುಲ್ತಾನರಿಗೆ 31 ಬಾರಿ ಸೋಲಾಗಿದೆ ಎಂದರು.
1785 ರಲ್ಲಿ ಮೈಸೂರು ಸುಲ್ತಾನರು ಹಾಗೂ ಫ್ರೆಂಚ್ ಪಡೆಗಳು ನಡೆಸಿದ ದೇವಟ್ ಪರಂಬು ದಾಳಿಯಿಂದಾದ ಕೊಡವ ನರಮೇಧದ ಪರಿಣಾಮ ಆಂಗ್ಲೋ-ಮೈಸೂರು ಯುದ್ಧಗಳಲ್ಲಿ ಕೊಡವ ಯೋಧರು ಭಾಗವಹಿಸಲು ಕಾರಣವಾಯಿತು. ವೀರ ಕೊಡವರ ಶೌರ್ಯವನ್ನು ಗೌರವಿಸುವುದಕ್ಕಾಗಿ ’ಪುತ್ತರಿ ನಮ್ಮೆ’ಯ ಪ್ರಯುಕ್ತ ಹಿತಿಯರನ್ನು ಸ್ಮರಿಸಲಾಯಿತು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಕಲಿಯಂಡ ಮೀನಾ ಪ್ರಕಾಶ್, ಕಲಿಯಂಡ ಪ್ರಕಾಶ್, ಜಮ್ಮಡ ಮೋಹನ್, ಕಾಂಡೇರ ಸುರೇಶ್, ಬೇಪಡಿಯಂಡ ದಿನು, ಅರೆಯಡ ಗಿರೀಶ್, ನಂದೇಟಿರ ರವಿ ಸುಬ್ಬಯ್ಯ, ಬೊಟ್ಟಂಗಡ ಗಿರೀಶ್, ಚಂಬಂಡ ಜನತ್, ಕಿರಿಯಮಾಡ ಶೆರಿನ್, ಪಾರ್ವಂಗಡ ನವೀನ್, ಕಿರಿಯಮಾಡ ಶಾನ್, ಮದ್ರಿರ ಕರುಂಬಯ್ಯ, ಅಪ್ಪೆಯಂಗಡ ಮಾಲೆ ಪೂಣಚ್ಚ ಹಾಗೂ ಚೊಕ್ಕಂಡ ಕಟ್ಟಿ ಪಾಲ್ಗೊಂಡಿದ್ದರು.
Kodagu
ಕಗ್ಗೋಡ್ಲುವಿನ ಹೂಕಾಡು ಪೈಸಾರಿಗೆ ಶಾಸಕ ಪೊನ್ನಣ್ಣ ಭೇಟಿ
ಮಡಿಕೇರಿ : ತಾಲೂಕು ಕಗ್ಗೋಡ್ಲುವಿನ ಹೂಕಾಡು ಪೈಸಾರಿಗೆ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ಭೇಟಿ ನೀಡಿದರು.
ಬಳಿಕ ಶಾಸಕರ ಅನುದಾನದ 25 ಲಕ್ಷಗಳಲ್ಲಿ ಕೈಗೆತ್ತಿಕೊಂಡಿರುವ ರಸ್ತೆ ದುರಸ್ತಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದ ಶಾಸಕರು, ಎಲ್ಲರಿಗೆ ಶುಭ ಕೋರಿದರು. ಬಳಿಕ ಮೇಕೇರಿಯ ಶಾಲೆ ಎದುರಿನ ಮುಖ್ಯ ರಸ್ತೆ ಬಳಿ, ನೂತನವಾಗಿ ಶಾಸಕರ ಅನುದಾನದಲ್ಲಿ ನಿರ್ಮಾಣ ಆಗುತ್ತಿರುವ ಬಸ್ ತಂಗುದಾಣಕ್ಕೆ ಭೂಮಿ ಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ ನಾಪೋಕ್ಲು ಬ್ಲಾಕ್ ಅಧ್ಯಕ್ಷರು ಇಸ್ಮಾಯಿಲ್, ಹಾಕತ್ತುರು ವಲಯ ಅಧ್ಯಕ್ಷರು ಪಿಯೂಸ್, ಮೇಕೇರಿ ವಲಯ ಪೊನ್ನಪ್ಪ, ಶಾರದಾ, ಜಗತ್, ವಿಜಯಲಕ್ಷ್ಮಿ, ಬೂತ್ ಅಧ್ಯಕ್ಷರು ಕೊರಗಪ್ಪ, ಶಂಕರ ಪೂಜಾರಿ, ತಿಮ್ಮಯ್ಯ, ಪಂಚಾಯಿತಿ ಸದಸ್ಯರು ಹನೀಫ್, ಸೂರಜ್ ಹೊಸೂರು, ಉದಯ ಅಯ್ಯಪ್ಪ, ಸಾಕಿಬ್, ಪ್ರಕಾಶ್, ಆಪ್ರು ರವೀಂದ್ರ, ರತ್ನಕರ್ ರೈ,ಅಭಿನ್ ರೈ ಹಾಗೂ ಉಪಸ್ಥಿತರಿದ್ದರು.
Kodagu
ಕ್ರಿಸ್ಮಸ್ ಗಾನ ತರಂಗ ಜಿಲ್ಲಾ ಮಟ್ಟದ ಗಾಯನ ಹಾಗೂ ಚಿತ್ರಕಲೆ ಸ್ಪರ್ಧೆ
ಮಡಿಕೇರಿ: ಕೊಡಗು ಜಿಲ್ಲಾ ರೋಮನ್ ಕ್ಯಾಥೋಲಿಕ್ ಅಸೋಸಿಯೇಷನ್, ವಿರಾಜಪೇಟೆ ಮತ್ತು ಪೊನ್ನಂಪೇಟೆ ತಾಲ್ಲೂಕು ಘಟಕ ಹಾಗೂ ಸಂತ ಅನ್ನಮ್ಮ ದೇವಾಲಯದ ಸಹಯೋಗದಲ್ಲಿ ಡಿ.7 ರಂದು ಕ್ರಿಸ್ಮಸ್ ಗಾನ ತರಂಗ ಜಿಲ್ಲಾ ಮಟ್ಟದ ಗಾಯನ ಹಾಗೂ ಚಿತ್ರಕಲೆ ಸ್ಪರ್ಧೆ ಆಯೋಜಿಸಲಾಗಿದೆ ಎಂದು ಅಸೋಸಿಯೇಷನ್ ಅಧ್ಯಕ್ಷ ಜಾನ್ಸನ್ ಪಿಂಟೋ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಭಾನುವಾರ ಬೆಳಿಗ್ಗೆ 10 ಗಂಟೆಗೆ ವಿರಾಜಪೇಟೆಯ ಸಂತ ಅನ್ನಮ್ಮ ದೇವಾಲಯದ ಸಭಾಂಗಣದಲ್ಲಿ ಮೂರನೇ ವರ್ಷದ ಸ್ಪರ್ಧೆ ನಡೆಯಲಿದ್ದು, ವಿರಾಜಪೇಟೆ ವಲಯ ಶ್ರೇಷ್ಠ ಗುರು ಫಾ.ಜೇಮ್ಸ್ ಡೊಮೆನಿಕ್ ಧ್ವಜಾರೋಹಣ ಹಾಗೂ ಸ್ಪರ್ಧೆಯನ್ನು ಉದ್ಘಾಟಿಸಲಿದ್ದಾರೆ.
ಮಧ್ಯಾಹ್ನ 2.30 ಗಂಟೆಗೆ ಮೈಸೂರು ಧರ್ಮಕ್ಷೇತ್ರದ ಧರ್ಮಾಧ್ಯಕ್ಷ ರೆ.ಡಾ.ಫ್ರಾನ್ಸೀಸ್ ಸೆರಾವೋ ಎಸ್.ಜೆ. ದಿವ್ಯ ಸಾನಿಧ್ಯ ಹಾಗೂ ಆಶೀರ್ವಚನ ನೀಡಲಿದ್ದು, ಮುಖ್ಯ ಅತಿಥಿಗಳಾಗಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಪಾಲ್ಗೊಳ್ಳಲಿದ್ದಾರೆ.

ಅಧ್ಯಕ್ಷತೆಯನ್ನು ಕೊಡಗು ಜಿಲ್ಲಾ ರೋಮನ್ ಕ್ಯಾಥೋಲಿಕ್ ಅಸೋಶಿಯೇಶನ್ನ ವಿರಾಜಪೇಟೆ ಹಾಗೂ ಪೊನ್ನಂಪೇಟೆ ತಾಲ್ಲೂಕು ಘಟಕದ ಅಧ್ಯಕ್ಷ ಅಂತೋಣಿ ರಾಬಿನ್ ವಹಿಸಲಿದ್ದು, ವಿರಾಜಪೇಟೆ ಶ್ರೇಷ್ಠ ಗುರು, ಸ್ಪರ್ಧೆಯ ಪ್ರಧಾನ ಪೋಷಕ ಫಾ.ಜೇಮ್ಸ್ ಡೊಮೆನಿಕ್, ಕೊಡಗು ಜಿಲ್ಲಾ ರೋಮನ್ ಕ್ಯಾಥೋಲಿಕ್ ಅಸೋಶಿಯೇಶನ್ನ ಜಿಲ್ಲಾಧ್ಯಕ್ಷ ಜಾನ್ಸನ್ ಪಿಂಟೋ ಉಪಸ್ಥಿತರಿರಲಿದ್ದಾರೆ.
ಕಾರ್ಯಕ್ರಮದ ಪೋಷಕರಾಗಿ ಎಂ.ಡಿ.ಅರಾಟ್ ಗ್ರೂಪ್ನ ಟೋನಿ ವಿನ್ಸೆಂಟ್, ವಿಶೇಷ ಆಹ್ವಾನಿತರಾಗಿ ಎಐಸಿಸಿ ಅಲ್ಪಸಂಖ್ಯಾತರ ವಿಭಾಗದ ಉಪಾಧ್ಯಕ್ಷ ಡಿ.ಕೆ.ಬ್ರಿಜೇಶ್, ಬೆಂಗಳೂರು ಸೇಂಟ್ ಜಾನ್ಸ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಹಣಕಾಸಿನ ನಿರ್ದೇಶಕರಾದ ಫಾ.ಎ.ಜೆ.ಟೋನಿ, ವಿರಾಜಪೇಟೆ ವೃತ್ತ ನಿರೀಕ್ಷಕ ಅನೂಪ್ ಮಾದಪ್ಪ, ಕಾರ್ಯಕ್ರಮ ಸಹ ಪ್ರಾಯೋಜಕ ಭಾರತ ವಲಯ ಸಮುದಾಯ ಸೇವಾ ಅಧ್ಯಕ್ಷ ಮೈಮ್ ದಿನೇಶ್ ಮತಿಯಾಸ್ ಭಾಗವಹಿಸಲಿದ್ದಾರೆ.

ಗೌರವ ಅತಿಥಿಗಳಾಗಿ ಮಡಿಕೇರಿ ವಲಯ ಶ್ರೇಷ್ಠ ಗುರು ಫಾ.ಜಾರ್ಜ್ ದೀಪಕ್, ದಕ್ಷಿಣ ಮಧ್ಯ ಭಾರತ ವಲಯ ನಿರ್ದೇಶಕ ಮೈಮ್ ಮ್ಯಾಥ್ಯೂ ಕುರಿಯನ್, ವಿರಾಜಪೇಟೆ ಸಂತ ಅನ್ನಮ್ಮ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಫಾ.ಮದಲೈ ಮುತ್ತು, ಪೊನ್ನಂಪೇಟೆ ಸಂತ ಅಂತೋಣಿ ದೇವಾಲಯದ ಧರ್ಮಗುರು ಫಾ.ಮ್ಯಾನುವೆಲ್ ಡಿ’ಸೋಜ, ಗೋಣಿಕೊಪ್ಪ ಸಂತ ತೋಮಸ್ ಶಾಲೆ ಪ್ರಾಂಶುಪಾಲ ಫಾ.ಆಂಟೋನಿ ಪಯಾಂಪಳ್ಳಿ, ವಿರಾಜಪೇಟೆ ಸಂತ ಅನ್ನಮ್ಮ ದೇವಾಲಯದ ಸಹಾಯಕ ಗುರು ಫಾ.ಅಭಿಲಾಶ್ ಜಾರ್ಜ್, ಕೆದಮುಳ್ಳೂರು ಫಾತಿಮಾ ಮಾತಾ ದೇವಾಲಯ ಧರ್ಮಗುರು ಫಾ.ವಿಲ್ಫ್ರೆಡ್ ಎ, ಕೂಡಿಗೆ ಪವಿತ್ರ ಕುಟುಂಬ ದೇವಾಲಯ ಧರ್ಮಗುರು ಫಾ.ಚಾರ್ಲ್ಸ್ ನೊರೋನ, ಕೊಡಗು ಜಿಲ್ಲಾ ರೋಮನ್ ಕ್ಯಾಥೋಲಿಕ್ ಅಸೋಶಿಯೇಶನ್ ಕಾರ್ಯಾಧ್ಯಕ್ಷ ಲಾರೆನ್ಸ್ ವಿ.ಎ., ಉಪಾಧ್ಯಕ್ಷ ಜೋಕಿಂ ರಾಡ್ರಿಗಸ್ ಪಾಲ್ಗೊಳ್ಳಲಿದ್ದಾರೆ.

ಸೌತ್ ಕೊಡಗು ಕ್ರಿಶ್ಚಿಯನ್ ಅಸೋಶಿಯೇಶನ್ ಅಧ್ಯಕ್ಷ ಎ.ಜೆ.ಬಾಬು, ಕೊಡಗು ಕ್ರೈಸ್ತ ಸೇವಾ ಸಂಘದ ಅಧ್ಯಕ್ಷ ಬೇಬಿ ಮ್ಯಾಥ್ಯೂ, ದಿವ್ಯ ಜ್ಯೋತಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಸಿರಿಲ್ ಮೊರಾಸ್, ವಿರಾಜಪೇಟೆ ಸೆಂಟ್ ಜೋಸೇಫ್ ಕಾನ್ವೆಂಟ್ ಸಿಸ್ಟರ್ ರೋಸಿ ಡಿ’ಸ, ಪಾಲಿಬೆಟ್ಟ ಲೂರ್ದು ಮಾತೆ ಕಾನ್ವೆಂಟ್ ಸಿಸ್ಟರ್ ತೆರೇಸಾ ಆನ್, ಸಂತ ಅನ್ನಮ್ಮ ದೇವಾಲಯ ಪಾಲನಾ ಸಮಿತಿ ಕಾರ್ಯದರ್ಶಿ ಆಂಟೋನಿ ಆಲ್ವಾರೀಸ್ ಭಾಗವಹಿಸಲಿದ್ದಾರೆ.
ಸಂಜೆ ೫ ಗಂಟೆಗೆ ಬಹುಮಾನ ವಿತರಣೆ ಹಾಗೂ ಸಮಾರೋಪ ಸಮಾರಂಭ ನಡೆಯಲಿದ್ದು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ರೋಮನ್ ಕ್ಯಾಥೋಲಿಕ್ ಅಸೋಸಿಯೇಶನ್ ಅಧ್ಯಕ್ಷ ಜಾನ್ಸನ್ ಪಿಂಟೋ ವಹಿಸಲಿದ್ದು, ವಿರಾಜಪೇಟೆ ಹಾಗೂ ಪೊನ್ನಂಪೇಟೆ ತಾಲ್ಲೂಕು ಘಟಕದ ಅಧ್ಯಕ್ಷ ಅಂತೋಣಿ ರಾಬಿನ್ ಉಪಸ್ಥಿತರಿರಲಿದ್ದಾರೆ.

ಗೌರವ ಅತಿಥಿಗಳಾಗಿ ವಿರಾಜಪೇಟೆ ವಲಯ ಶ್ರೇಷ್ಠ ಗುರು ಫಾ.ಜೆಮ್ಸ್ ಡೊಮೆನಿಕ್, ಸಂತ ಅನ್ನಮ್ಮ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರಾದ ಫಾ.ಮದಲೈ ಮುತ್ತು, ರಾಜ್ಯ ಕಾಂಗ್ರೆಸ್ ಸೇವಾದಳ ಕಾರ್ಯದರ್ಶಿ ತೆರೇಸಾ ವಿಕ್ಟರ್, ವಿರಾಜಪೇಟೆ ತಾಲ್ಲೂಕು ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿ ಅಧ್ಯಕ್ಷ ಜಾನ್ಸನ್ ಪಿ.ವಿ, ಉದ್ಯಮಿಗಳಾದ ಪೌಲ್ ಕ್ಷೇವಿಯರ್, ಜಾರ್ಜ್ ರಾಮಪುರಂ, ಚೋಪಿ ಜೋಸೆಫ್, ಮಾರ್ಟಿನ್ ಬರ್ನಾಡ್, ಆಲ್ವಿನ್ ಡಿಸೋಜ, ವಿ.ಎಸ್.ಸಜಿ, ಎನ್.ಟಿ.ಜೋಸೆಫ್, ನಿವೃತ್ತ ಉಪನಿರ್ದೇಶಕರಾದ ಪೆಲಿಗ್ರಿನ್ ಮಚ್ಚಾಡೋ, ವಿರಾಜಪೇಟೆ ಪುರಸಭೆ ಸದಸ್ಯ ಬೆನ್ನಿ ಅಗಸ್ಟಿನ್, ರೋಮನ್ ಕ್ಯಾಥೋಲಿಕ್ ಅಸೋಸಿಯೇಶನ್ ಕಾರ್ಯದರ್ಶಿ ಅಂತೋಣಿ ಡಿಸೋಜ, ಉಪಾಧ್ಯಕ್ಷ ಜೋಕಿಂ ರಾಡ್ರಿಗಸ್, ಕಾರ್ಯಾಧ್ಯಕ್ಷ ಲಾರೆನ್ಸ್ ವಿ.ಎ., ಸಂಘಟನಾ ಕಾರ್ಯದರ್ಶಿ ಮರ್ವಿನ್ ಲೋಬೋ, ಯುವ ಘಟಕದ ಅಧ್ಯಕ್ಷ ಕೆವಿನ್ ಶಾಲೂಮೊನ್, ಗೌರವಾಧ್ಯಕ್ಷ ಜೋಕಿಂ ವಾಸ್, ನಿಕಟ ಪೂರ್ವ ಅಧ್ಯಕ್ಷ ಎಸ್.ಎಂ.ಡಿ’ಸಿಲ್ವ, ಮಹಿಳಾ ಘಟಕದ ಅಧ್ಯಕ್ಷೆ ಫಿಲೋಮಿನಾ ಜೆ, ಪ.ಪೂ.ಕಾಲೇಜುಗಳ ಉಪನ್ಯಾಸಕರ ಸಂಘದ ಫಿಲಿಪ್ ವಾಸ್ ಭಾಗವಹಿಸಲಿದ್ದಾರೆ ಎಂದು ಜಾನ್ಸನ್ ಪಿಂಟೋ ತಿಳಿಸಿದರು.

ಸ್ಪರ್ಧೆಯಲ್ಲಿ ಒಂದು ಧರ್ಮಕೇಂದ್ರದಿಂದ ಹಾಗೂ ಒಂದು ವಿದ್ಯಾಕೇಂದ್ರದಿಂದ ಒಂದು ತಂಡಕ್ಕೆ ಮಾತ್ರ ಅವಕಾಶ ಕಲ್ಪಿಸಲಾಗಿದ್ದು, ಕನಿಷ್ಠ 5 ಸದಸ್ಯರು ಗರಿಷ್ಠ 20 ಸದಸ್ಯರು ಇರಬೇಕು. ವಿಜೇತರಿಗೆ ಪ್ರಥಮ ರೂ.20,000 ದ್ವಿತೀಯ 15,000 ಹಾಗೂ ತೃತೀಯ ರೂ.10,000 ನಗದು ಹಾಗೂ ಆಕರ್ಷಕ ಟ್ರೋಫಿ ನೀಡಲಾಗುವುದೆಂದರು.
ಚಿತ್ರಕಲೆ ಸ್ಪರ್ಧೆ ಎರಡು ವಿಭಾಗಗಳಿದ್ದು, ಸ್ಪರ್ಧಿಗಳು ತಮ್ಮ ಸ್ವಂತ ಧರ್ಮಕೇಂದ್ರ ಅಥವಾ ಶಿಕ್ಷಣ ಸಂಸ್ಥೆಗೆ ಮಾತ್ರವೇ ಪಾಲ್ಗೊಳ್ಳಲು ಅರ್ಹರಾಗಿರುತ್ತಾರೆ. ವಿಜೇತರಾದವರಿಗೆ ಪ್ರಥಮ ರೂ.3,000, ದ್ವಿತೀಯ 2,000 ಹಾಗೂ ತೃತೀಯ 1,000 ನಗದು ಹಾಗೂ ಟ್ರೋಫಿ ವಿತರಿಸಲಾಗುದೆಂದು ತಿಳಿಸಿದರು.
ಸ್ಪರ್ಧೆಯಲ್ಲಿ 20ಕ್ಕಿಂತ ಹೆಚ್ಚಿನ ತಂಡಗಳು ಸ್ಪರ್ಧಿಸಲಿದ್ದು, ಜಿಲ್ಲೆಯ ಸಮುದಾಯ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಜಾನ್ಸನ್ ಪಿಂಟೋ ಮನವಿ ಮಾಡಿದರು.

ಅಸೋಸಿಯೇಶನ್ ಕಾರ್ಯಾಧ್ಯಕ್ಷ ವಿ.ಎ.ಲಾರೆನ್ಸ್ ಮಾತನಾಡಿ, ಅಲ್ಪಸಂಖ್ಯಾತರ ಇಲಾಖೆ ಹಾಗೂ ಕ್ರಿಶ್ಚಿಯನ್ ಡೆವಲಪ್ಮೆಂಟ್ ಬೋರ್ಡ್ (ಸಿಡಿಸಿ) ನಲ್ಲಿ ದೊರಕುವ ಯೋಜನೆಗಳ ಬಗ್ಗೆ ಸಮುದಾಯ ಬಾಂಧವರಿಗೆ ಅರಿವು ಮೂಡಿಸುವ ಸಲುವಾಗಿ ಮುಂದಿನ ದಿನಗಳಲ್ಲಿ ಜಿಲ್ಲೆಯ ಐದು ತಾಲ್ಲೂಕುಗಳಲ್ಲಿ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಮಾಹಿತಿ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಅಸೋಸಿಯೇಷನ್ನ ಕಾರ್ಯದರ್ಶಿ ಆಂಟೋಣಿ ಡಿ’ಸೋಜ, ಉಪಾಧ್ಯಕ್ಷ ಜೋಕಿಂ ರಾಡಿಗಸ್, ಖಜಾಂಚಿ ಜೇಮ್ಸ್ ಡಿ’ಸೋಜಾ, ಸಂಘಟನಾ ಕಾರ್ಯದರ್ಶಿ ಮರ್ವೀನ್ ಲೋಬೋ ಉಪಸ್ಥಿತರಿದ್ದರು.
-
State8 hours agoಡಿವೈಡರ್ಗೆ ಕಾರ್ ಡಿಕ್ಕಿ, ಹೊತ್ತಿ ಉರಿದ ಕಾರಿನೊಳಗೆ ಲೋಕಾಯುಕ್ತ ಇನ್ಸ್ಪೆಕ್ಟರ್ ಸಜೀವ ದಹನ
-
Hassan5 hours agoನಗರದ ಇಂಜಿನಿಯರ್ ಕಾಲೇಜು ಆವರಣದಲ್ಲಿ ಸರ್ಕಾರಿ ಸೇವೆಗಳ ಸಮರ್ಪಣ ಸಮಾವೇಶ
-
State21 hours agoSSLC ಪಾಸ್ ಆದವರಿಗೆ ಸರ್ಕಾರಿ ನೌಕರಿ ಚಾನ್ಸ್! ಸಂಪೂರ್ಣ ಮಾಹಿತಿ ಇಲ್ಲಿದೆ…
-
Chikmagalur23 hours agoವಿದ್ಯಾರ್ಥಿಗಳಿಗೆ ಉಚಿತ ಪಠ್ಯ ನೋಟ್ ಪುಸ್ತಕ ವಿತರಣೆ, ಮುಂದಿನ ಶೈಕ್ಷಣಿಕ ವರ್ಷದಿಂದ ಅನುಷ್ಠಾನ: ಮಧು ಬಂಗಾರಪ್ಪ
-
National21 hours agoಪಲಾಶ್ ಮುಚ್ಚಲ್ರೊಂದಿಗೆ ಮದುವೆ ಮುಂದೂಡಿದ ನಂತರ ಮೊದಲ ಪೋಸ್ಟ್ ಹಂಚಿಕೆಕೊಂಡ ಸ್ಮೃತಿ ಮಂದಾನ
-
Mysore22 hours agoನಾಳೆಯಿಂದ ಸಿಗ್ಮಾ ಆಸ್ಪತ್ರೆಯಲ್ಲಿ ಉಚಿತ ಥೈರಾಯ್ಡ್ ತಪಾಸಣೆ
-
Hassan7 hours agoಅಂಬೇಡ್ಕರ್ ತತ್ತ್ವ, ಸಿದ್ಧಾಂತಗಳು ಶಾಶ್ವತ: ಸಂಸದ ಶ್ರೇಯಸ್ ಪಟೇಲ್
-
Chikmagalur10 hours agoಬ್ಯಾನರ್ ತೆರವು ವಿಚಾರಕ್ಕೆ ಕಾಂಗ್ರೆಸ್ ಕಾರ್ಯಕರ್ತನ ಹ*ತ್ಯೆ
