Crime
ತಂದೆ ಮೇಲೆ ಕಲ್ಲು ಎತ್ತಿಹಾಕಿ ಕೊಂದ ಪಾಪಿ ಮಗ
ಮಂಡ್ಯ: ಆಸ್ತಿಯನ್ನು ಮಗಳ ಹೆಸರಿಗೆ ಬರೆದುಕೊಟ್ಟಿದ್ದರಿಂದ ತಂದೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ ಮಾಡಿರುವ ಘಟನೆ ತಾಲ್ಲೂಕಿನ ಸುಂಡಹಳ್ಳಿ ಗ್ರಾಮದಲ್ಲಿ ಮಂಗಳವಾರ ಬೆಳಿಗ್ಗೆ ನಡೆದಿದೆ.
ಗ್ರಾಮದ ನಂಜಪ್ಪ(70) ಅವರನ್ನ ಆತನ ಮಗ ಮಹದೇವ್ ಹತ್ಯೆಗೈದು ಪರಾರಿಯಾಗಿದ್ದಾನೆ. ಹೆತ್ತ ಮಗನೇ ತಂದೆ ಮೇಲೆ ಕಲ್ಲು ಎತ್ತಿ ಹಾಕಿ ಹತ್ಯೆ ಮಾಡಿರುವ ದಾರುಣ ಘಟೆನಗೆ ಇಡೀ ಗ್ರಾಮವೇ ಬೆಚ್ಚಿಬಿದ್ದಿದೆ. ಅಪ್ಪ ಮಗನ ನಡುವೆ ನಡೆಯುತ್ತಿದ್ದ ಜಗಳ ಬಿಡಿಸಲು ಬಂದ ತಾಯಿ ಮೇಲು ಸಹ ಮಾರಣಾಂತಿಕ ಹಲ್ಲೆ ನಡೆಸಿರುವ ಮಹದೇವ್ ಕೋಪ ತಂದೆಯ ಕೊಲೆಯಲ್ಲಿ ಅಂತ್ಯವಾಗಿದೆ ಎನ್ನಲಾಗಿದೆ.
ನಂಜಪ್ಪ ತನ್ನ ಆಸ್ತಿಯನ್ನು ಮಗಳಿಗೆ ಬರೆದು ಕೊಟ್ಟಿದ್ದನು ಇದರಿಂದ ಮಗ ಮಹದೇವ್ ಹಾಗಾಗ್ಗೆ ಜಗಳ ತೆಗೆಯುತ್ತಿದ್ದನು, ಮಂಗಳವಾರ ಬೆಳಗಿನ ಜಾವ ಜಗಳ ವಿಕೋಪಕ್ಕೆ ತಿರುಗಿದ್ದು ತಂದೆ ನಂಜಪ್ಪನನ್ನು ರಸ್ತೆಯಲ್ಲಿ ಅಟ್ಟಾಡಿಸಿದ ಮಗ ಹಲ್ಲೆ ಮಾಡಿದ್ದು ತಡೆಯಲು ಬಂದ ತಾಯಿ ಮೇಲೆಯೂ ಹಲ್ಲೆ ಮಾಡಿದ್ದಾನೆ, ರಸ್ತೆಯಲ್ಲಿಯೇ ಕೆಳಕ್ಕೆ ಬಿದ್ದ ನಂಜಪ್ಪನ ಮೇಲೆ ಕಲ್ಲು ಎತ್ತಿ ಹಾಕಿದ್ದು, ಇದರಿಂದ ಸ್ಥಳದಲ್ಲಿಯೇ ಪ್ರಾಣ ಬಿಟ್ಟಿದ್ದಾನೆ.
ನಂಜಪ್ಪ ಅವರು ರಾಮನಗರದ ಜಿಲ್ಲೆ, ಅರ್ಚಕರಹಳ್ಳಿ ಗ್ರಾಮದವರಾಗಿದ್ದು, ತನ್ನ ಮಗಳನ್ನು ತಾಲ್ಲೂಕಿನ ಸುಂಡಹಳ್ಳಿ ಗ್ರಾಮದ ಯುವಕನಿಗೆ ಕೊಟ್ಟು ವಿವಾಹ ಮಾಡಿಕೊಟ್ಟಿದ್ದರು. ನಂತರದ ದಿನಗಳಲ್ಲಿ ಮಗಳು ಅಳಿಯ ಇದ್ದ ಸುಂಡಹಳ್ಳಿ ಗ್ರಾಮಕ್ಕೆ ಬಂದು ಬೇರೆ ನೆಲೆಸಿದ್ದ ಇವರು, ಗ್ರಾಮದಲ್ಲಿ ಸ್ವಂತ ಮನೆ ಮತ್ತು ಜಮೀನು ಮಾಡಿಕೊಂಡು ಬದುಕು ನಡೆಸುತ್ತಿದ್ದರು.
ಸುಂಡಹಳ್ಳಿ ಗ್ರಾಮದ ಬಳಿ ಇದ್ದ ಜಮೀನು ಮಾರಾಟ ಮಾಡಲು ಮುಂದಾಗಿದ್ದರು. ಈ ವೇಳೆ ಮಗಳು ತಕರಾರು ತೆಗೆದಿದ್ದಳು. ನಂತರ ಸಮಾಧಾನಪಡಿಸಿ ಸ್ವಲ್ಪ ಹಣಕಾಸಿನ ಸಹಾಯ ಮಾಡಿದ್ದರು. ಇದರಿಂದ ಕುಪಿತಗೊಂಡಿದ್ದ ಮಗ ಮಹದೇವ ಆಗಾಗ್ಗೆ ಜಗಳ ಮಾಡುತ್ತಿದ್ದ, ಜಮೀನು ಮಾರಾಟ ಮಾಡಿ ಅದರಲ್ಲೂ ಮಗಳಿಗೆ ಹಂಚಿಕೆ ಮಾಡಿದ್ದರಿಂದ ಕುಪಿತಗೊಂಡ ಮಗ ಆಗಾಗ್ಗೆ ಜಗಳ ತೆಗೆಯುತ್ತಿದ್ದ, ಈಗ ಆ ಜಗಳ ವಿಕೋಪಕ್ಕೆ ತಿರುಗೆ ತಂದೆಯನ್ನೇ ಹತ್ಯೆ ಮಾಡಿದ್ದಾನೆ.
ಈ ಸಂಬಂಧ ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Crime
ಕಟ್ಟಿನಮನೆ ಬಳಿ ಗಾಳಿ ಮಳೆಯಿಂದ ಮರ ಬಿದ್ದು ಓರ್ವ ಮಹಿಳೆ ಭೀಕರ ದುರ್ಮರಣ..ಮೂವರಿಗೆ ಗಾಯ
ನರಸಿಂಹರಾಜಪುರ ತಾಲೂಕಿನ ಕಾನೂರು ಪಂಚಾಯತ್ ವ್ಯಾಪ್ತಿಯ ಕಟ್ಟಿನಮನೆ ಗ್ರಾಮದಲ್ಲಿ ಪೂಜೆ ಮುಗಿಸಿ ಮನೆಗೆ ತೆರುಳುವ ಸಂದರ್ಭದಲ್ಲಿ ಭಾರಿ ಗಾಳಿಯಿಂದಾಗಿ ಮರ ಬಿದ್ದು ಮಹಿಳೆ ಮೃತಪಟ್ಟಿದ್ದಾರೆ.
Crime
ಬಿಹಾರ : ಮದುವೆ ಮನೆಯಲ್ಲಿ ಪತ್ನಿ ಡಾನ್ಸ್ | ಬೇಸರಗೊಂಡು ಪತಿ ಆತ್ಮಹತ್ಯೆ
ಬಾವನ ಮದುವೆಯಲ್ಲಿ ಪತ್ನಿ ಡಾನ್ಸ್ ಮಾಡಿದಳೆಂದು ಬೇಸರಗೊಂಡ ಪತಿ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬಿಹಾರದ ಬದಾರಿಯಾದಲ್ಲಿ ನಡೆದಿದೆ.
ಬಹುಲಾ ಗ್ರಾಮದ ನಿವಾಸಿ 35 ವರ್ಷದ ಗೋಪಾಲ್ ಸಿಂಗ್, ರಸೂಲ್ಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಮಹೇಂದ್ರ ನಾಥ್ ಹಾಲ್ಟರ್ ರೈಲು ನಿಲ್ದಾಣದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾನೆ.
ಗೋಪಾಲ್ ಸಿಂಗ್ ಬೇನತ್ ಗ್ರಾಮದಲ್ಲಿ ತನ್ನ ಪತ್ನಿಯ ಸಹೋದರನ ಮದುವೆ ಸಮಾರಂಭಕ್ಕೆ ಹೋಗಿದ್ದರು. ಈ ವೇಳೆ ಸಂಭ್ರಮದಲ್ಲಿ ಡಾನ್ಸ್ ಮಾಡುತ್ತಿದ್ದ ಪತ್ನಿಯನ್ನು ನೋಡಿ ಅಸಮಾಧಾನಗೊಂಡು ಗೋಪಾಲ್ ಆಕೆಯನ್ನು ತಡೆದಿದ್ದಾನೆ.
ಕುಟುಂಬಸ್ಥರ ಮಾಹಿತಿ ಪ್ರಕಾರ ಗೋಪಾಲ್ ಡಾನ್ಸ್ ಮಾಡುತ್ತಿದ್ದ ತನ್ನ ಪತ್ನಿಯನ್ನು ಸುಮ್ಮನಿರುವಂತೆ ಸೂಚಿಸಿದ್ದನು. ಆದರೆ ಆಕೆ ಮಾತ್ರ ಆತನ ಮಾತಿಗೆ ಒಪ್ಪಲಿಲ್ಲ. ಈ ವೇಳೆ ಇಬ್ಬರ ನಡುವೆ ಸಣ್ಣ ಜಗಳ ನಡೆದಿದೆ.
ಆಗ ಬಾವ-ಬಾಮೈದರ ನಡುವೆ ಮಾತಿಗೆ ಮಾತು ಬೆಳೆದು ಜಗಳ ತಾರಕಕ್ಕೇರಿತ್ತು. ಇದರಿಂದ ತೀರ ಬೇಸರಗೊಂಡಿದ್ದ ಗೋಪಾಲ್, ರೈಲು ಬರುತ್ತಿದ್ದ ಸಮಯ ನೋಡಿಕೊಂಡು ಹಳಿಗೆ ಹಾರಿಗೆ ಪ್ರಾಣ ಬಿಟ್ಟಿದ್ದಾನೆ. ಪ್ರಕರಣ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
Crime
ಕಾರು ಡಿಕ್ಕಿಯಾಗಿ ಮಹಿಳೆ ದುರ್ಮರಣ
*ಮದುವೆಗೆ ಬಂದ ಮಹಿಳೆ ಸ್ಮಶಾನ ಸೇರಿದರು.
ಸಂಬಂಧಿಕರ ಮದುವೆಗೆಂದು ಬಂದಿದ್ದ ಮಹಿಳೆಯೊಬ್ಬರು ಮಾರುತಿ ಕಾರು ಡಿಕ್ಕಿ ಹೊಡೆದ ಪರಿಣಾಮ ಅಸು ನೀಗಿರುವ ಘಟನೆ ಇಂದು ಮಧ್ಯಾಹ್ನ ಸುಂಟಿಕೊಪ್ಪ ಸಮೀಪದ ಗದ್ದೆಹಳ್ಳದಲ್ಲಿ ನಡೆದಿದೆ. ಕಾಸರಗೋಡುವಿನ ರಾಬಿಯ ಎಂಬುವವರು ಮೃತ ದುರ್ದೈವಿ. 7ನೇ ಹೊಸಕೋಟೆಯಲ್ಲಿರುವ ಇವರ ಸಂಬಂಧಿಯ ವಿವಾಹ ಗದ್ದೆಹಳ್ಳದಲ್ಲಿ ನಡೆಯುತ್ತಿತ್ತು. ಮದುವೆಯಲ್ಲಿ ಪಾಲ್ಗೊಂಡಿದ್ದ ರಾಬಿಯ ರಸ್ತೆ ಬದಿಯಲ್ಲಿ ನಿಂತಿದ್ದರು.
ಈ ಸಂದರ್ಭ ಗಿರಿಯಪ್ಪ ಮನೆ ಗದ್ದೆ ನಿವಾಸಿ ಪೊನ್ನಪ್ಪ ಎಂಬುವವರ ಪುತ್ರ ಶರತ್ ಎಂಬಾತ ವೇಗವಾಗಿ ಚಲಾಯಿಸಿಕೊಂಡು ಬಂದ ಮಾರುತಿ ಕಾರು ಮೂವರು ಮಹಿಳೆಯರಿಗೆ ಡಿಕ್ಕಿಪಡಿಸಿ ಗಾಯಗೊಳಿಸಿದೆ. ಅಲ್ಲಿಯೂ ನಿಯಂತ್ರಣಕ್ಕೆ ಬಾರದ ಕಾರು ಮುಂದಕ್ಕೆ ಚಲಿಸಿ ರಾಬಿಯ ಅವರಿಗೆ ಗುದ್ದಿ ಅವರೊಂದಿಗೆ ವಿದ್ಯುತ್ ಕಂಬಕ್ಕೆ ಅಪ್ಪಳಿಸಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ರಾಬಿಯ ಸ್ಥಳದಲ್ಲಿಯೇ ಉಸಿರು ಚೆಲ್ಲಿದ್ದಾರೆ. ಕಾರು ಡಿಕ್ಕಿಯಾಗಿ ಗಾಯಗೊಂಡಿರುವ ಇನ್ನುಳಿದ ಮೂವರು ಮಹಿಳೆಯರನ್ನು ಮಡಿಕೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
-
Mysore3 weeks ago
ಶ್ರೀಮತಿ ಭವಾನಿ ರೇವಣ್ಣ ಸಹೋದರ ಇಂದು ಅಂತ್ಯಕ್ರಿಯೆ
-
State3 months ago
Free sewing machine, ಉಚಿತ ಹೊಲಿಗೆ ಯಂತ್ರ ಪಡೆಯಲು ಅರ್ಜಿ ಸಲ್ಲಿಸಿ!
-
Hassan3 weeks ago
ಹಾಸನ ಜಿಲ್ಲೆ ಹೊಳೆನರಸೀಪುರ ತಾಲ್ಲೂಕಿನ ಹರದನಹಳ್ಳಿಯಲ್ಲಿ ಸಂಸದ ಪ್ರಜ್ವಲ್ ರೇವಣ್ಣ ಹೇಳಿಕೆ
-
State4 months ago
ಶಾಲಾ ಮಕ್ಕಳಿಗೆ ಫೆಬ್ರವರಿ ತಿಂಗಳಲ್ಲಿ ಭರ್ಜರಿ ಹಾಲಿಡೇ! ಇಲ್ಲಿದೆ ರಜಾ ಲಿಸ್ಟ್!!!
-
Health3 months ago
Sugar Control ಆಗಬೇಕು ಅಂದ್ರೆ ಈ ಹಿಟ್ಟನ್ನು ತಿನ್ನಬೇಕಂತೆ! ಕನ್ಫ್ಯೂಸ್ ಆಗ್ಬೇಡಿ ಸುದ್ದಿ ಓದಿ
-
Uncategorized5 months ago
ಅರ್ಜುನನ ಸಮಾದಿಗೆ ಪೂಜೆ ಸಲ್ಲಿಸಿದ ಮೈಸೂರು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್
-
State3 months ago
ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ!!. ‘ಹಳೆ ಪಿಂಚಣಿ’ ಜಾರಿಗೆ ಗ್ರೀನ್ ಸಿಗ್ನಲ್ ಕೊಟ್ಟ ರಾಜ್ಯ ಸರ್ಕಾರ.
-
Education3 months ago
ಎಸ್ಎಸ್ಎಲ್ಸಿ. PUC ವಿದ್ಯಾರ್ಥಿಗಳ ʼMarks Card’ ನಲ್ಲಿ ಮಹತ್ವದ ಬದಲಾವಣೆ