Chikmagalur
ರಸ್ತೆ ಬದಿ ನಿಲ್ಲಿಸಿದ ವಾಹನಕ್ಕೆ ಹಿಂದಿನಿಂದ ಡಿಕ್ಕಿ ಹೊಡೆದ ಲಾರಿ

ಚಿಕ್ಕಮಗಳೂರು : ರಸ್ತೆ ಬದಿ ನಿಲ್ಲಿಸಿದ್ದ ಮಿನಿ ಗೂಡ್ಸ್ ವಾಹನಕ್ಕೆ ಹಿಂಬದಿಯಿಂದ ಗೂಡ್ಸ್ ಲಾರಿ ಡಿಕ್ಕಿ ಹೊಡೆದು ಪಲ್ಟಿಯಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ರಾಷ್ಟ್ರೀಯ ಹೆದ್ದಾರಿ ಬಣಕಲ್ ನಲ್ಲಿ ನಡೆದಿದೆ.
ಬೆಂಗಳೂರಿನಿಂದ ಮಂಗಳೂರಿಗೆ ಪ್ರೊಫೆಷನಲ್ ಕೋರಿಯರ್ ತೆಗೆದುಕೊಂಡು ಹೋಗುತ್ತಿದ್ದ ಲಾರಿ, ಬೇಲೂರಿನಿಂದ ಮೂಡಬಿದ್ರೆ ಗೆ ಫೀಡ್ಸ್ ಲೋಡಾಗಿದ್ದ ಗೂಡ್ಸ್ ಮಿನಿ ವಾಹನ ಎನ್ನಲಾಗಿದೆ. ರಸ್ತೆ ಪಕ್ಕ ನಿಲ್ಲಿಸಿದ ಮಿನಿ ಗೂಡ್ಸ್ ವಾಹನಕ್ಕೆ ಅಶೋಕ್ ಲೈಲ್ಯಾಂಡ್ ಲಾರಿನ ಚಾಲಕ ವೇಗವಾಗಿ ಬಂದು ಹಿಂಬದಿಗೆ ಡಿಕ್ಕಿ ಹೊಡೆದಿದ್ದಾನೆ. ಡಿಕ್ಕಿ ಹೊಡೆದ ರಭಸಕ್ಕೆ ಮಿನಿ ಗೂಡ್ಸ್ ವಾಹನ ಪಲ್ಟಿಯಾಗಿ ಎರಡು ವಾಹನಗಳು ಜಖಂ ಆಗಿದೆ. ಅದೃಷ್ಟವಶಾತ್ ಗೂಡ್ಸ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ.
ಸ್ಥಳಕ್ಕೆ ಬಣಕಲ್ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
Chikmagalur
ಭಾರೀ ಬಿರುಗಾಳಿಗೆ ಧರೆಗುರುಳಿದ ಬೃಹತ್ ಮರ, ಕಿ.ಮೀ ಟ್ರಾಫಿಕ್ ಜಾಮ್

ಚಿಕ್ಕಮಗಳೂರು : ಕಾಫಿನಾಡಿನ ಮಲೆನಾಡಲ್ಲಿ ಬಿರುಗಾಳಿ ಮಳೆ ಅಬ್ಬರ ಮುಂದುವರಿದಿದ್ದು. ಬೃಹತ್ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದ ಪರಿಣಾಮ ಕಿ.ಮೀ.ಗಟ್ಟಲೆ ಟ್ರಾಫಿಕ್ ಜಾಮ್ ಆಗಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಬಸರವಳ್ಳಿ ಬಳಿ ನಡೆದಿದೆ. ಚಿಕ್ಕಮಗಳೂರಿನಿಂದ ಶೃಂಗೇರಿ, ಎನ್.ಆರ್ ಪುರ, ಕೊಪ್ಪ, ಬಾಳೆಹೊನ್ನೂರು ಸಂಪರ್ಕ ಕಲ್ಪಿಸುವ ರಾಜ್ಯ ಹೆದ್ದಾರಿಯಲ್ಲಿ ಹಸರವಳ್ಳಿ ಸಮೀಪ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದಿದ್ದು. ವಾಹನಗಳು ನಿಂತಲ್ಲೇ ನಿಂತಿದ್ದು, ಟ್ರಾಫಿಕ್ ಜಾಮ್ ನಿಂದ ವಾಹನ ಸವಾಸರರು ಪರದಾಟ ಪಡುವಂತಾಗಿತ್ತು. ಆಲ್ದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
Chikmagalur
ಧಾರಾಕಾರ ಮಳೆ ಹಿನ್ನೆಲೆ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ

ಚಿಕ್ಕಮಗಳೂರು : ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು. ಮಳೆಯಿಂದಾಗಿ ಚಾಲಕನ ನಿಯಂತ್ರಣ ತಪ್ಪಿ ಕಾರು ವಿದ್ಯುತ್ ಕಂಬಕ್ಕೆ ಗುದ್ದಿ ಕಾಲುವೆಗೆ ನುಗ್ಗಿತುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟಣ ಸಮೀಪದಲ್ಲಿ ನಡೆದಿದೆ. ಸಖರಾಯಪಟ್ಟಣ – ಬಾಣಾವರಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಈ ಅವಘಡ ಸಂಭವಿಸಿದ್ದು. ಕಾರು ಗುದ್ದಿದ ರಭಸಕ್ಕೆ ಮೂರು ವಿದ್ಯುತ್ ಕಂಬಗಳು ಪುಡಿ ಪುಡಿಯಾಗಿದ್ದು. ಕಾರಿನಲ್ಲಿದ್ದವರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆ ಕುರಿತು ಸಖರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
Chikmagalur
ಮರ ಬಿದ್ದು ಬೈಕ್ ಸವಾರ ದು*ರ್ಮರಣ

ಚಿಕ್ಕಮಗಳೂರು : ಬೈಕ್ ಸವಾರನ ಮೇಲೆ ಮರದ ಕೊಂಬೆ ಬಿದ್ದು ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಎಲೆಕಲ್ ಎಲೆಕಲ್ಲು ಬಳಿ ನಡೆದಿದೆ. ಖಾoಡ್ಯಾ ಹೋಬಳಿಯ ಕಡಬಗೆರೆ ನಿವಾಸಿಯಾದ ಅನಿಲ್ ರುಜಾರಿಯೋ (55) ಮರದ ಕೊಂಬೆ ಬಿದ್ದು ಮೃತಪಟ್ಟ ಬೈಕ್ ಸವಾರ. ಬೈಕ್ ನಲ್ಲಿ ತೆರಳುತ್ತಿದ್ದಾಗ ಏಕಾಏಕಿಮರದ ಕೊಂಬೆ ಅನಿಲ್ ರುಜಾರಿಯೋ ಮೇಲೆ ಬಿದ್ದಿದೆ. ಆಂಬುಲೆನ್ಸ್ ಬರೋದು ತಡವಾಗುತ್ತೆಂದು ಅಗ್ನಿಶಾಮಕ ವಾಹನದಲ್ಲಿ ಆಸ್ಪತ್ರೆಗೆ ರವಾನಿಸುವ ಮಾರ್ಗ ಮಧ್ಯೆಯಲ್ಲಿ ತೀವ್ರ ಗಾಯಗೊಂಡಿದ್ದ ಅನಿಲ್ ಸಾವನ್ನಪ್ಪಿದ್ದಾರೆ. ಇನ್ನು ಮಲೆನಾಡು ಭಾಗದಲ್ಲಿ ಸುರಿಯುತ್ತಿರುವ ಮಳೆಗೆ ಇದು 4ನೇ ಬಲಿಯಾಗಿದೆ.
-
Uncategorized23 hours ago
ಸೆಕ್ಯುರಿಟಿ ಸಿಬ್ಬಂದಿಗಳಿಂದ ಯುವಕನ ಮೇಲೆ ಹಲ್ಲೆ ಪ್ರಕರಣ: ಪೊಲೀಸ್ ಕಾನ್ಸ್ಟೇಬಲ್ ಸೇರಿ ಮೂವರ ವಿರುದ್ದ ಎಫ್ಐಆರ್ ದಾಖಲು
-
Mandya23 hours ago
ಮಾಜಿ ಶಾಸಕ ಎಂ.ಡಿ.ಲಕ್ಷ್ಮೀ ನಾರಾಯಣ್ ದಂಪತಿಗಳ 48ನೇ ವರ್ಷದ ವಿವಾಹ ವಾರ್ಷಿಕೋತ್ಸವ ಆಚರಣೆ: ಗಣ್ಯರಿಂದ ಶುಭಹಾರೈಕೆ
-
Hassan10 hours ago
ಹಾಸನದ ಖಾಸಗಿ ಶಾಲಾ-ಕಾಲೇಜಿಗೆ ಬಾಂಬ್ ಹಾಕುವ ಬೆದರಿಕೆ
-
State23 hours ago
SSC ಯಿಂದ 14 ಸಾವಿರಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿ : ಅರ್ಜಿ ಸಲ್ಲಿಸಲು ಯಾರು ಅರ್ಹರು?
-
Kodagu9 hours ago
ಪಂಚಾಯತಿಯಲ್ಲಿ ಶೇ.25 ನಿಧಿಯಲ್ಲಿ ಹೊಲಿಗೆ ಯಂತ್ರ ವಿತರಣೆ.
-
Mandya23 hours ago
2024-25ನೇ ಸಾಲಿನಲ್ಲಿ ಪದವಿ ಮುಗಿಸಿರುವ ವಿದ್ಯಾರ್ಥಿಗಳಿಗೆ ಫೂಲ್ ಪ್ಲೇಸ್ಮೆಂಟ್ ಸಂದರ್ಶನ
-
Chikmagalur11 hours ago
ಕೊಪ್ಪ ತಾಲ್ಲೂಕಿನಲ್ಲಿ ಬೃಹತ್ ಗಾತ್ರದ ಮರ ಉರುಳಿ ರಸ್ತೆ ಬಂದ್
-
Kodagu11 hours ago
ಕೊಡವರ ಅಭಿವೃದ್ಧಿಗೆ ಕಾಂಗ್ರೆಸ್ ಕೊಡುಗೆ ಅಪಾರ