Connect with us

National - International

ಭಾರತದ ಮೇಲಿನ 25% ಹೆಚ್ಚುವರಿ ಸುಂಕ ತೆಗೆಯಲು ಟ್ರಂಪ್‌ ಸಿದ್ಧತೆ!

Published

on

ವಾಷಿಂಗ್ಟನ್‌: ಕೆಲ ದಿನಗಳ ಹಿಂದಷ್ಟೇ ಭಾರತ ಅಮೆರಿಕದಿಂದ ಆಮದಾಗುವ ದ್ವಿದಳ ಧಾನ್ಯಗಳ ಮೇಲೆ 30% ಸುಂಕ. ಇದರಿಂದ ಪೆಟ್ಟು ತಿಂದ ಅಮೆರಿಕ ಈಗ ಭಾರತದ ಮೇಲೆ 25% ಹೆಚ್ಚುವರಿ ಸುಂಕ ತೆಗೆದುಹಾಕಲು ತಯಾರಿ ನಡೆಸಿದೆ.
 ಭಾರತದ ಮೇಲೆ ವಿಧಿಸಲಾದ 25% ಹೆಚ್ಚುವರಿ ಸುಂಕವನ್ನು ತೆಗೆದುಹಾಕಲು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌  ತಯಾರಿ ನಡೆಸಿದ್ದಾರೆ ಎಂದು ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್‌ ಹೇಳಿದ್ದಾರೆ.

ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು, ಭಾರತದ ಮೇಲೆ 50% (25% ಹೆಚ್ಚುವರಿ) ಸುಂಕ ವಿಧಿಸಿದಾಗಿನಿಂದ ರಷ್ಯಾದಿಂದ ತೈಲ ಖರೀದಿಸುವುದು ಗಮನಾರ್ಹವಾಗಿ ಕಡಿಮೆಯಾಗಿದೆ. ಪ್ರಸ್ತುತ 50% ಸುಂಕ ಇದ್ದು, ಇದು ಶಾಶ್ವತವಾಗಿ ಇರೋದಿಲ್ಲ ಎಂದು ಸುಂಕ ಕಡಿತಗೊಳಿಸುವ ಬಗ್ಗೆ ಸುಳಿವು ಕೊಟ್ಟಿದ್ದಾರೆ.

ಭಾರತದ ಮೇಲೆ ವಿಧಿಸಲಾದ 25% ಹೆಚ್ಚುವರಿ ಸುಂಕವನ್ನು ಭವಿಷ್ಯದಲ್ಲಿ ತೆಗೆದುಹಾಕಬಹುದು. ಪರಿಸ್ಥಿತಿ ಅನುಕೂಲಕರವಾಗಿದ್ದರೆ, ಮಾತುಕತೆಗಳು ಮುಂದುವರಿದರೆ, ಅಮೆರಿಕ ಭಾರತಕ್ಕೆ ಸುಂಕದ ಪರಿಹಾರ ನೀಡಬಹುದು ಎಂದು ಹೇಳಿದ್ದಾರೆ.
ಭಾರತದ ಮೇಲೆ ಯುಎಸ್‌ ಸುಂಕ ವಿಧಿಸಿದ್ದೇಕೆ?
ಭಾರತವು ರಷ್ಯಾದ ತೈಲ ಖರೀದಿ ಮಾಡುವ ಮೂಲಕ ಉಕ್ರೇನ್‌ ವಿರುದ್ಧದ ಯುದ್ಧಕ್ಕೆ ಫಂಡಿಂಗ್‌ ಮಾಡುತ್ತಿದೆ ಅನ್ನೋದು ಟ್ರಂಪ್‌ ಬಲವಾದ ಆರೋಪ ಇದೇ ಕಾರಣಕ್ಕೆ ಭಾರತದ ಮೇಲೆ ಸುಂಕ ಏರಿಸಿದ್ದಾರೆ. ಟ್ರಂಪ್‌ ಅಧಿಕಾರಕ್ಕೆ ಏರಿದ ಆರಂಭದಲ್ಲಿ ಭಾರತದಿಂದ ಅಮೆರಿಕಕ್ಕೆ ಆಮದಾಗುವ ವಸ್ತುಗಳ ಮೇಲೆ 25% ಸುಂಕ ವಿಧಿಸಿದ್ದರು. ಬಳಿಕ ರಷ್ಯಾದಿಂದ ಕಚ್ಚಾ ತೈಲವನ್ನು ಆಮದು ಮಾಡುತ್ತಿರುವುದಕ್ಕೆ ಪ್ರತಿಯಾಗಿ 25% ದಂಡದ ರೂಪದಲ್ಲಿ ಸುಂಕ ಹೇರಿದ್ದಾರೆ. ಈ ನಿರ್ಧಾರದಿಂದ ಭಾರತದ ಕೆಲವು ವಸ್ತುಗಳಿಗೆ ಈಗ 50% ಸುಂಕ ಹೇರಲಾಗಿದೆ.
ಕಚ್ಚಾತೈಲ್‌ ಬೆಲೆ ಇಳಿಕೆ ಸಾಧ್ಯೆ
ಯುಎಸ್, G7 ಮತ್ತು ಯುರೋಪಿಯನ್ ದೇಶಗಳು ರಷ್ಯಾದ ತೈಲಕ್ಕೆ ಬೆಲೆ ಮಿತಿ ವ್ಯವಸ್ಥೆ ಜಾರಿಗೆ ತಂದಿವೆ. ಈ ಮಿತಿ ಜನವರಿ 2026 ರ ವರೆಗೆ ಬ್ಯಾರೆಲ್‌ಗೆ ಸರಿಸುಮಾರು 47.60 ಡಾಲರ್‌ (4,360 ರೂ.) ಆಗಿದ್ದು, ಫೆಬ್ರವರಿ 1 ರಿಂದ 44.10 ಡಾಲರ್‌ (4,039 ರೂ.) ಗೆ ಇಳಿಕೆಯಾಗಲಿದೆ. ಒಂದು ವೇಳೆ ಮಿತಿಗೊಳಿಸಿದ ಬೆಲೆಗಿಂತ ಹೆಚ್ಚಿನ ದರಕ್ಕೆ ಮಾರಾಟ ಮಾಡಿದ್ರೆ, ವಿಮೆ, ಸಾಗಣೆ ಮತ್ತು ಹಣಕಾಸು ಮುಂತಾದ ಸೇವೆಗಳನ್ನು ಒದಗಿಸಲಾಗುವುದಿಲ್ಲ ಎಂದು ದೇಶಗಳು ಎಚ್ಚರಿಕೆ ನೀಡಿವೆ.
Continue Reading

National

ಆಫ್ರಿಕಾದಲ್ಲಿ ಎಬೋಲಾ ಆತಂಕ: ಭಾರತದಲ್ಲಿ ಹೈಅಲರ್ಟ್‌, ವಿಮಾನ ನಿಲ್ದಾಣಗಳಲ್ಲಿ ಕಟ್ಟೆಚ್ಚರ

Published

on

ನವದೆಹಲಿ/ಬೆಂಗಳೂರು: ಆಫ್ರಿಕಾದ ಹಲವು ಭಾಗಗಳಲ್ಲಿ ಪ್ರಾಣಾಂತಿಕ ಎಬೋಲಾ ವೈರಸ್‌ ಹಾವಳಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಭಾರತ ಸರ್ಕಾರ ದೇಶಾದ್ಯಂತ ಮುನ್ನೆಚ್ಚರಿಕಾ ಕ್ರಮಗಳನ್ನು ಕಟ್ಟುನಿಟ್ಟಾಗಿಸಿದೆ. ರಾಷ್ಟ್ರ ರಾಜಧಾನಿ ನವದೆಹಲಿಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸೇರಿದಂತೆ ಪ್ರಮುಖ ಏರ್‌ಪೋರ್ಟ್‌ಗಳಲ್ಲಿ ಎಬೋಲಾ ತಪಾಸಣೆ ಪ್ರಾರಂಭವಾಗಿದ್ದು, ಹೈ-ರಿಸ್ಕ್ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ವಿಶೇಷ ನಿಗಾ ವಹಿಸಲಾಗಿದೆ.

ಈ ಬೆಳವಣಿಗೆಯ ನಡುವೆಯೇ ದೆಹಲಿಯಲ್ಲಿ ನಡೆಯಬೇಕಿದ್ದ ಭಾರತ–ಆಫ್ರಿಕಾ ಒಕ್ಕೂಟದ ಶೃಂಗಸಭೆಯನ್ನು ಮುಂದೂಡಲಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ.

ರಾಜ್ಯಗಳಿಗೆ ಕೇಂದ್ರದ ಸೂಚನೆ

ಎಬೋಲಾ ಹರಡುವಿಕೆ ತಡೆಯಲು ರಾಜ್ಯ ಆರೋಗ್ಯ ಇಲಾಖೆಗೆ ಕೇಂದ್ರ ಸರ್ಕಾರ ಹಲವು ನಿರ್ದೇಶನಗಳನ್ನು ನೀಡಿದೆ.

ಆರೋಗ್ಯ ಇಲಾಖೆಗೆ ನೀಡಿದ ಪ್ರಮುಖ ಸೂಚನೆಗಳು:

  • ಕ್ವಾರಂಟೈನ್ ಸೆಂಟರ್‌ಗಳನ್ನು ಗುರುತಿಸುವುದು
  • ಐಸೋಲೇಷನ್ ಸೌಲಭ್ಯ ಹೊಂದಿರುವ ಪ್ರತ್ಯೇಕ ಕೇಂದ್ರಗಳನ್ನು ಸಿದ್ಧಪಡಿಸುವುದು
  • ಹೆಲ್ತ್ ಸ್ಕ್ರೀನಿಂಗ್ ಸಿಬ್ಬಂದಿಯನ್ನು ಹೆಚ್ಚಿಸುವುದು
  • ಶಂಕಿತ ಪ್ರಕರಣಗಳನ್ನು ಆಸ್ಪತ್ರೆಗೆ ಸಾಗಿಸಲು ಅಂಬುಲೆನ್ಸ್ ನಿಯೋಜನೆ
  • ಎಬೋಲಾ ಚಿಕಿತ್ಸೆ ಮತ್ತು ಸುರಕ್ಷತಾ ಕ್ರಮಗಳ ಬಗ್ಗೆ ಆರೋಗ್ಯ ಸಿಬ್ಬಂದಿಗೆ ತರಬೇತಿ

ಏರ್‌ಪೋರ್ಟ್‌ಗಳಿಗೆ ವಿಶೇಷ ಮಾರ್ಗಸೂಚಿ

ಎಬೋಲಾ ನಿಯಂತ್ರಣಕ್ಕಾಗಿ ವಿಮಾನ ನಿಲ್ದಾಣಗಳಲ್ಲಿ ಕಟ್ಟುನಿಟ್ಟಿನ ಕ್ರಮ ಜಾರಿಗೊಳಿಸಲಾಗಿದೆ.

ಪ್ರಯಾಣಿಕರಿಗೆ ಸೂಚನೆ:

  • ತ್ರಿಬಲ್ ಲೇಯರ್ ಮಾಸ್ಕ್ ಕಡ್ಡಾಯ
  • ಹ್ಯಾಂಡ್ ಗ್ಲೌಸ್ ಧರಿಸಬೇಕು
  • ಸ್ಯಾನಿಟೈಸರ್ ಬಳಸಬೇಕು
  • ಶಂಕಿತ ಪ್ರಕರಣ ಕಂಡುಬಂದರೆ ತಕ್ಷಣ ವರದಿ ಮಾಡಬೇಕು
  • ಟ್ರಾವೆಲ್ ಹಿಸ್ಟರಿ ದಾಖಲಿಸಬೇಕು
  • ಸೆಲ್ಫ್ ಡಿಕ್ಲರೇಷನ್ ಫಾರ್ಮ್ ಸಲ್ಲಿಕೆ ಕಡ್ಡಾಯ

ಎಬೋಲಾ ಶಂಕಿತರಿಗೆ ಐಸೋಲೇಷನ್ ಕ್ರಮ

  • ಪ್ರತ್ಯೇಕ ಕೊಠಡಿಯಲ್ಲಿ ಇರಿಸಲಾಗುವುದು
  • ಅಟ್ಯಾಚ್ಡ್ ಬಾತ್‌ರೂಮ್ ಇರುವ ಕೊಠಡಿ ಕಡ್ಡಾಯ
  • ವೈದ್ಯಕೀಯ ಸಿಬ್ಬಂದಿಗೆ PPE ಕಿಟ್ ಕಡ್ಡಾಯ
  • ಪ್ರತಿ 2 ಗಂಟೆಗೆ ಆಕ್ಸಿಜನ್ ಮಟ್ಟ ಪರೀಕ್ಷೆ
  • ಹೃದಯ ಕಾರ್ಯಪಟುತೆಯ ಮೇಲ್ವಿಚಾರಣೆ

ಹೈ-ರಿಸ್ಕ್ ದೇಶಗಳಿಂದ ಬಂದವರು ಏನು ಮಾಡಬೇಕು?

  • 21 ದಿನಗಳ ಒಳಗೆ ಲಕ್ಷಣ ಕಂಡುಬಂದರೆ ತಕ್ಷಣ ಮಾಹಿತಿ ನೀಡಬೇಕು
  • ಜ್ವರ, ವಾಂತಿ, ದೌರ್ಬಲ್ಯ ಸೇರಿದಂತೆ ಯಾವುದೇ ಲಕ್ಷಣ ಕಂಡರೂ ವೈದ್ಯರನ್ನು ಸಂಪರ್ಕಿಸಬೇಕು
  • ಪ್ರಯಾಣದ ವಿವರಗಳನ್ನು ಆರೋಗ್ಯ ಇಲಾಖೆಗೆ ನೀಡಬೇಕು
  • ವಿಮಾನ ನಿಲ್ದಾಣ ತಪಾಸಣೆಯ ನಂತರವೂ ಲಕ್ಷಣ ಕಂಡುಬಂದರೆ ಪರೀಕ್ಷೆ ಕಡ್ಡಾಯ

ಎಬೋಲಾ ಎಷ್ಟು ಅಪಾಯಕಾರಿ?

ವಿಶ್ವ ಆರೋಗ್ಯ ಸಂಸ್ಥೆ (WHO) ಮಾಹಿತಿ ಪ್ರಕಾರ, ಎಬೋಲಾ ವೈರಸ್‌ ಮರಣ ಪ್ರಮಾಣ ಸರಾಸರಿ 50%ರವರೆಗೆ ಇರಬಹುದು. ಸೋಂಕಿತ ವ್ಯಕ್ತಿಯ ದೇಹದ ದ್ರವಗಳ ಸಂಪರ್ಕದಿಂದ ಈ ವೈರಸ್ ಹರಡುತ್ತದೆ. ಕೋವಿಡ್‌ನಂತೆ ಗಾಳಿಯಲ್ಲಿ ವೇಗವಾಗಿ ಹರಡುವ ಸೋಂಕು ಅಲ್ಲವಾದರೂ, ತೀವ್ರ ಜಾಗ್ರತೆ ಅಗತ್ಯವೆಂದು ತಜ್ಞರು ಎಚ್ಚರಿಸಿದ್ದಾರೆ.

Continue Reading

National - International

ನವದೆಹಲಿಯಲ್ಲಿ BRICS ಶೃಂಗಸಭೆ: ಸೆಪ್ಟೆಂಬರ್‌ನಲ್ಲಿ ಭಾರತಕ್ಕೆ ಪುಟಿನ್ ಭೇಟಿ

Published

on

ನವದೆಹಲಿ: BRICS ಶೃಂಗಸಭೆಯಲ್ಲಿ ಭಾಗವಹಿಸಲು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಸೆಪ್ಟೆಂಬರ್ 12 ಮತ್ತು 13ರಂದು ಭಾರತಕ್ಕೆ ಆಗಮಿಸಲಿದ್ದಾರೆ. ನವದೆಹಲಿಯಲ್ಲಿ ನಡೆಯಲಿರುವ ಈ ಮಹತ್ವದ ಶೃಂಗಸಭೆಗೆ ಭಾರತ ಆತಿಥ್ಯ ವಹಿಸುತ್ತಿದೆ.

ಇದು ಕಳೆದ ಒಂದು ವರ್ಷದೊಳಗೆ ಪುಟಿನ್ ಅವರ ಎರಡನೇ ಭಾರತ ಪ್ರವಾಸವಾಗಲಿದೆ. ಇದಕ್ಕೂ ಮೊದಲು ನಡೆದ ಭಾರತ–ರಷ್ಯಾ ವಾರ್ಷಿಕ ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ   ಅವರೊಂದಿಗೆ ಅವರು ದ್ವಿಪಕ್ಷೀಯ ಮಾತುಕತೆ ನಡೆಸಿದ್ದರು.

ಶೃಂಗಸಭೆಗೆ ಮುನ್ನ ರಷ್ಯಾ ವಿದೇಶಾಂಗ ಸಚಿವ ಸೆರ್ಗೆಯ್ ಲಾವ್ರೊವ್ ಭಾರತಕ್ಕೆ ಭೇಟಿ ನೀಡಿ BRICS ವಿದೇಶಾಂಗ ಸಚಿವರ ಸಭೆಯಲ್ಲಿ ಭಾಗವಹಿಸಿದ್ದರು. ಈ ವೇಳೆ ಅವರು ಪ್ರಧಾನಿ ಮೋದಿಯವರೊಂದಿಗೆ ಪ್ರತ್ಯೇಕ ಸಭೆಯನ್ನೂ ನಡೆಸಿದ್ದರು.

ಈ ಬಾರಿಯ BRICS ಶೃಂಗಸಭೆಯಲ್ಲಿ ಜಾಗತಿಕ ಭದ್ರತೆ, ಆರ್ಥಿಕ ಸಹಕಾರ, ಬಹುಧ್ರುವೀಯ ವಿಶ್ವ ವ್ಯವಸ್ಥೆ ನಿರ್ಮಾಣ ಸೇರಿದಂತೆ ಹಲವು ಮಹತ್ವದ ವಿಚಾರಗಳ ಕುರಿತು ಚರ್ಚೆ ನಡೆಯುವ ಸಾಧ್ಯತೆ ಇದೆ. ಬದಲಾಗುತ್ತಿರುವ ಜಾಗತಿಕ ರಾಜಕೀಯ ಹಾಗೂ ಆರ್ಥಿಕ ಪರಿಸ್ಥಿತಿಗಳ ನಡುವೆ ಈ ಸಭೆ ವಿಶೇಷ ಮಹತ್ವ ಪಡೆದುಕೊಂಡಿದೆ.

ಬಹುಧ್ರುವೀಯ ವಿಶ್ವ ವ್ಯವಸ್ಥೆ ಎಂದರೇನು?

ಬಹುಧ್ರುವೀಯ ವಿಶ್ವ ವ್ಯವಸ್ಥೆ ಎಂದರೆ ಜಾಗತಿಕ ರಾಜಕೀಯ ಮತ್ತು ಆರ್ಥಿಕ ಶಕ್ತಿ ಕೇವಲ ಒಂದು ಅಥವಾ ಎರಡು ದೇಶಗಳ ಕೈಯಲ್ಲಿ ಇರದೆ, ಭಾರತ, ಚೀನಾ, ರಷ್ಯಾ ಮೊದಲಾದ ಅನೇಕ ರಾಷ್ಟ್ರಗಳ ನಡುವೆ ಹಂಚಿಕೆಯಾಗಿರುವ ವ್ಯವಸ್ಥೆ.

BRICS ಎಂದರೇನು?

BRICS ಎಂಬುದು ಬ್ರೆಜಿಲ್, ರಷ್ಯಾ, ಭಾರತ, ಚೀನಾ ಮತ್ತು ದಕ್ಷಿಣ ಆಫ್ರಿಕಾ ದೇಶಗಳ ಒಕ್ಕೂಟವಾಗಿದೆ. ಅಭಿವೃದ್ಧಿಶೀಲ ರಾಷ್ಟ್ರಗಳಿಗೆ ಜಾಗತಿಕ ಮಟ್ಟದಲ್ಲಿ ಹೆಚ್ಚಿನ ಪ್ರಾಮುಖ್ಯತೆ ಮತ್ತು ಬಲವಾದ ಧ್ವನಿ ಸಿಗಬೇಕು ಎಂಬ ಉದ್ದೇಶದಿಂದ ಈ ಸಂಘಟನೆ ಸ್ಥಾಪನೆಯಾಯಿತು.

2025ರ ಜುಲೈನಲ್ಲಿ ಬ್ರೆಜಿಲ್‌ನ ರಿಯೋ ಡಿ ಜನೈರೊದಲ್ಲಿ 17ನೇ BRICS ಶೃಂಗಸಭೆ ನಡೆದಿತ್ತು. ಇದೀಗ 2026ರ ಶೃಂಗಸಭೆಗೆ ಭಾರತ ಆತಿಥ್ಯ ವಹಿಸುತ್ತಿರುವುದು ಜಾಗತಿಕ ವೇದಿಕೆಯಲ್ಲಿ ಭಾರತದ ಪ್ರಭಾವ ಹೆಚ್ಚುತ್ತಿರುವುದನ್ನು ತೋರಿಸುತ್ತದೆ.

Continue Reading

National - International

ತಮಿಳುನಾಡಿನಲ್ಲಿ ‘ದಳಪತಿ’ ಯುಗಾರಂಭ – ಸಿಎಂ ಆಗಿ ವಿಜಯ್ ಪ್ರಮಾಣವಚನ

Published

on

ಚೆನ್ನೈ: ತಮಿಳುನಾಡಿನ  ರಾಜಕೀಯದಲ್ಲಿ ಹೊಸ ಸಂಚಲನ ಮೂಡಿಸಿರುವ ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ  ಸರ್ಕಾರ ಇಂದು ಅಧಿಕೃತವಾಗಿ ಅಸ್ತಿತ್ವಕ್ಕೆ ಬಂದಿದ್ದು , ಚೆನ್ನೈನ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ಬೆಳಿಗ್ಗೆ 10 ಗಂಟೆಗೆ ನಡೆದ ಅದ್ಧೂರಿ ಸಮಾರಂಭದಲ್ಲಿ ವಿಜಯ್ ಅವರು ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ  ಸ್ವೀಕರಿಸಿದರು.

ಸದ್ಯ ವಿಜಯ್‌ ಅವರು ತಮ್ಮ ಸಂಪುಟದಲ್ಲಿ 9 ಮಂದಿ ಶಾಸಕರಿಗೆ ಮಂತ್ರಿಗಿರಿ ನೀಡಿದ್ದಾರೆ. ಟಿವಿಕೆಗೆ ಬೆಂಬಲ ನೀಡಿದ ಕಾಂಗ್ರೆಸ್ ಪಕ್ಷದ ಇಬ್ಬರು ಶಾಸಕರಿಗೆ ಸಂಪುಟದಲ್ಲಿ ಸ್ಥಾನ ನೀಡಲಾಗಿದೆ. ವಿಸಿಕೆ , ಸಿಪಿಐ, ಸಿಪಿಎಂ ಮತ್ತು ಮುಸ್ಲಿಂ ಲೀಗ್ ಪಕ್ಷಗಳು ಸರ್ಕಾರಕ್ಕೆ ಬಾಹ್ಯ ಬೆಂಬಲ ನೀಡಿದ್ದರಿಂದ ಈ ಪಕ್ಷಗಳ ಶಾಸಕರು ಸಂಪುಟ ಸೇರುತ್ತಿಲ್ಲ.ಈ ಹಿಂದೆ ಉಪಮುಖ್ಯಮಂತ್ರಿ ಸ್ಥಾನಕ್ಕೆ ವಿಸಿಕೆ ಬೇಡಿಕೆ ಇಟ್ಟಿದೆ ಎಂದು ಹೇಳಲಾಗಿತ್ತು. ಆದರೆ ವಿಜಯ್ ಸರ್ಕಾರದಲ್ಲಿ ಸದ್ಯಕ್ಕೆ ಯಾರಿಗೂ ಡಿಸಿಎಂ ಸ್ಥಾನ ನೀಡಿಲ್ಲ.

ಪ್ರಮಾಣವಚನ ಸ್ವೀಕರಿಸಿದವರು ಯಾರು?
ಎನ್. ಆನಂದ್ – ಪಕ್ಷದ ಪ್ರಧಾನ ಕಾರ್ಯದರ್ಶಿ
ಆಧವ್ ಅರ್ಜುನ- ಚುನಾವಣಾ ಪ್ರಚಾರ ನಿರ್ವಹಣೆಯ ಪ್ರಧಾನ ಕಾರ್ಯದರ್ಶಿ
ಕೆ.ಎ. ಸೆಂಗೊಟ್ಟೈಯನ್ – ಮಾಜಿ ಸಚಿವ ಮತ್ತು ಪಕ್ಷದ ಕಾರ್ಯಕಾರಿ ಸಮಿತಿಯ ಮುಖ್ಯ ಸಂಯೋಜಕ
ಡಾ. ಕೆ.ಜಿ. ಅರುಣ್‌ರಾಜ್- ನೀತಿ ಮತ್ತು ಪ್ರಚಾರ ವಿಭಾಗದ ಪ್ರಧಾನ ಕಾರ್ಯದರ್ಶಿ
ಪಿ. ವೆಂಕಟರಮಣನ್ – ಪಕ್ಷದ ಖಜಾಂಚಿ
ಸಿ.ಟಿ.ಆರ್. ನಿರ್ಮಲ್ ಕುಮಾರ್ – ಜಂಟಿ ಪ್ರಧಾನ ಕಾರ್ಯದರ್ಶಿ
ಎ. ರಾಜ್‌ಮೋಹನ್ – ಪ್ರಚಾರ ಕಾರ್ಯದರ್ಶಿ
ಡಾ. ಟಿ.ಕೆ. ಪ್ರಭು – ಮಂತ್ರಿ
ಸೆಲ್ವಿ ಎಸ್. ಕೀರ್ತನಾ – ಸಂಪುಟದ ಅತ್ಯಂತ ಕಿರಿಯ ಸಚಿವೆ

ಒಟ್ಟು ಸಂಖ್ಯಾಬಲ ಎಷ್ಟಿದೆ?
ಟಿವಿಕೆ (107), ಕಾಂಗ್ರೆಸ್ (5), ಸಿಪಿಐ (2), ಸಿಪಿಎಂ (2), ವಿಸಿಕೆ (2), ಮುಸ್ಲಿಂ ಲೀಗ್ (2).

ಸರ್ಕಾರ ರಚನೆಯ ಬೆನ್ನಲ್ಲೇ ಬಹುಮತ ಸಾಬೀತುಪಡಿಸಲು ರಾಜ್ಯಪಾಲರು ಮೇ 13ರವರೆಗೆ (3 ದಿನಗಳು) ಗಡುವು ನೀಡಿದ್ದಾರೆ. 120 ಶಾಸಕರ ಬೆಂಬಲದೊಂದಿಗೆ ವಿಜಯ್ ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚಿಸಲಿದ್ದಾರೆ.

Continue Reading

Trending

error: Content is protected !!