Hassan
ಭಾಷೆಯ ಮೂಲಕ ಇಡೀ ಬದುಕನ್ನು ಕಟ್ಟಿಕೊಳ್ಳಬಹುದು ಮಕ್ಕಳಿಂದಲೇ ಸಂಸ್ಕಾರ ಕಲಿಸಿ- ಟಿ.ಎಸ್. ನಾಗಾಭರಣ

ಹಾಸನ: ಬಹಳ ಮುಖ್ಯವಾದ ಮನುಷ್ಯ ಧರ್ಮ ಯಾವುದೆಂದರೇ ಮನುಷ್ಯನನ್ನು ಮನುಷ್ಯನನ್ನಾಗಿ ಕಾಣುವುದು. ಪ್ರಸ್ತೂತದಲ್ಲಿ ಕನ್ನಡವನ್ನು ಶೇಕಡ ೩೦ ರಿಂದ ೩೫ ಪರ್ಸೇಂಟ್ ಮಾತ್ರ ಬಳಸಲಾಗುತ್ತಿದೆ. ಮಕ್ಕಳಿಗೆ ಪಾಠದ ಜೊತೆ ಸಂಸ್ಕೃತಿಯನ್ನು ಬೆಳೆಸಬೇಕೆಂದು ಚಲನಚಿತ್ರ ನಿರ್ದೇಶಕರು, ನಿರ್ಮಾಪಕರು ಟಿ.ಎಸ್. ನಾಗಾಭರಣ ತಿಳಿಸಿದರು.
ನಗರದ ಹೊರವಲಯದಲ್ಲಿರುವ ನಂದಗೋಕುಲ ಕನ್ವೆನ್ಸನ್ ಹಾಲ್ ನಲ್ಲಿ ರೋಟರಿಯ ಜೋನ್ ೯ಎ ಜಿಲ್ಲಾ ಗವರ್ನರ್ ರೋಟೇರಿಯನ್ ಬಿ.ಸಿ. ಗೀತ ರವರ ನೇತೃತ್ವದಲ್ಲಿ ಭಾನುವಾರದಂದು ನಡೆದ ರೋಟರಿ ಜಿಲ್ಲಾ ೩೧೮೨ ಜಿಲ್ಲಾ ಕಾರ್ಯಕ್ರಮವಾದ “ಮಾನಿನಿ” ಎಂಬ ಸಮಾವೇಶದಲ್ಲಿ ಪ್ರಸಕ್ತ ದೃಶ್ಯ ಮಾದ್ಯಮ-ಮಹಿಳೆ, ಪರಿಸರ ಸಂರಕ್ಷಣೆ, ಭಾರತೀಯ ಚಿಂತನೆಯಲ್ಲಿ ಮಹಿಳೆಯ ಪಾತ್ರ, ಮಾನವೀಯ ಮೌಲ್ಯವನ್ನು ಸಶಕ್ತ ಗೊಳಿಸುವಲ್ಲಿ ನಾಯಕತ್ವ ಗುಣಗಳು ಕುರಿತು ಉದ್ದೇಶಿಸಿ ಮಾತನಾಡಿದ ಅವರು, ಗಂಡು ಹೆಣ್ಣು ಸೇರಿ ಸಹಬಾಳ್ವೆಯನ್ನು ನಿರಂತರವಾಗಿ ನಡೆಸಿಕೊಂಡು ಬರುತ್ತಿರುವುದು ಭಾರತೀಯ ಪರಂಪರೆ. ಕುಟುಂಬ ಪರಂಪರೆ ಎಂಬುದು ಇತ್ತಿಚಿಗೆ ಶುರುವಾದುದಲ್ಲ. ಸಹಸ್ರಾರು ವರ್ಷಗಳ ಇತಿಹಾಸ ಹಾಗೂ ಪಯಾಣವಿದೆ. ಹೊಸ ಹೊಸ ಸತ್ಯಗಳನ್ನು ಹುಡುಕುತ್ತಾ ಒಂದು ಕುಟುಂಬ ವ್ಯವಸ್ಥೆಯನ್ನು ತಮ್ಮಾಗಿಸಿಕೊಂಡಿದ್ದೇವೆ. ಪ್ರತಿಯೊಬ್ಬರನ್ನು ಗೌರವಿಸಬೇಕು. ಯಾರಾದರೂ ಮನೆಗೆ ಬಂದಾಗ ನಮುಸ್ಕಾರ ಮಾಡಲು ಪುಟ್ಟ ಮಗುವಿನಲ್ಲಿ ಬೆಳೆಸುವ ಮೂಲಕ ಅಲ್ಲಿಂದ ಸಂಸ್ಕಾರ ಬೆಳೆಯುತ್ತ ಹೋಗುತ್ತದೆ ಎಂದರು. ನಾವು ನಮ್ಮ ಸ್ಕಿಲನ್ನು ಬೆಳೆಸಿಕೊಳ್ಳಬೇಕು. ಹಿಂದಿನಿಂದ ಒಂದೊಂದು ರೀತಿ ನಡೆದು ಬಂದ ಮಾಧ್ಯಮ ಪ್ರಸ್ತೂತದಲ್ಲಿ ಕೈಲಿ ಇರುವ ಮೊಬೈಲ್ ನಲ್ಲಿ ಮಾಧ್ಯಮ ಇದೆ. ಹಿಂದಿನ ಕಾಲದಲ್ಲಿ ದೊಡ್ಡ ದೊಡ್ಡ ಕ್ಯಾಮರ ಬಳಸಲಾಗುತ್ತಿತ್ತು. ಇಂದು ಮೊಬೈಲ್ ಮೂಲಕ ಛಾಯಾಗ್ರಹಣ ಮಾಡಲಾಗುತ್ತಿದ್ದು, ತಂತ್ರಜ್ಞಾನ ಬೆಳೆದಂತೆ ನಮ್ಮ ಮಾಧ್ಯಮಗಳು ಬೆಳೆಯುತ್ತಾ ಹೋಯಿತು ಎಂದು ಕಿವಿಮಾತು ಹೇಳಿದರು. ನಮ್ಮ ಭಾಷೆಯಲ್ಲಿ ಸಂಸ್ಕೃತಿ ಕಲಿಯಬೇಕು. ನಮ್ಮ ಭಾಷೆಯಲ್ಲಿ ಸಂವಾದ ಆದಾಗ ಮಾತ್ರ ಸಾಂಸ್ಕೃತಿಕ ನೆಲೆಗಟ್ಟಿನಲ್ಲಿ ಇಡೀ ಸಮುದಾಯ ತನ್ನನ್ನು ತಾನು ಗುರುತಿಸಿಕೊಳ್ಳುತ್ತದೆ. ಕರ್ನಾಟಕ ಎಂದ ಕೂಡಲೇ ಅಲ್ಲಿನ ಕನ್ನಡ ಭಾಷೆಯನ್ನು ಮೊದಲು ಗುರುತಿಸುತ್ತದೆ ಮತ್ತು ಕನ್ನಡದ ಜನರನ್ನು, ಸಂಪ್ರದಾಯವನ್ನು ಗುರುತಿಸುತ್ತದೆ ಹಾಗೂ ಹಿಂದಿರುವ ಎಲ್ಲಾ ಸಂಸ್ಕಾರವನ್ನು ಗುರುತಿಸಿಕೊಡುತ್ತದೆ ಎಂದು ಸಲಹೆ ನೀಡಿದರು. ಸಂವನ ಮಾಧ್ಯಮದಲ್ಲಿ ನಾವು ಎಷ್ಟರ ಮಟ್ಟಿಗೆ ಕನ್ನಡವನ್ನು ಬಳಸುತ್ತಿದ್ದೇವೆ? ಪ್ರಸ್ತುತದಲ್ಲಿ ಬಹಳಷ್ಟು ಜನ ಹೆಚ್ಚು ಎಂದರೇ ೩೦ ರಿಂದ ೩೫ ಪರ್ಸೇಂಟ್ ಬಳಸಲಾಗುತ್ತಿದೆ. ಬೆಂಗಳೂರಲ್ಲಿ ಕನ್ನಡ ಅಷ್ಟೊಂದು ಬಳಕೆ ಆಗುತ್ತಿಲ್ಲ. ಇಲ್ಲ ಎಂದು ಹೇಳಲಾಗುತ್ತಿರುವುದು ನಿಜ ಆದ್ರೆ ಈಗ ಪ್ರತಿಯೊಂದು ಜಿಲ್ಲೆಗೆ, ಹಳ್ಳಿಗೆ ಕಾಲಿಟ್ಟಿದೆ ಎಂದು ಬೇಸರವ್ಯಕ್ತಪಡಿಸಿದರು. ಯಾವ ಭಾಷೆಯ ಮೂಲಕ ನಮ್ಮತನವನ್ನಿಟ್ಟುಕೊಂಡಿರುತ್ತೇವೆಯೂ ಆ ಭಾಷೆಯ ಮೂಲಕ ಇಡೀ ಬದುಕನ್ನು ಕಟ್ಟಿಕೊಡಬೇಕಾಗುತ್ತದೆಯೊ ಅಂತಹ ಬದುಕು ಕಟ್ಟಿಕೊಡುವ ಜಾಗದಲ್ಲಿ ಪರವಲಂಬಿಯಾಗಿ ಸುಲಭವಾಗಿ ಇನ್ನೊಬ್ಬರಿಗೆ ಬಿಟ್ಟುಕೊಟ್ಟಿದ್ದೇವೆ. ಅಲ್ಲಿಯೂ ಕೂಡ ನಾವು ನಮ್ಮತನವನ್ನು ಕಾಪಾಡಿಕೊಳ್ಳುವ ಹೆಜ್ಜೆಗಳನ್ನು ಹಾಕಬೇಕಾಗಿದೆ. ಇದರಲ್ಲಿ ತಂದೆ ತಾಯಿ ಇಬ್ಬರದು ತಪ್ಪು ಇದೆ. ಕೆಲ ಶಾಲೆಯಲ್ಲಿ ಅವರ ಶಿಲಭಸ್ ಪ್ರಕಾರ ಕನ್ನಡ ಮಾಧ್ಯಮ ಭಾಷೆಯೇ ಅಲ್ಲ. ಬರೀ ಇಂಗ್ಲೀಷ್ ಭಾಷೆಯಾಗಿದೆ ಎಂದು ಹೇಳಿದರು. ಬಹು ಮೆಚ್ಚಿನ ಮನುಷ್ಯ ಧರ್ಮ ಯಾವುದೆಂದರೆ ಮನುಷ್ಯನನ್ನು ಮನುಷ್ಯನನ್ನಾಗಿ ಕಾಣಬೇಕು ಎಂದು ಕೆಲ ಸಮಯ ಹಿತಾವಚನ ನುಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಗವರ್ನರ್ ರೋಟೇರಿಯನ್ ಬಿ.ಸಿ. ಗೀತಾ, ರೋಟರಿ ಕ್ಲಬ್ ಅಸಿಸ್ಟೆಂಟ್ ಗೌರ್ನರ್ ಜೋನ್ ೯ಎ ಡಾ. ಬಿ.ಕೆ. ಸೌಮ್ಯಮಣಿ, ಜಿಲ್ಲಾ ಮಾಜಿ ಗೌರ್ನರ್ ಅಭಿನಂದನ್ ಶೆಟ್ಟಿ, ಡಿ.ಎಸ್. ರವಿ, ದೇವಾನಂದ್, ಕೆ. ಪಾಲಾಕ್ಷ, ಬಿ.ಎಂ. ಭಟ್, ಸ್ಪೂರ್ತಿ ವಿಶ್ವಾಸ್, ನಮಿತೊ ಕಾಮ್ದರ್, ವಾಗೀಶ್ ಭಟ್, ರೋಟರಿಯನ್ ಡಾ. ವಾಣಿ ನಾಗೇಶ್, ಡಾ. ಮಮತಾ, ಬೆಂಗಳೂರು ಮಮತಾ ನಟೇಶ್, ಬೊಮ್ಮೇಗೌಡ, ವಿಕ್ರಂ, ನಾಗೇಶ್ ಇತರರು ಉಪಸ್ಥಿತರಿದ್ದರು.
Hassan
ದೊಡ್ಡಕಣಗಾಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರ ಸ್ಥಾನಕ್ಕೆ ಆಯ್ಕೆ ಪ್ರಕ್ರಿಯೆ

ವರದಿ: ಸತೀಶ್ ಚಿಕ್ಕಕಣಗಾಲು
ಆಲೂರು: ತಾಲ್ಲೂಕಿನ ದೊಡ್ಡಕಣಗಾಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 12 ಆಡಳಿತ ಮಂಡಳಿ ನಿರ್ದೇಶಕ ಸ್ಥಾನಕ್ಕೆ ಆಯ್ಕೆ ಪ್ರಕ್ರಿಯೆ ನಡೆಯಿತು. ಎಲ್ಲಾ ಸ್ಥಾನಗಳಿಗೆ ಒಬ್ಬೊಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಚುನಾವಣಾಧಿಕಾರಿ ಕುಮಾರ್ ಅವರು ಅವಿರೋಧ ಆಯ್ಕೆ ಘೋಷಿಸಿದರು.
ಸಾಮಾನ್ಯ ಕ್ಷೇತ್ರದಿಂದ ಕೆ.ಕೆ. ಜಯರಾಮ, ಹೆಚ್.ಎಂ. ನಾರಾಯಣ, ಕೆ.ಟಿ. ಬೋರೇಗೌಡ, ಸುಬ್ಬೇಗೌಡ, ವೆಂಕಟೇಗೌಡ, ಮಹಿಳಾ ಕ್ಷೇತ್ರದಿಂದ ಶಕುಂತಲ, ಪ್ರತಿಮ, ನಂಜಶೆಟ್ಟಿ (ಹಿಂದುಳಿದ ವರ್ಗ ಎ), ಕೆ. ಜಗದೀಶ್ (ಹಿಂದುಳಿದ ವರ್ಗ ಬಿ), ರಂಗಸ್ವಾಮಿ (ಪ.ಜಾ.) ಹಾಗು ಪರಿಶಿಷ್ಟ ಪಂಗಡದ ಒಂದು ಸ್ಥಾನಕ್ಕೆ ಯಾರೂ ಅರ್ಜಿ ಸಲ್ಲಿಸದ ಹಿನ್ನಲೆಯಲ್ಲಿ ಸ್ಥಾನ ಖಾಲಿಯಿದೆ. ಸಾಲಗಾರರಲ್ಲದ ಕ್ಷೇತ್ರದಿಂದ ಕೆ.ಸಿ. ಸಂತೋಷ್ ಅವರು ಆಯ್ಕೆಯಾದರು. 2030ರ ಫೆ. 9ರ ವರೆಗೆ ಚುನಾಯಿತರು ನಿರ್ದೇಶಕರಾಗಿ ಮುಂದುವರೆಯುತ್ತಾರೆ.
ತಾಲ್ಲೂಕು ಸಹಕಾರ ಅಭಿವೃದ್ಧಿ ಅಧಿಕಾರಿ ಕುಮಾರ್, ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದರು.
ಈ ಸಂದರ್ಭದಲ್ಲಿ ಹಾಸನ ಜಿಲ್ಲಾ ಹೆಚ್ಡಿಸಿಸಿ ಬ್ಯಾಂಕ್ ನಿರ್ದೇಶಕ ಕಬ್ಬಿನಹಳ್ಳಿ ಜಗದೀಶ್, ಸೊಸೈಟಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ. ಕುಮಾರಸ್ವಾಮಿ, ನಂಜೇಶ್ ಸೇರಿದಂತೆ ಗ್ರಾಮದ ಹಿರಿಯ ಮುಖಂಡರು ಹಾಜರಿದ್ದರು.
Hassan
ಫೆ.11 ರಿಂದ 13 ವರೆಗೆ ರೇಣುಕಾ ಯಲ್ಲಮ್ಮ ದೇವಿಯ 18ನೇ ವರ್ಷದ ಜಾತ್ರಾ ಮಹೋತ್ಸವ

ಬೇಲೂರು: ಬೇಲೂರಿನ ಚನ್ನಾಪುರ ರಸ್ತೆಯಲ್ಲಿರುವ ಕೋವಿಪೇಟೆಯಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿಯ 18ನೇ ವರ್ಷದ ಜಾತ್ರಾ ಮಹೋತ್ಸವ ಫೆ. 11 ರಿಂದ ಫೆ.13ರ ವರೆಗೂ ನಡೆಯಲಿದೆ, ಪ್ರತಿಯೊಬ್ಬ ಭಕ್ತರು ಭಾಗವಹಿಸಿ ದೇವಿಯ ಕೃಪೆಗೆ ಪಾತ್ರರಾಗಬೇಕೆಂದು ದೇಗುಲದ ಪ್ರಧಾನ ಅರ್ಚಕ ರವಿಸ್ವಾಮಿ ತಿಳಿಸಿದ್ದಾರೆ.
ಜಾತ್ರಾ ಮಹೋತ್ಸವ ನಿಮಿತ್ತ ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಫೆ.11 ಮಂಗಳವಾರ ಸಂಜೆ 6.00 ಗಂಟೆಗೆ ಗಂಗಪೂಜೆ ಮತ್ತು ಕಳಸ ಸ್ಥಾಪನೆ, ಪಂಚಾಮೃತ, ಅಭಿಷೇಕ, ಗಣ ಹೋಮ, ನವಗ್ರಹ ಹೋಮ ಚಂಡಿ ಹೋಮ, ದುರ್ಗಾ ಹೋಮ, ಜಯಾವಿ ಹೋಮಗಳು ನಡೆಯುತ್ತದೆ.
ಫೆ.12 ರ ಬುಧವಾರ ಬೆಳಗ್ಗೆ 8.00 ಗಂಟೆಗೆ 12.30 ವರೆಗೂ ಬೇಲೂರಿನ ವಿಷ್ಣು ಸಮುದ್ರದಲ್ಲಿ (ಅಷ್ಟಮ್ಮನಕೆರೆ) “ಗಂಗಾ ಪೂಜೆ’ ನಂತರ ನಗರದ ಪ್ರಮುಖ ಬೀದಿಗಳಲ್ಲಿ ವೀರಗಾಸೆ ಕುಣಿತ, ಡೊಳ್ಳು ಕುಣಿತ, ನಂದಿ ಧ್ವಜ ಮತ್ತು ಚೌಡಿಕೆ ಪದಗಳೊಂದಿಗೆ ಹಲವು ವಾದ್ಯ ಗೋಷ್ಠಿಯೊಂದಿಗೆ 101 ಕುಂಭಾಷೇಕಗಳೊಂದಿಗೆ ಪ್ರಷಾಲಂಕಾರಗೊಂಡ ಶ್ರೀ ರೇಣುಕಾ ಅಮ್ಮನವರ ಪಲ್ಲಕ್ಕಿ ಮೆರವಣಿಗೆ ಮತ್ತು ಬೆಳಗ್ಗೆ 11.30 ಕ್ಕೆ “ಶ್ರೀ ರೇಣುಕಾ ಯಲ್ಲಮ್ಮನವರ ಕೆಂಡೋತ್ಸವ” ನಡೆಯುತ್ತದೆ. ನಂತರ ಮಹಾಮಂಗಳಾರತಿ ಮತ್ತು ತೀರ್ಥ ಪ್ರಸಾದ ಇರುತ್ತದೆ. “ಮದ್ಯಾಹ್ನ 1-00 ಗಂಟೆಗೆ ಅನ್ನ ಸಂತರ್ಪಣೆ” ನಡೆಯುತ್ತದೆ.
ಫೆ.13 ರ ಬೆಳಿಗ್ಗೆ 8.00 ರಿಂದ ಶ್ರೀ ಹುಚ್ಚಂಗಿ ಅಮ್ಮನವರ ಜಾತ್ರಾ ಮಹೋತ್ಸವ ಉತ್ಸವ” ಬೆಳಗ್ಗೆ 10.30 ರಿಂದ ಸಂಜೆ 6.00 ರವರೆಗೆ ದೇವಿಗೆ ಹರಕೆ ಸೇವೆ ಇರುತ್ತದೆ.
ಈ ಎಲ್ಲಾ ಕಾರ್ಯಕ್ರಮಗಳಿಗೆ ಭಕ್ತಾದಿಗಳು ಮತ್ತು ಸುತ್ತಮುತ್ತಲಿನ ಗ್ರಾಮಸ್ಥರು ಆಗಮಿಸಿ ತನು, ಮನ, ಧನ ಸಹಾಯದೊಂದಿಗೆ ಸಹಕರಿಸಿ ಶ್ರೀ ದೇವಿಯವರ ಕೃಪೆಗೆ ಪಾತ್ರರಾಗಬೇಕಾಗಿ ಎಂದು ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.
Hassan
ಕಳಪೆ ಗುಣಮಟ್ಟದ ಉಪ್ಪು ತಯಾರಿಸಿದ ಕಂಪನಿಗೆ ಒಂದು ಲಕ್ಷ ರೂ. ದಂಡ

ಚಾಮರಾಜನಗರ, ಫೆ.06:- ಕಳಪೆ ಗುಣಮಟ್ಟದ ಉಪ್ಪು ತಯಾರಿಸಿದ್ದ ತಮಿಳುನಾಡಿನ ಕಂಪನಿಯೊಂದಕ್ಕೆ ಹೆಚ್ಚುವರಿ ಜಿಲ್ಲಾಧಿಕಾರಿ ಹಾಗೂ ನ್ಯಾಯನಿರ್ಣಾಯಕ ಅಧಿಕಾರಿ ಗೀತ ಹುಡೇದ ಅವರು 1 ಲಕ್ಷ ರೂ. ದಂಡ ವಿಧಿಸಿ ಆದೇಶಿಸಿದ್ದಾರೆ.
ಹನೂರು ಪಟ್ಟಣದ ಬಂಡಳ್ಳಿ ರಸ್ತೆಯಲ್ಲಿರುವ ಶ್ರೀ ಮಹದೇಶ್ವರ ಸ್ಟೋರ್ ಗೆ ಕಳೆದ 2024ರ ಜುಲೈ 29ರಂದು ಕೊಳ್ಳೇಗಾಲ ತಾಲ್ಲೂಕಿನ ಆಹಾರ ಸುರಕ್ಷತಾಧಿಕಾರಿ ಶ್ರೀನಿವಾಸ ಭೇಟಿ ನೀಡಿ ಪರಿಶೀಲನೆ ನಡೆಸಿದ ವೇಳೆ ಅಂಗಡಿಯಲ್ಲಿ ಸಂಶಯಾಸ್ಪದವಾಗಿ ಕಂಡು ಬಂದ ವಿ.ಕೆ.ಎಸ್.ಟ್ರೂ ಸಾಲ್ಟ್ (VKS TRUE SALT) ಎಂಬ ಹೆಸರಿನ ಉಪ್ಪಿನ ಆಹಾರ ಮಾದರಿಯನ್ನು ಸಂಗ್ರಹಿಸಿ ಮೈಸೂರಿನ ವಿಭಾಗೀಯ ಆಹಾರ ಪ್ರಯೋಗಾಲಯಕ್ಕೆ ಕಳುಹಿಸಿಕೊಟ್ಟಿದ್ದರು.
ಸದರಿ ಉಪ್ಪಿನ ಮಾದರಿಯು ವಿಶ್ಲೇಷಣಾ ವರದಿಯಿಂದ ಕಳಪೆ ಗುಣಮಟ್ಟ (ಸಬ್ ಸ್ಟ್ಯಾಂಡರ್ಡ್) ಎಂದು ದೃಡಪಟ್ಟಿತ್ತು. ಈ ಹಿನ್ನೆಲೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿಗಳು ಹಾಗೂ ನ್ಯಾಯನಿರ್ಣಯಾಧಿಕಾರಿಗಳ ನ್ಯಾಯಾಲಯದಲ್ಲಿ ಪ್ರಕರಣ ಸಂಬಂಧ ಮೊಕದ್ದಮೆ ಹೂಡಲಾಗಿತ್ತು.
ಹೆಚ್ಚುವರಿ ಜಿಲ್ಲಾಧಿಕಾರಿಗಳು ಹಾಗೂ ನ್ಯಾಯನಿರ್ಣಾಯಕ ಅಧಿಕಾರಿಗಳಾದ ಗೀತಾ ಹುಡೇದ ಅವರು ಪ್ರಕರಣದ ವಿಚಾರಣೆ ನಡೆಸಿ ತಯಾರಕರಾದ ತಮಿಳುನಾಡಿನ ತೂತುಕುಡಿಯ ವಿ.ಕೆ.ಎಸ್. ಪುಡ್ ಪ್ರಾಡಕ್ಟ್ಸ್ ಕಂಪನಿಗೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ-2006 ಹಾಗೂ ನಿಯಮ ನಿಬಂಧನೆ 2011ರ ರಿತ್ಯಾ ಸೆಕ್ಷನ್ 51 ರಡಿಯಲ್ಲಿ ಒಂದು ಲಕ್ಷ ರೂ. ದಂಡ ವಿಧಿಸಿ ಫೆಬ್ರವರಿ 3 ರಂದು ಆದೇಶಿಸಿದ್ದಾರೆ.
-
State12 hours ago
ಪಕ್ಷದಲ್ಲಿನ ಆಂತರಿಕ ಭಿನ್ನಾಭಿಪ್ರಾಯ ದುರದೃಷ್ಟಕರ: ಬಸವರಾಜ ಬೊಮ್ಮಾಯಿ ಬೇಸರ
-
Kodagu10 hours ago
ಕೊಡವಾಮೆ ಬಾಳೋ ಪಾದಯಾತ್ರೆ: ಮಧ್ಯ ಮಾರಾಟ ನಿಷೇಧ
-
Chamarajanagar10 hours ago
ಚಿಕ್ಕಮಗಳೂರು: ನಕ್ಸಲ್ ರವೀಂದ್ರಗೆ ಸೇರಿದ್ದು ಎನ್ನಲಾದ ಬಂದೂಕು ಪತ್ತೆ?
-
Kodagu14 hours ago
ಫೆ.7 ರ ಕೊಡವ ಪಾದಯಾತ್ರೆಗೆ ಸಿಎನ್ ಸಿ ಬೆಂಬಲ
-
Kodagu9 hours ago
ಕೊಟ್ಟಮುಡಿ ಝೀನತ್ ಯುವಕ ಸಂಘ ಅಧ್ಯಕ್ಷರಾಗಿ ಸೌಕತ್ ಆಯ್ಕೆ
-
Hassan8 hours ago
ಆಸ್ತಿ ವಿಚಾರಕ್ಕೆ ಎರಡು ಕುಟುಂಬಗಳ ನಡುವೆ ಮಾರಾಮಾರಿ
-
Hassan7 hours ago
ಎಂಸಿಇ ಕಾಲೇಜು ಉಪಾಧ್ಯಕ್ಷರಿಗೆ ವೀರಶೈವ ಲಿಂಗಾಯತ ಮಹಾಸಭಾದಿಂದ ಸನ್ಮಾನ
-
Sports10 hours ago
ಏಕದಿನ ಮಾದರಿಗೆ ದಿಢೀರ್ ನಿವೃತ್ತಿ ಘೋಷಿಸಿದ ಆಸೀಸ್ ಆಲ್ರೌಂಡರ್ ಸ್ಟೋಯ್ನಿಸ್