Chikmagalur
ವಶಿಷ್ಠ ತೀರ್ಥದಲ್ಲಿ ಮುಳುಗಿ ರಾಜಸ್ಥಾನ ಮೂಲದ ಇಬ್ಬರು ಸಾ*ವು
ಕಳಸ : ಭದ್ರಾ ನದಿಯ ವಶಿಷ್ಠ ತೀರ್ಥ ಸಮೀಪ ರಾಜಸ್ಥಾನ ಮೂಲದ ಇಬ್ಬರು ಪ್ರವಾಸಿಗರು ಮುಳುಗಿ ಸಾವನ್ನಪ್ಪಿದ ಘಟನೆ ಭಾನುವಾರ ಬೆಳಿಗ್ಗೆ ನಡೆದಿದೆ.
ಮೃತರಾದವರು ಜಗದೀಶ್(23) ಚೋಟಾ ಸಿಂಗ್(23) ಎಂದು ಗುರುತಿಸಲಾಗಿದೆ. ರಾಜಸ್ಥಾನದ ಇವರು ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗಳಲ್ಲಿ ಕೆಲಸ ಮಾಡಿಕೊಂಡಿದ್ದ ಹನ್ನೆರಡು ಜನ ಹೋಳಿ ಹಬ್ಬದ ಎರಡು ದಿನದ ರಜೆಯಲ್ಲಿ ಕಳಸ ಕಡೆ ಪ್ರವಾಸಕ್ಕೆ ಬಂದಿದ್ದಾರೆ.
ಶನಿವಾರ ಕಳಸಕ್ಕೆ ಬಂದವರು ಇಲ್ಲಿ ಸ್ಥಳೀಯ ಪ್ರವಾಸಿ ಕೇಂದ್ರಗಳಿಗೆ ಬೇಟಿ ನೀಡಿ ಭಾನುವಾರ ಬೆಳಿಗ್ಗೆ ಮತ್ತೆ ಬೆಂಗಳೂರು ಕಡೆ ಪ್ರಯಾಣ ಬೆಳೆಸುವಾಗ ವಶಿಷ್ಠ ತೀರ್ಥದಲ್ಲಿರುವ ತೂಗು ಸೇತುವೆಯನ್ನು ನೋಡಲು ಭದ್ರಾ ನದಿಗೆ ಬಂದಿದ್ದಾರೆ.ಸ್ವಲ್ಪ ಜನ ತೂಗು ಸೇತುವೆ ನೋಡಲು ತೂಗು ಸೇತುವೆಯತ್ರ ಹೋದರೆ ಇಬ್ಬರು ಮಾತ್ರ ಸ್ನಾನಕ್ಕೆಂದು ನೀರಿಗೆ ಇಳಿದಿದ್ದಾರೆ.
ಆದರೆ ಇಬ್ಬರು ಈಜು ಬರದೆ ಇರುವ ಕಾರಣ ನೀರಿನಲ್ಲಿ ಮುಳುಗಿ ಪ್ರಾಣ ಬಿಟ್ಟಿದ್ದಾರೆ. ಸ್ಥಳಕ್ಕೆ ಕಳಸ ಪೊಲೀಸರು ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇಬ್ಬರ ಮೃತದೇಹವನ್ನು ಮೇಲಕ್ಕೆತ್ತಿ ಕಳಸ ಸರ್ಕಾರಿ ಆಸ್ಪತ್ರೆಯಲ್ಲಿ ಇಡಲಾಗಿದೆ.ಎಲ್ಲಾ ಹನ್ನೆರಡು ಜನ ಯುವಕರಾಗಿದ್ದು, ಹತ್ತಿರದ ಸಂಭಂದಿಕರೇ ಆಗಿದ್ದಾರೆ.
Chikmagalur
ಚಿಕ್ಕಮಗಳೂರು :ಅಡಿಕೆ ಮರದಿಂದ ಬಿದ್ದು ವ್ಯಕ್ತಿ ಸಾವು
ಚಿಕ್ಕಮಗಳೂರು :ಅಡಿಕೆ ಮರದಿಂದ ಬಿದ್ದು ವ್ಯಕ್ತಿ ಒಬ್ಬರು ಮೃತಪಟ್ಟಿದ್ದಾರೆ.
ಅಡಿಕೆ ಮರದಲ್ಲಿ ಗೊನೆ ಕೊಯ್ಯುವಾಗ ಬಿದ್ದು ಸಾವಪ್ಪಿದ ಘಟನೆ ಕಳಸ ತಾಲೂಕಿನ ಬೂದಿಗುಂಡಿ ಗ್ರಾಮದಲ್ಲಿ ನಡೆದಿದೆ.
ಮಂಜು (35) ಮೃತ ದುರ್ದೈವಿ. ಹಳುವಳ್ಳಿ ಗ್ರಾಮದ ಅಡಿಕೆ ತೋಟಕ್ಕೆ ಕೆಲಸಕ್ಕೆ ಹೋಗಿದ್ದ ಮಂಜು ಮರ ಹತ್ತಿ ಗೊನೆ ಕೊಯ್ಯುವಾಗ ಆಯಾ ತಪ್ಪಿ ಬಿದ್ದು ಸಾವನ್ನಪ್ಪಿದ್ದಾನೆ.
ಕಳಸ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Chikmagalur
ಜೋಡೆತ್ತಿನ ಗಾಡಿ ಓಟದ ಸ್ಪರ್ಧೆಗೆ ಚಾಲನೆ ನೀಡಿದ ಕೆ.ಎಸ್.ಗೋಪಾಲಕೃಷ್ಣ
ಚಿಕ್ಕಮಗಳೂರು: ಶ್ರೀ ಬೀರಲಿಂಗೇಶ್ವರಸ್ವಾಮಿ ಜಾತ್ರಾ ಮಹೋತ್ಸವ ಪ್ರಯುಕ್ತ ಕೆಂಪನಹಳ್ಳಿ ಕನಕ ಗೆಳೆಯರ ಬಳಗದಿಂದ ನಗರ ಸಮೀಪ ಆಯೋಜಿಸಿದ್ಧ ಎರಡನೇ ವರ್ಷದ ಜೋಡಿ ಎತ್ತಿನಗಾಡಿ ಓಟದ ಸ್ಪರ್ಧೆಗೆ ಬುಧವಾರ ಸರ್ಕಾರಿ ನೌಕರರ ಸಂಘದ ಮಾಜಿ ರಾಜ್ಯಾಧ್ಯಕ್ಷ ಕೆ.ಎಸ್.ಗೋಪಾಲಕೃಷ್ಣ ಹಸಿರು ನಿಶಾನೆ ತೋರಿ ಚಾಲನೆ ನೀಡಿದರು.

ಜೋಡೆತ್ತಿನ ಗಾಡಿ ಸ್ಪರ್ಧೆಯಲ್ಲಿ ಸುಮಾರು 40ಕ್ಕೂ ಹೆಚ್ಚು ಸ್ಪರ್ಧಿಗಳು ಭಾಗವಹಿಸಿದ್ದು, ಪ್ರಥಮ ಹಾ ಗೂ ದ್ವಿತೀಯ ಹೆಚ್.ಎಫ್. ಡಿಲಕ್ಸ್ ಬೈಕ್, ತೃತೀಯ 25 ಸಾವಿರ ನಗದು ಟ್ರೋಫಿ ಮತ್ತು ಚತುರ್ಥ ವಿಜೇತರಿಗೆ 20 ಸಾವಿರ ನಗದು ಆಕರ್ಷಕ ಟ್ರೋಫಿ ವಿತರಿಸಲಾಗುವುದು ಎಂದು ಸ್ಪರ್ಧೆಯ ಆಯೋಜಕ ಕೆಂಪನಹಳ್ಳಿ ಸುನೀಲ್ ತಿಳಿಸಿದರು.
ಈ ಸಂದರ್ಭದಲ್ಲಿ ನಗರಸಭೆ ಸದಸ್ಯರಾದ ಮಂಜುಳಾ ಲಕ್ಷ್ಮಣ್, ಎಲ್.ಬಿ.ಎಸ್. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಪ್ರತೀಪ್, ಕೆಂಪನಹಳ್ಳಿ ಗ್ರಾಮಸ್ಥರಾದ ಚರಣ್, ಹರೀಶ್, ರಾಕೇಶ್, ಶಶಾಂಕ್, ಸಚಿನ್, ಕಾರ್ತೀಕ್ , ವರುಣ್, ಡಿಂಪು, ವಸಂತ್, ದರ್ಶನ್ ಮತ್ತಿತರರು ಹಾಜರಿದ್ದರು.
Chikmagalur
ಅಸ್ಸಾಂನಿಂದ ಬಂದಿರುವ ಕಾರ್ಮಿಕನಿಂದ ಕಾಫಿ ತೋಟದಲ್ಲಿ ಗೋ ಹತ್ಯೆ
ಚಿಕ್ಕಮಗಳೂರು : ಕಾಫಿ ತೋಟದಲ್ಲಿ ಗೋ ಹತ್ಯೆ ಮಾಡಿದ ಘಟನೆ ನಡೆದಿದ್ದು, ಅಸ್ಸಾಂನಿಂದ ಕೂಲಿ ಕೆಲಸಕ್ಕೆ ಬಂದಿರುವ ಕಾರ್ಮಿಕರಿಂದ ಕೃತ್ಯ ನಡೆದಿದೆ.
ಗೋವುಗಳನ್ನು ಕದ್ದು ತೋಟದಲ್ಲಿ ಹತ್ಯೆ ಮಾಡಲಾಗಿದೆ.ಖಚಿತ ಮಾಹಿತಿ ಮೇರೆಗೆ ಪೊಲೀಸರಿಂದ ದಾಳಿ ನಡೆದಿದ್ದು ಆರೋಪಿಗಳು-ಗೋಮಾಂಸ ಪಕ್ಷಕ್ಕೆ ಪಡೆಯಲಾಗಿದೆ.
ಕೊಪ್ಪ ತಾಲೂಕಿನ ಜಯಪುರ ಸಮೀಪದ ಹೇರೂರಿನ ಕಾಫಿ ಎಸ್ಟೇಟ್ ನಲ್ಲಿ ಘಟನೆ ನಡೆದಿದ್ದು,ಎರಡು ದನಗಳನ್ನು ಹತ್ಯೆ ಮಾಡಿ, ಮಾಂಸ ಹಂಚಿಕೆ ವೇಳೆಯಲ್ಲಿ ದಾಳಿ ಆಗಿದೆ.

ಮೂವರನ್ನು ವಶಕ್ಕೆ ಪಡೆದು ಪ್ರಕರಣ ದಾಖಲು ಮಾಡಿದ್ದಾರೆ.ಪಿ.ಎಸ್.ಐ. ರವೀಶ್ ನೇತೃತ್ವದಲ್ಲಿ ದಾಳಿ ನಡೆಸಿಆರೋಪಿಗಳಾದ ಅನ್ಸರ್, ಮಜೀದ್, ಮುಜಾಮಿಲ್ ನನ್ನು ಬಂಧಿಸಿದ್ದಾರೆ.
ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಆಗಿದೆ.
-
Hassan6 hours agoಸರ್ಕಾರಿ ಆದೇಶ ಉಲ್ಲಂಘಿಸಿ ಕ್ರಿಸ್ಮಸ್ ರಜೆ ದುರುಪಯೋಗ : ಡಿಡಿಪಿಐ ಕಚೇರಿ ಮುಂದೆ ಪ್ರತಿಭಟನೆ
-
Hassan4 hours agoಡಿ.14 ರಿಂದ ಜ.4 ರವರೆಗೂ ಬಾಳ್ಳುಪೇಟೆಯಲ್ಲಿ ಯೋಗ, ಧ್ಯಾನ ಶಿಬಿರ
-
Kodagu6 hours agoಏ.24 ರಿಂದ 28ರ ವರೆಗೆ ಮೇಕೇರಿ ಮಸೀದಿಯ ಮಖಾಂ ಉರೂಸ್
-
Chamarajanagar3 hours agoರಾಜ್ಯ ಮಟ್ಟದ ನೆಟ್ ಬಾಲ್ ಪಂದ್ಯಾವಳಿಗೆ ವಿದ್ಯುಕ್ತ ಚಾಲನೆ
-
Mysore5 hours agoಗ್ರಾ.ಪಂ.ಸಾರ್ವಜನಿಕರ ಮೊದಲ ಸಂಪರ್ಕ ಕೇಂದ್ರವಾಗಿದೆ: ಡಾ.ಮಲ್ಲಿಕಾರ್ಜುನಸ್ವಾಮಿ
-
Mandya6 hours agoಪಲ್ಸ್ ಪೋಲಿಯೋ ಕಾರ್ಯಕ್ರಮ ಯಶಸ್ವಿಗೆ ಕೈಜೋಡಿಸಿ: ಎಸಿ ಚೇತನಾ ಯಾದವ್ ಕರೆ
-
Mandya2 hours agoಗಾಂಧಿ ಸ್ಮಾರಕ ಭವನ ನಿರ್ಮಿಸಲು 2 ಎಕರೆ ಜಾಗ ಮೀಸಲು: ಬಿ.ರಾಮಕೃಷ್ಣ
-
Hassan4 hours agoನೂತನ ದೇವಾಲಯ ನಿರ್ಮಾಣಕ್ಕೆ ಭೂಮಿ ಪೂಜೆ ನೇರವೇರಿಸಿದ ಸಿಮೆಂಟ್ ಮಂಜು
