Chikmagalur
ದುರ್ಗಾಪರಮೇಶ್ವರಿ ದೇವಸ್ಥಾನದ ಅರ್ಚಕ ಉಮೇಶ ಭಟ್ ನಿದನ

ಚಿಕ್ಕಮಗಳೂರು : ಜಿಲ್ಲೆಯ ಕೊಪ್ಪ ತಾಲೂಕಿನ ಕೊಗ್ರೆ ದೇವಸ್ಥಾನದ ಅರ್ಚಕರಾಗಿದ್ದ ಉಮೇಶ ಭಟ್ಟರು ಮಂಗಳವಾರ ರಾತ್ರಿ ನಿದನರಾಗಿದ್ದಾರೆ.
ಜ್ವರದಿಂದ ಬಳಲುತ್ತಿದ್ದ ಅವರು 13 ದಿನಗಳಿಂದ ಶಿವಮೊಗ್ಗದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಮಂಗಳವಾರ ರಾತ್ರಿ ದೈವಾಧೀನರಾಗಿದ್ದಾರೆ.
ಉಮೇಶ ಭಟ್ಟರು ಒಳ್ಳೆಯ ನಾಯಕತ್ವದ ಗುಣ ಹೊಂದಿದ್ದ ವ್ಯಕ್ತಿಯಾಗಿದ್ದರು. ತಮ್ಮ ಓದಿನ ನಂತರ ವಂಶಪಾರಂಪರ್ಯವಾಗಿ ಬಂದ ಅರ್ಚಕ ವೃತ್ತಿಗೆ ಬಂದವರು. ಮಾಡದ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಸನ್ನಿಧಿಯಲ್ಲಿ ಅಂದಿನಿಂದ ಇದುವರೆಗೂ ಅತ್ಯಂತ ಶ್ರದ್ಧಾ ಭಕ್ತಿಯಿಂದ ನಿತ್ಯ ಪೂಜೆ, ಜಾತ್ರಾದಿ ಕಟ್ಟು ಕಟ್ಟಳೆಗಳನ್ನು ನೆರವೇರಿಸಿಕೊಂಡು ಬಂದವರು.
ಈ ಹಿಂದೆ ದೇವಸ್ಥಾನದ ರಥವು ಶಿಥಿಲವಾಗಿದ್ದ ಸಂದರ್ಭದಲ್ಲಿ ಭಕ್ತಾದಿಗಳನ್ನು ಸಂಪರ್ಕಿಸಿ ಒಂದು ಸುಂದರವಾದ ರಥವನ್ನು ನಿರ್ಮಿಸಿದ್ದರು. ಅಲ್ಲದೆ ಶಿಥಿಲವಾಗಿದ್ದ ಮೂಲ ದೇವಸ್ಥಾನವನ್ನು ಭಕ್ತರ ಮನೆ ಮನೆಗೆ ತಿರುಗಿ, ಹಣ ಸಂಗ್ರಹಿಸಿ ಐದು ವರ್ಷಗಳ ಹಿಂದೆ ಅತ್ಯಂತ ಸುಂದರವಾದ ಶಿಲಾಮಯ ದೇವಸ್ಥಾನವನ್ನು ಕಟ್ಟುವಲ್ಲಿ ಉಮೇಶ ಭಟ್ಟರು ಬಹಳ ಪ್ರಮುಖ ಪಾತ್ರವನ್ನು ವಹಿಸಿದ್ದರು.
ಉಮೇಶ ಭಟ್ಟರ ಅಗಲುವಿಕೆಯಿಂದ ಮಾಡದ ದೇವಸ್ಥಾನಕ್ಕೆ ಬರುವ ಭಕ್ತ ಸಮೂಹಕ್ಕೆ ಅಪಾರವಾದ ನಷ್ಟ ಉಂಟಾಗಿದೆ.
Chikmagalur
ಕಾಡಾನೆಗಳಿಂದ ಶಾಶ್ವತ ಪರಿಹಾರಕ್ಕಾಗಿ ಒತ್ತಾಯಿಸಿ ವಿವಿಧ ಗ್ರಾಮಸ್ಥರಿಂದ ಪ್ರತಿಭಟನೆ

ಮೂಡಿಗೆರೆ: ಕಾಡಾನೆಗಳಿಂದ ಶಾಶ್ವತ ಪರಿಹಾರ ಒದಗಿಸಬೇಕೆಂದು ಆಗ್ರಹಿಸಿ ಮಾಕೋನಹಳ್ಳಿ ಹಾಗೂ ನಂದೀಪುರ ಗ್ರಾ.ಪಂ. ವ್ಯಾಪ್ತಿಯ ಗ್ರಾಮಸ್ಥರು ಶನಿವಾರ ತಾಲೂಕಿನ ಮಾಕೋನಹಳ್ಳಿ ಸರ್ಕಲ್ನಲ್ಲಿ ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ಜೆಡಿಎಸ್ ಇಲ್ಲಾ ಉಪಾಧ್ಯಕ್ಷ ಗಬ್ಬಳ್ಳಿ ಚಂದ್ರೇಗೌಡ ಮಾತನಾಡಿ, ಈ ಹಿಂದೆ ಕಾಡಾನೆಗಳು ಬಂದು ಹೋಗುತ್ತಿತ್ತು. ಆದರೆ ಈಗ ಇಲ್ಲಿಯೇ ನೆಲೆಸಿಬಿಟ್ಟಿದೆ. ತೋಟದಲ್ಲಿ ಬೆಳೆದ ಬೆಳೆ ಸಂಪೂರ್ಣ ನಾಶಪಡಿಸುತ್ತಿವೆ. ನಮಗೆ ಬೆಳೆ ಪರಿಹಾರಕ್ಕಿಂತ ಜೀವ ಉಳಿಸಿಕೊಂಡರೆ ಸಾಕೆಂಬ ಸ್ಥಿತಿಗೆ ಬಂದಿದ್ದೇವೆ. ಯಾವ ಸಮಯದಲ್ಲಾದರು ಪ್ರಾಣ ಹಾನಿಯಾಗುವ ಸಂಭವವಿದೆ. ಆದರೂ ಇಲ್ಲಿನ ಸಮಸ್ಯೆ ಬಗ್ಗೆ ಸ್ಥಳೀಯ ಶಾಸಕರು ಹಾಗೂ ಉಪಸಭಾಪತಿಗಳು ತಲೆಕೆಡಿಸಿಕೊಂಡಿಲ್ಲ. ಇನ್ನು ಅರಣ್ಯ ಸಚಿವರು ಕಳೆದೇ ಹೋಗಿದ್ದಾರೆ. ನಮ್ಮ ಸಮಸ್ಯೆ ಕೇಳುವವರೇ ಇಲ್ಲದಂತಾಗಿದೆ. ಕಾಡು ಪ್ರಾಣಿಗಳಿಂದ ರಕ್ಷಣೆ ಕೊಡದ ಅರಣ್ಯ ಇಲಾಖೆ ನಮಗೆ ಅಗತ್ಯವಿಲ್ಲ. ಇನ್ನು ೨ ದಿನದಲ್ಲಿ ಕಾಡಾನೆಗಳನ್ನು ಸ್ಥಳಾಂತರಿಸಬೇಕು. ಇಲ್ಲವಾದರೆ ಅರಣ್ಯ ಇಲಾಖೆಗೆ ಗೆರಾವ್ ಹಾಕಲಾಗುವುದು. ನಂತರ ಶಾಸಕರ ಮನೆ ಮುಂದೆ ಅನಿರ್ಧಿಷ್ಟಾವದಿ ದರಣಿ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ರೈತ ಮುಖಂಡ ಎಸ್.ಪಿ.ರಾಜು ಮಾತನಾಡಿ, ಮಾಕೋನಹಳ್ಳಿ ಹಾಗೂ ನಂದೀಪುರ ಗ್ರಾ.ಪಂ. ವ್ಯಾಪ್ತಿಯ ಅನೇಕ ಗ್ರಾಮಗಳಲ್ಲಿ ಭುವನೇಶ್ವರಿ ಮತ್ತು ಕೆಪಿ ಕಾಲರ್ ತಂಡದ ಸುಮಾರು ೪೨ಕ್ಕೂ ಅಧಿಕ ಕಾಡಾನೆಗಳು ಕಳೆದ ೧೫ ದಿನದಿಂದ ಇಲ್ಲಿಯೇ ಬೀಡು ಬಿಟ್ಟಿವೆ. ಅವುಗಳು ಕಾಫಿ ತೋಟ ಹಾಳು ಮಾಡುವ ಜತೆಗೆ ಮನೆಗಳ ಸಮೀಪ ಬರುತ್ತಿವೆ. ಮನೆಯಲ್ಲಿ ಮಕ್ಕಳನ್ನು ಬಿಟ್ಟು ಹೋಗದ ಸ್ಥಿತಿ ಉಂಟಾಗಿದೆ. ತೋಟದಲ್ಲಾಗಿರುವ ಹಾನಿ ವೀಕ್ಷಿಸಲು ರೈತರು ತೋಟಕ್ಕೆ ಹೋಗಲು ಭಯಪಡುವಂತಾಗಿದೆ. ಅಲ್ಲದೇ ಕೂಲಿ ಕಾರ್ಮಿಕರು ಕೂಲಿ ಕೆಲಸಕ್ಕೆ ತೆರಳಲು ಸಾಧ್ಯವಾಗದೇ ಕುಟುಂಬ ನಿರ್ವಹಣೆಗೆ ಕಷ್ಟಪಡಬೇಕಾಗಿದೆ. ರಾತ್ರಿ ರೋಗಿಗಳನ್ನು ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿಲ್ಲ. ಜೀವ ಉಳಿಸಿಕೊಳ್ಳುವುದೇ ಕಷ್ಟವಾಗಿದೆ. ಕಾಡಾನೆಗಳನ್ನು ಕೂಡಲೇ ಸ್ಥಳಾಂತರಿಸುವ ಬಗ್ಗೆ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಉತ್ತರಿಸಬೇಕೆಂದು ಒತ್ತಾಯಿಸಿದರು.
ನಂತರ ಎಸಿಎಫ್ ಮೋಹನ್ ಹಾಗೂ ಆರ್ಎಫ್ಒ ಕಾವ್ಯ ಸ್ಥಳಕ್ಕೆ ಆಗಮಿಸಿ, ಈಗಾಗಲೇ ೧೫ ಕಾಡಾನೆಗಳು ಕಾಡಿಗೆ ವಾಪಾಸು ತೆರಳಿವೆ. ಭುವನೇಶ್ವರಿ ಹಾಗೂ ಕೆ.ಪಿ.ಕಾಲರ್ ತಂಡದ ಸುಮಾರು ೨೦ ಕಾಡಾನೆಗಳು ಕೆಲ್ಲೂರು ಮತ್ತು ಬಾರದಹಳ್ಳಿ ಗ್ರಾಮದಲ್ಲಿವೆ. ಅವುಗಳನ್ನು ಏಕ ರೀತಿಯಲ್ಲಿ ಓಡಿಸಿದರೆ ಅನಾಹುತ ಸಂಭವಿಸುವ ಸಾಧ್ಯತೆ ಇದೆ. ಹಾಗಾಗಿ ಅವುಗಳ ಸ್ವಾಭಾವಿಕ ಸಂಚಾರಕ್ಕೆ ಅನುವು ಮಾಡಿ, ಹತ್ತಿರದ ಕಾಡಿಗೆ ಸ್ಥಳಾಂತರಿಸುವ ಕಾರ್ಯ ನಡೆಯುತ್ತಿದೆ. ಇದಕ್ಕೆ ಸಾರ್ವಜನಿಕರು ಸಹಕರಿಸಬೇಕೆಂದು ಮನವಿ ಮಾಡಿದರು.
ಮಾಕೋನಹಳ್ಳಿ ಗ್ರಾ.ಪಂ. ಅಧ್ಯಕ್ಷೆ ಮಂಜುಳ, ಸದಸ್ಯ ಪುಟ್ಟರಾಜು, ಕೆಂಪೇಗೌಡ ಒಕ್ಕಲಿಗರ ಸಂಘದ ಅಧ್ಯಕ್ಷ ಬ್ರಿಜೇಶ್, ಗ್ರಾಮಸ್ಥರಾದ ಲಕ್ಷ್ಮಣ್ಗೌಡ ಗೌತಳ್ಳಿ, ವೀರೇಶ್ ಮಾಕೋನಹಳ್ಳಿ, ವಿಕ್ರಮ್, ಪ್ರಹ್ಲಾಧ್, ಅನಿಲ್ ಬಾರದಹಳ್ಳಿ, ಬಿ.ಎ.ಇಂದ್ರೇಶ್, ಸತ್ಯ ತುದಿಯಾಲ, ಶಶಿಕಿರಣ್ ಮತ್ತಿತರರಿದ್ದರು.
Chikmagalur
ಮೇಲಾಧಿಕಾರಿಗಳ ಕಿರುಕುಳಕ್ಕೆ ಬೇಸತ್ತ ಸರ್ಕಾರಿ ಬಸ್ ಡ್ರೈವರ್ ಆತ್ಮ*ಹತ್ಯೆಗೆ ಶರಣು

ಚಿಕ್ಕಮಗಳೂರು: ಮೇಲಾಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಸರ್ಕಾರಿ ಬಸ್ ಚಾಲಕನೋರ್ವ ವಿಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿರುವ ಘಟನೆ ಕಡೂರು ಡಿಪೋದಲ್ಲಿ ನಡೆದಿದೆ.
ಚಂದ್ರು, ವಿಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕೆ.ಎಸ್.ಆರ್.ಟಿ.ಸಿ. ಚಾಲಕ. ರಜೆ ವಿಚಾರವಾಗಿ ಮೇಲಾಧಿಕಾರಿ ಪುಟ್ಟಸ್ವಾಮಿ ನೀಡುತ್ತಿರುವ ನೀಡುತ್ತಿರುವ ಕಿರುಕುಳಕ್ಕೆ ಬೇಸತ್ತು ಕಡೂರು ಡಿಪೋದಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಆತ್ಮಹತ್ಯೆಗೆ ಯತ್ನಿಸಿದ ಚಾಲಕ ಚಂದ್ರು ನನ್ನು ಶಿವಮೊಗ್ಗದ ಮ್ಯಾಕ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಚಾಲಕ ಬರೆದಿಟ್ಟ ಡೆತ್ ನೋಟಲ್ಲಿ ‘ಹುಷಾರಿಲ್ಲದೆ ಕೆಲಸಕ್ಕೆ ಬಾರದಿದ್ದಕ್ಕೆ ಹಾಜರಾತಿಯಲ್ಲಿ ಗೈರು ಹಾಕಿದ್ದಾರೆ, ನನ್ನ ಖಾತೆಯಲ್ಲಿ ಸಾಕಷ್ಟು ರಜೆ ಇದೆ, ಆದರೂ ಗೈರು ಹಾಕಿದ್ದಾರೆ, ಹಣ ಕೊಟ್ಟರೆ ಎಷ್ಟು ದಿನ ಬೇಕಾದ್ರು ರಜೆ ನೀಡುತ್ತಾರೆ. ಪುಟ್ಟಸ್ವಾಮಿಯಿಂದ ನೌಕರರ ಮೇಲಾಗುತ್ತಿರು ದೌರ್ಜನ್ಯ ಸರಿಪಡಿಸುವಂತೆ ಮನವಿ ಮಾಡಿದ್ದಾನೆ. ಕಡೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ
Chikmagalur
ಅಪ್ರಾಪ್ತನಿಂದ ದ್ವಿಚಕ್ರ ವಾಹನ ಚಾಲನೆ: ಪೋಷಕರಿಗೆ 25 ಸಾವಿರ ರೂ ದಂಡ.

ಚಿಕ್ಕಮಗಳೂರು : ಮೂಡಿಗೆರೆ ಪಟ್ಟಣದ ಬಾಪು ನಗರದಲ್ಲಿ ಅಪ್ರಾಪ್ತ ಬಾಲಕನೋರ್ವ ಸ್ಕೂಟಿ ಚಾಲನೆ ಮಾಡುತ್ತಿದ್ದಾಗ ಮೂಡಿಗೆರೆ ಪೊಲೀಸರು ದ್ವಿಚಕ್ರ KA18 EC2707 ಸಂಖ್ಯೆಯ ಸ್ಕೂಟಿಯನ್ನು ವಶಕ್ಕೆ ಪಡೆದು ದಂಡ ವಿಧಿಸಿದರು.
ಬಾಲಕನ ಪೋಷಕರಾದ ಮೊಹಮ್ಮದ್ ಸಿರಾಜ್ ಮೇಲೆ ಪ್ರಕರಣ ದಾಖಲಾಗಿದ್ದು ವಿಚಾರಣೆ ನಡೆಸಿ ಮೂಡಿಗೆರೆ ಸಿವಿಲ್ ಜಡ್ಜ್ ಮತ್ತು ಜೆಎಂಎಫ್ಸಿ ನ್ಯಾಯಾಧೀಶರು ತೀರ್ಪು ನೀಡಿತು.
-
Chamarajanagar23 hours ago
ನಾಳೆ ವಿವಿಧೆಡೆ ವಿದ್ಯುತ್ ವ್ಯತ್ಯಯ
-
Mysore20 hours ago
12 ವರ್ಷದ ಬಾಲಕಿ ಮೇಲೆ ಅತ್ಯಾಚಾರ : ಆರೋಪಿ ಬಂಧನ
-
Kodagu20 hours ago
ಹುಲಿ ದಾಳಿಗೆ ಕರು ಬಲಿ
-
Kodagu23 hours ago
ಬಿರುನಾಣಿ ವ್ಯಾಪ್ತಿಯಲ್ಲಿ ಹುಲಿ ಸೆರೆಗೆ ಕಾರ್ಯಚರಣೆ
-
Mysore22 hours ago
ಆರ್. ರಘು ಅವರ ಎರಡು ಕೃತಿಗಳ ಲೋಕಾರ್ಪಣೆ
-
Hassan6 hours ago
ಹಾಸನ : ಕಾರಿನೊಳಗೆ ಅಸಿಸ್ಟೆಂಟ್ ಅಕೌಂಟೆಂಟ್ ಅನುಮಾನಾಸ್ಪದ ಸಾ*ವು
-
Kodagu7 hours ago
ಎ.ಎಸ್ ಪೊನ್ನಣ್ಣ ಅವರಿಗೆ ಸಚಿವ ಸ್ಥಾನ ನೀಡಿ – ಬೆಂಗಳೂರು ಕೊಡವ ಸಮಾಜ ಸಿಎಂಗೆ ಮನವಿ
-
Kodagu23 hours ago
ಜನಪರ ಪ್ರೀಮಿಯರ್ ಲೀಗ್-3 ಕ್ರಿಕೆಟ್ ಗೆ ಆಟಗಾರರ ಆಯ್ಕೆ