Chamarajanagar
ಅಪರಿಚಿತ ಶವ : ವಾರಸುದಾರರ ಪತ್ತೆಗೆ ಸಹಕರಿಸಲು ಮನವಿ
ಚಾಮರಾಜನಗರ: ಬೇಡರಪುರ ಗ್ರಾಮದ ಬಳಿಯಿರುವ ಪ್ರೇಸ್ಟೀಜ್ ಫ್ಯಾಕ್ಟರಿಯ ಬಳಿ ಅಪರಿಚಿತ ಶವ ಪತ್ತೆಯಾಗಿದ್ದು, ವಾರಸುದಾರರ ಸುಳಿವಿಗೆ ಸಹಕರಿಸಲು ಕೋರಲಾಗಿದೆ.
ಸುಮಾರು 35 ರಿಂದ 40 ವರ್ಷ ವಯಸ್ಸಿನ ವ್ಯಕ್ತಿಯಾಗಿದ್ದು, 158 ಸೆಂ.ಮೀ ಎತ್ತರ, ಕೋಲು ಮುಖ, ತೆಳ್ಳನೆ ಶರೀರ, ಎಣ್ಣೆಗೆಂಪು ಮೈ ಬಣ್ಣ ಹೊಂದಿದ್ದು, ಕುರುಚಲು ಗಡ್ಡ, ಕಪ್ಪು ಮೀಸೆ ಹಾಗೂ ಕಪ್ಪು, ಬಿಳಿ ಮಿಶ್ರಿತ ತಲೆ ಕೂದಲು ಇರುತ್ತದೆ. ಕಪ್ಪು, ಹಸಿರು ಮತ್ತು ಬಿಳಿ ಮಿಶ್ರಿತ ಗೆರೆಗಳುಳ್ಳ ತುಂಬು ತೋಳಿನ ಶರ್ಟ್ ಧರಿಸಿದ್ದು, ಎದೆಯ ಭಾಗದಲ್ಲಿ ಎಸು ಎಂಬ ಹಚ್ಚೆ ಇರುತ್ತದೆ.

ಇವರ ವಾರಸದಾರರು ಇದ್ದಲ್ಲಿ ಚಾಮರಾಜನಗರ ಗ್ರಾಮಾಂತರ ಪೊಲೀಸ್ ಠಾಣೆಯ ಆರಕ್ಷಕ ನಿರೀಕ್ಷಕರನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.
Chamarajanagar
ಖಾಸಗಿ ಬಸ್-ಬೈಕ್ ನಡುವೆ ರಸ್ತೆ ಅಪಘಾತ: ಬೈಕ್ ಸವಾರನಿಗೆ ಗಂಭೀರ ಗಾಯ
ಗುಂಡ್ಲುಪೇಟೆ: ಖಾಸಗಿ ಬಸ್ – ಬೈಕ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಬೈಕ್ ಸವಾರನಿಗೆ ತೀವ್ರತರವಾದ ಗಾಯಗಳಾಗಿರುವ ಘಟನೆ ತಾಲೂಕಿನ ರಂಗನಾಥಪುರ ಕ್ರಾಸ್ ಬಳಿ ಸೋಮವಾರ ಸಂಜೆ ನಡೆದಿದೆ.
ತಾಲೂಕಿನ ತರದಲೆ ಗ್ರಾಮದ ರಂಗಶೆಟ್ಟಿ ಗಾಯಾಳು. ಈತ ಬೇಗೂರಿನಿಂದ ಸ್ವಗ್ರಾಮಕ್ಕೆ ತೆರಳುವ ವೇಳೆ ಬೈಕ್ ಹಾಗೂ ಖಾಸಗಿ ಬಸ್ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರನಿಗೆ ತೀವ್ರತರವಾದ ಗಾಯಗಳಾಗಿದೆ. ಕೂಡಲೇ ಗಾಯಾಳುವನ್ನು ಪೊಲೀಸರು ಬೇಗೂರು ಸರ್ಕಾರಿ ಆಸ್ಪತ್ರೆಗೆ ರವಾನಿಸಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿದ್ದಾರೆ.

ಈ ಸಂಬಂಧ ಬೇಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಎರಡು ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ.
Chamarajanagar
ಸಂತ ಪೌಲರ ಚರ್ಚ್ನಲ್ಲಿ ಸಡಗರದಿಂದ ಜರುಗಿದ ವಾರ್ಷಿಕ ಹಬ್ಬ
ಚಾಮರಾಜನಗರ: ನಗರದ ಬಿ.ರಾಚಯ್ಯ ಜೋಡಿ ರಸ್ತೆಯ ಸಂತ ಪೌಲರ ಚರ್ಚ್ನಲ್ಲಿ ಸಡಗರ ಸಂಭ್ರಮದಿಂದ ವಾರ್ಷಿಕ ಹಬ್ಬ ನಡೆಯಿತು.
ಚಾಮರಾಜನಗರ, ನಾಗವಳ್ಳಿ, ದೊಡ್ಡರಾಯಪೇಟೆ, ಕೋಡಿಉಗನೆ ಹಾಗೂ ತಾಳವಾಡಿ ವ್ಯಾಪ್ತಿಯ ನೂರಾರು ಮಂದಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.
ಆಡಂಬರ ಗಾಯನ ದಿವ್ಯ ಬಲಿಪೂಜೆ: ಮೈಸೂರು ಕೃಪಾಲಯದ ಗುರು ಅಲೆಕ್ಸ್ ಆಡಂಬರ ಗಾಯನ ದಿವ್ಯ ಬಲಿಪೂಜೆ ಸಮರ್ಪಿಸಿದರು. ಬೈಬಲ್ ವಾಚನ, ಸಂದೇಶ ಪಠನ ನಡೆಯಿತು. ಪ್ರಬೋಧನೆ ನೀಡಿದ ಗುರು ಅಲೆಕ್ಸ್, ಸೌಲನಾಗಿದ್ದ ಪೌಲನು ಯೇಸುವಿನ ಅಶರೀರವಾಣಿ ಕೇಳಿ ಜ್ಞಾನೋದಯವಾಗಿ ಕ್ರಿಸ್ತನ ಸಂದೇಶ ಸಾರಿದರು. “ಈಸಬೇಕು ಭಕ್ತರೇ, ಜೈಸಬೇಕು ಮಿತ್ರರೇ” ಎಂಬುದು ಆತನ ಧ್ಯೇಯವಾಕ್ಯ. ಆತ ಪ್ರೀತಿ, ಸಹನೆ, ಸೈರಣೆಯನ್ನು ಅಳವಡಿಸಿಕೊಳ್ಳುವಂತೆ ಪತ್ರಗಳ ಮೂಲಕ ಕರೆ ನೀಡಿದರು ಎಂದು ಹೇಳಿದರು. ಬಲಿಪೂಜೆ ಬಳಿಕ ಗುರುವರ್ಯರು ಮತ್ತು ಹಬ್ಬದ ದಾನಿಗಳನ್ನು ಗೌರವಿಸಲಾಯಿತು.

ಪೂರ್ವ ಸಿದ್ಧತೆ: ಹಬ್ಬದ ಮೂರು ದಿನಗಳ ಮೊದಲು ಧ್ವಜಾರೋಹಣ ಮತ್ತು ವಿವಿಧ ಧರ್ಮಕೇಂದ್ರಗಳ ಗುರುಗಳಿಂದ ದಿವ್ಯ ಬಲಿಪೂಜೆ, ಪ್ರಬೋಧನೆಯೊಂದಿಗೆ ಹಬ್ಬಕ್ಕೆ ಚಾಲನೆ ನೀಡಲಾಗಿತ್ತು. ಚರ್ಚ್ ಅನ್ನು ವಿದ್ಯುತ್ ದೀಪಗಳು ಮತ್ತು ಹೂವುಗಳಿಂದ ಅಲಂಕರಿಸಲಾಗಿತ್ತು.
ತೇರಿನ ಮೆರವಣಿಗೆ: ಪೂಜಾ ವಿಧಿಗಳ ಬಳಿಕ ಸರ್ವಾಲಂಕೃತ ಸಂತ ಪೌಲರ ಪುತ್ಥಳಿಯ ತೇರು ಚರ್ಚ್ನಿಂದ ಹೊರಟು ರಾಮಸಮುದ್ರ, ಬಾಗೇಮರದ ಮೂಲಕ ಡಿವೈಎಸ್ಪಿ ಕಛೇರಿ ವರೆಗೆ ಸಾಗಿ ಮತ್ತೆ ಚರ್ಚ್ಗೆ ಮರಳಿತು. ಮೆರವಣಿಗೆಯಲ್ಲಿ ಹೂ ಕುಂಡಗಳು, ಪಟಾಕಿ ಸಿಡಿಸಲಾಯಿತು. ಕೇರಳದ ಚಂಡೆ ಮದ್ದಳೆ ತಂಡ ವಿಶೇಷ ಆಕರ್ಷಣೆಯಾಗಿತ್ತು. ಗುರುವರ್ಯರು, ಬ್ರದರ್ಸ್, ಸಿಸ್ಟರ್ಸ್, ಮಕ್ಕಳು ಹಾಗೂ ಭಕ್ತರು ಭಕ್ತಿಗೀತೆ ಹಾಡುತ್ತಾ, ಜಪಸರ ಹೇಳುತ್ತಾ ಪಾಲ್ಗೊಂಡರು. ಕೊನೆಯಲ್ಲಿ ಪರಮಪ್ರಸಾದದ ಆಶೀರ್ವಾದ ಮತ್ತು ಪ್ರಸಾದ ವಿತರಣೆ ನಡೆಯಿತು.

ಹಬ್ಬದ ನೇತೃತ್ವವನ್ನು ಧರ್ಮಕೇಂದ್ರದ ಗುರು ಇಜ್ಞಾಸಿ ಮುತ್ತು ವಹಿಸಿದ್ದರು. ಮೈಕೆಲ್ ಅಗುಷ್ಟಿನ್, ಕ್ರಿಸ್ಟೋಫರ್ ಸಹಾಯರಾಜ್, ಪ್ರಶಾಂತ್, ದೊರೈಸ್ವಾಮಿ ಸೇರಿದಂತೆ ವಿವಿಧ ಧರ್ಮಕೇಂದ್ರಗಳ ಗುರುಗಳು ಪೂಜಾ ವಿಧಿಗಳಲ್ಲಿ ಭಾಗವಹಿಸಿದ್ದರು.
Chamarajanagar
ರೈತ ಸಂಘದ ತಾಲೂಕು ಘಟಕಗಳಿಗೆ ನೂತನ ಪದಾಧಿಕಾರಿಗಳ ಆಯ್ಕೆ
ಗುಂಡ್ಲುಪೇಟೆ: ಜು.20- ಕರ್ನಾಟಕ ರಾಜ್ಯ ರೈತ ಸಂಘದ ತಾಲೂಕು, ಮಹಿಳಾ ಹಾಗೂ ಯುವ ಘಟಕಗಳ ನೂತನ ಪದಾಧಿಕಾರಿಗಳ ಆಯ್ಕೆ ಕಾರ್ಯಕ್ರಮ ಪಟ್ಟಣದ ಜ್ಞಾನ ಭವನದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿಭಾಗೀಯ ಕಾರ್ಯದರ್ಶಿ ಜ್ಯೋತಿಗೌಡನಪುರ ಸಿದ್ದರಾಜ್ ವಹಿಸಿದ್ದರು. ಮಹೇಶ್ ಕುಮಾರ್ ಕಾರ್ಯಕ್ರಮ ಉದ್ಘಾಟಿಸಿದರು.
ಸಭೆಯಲ್ಲಿ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ತಾಲೂಕು ಘಟಕದ ಗೌರವಾಧ್ಯಕ್ಷರಾಗಿ ನಾಗರಾಜಪ್ಪ, ಕಾರ್ಯಾಧ್ಯಕ್ಷರಾಗಿ ಸಿದ್ದಶೆಟ್ಟಿ, ಅಧ್ಯಕ್ಷರಾಗಿ ಮಲ್ಲಯ್ಯನಪುರ ಶಿವಣ್ಣ, ಪ್ರಧಾನ ಕಾರ್ಯದರ್ಶಿಯಾಗಿ ಪ್ರಸಾದ್, ಉಪಾಧ್ಯಕ್ಷರಾಗಿ ಶಿವಕುಮಾರ್, ಸುಭಾಷ್, ಪ್ರಕಾಶ್ ಹಾಗೂ ಪುಟ್ಟೇಗೌಡ, ಸಂಘಟನಾ ಕಾರ್ಯದರ್ಶಿಗಳಾಗಿ ರವಿಚಂದ್ರ ಮತ್ತು ಸಿದ್ದರಾಜು, ಕೋಶಾಧ್ಯಕ್ಷರಾಗಿ ನಾಗಶೆಟ್ಟಿ ಹಾಗೂ ಖಜಾಂಜಿಯಾಗಿ ಮೂರ್ತಿ ಸರ್ವಾನುಮತದಿಂದ ಆಯ್ಕೆಯಾದರು.

ಯುವ ಘಟಕದ ತಾಲೂಕು ಅಧ್ಯಕ್ಷರಾಗಿ ಪ್ರವೀಣ್, ಪ್ರಧಾನ ಕಾರ್ಯದರ್ಶಿಯಾಗಿ ರಘು, ಉಪಾಧ್ಯಕ್ಷರಾಗಿ ಪ್ರಜ್ವಲ್, ಸಾಗರ್, ಮಂಜು ಹಾಗೂ ಗುರುಪ್ರಸಾದ್, ಸಂಘಟನಾ ಕಾರ್ಯದರ್ಶಿಗಳಾಗಿ ಸುರೇಶ್, ಮಹದೇವಸ್ವಾಮಿ ಮತ್ತು ರೋಹಿತ್ ಗೌಡ ಆಯ್ಕೆಯಾದರು.ಮಹಿಳಾ ಘಟಕದ ತಾಲೂಕು ಅಧ್ಯಕ್ಷರಾಗಿ ಬಸಮ್ಮ, ಗೌರವಾಧ್ಯಕ್ಷರಾಗಿ ನಾಗಮ್ಮ, ಪ್ರಧಾನ ಕಾರ್ಯದರ್ಶಿಯಾಗಿ ಚಿಕ್ಕಸಿದ್ದಮ್ಮ ಹಾಗೂ ಉಪಾಧ್ಯಕ್ಷರಾಗಿ ಬೆಳ್ಳಮ್ಮ ಮತ್ತು ರಶ್ಮಿ ಆಯ್ಕೆಯಾದರು. ಈ ವೇಳೆ ಜಿಲ್ಲಾ ಘಟಕದ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯೂ ಸಹ ನಡೆಯಿತು.
ಜಿಲ್ಲಾ ಅಧ್ಯಕ್ಷ ಶಿವಪುರ ಮಹಾದೇವಪ್ಪ ಮಾತನಾಡಿ, ರೈತರ ಸಮಸ್ಯೆಗಳ ಪರಿಹಾರ, ಸಂಘಟನೆ ಬಲವರ್ಧನೆ ಹಾಗೂ ಗ್ರಾಮ ಮಟ್ಟದಲ್ಲಿ ರೈತ ಸಂಘವನ್ನು ಮತ್ತಷ್ಟು ಸಶಕ್ತಗೊಳಿಸುವ ಅಗತ್ಯವನ್ನು ಒತ್ತಿಹೇಳಿದರು.

ನೂತನ ಪದಾಧಿಕಾರಿಗಳು ರೈತರ ಹಿತಾಸಕ್ತಿಗೆ ಆದ್ಯತೆ ನೀಡಿ, ರೈತರ ಸಮಸ್ಯೆಗಳ ಪರಿಹಾರಕ್ಕೆ ಶ್ರಮಿಸುವುದರ ಜೊತೆಗೆ ಸರ್ಕಾರದ ಯೋಜನೆಗಳನ್ನು ರೈತರಿಗೆ ತಲುಪಿಸುವ ಹಾಗೂ ಸಂಘಟನೆಯನ್ನು ತಾಲೂಕು ಮತ್ತು ಗ್ರಾಮ ಮಟ್ಟದಲ್ಲಿ ಇನ್ನಷ್ಟು ಬಲಪಡಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುವುದಾಗಿ ತಿಳಿಸಿದರು.ಈ ಸಂದರ್ಭದಲ್ಲಿ ಯುವ ಘಟಕದ ಸಂಚಾಲಕ ಯಶ್ವಂತ್, ಮಲ್ಲಣ್ಣ, ಸಿದ್ದರಾಜು ಸೇರಿದಂತೆ ಹಲವು ರೈತ ಮುಖಂಡರು ಉಪಸ್ಥಿತರಿದ್ದರು.
-
Kodagu23 hours agoಮುಖ್ಯಮಂತ್ರಿಗಳ ಕಾರ್ಯದರ್ಶಿಯಾಗಿ ಕುಶಾಲನಗರದ ಐಎಎಸ್ ಅಧಿಕಾರಿ ಎಸ್.ಎಸ್. ನಕುಲ್ ನೇಮಕ
-
Politics17 hours agoಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ: 3.68 ಲಕ್ಷಕ್ಕೂ ಅಧಿಕ ಅರ್ಜಿಗಳು – ಜಿಲ್ಲಾವಾರು ಅಂಕಿಅಂಶ ಪ್ರಕಟ!!
-
Hassan22 hours agoಪಂಚಭೂತಗಳಲ್ಲಿ ಲೀನರಾದ ಚೆನ್ನಮ್ಮ ದೇವೇಗೌಡ
-
Politics20 hours agoಬಿಡದಿ ಟೌನ್ಶಿಪ್ ಭೂಸ್ವಾಧೀನಕ್ಕೆ ಹೈಕೋರ್ಟ್ ಗ್ರೀನ್ ಸಿಗ್ನಲ್; PIL ವಜಾ
-
Kodagu23 hours agoಇಂದಿನಿಂದ ಪುಷ್ಯ ಮಳೆ : ಉತ್ತಮ ಮಳೆ ನಿರೀಕ್ಷೆಯಲ್ಲಿ ಜಿಲ್ಲೆಯ ರೈತರು
-
Chikmagalur20 hours agoಕಂಬಳದ ಕೆಸರುಗದ್ದೆಯಂತಾದ ಕೋಳೂರು ರಸ್ತೆ: ಶಾಲಾ ಮಕ್ಕಳ ಹರಸಾಹಸ, ಪಂಚಾಯತ್ ನಿರ್ಲಕ್ಷ್ಯಕ್ಕೆ ಆಕ್ರೋಶ
-
Mysore6 hours agoನಂಜನಗೂಡಿನಲ್ಲಿ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರಿಂದ ಧರ್ಮದೇಟು, ಪೊಲೀಸರ ವಶಕ್ಕೆ
-
Mandya23 hours agoಜನನ ಮತ್ತು ಮರಣ ಪ್ರಮಾಣ ಪತ್ರಗಳು ಜನರಿಗೆ ಸಕಾಲದಲ್ಲಿ ಸಿಗುವಂತಾಗಬೇಕು : ಡಾ. ಕುಮಾರ
