Uncategorized
ಉತ್ತಮ ಸಮಾಜ ನಿರ್ಮಾಣಕ್ಕೆ ಅಸಮಾನತೆ, ಅಸ್ಪೃಶ್ಯತೆ ನಿರ್ಮೂಲನೆ ಅತ್ಯಗತ್ಯ : ಡಾ.ಕಾಳೇಗೌಡ ನಾಗವಾರ
ಮಂಡ್ಯ: ಉತ್ತಮ ಸಮಾಜ ನಿರ್ಮಾಣ ಮಾಡಲು ಅಸಮಾನತೆ, ಅಸ್ಪೃಶ್ಯತೆ ನಿವಾರಣೆ ಮಾಡುವುದು ಅಗತ್ಯವಾಗಿದೆ ಎಂದು ಪ್ರಗತಿಪರ ಚಿಂತಕ ಡಾ.ಕಾಳೇಗೌಡ ನಾಗವಾರ ತಿಳಿಸಿದರು.
ನಗರದ ಅನನ್ಯ ಕ್ರಿಯೇಷನ್ಸ್ಗೆ 10 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ನಡೆದ ಸಂಗೀತ, ಸಾಹಿತ್ಯ,ಕೃಷಿ ಸಂವಾದ ಕಾರ್ಯಕ್ರಮದಲ್ಲಿ ಸಂವಿಧಾನ ಮತ್ತು ಮುಂದೇನು ಕುರಿತು ಮಾತನಾಡಿದರು.
ಪ್ರಸ್ತುತ ಪ್ರಜಾಪ್ರಭುತ್ವ ಹಾಗೂ ಸಂವಿಧಾನದಡಿಯಲ್ಲಿ ದೇಶ ಸಮಾನತೆಯಿಂದ ಸಾಗಬೇಕಾಗಿದೆ. ತೊಂದರೆಗಳು, ಸಮಸ್ಯೆಗಳು ನಮ್ಮ ಅವಿವೇಕತನದಿಂದಲೇ ಹುಟ್ಟಿಕೊಳ್ಳುತ್ತವೆ. ತೊಂದರೆಗೆ ಅವಿವೇಕತನವೇ ಮುಖ್ಯ ಕಾರಣವಾಗಿದೆ. ಆದ್ದರಿಂದ ವಿವೇಕದಿಂದ ಉತ್ತಮ ಸಮಾಜ ಕಟ್ಟಬೇಕಾಗಿದೆ ಎಂದು ಹೇಳಿದರು.
ಯುವಜನತೆ ಹೊಸ ಸಮಾಜ ಕಟ್ಟಲು ಅರ್ಪಣಾ ಮನೋಭಾವ ಅಗತ್ಯವಾಗಿದೆ. ಮಂಡ್ಯ ಜಿಲ್ಲೆಯಲ್ಲಿ ಮೌಢ್ಯ, ಅಸಮಾನತೆ, ಹೆಣ್ಣು ಭ್ರೂಣಹತ್ಯೆ, ಮರ್ಯಾದೆ ಹತ್ಯೆಗಳು ನಡೆಯುತ್ತಿವೆ. ಇದಕ್ಕೆ ಅರಿವಿನ ಕೊರತೆಯೇ ಕಾರಣವಾಗಿದೆ. ನಿತ್ಯ ಸಚಿವ ಕೆ.ವಿ.ಶಂಕರಗೌಡ ರಂತಹ ನಾಯಕರು ಜಿಲ್ಲೆಯಲ್ಲಿ ಶಿಕ್ಷಣ ಹಾಗೂ ಸಹಕಾರ ಕ್ಷೇತ್ರಕ್ಕೆ ಕೊಡುಗೆ ನೀಡಿದ್ದಾರೆ. ಇದರಿಂದ ಜಿಲ್ಲೆ ಸುಶಿಕ್ಷಿತವಾಗಿದೆ. ಅಂಥವರ ಮಾರ್ಗದಲ್ಲಿ ಎಲ್ಲರೂ ನಡೆಯಬೇಕಾಗಿದೆ ಎಂದು ಸಲಹೆ ನೀಡಿದರು.

ಮೌಢ್ಯ, ಅವಿವೇಕತನ ಪ್ರಸ್ತುತ ಹೆಚ್ಚಾಗಿದೆ. ನಮಗೆ ಸಮಸ್ಯೆ ಬಂದಾಗ ನಮ್ಮನ್ನು ಕಾಪಾಡುವುದು ಸಂವಿಧಾನವೇ ಹೊರತು ಬೇರೆ ಯಾರೂ ಕಾಪಾಡಲು ಸಾಧ್ಯವಿಲ್ಲ. ಪ್ರಜಾಪ್ರಭುತ್ವ ಬಿಟ್ಟು ಇರಲು ಸಾಧ್ಯವಿಲ್ಲ. ಸಂವಿಧಾನದ ಕಾನೂನಿನ ಚೌಕಟ್ಟಿನಲ್ಲಿಯೇ ಎಲ್ಲರೂ ನಡೆದುಕೊಳ್ಳಬೇಕಾಗಿದೆ. ಎಷ್ಟೇ ದೊಡ್ಡವರಾದರೂ ಕೆಟ್ಟದ್ದನ್ನು ಮಾಡಿದರೆ ತಿಪ್ಪೆಗುಂಡಿಯಲ್ಲಿ ಕೊಳೆಯಬೇಕಾಗುತ್ತದೆ. ಅದಕ್ಕಾಗಿ ಪ್ರತಿಯೊಬ್ಬರೂ ಒಳ್ಳೆಯ ಕೆಲಸಗಳನ್ನು ಮಾಡಬೇಕು ಎಂದು ಹೇಳಿದರು.
ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಹಿಂದುಳಿದ, ದಲಿತ ಹಾಗೂ ಹೆಣ್ಣು ಮಕ್ಕಳಿಗೆ ಶಿಕ್ಷಣ ನೀಡಿದರು. ಬ್ರಿಟಿಷರು ದೇಶಕ್ಕೆ ಬಂದಿದ್ದ ರಿಂದ ಒಳ್ಳೆಯದು ಹಾಗೂ ಕೆಟ್ಟದ್ದು ಎರಡೂ ಆಗಿವೆ. ಸಮಾಜದಲ್ಲಿ ಮೌಢ್ಯ, ಅಸಮಾನತೆ ತೊಲಗಬೇಕು. ಅಪರಾಧ ಇಲ್ಲದೆ ಇದ್ದರೆ ಎಲ್ಲರೂ ನೆಮ್ಮದಿಯಿಂದ ಬದುಕಬಹುದು. ಇದರಿಂದ ಒಬ್ಬ 120 ವರ್ಷ ಜೀವನ ಮಾಡಬಹುದಾಗಿದೆ. ಅದಕ್ಕಾಗಿ ದೇವರಾಗಿರುವ ಶಿವನ ತತ್ವಗಳನ್ನು ಅಳವಡಿಸಿಕೊಳ್ಳಬೇಕು. ಶಿವ ತ್ಯಾಗಮಯಿ, ಎಲ್ಲರೂ ಒಂದೇ ಎಂದು ಪ್ರತಿಪಾದನೆ ಮಾಡಿದ್ದಾನೆ. ಹೆಣ್ಣು ಸಹ ನಮ್ಮಲ್ಲಿ ಅರ್ಧ ಭಾಗ ಎಂದು ಅರ್ಧ ನಾರೀಶ್ವರನಾಗಿದ್ದಾನೆ. ಇನ್ನೊಬ್ಬರಿಗೆ ತೊಂದರೆ ಕೊಡಬಾರದು. ಎಲ್ಲರಿಗೂ ಒಳ್ಳೆಯದನ್ನೇ ಮಾಡಬೇಕು ಎಂದು ಉದ್ಧಾರಕ್ಕಾಗಿ ತತ್ವ ಸಂದೇಶಗಳನ್ನು ನೀಡಿದ್ದಾನೆ ಎಂದು ತಿಳಿಸಿದರು.



ಚಿಂತಕ ಡಿ.ಶಿವಶಂಕರ್ ಮಾತನಾಡಿ, ಪ್ರಸ್ತುತ ಸಮಾಜದಲ್ಲಿ ಮನುಷ್ಯ, ಮನುಷ್ಯರ ನಡುವೆ ಕಂದಕ ಸೃಷ್ಟಿಯಾಗುತ್ತಿದೆ. ದ್ವೇಷ ಹೆಚ್ಚುತ್ತಿದ್ದು, ಆತ್ಮೀಯತೆಗೆ ಪೆಟ್ಟು ಬೀಳುತ್ತಿದೆ. ವಿಜ್ಞಾನದ ಹೆಸರಲ್ಲಿ ಅಜ್ಞಾನ ಬೆಳೆಯುತ್ತಿದೆ. ಆದ್ದರಿಂದ ಅದನ್ನು ತಡೆಗಟ್ಟಲು ಯುವ ಜನಾಂಗ ಸಮಾಜಮುಖಿ ಚಿಂತನೆ ಮಾಡಬೇಕು ಎಂದು ಹೇಳಿದರು.
ಜನರಿಗೆ ಬುದ್ಧ, ಬಸವ, ಅಂಬೇಡ್ಕರ್ ವಿಚಾರಧಾರೆಗಳನ್ನು ತಿಳಿಸಬೇಕಾಗಿದೆ. ಮನುಷ್ಯರು ಮಾನಸಿಕವಾಗಿ ಬೆಳೆಸಬೇಕು. ಪ್ರಜಾಪ್ರಭುತ್ವದಲ್ಲಿ ಖಾಸಗಿ ಪ್ರಭುತ್ವ ಹೆಚ್ಚಾಗುತ್ತಿದೆ. ಅಂಥ ಕೆಲಸದಲ್ಲಿ ಕೆಲವರು ನಿರತರಾಗಿದ್ದಾರೆ. ಅದಕ್ಕೆ ಅವಕಾಶ ಕೊಡದಂತೆ ಯುವ ಜನಾಂಗ ಎಚ್ಚೆತ್ತುಕೊಳ್ಳಬೇಕು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಅನನ್ಯ ಕ್ರಿಯೇಷನ್ಸ್ ಸಂಸ್ಥಾಪಕ ಕಾರ್ಯದರ್ಶಿ ರಾಜೇಶ್ ರಾಂಪುರ, ಗೌರವಾಧ್ಯಕ್ಷ ಗೋಪಾಲಕೃಷ್ಣ, ಬರಹಗಾರ ರವಿ ಮರಿಯಪ್ಪ, ಜಗದೀಶ್, ಎಂ.ಸಿದ್ದಯ್ಯ ಸೇರಿದಂತೆ ಇತರರು ಉಪಸ್ಥಿತರಿದ್ದರು.
Uncategorized
ದಿ. ರಾಕೇಶ್ ಸಿದ್ದರಾಮಯ್ಯ ಸ್ಮರಣಾರ್ಥ ಕಾರ್ ರೇಸ್ : ಕುಚುಕು ಗೆಳೆಯ ನನ್ನ ನೆನೆದ ಸಂಸದ ಸುನಿಲ್ ಬೋಸ್
ವರದಿ : ಮಹದೇವಸ್ವಾಮಿ ಪಟೇಲ್
ಆಬ್ಲೆಸ್ ಮೋಟರ್ಸ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ದಿವಂಗ ರಾಕೇಶ್ ಸಿದ್ದರಾಮಯ್ಯನವರ ಸ್ಮರಣಾರ್ಥ ಡರ್ಟಿ ಪ್ರಿಕ್ಸ್ ರೇಸ್ 2026 ನೇ ಸಾಲಿನ ಉದ್ಘಾಟನಾ ಸಮಾರಂಭವನ್ನು ಭಾನುವಾರ ಆಯೋಜಿಸಲಾಗಿತ್ತು.
ನಂಜನಗೂಡು ತಾಲೂಕು ಚಿಕ್ಕಯನ ಚಿತ್ರ ಹೋಬಳಿ ಕೈಗಾರಿಕಾ ಪ್ರದೇಶದಲ್ಲಿ ಆಯೋಜಿಸಿದ್ದ ಕಾರ್ ರೇಸ್ ಗೆ ಚಾಮರಾಜನಗರ ಸಂಸದ ಸುನಿಲ್ ಬೋಸ್ ಹಸಿರು ನಿಶಾನೆ ತೋರಿ ಚಾಲನೆ ನೀಡಿದರು.
ಈ ವೇಳೆ ರೇಸ್ಗೆ ಚಾಲನೆ ನೀಡಿ ಸಂಸದ ಸುನಿಲ್ ಬೋಸ್ ಮಾತನಾಡಿ, ದಿವಂಗತ ರಾಕೇಶ್ ಸಿದ್ಧರಾಮಯ್ಯನವರ ಸ್ಮರಣಾರ್ಥ ಡರ್ಟಿ ಟ್ರಿಕ್ಸ್ ರೇಸ್ ಅನ್ನು ಆಯೋಜನೆ ಮಾಡಲಾಗಿದೆ. ನಾನು ಮತ್ತು ರಾಕೇಶ್ ಸಿದ್ದರಾಮಯ್ಯನವರು ಸಹೋದರರಂತೆ ಇದ್ದವು. ಒಂದೇ ಕುಟುಂಬದ ಅಣ್ಣ ತಮ್ಮನಂತೆ ಜನರಿಗಾಗಿ ಕೆಲಸ ಮಾಡುತ್ತಿದ್ದೋ. ಅವರ ನೆನಪಿಗಾಗಿ ಇಂತಹ ಕಾರ್ಯಕ್ರಮಗಳು ನಡೆಯಬೇಕು, ಅವರಿಗೆ ಕಾರುಗಳ ಮೇಲೆ ಅಪಾರ ಆಸಕ್ತಿ ಇತ್ತು. ಒಬ್ಬ ಒಳ್ಳೆಯ ಸ್ನೇಹಿತನಾಗಿ, ಸಹೋದರನಾಗಿ ಅವರೊಂದಿಗೆ ಕಳೆದ ದಿನಗಳು ಈ ಕಾರ್ಯಕ್ರಮದ ಮೂಲಕ ನೆನಪಾಗುತ್ತಿದೆ. ದಿವಂಗತ ರಾಕೇಶ್ ಅವರ ಸ್ಮರಣಾರ್ಥ ಆಯೋಜಿಸಿರುವ ಕಾರ್ ರೇಸ್ ಮುಂದಿನ ದಿನಗಳಲ್ಲು ಮುಂದುವರೆಯಲಿ ಎಂದು ಕುಚುಕು ಗೆಳೆಯನೊಂದಿಗೆ ಕಳೆದ ಅಂದಿನ ದಿನಗಳನ್ನು ಮೆಲುಕು ಹಾಕುದರು.
ಕಾರು ಪ್ರಿಯರಿಗೆ ಈ ರೇಸ್ ಭರಪೂರ ಮನರಂಜನೆ ನೀಡಲಿದೆ. ಕಾರ್ ರೇಸ್ ಅಪಾಯಕಾರಿ ಕ್ರೀಡೆಯಾಗಿದ್ದು, ಎಚ್ಚರದಿಂದ ವಾಹನ ಚಲಾಯಿಸಿ, ಸ್ಪರ್ಧೆಯಲ್ಲಿ ಗೆಲ್ಲುವಂತೆ ಭಾಗವಹಿಸಿದ್ದ ಕ್ರೀಡಾಪಟುಗಳಿಗೆ ಸಲಹೆ ನೀಡಿದರು.
ವಿವಿಧ ಜಿಲ್ಲೆಗಳಿಂದ ನಾನಾ ಬಗೆಯ ಕಾರುಗಳು ರೇಸ್ ನಲ್ಲಿ ಭಾಗವಹಿಸಿದ್ದವು. ಕಿವಿ ಗುಂಯ್ ಗುಟ್ಟುವ ಭಾರಿ ಶಬ್ದದೊಂದಿಗೆ ಗೆಲುವಿಗಾಗಿ ಶರವೇಗದಲ್ಲಿ ಸವಾರರು ತಮ್ಮ ಕಾರುಗಳನ್ನ ಚಲಾಯಿಸುತ್ತಿದ್ದ ದೃಶ್ಯ ನೋಡುಗರನ್ನು ಮೈ ಜುಮ್ ಅನ್ನುವಂತೆ ಮಾಡುತ್ತದೆ ಎಂದರು.
ಈ ಕಾರ್ಯಕ್ರಮವನ್ನು ಅರ್ಕೇಶ್ವರ ಮತ್ತು ಆ ಸ್ನೇಹಿತರ ತಂಡ ಆಯೋಜನೆ ಮಾಡಲಾಯಿತು.
ಸಮಾರಂಭದಲ್ಲಿ ಶ್ರೀಕಂಠೇಶ್ವರ ಸ್ವಾಮಿಯ ಧರ್ಮದರ್ಶಿ ಮಾಜಿ ಅಧ್ಯಕ್ಷ ಇಂಧನ ಬಾಬು, ರೈತ ಸಂಘದ ರಾಜ್ಯ ಕಾರ್ಯಧ್ಯಕ್ಷ ವಿದ್ಯಾಸಾಗರ್, ರಾಜು, ಅರ್ಕೇಶ್, ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಘು, ಸೇರಿದಂತೆ ಹಲವಾರು ಮುಖಂಡರು ಉಪಸ್ಥಿತರಿದ್ದರು.
Uncategorized
ಫೆ.11ರಂದು ನಾಪೋಕ್ಲುವಿನಲ್ಲಿ ಮಸ್ಜಿದು ತೌಹೀದ್ ನೂತನ ಮಸೀದಿ ಉದ್ಘಾಟನೆ ಹಾಗೂ ದಅವಾ ಸಮ್ಮೇಳನ
ವರದಿ :ಝಕರಿಯ ನಾಪೋಕ್ಲು
ನಾಪೋಕ್ಲು : ಫೆ.11ರಂದು ನಾಪೋಕ್ಲುವಿನ ಬೇತು ರಸ್ತೆಯಲ್ಲಿ ಅಲ್ ನೂರ್ ವೆಲ್ಫೇರ್ ಟ್ರಸ್ಟ್ ವತಿಯಿಂದ ನಿರ್ಮಿಸಲಾದ ಮಸ್ಜಿದು ತೌಹೀದ್ ನೂತನ ಮಸೀದಿ ಉದ್ಘಾಟನಾ ಸಮಾರಂಭ ಹಾಗೂ ದಅವಾ ಸಮ್ಮೇಳನ ನಡೆಯಲಿದೆ.
ಫೆ.11ರಂದು ಸಂಜೆ 4ಗಂಟೆಗೆ ನೂತನ ಮಸೀದಿಯ ಉದ್ಘಾಟನೆ ನಡೆಯಲಿದ್ದು ವಿಸ್ಡಮ್ ಇಸ್ಲಾಮಿಕ್ ಆರ್ಗನೈಸೇಷನ್ ಅಧ್ಯಕ್ಷರಾದ ಪಿ.ಎನ್.ಅಬ್ದುಲ್ ಅತೀಫ್ ಮದನಿ ಅವರು ನೂತನ ಮಸೀದಿಯನ್ನು ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕರಾದ ಎ.ಎಸ್. ಪೊನ್ನಣ, ಕರ್ನಾಟಕ ಸಲಫಿ

ಅಸೋಸಿಯೇಷನ್ ಅಧ್ಯಕ್ಷ ಹಫೀಸ್ ಸ್ವಲಾಹಿ,ಖಲೀಲ್ ತಲಪ್ಪಾಡಿ,ಶಿಹಾಬ್ ತಲಪ್ಪಾಡಿ,ಡಾ.ಸಣ್ಣುವಂಡ ಕಾವೇರಪ್ಪ ನಾಪೋಕ್ಲು, ನಾಪೋಕ್ಲು ಪೊಲೀಸ್ ಉಪನಿರೀಕ್ಷಕರಾದ ಪಿ.ಜಿ. ರಾಘವೇಂದ್ರ, ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷರಾದ ಪಿ.ಎಂ. ಖಾಸಿಂ,ನಾಪೋಕ್ಲು ಗ್ರಾಮ ಪಂಚಾಯತಿ ಸದಸ್ಯರಾದ ಕುಶು ಕುಶಾಲಪ್ಪ, ಮಹಮ್ಮದ್ ಖುರಶಿ, ಅರುಣ್ ಬೇಬ,ಇಸ್ಮಾಯಿಲ್ ಭಾಗವಹಿಸಲಿದ್ದಾರೆ.
ಮಸೀದಿ ಉದ್ಘಾಟನಾ ಸಮಾರಂಭದ ಪ್ರಯುಕ್ತ ಸಂಜೆ 7 ಗಂಟೆಯಿಂದ ಮೌಲವಿ ಶಿಹಾಬ್ ಎಡಕ್ಕರ ಹಾಗೂ ಮುನೀರ್ ಶರಫಿ ಅವರ ನೇತೃತ್ವದಲ್ಲಿ ದಅವಾ ಸಮ್ಮೇಳನ ನಡೆಯಲಿದೆ ಎಂದು ಮಸ್ಜಿದು ತೌಹೀದ್ ನಾಪೋಕ್ಲು ಇದರ ಆಡಳಿತ ಮಂಡಳಿ ಪದಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Chikmagalur
ವಿವಾಹಿತ ಹಿಂದೂ ಮಹಿಳೆಯ ಜೊತೆ : ಸಿಕ್ಕಿ ಬಿದ್ದ ಕಾಂಗ್ರೆಸ್ ಮುಖಂಡ
ಚಿಕ್ಕಮಗಳೂರು : ವಿವಾಹಿತ ಹಿಂದೂ ಮಹಿಳೆಯ ಜೊತೆ ಕಾಂಗ್ರೆಸ್ ಮುಖಂಡ ಸಿಕ್ಕಿ ಬಿದ್ದಿರುವ ಘಟನೆ ಚಿಕ್ಕಮಗಳೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ರಾತ್ರಿ ವೇಳೆ ಮಹಿಳೆಯಲ್ಲಿ ಕಾಂಗ್ರೆಸ್ ಮುಖಂಡ ರಾಹಿಲ್ ಶರೀಫ್ ಹಿಂದೂ ಮಹಿಳೆ ಇರುವುದನ್ನು ಕಂಡು ಯುವಕರು ಕೋಪಗೊಂಡಿದ್ದಾರೆ.
ಘಟನೆ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಹಿಂದೂ ಮಹಿಳೆಯ ಜೊತೆ ಕಾಂಗ್ರೆಸ್ ಮುಖಂಡ ಮನೆಯಲ್ಲಿ ಇದ್ದ ವೇಳೆಯಲ್ಲಿ ಮನೆ ಮೇಲೆ ದಾಳಿ ನಡೆಸಿದ ಅಕ್ಕಪಕ್ಕದ ಹುಡುಗರು ಹಿಂದೂ ಮಹಿಳೆಯ ಮನೆಯಲ್ಲಿ ನಿನಗೇನು ಕೆಲಸ ಅಂತ ಹೇಳಿ ವ್ಯಕ್ತಿ ಮೇಲೆ ಹಲ್ಲೆ ಮಾಡಿದ್ದಾರೆ. ಈ ಘಟನೆಯು ಚಿಕ್ಕಮಗಳೂರಿನ ಚಿಕ್ಕಮಗಳೂರು ನಗರದ ಗಾಂಧಿನಗರದಲ್ಲಿ ನಡೆದಿದೆ.

ಇನ್ನೂ ಘಟನೆ ಬಗ್ಗೆ ವಿಡಿಯೋ ಮಾಡಿ ಮಾಹಿತಿ ಹಂಚಿಕೊಂಡಿರುವ ನೊಂದ ಮಹಿಳೆ ರಾಹಿಲ್ ನನ್ನ ಸ್ನೇಹಿತ, ನನಗೆ ಆರೋಗ್ಯ ಸರಿಯಿಲ್ಲದ ಕಾರಣ ಔಷಧಿ ಕೊಡಲು ಮನೆಗೆ ಬಂದಿದ್ದರು. ಈ ವೇಳೆ ಅಕ್ಕ ಪಕ್ಕದ ಮನೆಯವರು ನನ್ನ ಮನೆಗೆ ಬಂದು ಬೆದರಿಕೆ ಹಾಕಿ ಹಲ್ಲೆ ನಡೆಸಿದ್ದಾರೆ. ಅಂತ ಆರೋಪಿಸಿದ್ದಾರೆ. ಸದ್ಯ ಘಟನೆ ಬಗ್ಗೆ ದೂರು ದಾಖಲಿಸಿಕೊಂಡಿರುವ ಚಿಕ್ಕಮಗಳೂರು ನಗರ ಪೊಲೀಸ್ನವರು ಮುಂದಿನ ತನಿಖೆ ಕೈಗೊಂಡಿದ್ದಾರೆ.
-
Mandya13 hours agoಕೆರೆ ಒತ್ತುವರಿ ತೆರವುಗೊಳಿಸದಿದ್ದರೆ ಶಿಸ್ತು ಕ್ರಮ: ಸಮಯ ನಿಗದಿಗೊಳಿಸಿ ಸೂಚನೆ ನೀಡಿದ ಡಿಸಿ ಡಾ.ಕುಮಾರ
-
Mandya14 hours agoಬೂದನೂರು ಗ್ರಾಮ ಪಂಚಾಯತಿಗೆ ನೇಮಕವಾಗಿರುವ ಆಡಳಿತಾಧಿಕಾರಿಗೆ ಗ್ರಾಮಸ್ಥರಿಂದ ಭವ್ಯ ಸ್ವಾಗತ
-
Hassan15 hours agoಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರ ಎಚ್ಡಿಕೆ ಅಭಿಮಾನಿಗಳಿರುವ ಕ್ಷೇತ್ರ: ನಿಖಿಲ್ ಕುಮಾರಸ್ವಾಮಿ
-
Mandya11 hours agoಫೆ.13 ರಿಂದ 19 ರವರೆಗೆ ಪ್ರಜಾಪಿತ ಬ್ರಹ್ಮ ಕುಮಾರೀಸ್ ಈಶ್ವರೀಯ ವಿಶ್ವ ವಿದ್ಯಾಲಯದ ವತಿಯಿಂದ 90ನೇ ಮಹಾಶಿವರಾತ್ರಿ ಮಹೋತ್ಸವ
-
Chamarajanagar22 hours agoಚಿರತೆ ದಾಳಿ: ಹಸು ಬಲಿ ಗ್ರಾಮಸ್ಥರಲ್ಲಿ ಆತಂಕ
-
Mysore20 hours agoಹಣ್ಣುಗಳ ಮಹತ್ವ, ಪೌಷ್ಟಿಕಾಂಶದ ಬಗ್ಗೆ ಅರಿವು ಮೂಡಿಸಿದ ರವಿ ಮಹದೇವ್
-
Mandya13 hours agoಜಿಲ್ಲೆಯ ಜನರಿಗೆ ಶುದ್ಧ ಕುಡಿಯುವ ನೀರು ಪೂರೈಸಿ : ಮನೋಜ್ ಕುಮಾರ್ ಮೀನಾ
-
Special9 hours agoಸ್ತ್ರೀ ಶಕ್ತಿ ಪ್ಯಾಕೇಜ್: ಮಹಿಳೆಯರಿಗೆ ಭದ್ರತೆಯಿಲ್ಲದೇ 10 ಲಕ್ಷದವರೆಗೆ ಸಾಲ!
