Connect with us

Uncategorized

ಉತ್ತಮ ಸಮಾಜ ನಿರ್ಮಾಣಕ್ಕೆ ಅಸಮಾನತೆ, ಅಸ್ಪೃಶ್ಯತೆ ನಿರ್ಮೂಲನೆ ಅತ್ಯಗತ್ಯ : ಡಾ.ಕಾಳೇಗೌಡ ನಾಗವಾರ

Published

on

ಮಂಡ್ಯ: ಉತ್ತಮ ಸಮಾಜ ನಿರ್ಮಾಣ ಮಾಡಲು ಅಸಮಾನತೆ, ಅಸ್ಪೃಶ್ಯತೆ ನಿವಾರಣೆ ಮಾಡುವುದು ಅಗತ್ಯವಾಗಿದೆ ಎಂದು ಪ್ರಗತಿಪರ ಚಿಂತಕ ಡಾ.ಕಾಳೇಗೌಡ ನಾಗವಾರ ತಿಳಿಸಿದರು.
ನಗರದ ಅನನ್ಯ ಕ್ರಿಯೇಷನ್ಸ್ಗೆ 10 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ನಡೆದ ಸಂಗೀತ, ಸಾಹಿತ್ಯ,ಕೃಷಿ ಸಂವಾದ ಕಾರ್ಯಕ್ರಮದಲ್ಲಿ ಸಂವಿಧಾನ ಮತ್ತು ಮುಂದೇನು ಕುರಿತು ಮಾತನಾಡಿದರು.

ಪ್ರಸ್ತುತ ಪ್ರಜಾಪ್ರಭುತ್ವ ಹಾಗೂ ಸಂವಿಧಾನದಡಿಯಲ್ಲಿ ದೇಶ ಸಮಾನತೆಯಿಂದ ಸಾಗಬೇಕಾಗಿದೆ. ತೊಂದರೆಗಳು, ಸಮಸ್ಯೆಗಳು ನಮ್ಮ ಅವಿವೇಕತನದಿಂದಲೇ ಹುಟ್ಟಿಕೊಳ್ಳುತ್ತವೆ. ತೊಂದರೆಗೆ ಅವಿವೇಕತನವೇ ಮುಖ್ಯ ಕಾರಣವಾಗಿದೆ. ಆದ್ದರಿಂದ ವಿವೇಕದಿಂದ ಉತ್ತಮ ಸಮಾಜ ಕಟ್ಟಬೇಕಾಗಿದೆ ಎಂದು ಹೇಳಿದರು.
ಯುವಜನತೆ ಹೊಸ ಸಮಾಜ ಕಟ್ಟಲು ಅರ್ಪಣಾ ಮನೋಭಾವ ಅಗತ್ಯವಾಗಿದೆ. ಮಂಡ್ಯ ಜಿಲ್ಲೆಯಲ್ಲಿ ಮೌಢ್ಯ, ಅಸಮಾನತೆ, ಹೆಣ್ಣು ಭ್ರೂಣಹತ್ಯೆ, ಮರ್ಯಾದೆ ಹತ್ಯೆಗಳು ನಡೆಯುತ್ತಿವೆ. ಇದಕ್ಕೆ ಅರಿವಿನ ಕೊರತೆಯೇ ಕಾರಣವಾಗಿದೆ. ನಿತ್ಯ ಸಚಿವ ಕೆ.ವಿ.ಶಂಕರಗೌಡ ರಂತಹ ನಾಯಕರು ಜಿಲ್ಲೆಯಲ್ಲಿ ಶಿಕ್ಷಣ ಹಾಗೂ ಸಹಕಾರ ಕ್ಷೇತ್ರಕ್ಕೆ ಕೊಡುಗೆ ನೀಡಿದ್ದಾರೆ. ಇದರಿಂದ ಜಿಲ್ಲೆ ಸುಶಿಕ್ಷಿತವಾಗಿದೆ. ಅಂಥವರ ಮಾರ್ಗದಲ್ಲಿ ಎಲ್ಲರೂ ನಡೆಯಬೇಕಾಗಿದೆ ಎಂದು ಸಲಹೆ ನೀಡಿದರು.

ಮೌಢ್ಯ, ಅವಿವೇಕತನ ಪ್ರಸ್ತುತ ಹೆಚ್ಚಾಗಿದೆ. ನಮಗೆ ಸಮಸ್ಯೆ ಬಂದಾಗ ನಮ್ಮನ್ನು ಕಾಪಾಡುವುದು ಸಂವಿಧಾನವೇ ಹೊರತು ಬೇರೆ ಯಾರೂ ಕಾಪಾಡಲು ಸಾಧ್ಯವಿಲ್ಲ. ಪ್ರಜಾಪ್ರಭುತ್ವ ಬಿಟ್ಟು ಇರಲು ಸಾಧ್ಯವಿಲ್ಲ. ಸಂವಿಧಾನದ ಕಾನೂನಿನ ಚೌಕಟ್ಟಿನಲ್ಲಿಯೇ ಎಲ್ಲರೂ ನಡೆದುಕೊಳ್ಳಬೇಕಾಗಿದೆ. ಎಷ್ಟೇ ದೊಡ್ಡವರಾದರೂ ಕೆಟ್ಟದ್ದನ್ನು ಮಾಡಿದರೆ ತಿಪ್ಪೆಗುಂಡಿಯಲ್ಲಿ ಕೊಳೆಯಬೇಕಾಗುತ್ತದೆ. ಅದಕ್ಕಾಗಿ ಪ್ರತಿಯೊಬ್ಬರೂ ಒಳ್ಳೆಯ ಕೆಲಸಗಳನ್ನು ಮಾಡಬೇಕು ಎಂದು ಹೇಳಿದರು.

ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಹಿಂದುಳಿದ, ದಲಿತ ಹಾಗೂ ಹೆಣ್ಣು ಮಕ್ಕಳಿಗೆ ಶಿಕ್ಷಣ ನೀಡಿದರು. ಬ್ರಿಟಿಷರು ದೇಶಕ್ಕೆ ಬಂದಿದ್ದ ರಿಂದ ಒಳ್ಳೆಯದು ಹಾಗೂ ಕೆಟ್ಟದ್ದು ಎರಡೂ ಆಗಿವೆ. ಸಮಾಜದಲ್ಲಿ ಮೌಢ್ಯ, ಅಸಮಾನತೆ ತೊಲಗಬೇಕು. ಅಪರಾಧ ಇಲ್ಲದೆ ಇದ್ದರೆ ಎಲ್ಲರೂ ನೆಮ್ಮದಿಯಿಂದ ಬದುಕಬಹುದು. ಇದರಿಂದ ಒಬ್ಬ 120 ವರ್ಷ ಜೀವನ ಮಾಡಬಹುದಾಗಿದೆ. ಅದಕ್ಕಾಗಿ ದೇವರಾಗಿರುವ ಶಿವನ ತತ್ವಗಳನ್ನು ಅಳವಡಿಸಿಕೊಳ್ಳಬೇಕು. ಶಿವ ತ್ಯಾಗಮಯಿ, ಎಲ್ಲರೂ ಒಂದೇ ಎಂದು ಪ್ರತಿಪಾದನೆ ಮಾಡಿದ್ದಾನೆ. ಹೆಣ್ಣು ಸಹ ನಮ್ಮಲ್ಲಿ ಅರ್ಧ ಭಾಗ ಎಂದು ಅರ್ಧ ನಾರೀಶ್ವರನಾಗಿದ್ದಾನೆ. ಇನ್ನೊಬ್ಬರಿಗೆ ತೊಂದರೆ ಕೊಡಬಾರದು. ಎಲ್ಲರಿಗೂ ಒಳ್ಳೆಯದನ್ನೇ ಮಾಡಬೇಕು ಎಂದು ಉದ್ಧಾರಕ್ಕಾಗಿ ತತ್ವ ಸಂದೇಶಗಳನ್ನು ನೀಡಿದ್ದಾನೆ ಎಂದು ತಿಳಿಸಿದರು.

ಚಿಂತಕ ಡಿ.ಶಿವಶಂಕರ್ ಮಾತನಾಡಿ, ಪ್ರಸ್ತುತ ಸಮಾಜದಲ್ಲಿ ಮನುಷ್ಯ, ಮನುಷ್ಯರ ನಡುವೆ ಕಂದಕ ಸೃಷ್ಟಿಯಾಗುತ್ತಿದೆ. ದ್ವೇಷ ಹೆಚ್ಚುತ್ತಿದ್ದು, ಆತ್ಮೀಯತೆಗೆ ಪೆಟ್ಟು ಬೀಳುತ್ತಿದೆ. ವಿಜ್ಞಾನದ ಹೆಸರಲ್ಲಿ ಅಜ್ಞಾನ ಬೆಳೆಯುತ್ತಿದೆ. ಆದ್ದರಿಂದ ಅದನ್ನು ತಡೆಗಟ್ಟಲು ಯುವ ಜನಾಂಗ ಸಮಾಜಮುಖಿ ಚಿಂತನೆ ಮಾಡಬೇಕು ಎಂದು ಹೇಳಿದರು.
ಜನರಿಗೆ ಬುದ್ಧ, ಬಸವ, ಅಂಬೇಡ್ಕರ್ ವಿಚಾರಧಾರೆಗಳನ್ನು ತಿಳಿಸಬೇಕಾಗಿದೆ. ಮನುಷ್ಯರು ಮಾನಸಿಕವಾಗಿ ಬೆಳೆಸಬೇಕು. ಪ್ರಜಾಪ್ರಭುತ್ವದಲ್ಲಿ ಖಾಸಗಿ ಪ್ರಭುತ್ವ ಹೆಚ್ಚಾಗುತ್ತಿದೆ. ಅಂಥ ಕೆಲಸದಲ್ಲಿ ಕೆಲವರು ನಿರತರಾಗಿದ್ದಾರೆ. ಅದಕ್ಕೆ ಅವಕಾಶ ಕೊಡದಂತೆ ಯುವ ಜನಾಂಗ ಎಚ್ಚೆತ್ತುಕೊಳ್ಳಬೇಕು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಅನನ್ಯ ಕ್ರಿಯೇಷನ್ಸ್ ಸಂಸ್ಥಾಪಕ ಕಾರ್ಯದರ್ಶಿ ರಾಜೇಶ್ ರಾಂಪುರ, ಗೌರವಾಧ್ಯಕ್ಷ ಗೋಪಾಲಕೃಷ್ಣ, ಬರಹಗಾರ ರವಿ ಮರಿಯಪ್ಪ, ಜಗದೀಶ್, ಎಂ.ಸಿದ್ದಯ್ಯ ಸೇರಿದಂತೆ ಇತರರು ಉಪಸ್ಥಿತರಿದ್ದರು.

Continue Reading
Click to comment

Leave a Reply

Your email address will not be published. Required fields are marked *

Hassan

ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಮೇಲೆ ಹಲ್ಲೆ ಖಂಡಿಸಿ ದೂರು

Published

on

ದಯಾನಂದ ಶೆಟ್ಟಿಹಳ್ಳಿ.
ಚನ್ನರಾಯಪಟ್ಟಣ. ತಾಲೂಕಿನ ಸಾತೇನಹಳ್ಳಿ ಗ್ರಾಮ ಪಂಚಾಯತಿಯಲ್ಲಿ ಅಭಿವೃದ್ಧಿ ಅಧಿಕಾರಿ ಮೇಲೆ ಸದಸ್ಯನೊಬ್ಬ ಹಲ್ಲೆ ಮಾಡಿರುವ ಘಟನೆ ನಡೆದಿರುವುದರಿಂದ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ತಾಲೂಕು ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಇಲಾಖೆ ಅಧಿಕಾರಿಗಳ ನೌಕರರ ಸಂಘ, ತಾಲೂಕು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಹಾಗೂ ತಾಲೂಕು ಮಾಜಿ ಸೈನಿಕರ ಸಂಘ ಘಟನೆಯನ್ನು ಖಂಡಿಸಿ ತಾಲೂಕು ಪಂಚಾಯಿತಿ ಇಓ ಹಾಗೂ ಪೊಲೀಸ್ ಇಲಾಖೆಗೆ ಮನವಿ ಸಲ್ಲಿಸಿದ್ದಾರೆ.

ವಾರನಹಳ್ಳಿ ಗ್ರಾಮ ಪಂಚಾಯತಿ ಸದಸ್ಯ ಯೋಗೇಶ್ ತಮ್ಮ ಗ್ರಾಮಕ್ಕೆ ಹೆಚ್ಚುವರಿ ಕಾಮಗಾರಿ ಅನುಷ್ಠಾನ ಮಾಡಿಸಿಕೊಂಡು ಬಂದಿದ್ದು ಆ ವಿಚಾರವಾಗಿ ಗಲಾಟೆಯಾಗಿದ್ದು ಅಭಿವೃದ್ಧಿ ಅಧಿಕಾರಿ ಮೇಲೆ ಹಲ್ಲೆ ಮಾಡಿರುವುದಲ್ಲದೆ ತನ್ನ ಕಾರಿನಿಂದ ರಾಡನ್ನು ತಂದು ಮತ್ತೆ ಹಲ್ಲೆ ಮಾಡಲು ಮುಂದಾಗಿರುವುದು ಸಿಸಿಟಿವಿ ಕ್ಯಾಮರದಲ್ಲಿ ಸೆರೆಯಾಗಿದೆ.
ಅಭಿವೃದ್ಧಿ ಅಧಿಕಾರಿ ಅರುಣ್ ಕುಮಾರ್ ಗ್ರಾಮ ಪಂಚಾಯಿತಿ ಅಧ್ಯಕ್ಷರಿಗೆ ಮಾಹಿತಿ ತಿಳಿಸಿ ನೆನ್ನೆ ದಿನ ಗ್ರಾಮಾಂತರ ಠಾಣೆಗೆ ದೂರು ನೀಡಲಾಗಿದ್ದು.
ಪಟ್ಟಣದ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Continue Reading

Uncategorized

ಹನಿಟ್ರ್ಯಾಪ್ ರಹಸ್ಯ ಬಯಲು ಮಾಡಿದ ಸಚಿವ ಕೆ.ಎನ್‌ ರಾಜಣ್ಣ

Published

on

ತುಮಕೂರು: ಸಚಿವರು, ಶಾಸಕರನ್ನು ಮಧುಬಲೆಗೆ ಬೀಳಿಸುವ ಯತ್ನ ವಿಚಾರ ರಾಜ್ಯ ಹಾಗೂ ರಾಷ್ಟ್ರ ರಾಜಕಾರಣದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿರುವಂತೆಯೇ ಸಹಕಾರ ಸಚಿವ ಕೆ.ಎನ್. ರಾಜಣ್ಣ ಮತ್ತಷ್ಟು ಮಾಹಿತಿಯನ್ನು ಬಹಿರಂಗಪಡಿಸಿದ್ದಾರೆ.

ನನಗೆ ಎರಡು ಬಾರಿ ಹನಿಟ್ರ್ಯಾಪ್ ಯತ್ನ ನಡೆದಿದ್ದು, ಎರಡು ಬಾರಿ ಬಂದಾಗ ಹುಡುಗಿಯರು ಬೇರೆ ಬೇರೆ ಆಗಿದ್ದರು. ಆದರೆ ಎರಡು ಬಾರಿಯೂ ಒಬ್ಬನೇ ಹುಡುಗ ಬಂದಿದ್ದನ್ನು ಎಂದು ಹನಿಟ್ರ್ಯಾಪ್ ಕಥೆಯನ್ನು ಬಿಚ್ಚಿಟ್ಟರು.

ಹನಿಟ್ರ್ಯಾಪ್ ಮಾಡಲು ನನ್ನ ಮನೆಗೆ ಎರಡು ಸಲ ಒಬ್ಬನೇ ಹುಡುಗ ಹುಡುಗಿಯರನ್ನು ಕರೆದುಕೊಂಡು ಬಂದಿದ್ದನು. ಆದರೆ ಎರಡು ಬಾರಿಯೂ ಬೇರೆ ಬೇರೆ ಹುಡುಗಿಯರು ಇದ್ದರು. ಎರಡನೇ ಬಾರಿ ಬಂದಾಗ ಹೈಕೋರ್ಟ್ ಲಾಯರ್ ಅಂತಾ ಹೇಳಿದ್ದಳು. ಮೊದಲ ಬಾರಿ ಬಂದಾಗ ಲಾಯರ್ ಅಂತಾ ಹೇಳಿರಲಿಲ್ಲ. ಪರ್ಸನಲ್ ಆಗಿ ಮಾತನಾಡಬೇಕು ಅಂತಾ ಹೇಳಿದ್ದಳು. ನನಗೆ ಫೋಟೋ ತೋರಿಸಿದರೆ ಗುರುತು ಹಿಡಿಯುತ್ತೇನೆ ಎಂದರು.

ಮನೆಯಲ್ಲಿ ಸಿಸಿಟಿವಿ ಇರಲಿಲ್ಲ. ಹಾಗಾಗಿ ಸಿಸಿಟಿವಿ ವಿಡಿಯೋ ನಮ್ಮ ಬಳಿ ಇಲ್ಲ. ಯಾರು ಬಂದು ಹೋಗಿದ್ದಾರೋ ಅವರ ಮೇಲೆ ಕ್ರಮ ಕೈಗೊಳ್ಳುವಂತೆ ಕೇಳಿಕೊಂಡ್ಡಿದ್ದೇನೆ. ಅಪರಿಚಿತರು ಅಂತ ದೂರಿನಲ್ಲಿ ದಾಖಲಿಸಿದ್ದೇನೆ ಎಂದು ಮಾಹಿತಿ ನೀಡಿದರು.

ಗೃಹ ಸಚಿವರಿಗೆ ಇಂದು ದೂರು ಸಲ್ಲಿಕೆ: ಹಲವು ಕಾರ್ಯಕ್ರಮಗಳಲ್ಲಿ ಬ್ಯುಸಿ ಇದ್ದ ಕಾರಣ ದೂರು ನೀಡಿರಲಿಲ್ಲ. ಇಲ್ಲಿಯವರೆಗೂ ಯಾಕೆ ದೂರು ನೀಡಿಲ್ಲ ಅಂತಾ ಸಿಎಂ ಕೇಳಿದ್ರು, ಇಂದು ದೂರು ನೀಡುತ್ತೇನೆ ಅಂತಾ ಅವರಿಗೆ ಹೇಳಿದ್ದೇನೆ. ಬೆಳಗ್ಗೆಯಿಂದ ಕುಳಿತು ಮೂರು ಪುಟಗಳ ದೂರು ಬರೆದಿದ್ದು, ಗೃಹ ಸಚಿವ ಡಾ.ಜಿ. ಪರಮೇಶ್ವರ್ ಎಲ್ಲೇ ಇದ್ರೂ ಹುಡುಕಿಕೊಂಡು ಹೋಗಿ ದೂರು ನೀಡುತ್ತೇನೆ. ದೂರು ನೀಡಿದ ಬಳಿಕ ಎಫ್ ಐಆರ್ ಆಗುತ್ತದೆ. ಆಗ ದಾಖಲೆಗಳು ಬಹಿರಂಗವಾಗುತ್ತವೆ ಎಂದರು.

ಇಷ್ಟು ದಿನ ದೂರು ಬರೆಯಲು ಸಾಧ್ಯವಾಗಿರಲಿಲ್ಲ. ವಿಧಾನಸಭೆಯಲ್ಲಿ ನನ್ನ ಹೆಸರು ಪ್ರಸ್ತಾಪವಾಯಿತು. ಅದಕ್ಕೂ ಮೊದಲು ಮಾಧ್ಯಮಗಳಲ್ಲಿ ಹನಿಟ್ರ್ಯಾಪ್ ಬಗ್ಗೆ ಸಾಕಷ್ಟು ವಿಚಾರಗಳು ಚರ್ಚೆಯಾಗಿದ್ದವು. ಆದರೆ ಎಲ್ಲೂ ನನ್ನ ಹೆಸರು ಪ್ರಸ್ತಾಪವಾಗಿರಲಿಲ್ಲ. ವಿಧಾನಸಭೆಯಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನನ್ನ ಹೆಸರು ಪ್ರಸ್ತಾಪ ಮಾಡಿದರು. ಅದಕ್ಕೆ ಪ್ರತಿಕ್ರಿಯೆ ನೀಡದೇ ಇದ್ದರೆ ಮೌನಂ ಸಮತಿ ಲಕ್ಷಣಂ ಎಂಬಂತಾಗುತ್ತದೆ. ಈ ಹಿನ್ನೆಲೆಯಲ್ಲಿ ನಾನು ಹೇಳಿಕೆ ನೀಡಬೇಕಾಯಿತು ಎಂದರು.

ಇಂತಹ ವಿಚಾರಗಳನ್ನು ಸಚಿವ ಸಂಪುಟ ಸಭೆಗಳಲ್ಲಿ ಚರ್ಚೆ ಮಾಡಬೇಕಿತ್ತು. ಬಹಿರಂಗ ಹೇಳಿಕೆ ಅಗತ್ಯವಿರಲಿಲ್ಲ ಎಂಬುದು ನನಗೂ ಅರ್ಥವಾಗುತ್ತದೆ. ಆದರೆ ನನ್ನ ಹೆಸರು ಬಂದಾಗ ಸುಮನೇ ಇರುವುದು ಸರಿಯಲ್ಲ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಬಿಐ ಅಲ್ಲದೇ ಇದ್ದರೆ ಎಫ್‍ಬಿಐ ತನಿಖೆ ಮಾಡಲಿ. ನನ್ನ ಅಭ್ಯಂತರವಿಲ್ಲ ಎಂದರು.

ರಾಜಕಾರಣದಲ್ಲಿ ಪ್ರಭಾವಿಯಾಗಿರುವವರ, ವೋಕಲ್ ಆಗಿ ಮಾತನಾಡುವವರನ್ನು ಮಣಿಸಲು ವಿರೋಧಿಗಳು ಹನಿಟ್ರ್ಯಾಪ್ ನಡೆಸುವುದು ಮೊದಲಿನಿಂದಲೂ ಇದೆ. ಇದೇನೂ ಹೊಸದಲ್ಲ. ಈ ಹಿಂದೆ ರಮೇಶ್ ಜಾರಕಿಹೊಳಿ ಸೇರಿದಂತೆ ಹಲವಾರು ಮಂದಿಗೆ ಈ ರೀತಿ ಸಮಸ್ಯೆಯಾಗಿದೆ. ಕೆಲವರು ನ್ಯಾಯಾಲಯದಲ್ಲಿ ತಡೆಯಾಜ್ಞೆ ತಂದಿದ್ದಾರೆ. ಇರುವ ಕಾನೂನಿನಲ್ಲೇ ಇದನ್ನು ಹದ್ದುಬಸ್ತಿಗೆ ತರಲು ಸಾಕಷ್ಟು ಅವಕಾಶಗಳಿವೆ. ಯಾರು ಇಂತಹ ಕೃತ್ಯಗಳಲ್ಲಿ ಭಾಗಿಯಾಗುತ್ತಾರೆ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂಬುದು ತಮ ಒತ್ತಾಯ ಎಂದು ತಿಳಿಸಿದರು.

ದೆಹಲಿಯಲ್ಲಿ ಹೈಕಮಾಂಡ್ ನಾಯಕರನ್ನು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಭೇಟಿ ಮಾಡಿರುವ ಬಗ್ಗೆ ನನಗೆ ಮಾಹಿತಿ ಇಲ್ಲ. ನಾನು ಮಾ.30 ರ ಬಳಿಕ ದೆಹಲಿಗೆ ಭೇಟಿ ನೀಡಲಿದ್ದು, ಸಮಯ ಸಿಕ್ಕರೆ ಹೈಕಮಾಂಡ್ ನಾಯಕರಿಗೆ ಮಾಹಿತಿ ನೀಡುತ್ತೇನೆ. ಈಗಾಗಲೇ ಹೈಕಮಾಂಡ್‍ಗೆ ಮಾಹಿತಿ ಹೋಗಿದೆ. ಮುಖ್ಯಮಂತ್ರಿಯವರ ಬಳಿ ಚರ್ಚೆ ಮಾಡಿದ್ದಾರೆ. ನನ್ನ ಬಳಿ ಯಾವುದೇ ಚರ್ಚೆಗಳಾಗಿಲ್ಲ ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಕರೆ ಮಾಡಿದ್ದರು. ಈವರೆಗೂ ಏಕೆ ದೂರು ಕೊಟ್ಟಿಲ್ಲ ಎಂದು ಕೇಳಿದರು. ನಾಳೆ ದೂರು ಕೊಡುತ್ತೇನೆಂದು ಅವರಿಗೆ ಹೇಳಿದ್ದೆ. ಹನಿಟ್ರ್ಯಾಪ್ ಬಗ್ಗೆ ಸುದೀರ್ಘ ವಿವರಣೆ ನೀಡಿದ ಸಚಿವ ಕೆ.ಎನ್.ರಾಜಣ್ಣ ಎರಡು ಬಾರಿ ನನ್ನ ಬಳಿ ಬಂದಿದ್ದರು ಎಂದು ತಿಳಿಸಿದರು.

ಮೊದಲ ಬಾರಿ ತುಂಬಾ ಖಾಸಗಿಯಾಗಿ ರಹಸ್ಯವಾಗಿ ಮಾತನಾಡಬೇಕೆಂದು ಬಂದಿದ್ದರು. ಎರಡನೇ ಬಾರಿ ಹೈಕೋರ್ಟ್ ವಕೀಲರು ಎಂದು ಹೇಳಿಕೊಂಡು ಬಂದಿದ್ದರು. ಈ ಎರಡೂ ಬಾರಿಯೂ ಒಬ್ಬ ಹುಡುಗ ಸಾಮಾನ್ಯವಾಗಿ ಬರುತ್ತಿದ್ದ ಎಂದರು. ಅವರ ಜೊತೆ ಹೆಣ್ಣು ಮಕ್ಕಳಿದ್ದರು. ನೀಲಿ ಬಣ್ಣದ ಟಾಪ್ ಮತ್ತು ಜೀನ್ಸ್‌ ಧರಿಸಿದ್ದರು. ಅವರಿಗೆ ನಾನು ಯಾವ ರೀತಿ ಪ್ರತಿಕ್ರಿಯೆ ನೀಡಿದೆ. ಏನು ಚರ್ಚೆ ನಡೆಯಿತು ಎಂಬುದನ್ನೆಲ್ಲಾ ದೂರಿನಲ್ಲಿ ನಮೂದಿಸಿದ್ದೇನೆ. ಫೋಟೋ ತೋರಿಸಿದರೆ ಗುರುತಿಸುತ್ತೇನೆ ಎಂದು ಹೇಳಿದರು.

ಪ್ರಕರಣ ದಾಖಲಾಗಿ ಎಫ್‍ಐಆರ್ ಆಗಲಿ. ಅದಕ್ಕೆ ಸೂಕ್ತ ಪುರಾವೆಗಳನ್ನು ಒದಗಿಸಲಾಗುವುದು. ಅಧಿವೇಶನದಲ್ಲಿ ಇದು ಚರ್ಚೆಯಾಗಿರುವುದು, ದೂರು ಕೊಡಲು ವಿಳಂಬವಾಗಿರುವ ಬಗ್ಗೆ ಯಾವೆಲ್ಲಾ ಸಂಗತಿಗಳು ನಡೆದಿವೆ ಎಂಬುದನ್ನು ವಿವರವಾಗಿ ಮೂರು ಪುಟಗಳ ದೂರಿನಲ್ಲಿ ನಾನೇ ಖುದ್ದಾಗಿ ಬರೆದಿದ್ದೇನೆ ಎಂದು ತಿಳಿಸಿದರು.

ಹನಿಟ್ರ್ಯಾಪ್‍ನಂತಹ ವಿಚಾರಗಳು ನಡೆಯುತ್ತಿರುತ್ತವೆ ಎಂದು ಆರಂಭದಲ್ಲಿ ಉದಾಸೀನ ಮಾಡಿದ್ದೆ. ವಿಧಾನಸಭೆಯಲ್ಲಿ ಚರ್ಚೆಯಾದ ಬಳಿಕ ಇದು ಗಂಭೀರ ಸ್ವರೂಪ ಪಡೆದುಕೊಂಡಿದೆ. ಮೆಟೀರಿಯಲ್ ಎವಿಡೆನ್?ಸಗಳ ಬಗ್ಗೆ ಯೋಚಿಸಬೇಕಿದೆ. ಬೆಂಗಳೂರಿನ ಮನೆಯಲ್ಲಿ ಸಿಸಿಟಿವಿ ಕ್ಯಾಮೆರಾ ಹಾಕಿರಲಿಲ್ಲ. ಅಲ್ಲಿ ಸಿಸಿಟಿವಿ ಇದ್ದಿದ್ದರೆ ಯಾರು ಬಂದರು, ಯಾರು ಹೋದರು ಎಂಬ ಮಾಹಿತಿ ಸಿಗುತ್ತಿತ್ತು. ಯಾರು ಬಂದು ಹೋಗಿದ್ದಾರೆ. ಅವರನ್ನು ಪತ್ತೆ ಮಾಡಿ ಕ್ರಮ ಕೈಗೊಳ್ಳುವಂತೆ ಹೇಳುತ್ತೇನೆ. ಅವರ ಹಿಂದೆ ಯಾರಿದ್ದಾರೆ ಎಂಬುದರ ಬಗ್ಗೆಯೂ ಕ್ರಮ ಕೈಗೊಳ್ಳುವಂತೆ ಒತ್ತಾಯಿಸುತ್ತೇನೆ ಎಂದರು.

ವಿಧಾನಸಭೆಯಲ್ಲಿ ಅಥವಾ ಬೇರೆ ಕಡೆ ಎಲ್ಲಿಯೂ ತಾವು ನ್ಯಾಯಾಧೀಶರ ವಿಚಾರವನ್ನು ಈ ಪ್ರಕರಣದಲ್ಲಿ ಪ್ರಸ್ತಾಪ ಮಾಡಿಲ್ಲ. ಆದರೂ ಕೆಲ ವ್ಯಕ್ತಿಗಳು ಹನಿಟ್ರ್ಯಾಪ್ ಪ್ರಕರಣದಲ್ಲಿ ನ್ಯಾಯಾಧೀಶರ ಹೆಸರು ಪ್ರಸ್ತಾಪವಾಗಿದೆ ಎಂದು ಪಿಐಎನ್ ದಾಖಲಿಸಿದ್ದಾರೆ. ಮಾಧ್ಯಮಗಳು ಸೃಷ್ಟಿಸಿರುವುದಕ್ಕೆ ನನ್ನನ್ನು ಹೊಣೆ ಮಾಡುವುದು ಸರಿಯಲ್ಲ ಎಂದು ತಿಳಿಸಿದರು.

ಹೈಕಮಾಂಡ್ ಗೂ ದೂರು: ನಾನು ಎಲ್ಲಿಯೂ ಜಡ್ಜ್ ಬಗ್ಗೆ ಪ್ರಸ್ತಾಪ ಮಾಡಿಲ್ಲ. ರಾಜಕೀಯ ನಾಯಕರ ಬಗ್ಗೆ ಪ್ರಸ್ತಾಪ ಮಾಡಿದ್ದೇನೆ. ಮಾರ್ಚ್ 30ರನಂತರ ದೆಹಲಿಗೆ ಹೋಗಿ ಪಕ್ಷದ ಹೈಕಮಾಂಡ್ ಗೂ ಹನಿಟ್ರ್ಯಾಪ್ ವಿಚಾರ ಕುರಿತು ದೂರು ನೀಡುತ್ತೇನೆ .ಇದು ಹೊಸ ಚಾಳಿ ಅಲ್ಲ. ಇದು ಈಗಾಗಲೇ ಹಲವು ಜನರಿಗೆ ಆಗಿದೆ. ರಾಜಕೀಯ ದ್ವೇಷಕ್ಕಾಗಿ ಹನಿಟ್ರ್ಯಾಪ್ ಮಾಡಲಾಗುತ್ತಿದೆ. ಇದರ ಬಗ್ಗೆ ಸರಿಯಾದ ತನಿಖೆ ನಡೆದು ಈ ಸಂಚಿನ ಹಿಂದಿರುವವರಿಗೆ ಸರಿಯಾದ ಶಿಕ್ಷೆಯಾಗಬೇಕು ಎಂದು ಒತ್ತಾಯಿಸಿದರು.

Continue Reading

Uncategorized

ಯುವ ಜನಾಂಗಕೆ ಪುನೀತ್ ರಾಜಕುಮಾರ್ ಪ್ರೇರಣೆ: ನಜರಬಾದ್‌ ನಟರಾಜ್

Published

on

ಮೈಸೂರು: ಪುನೀತ್ ರಾಜಕುಮಾರ್ 50ನೇ ಹುಟ್ಟು ಹಬ್ಬದ ಪ್ರಯುಕ್ತ ಸೋಮವಾರ ಸಾರ್ವಜನಿಕರಿಗೆ ಮಜ್ಜಿಗೆ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಮಜ್ಜಿಗೆ ವಿತರಣೆ ಮಾಡಿ ಮಾತನಾಡಿದ ಚಾಮುಂಡೇಶ್ವರಿ ಕ್ಷೇತ್ರದ ಕೆಪಿಸಿಸಿ ಸದಸ್ಯ ನಜರ್ ಬಾದ್ ನಟರಾಜ್ ಯುವ ಜನಾಂಗಕ್ಕೆ ಪುನೀತ್ ರಾಜಕುಮಾರ್ ಪ್ರೇರಣೇ ಎಂದರೆ ತಪ್ಪಾಗಲಾರದು ಏಕೆಂದರೆ ಅವರು ಸಮಾಜಕ್ಕೆ ನೀಡಿದ ಕೊಡುಗೆ ಅಂತಹದ್ದು ಎಂದು ಪುನೀತ್‌ ಗುಣಗಾನ ಮಾಡಿದರು.

Continue Reading

Trending

error: Content is protected !!