Mysore
ವಚನಗಳು ಮನುಷ್ಯನ ಆದರ್ಶ ಬದುಕಿಗೆ ದಾರಿದೀಪವಾಗಿವೆ: ಅರಳಿ ನಾಗರಾಜ್

ವರದಿ: ಚನ್ನಬಸವಣ್ಣ
ತಿ.ನರಸೀಪುರ: ವಚನಗಳು ಮನುಷ್ಯನ ಆದರ್ಶ ಬದುಕಿಗೆ ದಾರಿದೀಪವಾಗಿವೆ ಎಂದು ನಿವೃತ್ತ ನ್ಯಾಯಾಧೀಶ ಅರಳಿ ನಾಗರಾಜ್ ಹೇಳಿದರು.
ಜಿಲ್ಲಾ ಶರಣ ಸಾಹಿತ್ಯ ಪರಿಷತ್ ಮೈಸೂರು,ತಾಲೂಕು ಶರಣ ಸಾಹಿತ್ಯ ಪರಿಷತ್ತು ತಿ.ನರಸೀಪುರ ಹಾಗೂ ಗ್ರಾಮ ವಿದ್ಯೋದಯ ಸಂಘ ಇವರ ಸಹಯೋಗದಲ್ಲಿ ಶನಿವಾರ ವಿದ್ಯೋದಯ ಕಾಲೇಜು ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ದತ್ತಿ ಉಪನ್ಯಾಸ ಸಮಾರಂಭದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.
ಹೆತ್ತ ತಂದೆ ತಾಯಿಯರು,ವಿದ್ಯೆ ಕಲಿಸಿದ ಗುರುಗಳು ಸರಿಯಾದ ಮಾರ್ಗದರ್ಶನ ನೀಡುತ್ತಾರೋ ಗೊತ್ತಿಲ್ಲ,ಆದರೆ ವಚನಗಳು ಉತ್ತಮ,ಆದರ್ಶ ಬದುಕಿಗೆ ದಾರಿ ಮಾಡಿಕೊಡುವುದರಿಂದ ವಚನಗಳನ್ನು ಪ್ರತಿಯೊಬ್ಬರು ಕಲಿತು ಸಂಧರ್ಭ ಬಂದಾಗ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.
ಮಕ್ಕಳು ಸಂಸ್ಕಾರವಂತರಾಗಬೇಕು, ತಂದೆ– ತಾಯಿ, ಗುರು ಹಿರಿಯರನ್ನು ಗೌರವಿಸಬೇಕು,.ಬಸವಣ್ಣ ತಮ್ಮ ವಚನಗಳ ಸಂದೇಶಗಳಲ್ಲಿ ಬಹಿರಂಗ ಶುದ್ಧಿಗೆ ನೀಡಿದಷ್ಟೇ ಪ್ರಾಧಾನ್ಯತೆಯನ್ನು ಅಂತರಂಗ ಶುದ್ಧಿಗೂ ನೀಡಿದ್ದರು. ವಚನಗಳ ಆದರ್ಶಗಳನ್ನು ಜನರು ಮೈಗೂಡಿಸಿಕೊಳ್ಳುವ ಮೂಲಕ ಸಾತ್ವಿಕ ಬದುಕು ಕಟ್ಟಿಕೊಳ್ಳಬಹುದಾಗಿದೆ ಎಂದು ಸಲಹೆ ನೀಡಿದರು
ಸಂಸ್ಕಾರದಿಂದ ಬದುಕು ಸಾರ್ಥಕವಾಗುತ್ತದೆ. ಆಧುನಿಕತೆಯ ಭರಾಟೆಯಲ್ಲಿ ಕಳೆದು ಹೋಗುತ್ತಿರುವ ಇಂದಿನ ಪೀಳಿಗೆಯವರಿಗೆ ಸಂಸ್ಕಾರ ಅಗತ್ಯವಿದೆ. ಈ ನಿಟ್ಟಿನಲ್ಲಿ ತಾಯಂದಿರ ಪಾತ್ರ ಮಹತ್ತರವಾಗಿದೆ. ಜೀವನದ ನಿಜ ಸತ್ಯ, ಅಂಕು-ಡೊಂಕುಗಳನ್ನು ತಿದ್ದಿ ಹೇಳುವುದು ಹಿರಿಯರ ಕೆಲಸ. ಅದನ್ನು ಪಾಲಿಸುವುದು, ಆಚರಣೆಗೆ ತರುವುದು ಕಿರಿಯರ ಜವಾಬ್ದಾರಿ ಎಂದು ಹೇಳಿದರು.
ಖೋ ಖೋ ವಿಶ್ವ ಕಪ್ ಪಂದ್ಯಾವಳಿಯಲ್ಲಿ ಉತ್ತಮ ಸಾಧನೆ ತೋರಿದ ಚೈತ್ರಾರನ್ನು ಸನ್ಮಾನಿಸಿ ಮಾತನಾಡಿದ ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಹೆಳವರ ಹುಂಡಿ ಸಿದ್ದಪ್ಪ ಮಾತನಾಡಿ ಬಸವಾದಿ ಶರಣರು ತಮ್ಮ ವಚನ ಸಾಹಿತ್ಯದಲ್ಲಿ ಜನಸಾಮಾನ್ಯರಿಗೆ ಅರ್ಥವಾಗುವ ಭಾಷೆಯನ್ನು ಕೊಟ್ಟು ಕನ್ನಡ ಭಾಷೆಯ ಹಿರಿಮೆ ಗರಿಮೆ ಹೆಚ್ಚಿಸಿದರು. ಶರಣರು ತಮ್ಮ ವಚನಗಳ ಮೂಲಕ ಸರಳವಾಗಿ ಜೀವನಮೌಲ್ಯ, ವೈಚಾರಿಕ ಬದುಕು, ಮೌಢ್ಯಗಳ ಧಿಕ್ಕಾರವನ್ನು ಹರಡಿದರು ಎಂದರು.
ಕೇಂದ್ರ ಸರ್ಕಾರ ಅರ್ಜುನ, ರಾಜ್ಯ ಏಕಲವ್ಯ ಪ್ರಶಸ್ತಿ ನೀಡಲಿ: ಖೋ ಖೋ ವಿಶ್ವ ಕಪ್ ಪಂದ್ಯಾವಳಿಯಲ್ಲಿ ರಾಷ್ಟ್ರದ ಹಿರಿಮೆಯನ್ನು ಪ್ರಪಂಚಕ್ಕೆ ಕೊಂಡೊಯ್ದು ವಿಶ್ವಕಪ್ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ ನಮ್ಮ ತಾಲೂಕಿನ ಹೆಮ್ಮೆಯ ಕುವರಿ ಚೈತ್ರಾರವರಿಗೆ ರಾಜ್ಯ ಸರ್ಕಾರ 5 ಲಕ್ಷ ರೂ.ಗಳನ್ನು ನೀಡಿರುವುದು ಸರಿಯಲ್ಲ. ಮಹಾರಾಷ್ಟ್ರ ಸರ್ಕಾರವು ಅಲ್ಲಿನ ಕ್ರೀಡಾ ಪಟುಗಳಿಗೆ 2.25 ಕೋಟಿ ರೂ,ಹಾಗು ಮದ್ಯ ಪ್ರದೇಶ ಸರ್ಕಾರ 1.50 ಕೋಟಿ ರೂ.ಗಳನ್ನು ಕೊಟ್ಟು ಸಾಧನೆಗೆ ಪ್ರೋತ್ಸಾಹ ನೀಡಿದೆ.ಆದರೆ ರಾಜ್ಯ ಸರ್ಕಾರ ಮಾತ್ರ ಕ್ರೀಡಾಪಟುಗಳಿಗೆ ಉತ್ತೇಜನ ನೀಡುತ್ತಿಲ್ಲ.ಇಂತಹ ವ್ಯವಸ್ಥೆಯಲ್ಲಿ ಕ್ರೀಡಾಪಟುಗಳು ಸಾಧನೆ ಮಾಡುವುದಾದರು ಹೇಗೆ ಎಂದು ಬೇಸರ ವ್ಯಕ್ತ ಪಡಿಸಿದ ಸಿದ್ದಪ್ಪ ಕೇಂದ್ರ ಸರ್ಕಾರ ಅರ್ಜುನ ಪ್ರಶಸ್ತಿ ಹಾಗು ರಾಜ್ಯ ಸರ್ಕಾರ ನೀಡುವ ಅಭಿಮನ್ಯು ಪ್ರಶಸ್ತಿಯನ್ನು ಚೈತ್ರಾ ರಿಗೆ ನೀಡಿ ಗೌರವಿಸಬೇಕೆಂದು ಒತ್ತಾಯಿಸಿದರು.
ಶಿಕ್ಷಣ ಊಟದಂತೆ, ಕ್ರೀಡೆ ಉಪ್ಪಿನ ಕಾಯಿ ಇದ್ದಂತೆ: ಸನ್ಮಾನ ಸ್ವೀಕರಿಸಿ ಮಾತನಾಡಿದ ವಿಶ್ವ ಕಪ್ ಖೋ ಖೋ ಆಟಗಾರ್ತಿ ಬಿ.ಚೈತ್ರಾ ಶಿಕ್ಷಣ ಊಟ ಇದ್ದಂತೆ,ಕ್ರೀಡೆ ಉಪ್ಪಿನ ಕಾಯಿ ಇದ್ದಂತೆ,ಹಾಗಾಗಿ ಶಿಕ್ಷಣದೊಂದಿಗೆ ಕ್ರೀಡೆಯಲ್ಲೂ ಹೆಚ್ಚಿನ ರೀತಿಯಲ್ಲಿ ವಿದ್ಯಾರ್ಥಿಗಳು ತೊಡಗಿಕೊಂಡು ಯಶಸ್ಸು ಸಾಧಿಸಬೇಕು. ಬರೀ ಕ್ರೀಡೆ ಮಾತ್ರವೇ ಅಲ್ಲದೇ ವಿವಿಧ ಕ್ಷೇತ್ರಗಳಲ್ಲಿ ತಮ್ಮ ಪ್ರತಿಭೆಯನ್ನು ಅನಾವರಣ ಮಾಡಬೇಕಿದೆ ಎಂದರು.
ಜೀವನದಲ್ಲಿ ಸೋಲು ಗೆಲುವು ಎಂಬುದು ಆಟದ ತರಹ,ಗೆದ್ದವರಿಗೆ ಮತ್ತೆ ಸೋಲಬಾರದೆಂಬ ಛಲವಿದ್ದರೆ, ಸೋತವರಿಗೆ ಗೆಲ್ಲಲೇ ಬೇಕೆಂಬ ಛಲವಿರುತ್ತೆ. ನಾನೂ ಕೂಡ ಸೋತು ಸೋತು ನಂತರ ಗೆದ್ದು ವಿಶ್ವಕಪ್ ನಲ್ಲಿ ಯಶಸ್ಸು ಗಳಿಸಿದ್ದೇನೆ ಸತತ ಪ್ರಯತ್ನದಿಂದ ಗೆಲುವು ಸಾಧ್ಯ ಎಂದರು.
ವಾಟಾಳು ಮಠದ ಶ್ರೀ ಸಿದ್ದಲಿಂಗ ಶಿವಾಚಾರ್ಯ ಮಹಾಸ್ವಾಮಿಜಿ ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿದ್ದರು.
ಇದೇ ವೇಳೆ ಪಿ ಕಾರ್ಡ್ ಬ್ಯಾಂಕಿನ ನಿರ್ದೇಶಕರಾಗಿ ಚುನಾವಣೆಯಲ್ಲಿ ಆಯ್ಕೆಯಾದ ಮಾಡ್ರಹಳ್ಳಿ ಎಂ.ಶಿವಮೂರ್ತಿ, ಎನ್.ಎನ್.ಮಹದೇವಸ್ವಾಮಿ ಹಾಗೂ ಮಹೇಶ್ ಅವರನ್ನು ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ವಿದ್ಯೋದಯ ಶಿಕ್ಷಣ ಸಂಸ್ಥೆಯ ಗೌರವ ಕಾರ್ಯದರ್ಶಿ ಕೆ.ಪಿ. ಮಹದೇವಸ್ವಾಮಿ, ಶರಣ ಸಾಹಿತ್ಯ ಪರಿಷತ್ತಿನ ನಿಕಟ ಪೂರ್ವ ಅಧ್ಯಕ್ಷ ಚಂದ್ರಶೇಖರ್,ತಾಲೂಕು ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸೋಮಶೇಖರಪ್ಪ, ಉಪಾಧ್ಯಕ್ಷ ಮಹದೇವಸ್ವಾಮಿ,ವೀರಶೈವ ಮಹಾಸಭಾದ ಅಧ್ಯಕ್ಷ ಎಸ್ ಎಂ ಆರ್ ಪ್ರಕಾಶ್,ಕ್ಷೇತ್ರ ಬಿಜೆಪಿ ಅಧ್ಯಕ್ಷ ಸತ್ಯಪ್ಪ, ಬೆನಕನಹಳ್ಳಿ ಪ್ರಭುಸ್ವಾಮಿ, ಮೂಗೂರು ಕುಮಾರಸ್ವಾಮಿ, ರಾಜಶೇಖರ್, ಅಡಿಟರ್ ಮಂಜುನಾಥ್, ಬಸವ ಬಳಗದ ಅಧ್ಯಕ್ಷ ಪರಮೇಶ್ ಪಟೇಲ್, ಸೀಹಳ್ಳಿ ಗುರುಮೂರ್ತಿ,ಮೆಡಿಕಲ್ ಕುಮಾರ್, ಕೆಇಬಿ ನಿವೃತ್ತ ನೌಕರ ಸಿದ್ದಲಿಂಗಸ್ವಾಮಿ ಮತ್ತಿತರಿದ್ದರು.
Mysore
ಏ.9 ರಂದು ಶ್ರೀಕಂಠೇಶ್ವರ ಸ್ವಾಮಿಯ ದೊಡ್ಡ ಜಾತ್ರೆ: ಪೂರ್ವ ಸಿದ್ಧತೆ ಕುರಿತು ದರ್ಶನ್ ದ್ರುವ ಸಭೆ

ವರದಿ: ಮಹದೇವಸ್ವಾಮಿ ಪಟೇಲ್
ನಂಜನಗೂಡು: ಶ್ರೀ ಶ್ರೀಕಂಠೇಶ್ವರ ಸ್ವಾಮಿಯ ದೊಡ್ಡ ಜಾತ್ರೆಯ ಏ.9 ರಂದು ಜರುಗುವ ಮಹೋತ್ಸವದ ಹಿನ್ನೆಲೆ ಇಂದು ಬುಧವಾರ 2 ನೇ ಹಂತದ ಪೂರ್ವಭಾವಿ ಸಭೆಯನ್ನು ಎಡಿಸಿ ಜಿಲ್ಲಾಧಿಕಾರಿಗಳು ಹಾಗೂ ಕ್ಷೇತ್ರದ ಶಾಸಕ ದರ್ಶನ್ ಧ್ರುವನಾರಾಯಣ್ ಅಧ್ಯಕ್ಷತೆಯಲ್ಲಿ ನಡೆದ ದೊಡ್ಡ ಜಾತ್ರೆ ಪೂರ್ವ ಸಿದ್ಧತಾ ಸಭೆ ನಡೆಸಲಾಯಿತು.
ನಗರದ ಶ್ರೀಕಂಠೇಶ್ವರ ಸ್ವಾಮಿಯ ಅನ್ನದಾಹೋಹ ಭವನದಲ್ಲಿ ಆಯೋಜಿಸಿದ್ದ ದೊಡ್ಡ ಜಾತ್ರೆಯ ಪ್ರಯುಕ್ತ ಅಧಿಕಾರಿಗಳು ಮತ್ತು ಏಳೂರು ಗ್ರಾಮಸ್ಥರ ಸಲಹೆ ಸೂಚನೆಗಳ 2 ನೇ ಹಂತ ಪೂರ್ವದ ಸಭೆ ಆಯೋಜಿಸಲಾಯಿತು.
ಶಾಸಕ ದರ್ಶನ್ ಧ್ರುವನಾರಾಯಣ್ ಮಾತನಾಡಿ ಶ್ರೀಕಂಠೇಶ್ವರ ದೇವಸ್ಥಾನ ಸುತ್ತು, ಅಂಬೇಡ್ಕರ್ ಭವನ, ನಗರ ಸಭೆ, ಸೇರಿದಂತೆ ದೀಪದ ಅಲಂಕಾರಗಳನ್ನು ಅದ್ದೂರಿಯಾಗಿ ಮಾಡಬೇಕೆಂದು ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ಅಧಿಕಾರಿಗೆ ಸೂಚನೆ ನೀಡಿದರು.
ರಥೋತ್ಸವ ಜರುಗಲಿರುವಗ ರಥದ ಚಕ್ರಗಳು, ರಥದ ಹಗ್ಗ, ರಸ್ತೆಗಳಲ್ಲಿ ಹಳ್ಪಳ ದಿಟ್ಟನೆಗಳನ್ನು, ಪರಿಶೀಲಿಸಬೇಕು, ಅಧಿಕಾರಿಗಳು ನಿಮ್ಮ ಜವಾಬ್ದಾರಿಯಿಂದ ಅವಘಡನೆ ನಡೆಯದೆ ಹಾಗೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಗಡಕ್ ಸೂಚನೆ ಶಾಸಕ ದರ್ಶನ್ ಧ್ರುವನಾರಾಯಣ್ ನೀಡಿದರು.
ಎಡಿಸಿ ಶಿವರಾಜ್ ಮಾತನಾಡಿ ಕ್ಷೇತ್ರದಲ್ಲಿ ಇಂತಹ ಶಾಸಕರಾದ ದರ್ಶನ್ ಧ್ರುವನಾರಾಯಣ್ ರವರು ಹೆಚ್ಚು ಸಹಕಾರ ಬೆಂಬಲ ಕೊಡುತ್ತಿದ್ದಾರೆ ಖುಷಿಯಾಗುತ್ತದೆ. ಆದ್ದರಿಂದ ಅಧಿಕಾರಿಗಳು ನಿಮ್ಮ ಜವಾಬ್ದಾರಿಯಿಂದ ಕೆಲಸಗಳನ್ನು ನಿರ್ವಹಿಸಬೇಕು
ಜಾತ್ರೆ ಕಳೆದು ವರ್ಷಕ್ಕಿಂತ ಅದ್ದೂರಿಯಾಗಿ ಅಲಂಕಾರ ಮಾಡಿ ಯಾವುದೇ ಇತರ ಘಟಕಗಳ ನಡುವೆ ಅದ್ದೂರಿಯಾಗಿ ಜಾತ್ರೆ ನಡೆಯಬೇಕು.
ದೇವಸ್ಥಾನ ಸುತ್ತ ಹಾಗೂ ತೇರು ಎಳೆಯುವಾಗ ಸಿಸಿಟಿವಿ ಅಳವಡಿಸಿರಬೇಕು. ರಥ ಚಕ್ರದ ಹಿಂಭಾಗದಲ್ಲಿ ಎದ್ದಿನ ಮರ ಕೊಡುವವರು ಜಾಗೃತಿ ಆಗಿರಬೇಕು ಅವರಿಗೆ ಟೀ ಶರ್ಟ್ ಕೊಡಬೇಕೆಂದು ದೇವಸ್ಥಾನ ಅಧಿಕಾರಿಗೆ ಸೂಚನೆ ನೀಡಿದರು
ಶಾಸಕರಿಂದ ಸಭಾಷ್ ಅದ್ದೂರಿಯಾಗಿ ನಡೆಯಿತು ಎಂದು ಅನಿಸಿಕೊಂಡರೆ ಸಂತೋಷವಾಗುತ್ತದೆ. ನಂಜುಂಡೇಶ್ವರ ಸ್ವಾಮಿ ನಮ್ಮ ಮನೆ ದೇವರು ಎಂದುಕೊಂಡು. ನಂಜುಂಡೇಶ್ವರ ಸ್ವಾಮಿಯ ಭಯಕ್ಕೆ ಶ್ರದ್ಧೆ ಇಟ್ಟು ಅಧಿಕಾರಿಗಳು ಜವಾಬ್ದಾರಿಯಿಂದ ಕೆಲಸಗಳನ್ನು ನಿರ್ವಹಿಸಿ ಎಂದು ಖಡಕ್ ಸೂಚನೆ ನೀಡಿದರು.
ಸಭೆಯಲ್ಲಿ ಮಾಜಿ ಶಾಸಕರಾದ ಕಳಲೆ ಕೇಶವಮೂರ್ತಿ, ತಹಸೀಲ್ದಾರ್ ಶಿವಕುಮಾರ್ ಕಾಸ್ನರ್, ನಗರ ಸಭಾ ಅಧ್ಯಕ್ಷರಾದ ಶ್ರೀಕಂಠ ಸ್ವಾಮಿ, EO ಜಗದೀಶ್ , DYSP ರಘು , ನಗರಸಭಾ ಪೌರಯುಕ್ತರಾದ ವಿಜಯ್ ಸೇರಿದಂತೆ ವಿವಿಧ ಗ್ರಾಮದ ಯಜಮಾನರುಗಳು, ಮುಖಂಡರುಗಳು ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
Mysore
ಗುರುವಾರ ಮುಕ್ತ ವಿವಿ ಘಟಿಕೋತ್ಸವ ಸತೀಶ್ ಜಾರಕಿಹೊಳಿ ಗೆ ಗೌರವ ಡಾಕ್ಟರೇಟ್

ಮೈಸೂರು: ಕರ್ನಾಟಕ ಮುಕ್ತ ವಿಶ್ವ ವಿದ್ಯಾನಿಲಯದ 20ನೇ ಘಟಿಕೋತ್ಸವ ಸಮಾರಂಭವು ಮಾರ್ಚ್ 27 ರಂದು ಬೆಳಗ್ಗೆ 11 ಗಂಟೆಗೆ ವಿವಿ ಘಟಿಕೋತ್ಸವ ಭವನದಲ್ಲಿ ನಡೆಯಲಿದೆ. ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಸೇರಿ ಮೂವರಿಗೆ ಗೌರವ ಡಾಕ್ಟರೇಟ್ ಪ್ರಕಟಿಸಲಾಗಿದೆ.
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಕುಲಪತಿ ಪ್ರೊ.ಶರಣಪ್ಪ ವಿ.ಹಲಸೆ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು.
ಘಟಿಕೋತ್ಸವದಲ್ಲಿ ಒಟ್ಟು 17,348 ಮಂದಿ ವಿವಿಧ ಪದವಿ ಪಡೆಯಲಿದ್ದು, ಒಟ್ಟು 54 ಚಿನ್ನದ ಪದಕ, 58 ನಗದು ಬಹುಮಾನ ನೀಡಲಾಗುವುದು ಎಂದರು.
ಈ ಸಾಲಿನಲ್ಲಿ 6402 ಪುರುಷರು, 10946 ಮಹಿಳೆಯರಿಗೆ ಪದವಿ ನೀಡಲಿದ್ದು, ವಿವಿಯ ಇತಿಹಾಸದಲ್ಲೇ ಅತ್ಯಧಿಕ ಮಂದಿ ಒಟ್ಟು 41 ಮಂದಿ ಪಿಎಚ್ ಡಿ ಪದವಿ ಪಡೆಯಲಿದ್ದಾರೆ. ಸ್ನಾತಕ, ಸ್ನಾತಕೋತ್ತರ ವಿಭಾಗದಲ್ಲಿ ಒಟ್ಟು 25109 ಮಂದಿ ಪರೀಕ್ಷೆಗೆ ಹಾಜರಾಗಿ 17307 ಮಂದಿ ತೇರ್ಗಡೆ ಹೊಂದಿ ಶೇ.68.92ರಷ್ಟು ಫಲಿತಾಂಶ ಬಂದಿದೆ ಎಂದು ತಿಳಿಸಿದರು.
ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿಯವರಿಗೆ ಗೌರವ ಡಾಕ್ಟರೇಟ್ ನೀಡುತ್ತಿರುವ ವಿಚಾರದಲ್ಲಿ ಯಾವುದೇ ರಾಜಕೀಯ ಇಲ್ಲ . ಮಾನವ ಬಂಧುತ್ವ ವೇದಿಕೆಯ ಸಾಮಾಜಿಕ ಕಾರ್ಯಕ್ಕೆ ಗೌರವ ಡಾಕ್ಟರೇಟ್ ನೀಡಲಾಗುತ್ತಿದೆ. ಅದರಂತೆ ಚಿತ್ರದುರ್ಗದ ಐಡಿಯಲ್ ಎಜುಕೇಶನ್ ಸೊಸೈಟಿ ಚೇರ್ಮನ್ ಸಿ.ಎಂ.ಇರ್ಫಾನುಲ್ಲಾ ಷರೀಫ್ ಅವರ ಶೈಕ್ಷಣಿಕ ಸೇವೆ ಹಾಗೂ ಕಲುಬುರಗಿಯ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಛೇರ್ಮನ್ ಡಾ.ದಾಕ್ಷಾಯಣಿ ಎಸ್.ಅಪ್ಪಾ ಅವರಿಗೆ ಈ ಬಾರಿ ಗೌರವ ಡಾಕ್ಟರೇಟ್ ನೀಡಿ ಗೌರವಿಸಲಾಗುತ್ತಿದೆ ಎಂದು ಹೇಳಿದರು.
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಮುಖ್ಯ ಅತಿಥಿಯಾಗಿ ಭಾಗವಹಿಸುವರು. ಕೌಶಲ ಅಭಿವೃದ್ಧಿ ಮತ್ತು ವಾಣಿಜ್ಯೋದ್ಯಮ ಸಚಿವಾಲಯದ ಕಾರ್ಯದರ್ಶಿ ಅತುಲ್ ಕುಮಾರ್ ತಿವಾರಿ ಘಟಿಕೋತ್ಸವದ ಭಾಷಣ ಮಾಡುವರು ಎಂದು ಡಾ.ಶರಣಪ್ಪ ವಿ. ಹಲಸೆ ತಿಳಿಸಿದರು.
ಕುಲಸಚಿವರ ಕಚೇರಿಗೆ ಸಿಬ್ಬಂದಿ ನೋಟಿನ ಹಾರ ಹಾಕಿ ಪ್ರತಿಭಟಿಸಿದ ಪ್ರಕರಣ ಕುರಿತು ಪ್ರತಿಕ್ರಿಯಿಸಲು ಅವರು ನಿರಾಕರಿಸಿದರು.
ಪರೀಕ್ಷಾಂಗ ಕುಲಸಚಿವ ಎಚ್.ವಿಶ್ವನಾಥ್, ಕುಲಸಚಿವ ಡಾ.ಪ್ರವೀಣ, ಶೈಕ್ಷಣಿಕ ಡೀನ್ ಪ್ರೊ.ಲಕ್ಷ್ಮಿ, ಬಿಒಎಂ ಸದಸ್ಯರು ಉಪಸ್ಥಿತರಿದ್ದರು.
ಕೋಟ್
ಕಳೆದ ಎರಡು ವರ್ಷಗಳಲ್ಲಿ 86 ಸಾವಿರ ಅಭ್ಯರ್ಥಿಗಳು ವಿವಿಧ ಕೋರ್ಸ್ಗಳಿಗೆ ಪ್ರವೇಶ ಪಡೆದಿದ್ದರು. ಈ ವರ್ಷ ಪ್ರವೇಶ ಪ್ರಕ್ರಿಯೆ ಆರಂಭವಾಗಿದ್ದು, ಮಾ.31ರವರೆಗೂ ಪ್ರವೇಶಕ್ಕೆ ಅವಕಾಶವಿದೆ.
– ಪ್ರೊ.ಶರಣಪ್ಪ ವಿ.ಹಲಸೆ, ಮುಕ್ತ ವಿವಿ ಕುಲಪತಿ
Mysore
ಎವರೆಸ್ಟ್ ಶಿಖರ ಏರಿದ ಅನುಭವ ಪುಸ್ತಕ ಬರೆಯುತ್ತಿರುವ ಡಾ. ಉಷಾ ಹೆಗ್ಡೆ

ಮೈಸೂರು: ಜೀವಸಹಿತ ವಾಪಸ್ ಬರುವ ಬಗ್ಗೆ ಅನುಮಾನದ ಮನಸ್ಥಿತಿಯಲ್ಲಿಯೇ ಹಿಮಾಲಯದ ಮೌಂಟ್ ಎವರೆಸ್ಟ್ ಶಿಖರವನ್ನು ಏರಿದೆ. ಮೌಂಟ್ ಎವರೆಸ್ಟ್ ಏರಿದ ತಮ್ಮ ಸಾಧನೆಯ ಹಾದಿ ಹಾಗೂ ಸಿದ್ಥತೆಗಳ ಕುರಿತು ಪುಸ್ತಕ ಬರೆಯುತ್ತಿರುವುದಾಗಿ ಮೈಸೂರಿನ ಜೆಎಸ್ಎಸ್ ದಂತ ವೈದ್ಯಕೀಯ ಕಾಲೇಜಿನ ಪ್ರಾಧ್ಯಾಪಕರಾದ ಡಾ.ಉಷಾ ಹೆಗ್ಡೆ ಅವರು ತಿಳಿಸಿದರು.
ಇಲ್ಲಿನ ಊಟಿ ರಸ್ತೆಯಲ್ಲಿರುವ ಜೆಎಸ್ಎಸ್ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಕಾಲೇಜು ಹಾಗೂ ಬೆಂಗಳೂರಿನ ಇನ್ ಸ್ಟಿಟ್ಯೂಟ್ ಆಫ್ ಮೀಡಿಯಾ ಸ್ಟಡೀಸ್ ಆಂಡ್ ರಿಸರ್ಚ್ (ಐಎಂಎಸ್ಆರ್) ಸಂಯುಕ್ತ ಆಶ್ರಯದಲ್ಲಿ ಕಾಲೇಜಿನ ಪತ್ರಿಕೋದ್ಯಮದ ವಿದ್ಯಾರ್ಥಿಗಳಿಗೆ ಪತ್ರಿಕಾ ಬರಹ ಕೌಶಲ ಕುರಿತು ಎರಡು ದಿನಗಳ ಕಾರ್ಯಾಗಾರದಲ್ಲಿ ಬುಧವಾರ ಅವರು ಅಣುಕು ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.
ಮೌಂಟ್ ಎವರೆಸ್ಟ್ ಶಿಖರ ಏರುವ ಮುನ್ನ ಸಾಕಷ್ಟು ಸಿದ್ಧತೆಗಳನ್ನು ನಡೆಸಿದ್ದೆ. ದೈಹಿಕವಾಗಿ ಫಿಟ್ ಆಗಿದ್ದೆ. ಮನೆಯಲ್ಲಿ ಮೊದಲು ಬೇಡ ಎಂದಿದ್ದರು. ಆದರೆ, ನಾನು ಪಡೆಯುತ್ತಿದ್ದ ತರಬೇತಿ ನೋಡಿ ಉತ್ತೇಜನ ನೀಡಿದರು. ಮನೆಯವರ ಬೆಂಬಲ ಇಲ್ಲದಿದ್ದರೆ
ಮೌಂಟ್ ಎವರೆಸ್ಟ್ ಶಿಖರ ಏರಲು ಸಾಧ್ಯವಾಗುತ್ತಿರಲಿಲ್ಲ ಎಂದು ಅವರು ತಿಳಿಸಿದರು.
ಸಾಗರಮಾತಾ ಕೃಪೆ ಇಲ್ಲದಿದ್ದರೆ ಹಿಮಾಲಯ ಏರಲು ಸಾಧ್ಯವಾಗುವುದಿಲ್ಲ. ಪರ್ವತಾರೋಹಣಕ್ಕೆ ಮನಸ್ಸು ಧೃಡವಾಗಿರಬೇಕು. ಎವರೆಸ್ಟ್ ಶಿಖರ ಏರುವಾಗ ಹಾಗೂ ಇಳಿಯುವಾಗ ಅನೇಕ ಶವಗಳನ್ನು ನೋಡಿದೆ. ಶಿಖರ ಏರಿ ವಾಪಸ್ ಇಳಿಯುವಾಗಲೇ ಸವಾಲುಗಳು, ಅಪಾಯಗಳು ಹೆಚ್ಚು ಎಂದು ಅವರು ತಿಳಿಸಿದರು.
ಇಡೀ ದೇಶವನ್ನು ಸೈಕಲ್ ನಲ್ಲಿ ಸುತ್ತಬೇಕು ಎಂಬ ಆಸೆ ಇದೆ ಎಂದು ಅವರು ತಿಳಿಸಿದರು.
ಮೈಸೂರು ಮಹಾನಗರ ಪಾಲಿಕೆಯ ಸ್ಚಚ್ಛ ಮೈಸೂರು ರಾಯಭಾರಿಯಾಗಿರುವ ಅವರು ಪ್ರತಿಯೊಬ್ಬರಿಂದಲೂ ಸ್ವಚ್ಚ ಮೈಸೂರು ಅಭಿಯಾನ ಆರಂಭವಾಗಬೇಕು ಎಂದರು.
ಪತ್ರಿಕೋದ್ಯಮ ವಿದ್ಯಾರ್ಥಿಗಳು ಕೇಳಿದ ಪ್ರಶ್ನೆಗಳಿಗೆ ಡಾ.ಉಷಾ ಹೆಗ್ಡೆ ಅವರು ಉತ್ತರಿಸಿದರು.
ಅಸ್ಸಾಂ ಕೇಂದ್ರೀಯ ವಿಶ್ವವಿದ್ಯಾನಿಲಯದ ವಿಶ್ರಾಂತ ಸಹ ಕುಲಪತಿ ಪ್ರೊ.ಕೆ.ವಿ.ನಾಗರಾಜ್, ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥರಾದ ತ್ರಿವೇಣಿ, ಸುವರ್ಣ ಎಸ್.ಕಂಬಿ ಅವರು ಉಪಸ್ಥಿತರಿದ್ದರು.
-
Kodagu22 hours ago
ಬೇಳೂರು ಬಾಣೆಯಲ್ಲಿ ಸ್ಟೇರಿಂಗ್ ಲಾಕ್ : ಕಾರು ಪಲ್ಟಿ
-
Kodagu19 hours ago
ಕೊಡಗಿನ ಭರವಸೆಯ ಪ್ರತಿಭೆ ವರ್ತ ಕಾಳಿ ಕಿರುಚಿತ್ರದ ನಿರ್ದೇಶಕ: ಕೃತಾರ್ಥ ಮಂಡೆಕುಟ್ಟಂಡ
-
State15 hours ago
ಬಿಜೆಪಿ ಶೋಕಾಸ್ ನೋಟಿಸ್ ಕುರಿತು ಶಾಸಕ ಎಸ್ಟಿಎಸ್ ಫಸ್ಟ್ ರಿಯಾಕ್ಷನ್
-
Mysore18 hours ago
ಎಲ್ಲಾ ಪಕ್ಷದವರ ಮೇಲೂ ಹನಿಟ್ರ್ಯಾಪ್ ಪ್ರಯತ್ನ ನಡೆದಿದೆ: ಯತೀಂದ್ರ ಸಿದ್ದರಾಮಯ್ಯ
-
State12 hours ago
ಬಿಜೆಪಿಯಿಂದ ಆರು ವರ್ಷಗಳ ಕಾಲ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಉಚ್ಛಾಟನೆ
-
Mandya13 hours ago
ಎಂ.ಕೆ.ಸೋಮಶೇಖರ್ಗೆ ರಾಜ್ಯಮಟ್ಟದ ಛಾಯಗ್ರಾಹಕ ಹಾಗೂ ಕಲಾವಿದ ಪ್ರಶಸ್ತಿ ಪ್ರಧಾನ
-
Mandya17 hours ago
ಭೂ ದಾಖಲೆ ಹೊಂದಿರುವವರನ್ನು ಓಕ್ಕಲೆಬ್ಬಿಸಬೇಡಿ : ಎನ್ ಚೆಲುವರಾಯಸ್ವಾಮಿ
-
Hassan16 hours ago
1 ಕೋಟಿ ರೂ. ವೆಚ್ಚದ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನರೆವೇರಿಸಿದ ಸ್ವರೂಪ್ ಪ್ರಕಾಶ್