Mandya
ವಿವಿಧ ಹಿಂದೂಪರ ಸಂಘಟನೆಗಳು ಕರೆ : ವ್ಯಾಪಾರ ವಹಿವಾಟು ಸ್ಥಗಿತ
 
																								
												
												
											ಮದ್ದೂರು: ಪಟ್ಟಣದ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲುತೂರಾಟ ಘಟನೆ ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಪೊಲೀಸರ ಲಾಠಿಚಾರ್ಜ್ ಖಂಡಿಸಿ ಇಂದು ವಿವಿಧ ಸಂಘಟನೆಗಳು ಕರೆ ನೀಡಿದ್ದ ಮದ್ದೂರು ಬಂದ್ ಯಶಸ್ವಿಯಾಗಿದೆ.
ವಿವಿಧ ಹಿಂದೂಪರ ಸಂಘಟನೆಗಳು ಕರೆ ನೀಡಿದ್ದ ಬಂದ್ ಗೆ ವ್ಯಾಪಾರಸ್ಥರು ಸ್ವಯಂ ಪ್ರೇರಿತವಾಗಿ ಅಂಗಡಿ ಬಾಗಿಲುಗಳನ್ನು ಮುಚ್ಚಿ ವ್ಯಾಪಾರ ವಹಿವಾಟು ಸ್ಥಗಿತಗೊಳಿಸಿ ಬಂದ್ ಗೆ ಬೆಂಬಲಿಸಿದ್ದಾರೆ.
ಬಿಗಿ ಪೊಲೀಸ್ ಬಂದೂಬಸ್ತ್:
 
 
ಗಣೇಶ ವಿಸರ್ಜನೆಯ ಗಲಾಟೆ ಹಾಗೂ ಇಂದಿನ ಬಂದ್ ನಿಂದಾಗಿ ಪೂರ್ವ ನಿಯೋಜಿತವಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ್ ಬಾಲದಂಡೆ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಅನ್ನ ಪಟ್ಟಣದಾದ್ಯಂತ ಕೈಗೊಳ್ಳಲಾಗಿದೆ.
ನಾಲ್ವರು ಹೆಚ್ಚುವರಿ ಎಸ್ಪಿ ಗಳು 15 ಡಿವೈಎಸ್ಪಿ ಗಳು 35 ಇನ್ಸ್ಪೆಕ್ಟರ್ಗಳು 80 ಪಿಎಸ್ಐ ಗಳು 10 ಡಿಎಆರ್ ಕಡೆ 15 ಕೆ ಎಸ್ ಆರ್ ಪಿ ಸೇರಿ 1500ಕ್ಕೂ ಹೆಚ್ಚು ಪೊಲೀಸರು ಸ್ಥಳದಲ್ಲಿ ಬೀಡು ಬಿಟ್ಟಿದ್ದು ಪಟ್ಟಣದಂತ ಯಾವುದೇ ಆಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮವಹಿಸಿದ್ದಾರೆ .
Mandya
ಮದ್ದೂರು ಪಟ್ಟಣದ ಉದ್ವಿಗ್ನ ಸ್ಥಿತಿಗೆ ಕಾರಣರಾದವರ ಮೇಲೆ ಕಠಿಣ ಕ್ರಮ ಕೈಗೊಳ್ಳಿ : ಟಿ.ಎಲ್.ಕೃಷ್ಣೇಗೌಡ
 
														ಮಂಡ್ಯ: ಮದ್ದೂರು ಪಟ್ಟಣದ ಉದ್ವಿಗ್ನ ಸ್ಥಿತಿಗೆ ಕಾರಣರಾದವರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸಿಪಿಐ(ಎಂ) ಜಿಲ್ಲಾ ಕಾರ್ಯದರ್ಶಿ ಟಿ.ಎಲ್.ಕೃಷ್ಣೇಗೌಡ ರಾಜ್ಯ ಸರಕಾರಕ್ಕೆ ಮನವಿ ಮಾಡಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗಣೇಶ ಮೆರವಣಿಗೆ ಮೇಲೆ ಕಲ್ಲು ತೂರಾಟ ನಡೆಸಲು ಪಿತೂರಿ ನಡೆಸಿದವರನ್ನು ಜಿಲ್ಲಾಡಳಿತ ಕಂಡು ಹಿಡಿಯಬೇಕು. ಉದ್ವಿಗ್ನ ಸ್ಥಿತಿಯನ್ನು ಬಿಜೆಪಿ ರಾಜಕೀಯಕ್ಕೆ ಬಳಸಿಕೊಳ್ಳಲು ಮುಂದಾಗಿದೆ. ಜಿಲ್ಲೆಯ ಜನತೆ ಕೋಮುವಾದಕ್ಕೆ ಬಲಿಯಾಗದೇ ಶಾಂತಿ, ಸೌಹಾರ್ದತೆ ಕಾಪಾಡಿಕೊಳ್ಳಬೇಕೆಂದು ಹೇಳಿದರು.
ಕಲ್ಲು ತೂರಾಟದಿಂದ ಮದ್ದೂರು ಪಟ್ಟಣದಲ್ಲಿ ಉಂಟಾದ ಉದ್ವಿಗ್ನತೆ ಕೋಮುಗಳ ನಡುವಿನ ಸೌಹಾರ್ದತೆಗೆ ಧಕ್ಕೆ ತಂದೊಡ್ಡಿದೆ. ಇದನ್ನು ಕೆಲ ಶಕ್ತಿಗಳು ರಾಜಕೀಯಕ್ಕೆ ಬಳಸಿಕೊಳ್ಳುತ್ತಿವೆ. ಇವೆಲ್ಲವೂ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆಯ ನಿರ್ಲಕ್ಷ್ಯತೆಯನ್ನು ತೋರುತ್ತಿದೆ ಎಂದು ಆರೋಪಿಸಿದರು.
ಯಾವುದೇ ಗಲಭೆಯಾಗದಂತೆ ಕ್ರಮ ವಹಿಸಬೇಕಾದ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆಯ ನಿರ್ಲಕ್ಷ್ಯ ತೋರಿದ ಹಿನ್ನಲೆ ಉದ್ವಿಗ್ನತೆ ಸೃಷ್ಠಿಯಾಗಿದೆ. ಈ ಸಂದರ್ಭವನ್ನು ಬಿಜೆಪಿ ಮಂಡ್ಯ ಸೇರಿದಂತೆ ಹಳೆ ಮೈಸೂರು ಭಾಗದಲ್ಲಿ ನೆಲೆ ಕಾಣಲು ಬಳಸಿಕೊಳ್ಳುತ್ತಿದೆ. ಸರಕಾರ ನಿರ್ಲಕ್ಷ್ಯ ತೋರಿದ ಅಧಿಕಾರಿಗಳನ್ನು ಘಟನೆಗೆ ಹೊಣೆ ಮಾಡಿ, ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.
ನಾಗಮಂಗಲ, ಶ್ರೀರಂಗಪಟ್ಟಣ, ಕೆರಗೋಡು ಹೀಗೆ ಗಲಭೆಗಳ ಲಾಭದ ಮೂಲಕ ಬಿಜೆಪಿ ಜಿಲ್ಲೆಯಲ್ಲಿ ನೆಲೆ ಕಂಡುಕೊಳ್ಳಲು ಮುಂದಾಗಿದೆ. ಈ ನಿಟ್ಟಿನಲ್ಲಿ ಇದೀಗ ಮದ್ದೂರಿನ ಪ್ರಕರಣದ ಲಾಭ ಪಡೆಯಲು ಮುಂದಾಗಿ ಪ್ರತಿಭಟನೆ ಹಾಗೂ ಧಾರ್ಮಿಕ ಭಾವನೆಗಳನ್ನು ಭಿತ್ತಿ ಗಲಭೆ ಸೃಷ್ಠಿಸುತ್ತಿದೆ. ಬಿಜೆಪಿಯ ಈ ಕ್ಷುಲ್ಲಕ ರಾಜಕಾರಣಕ್ಕೆ ಜಿಲ್ಲೆಯ ಜನತೆ ಬಲಿಯಾಗಬಾರದು ಎಂದು ಮನವಿ ಮಾಡಿದರು.
ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡ ಹೆಚ್.ಡಿ.ದೇವೇಗೌಡ, ಹೆಚ್.ಡಿ.ಕುಮಾರಸ್ವಾಮಿ ನೇತೃತ್ವದ ಜೆಡಿಎಸ್ ಜಾತ್ಯಾತೀತತೆಯನ್ನು ಮರೆತಿದೆ. ನಿಖಿಲ್ ಕುಮಾರಸ್ವಾಮಿ ಸನಾತನಿಗಳಿಗಿಂತಲೂ ಹೆಚ್ಚಿನವರಂತೆ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಇದು ಮುಂದುವರೆದಲ್ಲಿ ಜೆಡಿಎಸ್ ಸಹವಾಸದಿಂತ ಜೆಡಿಎಸ್ ನಿರ್ನಾಮವಾಗಲಿದೆ ಎಂದು ಎಚ್ಚರಿಸಿದರು.
ಗೋಷ್ಠಿಯಲ್ಲಿ ಸಿಪಿಐ(ಎಂ) ಜಿಲ್ಲಾ ಕರ್ಯಕಾರಣಿ ಸದಸ್ಯರಾದ ಸಿ.ಕುಮಾರಿ, ಬಿ.ಹನುಮೇಶ್, ಸುಶೀಲ, ಚಂದ್ರು ಹಾಜರಿದ್ದರು.
Mandya
ಮದ್ದೂರು ಕಲ್ಲು ತೂರಾಟ| ತಪ್ಪಿತಸ್ಥರ ಮೇಲೆ ಗೂಂಡಾ ಆಕ್ಟ್ ನಂತಹ ಕಠಿಣ ಕ್ರಮವನ್ನು ಕೈಗೊಳ್ಳಬೇಕು: ಹಿಂದೂ ಜನಜಾಗೃತಿ ಸಮಿತಿ
 
														ಮಂಡ್ಯ: ಜಿಲ್ಲೆಯ ಮದ್ದೂರಿನ ತಾಲೂಕಿನ ರಹೀಮ್ ನಗರದ ಗಣೇಶೋತ್ಸವ ಮೆರವಣಿಗೆ ವೇಳೆ ಮತಾಂಧರಿಂದ ಕಲ್ಲು ತೂರಾಟ ಮಾಡಿದ್ದು, ತಪ್ಪಿತಸ್ಥರ ಮೇಲೆ ಗೂಂಡಾ ಆಕ್ಟ್ ನಂತಹ ಕಠಿಣ ಕ್ರಮವನ್ನು ಕೈಗೊಳ್ಳಬೇಕು ಎಂದು ಹಿಂದೂ ಜನಜಾಗೃತಿ ಸಮಿತಿ ಆಗ್ರಹಿಸಿದೆ.
ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಹಿಂದೂ ಜನಜಾಗೃತಿ ಸಮಿತಿ ರಾಜ್ಯ ವಕ್ತಾರ ಮೋಹನ್ ಗೌಡ ಅವರು, ಭಾನುವಾರ (ಸೆಪ್ಟೆಂಬರ್. 7) ರಾತ್ರಿ ಚೆನ್ನೇಗೌಡ ಬಡಾವಣೆಯ ನಿವಾಸಿಗಳ ಗಣೇಶೋತ್ಸವ ಮೆರವಣಿಗೆಯು ಮಸೀದಿ ಬಳಿ ಬಂದಾಗ ಏಕಾಏಕಿ ಲೈಟ್ ಆಫ್ ಮಾಡಿ ಗಣಪತಿ ಮೆರವಣಿಗೆ ಮೇಲೆ ಮಸೀದಿಯಿಂದ ಕಲ್ಲು ತೂರಾಟ ಮಾಡಲಾಗಿದೆ. ಮತಾಂಧರ ಈ ನಡೆಯನ್ನು ನೋಡಿದಾಗ ಈ ದಾಳಿ ಸಂಪೂರ್ಣ ಪೂರ್ವ ನಿಯೋಜಿತವಾಗಿದ್ದು ಗಲಭೆ ಸೃಷ್ಠಿಸಲೆಂದೇ ಈ ಷಡ್ಯಂತ್ರವನ್ನು ರೂಪಿಸಿದ್ದಾರೆ. ಈ ಘಟನೆಯನ್ನು ಹಿಂದೂ ಜನಜಾಗೃತಿ ಸಮಿತಿ ತೀವ್ರವಾಗಿ ಖಂಡಿಸುತ್ತದೆ.

ಕಳೆದ ವರ್ಷ ನಾಗಮಂಗಲದಲ್ಲಿ ಗಣೇಶೋತ್ಸವ ಮೆರವಣಿಗೆ ವೇಳೆ ಸಂಭವಿಸಿದ್ದ ಗಲಭೆಯಲ್ಲಿ ಕಲ್ಲು ತೂರಾಟ ಮತ್ತು ಪೆಟ್ರೋಲ್ ಬಾಂಬ್ ಗಳನ್ನು ಹಿಂದೂ ಅಂಗಡಿಗಳ ಮೇಲೆ ಹಾಕಿ ಕೋಟ್ಯಾಂತರ ರೂಪಾಯಿ ನಷ್ಟ ಮಾಡಿರುವ ಕಹಿ ಘಟನೆಯ ನೆನಪುಗಳು ಇರುವಾಗಲೇ ರಾಜ್ಯ ಸರ್ಕಾರ ಮತ್ತು ಪೊಲೀಸ್ ಇಲಾಖೆಗೆ ಎಲ್ಲಾ ಗಣೇಶ ಮಂಡಳಿಯು ಸುರಕ್ಷತಾ ಭದ್ರತೆಯನ್ನು ಒದಗಿಸಲು ಮನವಿ ಮಾಡಿದ ನಂತರವೂ ಹಿಂದೂ ಗಣೇಶೋತ್ಸವದ ಮೆರವಣಿಗೆಯ ಮೇಲೆ ಮಾರಣಾಂತಿಕ ಆಕ್ರಮಣವಾಗಿರುವುದು ಅತ್ಯಂತ ಖಂಡನೀಯವಿದೆ.
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಏನಾಗಿದೆ ? ಸಾರ್ವಜನಿಕ ಗಣೇಶೋತ್ಸವ, ನವರಾತ್ರಿ, ರಾಮನವಮಿ, ಹನುಮಾನ್ ಜಯಂತಿ ಪ್ರತಿಯೊಂದು ಮೆರವಣಿಗೆ ಮೇಲೆಯೂ ಕಲ್ಲು ತೂರಾಟ ಆಗುತ್ತಿದೆ. ಇದರಿಂದ ಗಮನಕ್ಕೆ ಬರುವುದೇನೆಂದರೆ ಅಲ್ಪಸಂಖ್ಯಾತರ ಓಲೈಕೆ ನೀತಿಯಿಂದಾಗಿ ಬಹು ಸಂಖ್ಯಾತ ಹಿಂದೂಗಳ ಮೇಲೆ ಮಾರಣಾಂತಿಕ ಅಕ್ರಮಗಳಾಗುತ್ತಿದೆ. ಆದುದರಿಂದ ರಾಜ್ಯ ಸರ್ಕಾರವು ಈ ಕೃತ್ಯಕ್ಕೆ ಕಾರಣಕರ್ತರಾದವರ ಮೇಲೆ ಕೂಡಲೇ ಕ್ರಮಕೈಗೊಳ್ಳಬೇಕು ಮತ್ತು ರಾಜ್ಯಾದ್ಯಂತ ಇನ್ನೂ ಅನೇಕ ಜಿಲ್ಲೆಗಳಲ್ಲಿ ಗಣೇಶ ವಿಸರ್ಜನೆ ಬಾಕಿ ಇದ್ದು ಎಲ್ಲ ಜಿಲ್ಲೆಗಳಲ್ಲಿ ಪೊಲೀಸ್ ಇಲಾಖೆ ಇಂತಹ ಘಟನೆಗಳು ನಡೆಯದಂತೆ ಕಟ್ಟೆಚ್ಚರ ವಹಿಸಬೇಕೆಂದು ಸಮಿತಿಯು ಆಗ್ರಹಿಸುತ್ತದೆ ಎಂದು ತಿಳಿಸಿದ್ದಾರೆ.
Mandya
“ಶ್ರೀ ವಿನಾಯಕ ಸ್ವಾಮಿ ” ಹಬ್ಬದ ಅಂಗವಾಗಿ ವಿಶೇಷ ಪೂಜೆ
 
														ಮೇಲುಕೋಟೆ /ಜಕ್ಕನಹಳ್ಳಿ: ಇಂದು ಮಧ್ಯಾಹ್ನ ಜಕ್ಕನಹಳ್ಳಿ ಸರ್ಕಲ್ ನಲ್ಲಿ ಪುನರ್ ನವೀಕರಣಗೊಂಡ ದೇವಾಲಯ ದಲ್ಲಿ ನಿರಂತರ 34ನೇ ವರ್ಷ ದಲ್ಲಿ ಶ್ರೀ ವಿನಾಯಕ ಗೆಳೆಯರ ಬಳಗದ ವತಿಯಿಂದ ಪ್ರತಿಷ್ಠಾಪಿ ಸಲ್ಪಟ್ಟ “ಶ್ರೀ ವಿನಾಯಕ ಸ್ವಾಮಿ ” ಹಬ್ಬದ ಅಂಗವಾಗಿ ವಿಶೇಷ ಪೂಜೆ ಮತ್ತು ಸಾರ್ವಜನಿಕರಿಗೆ ವಿಶೇಷ ಪರಿಕರದ ಭೋಜನ ವನ್ನು ಏರ್ಪಡಿಸಲಾಗಿತ್ತು.

ಈ ಸಂದರ್ಭದಲ್ಲಿ ದೇವಸ್ಥಾನ ದ ಶ್ರೇಯೋ ಭಿವೃದ್ಧಿಗೆ ಶ್ರಮಿಸಿದ ಮೇಲುಕೋಟೆ ಕ್ಷೇತ್ರದ ಮಾಜಿ ಶಾಸಕರಾದ ಶ್ರೀ ಸಿ. ಎಸ್. ಪುಟ್ಟರಾಜು ರವರನ್ನು ಸನ್ಮಾನಿಸ ಲಾಯಿತು.

ಇದೇ ವೇಳೆ ಮುಖಂಡರಾದ ಶ್ರೀ ಅರಕನಗೆರೆ ಬೆಟ್ಟಸ್ವಾಮಿ, ಮಂಡ್ಯ ಜಿಲ್ಲಾ ಪಂ. ಸದಸ್ಯ ಎಚ್. ಮಂಜುನಾಥ್, ಜೆಡಿಎಸ್ ಮುಖಂಡ ಎಂ. ಆನಂದ್, ಜೆ.ಪಿ. ಶಿವ ಶಂಕರ್. ಅಶ್ವಥ್ ಕುಮಾರೇಗೌಡ, ಅನಿಲ್ ಕದಲಗೆರೆ, ಸುರೇಶ್ ದೇವರಹಳ್ಳಿ, ವಿ, ಎಸ್, ಎಸ್, ಎಲ್ ನಿರ್ದೇಶಕ ಎ.ಎನ್. ಮಂಜುನಾಥ್ ಉಪಸ್ಥಿತರಿದ್ದರು.
- 
																	   Mysore18 hours ago Mysore18 hours agoಅರ್ಧವೃತ್ತಾಕಾರದ ಬೆಂಜ್ ಜೋಡಣೆ ಸಮಾನ ಕಲಿಕೆಗೆ ಪೂರಕ: ಸಂಶೋಧಕ ಸಂಜಯ್ ಸಿಂಗಮಾರನಹಳ್ಳಿ 
- 
																	   Mysore3 hours ago Mysore3 hours agoರಾಜಕೀಯ ಪಕ್ಷಗಳು ಜನಕಲ್ಯಾಣದ ಪರ್ಯಾಯ ಶಕ್ತಿ: ಡಾ.ಬಿಜೆವಿ 
- 
																	   Mysore22 hours ago Mysore22 hours agoಬಾನು ಮುಷ್ತಾಕ್ ಕ್ಷಮೆ ಕೇಳಿದರೆ ಪಿಐಎಲ್ ವಾಪಸ್: ಪ್ರತಾಪ್ ಸಿಂಹ 
- 
																	   Mandya17 hours ago Mandya17 hours agoಮದ್ದೂರು ಘಟನೆಗೆ ಕಾಂಗ್ರೆಸ್ ಸರ್ಕಾರವೇ ಕಾರಣ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಆರೋಪ 
- 
																	   Hassan17 hours ago Hassan17 hours agoಆಚಾರ್ಯ ವಾಣಿಜ್ಯ ಪಿ.ಯು. ಕಾಲೇಜಿನಲ್ಲಿ ಹಾಸನ ಜಿಲ್ಲಾ ಚಟುಕು ಸಾಹಿತ್ಯ ಪರಿಷತ್ತಿನಿಂದ ಜಿಲ್ಲಾಮಟ್ಟದ ಕವಿಗೋಷ್ಠಿ 
- 
																	   Kodagu19 hours ago Kodagu19 hours agoಸೆ.11 ಕ್ಕೆ “ವಿಷಪೂರಿತ ಹಾವುಗಳು : ಗುರುತಿಸುವಿಕೆ ಮತ್ತು ಮುನ್ನೆಚ್ಚರಿಕೆ ಕ್ರಮಗಳ ಕುರಿತು ತರಬೇತಿ 
- 
																	   Hassan21 hours ago Hassan21 hours agoಹೊಳೆನರಸೀಪುರದಲ್ಲಿ ಪಿತ್ರಾರ್ಜಿತ ಆಸ್ತಿ ವಿವಾದ, ಸುಳ್ಳು ದಾಖಲೆ, ಸುಳ್ಳು ಸಾಕ್ಷಿ : ನಟರಾಜು ಆರೋಪ 
- 
																	   Manglore22 hours ago Manglore22 hours agoಮಂಗಳೂರು: ಎಸ್ಐಟಿ ಕಚೇರಿಗೆ ಆಗಮಿಸಿದ ಕೇರಳದ ಯೂಟ್ಯೂಬರ್ ಮನಾಫ್ 

 
											 
											 
											 
											 
											