Connect with us

Chamarajanagar

ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹೂಗ್ಯಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮುಖಂಡರುಗಳು ಜೆಡಿಎಸ್ ಪಕ್ಷ ತೊರೆದು ಮಾಜಿ ಶಾಸಕ ಆರ್ ನರೇಂದ್ರ ನೇತೃತ್ವದಲ್ಲಿ ಕಾಂಗ್ರೆಸ್ ಸೇರ್ಪಡೆಯಾದರು.

Published

on

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹೂಗ್ಯಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮುಖಂಡರುಗಳು ಜೆಡಿಎಸ್ ಪಕ್ಷ ತೊರೆದು ಮಾಜಿ ಶಾಸಕ ಆರ್ ನರೇಂದ್ರ ನೇತೃತ್ವದಲ್ಲಿ ಕಾಂಗ್ರೆಸ್ ಸೇರ್ಪಡೆಯಾದರು.

ಪಕ್ಷ ಸೇರ್ಪಡೆ ನಂತರ ಮುಖಂಡ ವೆಂಕಟೇಶ್ ಮಾತನಾಡಿ ಸ್ಥಳೀಯ ಶಾಸಕ ಎಂಆರ್ ಮಂಜುನಾಥ್ ರವರ ಮೇಲೆ ಹಲವು ನಿರೀಕ್ಷೆಗಳನ್ನು ಇಟ್ಟುಕೊಂಡು ಜೆಡಿಎಸ್ ಪಕ್ಷ ಸೇರ್ಪಡೆಯಾಗಿದ್ದೆವು, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಹನೂರು ಕ್ಷೇತ್ರದ ಸಮಗ್ರ ಅಭಿವೃದ್ಧಿಯೇ ನನ್ನ ಗುರಿ, ವಿದ್ಯಾವಂತ ನಿರುದ್ಯೋಗಿ ಯುವಕ ಯುವತಿಯರಿಗೆ ಉದ್ಯೋಗ ದೊರಕಿಸಿ ಕೊಡುವುದೇ ನನ್ನ ಮೊದಲ ಆದ್ಯತೆ ಎಂದು ಇನ್ನಿಲ್ಲದ ಭರವಸೆಗಳನ್ನು ನೀಡಿದ್ದರು. ಆದರೆ ಕಳೆದ ಒಂದು ವರ್ಷದಲ್ಲಿ ಯಾವುದೇ ಅಭಿವೃದ್ಧಿ ಮಾಡಿಲ್ಲ, ರಸ್ತೆ ತುಂಬಾ ದುರಸ್ತಿಗೊಂಡಿರುವುದರಿಂದ ದ್ವಿಚಕ್ರ ವಾಹನಗಳಲ್ಲಿಯೂ ಸಂಚಾರ ಮಾಡುವುದೇ ಕಷ್ಟವಾಗಿದೆ. ಕ್ಷೇತ್ರ ವ್ಯಾಪ್ತಿಯಲ್ಲಿ ಬರಗಾಲವಿದ್ದರೂ ಜಾನುವಾರುಗಳಿಗೆ ಮೇವು, ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಯಾವುದೇ ಕ್ರಮ ಕೈಗೊಂಡಿಲ್ಲ, ನಿರುದ್ಯೋಗಿ ಯುವಕ ಯುವತಿಯರಿಗೆ ಯಾವುದೇ ಉದ್ಯೋಗ ಕಲ್ಪಿಸಿಕೊಡದೇ ಇರುವುದರಿಂದ ಬೇರೆ ಕಡೆ ವಲಸೆ ಹೋಗಿದ್ದಾರೆ, ಇವರು ಕೊಟ್ಟ ಭರವಸೆಯನ್ನು ಈಡೇರಿಸದೆ ಇರುವುದರಿಂದ ಕಾಂಗ್ರೆಸ್ ಪಕ್ಷ ಸೇರ್ಪಡೆ ಆಗುತ್ತಿದ್ದೇವೆ ಎಂದು ತಿಳಿಸಿದರು.

ಮಾಜಿ ಶಾಸಕ ಆರ್ ನರೇಂದ್ರ ಮಾತನಾಡಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದ ಸರ್ಕಾರ, ನಾವು ಬೇರೆಯವರ ರೀತಿ ಇನ್ನಿಲ್ಲದ ಸುಳ್ಳು ಆಶ್ವಾಸಗಳನ್ನು ಕೊಡುವುದಿಲ್ಲ, ಬದಲಾಗಿ ಅಭಿವೃದ್ಧಿ ಕಾಮಗಾರಿಗಳನ್ನು ಮಾಡಿಯೇ ತೀರುತ್ತೇವೆ, ಮುಂದಿನ ದಿನಗಳಲ್ಲಿ ನಿಮ್ಮ ಕಷ್ಟಕ್ಕೆ ಧ್ವನಿಯಾಗಿ ಇರುತ್ತೇನೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸುನಿಲ್ ಬೋಸ್ ರವರಿಗೆ ತಮ್ಮ ಗ್ರಾಮಗಳಲ್ಲಿ ಹೆಚ್ಚಿನ ಮತ ಕೊಡಿಸುವ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ಮತ್ತಷ್ಟು ಶಕ್ತಿ ತುಂಬಬೇಕು ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಹೂಗ್ಯಂ ಗ್ರಾಮದ ಹುಚ್ಚಯ್ಯ, ವೆಂಕಟೇಶ್, ಚಿನ್ನರಾಜು, ಕೃಷ್ಣ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಯಾದರು.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ಮುಕುಂದವರ್ಮ, ಈಶ್ವರ್, ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಚೇತನ್ ದೊರೆರಾಜು, ರಾಮಪುರ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಉದ್ದನೂರು ಸಿದ್ದರಾಜು, ಪಟ್ಟಣ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಮಾದೇಶ್ ಸೇರಿದಂತೆ ಇನ್ನಿತರರು ಹಾಜರಿದ್ದರು.

Continue Reading
Click to comment

Leave a Reply

Your email address will not be published. Required fields are marked *

Chamarajanagar

ಮಲ್ಲಿಕಾರ್ಜುನಸ್ವಾಮಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರವೇಶಾತಿ ಪ್ರಾರಂಭ

Published

on

ಯಳಂದೂರು ಪಟ್ಟಣದ ಮಲ್ಲಿಕಾರ್ಜುನಸ್ವಾಮಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರವೇಶಾತಿ ಪ್ರಾರಂಭಗೊಂಡಿದೆ ಎಂದು ಪ್ರಾಂಶುಪಾಲರಾದ ವಿಜಯ ರವರು ತಿಳಿಸಿದರು

2024-25 ನೇ ಶೈಕ್ಷಣಿಕ ಸಾಲಿನಲ್ಲಿ ರಾಜ್ಯ ಶಿಕ್ಷಣ ನೀತಿಗೆ ಎಸ್ ಇ ಪಿ ಅನುಗುಣವಾಗಿ ಮೂರು ವರ್ಷಗಳ ಬಿ.ಎ ಬಿ.ಕಾಂ. ಹಾಗೂ ಬಿ.ಬಿ.ಎ. ಪದವಿ ಕೋರ್ಸುಗಳು ಹೆಚ್ ಇ ಕೆ , ಹೆಚ್ ಪಿ ಕೆ, ಪಿ ಇ ಎಸ್, ಹೆಚ್ ಎಸ್ ಕೆ, ಈ ಕೋರ್ಸುಗಳ ಪ್ರವೇಶಾತಿಗೆ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಸ್ವೀಕರಿಸಲಾಗುತ್ತಿದು

Continue Reading

Chamarajanagar

ಸಾರ್ವಜನಿಕರು ಸರ್ಕಾರದಿಂದ ಬರುತ್ತಿರುವ ಗೃಹಲಕ್ಷ್ಮಿ, ಶಕ್ತಿ, ಸುಕನ್ಯಾ ಸಮೃದ್ಧಿ ಯೋಜನೆ

Published

on

ಸಾರ್ವಜನಿಕರು ಸರ್ಕಾರದಿಂದ ಬರುತ್ತಿರುವ ಗೃಹಲಕ್ಷ್ಮಿ, ಶಕ್ತಿ, ಸುಕನ್ಯಾ ಸಮೃದ್ಧಿ ಯೋಜನೆ ಸೇರಿದಂತೆ ವಿವಿಧ ಯೋಜನೆಗಳನ್ನು ಬಳಸಿಕೊಂಡು ಆರ್ಥಿಕವಾಗಿ ಸ್ವಾವಲಂಬಿಗಳಾಗಬೇಕು ಎಂದು ನೋಡಲ್ ಅಧಿಕಾರಿ ಸಕಲೇಶ್ವರ್ ಅವರು ತಿಳಿಸಿದರು.

ಅವರು ತಾಲೂಕಿನ ಎರಗಂಬಳ್ಳಿ ಗ್ರಾಮ ಪಂಚಾಯಿತಿ ಮುಂಭಾಗದಲ್ಲಿ ನಡೆದ ಸಾಮಾಜಿಕ ಲೆಕ್ಕ ಪರಿಶೋಧನಾ ಮತ್ತು 14 15ನೇ ಹಣಕಾಸಿನ ಯೋಜನೆ ಗ್ರಾಮ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.

ನರೇಗಾ ಯೋಜನೆ ಮತ್ತು ಸರ್ಕಾರದಿಂದ ಸಾವು ಸಿಗುವಂತಹ ಸವಲತ್ತುಗಳನ್ನು ಪಡೆದುಕೊಂಡು ಆರ್ಥಿಕವಾಗಿ ಮುಂದೆ ಬರಬೇಕು ಎಂದು ತಿಳಿಸಿದರು.

ಸಾಮಾಜಿಕ ಲೆಕ್ಕಪರಿಶೋಧನಾ ಅಧಿಕಾರಿ ನಾರಾಯಣ್ ಮಾತನಾಡಿ ಯರಗಂಬಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಒಟ್ಟು ಗ್ರಾಮ ಪಂಚಾಯತಿ ವತಿಯಿಂದ 119 ಕಾಮಗಾರಿಗಳು, ತೋಟಗಾರಿಕೆ ಇಲಾಖೆ ವತಿಯಿಂದ 9 ಅರಣ್ಯ ಇಲಾಖೆಯಿಂದ ಒಂಬತ್ತು ಕೃಷಿ ಇಲಾಖೆಯಿಂದ ಒಂಬತ್ತು ಕಾಮಗಾರಿಗಳು ಮಾಡಲಾಗಿದ್ದು ಒಟ್ಟು 156 ಕಾಮಗಾರಿಗಳನ್ನು ಮಾಡಲಾಗಿದೆ. ಇದಕ್ಕಾಗಿ ಒಟ್ಟು ಕೂಲಿ ಮತ್ತು 18,24,927 ರೂಪಾಯಿಗಳು ಮತ್ತು ಸಾಮಗ್ರಿ ಮತ್ತು 51,82,599 ರೂಪಾಯಿಗಳು ಸೇರಿ ಒಟ್ಟು ಮೊತ್ತ 70,7,2525 ರೂಪಾಯಿಗಳನ್ನು ಖರ್ಚು ಮಾಡಲಾಗಿದೆ. ಇದಕ್ಕಾಗಿ ಒಟ್ಟು 596 ಮಾನವ ದಿನಗಳನ್ನು ನಿರ್ವಹಿಸಲಾಗಿದೆ ಎಂದು ಸಭೆಗೆ ಮಾಹಿತಿ ನೀಡಿದರು.

ರೇಷ್ಮೆ ಇಲಾಖೆ ಸಾಮಾಜಿಕ ಅರಣ್ಯ ಇಲಾಖೆ, ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ತಮ್ಮ ಇಲಾಖೆ ಯಲ್ಲಿ ಬರುವ ವಿವಿಧ ಸವಲತ್ತುಗಳ ಬಗ್ಗೆ ಮಾಹಿತಿ ನೀಡಿದರು.

ಗ್ರಾಮ ಪಂಚಾಯಿತಿ ಅಧ್ಯಕ್ಷ ಭಾಗ್ಯ, ಸದಸ್ಯರಾದ ಮಲ್ಲು ಸಿದ್ದರಾಜು, ಪಿಡಿಒ ಮಂಜು, ಸಿಬ್ಬಂದಿಗಳಾದ ಇಂದ್ರ ,ಸಿದ್ದರಾಮು,ಅಧಿಕಾರಿಗಳಾದ ರಂಜಿನಿ ಸೇರಿದಂತೆ ಗ್ರಾಮಸ್ಥರು ಹಾಗೂ ಇತರರು ಹಾಜರಿದ್ದರು

Continue Reading

Chamarajanagar

ಪರಿಹಾರ, ನಾಲೆ ಹಾಗೂ ಒಳ ಚರಂಡಿ   ಮುಚ್ಚಿರುವುದು, ಎ ಸಿ ಗೆ ಮನವಿ 

Published

on

ಎಸ್ ಬಿ ಹರೀಶ್ ಸಾಲಿಗ್ರಾಮ

ಸಾಲಿಗ್ರಾಮ ಪಟ್ಟಣದ ತಾಲೂಕು ಕಚೇರಿಗೆ ಆಗಮಿಸಿದ ಉಪ – ವಿಭಾಗಧಿಕಾರಿ ರವರಿಗೆ

ಕೆ – ಶಿಪ್ ರವರು ರಸ್ತೆ ಅಗಲೀಕರಣ ಕಾಮಗಾರಿ ಮಾಡುತ್ತಿದ್ದು, ಭೂಮಿ ಕಳೆದುಕೊಂಡ ಮಾಲೀಕರಿಗೆ ಪರಿಹಾರ ನೀಡಿಲ್ಲ,  ಆದರೂ ಕಾಮಗಾರಿ ಮಾಡುವುದಾಗಿ ಹೇಳುತ್ತಿದ್ದಾರೆ.    ಪಟ್ಟಣದ ಸಮೀಪ ಇರುವ  ಹಾರಂಗಿ ಕಿರು ಕಾಲುವೆಯನ್ನು  ಮುಚ್ಚಿದ್ದು, ಈ ಭಾಗದಲ್ಲಿ ಧನ – ಕರು,

ಜಾನುವಾರುಗಳಿಗೆ ತುಂಬಾ ತೊಂದರೆ ಉಂಟಾಗುತ್ತಿದೆ. ಮತ್ತು ಒಳ ಚರಂಡಿಯನ್ನು ಮುಚ್ಚಿ, ಈ ಭಾಗದಲ್ಲಿ ವಾಸಿಸುತ್ತಿರುವವರಿಗೆ ಹಿಂಸೆ ಆಗುತ್ತಿದೆ. ಕೇಳಲು ಹೋದರೆ    ಹೆದರಿಸುತ್ತಿದ್ದಾರೆ, ಸ್ಥಳ ಪರಿಶೀಲನೆ ಮಾಡಬೇಕು  ಎಂದು ಡಿ ಎಸ್ ಎಸ್  ಜಿಲ್ಲಾ ಸಂಚಾಲಕ ಕಳ್ಳಿಮುದ್ದನಹಳ್ಳಿ ಚಂದ್ರು, ಹುಣಸೂರು ಉಪ – ವಿಭಾಗಾಧಿಕಾರಿ ಮಹಮದ್ ಯಾರಿಸ್ ಸುಮೈ ರ್ ರವರಿಗೆ ಮನವಿ ಸಲ್ಲಿಸಿದರು.

ದೂರು ಸ್ವೀಕರಿಸಿ ಮಾತನಾಡಿದ ಉಪ – ವಿಭಾಗಾಧಿಕಾರಿಗಳು ಪರಿಶೀಲನೆ ಮಾಡಿ ಸಾರ್ವಜನಿಕರಿಗೆ ತೊಂದರೆ ಆಗದ ರೀತಿಯಲ್ಲಿ ಕ್ರಮ ಜರುಗಿಸಿ, ಭೂ ಮಾಲೀಕರಿಗೆ ಪರಿಹಾರ,ಕೊಡಿಸುವ ಭರವಸೆ ನೀಡಿದರು.

ತಹಸೀಲ್ದಾರ್ ನರಗುಂದ, ಉಪ – ತಹಸೀಲ್ದಾರ್ ಮಹೇಶ್,ರೈತ ಮತ್ತು ಕಾರ್ಮಿಕ ಜಿಲ್ಲಾ ಅಧ್ಯಕ್ಷ ಮಂಜುನಾಥ್, ಡಿ ಎಸ್ ಎಸ್ ಜಿಲ್ಲಾ ಸಂಚಾಲಕ ಚಂದ್ರು, ಲಕ್ಕಿಕುಪ್ಪೆ ರಮೇಶ್, ಸ್ಥಳೀಯ ವಾಸಿ ವಿನಯ್, ಹರೀಶ್ ಇನ್ನಿತರರು ಇದ್ದಾರೆ.

Continue Reading

Trending

error: Content is protected !!