State
ವಿಧಾನಸೌಧದ ಗುಮ್ಮಟದಲ್ಲಿ ಬಿರುಕು – ಸಿಎಂ ಗಮನಕ್ಕೆ ತರ್ತೀನಿ ಎಂದ ಸ್ಪೀಕರ್

ಬೆಂಗಳೂರು: ವಿಧಾನಸೌಧದ ಪೂರ್ವ ಭಾಗದ ಗುಮ್ಮಟದಲ್ಲಿ ಬಿರುಕು ಕಾಣಿಸಿಕೊಂಡಿದ್ದು, ಮಾಹಿತಿ ಪಡೆದ ಸ್ಪೀಕರ್ ಯುಟಿ ಖಾದರ್ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೇ ಸಿಎಂ ಗಮನಕ್ಕೆ ತರುವುದಾಗಿಯೂ ಹೇಳಿದ್ದಾರೆ.
ಗುಮ್ಮಟದಲ್ಲಿ ಸಣ್ಣ ಮಟ್ಟದ ಬಿರುಕು ಕಾಣಿಸಿದ್ದು. ಜೋರು ಮಳೆ ಬಂದಾಗ ನೀರು ಸಹ ಲೀಕೇಜ್ ಆಗುತ್ತಿದೆ ಎಂದು ಹೇಳಲಾಗಿತ್ತು. ಈ ಹಿನ್ನೆಲೆಯಲ್ಲಿ ಅಧಿಕಾರಿಗಳ ಜೊತೆ ಖುದ್ದು ಸ್ಪೀಕರ್ ಯು.ಟಿ ಖಾದರ್ ಪರಿಶೀಲನೆ ನಡೆಸಿದ್ದಾರೆ.
ಪರಿಶೀಲನೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವಿಧಾನಸೌಧ ರಾಜಕೀಯ ನಾಯಕರ ಕಟ್ಟಡವಾಗಿರದೇ ಪ್ರವಾಸಿಗರ ಆಕರ್ಷಣೆಯ ಕೇಂದ್ರವೂ ಆಗಿದೆ. ಆದ್ರೆ ದೊಡ್ಡ ಕಟ್ಟಡಗಳನ್ನು ಸರಿಪಡಿಸುವಾಗ ಮತ್ತೊಂದು ಕಡೆ ಸ್ವಲ್ಪ ಹೆಚ್ಚು-ಕಡಿಮೆ ಆಗಬಹುದು. ಗುಮ್ಮಟ ನಮ್ಮ ವ್ಯಾಪ್ತಿಗೆ ಬರುವುದಿಲ್ಲ, ಫ್ಲೋರ್ಗಳು ಮಾತ್ರ ವ್ಯಾಪ್ತಿಗೆ ಬರುತ್ತದೆ. ಆದರೂ ಈ ವಿಚಾರವನ್ನ ಸಿಎಂ ಗಮನಕ್ಕೆ ತರುತ್ತೇನೆ ಎಂದಿದ್ದಾರೆ.
ನಮ್ಮ ವ್ಯಾಪ್ತಿಯಲ್ಲಿನ ಫ್ಲೋರ್ಗಳನ್ನು ಸರಿಪಡಿಸಿದ್ದೇನೆ. ಡಿಪಿಆರ್ ಹಾಗೂ ಲೋಕೋಪಯೋಗಿ ಇಲಾಖೆಯವರ ವ್ಯಾಪ್ತಿಗೆ ಗುಮ್ಮಟ ಬರುತ್ತದೆ. ಅವರ ಗಮನಕ್ಕೆ ತಂದು ಸರಿಪಡಿಸಲು ಹೇಳುತ್ತೇನೆ. ಇದು ಬಹಳ ವರ್ಷಗಳ ಹಳೆಯ ಕಟ್ಟಡ. ಕೆಲವೊಂದು ಲೋಪದೋಷ ಆಗಿರಬಹುದು, ಆದಷ್ಟು ಬೇಗ ಸಿಎಂಗೆ ವಿಚಾರ ತಿಳಿಸುತ್ತೇನೆ ಎಂದು ಆಶ್ವಾಸನೆ ನೀಡಿದ್ದಾರೆ.
Mandya
ವಿರೋಧ ಪಕ್ಷಗಳು ಸಾವಿನಲ್ಲಿ ರಾಜಕೀಯ ಮಾಡೋದನ್ನು ಬಿಡಬೇಕು: ಎನ್.ಚಲುವರಾಯಸ್ವಾಮಿ

ಬೆಂಗಳೂರು: ವಿರೋಧ ಪಕ್ಷಗಳು ಸಾವಿನಲ್ಲೂ ರಾಜಕೀಯ ಮಾಡೋದನ್ನೂ ಬಿಡಬೇಕು ಎಂದು ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ನಾಯಕರಿಗೆ ಸಚಿವ ಎನ್.ಚಲುವರಾಯಸ್ವಾಮಿ ತಿರುಗೇಟು ನೀಡಿದ್ದಾರೆ.
ಬೆಂಗಳೂರಿನಲ್ಲಿ ಇಂದು ಎಂ.ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಳೆ(ಜೂ.17) ಪ್ರತಿಭಟನೆಯ ಬಗ್ಗೆ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಆದ ಘಟನೆಯ ಬಗ್ಗೆ ದುಃಖ ಇದೆ. ಈ ಪ್ರಕರಣದಿಂದ ರಾಜ್ಯ ಸರ್ಕಾರಕ್ಕೆ ನೋವು ತಂದಿದೆ. ಎಲ್ಲಿ ತಪ್ಪಾಗಿದೆ ಎಂದು ಕ್ರಮ ಆಗಿದೆ. ಅಲ್ಲದೇ ಮೃತರ ಕುಟುಂಬಗಳಿಗೆ 25 ಲಕ್ಷ ರೂ. ಪರಿಹಾರ ನೀಡಲಾಗಿದೆ ಎಂದು ಹೇಳಿದ್ದಾರೆ.
ನಮ್ಮ ರಾಜ್ಯದಲ್ಲಿ ಎಲ್ಲಿ ಏನೇ ತೊಂದರೆಯಾದರೂ ಅದು ಸರ್ಕಾರದ ಜವಾಬ್ದಾರಿ ಆಗಿರುತ್ತದೆ. ಅಹಮದಾಬಾದ್ ವಿಮಾನ ಅಪಘಾತದ ಜವಾಬ್ದಾರಿಯನ್ನು ಯಾರು ತೆಗೆದುಕೊಳ್ಳುತ್ತಾರೆ. ಉತ್ತರಪ್ರದೇಶದ ಕುಂಭಮೇಳದಲ್ಲಿ ಕಾಲ್ತುಳಿತವಾಗಿ ಸಾವಾಗಿರುವುದಕ್ಕೆ ಯಾರು ಜವಾಬ್ದಾರಿ ತೆಗೆದುಕೊಂಡಿದ್ದರು. ನಾವೂ ಈ ರಾಜ್ಯದಲ್ಲಿ ಅಭಿವೃದ್ಧಿ ಕೆಲಸವನ್ನು ಮಾಡುತ್ತಿದ್ದೇವೆ. ಅದನ್ನು ವಿರೋಧ ಪಕ್ಷಗಳಿಗೆ ಸಹಿಸಿಕೊಳ್ಳಲು ಆಗುತ್ತಿಲ್ಲ. ಅದಕ್ಕೆ ಹೀಗೆಲ್ಲಾ ಪ್ರತಿಭಟನೆ ಮಾಡುತ್ತಿದ್ದಾರೆ. ಅವರ ಪಾಡಿಗೆ ಅವರು ಮಾಡಿಕೊಳ್ಳಲಿ ನಾವು ಅಡ್ಡಿಪಡಿಸುವುದಿಲ್ಲ ಎಂದಿದ್ದಾರೆ.
ನಾವೂ ಕಾಲ್ತುಳಿತ ಘಟನೆಯನ್ನು ಒಪ್ಪುವುದಿಲ್ಲ. ಮುಂದೆ ಹೀಗೆ ಆಗದಂತೆ ಏನು ಮಾಡಬೇಕೋ ಅದನ್ನು ಸರ್ಕಾರ ಮಾಡುತ್ತದೆ. ಹಲವು ಕಡೆ ಇಂತಹ ಘಟನೆ ನಡೆದಿದೆ. ನಟ ಡಾ.ರಾಜ್ ಕುಮಾರ್ ಸಾವಿನ ಸಮಯದಲ್ಲಿ ಕಾಲ್ತುಳಿತ ಆಗಿದ್ದಾಗ ಕುಮಾರಸ್ವಾಮಿ ಹೊಣೆ ಹೊತ್ತರಾ? ವಿಪಕ್ಷಗಳು ಸಾವಿನಲ್ಲೂ ರಾಜಕೀಯ ಮಾಡುತ್ತಾರೆಂದು ನನಗೆ ತಿಳಿದಿರಲಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.
State
SSC ಯಿಂದ 14 ಸಾವಿರಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿ : ಅರ್ಜಿ ಸಲ್ಲಿಸಲು ಯಾರು ಅರ್ಹರು?

SSC CGL Recruitment 2025 – ಸ್ಟಾಪ್ ಸೆಲೆಕ್ಷನ್ ಕಮಿಷನ್ ಇಲಾಖೆಯಿಂದ ಭಾರತ ದೇಶಾದ್ಯಂತ ೧೪ ಸಾವಿರಕ್ಕೂ ಹೆಚ್ಚು ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆ ಹೊರಡಿಸಿ ಅರ್ಜಿ ಆಹ್ವಾನಿಸಲಾಗಿದೆ.
ಇವು ಗ್ರೂಪ್ ಬಿ ಹಾಗೂ ಗ್ರೂಪ್ ಸಿ ಹುದ್ದೆಗಳಾಗಿದ್ದು, ಅಸಿಸ್ಟೆಂಟ್ ಸೆಕ್ಷನ್ ಆಫೀಸರ್, ಇನ್ಸ್ಪೆಕ್ಟರ್, ಆಡಿಟರ್ ಅಕೌಂಟೆಂಟ್ ಸೇರಿದಂತೆ ಹಲವಾರು ಹುದ್ದೆಗಳನ್ನು ಈ ನೇಮಕಾತಿಯಲ್ಲಿ ಭರ್ತಿ ಮಾಡಿಕೊಳ್ಳಲಾಗುತ್ತಿದೆ.
ನೇಮಕಾತಿಯ ವಿವರ :
• ಒಟ್ಟು ಹುದ್ದೆಗಳ ಸಂಖ್ಯೆ – 14,582
• ಹುದ್ದೆಗಳ ವರ್ಗ – ಗ್ರೂಪ್ ಸಿ, ಗ್ರೂಪ್ ಬಿ
ಅರ್ಜಿ ಸಲ್ಲಿಸಲು ಯಾರು ಅರ್ಹರು?
ಈ ಹುದ್ದೆಗಳಿಗಾಗಿ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಯಾವುದಾದರೂ ಒಂದು ವಿಷಯದಲ್ಲಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಶಿಕ್ಷಣ ಮುಗಿಸಿರಬೇಕು. ಯಾವ ಹುದ್ದೆಗೆ ಯಾವ ಪದವಿ ಮುಗಿಸಿರಬೇಕು ಎಂಬ ಅರ್ಹತೆಗಳನ್ನು ತಿಳಿದುಕೊಳ್ಳಲು ಸ್ಟಾಪ್ ಸೆಲೆಕ್ಷನ್ ಕಮಿಷನ್ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಪರಿಶೀಲಿಸಿ.
ಅದೇ ರೀತಿ ವಯೋಮಿತಿ ಅರ್ಹತೆ ನೋಡುವುದಾದರೆ ನಿಗದಿಪಡಿಸಿದ ದಿನಾಂಕಕ್ಕೆ ಅಭ್ಯರ್ಥಿಗಳು 27ರಿಂದ 32 ವರ್ಷದ ಒಳಗೆ ಇರಬೇಕು.
ಆಯ್ಕೆ ಪ್ರಕ್ರಿಯೆ?
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಆನ್ಲೈನ್ ಮೂಲಕ ಕಂಪ್ಯೂಟರ್ ಆಧಾರಿತ ಪರೀಕ್ಷೆ ನಡೆಸಲಾಗುತ್ತದೆ. ಒಟ್ಟು ಎರಡು ಹಂತದಲ್ಲಿ ಪರೀಕ್ಷೆ ಇರುತ್ತದೆ.
ಕರ್ನಾಟಕ ರಾಜ್ಯದಲ್ಲಿ ಪರೀಕ್ಷಾ ಕೇಂದ್ರಗಳು : ಬೆಳಗಾವಿ ಬೆಂಗಳೂರು ಹುಬ್ಬಳ್ಳಿ ಕಲಬುರಗಿ ಮೈಸೂರು ಶಿವಮೊಗ್ಗ ಮಂಗಳೂರು ಮತ್ತು ಉಡುಪಿ.
ಅರ್ಜಿ ಸಲ್ಲಿಸುವುದು ಹೇಗೆ?
ಅರ್ಹತೆ ಹೊಂದಿರುವ ಅಭ್ಯರ್ಥಿಗಳು ಸ್ಟಾಪ್ ಸೆಲೆಕ್ಷನ್ ಕಮಿಷನ ಅಧಿಕೃತ ಜಾಲತಾಣ www.ssc.gov.in ಗೆ ಭೇಟಿ ನೀಡಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 04 ಜುಲೈ 2025
State
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ಪ್ರಕರಣ: ತುರ್ತು ಅಧಿವೇಶನ ಕರೆಯಲು ಪತ್ರ ಬರೆದ ಆರ್.ಅಶೋಕ್

ಬೆಂಗಳೂರು: ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ಪ್ರಕರಣಕದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಐಪಿಎಲ್ ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಆಗ್ರಹಿಸಿ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದೇನೆ ಎಂದು ತಿಳಿಸಿದ್ದಾರೆ.
ಪತ್ರದಲ್ಲಿ ಏನಿದೆ?
ಈ ತುರ್ತು ಅಧಿವೇಶನವು ರಾಜ್ಯ ಸರ್ಕಾರ ಬದ್ಧತೆಯನ್ನು ಜನರಿಗೆ ತೋರಿಸಲು ಮತ್ತು ದುರಂತದಿಂದ ಕಲಿತ ಪಾಠಗಳ ಆಧಾರದಲ್ಲಿ ಭವಿಷ್ಯದಲ್ಲಿ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಸಹಾಯಕವಾಗಲಿದೆ. ಹಾಗೆಯೇ ಘಟನೆಗೆ ಕಾರಣಗಳೇನು ಎಂಬುದನ್ನು ಜನತೆಗೆ ತಿಳಿಸಿ, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕಿದೆ ಎಂದು ಅವರು ಪತ್ರದಲ್ಲಿ ಒತ್ತಾಯಿಸಿದ್ದಾರೆ.
ಸತ್ಯ ಮರೆಮಾಚಲು 3 ರೀತಿಯ ತನಿಖೆ
ಈ ಘಟನೆಗೆ ಸಂಬಂಧಿಸಿದಂತೆ ಆಡಳಿತದಲ್ಲಿ ಆಗಿರುವ ಲೋಪಗಳು, ಘಟನೆ ನಂತರ ಸರ್ಕಾರದ ಕ್ರಮಗಳು ಅನೇಕ ಸಂಶಯಗಳನ್ನು ಹುಟ್ಟುಹಾಕಿದೆ. ಕಾಲ್ತುಳಿತಕ್ಕೆ ಕಾರಣರಾದ ಬಲಾಢ್ಯರನ್ನು ರಕ್ಷಿಸಲಾಗುತ್ತಿದೆ. ಸತ್ಯವನ್ನು ಮರೆಮಾಚಲು 3 ರೀತಿಯ ತನಿಖೆಗಳನ್ನು ಮಾಡಲಾಗುತ್ತಿದೆ. ಅಸಹಾಯಕ ಅಧಿಕಾರಿಗಳನ್ನು ಬಲಿಪಶು ಮಾಡಲಾಗಿದೆ ಎಂಬ ಚರ್ಚೆಗಳು ಸಾರ್ವಜನಿಕ ವಲಯದಲ್ಲಿ ನಡೆಯುತ್ತಿವೆ ಎಂದು ಆರೋಪ ಮಾಡಿದ್ದಾರೆ.
ಭವಿಷ್ಯದಲ್ಲಿ ಇಂತಹ ದುರ್ಘಟನೆಯನ್ನು ತಡೆಗಟ್ಟಲು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸಮಗ್ರ ಚರ್ಚೆಯ ಅಗತ್ಯವಿದೆ. ಇದಕ್ಕಾಗಿ ಮೂರು ದಿನಗಳ ತುರ್ತು ಅಧಿವೇಶನ ಕರೆಯಬೇಕಿದೆ. ಕಾಲ್ತುಳಿತ ಘಟನೆಗೆ ಕಾರಣವಾದ ಸಂದರ್ಭಗಳ ಸಂಪೂರ್ಣ ತನಿಖೆ, ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಗುಂಪು ನಿಯಂತ್ರಣ ಮತ್ತು ಸುರಕ್ಷತಾ ಕ್ರಮಗಳ ಬಲವರ್ಧನೆ, ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ಹಾಗೂ ಸಂತ್ರಸ್ತ ಕುಟುಂಬಗಳಿಗೆ ಪರಿಹಾರದ ವ್ಯವಸ್ಥೆ, ಭವಿಷ್ಯದಲ್ಲಿ ಇಂತಹ ಘಟನೆಗಳನ್ನು ತಪ್ಪಿಸಲು ರಾಜ್ಯ ಸರ್ಕಾರದ ಯೋಜನೆಗಳ ಕುರಿತು ಅಧಿವೇಶನದಲ್ಲಿ ಚರ್ಚಿಸಬೇಕಿದೆ ಎಂದು ಆಗ್ರಹಿಸಿದ್ದಾರೆ.
ಈ ತುರ್ತು ಅಧಿವೇಶನವು ರಾಜ್ಯ ಸರ್ಕಾರ ಬದ್ಧತೆಯನ್ನು ಜನರಿಗೆ ತೋರಿಸಲು ಮತ್ತು ದುರಂತದಿಂದ ಕಲಿತ ಪಾಠಗಳ ಆಧಾರದಲ್ಲಿ ಭವಿಷ್ಯದಲ್ಲಿ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಸಹಾಯಕವಾಗಲಿದೆ. ಹಾಗೆಯೇ ಘಟನೆಗೆ ಕಾರಣಗಳೇನು ಎಂಬುದನ್ನು ಜನತೆಗೆ ತಿಳಿಸಿ, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕಿದೆ ಎಂದು ಪತ್ರದಲ್ಲಿ ಹೇಳಿದ್ದಾರೆ.
-
Uncategorized24 hours ago
ಸೆಕ್ಯುರಿಟಿ ಸಿಬ್ಬಂದಿಗಳಿಂದ ಯುವಕನ ಮೇಲೆ ಹಲ್ಲೆ ಪ್ರಕರಣ: ಪೊಲೀಸ್ ಕಾನ್ಸ್ಟೇಬಲ್ ಸೇರಿ ಮೂವರ ವಿರುದ್ದ ಎಫ್ಐಆರ್ ದಾಖಲು
-
Hassan11 hours ago
ಹಾಸನದ ಖಾಸಗಿ ಶಾಲಾ-ಕಾಲೇಜಿಗೆ ಬಾಂಬ್ ಹಾಕುವ ಬೆದರಿಕೆ
-
State24 hours ago
SSC ಯಿಂದ 14 ಸಾವಿರಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿ : ಅರ್ಜಿ ಸಲ್ಲಿಸಲು ಯಾರು ಅರ್ಹರು?
-
Kodagu9 hours ago
ಪಂಚಾಯತಿಯಲ್ಲಿ ಶೇ.25 ನಿಧಿಯಲ್ಲಿ ಹೊಲಿಗೆ ಯಂತ್ರ ವಿತರಣೆ.
-
Mandya5 hours ago
ಕೆ.ಆರ್.ಪೇಟೆ ದೇವಿರಮ್ಮಣ್ಣಿ ಕೆರೆಯಲ್ಲಿ ಬಲೆಗೆ ಬಿದ್ದ ಬಂಗಾರ ಬಣ್ಣದ ಗೌರಿ ಮೀನು
-
Chikmagalur12 hours ago
ಕೊಪ್ಪ ತಾಲ್ಲೂಕಿನಲ್ಲಿ ಬೃಹತ್ ಗಾತ್ರದ ಮರ ಉರುಳಿ ರಸ್ತೆ ಬಂದ್
-
Kodagu12 hours ago
ಕೊಡವರ ಅಭಿವೃದ್ಧಿಗೆ ಕಾಂಗ್ರೆಸ್ ಕೊಡುಗೆ ಅಪಾರ
-
Chikmagalur10 hours ago
ಮರ ಬಿದ್ದು ಬೈಕ್ ಸವಾರ ದು*ರ್ಮರಣ