Connect with us

Mandya

ವಿದ್ಯಾರ್ಥಿನಿ ನೇಹಾ ಹಂತಕನಿಗೆ ಗಲ್ಲು ಶಿಕ್ಷೆಗೆ ಆಗ್ರಹಿಸಿ ಪ್ರತಿಭಟನೆ

Published

on

ಮಂಡ್ಯ : ಹುಬ್ಬಳ್ಳಿಯಲ್ಲಿ ವಿದ್ಯಾರ್ಥಿನಿ ನೇಹಾ ಹಿರೇಮಠ ರನ್ನ ಬರ್ಬರವಾಗಿ ಹತ್ಯೆ ಮಾಡಿರುವ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸುವಂತೆ ಒತ್ತಾಯಿಸಿ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಮಂಡ್ಯದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು.

ನಗರದ ಜಯಚಾಮರಾಜೇಂದ್ರ ಒಡೆಯರ್ ವೃತ್ತದಿಂದ ಮೆರವಣಿಗೆ ಹೊರಟ ಜಾಗೃತ ಹಿಂದೂ ವೇದಿಕೆ, ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ಹಾಗೂ ಬಿಜೆಪಿ ಪಕ್ಷದ ಕಾರ್ಯಕರ್ತರು
” ಜಸ್ಟಿಸ್ ಫಾರ್ ನೇಹಾ ” ಘೋಷಣೆ ಕೂಗುತ್ತಾ ಸಾಗಿದರು.

ಕಾಂಗ್ರೆಸ್ ಸರ್ಕಾರ, ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹ ಸಚಿವ ಜಿ.ಪರಮೇಶ್ವರ್ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ಜಿಲ್ಲಾಧಿಕಾರಿ ಕಚೇರಿ ಬಳಿ ಜಮಾವಣೆಗೊಂಡು ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣಕ್ಕೆ ಆಕ್ರೋಶ ವ್ಯಕ್ತಪಡಿಸಿದರು. ಜೊತೆಗೆ ವೈಯಕ್ತಿಕ ಕಾರಣದಿಂದ ವಿದ್ಯಾರ್ಥಿನಿ ನೇಹಾ ಹತ್ಯೆಯಾಗಿದೆ ಎಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಲವ್ ಜೆಹಾದ್ ಅಲ್ಲ, ಇಂತಹ ಘಟನೆಗಳು ಆಕಸ್ಮಿಕವಾಗಿ ನಡೆಯುತ್ತವೆ ಎಂದಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್ ವಿರುದ್ಧ ಘೋಷಣೆಗಳ ಮೂಲಕ ಕಿಡಿಕಾರಿದರು.

ಹುಬ್ಬಳ್ಳಿಯ ಬಿ.ವಿ.ಬಿ ಕಾಲೇಜಿನಲ್ಲಿ ನೇಹಾ ಹಿರೇಮಠ್ ರನ್ನ ಫಯಾಜ್ ಎಂಬಾತ 9 ಬಾರಿ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ್ದಾನೆ, ಕಾಂಗ್ರೆಸ್ ಸರ್ಕಾರದ ಅತೀವ ಮುಸ್ಲೀಂ ಓಲೈಕೆಯಿಂದಾಗಿ ಜೆಹಾದಿ ಕೃತ್ಯ ಹೆಚ್ಚಾಗುತ್ತಿದೆ. ಸಮಾಜಘಾತಕ ಶಕ್ತಿಗಳಿಗೆ ಪೊಲೀಸ್‌ ಠಾಣೆಗಳಲ್ಲಿ ರಾಜ ಮರ್ಯಾದೆ ಸಿಗುತ್ತಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ. ಇದಕ್ಕೆ ಈ ಪ್ರಕರಣವೇ ಸಾಕ್ಷಿ ಎಂದು ಆರೋಪಿಸಿದರು.

ಹತ್ಯೆಯಾದ ವಿದ್ಯಾರ್ಥಿನಿ ಹುಬ್ಬಳ್ಳಿ – ಧಾರವಾಡ ಮಹಾನಗರ ಪಾಲಿಕೆ ಕಾಂಗ್ರೆಸ್‌ ಸದಸ್ಯ ನಿರಂಜನಯ್ಯ ಹಿರೇಮಠ ಪುತ್ರಿಯಾಗಿದ್ದು, ಅಧಿಕಾರಸ್ಥರ ಮಕ್ಕಳಿಗೆ ಹೀಗಾದರೆ ಇನ್ನು ಸಾಮಾನ್ಯರ ಗತಿ ಏನು. ಇಲ್ಲಿ ಯಾರು ಸುರಕ್ಷಿತವಾಗಿದ್ದಾರೆ ಎಂದು ಪ್ರಶ್ನಿಸಿದರು.

ಫಯಾಜ್ ನಿಜವಾಗಿಯೂ ಪ್ರೀತಿ ಮಾಡುತ್ತಿದ್ದರೆ ಇಂತ ದುಷ್ಕೃತ್ಯಕ್ಕೆ ಕೈಹಾಕುತ್ತಿರಲಿಲ್ಲ. ಪ್ರೀತಿ, ಪ್ರೇಮದ ಬಲೆ ಬೀಸಿ ಹಿಂದು ಯುವತಿಯರನ್ನು ಜಾಲಕ್ಕೆ ಸಿಲುಕಿಸುವ ಪ್ರಸಂಗಗಳು ಆಗಾಗ ನಡೆಯುತ್ತಿವೆ. ಅದರಂತೆ ನೇಹಾ ಪ್ರಕರಣವೂ ಲವ್ ಜಿಹಾದ್‌ನಂತೆ ಗೋಚರಿಸುತ್ತಿದೆ. ಹಾಗಾಗಿ ಸೂಕ್ತ ತನಿಖೆ ನಡೆಯಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ರಾಜ್ಯದಲ್ಲಿ ಇಂತಹ ಹತ್ಯೆಗಳು ನಡೆಯಬಾರದು. ಮತ್ತೆ ಮರುಕಳಿಸದಂತೆ ಸರ್ಕಾರ ಎಚ್ಚರಿಕೆ ವಹಿಸಬೇಕು. ದುಷ್ಕೃತ್ಯ ಮಾಡಿರುವವರನ್ನು ಎನ್ ಕೌಂಟರ್ ಮಾಡುವಂತ ಕಾನೂನು ಜಾರಿಗೊಳ್ಳಬೇಕು. ನೇಹಾ ಕೊಲೆ ಮಾಡಿದ ಆರೋಪಿಯನ್ನು ಗಲ್ಲು ಶಿಕ್ಷೆಗೆ ಒಳಪಡಿಸಬೇಕು ಎಂದು ಒತ್ತಾಯಿಸಿದರು.

ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ಜಿಲ್ಲಾ ಸಂಚಾಲಕಿ ಸುಗುಣ, ಸುಶ್ಮಿತಾ, ಉಲ್ಲಾಸ್, ಜಾಗೃತ ಹಿಂದೂ ವೇದಿಕೆಯ ಸುರೇಶ್,ಎಂ ವಸಂತ್ ಕುಮಾರ್ ಬಿಜೆಪಿ ಜಿಲ್ಲಾಧ್ಯಕ್ಷ ಡಾ.ಇಂದ್ರೇಶ್, ಉಪಾಧ್ಯಕ್ಷ ಟಿ.ಶ್ರೀಧರ್, ಮುಖಂಡರಾದ ಅಬ್ಬಾಸ್ ಆಲಿ ಬೋಹ್ರಾ, ಉಮೇಶ್, ಇಂಡುವಾಳು ಸಚ್ಚಿದಾನಂದ, ಬಿಜೆಪಿ ಜಿಲ್ಲಾಧ್ಯಕ್ಷೆ ಮಂಜುಳಾ ನವೀನ್, ಶ್ರೀರಾಮಗಪಟ್ಟಣ ಜಯಲಕ್ಷ್ಮಿ, ಅರವಿಂದ್, ಸಿ.ಟಿ ಮಂಜುನಾಥ್, ಬಿ.ಟಿ ಶಿವಲಿಂಗಯ್ಯ, ನಿತ್ಯಾನಂದ ನೇತೃತ್ವ ವಹಿಸಿದ್ದರು.

Continue Reading
Click to comment

Leave a Reply

Your email address will not be published. Required fields are marked *

Mandya

ಮಂಡ್ಯ ಪೋಲೀಸರಿಂದ 17 ಕೆಜಿ ಮಾದಕ ವಸ್ತು ನಾಶ

Published

on

ಮಂಡ್ಯ: ಮಂಡ್ಯ ಜಿಲ್ಲಾ ಪೊಲೀಸ್ ವತಿಯಿಂದ ಎನ್.ಡಿ.ಪಿ.ಎಸ್ ಕಾಯ್ದೆಯಡಿ 2024 ಮತ್ತು 2025 ನೇ ಇಸವಿಯ ಈವರೆಗೆ ವರದಿಯಾಗಿದ್ದ 19 ಪ್ರಕರಣಗಳಲ್ಲಿ ಅಮಾನತ್ತು ಪಡಿಸಿಕೊಂಡು ಸುಮಾರು 3,60,460 ರೂ. ಮೌಲ್ಯದ 17 ಕೆ.ಜಿ 613 ಗ್ರಾಂ. ಗಾಂಜಾವನ್ನು ನಾಶಪಡಿಸಲಾಗಿದೆ.

ಎನ್.ಡಿ.ಪಿ.ಎಸ್ ಕಾಯ್ದೆ ಪ್ರಕರಣಗಳಲ್ಲಿ ಅಮಾನತ್ತು ಪಡಿಸಿಕೊಂಡಿರುವ ಮಾದಕ ವಸ್ತುಗಳನ್ನು Drug Disposal Committee ವತಿಯಿಂದ ನಾಶಪಡಿಸಿದ್ದಾರೆ.

ಮಂಡ್ಯ ಜಿಲ್ಲಾ ಡ್ರಗ್ಸ್ ಡಿಸ್ಪೋಸಲ್ ಸಮಿತಿ ಮುಖಾಂತರ ನಾಶಪಡಿಸಲು ನ್ಯಾಯಾಲಯವು ಆದೇಶಿಸಿ ಸಮಿತಿಗೆ ನೀಡಿತ್ತು. ಅದರಂತೆ ಒಟ್ಟು 17 ಕೆ.ಜಿ 613 ಗ್ರಾಂ ಮಾದಕ ವಸ್ತು(ಗಾಂಜಾ)ವನ್ನು ಮಂಡ್ಯ ಜಿಲ್ಲಾ ಪೊಲೀಸ್ ಅಧೀಕ್ಷಕರು ಮತ್ತು Drug Disposal Committee ಮಂಡ್ಯ ಜಿಲ್ಲೆ ಅಧ್ಯಕ್ಷ ಮಲ್ಲಿಕಾರ್ಜುನ ಬಾಲದಂಡಿ ಹಾಗೂ ಸಮಿತಿಯ ಸದಸ್ಯರ ಸಮಕ್ಷಮದಲ್ಲಿ ನಿಯಮಾನುಸಾರ ಬುಧವಾರ (ಜ.22) ಮೈಸೂರು ಜಿಲ್ಲೆ, ಜಯಪುರ ಹೋಬಳಿಯ ಗುಚ್ಚೇನಹಳ್ಳಿ ಗ್ರಾಮದ M/S GIPS Bio-Tech Incinerator waste management ನಲ್ಲಿ ನಾಶಪಡಿಸಲಾಗಿರುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

Continue Reading

Mandya

ಜ. 24 ರಿಂದ 28 ರವರೆಗೆ ಮಂಡ್ಯದಲ್ಲಿ ಫಲಪುಷ್ಪ ಪ್ರದರ್ಶನ : ಶೇಖ್ ತನ್ವೀರ್ ಅಸೀಫ್

Published

on

ಮಂಡ್ಯ : ಜಿಲ್ಲಾ ಪಂಚಾಯತ್, ತೋಟಗಾರಿಕಾ ಸಂಘ, ತೋಟಗಾರಿಕೆ ಇಲಾಖೆ ಇವರ ಸಹಯೋಗದಲ್ಲಿ “ಪ್ರತಿ ತುತ್ತಿಗೂ ರೈತರನ್ನು ಸ್ಮರಿಸೋಣ” ಎಂಬ ಶೀರ್ಷಿಕೆಯಡಿ ಜನವರಿ 24 ರಿಂದ 28 ರವರೆಗೆ ನಗರದ ತೋಟಗಾರಿಕೆ ಇಲಾಖೆ ಆವರಣದಲ್ಲಿ ಫಲಪುಷ್ಪ ಪ್ರದರ್ಶನ-2025 ಉದ್ಘಾಟನಾ ಕರರ್ಯಕ್ರಮ ನಡೆಯಲಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸೀಫ್ ಅವರು ತಿಳಿಸಿದರು.

ತೊಟಗಾರಿಕೆ ಇಲಾಖೆ ಆವರಣದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಐದು ದಿನಗಳ ಕಾಲ ನಡೆಯುವ ಜಿಲ್ಲಾ ಮಟ್ಟದ ಫಲಪುಷ್ಪ ಪ್ರದರ್ಶನಕ್ಕೆ ಜಿಲ್ಲೆಯ ರೈತರು, ಸಾರ್ವಜನಿಕರು, ನಾಗರೀಕರು ಹಾಗೂ ಶಾಲಾ ಕಾಲೇಜು ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಫಲಪುಷ್ಪ ಪ್ರದರ್ಶನ ಯಶಸ್ವಿಗೆ ಸಹಕರಿಸಬೇಕೆಂದು ಮನವಿ ಮಾಡಿದರು.

ತೋಟಗಾರಿಕೆ ಕಚೇರಿ ಆವರಣ ಹಾಗೂ ಕಾವೇರಿ ಉದ್ಯಾನವನದಲ್ಲಿ ಮನಸೂರೆಗೊಳ್ಳುವ ವಿವಿಧ ಹೂ ಅಲಂಕಾರಿಕ ಕುಂಡಗಳ ಜೋಡಣೆ, ವಿವಿಧ ತರಕಾರಿ ಬೆಳೆಗಳು ಹಾಗೂ ಪೌಷ್ಠಿಕ ಕೈತೋಟ ಮಾದರಿ ಹಾಗೂ ತರಕಾರಿ ಕೆತ್ತನೆ ಪ್ರದರ್ಶನ ಮತ್ತು ಜಿಲ್ಲೆಯ ತೋಟಗಾರಿಕೆ ಬೆಳೆಗಳ ವೈವಿದ್ಯತೆಯ ಮಾದರಿಗಳ ಪ್ರದರ್ಶನ ಹಾಗೂ ರೈತರಿಂದ ಗ್ರಾಹಕರಿಗೆ ನೇರ ಮಾರಾಟ ಮತ್ತು ವಿವಿಧ ಅಭಿವೃದ್ಧಿ ಇಲಾಖೆಗಳ ಕಾರ್ಯಕ್ರಮಗಳ ಸಮಗ್ರ ಮಾಹಿತಿಯನ್ನು ಫಲಪುಷ್ಪ ಪ್ರದರ್ಶನದಲ್ಲಿ ನೀಡಲಾಗುವುದು ಎಂದರು.

ಪ್ರತಿ ದಿನ ಬೆಳಗ್ಗೆ 10 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ಫಲಪುಷ್ಪ ಪ್ರದರ್ಶನ ವೀಕ್ಷಿಸಲು ಅವಕಾಶ ಕಲ್ಪಿಸಲಾಗಿದೆ. ಪ್ರತಿ ದಿನ ಸಂಜೆ 6 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ಸಾಂಸ್ಕೃತಿಕ ಹಾಗೂ ಮನರಂಜನಾ ಕಾರ್ಯಕ್ರಮ ಏರ್ಪಡಿಸಲಾಗಿದೆ. ವಯಸ್ಕರಿಗೆ ಟಿಕೆಟ್ ದರ 30, 6-12 ವರ್ಷದ ಮಕ್ಕಳಿಗೆ 20 ಹಾಗೂ ಸಮವಸ್ತ್ರ ಧರಿಸಿ ಬರುವ ಶಾಲಾ ಮಕ್ಕಳ ಗುಂಪುಗಳಿಗೆ ಹಾಗೂ 6 ವರ್ಷದೊಳಗಿನ ಮಕ್ಕಳಿಗೆ ಪ್ರವೇಶ ಉಚಿತ ಎಂದರು.

ಸುದ್ದಿಗೋಷ್ಠಿಯಲ್ಲಿ ತೋಟಗಾರಿಕೆ ಇಲಾಖೆ ಉಪನಿರ್ದೇಶಕಿ ರೂಪಶ್ರಿ ಕೆ.ಎನ್., ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕಿ ಬಿ.ಎನ್.ಸುವೇದ, ಜಿಲ್ಲಾ ತೋಟಗಾರಿಕೆ ಸಂಘದ ಜಂಟಿ ಕಾರ್ಯದರ್ಶಿ ಎಸ್.ಪಿ.ಶ್ರೀಧರ್ ಹಾಗೂ ನಿರ್ದೇಶಕರಾದ ಎಂ.ಆರ್.ಅರವಿಂದ್ ಉಪಸ್ಥಿತರಿದ್ದರು.

Continue Reading

Mandya

ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ ಅವರಿಗೆ ಅತ್ಯುತ್ತಮ ಜಿಲ್ಲಾ ಚುನಾವಣಾಧಿಕಾರಿ ಪ್ರಶಸ್ತಿ

Published

on

ಮಂಡ್ಯ : ಚುನಾವಣಾ ಆಯೋಗವು ಮಂಡ್ಯ ಜಿಲ್ಲೆಯ ಜಿಲ್ಲಾಧಿಕಾರಿ ಡಾ.ಕುಮಾರ ಅವರಿಗೆ 2024-25 ನೇ ಸಾಲಿನ ಅತ್ಯುತ್ತಮ ಜಿಲ್ಲಾ ಚುನಾವಣಾಧಿಕಾರಿಗಳು ಎಂದು ಪ್ರಶಸ್ತಿ ಪ್ರಕಟಿಸಿದೆ.

ಜಿಲ್ಲಾಧಿಕಾರಿಗಳಿಗೆ 2024- 25 ನೇ ಸಾಲಿನಲ್ಲಿ ನಡೆಸಿದ ಲೋಕಸಭಾ ಚುನಾವಣೆ, ಮತದಾರರ ಪಟ್ಟಿ ಪರಿಷ್ಕರಣೆ ಸೇರಿದಂತೆ ಜಿಲ್ಲೆಯಲ್ಲಿ ನಡೆಸಿದ ಚುನವಾಣಾ ಕೆಲಸಗಳನ್ನು ಪರಿಗಣಿಸಿ ರಾಜ್ಯ ವಿಭಾಗದಲ್ಲಿ ಪ್ರಶಸ್ತಿ ದೊರೆಯಲಿದೆ.

ಈ ಪ್ರಶಸ್ತಿಯನ್ನು ಜನವರಿ 25 ರಂದು ಬೆಂಗಳೂರಿನಲ್ಲಿ ನಡೆಯುವ ರಾಜ್ಯ ಮಟ್ಟದ ಮತದಾರರ ದಿನಾಚರಣೆಯಲ್ಲಿ ನೀಡಲಾಗುವುದು ಎಂದು ರಾಜ್ಯ ಚುನಾವಾಣಾ ಆಯೋಗದ ಮುಖ್ಯ ಚುನಾವಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ‌.

Continue Reading

Trending

error: Content is protected !!