Connect with us

Crime

ಯಾವ ತಪ್ಫಿಗಾಗಿ ಈ ಕೃತ್ಯ, ಬಿಜೆಪಿ ಮಾಧ್ಯಮ ವಕ್ತಾರ ವಿಜಯ್ ಕುಮಾರ್ ಮೇಲಿನ ಹಲ್ಲೆಗೆ ಕಳವಳ ವ್ಯಕ್ತಪಡಿಸಿದ ಮಾಜಿ ಪ್ರದಾನಿ ದೇವೇಗೌಡರು

Published

on

ಹಾಸನ: ಯಾವ ತಪ್ಫಿಗಾಗಿ ಈ ಕೃತ್ಯ, ಬಿಜೆಪಿ ಮಾಧ್ಯಮ ವಕ್ತಾರ ವಿಜಯ್ ಕುಮಾರ್ ಮೇಲಿನ ಹಲ್ಲೆಗೆ ಕಳವಳ ವ್ಯಕ್ತಪಡಿಸಿದ ಮಾಜಿ ಪ್ರದಾನಿ ದೇವೇಗೌಡರು
ಆರ್ ಎಎಸ್ ಎಸ್ ನವರು ನಿಸ್ವಾರ್ಥವಾಗಿ ಕೆಲಸ ಮಾಡೋರು, ದೇಶದ ತುರ್ತು ಪರಿಸ್ಥಿತಿ ವೇಳೆಯಲ್ಲೂ ಕೂಡ ದೇಶಕ್ಕಾಗಿ ಕೆಲಸ ಮಾಡಿದವರು, ನನಗೆ ಎಲ್ಲವೂ ಗೊತ್ತಿದೆ ತಿಳಿದು ಕೊಂಡಿದ್ದೇನೆ.
ನೀವು ಏನು ಮಾತಾಡಿದ್ರಿ ನಂದೂ ಒಂದು ಮತ ಅವರದು ಒಂದು ಮತ ಎಂದಿದ್ದೀರಿ,
ನೀವು ಜನರಲ್ ಆಗಿ ಮಾತಾಡಿದ್ರಿ ಅದ್ರಲ್ಲಿ ಏನು ತಪ್ಪಿದೆ, ಪ್ರೀತಂಗೌಡ ಹೆಸರು ಹೇಳದೆ ಘಟನೆ ಖಂಡಿಸಿದ ದೇವೇಗೌಡರು.
ನಾನು ಈ ವಿಚಾರವನ್ನು ಲಘುವಾಗಿ ತೆಗೆದುಕೊಳ್ಳೋದಿಲ್ಲ. ಈಗ ಏನೂ ಮಾತನಾಡಲ್ಲ
ನೀವೆಲ್ಲಾ ವಾಸ್ತವಾಂಶವನ್ನು ವರದಿ ಮಾಡಿ ಎಂದು ಮಾಧ್ಯಮಗಳಿಗೆ ಮನವಿ ಮಾಡಿದ ದೇವೇಗೌಡರು.
ಹಿಮ್ಸ್ ನಲ್ಲಿ ಗಾಯಾಳು ವಿಜಯಕುಮಾರ್ ಅರೋಗ್ಯ ವಿಚಾರಿಸಿ ನಂತರ ಮಾತನಾಡಿದ ಮಾಜಿ ಪ್ರಧಾನಿ

ನಾನು ನಿಮ್ಮ ಜೊತೆ ಇರ್ತೇನೆ ಎಂದು ವಿಜಯಕುಮಾರ್ಗೆ ಭರವಸೆ, ನಾಳೆ ಸಂಜೆ ಮತ್ತೆ ಬರ್ತೇನೆ ಪೊಲೀಸರು ಏನು ಕ್ರಮ ಕೈಗೊಳ್ತಾರೆ ತಿಳಿದುಕೊಳ್ತೇನೆ. ಕೆಲವರಿಗೆ ಜೀವ ಬೆದರಿಕೆ ಇದೆ ಎಂದು ದೇವೇಗೌಡ ರಿಗೆ ಮಾಹಿತಿ ನೀಡಿದ ಬಿಜೆಪಿ ಕಾರ್ಯಕರ್ತರು
ಇದಕ್ಕೆ ನಾನು ನಿಮ್ಮ ಜೊತೆ ಇದ್ದೇನೆ ಎಂದ ಗೌಡರು.

Continue Reading
Click to comment

Leave a Reply

Your email address will not be published. Required fields are marked *

Crime

ಕಟ್ಟಿನಮನೆ ಬಳಿ ಗಾಳಿ ಮಳೆಯಿಂದ ಮರ ಬಿದ್ದು ಓರ್ವ ಮಹಿಳೆ ಭೀಕರ ದುರ್ಮರಣ..ಮೂವರಿಗೆ ಗಾಯ

Published

on

ನರಸಿಂಹರಾಜಪುರ ತಾಲೂಕಿನ ಕಾನೂರು ಪಂಚಾಯತ್ ವ್ಯಾಪ್ತಿಯ ಕಟ್ಟಿನಮನೆ ಗ್ರಾಮದಲ್ಲಿ ಪೂಜೆ ಮುಗಿಸಿ ಮನೆಗೆ ತೆರುಳುವ ಸಂದರ್ಭದಲ್ಲಿ ಭಾರಿ ಗಾಳಿಯಿಂದಾಗಿ ಮರ ಬಿದ್ದು ಮಹಿಳೆ ಮೃತಪಟ್ಟಿದ್ದಾರೆ.

Continue Reading

Crime

ಬಿಹಾರ : ಮದುವೆ ಮನೆಯಲ್ಲಿ ಪತ್ನಿ ಡಾನ್ಸ್‌ | ಬೇಸರಗೊಂಡು ಪತಿ ಆತ್ಮಹತ್ಯೆ

Published

on

ಬಾವನ ಮದುವೆಯಲ್ಲಿ ಪತ್ನಿ ಡಾನ್ಸ್‌ ಮಾಡಿದಳೆಂದು ಬೇಸರಗೊಂಡ ಪತಿ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬಿಹಾರದ ಬದಾರಿಯಾದಲ್ಲಿ ನಡೆದಿದೆ.
ಬಹುಲಾ ಗ್ರಾಮದ ನಿವಾಸಿ 35 ವರ್ಷದ ಗೋಪಾಲ್‌ ಸಿಂಗ್‌, ರಸೂಲ್‌ಪುರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಬರುವ ಮಹೇಂದ್ರ ನಾಥ್‌ ಹಾಲ್ಟರ್‌ ರೈಲು ನಿಲ್ದಾಣದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾನೆ.
ಗೋಪಾಲ್‌ ಸಿಂಗ್‌ ಬೇನತ್‌ ಗ್ರಾಮದಲ್ಲಿ ತನ್ನ ಪತ್ನಿಯ ಸಹೋದರನ ಮದುವೆ ಸಮಾರಂಭಕ್ಕೆ ಹೋಗಿದ್ದರು. ಈ ವೇಳೆ ಸಂಭ್ರಮದಲ್ಲಿ ಡಾನ್ಸ್‌ ಮಾಡುತ್ತಿದ್ದ ಪತ್ನಿಯನ್ನು ನೋಡಿ ಅಸಮಾಧಾನಗೊಂಡು ಗೋಪಾಲ್‌ ಆಕೆಯನ್ನು ತಡೆದಿದ್ದಾನೆ.
ಕುಟುಂಬಸ್ಥರ ಮಾಹಿತಿ ಪ್ರಕಾರ ಗೋಪಾಲ್‌ ಡಾನ್ಸ್‌ ಮಾಡುತ್ತಿದ್ದ ತನ್ನ ಪತ್ನಿಯನ್ನು ಸುಮ್ಮನಿರುವಂತೆ ಸೂಚಿಸಿದ್ದನು. ಆದರೆ ಆಕೆ ಮಾತ್ರ ಆತನ ಮಾತಿಗೆ ಒಪ್ಪಲಿಲ್ಲ. ಈ ವೇಳೆ ಇಬ್ಬರ ನಡುವೆ ಸಣ್ಣ ಜಗಳ ನಡೆದಿದೆ.
ಆಗ ಬಾವ-ಬಾಮೈದರ ನಡುವೆ ಮಾತಿಗೆ ಮಾತು ಬೆಳೆದು ಜಗಳ ತಾರಕಕ್ಕೇರಿತ್ತು. ಇದರಿಂದ ತೀರ ಬೇಸರಗೊಂಡಿದ್ದ ಗೋಪಾಲ್‌, ರೈಲು ಬರುತ್ತಿದ್ದ ಸಮಯ ನೋಡಿಕೊಂಡು ಹಳಿಗೆ ಹಾರಿಗೆ ಪ್ರಾಣ ಬಿಟ್ಟಿದ್ದಾನೆ. ಪ್ರಕರಣ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿದೆ.

Continue Reading

Crime

ಕಾರು ಡಿಕ್ಕಿಯಾಗಿ ಮಹಿಳೆ ದುರ್ಮರಣ

Published

on

*ಮದುವೆಗೆ ಬಂದ ಮಹಿಳೆ ಸ್ಮಶಾನ ಸೇರಿದರು.

ಸಂಬಂಧಿಕರ ಮದುವೆಗೆಂದು ಬಂದಿದ್ದ ಮಹಿಳೆಯೊಬ್ಬರು ಮಾರುತಿ ಕಾರು ಡಿಕ್ಕಿ ಹೊಡೆದ ಪರಿಣಾಮ ಅಸು ನೀಗಿರುವ ಘಟನೆ ಇಂದು ಮಧ್ಯಾಹ್ನ ಸುಂಟಿಕೊಪ್ಪ ಸಮೀಪದ ಗದ್ದೆಹಳ್ಳದಲ್ಲಿ ನಡೆದಿದೆ. ಕಾಸರಗೋಡುವಿನ ರಾಬಿಯ ಎಂಬುವವರು ಮೃತ ದುರ್ದೈವಿ. 7ನೇ ಹೊಸಕೋಟೆಯಲ್ಲಿರುವ ಇವರ ಸಂಬಂಧಿಯ ವಿವಾಹ ಗದ್ದೆಹಳ್ಳದಲ್ಲಿ ನಡೆಯುತ್ತಿತ್ತು. ಮದುವೆಯಲ್ಲಿ ಪಾಲ್ಗೊಂಡಿದ್ದ ರಾಬಿಯ ರಸ್ತೆ ಬದಿಯಲ್ಲಿ ನಿಂತಿದ್ದರು.

ಈ ಸಂದರ್ಭ ಗಿರಿಯಪ್ಪ ಮನೆ ಗದ್ದೆ ನಿವಾಸಿ ಪೊನ್ನಪ್ಪ ಎಂಬುವವರ ಪುತ್ರ ಶರತ್ ಎಂಬಾತ ವೇಗವಾಗಿ ಚಲಾಯಿಸಿಕೊಂಡು ಬಂದ ಮಾರುತಿ ಕಾರು ಮೂವರು ಮಹಿಳೆಯರಿಗೆ ಡಿಕ್ಕಿಪಡಿಸಿ ಗಾಯಗೊಳಿಸಿದೆ. ಅಲ್ಲಿಯೂ ನಿಯಂತ್ರಣಕ್ಕೆ ಬಾರದ ಕಾರು ಮುಂದಕ್ಕೆ ಚಲಿಸಿ ರಾಬಿಯ ಅವರಿಗೆ ಗುದ್ದಿ ಅವರೊಂದಿಗೆ ವಿದ್ಯುತ್ ಕಂಬಕ್ಕೆ ಅಪ್ಪಳಿಸಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ರಾಬಿಯ ಸ್ಥಳದಲ್ಲಿಯೇ ಉಸಿರು ಚೆಲ್ಲಿದ್ದಾರೆ. ಕಾರು ಡಿಕ್ಕಿಯಾಗಿ ಗಾಯಗೊಂಡಿರುವ ಇನ್ನುಳಿದ ಮೂವರು ಮಹಿಳೆಯರನ್ನು ಮಡಿಕೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

Continue Reading

Trending

error: Content is protected !!