Kodagu
ಶ್ರದ್ದಾ ಭಕ್ತಿಯಿಂದ ನಡೆದ ಪ್ರದೇಶ ಗೌರಮ್ಮನ ನಗರ ಪ್ರದಕ್ಷಿಣೆ ಸೇವೆ

ವಿರಾಜಪೇಟೆ : ಐತಿಹಾಸಿಕ ಜೈನರ ಬೀದಿಯ ಶ್ರೀ ಬಸವೇಶ್ವರ ದೇವಾಲಯ ದ ಪ್ರದೇಶ ಗೌರಮ್ಮನ ಪಲ್ಲಕ್ಕಿ ನಗರ ಪ್ರದಕ್ಷಿಣೆ ಸೇವೆಯು ನಡೆಯಿತು.
ವಿರಾಜಪೇಟೆ ನಗರದ ನೆಲ್ಲಮಕ್ಕಡ ಮೋಹನ್ ಅಯ್ಯಪ್ಪ ಅವರ ಕೆರೆಯಲ್ಲಿ ಶ್ರೀ ಬಸವೇಶ್ವರ ದೇವಾಲಯ ಪ್ರದಾನ ಅರ್ಚಕರಾದ ಮೋಹನ್ ಭಟ್ ಅವರು ಅರ್ಚಕ ವೃಂದದವರಿಂದ ಕೆರೆಗೆ ಬಾಗಿನ ಎರ್ಪಿಸಲಾಯಿತು. ಈ ಬಾರಿ ಅಲಂಕಾರ ವಸ್ತುವಾದ ಕನ್ನಡಿ ದೊರಕಿರುವುದು ವಿಶೇಷ. ಕನ್ನಡಿಯು ಹೆಂಗಳೆಯರಿಗೆ ತನ್ನ ಸೌಂದರ್ಯ ಪ್ರಜ್ಞೆ ತೊರುವ ದರ್ಪಣವಾದರು. ಹೊಸತು ಎಂಬುದನ್ನು ಬಿಂಬಿಸಲಾಗುತ್ತದೆ. ಎಂದು ಪ್ರಧಾನ ಅರ್ಚಕರು ಹೇಳಿದರು. ಪ್ರದೇಶ ಗೌರಮ್ಮನ ಪಲ್ಲಕ್ಕಿ ಸೇವೆಗೆ ಪಂಚವಾದ್ಯವು ಸಾತ್ ನೀಡಿತು. ನಗರದ ತೆಲುಗರ ಬೀದಿ,ಯಿಂದ ಆರಂಭವಾದ ಪಲ್ಲಕ್ಕಿ ಉತ್ಸವ ವು ಸಂಜೆಯ ವೇಳೆಗೆ ನಗರದ ಎಲ್ಲಾ ಬೀದಿಗಳಲ್ಲಿ ಸಂಚರಿಸಿ ಸುಮಂಗಲಿಯರಿಂದ ವಿಶೇಷ ಪೂಜೆಗಳನ್ನು ಪಡೆದು ಶ್ರೀ ಬಸವೇಶ್ವರ ದೇವಾಲಯ ಕ್ಕೆ ಆಗಮಿಸಲಿದೆ. ಬಳಿಕ ಪ್ರದೇಶ ಗೌರಮ್ಮನಿಗೆ ಮಾಹಾ ಪೂಜೆ ಸಲ್ಲಿಕೆಯಾಗಲಿದೆ. ಈ ಸಂಧರ್ಭದಲ್ಲಿ ದೇವಾಲಯದ ಪ್ರದಾನ ಅರ್ಚಕರು,ದೇವಾಲಯದ ಆಡಳಿತ ಮಂಡಳಿಯ ಸದಸ್ಯರು ಹಾಜರಿದ್ದರು.
Kodagu
ಸ್ಪ್ರಿಂಕ್ಲರ್ ಪೈಪಿಗೆ ಕೃಷಿ ಇಲಾಖೆಯಿಂದ ಸಹಾಯಧನ

ಗೋಣಿಕೊಪ್ಪ : ರೈತರ ಅನುಕೂಲಕ್ಕೆ ಕೃಷಿ ಇಲಾಖೆ ವತಿಯಿಂದ ಶೇಕಡ 90ರಷ್ಟು ಸಹಾಯಧನದಲ್ಲಿ ಹೆಚ್.ಡಿ.ಪಿ.ಇ ಕಪ್ಪು ಬಣ್ಣದ ಸ್ಪಿಂಕ್ಲರ್ ಫೈಲ್ಗಳನ್ನು ವಿತರಸಲಾಗುತ್ತದೆ, ಇದರ ಸದುಪಯೋಗವನ್ನು ರೈತರು ಪಡೆದುಕೊಳ್ಳಬೇಕು ಎಂದು ವಿರಾಜಪೇಟೆ, ಪೊನ್ನಂಪೇಟೆ ತಾಲೂಕು ಸಹಾಯಕ ಕೃಷಿ ಅಧಿಕಾರಿ ಮೂರ್ತಿ ಮಾಹಿತಿ ನೀಡಿದ್ದಾರೆ.
ವಿಚಾರವಾಗಿ ಮಾತನಾಡಿದ ಅವರು, ಸೌಲಭ್ಯವು ಪರಿಶಿಷ್ಟಜಾತಿ ಪರಿಶಿಷ್ಟ ಪಂಗಡ ಹಾಗೂ ಸಾಮಾನ್ಯ ವರ್ಗದವರಿಗೂ ಸಹ ಶೇಕಡ 90ರಷ್ಟು ಸಹಾಯಧನದಲ್ಲಿ ನೀಡಲಾಗುತ್ತಿದೆ.
ರೈತ ತಮ್ಮ ಹೋಬಳಿ ಮಟ್ಟದ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ ರೈತ ಸಂಪರ್ಕ ಕೇಂದ್ರದಲ್ಲಿ ಉಚಿತವಾಗಿ ನೀಡುವ ಅರ್ಜಿಯೊಂದಿಗೆ ತಮ್ಮ ಆಧಾರ್ ಕಾರ್ಡಾ ಜೆರಾಕ್ಸ್ ಪ್ರತಿ, ಪಹಣಿ, ಬ್ಯಾಂಕ್ ಪಾಸ್ ಪುಸ್ತಕದ ಜೆರಾಕ್ಸ್ ಪ್ರತಿ, ಹಾಗೂ ಎರಡು ಸ್ಟ್ಯಾಂಪ್ ಅಳತೆಯ ಫೋಟೋಗಳನ್ನು ಸಲ್ಲಿಸುವುದರ ಮುಖಾಂತರ ಈ ಯೋಜನೆಯಡಿ ಫಲಾನುಭವಿಗಳಾಗಬಹುದಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಯೋಜನೆ ಫಲಾನುಭವಿಗಳಾಗಲು ಒಂದು ಎಕರೆ ಜಮೀನಿಗಿಂತ ಹೆಚ್ಚಿನ ವಿಸ್ತೀರ್ಣ ಹೊಂದಿರುವ ರೈತರು ರೂಪಾಯಿ : 4139/- ಹಣವನ್ನು ಪಾವತಿಸುವ ಮೂಲಕ ಒಟ್ಟು 30 ಪೈಪುಗಳು ಹಾಗೂ 5 ಸ್ಪಿಂಕ್ಲಾರ್ ಜೆಟ್ಗಳು ಇತರೆ ಸಾಮಗ್ರಿಗಳನ್ನು ಪಡೆಯಬಹುದಾಗಿದೆ. ಒಂದು ಎಕರೆಗಿಂತ ಕಡಿಮೆ ವಿಸ್ತೀರ್ಣ ಹಾಗೂ ಅರ್ಧ ಎಕರೆಗಿಂತ ಹೆಚ್ಚು ವಿಸ್ತೀರ್ಣ ಹೊಂದಿರುವ ರೈತರು ರೂಪಾಯಿ:2496/- ಹಣವನ್ನು ಪಾವತಿಸುವುದರ ಮುಖಾಂತರ 18 ಪೈವುಗಳು ಮತ್ತು 3 ಸಂಖ್ಯೆಯ ಜೆಟ್ಗಳನ್ನು ಜತೆಗೆ ಇತರೆ ಸಾಮಗ್ರಿಗಳನ್ನು ಕೃಷಿ ಇಲಾಖೆಯಿಂದ ಪಡೆದುಕೊಂಳ್ಳಬಹುದಾಗಿದೆ.
ಈ ಸೌಲಭ್ಯವನ್ನು ಸಾಮಾನ್ಯ ರೈತರಿಗೆ ಒಂದು ಬಾರಿ ಮಾತ್ರ ವಿತರಿಸಲಾಗುತ್ತಿದೆ. ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ರೈತರಿಗೆ 7 ವರ್ಷಗಳ ನಂತರ ಈ ಸೌಲಭ್ಯವನ್ನು ಮತ್ತೊಮ್ಮೆ ನೀಡಲಾಗುತ್ತಿದೆ ಎಂಬ ಮಾಹಿತಿ ನೀಡಿದ್ದಾರೆ.
Kodagu
ಮಡಿಕೇರಿಯಲ್ಲಿ ಡಿ ಗ್ರೂಪ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಮಡಿಕೇರಿ : ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ ಇಲಾಖೆಗೆ ಸೇರಿರುವ ಮಡಿಕೇರಿ ನಗರದ ಶ್ರೀ ಓಂಕಾರೇಶ್ವರ ದೇವಾಲಯಕ್ಕೆ ಒಳಪಡುವ ಶ್ರೀ ಆಂಜನೇಯ ಮತ್ತು ಕೋಟೆ ಗಣಪತಿ ದೇವಾಲಯದ ಕಾರ್ಯಗಳಿಗೆ ತಾತ್ಕಾಲಿಕ ನೆಲೆಯಲ್ಲಿ ಕರ್ತವ್ಯ ನಿರ್ವಹಿಸಲು 03 ‘ಡಿ’ ಗ್ರೂಪ್ ಹುದ್ದೆಗಳು ಖಾಲಿ ಇದ್ದು ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸುವವರ ವಯೋಮಿತಿ 18 ವರ್ಷ ತುಂಬಿರಬೇಕು. 35 ವರ್ಷ ಮೀರಿರಬಾರದು(ವಯಸ್ಸಿನ ಬಗ್ಗೆ ಶಾಲಾ ದಾಖಲೆ ನೀಡಬೇಕು). ದೇವಾಲಯದ ಹೊರಾಂಗಣದ ನೌಕರರು ‘ಡಿ’ ಗ್ರೂಪ್ ಹುದ್ದೆ-3 (ಸ್ವಚ್ಛತಗಾರ ಮತ್ತು ಕಾವಲುಗಾರರು) ವೇತನ ರೂ.9,600 ಮತ್ತು ಇತರೆ, ದೇವಾಲಯದ ಕರ್ತವ್ಯದ ಅವಧಿ ಬೆಳಗ್ಗೆ 7.30 ರಿಂದ ಮಧ್ಯಾಹ್ನ 1 ಗಂಟೆ, ಸಂಜೆ 5 ಗಂಟೆಯಿಂದ ರಾತ್ರಿ 8 ಗಂಟೆವರೆಗೆ.
ದೇವಾಲಯದ ಕೆಲಸ ಕಾರ್ಯಗಳು ಮುಜರಾಯಿ ಇಲಾಖೆ ಸೂಚಿಸಿದ ನಿಯಮಗಳು ಹಾಗೂ ಶಿಸ್ತು ಪಾಲನೆಗೆ ಒಳಪಟ್ಟಿರುತ್ತದೆ. ಸರ್ಕಾರಿ ಆಸ್ಪತ್ರೆಯ ವೈದ್ಯಾಧಿಕಾರಿಯಿಂದ ಪಡೆದ ದೇಹ ದಾಢ್ರ್ಯ ಪ್ರಮಾಣ ಪತ್ರವನ್ನು ಹಾಜರುಪಡಿಸಬೇಕು. ಯಾವುದೇ ಕ್ರಿಮಿನಲ್ ಮೊಕದ್ದಮೆ ಹಾಗೂ ನ್ಯಾಯಾಲಯದ ಆದೇಶದಂತೆ ಕಾರಾಗೃಹದ ಶಿಕ್ಷೆಗೆ ಒಳಪಟ್ಟಿರಬಾರದು. ಅರ್ಜಿ ಸಲ್ಲಿಸಲು ಫೆಬ್ರವರಿ, 26 ಕೊನೆಯ ದಿನವಾಗಿದೆ.
ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗೆ ದೇವಾಲಯದ ಕಚೇರಿಯ ಸಮಯ ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 12 ಗಂಟೆ ಒಳಗೆ ಭೇಟಿ ನೀಡಬಹುದು ಎಂದು ಶ್ರೀ ಓಂಕಾರೇಶ್ವರ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಅವರು ತಿಳಿಸಿದ್ದಾರೆ.
Kodagu
4ನೇ ಪುನರ್ ಪ್ರತಿಷ್ಠಾ ವಾರ್ಷಿಕೋತ್ಸವ

ಮಡಿಕೇರಿ : ಹೊದ್ದೂರು ಗ್ರಾಮದ ರಕ್ಷಕ, ಐತಿಹಾಸಿಕ ಹಿನ್ನಲೆಯುಳ್ಳ, ಪವಾಡ ಸದೃಶ ಮಹಿಮೆಯುಳ್ಳ ಶ್ರೀ ಶಾಸ್ತ-ಈಶ್ವರ ಕ್ಷೇತ್ರದಲ್ಲಿ ಶ್ರೀ ಶಾಸ್ತ-ಈಶ್ವರ, ಮಹಾಗಣಪತಿ, ಶ್ರೀ ಬೇಟೆ ಅಯ್ಯಪ್ಪ ಹಾಗೂ ಶ್ರೀ ವಿಷ್ಣುಮೂರ್ತಿ ದೇವತೆಗಳ 4ನೇ ಪುನರ್ ಪ್ರತಿಷ್ಠಾ ವಾರ್ಷಿಕೋತ್ಸವವು ಫೆ.16 ರಿಂದ 18ರ ವರೆಗೆ ನಡೆಯಲಿದೆ.
ದೇವಾಲಯದಲ್ಲಿ ಮೂರು ದಿನಗಳ ಕಾಲ ಜಯರಾಜ್ ತಂತ್ರಿಗಳ ಮಾರ್ಗದರ್ಶನದಲ್ಲಿ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳು ಜರುಗಲಿದೆ.
ಫೆ.16 ರಂದು ಸಂಜೆ 7 ಗಂಟೆಗೆ ಶ್ರೀ ಶಾಸ್ತ-ಈಶ್ವರ ದೇವಸ್ಥಾನದಲ್ಲಿ ಅಂದಿಬೊಳಕ್ ನಡೆಯಲಿದೆ. ಫೆ.17 ರಂದು ಬೆಳಿಗ್ಗೆ 7 ಗಂಟೆಗೆ ದೇವರ ತೂಚಂಬಲಿ, 8 ಗಂಟೆಗೆ ಗಣಪತಿ ಹೋಮ, 10 ಗಂಟೆಗೆ ಪ್ರತಿಷ್ಠಾ ಅಲಂಕಾರ ಪೂಜೆ, 11.30ಕ್ಕೆ ಶ್ರೀ ಬೇಟೆ ಅಯ್ಯಪ್ಪ ಸನ್ನಿಧಿಯಲ್ಲಿ ಅಭಿಷೇಕ, 11.45ಕ್ಕೆ ಶೀ ವಿಷ್ಣು ಮೂರ್ತಿ ದೇವ ಸನ್ನಿಧಿಯಲ್ಲಿ ಅಭಿಷೇಕ ಪೂಜೆ ನಡೆಯಲಿದೆ.
ಮಧ್ಯಾಹ್ನ 12 ಗಂಟೆಗೆ ಶ್ರೀ ಈಶ್ವರ ದೇವರ ನೆರ್ಪು ಬಲಿ, ಮಹಾಪೂಜೆ, ಮಂಗಳಾರತಿ ಹಾಗೂ ತೀರ್ಥ ಪ್ರಸಾದ ವಿತರಣೆ ನಡೆಯಲಿದ್ದು, 1 ಗಂಟೆಗೆ ಅನ್ನಸಂತರ್ಪಣೆ ನೆರವೇರಲಿದೆ.
ಸಂಜೆ 4 ಗಂಟೆಗೆ ಕಾವೇರಿ ಹೊಳೆಯಲ್ಲಿ ದೇವರ ಜಳಕ, ಗ್ರಾಮದ ಮುಖ್ಯ ರಸ್ತೆಯಲ್ಲಿ ಚಂಡೆ ಮದ್ದಳೆಯೊಂದಿಗೆ ಮೆರವಣಿಗೆ, ಸಂಜೆ 6.30ರ ನಂತರ ದೇವಾಲಯದಲ್ಲಿ ವಿವಿಧ ನೃತ್ಯ (ತಡಂಬ್ ಆಟ್), ಸಂಪ್ರೋಕ್ಷಣೆ, ಅನ್ನದಾನ ನಡೆಯಲಿದೆ.
ರಾತ್ರಿ 9 ಗಂಟೆಗೆ ಶ್ರೀ ವಿಷ್ಣುಮೂರ್ತಿ ದೈವದ ತೋಯತ ತೆರೆ, ಮೇಲೇರಿ ಅಗ್ನಿಸ್ಪರ್ಶ ನಡೆಯಲಿದೆ.
ಫೆ.18 ರಂದು ಬೆಳಿಗ್ಗೆ 8.30ಕ್ಕೆ ಶ್ರೀ ವಿಷ್ಣುಮೂರ್ತಿ ದೈವದ ಕೋಲ ನಡೆಯಲಿದ್ದು, ಫೆ.19 ರಂದು ಬೆಳಿಗ್ಗೆ 10 ಗಂಟೆಗೆ ದೇವಾಲಯದಲ್ಲಿ ಶುದ್ಧಕಲಶ ನಡೆಯಲಿದೆ. ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ದೇವಾಲಯದ ಆಡಳಿತ ಮಂಡಳಿ ಅಧ್ಯಕ್ಷ ಕೂಡಂಡ ರಾಜೇಂದ್ರ ಅಯ್ಯಮ್ಮ ಹಾಗೂ ಆಡಳಿತ ಮಂಡಳಿ ಕೋರಿದೆ.
-
Hassan20 hours ago
HASSAN: ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಟಾಟಾ ವಿಂಗರ್ ವಾಹನ ಪಲ್ಟಿ
-
Mysore20 hours ago
ಅವಹೇಳನಕಾರಿ ಚಿತ್ರವುಳ್ಳ ಪೋಸ್ಟ್ : ಆರೋಪಿ ಬಂಧನಕ್ಕೆ ರಸ್ತೆ ತಡೆದು ಪ್ರತಿಭಟನೆ
-
Kodagu14 hours ago
ಕೊಡಗು ಗೌಡ ಸಮಾಜಗಳ ಒಕ್ಕೂಟ ತೀವ್ರ ಅಸಮಾಧಾನ: ಕಾರಣವೇನು?
-
Kodagu11 hours ago
ಮಡಿಕೇರಿಯಲ್ಲಿ ಡಿ ಗ್ರೂಪ್ ಹುದ್ದೆಗಳಿಗೆ ಅರ್ಜಿ ಆಹ್ವಾನ
-
Kodagu11 hours ago
ಸ್ಪ್ರಿಂಕ್ಲರ್ ಪೈಪಿಗೆ ಕೃಷಿ ಇಲಾಖೆಯಿಂದ ಸಹಾಯಧನ
-
Hassan15 hours ago
ಯುವ ಕಾಂಗ್ರೆಸ್ ಚುನಾವಣೆಯಲ್ಲಿ ಅಕ್ರಮ: ಮರು ಚುನಾವಣೆಗೆ ಒತ್ತಾಯ
-
State12 hours ago
ನಮ್ಮ ಮೆಟ್ರೋ ದರ ಏರಿಕೆ: ಸಿಎಂ ಸಿದ್ದರಾಮಯ್ಯ ಅವರ ಮಾಧ್ಯಮ ಪ್ರಕಟಣೆ
-
Hassan19 hours ago
ಶ್ರೀ ಲಕ್ಷ್ಮೀ ವೆಂಕಟೇಶ್ವರಸ್ವಾಮಿ ಜಾತ್ರಾ ಮಹೋತ್ಸವ: ಜೆಡಿಎಸ್ ಹಾಗೂ ಕಾಂಗ್ರೆಸ್ನಿಂದ ಪ್ರತ್ಯೇಕವಾಗಿ ಆರ್ಕೆಸ್ಟ್ರಾ ಆಯೋಜನೆ