Mysore
ಕರ್ನಾಟಕ ರತ್ನ ಘೋಷಣೆ: ಮೈಸೂರಿನ ವಿಷ್ಣು ಸ್ಮಾರಕದಲ್ಲಿ ಸಂಭ್ರಮ
 
																								
												
												
											ಮೈಸೂರು: ಕರುಣಾಮಯಿ ವಿಷ್ಣು ಅಭಿಮಾನಿ ಬಳಗದ ವತಿಯಿಂದ ಉದ್ಬೂರ್ ಗೇಟ್ ನಲ್ಲಿರುವ ಡಾಕ್ಟರ್ ವಿಷ್ಣುವರ್ಧನ್ ಸ್ಮಾರಕ ದಲ್ಲಿ ಸಾಹಸಸಿಂಹ ವಿಷ್ಣುವರ್ಧನ್ ಅವರಿಗೆ ರಾಜ್ಯ ಸರ್ಕಾರ ನೀಡಿರುವ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ನೀಡಿದ ಹಿನ್ನೆಲೆಯಲ್ಲಿ ಮಹಿಳಾ ಅಭಿಮಾನಿಗಳು ಸ್ವಯಂ ಪ್ರೇರಿತ ರಕ್ತದಾನ ಮಾಡುವ ಮೂಲಕ ಸ್ವಾಗತಿಸಿದರು ನಂತರ ಸಿಹಿ ಹಂಚಿ ಸಂಭ್ರಮಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಮಹಾನಗರ ಪಾಲಿಕೆ ಮಾಜಿ ಸದಸ್ಯ ಮಾ.ವಿ. ರಾಮ್ ಪ್ರಸಾದ್,
ಕನ್ನಡ ಚಿತ್ರರಂಗದ ಪ್ರತಿಭಾವಂತ ನಟ ಸಾಹಸಸಿಂಹ ಡಾ. ವಿಷ್ಣುವರ್ಧನ್ ಅವರಿಗೆ ಹಾಗೂ ಬಹುಭಾಷಾ ತಾರೆ ಪದ್ಮಶ್ರೀ ಬಿ. ಸರೋಜಾ ದೇವಿ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಪ್ರಕಟವಾಗಿರುವುದು ಅತ್ಯಂತ ಸಂತಸದ ಸಂಗತಿಯಾಗಿದೆ. ಇಬ್ಬರೂ ಮಹಾನ್ ಕಲಾವಿದರ ಅಪಾರ ಅಭಿಮಾನಿಗಳ ಬಹು ದಿನಗಳ ನಿರೀಕ್ಷೆ ಸಾಕಾರಗೊಂಡಂತಾಗಿದೆ ಕನ್ನಡ ಚಿತ್ರರಂಗ ಹಾಗೂ ಕರ್ನಾಟಕದ ಸಾಂಸ್ಕೃತಿಕ ಕ್ಷೇತ್ರವನ್ನು ಶ್ರೀಮಂತ ಗೊಳಿಸಲು ಕಲಾ ಸೇವೆಗೈದ ಈ ಇಬ್ಬರೂ ಶ್ರೇಷ್ಠ ವ್ಯಕ್ತಿತ್ವಗಳಿಗೆ ಮರಣೋತ್ತರವಾಗಿ ಪ್ರಶಸ್ತಿ ಲಭಿಸಿರುವುದು ಕನ್ನಡ ಚಿತ್ರರಂ ಗದ ಬೆಳವಣಿಗೆಗೂ ಪ್ರೇರಣೆ ನೀಡಿದಂತಾಗಿದೆ ಎಂದರು.

ಮಹಾನಗರ ಪಾಲಿಕೆ ಮಾಜಿ ಸದಸ್ಯ ಎಂ ಡಿ ಪಾರ್ಥಸಾರಥಿ ಮಾತನಾಡಿ, ಡಾಕ್ಟರ್ ವಿಷ್ಣುವರ್ಧನ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರಧಾನ ಸಮಾರಂಭವು ಸರ್ಕಾರ ವಿಧಾನಸೌಧ ಮುಂಭಾಗ ಅಥವಾ ಅರಮನೆ ಮೈದಾನದಲ್ಲಿ ವಿಜೃಂಭಣೆಯಿಂದ ಕರ್ನಾಟಕ ರತ್ನ ಪ್ರಶಸ್ತಿ ನೀಡಬೇಕೆಂದು ಒತ್ತಾಯ ಮಾಡಿದರು.
ಕೆಪಿಸಿಸಿ ಸದಸ್ಯ ನಜರ್ಬಾದ್ ನಟರಾಜ್, ಜೀವಧಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್, ಕಡಕೊಳ ಜಗದೀಶ್, ಎಸ್ ಎನ್ ರಾಜೇಶ್, ರವಿಚಂದ್ರ, ಅಕ್ಬರ್, ರೇಖಾ ಶ್ರೀನಿವಾಸ್, ಕಾವ್ಯಾ, ಪವಿತ್ರಾ, ಶ್ರುತಿ, ಮಾಲಿನಿ ಮಲ್ಲೇಶ್, ಜಯಶ್ರೀ ಶಿವರಾಮ್ ಮುಂತಾದವರಿದ್ದರು.
Cinema
ಅರಣ್ಯ ಇಲಾಖೆ ಪರಿಹಾರಕ್ಕಾಗಿ ಗಂಡನನ್ನೇ ಕೊಂ*ದ ಹೆಂಡತಿ
 
														
ಮೈಸೂರು: ಹಣದ ಆಸೆಗೆ ಕೈ ಹಿಡಿದ ಪತಿಯನ್ನೇ ಕೊಲೆಗೈದು ಹುಲಿ ದಾಳಿ ಎಂದು ಬಿಂಬಿಸಲು ಹೋಗಿದ್ದ ಹೆಂಡತಿಯ ಸುಳ್ಳಿನ ಕಟ್ಟುಕತೆಯನ್ನು ಭೇದಿಸುವಲ್ಲಿ ಹುಣಸೂರು ಗ್ರಾಮಾಂತರ ಪೊಲೀಸರು ಯಶಸ್ವಿಯಾಗಿದ್ದಾರೆ.

ಹುಣಸೂರು ತಾಲೂಕಿನ ಹನಗೋಡು ಹೋಬಳಿಯ ಚಿಕ್ಕಹೆಜ್ಜೂರು ಗ್ರಾಮದ ತೋಟಕ್ಕೆ ಕೂಲಿ ಕೆಲಸಕ್ಕೆ ಬಂದಿದ್ದ ಮಳವಳ್ಳಿ ತಾಲೂಕಿನ ಹಲಗೂರು ಹೋಬಳಿಯ ಕಡಂಪುರ ಗ್ರಾಮದ ವೆಂಕಟಸ್ವಾಮಿ (45) ಕೊಲೆಯಾದವರು. ಈತನ ಪತ್ನಿ ಸಲ್ಲಾಪುರಿ (40) ತನ್ನ ಕೈಹಿಡಿದ ಪತಿಯನ್ನೇ ಕೊಲೆಗೈದ ಆರೋಪಿಯಾಗಿದ್ದಾಳೆ.

ಹಲವು ವರ್ಷಗಳ ಹಿಂದೆ ವಿವಾಹವಾದ ಈ ದಂಪತಿಗೆ ಇಬ್ಬರು ಮಕ್ಕಳಿದ್ದು, ಅವರ ಶಿಕ್ಷಣಕ್ಕಾಗಿ ಬಿಡದಿಯಲ್ಲಿರುವ ಸಂಬಂಧಿಕರೊಂದಿಗೆ ವಾಸಿಸುತ್ತಿದ್ದರು.
ಕಳೆದ ಆರು ತಿಂಗಳ ಹಿಂದಷ್ಟೆ ಬೆಂಗಳೂರಿನ ರವಿಕುಮಾರ್ ಮತ್ತು ಅರುಣ್ಕುಮಾರ್ ಅವರ ಒಡೆತನದ
ಚಿಕ್ಕಹೆಜ್ಜೂರಿನಲ್ಲಿರುವ 4.10 ಎಕರೆ ಅಡಿಕೆ ತೋಟವನ್ನು ನಿರ್ವಹಿಸುವ ಕೆಲಸವನ್ನು ನಿರ್ವಹಿಸಲು
ಮಾಸಿಕ 18 ಸಾವಿರ ರೂ. ವೇತನವನ್ನು ಈ ದಂಪತಿಗಳಿಗೆ ನಿಗದಿಪಡಿಸಿ ತೋಟದೊಳಗಿರುವ ಮನೆಯನ್ನು ವಾಸಕ್ಕೆ ನೀಡಿದ್ದರು.
ಕಾಡಂಚಿನ ಗ್ರಾಮಗಳಲ್ಲಿ ಆಗಿದ್ದಾಂಗೆ ಜನ ಜಾನುವಾರುಗಳ ಮೇಲೆ ಹುಲಿ, ಚಿರತೆಗಳ ದಾಳಿ ಆಗುತ್ತಿರುವ ಬಗ್ಗೆ ಹಾಗೂ ಹುಲಿ ದಾಳಿಯಿಂದ ಮೃತಪಟ್ಟವರಿಗೆ 15 ಲಕ್ಷ ರೂ. ಸರ್ಕಾರ ನೀಡುವ ಪರಿಹಾರದ ಬಗ್ಗೆ ಅಕ್ಕ ಪಕ್ಕದವರು ಕೆಲಸಕ್ಕೆ ಬರುತ್ತಿದ್ದವರಿಂದ ಮಾಹಿತಿ ಪಡೆದಿದ್ದ ಸಲ್ಲಾಪುರಿ ಹಣದ ದುರಾಸೆ ಬಿದ್ದು, ಸೆ.8ರಂದು ರಾತ್ರಿ ತನ್ನ ಗಂಡ ವೆಂಕಟಸ್ವಾಮಿಗೆ ವಿಷ ಬೆರೆಸಿದ ಆಹಾರ ನೀಡಿ ಸಾಯಿಸಿದ್ದಾಳೆ.

ವಿಷ ಆಹಾರ ಸೇವಿಸಿದ ವೆಂಕಟಸ್ವಾಮಿ ಸತ್ತ ನಂತರ ಅವನ ದೇಹವನ್ನು ಮನೆಯಿಂದ ಹೊರಗೆ ಎಳೆದೊಯ್ದು ಮನೆಯ ಪಕ್ಕದಲ್ಲಿದ್ದ ಸಗಣಿ ಗುಂಡಿಯನ್ನು ಐದು ಅಡಿ ಆಳ ಅಗೆದು, ಶವವನ್ನು ಹೂತು ಹಾಕಿ ಸಗಣಿ, ಎಲೆಗಳು, ಜೋಳದ ಹುಲ್ಲು ಮತ್ತಿತರ ತ್ಯಾಜ್ಯಗಳಿಂದ ಮುಚ್ಚಿಹಾಕಿದ್ದಾಳೆ. ನಂತರ ಸೆ.9ರ ಮಂಗಳವಾರ ಸಂಜೆ ಹುಣಸೂರು ಗ್ರಾಮಾಂತರ ಠಾಣೆಯಲ್ಲಿ
ಹುಲಿಯೊಂದು ತನ್ನ ಗಂಡ ವೆಂಕಟಸ್ವಾಮಿಯನ್ನು ಕೊಂದು ಅವನ ದೇಹವನ್ನು ಜೋಳದ ಹೊಲದ ಮೂಲಕ ಹತ್ತಿರದ ಕಾಡಿಗೆ ಎಳೆದುಕೊಂಡು ಹೋಗಿದೆ ಎಂದು ಕಥೆ ಕಟ್ಟಿ ಪೋಲಿಸ್ ಠಾಣೆಗೆ ದೂರು ನೀಡಿದ್ದಾಳೆ. ಪ್ರಕರಣವನ್ನು ಹುಣಸೂರು ಗ್ರಾಮಾಂತರ ಪೊಲೀಸರು ಮತ್ತು ಅರಣ್ಯ ಇಲಾಖೆ ಅಧಿಕಾರಿಗಳು ಗಂಭೀರವಾಗಿ ತೆಗೆದುಕೊಂಡು ಶೋಧ ಕಾರ್ಯಾಚರಣೆ ನಡೆಸಿದ ಇನ್ಸ್ಪೆಕ್ಟರ್ ಮುನಿಯಪ್ಪ

ತೋಟದಲ್ಲಿ ಅಳವಡಿಸಲಾದ ಸಿ.ಸಿ.ಟಿವಿ ಕ್ಯಾಮೆರಾಗಳ ದೃಶ್ಯಾವಳಿಗಳು ಅಪರಾಧದ ಸಮಯದಲ್ಲಿ ಸಲ್ಲಾಪುರಿಯ ಚಲನವಲನಗಳನ್ನು ಗಮನಿಸಿ ಶ್ವಾನ ದಳ ಮತ್ತು ಬೆರಳಚ್ಚು ತಜ್ಞರನ್ನು ಸ್ಥಳಕ್ಕೆ ಕರೆಸಿ ಆಕೆಯ ಹೇಳಿಕೆ ಮತ್ತು ದೃಢವಾದ ಪುರಾವೆಗಳನ್ನು ಸಂಗ್ರಹಿಸಿ ತನಿಖೆ ತೀವ್ರಗೊಳಿಸಿದ ಪರಿಣಾಮ ಹಣದ ದುರಾಸೆಗೆ ಬಿದ್ದು ಪತಿಯನ್ನೆ ಕೊಲೆಗೈದು ಶವವನ್ನು ತಿಪ್ಪೆ ಗುಂಡಿಯಲ್ಲಿ ಹೂತಕ್ಕಿರುವುದಾಗಿ ಸತ್ಯಾಂಶವನ್ನು ಒಪ್ಪಿಕೊಂಡಿದ್ದಾಳೆ.
ಶವ ಪರೀಕ್ಷೆಗಾಗಿ ಶವವನ್ನು ಮೈಸೂರಿನ ಕೆ ಆರ್ ಆಸ್ಪತ್ರೆಯ ಶವಗಾರಕ್ಕೆ ಸಾಗಿಸಲಾಗಿದೆ.
ಘಟನಾ ಸ್ಥಳಕ್ಕೆ ಮೈಸೂರು ಎಎಸ್ಪಿ ಮಲ್ಲಿಕ್, ಹುಣಸೂರು ಡಿ ವೈ ಎಸ್ ಪಿ ಗೋಪಾಲಕೃಷ್ಣ ಸೇರಿದಂತೆ ಹಿರಿಯ ಅಧಿಕಾರಿಗಳು ಭೇಟಿ ನೀಡಿದ್ದಾರೆ.
Mysore
ವಿಷ್ಣುವರ್ಧನ್ಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಘೋಷಣೆ: ಮೈಸೂರಿನಲ್ಲಿ ಸಂಭ್ರಮ
 
														ಮೈಸೂರು: ಸಾಹಸಸಿಂಹ ವಿಷ್ಣುವರ್ಧನ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ಘೋಷಣೆ ಹಿನ್ನೆಲೆಯಲ್ಲಿ ಅಗ್ರಹಾರ ವೃತ್ತದಲ್ಲಿ ವಿಷ್ಣುವರ್ಧನ್ ಅಭಿಮಾನಿ ಬಳಗದಿಂದ ಘೋಷಣೆ ಕೂಗಿ ಸಿಹಿ ಹಂಚಿ ಸಂಭ್ರಮ ಆಚರಿಸಲಾಯಿತು.
ವಿಷ್ಣುವರ್ಧನ್ ಅಭಿಮಾನಿಗಳ ಒಕ್ಕೂಟದ ಅಧ್ಯಕ್ಷ ಎಂ.ಡಿ.ಪಾರ್ಥಸಾರಥಿ ಮಾತನಾಡಿ, ಕರ್ಣನಿಗೆ ಕೊನೆಗೂ ಕಾಲ ಕೂಡಿಬಂತು. 15 ವರ್ಷದ ಅಭಿಮಾನಿಗಳ ಕನಸು ಈಗ ನನಸಾಗಿದೆ. ಸರ್ಕಾರಕ್ಕೆ ವಿಶೇಷ ಅಭಿನಂದನೆಗಳು. ಈ ಬಾರಿ ವಿಷ್ಣು ವರ್ಧನ್ ಅವರ 75 ಹುಟ್ಟುಹಬ್ಬವನ್ನು ಅಭಿಮಾನಿಗಳೆಲ್ಲ ಸೇರಿ ಹಬ್ಬದಂತೆ ಆಚರಿಸುತ್ತೇವೆ. ಅಭಿನವ ಸರಸ್ವತಿ ಬಿ.ಸರೋಜಾ ದೇವಿ ಅವರಿಗೂ ಕರ್ನಾಟಕ ರತ್ನ ನೀಡಿರುವುದು ಸ್ವಾಗತಿಸುತ್ತೇವೆ ಎಂದರು.

ಕರ್ನಾಟಕ ಹಿತರಕ್ಷಣಾ ವೇದಿಕೆ ಅಧ್ಯಕ್ಷ ವಿನಯ್ ಕುಮಾರ್, ಜಿ.ರಾಘವೇಂದ್ರ, ಬಸವರಾಜ, ಜೀವದಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್, ರವಿಚಂದ್ರ, ಎಸ್.ಎನ್.ರಾಜೇಶ್, ಟಿ.ಎಸ್.ಅರುಣ್, ರವಿನಂದನ್, ಮಹಾನ್ ಶ್ರೇಯಸ್, ಲಕ್ಷ್ಮಣ್, ಚಿನ್ನ ಬೆಳ್ಳಿ ಸಿದ್ದಪ್ಪ, ಸಂತೋಷ್, ರವೀಂದ್ರ ಕುಮಾರ್, ಅಭಿ, ಹರೀಶ್ ನಾಯ್ಡು, ರಾಕೇಶ್ ಭಟ್ ಮುಂತಾದವರಿದ್ದರು.
Mysore
ತಿ.ನರಸೀಪುರ: ಪ್ರಾಧಿಕಾರ ರಚನೆ ನಿರ್ಧಾರ ಕೈಬಿಡುವಂತೆ ಒತ್ತಾಯ ಮಾಡಲಾಯಿತು
 
														ತಿ.ನರಸೀಪುರ: ಪ್ರಸಿದ್ಧ ಪೂಜ್ಯ ತಾಣವಾದ ರಾಜಬೊಪ್ಪೇಗೌಡನಪುರ,ಚಿಕ್ಕಲ್ಲೂರು,ಕುರುಬನ ಕಟ್ಟೆ,ಕಪ್ಪಡಿ ಮತ್ತು ಹೊನ್ನಾಪುರದಲ್ಲಿರುವ ಮಂಟೇಸ್ವಾಮಿ,ಸಿದ್ದಪ್ಪಾಜಿ, ರಾಚಪ್ಪಾಜಿ ಗದ್ದುಗೆಗಳು ಸೇರಿದಂತೆ ಒಟ್ಟು ಐದು ಕ್ಷೇತ್ರಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ಮುಂದಾಗಿರುವ ಸರ್ಕಾರದ ನಿಲುವನ್ನು ಶೀಘ್ರವೇ ಕೈಬಿಡಬೇಕು ಎಂದು ಸಿದ್ದಪ್ಪಾಜಿ, ರಾಚಪ್ಪಾಜಿ, ಮಂಟೇಸ್ವಾಮಿ ನೀಲಗಾರರು ಹಾಗೂ ತಮ್ಮಡಿಗಳು, ದೇವರಗುಡ್ಡರು ಮತ್ತು ರೈತ ಸಂಘ, ವಿವಿಧ ಸಮುದಾಯದ ಮುಖಂಡರು ಅಗ್ರಹಿಸಿದರು.
ಪಟ್ಟಣದ ಹಳೇ ಪಿಡಬ್ಲ್ಯೂಡಿ ಅತಿಥಿ ಗೃಹದಲ್ಲಿ ಕರೆಯಲಾಗಿದ್ದ ಸುದ್ದಿ ಘೋಷ್ಠಿಯಲ್ಲಿ ಕುರಿತು ಮಾತನಾಡಿದರು.
ತಾಲೂಕು ರೈತ ಸಂಘದ ಅಧ್ಯಕ್ಷ ಕರೋಹಟ್ಟಿ ಕೆ.ಕುಮಾರಸ್ವಾಮಿ ಮಾತನಾಡಿ ಇತ್ತೀಚಿಗೆ ಮುಖ್ಯಮಂತ್ರಿಗಳು ರಾಜ ಬೊಪ್ಪೇಗೌಡನಪುರ,ಕಪ್ಪಡಿ, ಕುರುಬನಕಟ್ಟೆ, ಚಿಕ್ಕಲ್ಲೂರು ಮತ್ತು ಹೊನ್ನಾಪುರದಲ್ಲಿರುವ ಸಿದ್ದಪ್ಪಾಜಿ, ರಾಚಪ್ಪಾಜಿ, ಮಂಟೇಸ್ವಾಮಿ ಕ್ಷೇತ್ರಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡುವ ಬಗ್ಗೆ ಪ್ರಸ್ತಾಪಿಸಿದ್ದು, ಇದು ಧಾರ್ಮಿಕ, ಪವಿತ್ರ ಕ್ಷೇತ್ರಗಳ ಗದ್ದುಗೆಯ ಪಾವಿತ್ರ್ಯತೆಗೆ ಧಕ್ಕೆ ಆಗಲಿದೆ. ಇದರಿಂದ ಎಲ್ಲ ಕ್ಷೇತ್ರಗಳು ವ್ಯಾಪಾರ ಕ್ಷೇತ್ರಗಳಾಗಿ ಬದಲಾಗಿ ತಮ್ಮ ಆಸ್ತಿತ್ವ ಕಳೆದುಕೊಳ್ಳಲಿವೆ. ಹಾಗಾಗಿ ಎಲ್ಲ ಕ್ಷೇತ್ರಗಳ ಪರಂಪರೆ, ಇತಿಹಾಸವನ್ನು ಗಮನದಲ್ಲಿಟ್ಟುಕೊಂಡು ಸರ್ಕಾರದ ಪ್ರಾಧಿಕಾರ ರಚನೆ ನಿರ್ಧಾರದಿಂದ ಕೈ ಬಿಡುವ ಮೂಲಕ ಹಿಂದೆ ಸರಿಯಬೇಕು ಎಂದರು.

ರೈತ ಸಂಘದ ಜಿಲ್ಲಾ ಮುಖಂಡ ಈ.ರಾಜು ಮಾತನಾಡಿ, ರಾಜ್ಯ ಸರ್ಕಾರಕ್ಕೆ ಈ ಎಲ್ಲ ಶ್ರೀಕ್ಷೇತ್ರಗಳ ಅಭಿವೃದ್ಧಿಯ ಬಗ್ಗೆ ನೈಜ ಕಾಳಜಿ ಇದ್ದಲ್ಲಿ ಐದೂ ಕ್ಷೇತ್ರಗಳಿಗೂ ಅನುದಾನ ಬಿಡುಗಡೆಗೊಳಿಸಿ ಹೆಚ್ಚು ಅಭಿವೃದ್ಧಿಪಡಿಸಲಿ. ಪ್ರಾಧಿಕಾರ ರಚನೆಯಿಂದ ಶ್ರೀ ಕ್ಷೇತ್ರಗಳ ಅಭಿವೃದ್ಧಿಯ ಬದಲು ಸ್ಥಳೀಯ ಸಂಸ್ಕೃತಿ, ಪರಂಪರೆ ಮತ್ತು ಭಕ್ತ ಸಮೂಹಕ್ಕೆ ಧಕ್ಕೆ ಉಂಟಾಗಲಿದೆ. ಹಾಗಾಗಿ ಸರ್ಕಾರದ ಪ್ರಾಧಿಕಾರ ರಚನೆ ಉದ್ದೇಶವನ್ನು ಕೈಬಿಡಬೇಕು ಹಾಗೂ ಮುಂದಿನ ದಿನಗಳಲ್ಲಿ ಎಲ್ಲ ಸಮುದಾಯದ ಮುಖಂಡರು ಹಾಗೂ ಬೋಪ್ಪೆಗೌಡನಪುರದ ಸ್ವಾಮಿಜೀಯವರ ಉಪಸ್ಥಿತಿಯಲ್ಲಿ ತಾಲ್ಲೂಕು ದಂಡಾಧಿಕಾರಿಯವರಿಗೆ ಮನವಿ ಸಲ್ಲಿಸುವ ಮೂಲಕ ಸರ್ಕಾರದ ನಿಲುವನ್ನು ಹಿಂಪಡೆಯುವಂತೆ ಒತ್ತಾಯಿಸಲಾಗುವುದು ಎಂದರು.
ಈ ಸಂದರ್ಭದಲ್ಲಿ ಕರ್ನಾಟಕ. ರಾಜ್ಯ ರೈತ ಸಂಘದ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಸುಜ್ಜಲೂರು ಚಂದ್ರಶೇಖರ್, ಮುಖಂಡ ಕಳ್ಳಿಪುರ ನಾರಾಯಣ್, ಕಿರಗಸೂರು ಮಾಜಿ ಗ್ರಾಪಂ ಅಧ್ಯಕ್ಷ ಸಿ.ಪುಟ್ಟಯ್ಯ, ಹೊಸಹಳ್ಳಿ ಎಂ.ಚಿನ್ನಸ್ವಾಮಿ,ತಾಲೂಕು ಮಡಿವಾಳ ಸಂಘದ ಕಾರ್ಯದರ್ಶಿ ಅಲಗೂಡು ಬಸವರಾಜು, ಯಜಮಾನ ಸಿದ್ದರಾಜು,ರಂಜಿತ್, ಗೆಜ್ಜಗನಹಳ್ಳಿ ಮಹದೇವ, ಬಿಜೆಪಿ ಮುಖಂಡ ಆರ್.ರಾಮಸ್ವಾಮಿ, ಹಳೇ ಕೆಂಪಯ್ಯನಹುಂಡಿ ಎಂ. ಪುಟ್ಟಸ್ವಾಮಿ, ದಲಿತ ಮುಖಂಡರಾದ ಗೆಜ್ಜಗನಹಳ್ಳಿ ಎನ್.ರಾಜೇಶ್, ನಾಗರಾಜು,ನೀಲಗಾರರ ಮುಖಂಡರುಗಳು ಹಾಗೂ ವಿವಿಧ ಸಮುದಾಯದ ಮುಖಂಡರು ಹಾಜರಿದ್ದರು.
- 
																	   Hassan4 hours ago Hassan4 hours agoರೈಲ್ವೆ ಇಲಾಖೆಯಿಂದ ನಡೆಯುತ್ತಿರುವ ಕಾಮಗಾರಿ ಸ್ಥಳಕ್ಕೆ ಸಂಸದ ಶ್ರೇಯಸ್ ಪಟೇಲ್ ಭೇಟಿ 
- 
																	   Chamarajanagar18 hours ago Chamarajanagar18 hours agoಚಾಮರಾಜನಗರ ಪ್ರಾದೇಶಿಕ ರೇಷ್ಮೆ ಸಂಶೋಧನಾ ಕೇಂದ್ರ ಮುಂದುವರೆಸಲು ಸಂಸದ ಸುನೀಲ್ ಬೋಸ್ ಮಾಡಿದ ಮನವಿಗೆ ಕೇಂದ್ರದಿಂದ ಸಕಾರಾತ್ಮಕ ಸ್ಪಂದನೆ 
- 
																	   Hassan24 hours ago Hassan24 hours agoಸಾಲ ಬಾಧೆ ತಾಳಲಾರದೆ ಯುವ ರೈತ ಆತ್ಮಹ*ತ್ಯೆ 
- 
																	   Mandya2 hours ago Mandya2 hours agoಶ್ರೀರಂಗಪಟ್ಟಣ ದಸರಾ ಲೋಗೋ ಬಿಡುಗಡೆ 
- 
																	   Manglore21 hours ago Manglore21 hours agoವಿದ್ಯಾಭಾರತಿ ರಾಜ್ಯ ಮತ್ತು ಪ್ರಾಂತಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿ: ವಿವೇಕಾನಂದ ಪ.ಪೂ. ಕಾಲೇಜಿನ ವಿದ್ಯಾರ್ಥಿನಿಯರು ರಾಷ್ಟ್ರಮಟ್ಟಕ್ಕೆ ಆಯ್ಕೆ 
- 
																	   National23 hours ago National23 hours agoಟಿ-20 ಏಷ್ಯಾಕಪ್| ಭಾರತ-ಪಾಕ್ ಪಂದ್ಯವನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿದ ಸುಪ್ರೀಂ 
- 
																	   Manglore18 hours ago Manglore18 hours agoನಗರದ ಒಳಾಂಗಣ ಸಂಕೀರ್ಣದ ಬಳಿಯ ವಾಲೀಬಾಲ್ ಕ್ರೀಡಾಂಗಣ ಸ್ಥಳದಲ್ಲಿ ಕನ್ನಡ ಭವನ ನಿರ್ಮಿಸುವ ನಿರ್ಧಾರವನ್ನು ಕೈಬಿಡಬೇಕು : ಶಿವಲಿಂಗಯ್ಯ 
- 
																	   Hassan2 hours ago Hassan2 hours agoಮದ್ದೂರು ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ ಗಲಾಟೆ ಕೇಸ್: ಇನ್ಸ್ ಪೆಕ್ಟರ್ ಶಿವಕುಮಾರ್ ಸಸ್ಪೆಂಡ್ 

 
											 
											 
											 
											 
											